Author: admin
ಇಲ್ಲಿ ಒಬ್ಬ ಮುಂಜಾನೆ ಮಳೆ, ಗಾಳಿ, ಬಿಸಿಲು,ಎನ್ನದೆ ಕೈಯಲ್ಲಿ “ರಸ್ತೆಯಲ್ಲಿ ಕಸ ಬಿಸಾಡಬೇಡಿ” ಎಂಬ ಒಂದು ಬೋರ್ಡ್ ಹಿಡಿದುಕೊಂಡು ನಿಂತಿದ್ದಾನೆ. ಯಾರಾದರೂ ಇವನ ಬಗ್ಗೆ ಯೋಚಿಸಿದ್ದೀರಾ? ಎಲ್ಲರೂ ಬದಲಾಗುತ್ತಾರೆ ಎಂಬುದು ಅವನ ಕನಸು. ಆದರೆ “ಕೆಲವರಾದರೂ ಬದಲಾಗಬಹುದು” ಎಂಬ ನಂಬಿಕೆಯೇ ಅವನ ತಾಳ್ಮೆಯ ಶಕ್ತಿ, ಅವನ ನಿಲ್ಲುವ ಉದ್ದೇಶ. ಅವನು ನಾಯಕನೂ ಅಲ್ಲ, ನಟನೂ ಅಲ್ಲ ಪ್ರಖ್ಯಾತ ವ್ಯಕ್ತಿಯು ಅಲ್ಲ. ಆದರೆ ಆತ ಪರಿಸರದ ಬದಲಾವಣೆಗೆ ಹೊಸದೊಂದು ಹೆಜ್ಜೆ ಹಾಕುತ್ತಿರುವ ಸಾಮಾನ್ಯ ನಾಗರಿಕ.! ಈತನ ಹೆಸರು ನಾಗರಾಜ್. ಆದರೆ ಆತನು ತೋರಿಸುತ್ತಿರುವ ರಸ್ತೆ ಬದಿಯ ಹೋರಾಟ, ಸಾವಿರ ಸಂಕಷ್ಟದ ವೀರಗಾಥೆಗೂ ಕಡಿಮೆಯಲ್ಲ. ಹೆಸರು ಮಾತ್ರ ಸಾಮಾನ್ಯ. ಆದರೆ ಹೃದಯ ಸರ್ವಜ್ಞನಷ್ಟು ಗಂಭೀರ. ಅಡ್ಯಾರಿನಿಂದ ಫರಂಗಿಪೇಟೆಯ ನಡುವೆ ಆತ ರಸ್ತೆ ಬದಿಯಲ್ಲಿ ನಿಂತಿದ್ದನ್ನು ಕಂಡರೂ ಕಾಣದಂತೆ ಹೋಗಬೇಡಿ. ಒಂದು ನಿಮಿಷ ಅವನನ್ನು ಮಾತನಾಡಿಸಿ ಅವನ ಕಾಳಜಿಗೆ ಧನ್ಯವಾದ ತಿಳಿಸಿ. ಪ್ರತಿಯೊಂದು ದಿನವೂ ನಾವು ನೋಡುತ್ತೇವೆ. ನೋಡಿದರೂ ನೋಡದಂತೆ ಸಾಗುತ್ತೇವೆ. ಒಬ್ಬ ರಸ್ತೆಯ ಬದಿಯಲ್ಲಿ…
ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಇದೇ ಬರುವ ಜೂನ್ 29 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ದುಬೈ (ಯುಎಇ) ಘಟಕದ ಸಹಯೋಗದೊಂದಿಗೆ ನಗರದ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನಲ್ಲಿ ಜರಗಲಿರುವುದು ಎಂದು ಯಕ್ಷಗಾನ ಅಭ್ಯಾಸ ಕೇಂದ್ರದ ಸಂಚಾಲಕರಾದ ದಿನೇಶ್ ಶೆಟ್ಟಿ ಕೊಟ್ಟಿಂಜರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸುತ್ತಾ, ಜೂನ್ 29 ರಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ನಡೆಯುವ ಕಾರ್ಯಕ್ರಮಗಳಲ್ಲಿ ದಶಮ ಸಂಭ್ರಮದ ಪ್ರಯುಕ್ತ ಯುಎಇಯ ಏಳು ಮಂದಿ ಸಾಧಕರಿಗೆ ಮತ್ತು ಮೂರು ಸಾಧಕ ಸಂಸ್ಥೆಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು. ಇತ್ತೀಚಿಗೆ ನಗರದ ಫಾರ್ಚೂನ್ ಪ್ಲಾಜಾದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಯುತ ದಿನೇಶ್ ಶೆಟ್ಟಿ ಕೊಟ್ಟಿಂಜರವರು ಯಕ್ಷಗಾನ ಅಭ್ಯಾಸ ಕೇಂದ್ರದ ವತಿಯಿಂದ ಅದ್ದೂರಿಯ ಸಂಮಾನಕ್ಕೆ ಪಾತ್ರರಾಗಲಿರುವ ಸಾಧಕರ ವಿವರವನ್ನು ಮಾಧ್ಯಮದ ಮುಂದೆ ಇಟ್ಟರು. ವಿವರ ಹೀಗಿದೆ. ಸಂಘಟನೆ ಕ್ಷೇತ್ರ : ಸರ್ವೋತ್ತಮ ಶೆಟ್ಟಿಯವರು ಯುಎಇಯಲ್ಲಿ ತುಳು ಕನ್ನಡ ಸಂಘ ಸಂಸ್ಥೆಗಳ…
ಬಂಟರ ಸಂಘ ಮುಂಬಯಿ ತನ್ನ ಪ್ರಾದೇಶಿಕ ಸಮಿತಿಗಳ ಮೂಲಕ ಪ್ರತೀ ವರ್ಷ ಸಹಸ್ರಾರು ಯೂನಿಟ್ ರಕ್ತ ಸಂಗ್ರಹಿಸಿ ಬ್ಲಡ್ ಬ್ಯಾಂಕ್ ಗೆ ನೀಡಿ ಸಹಸ್ರಾರು ರೋಗಿಗಳನ್ನು ರೋಗದಿಂದ ಮುಕ್ತಿ ಪಡೆಯಲು ಸಹಕಾರವನ್ನು ನೀಡುತ್ತಿದೆ. ಸದ್ಯ ಮಳೆಗಾಲ ಪ್ರಾರಂಭವಾಗಿದ್ದು, ಆಸ್ಪತ್ರೆಗಳಲ್ಲಿ ಮಲೇರಿಯಾ, ಡೆಂಗ್ಯೂ ಜ್ವರದ ರೋಗಿಗಳ ಸಂಖ್ಯೆ ವಿಪರೀತ ಹೆಚ್ಚುತ್ತಿದೆ. ನಾವೆಲ್ಲರೂ ಮೊದಲು ನಮ್ಮ ಆರೋಗ್ಯದ ಬಗ್ಗೆ ವಿಶೇಷವಾಗಿ ಕಾಳಜಿ ವಹಿಸಬೇಕು. ಇಂದಿನ ಆಧುನಿಕ ಯುಗದಲ್ಲಿ ಎಲ್ಲರೂ ಹಣ ಸಂಪಾದನೆಯ ಹಿಂದೆ ಹೋಗಿ ತಮ್ಮ ಆರೋಗ್ಯವನ್ನು ನಿರ್ಲಕ್ಷಿಸಿ ಬ್ಲಡ್ ಪ್ರಶರ್, ಸಕ್ಕರೆ ಖಾಯಿಲೆಗಳಂತಹ ರೋಗಗಳನ್ನು ಆಹ್ವಾನಿಸುತ್ತಿದ್ದಾರೆ. ಯಾವುದೇ ರೋಗಗಳು ಬಂದಾಗ ನಮಗೆ ರಕ್ತದ ಅವಶ್ಯಕತೆ ಬಹಳಷ್ಟು ಇರುತ್ತದೆ. ಪ್ರತಿಯೊಬ್ಬರು 18 ವರ್ಷದಿಂದ ಮೇಲ್ಪಟ್ಟು 65 ವರ್ಷದವರೆಗೆ ವರ್ಷದಲ್ಲಿ ಎರಡು ಸಲ ರಕ್ತದಾನವನ್ನು ಮಾಡಿದಾಗ ನಮ್ಮ ಆರೋಗ್ಯ ಸಮತೋಲನವನ್ನು ಕಾಪಾಡುತ್ತದೆ. ನಾವು ರಕ್ತದಾನ ಮಾಡಿದಾಗ ಕೆಲವೇ ಗಂಟೆಗಳಲ್ಲಿ ನಮ್ಮ ಮೂಲೆ ಮಜ್ಜೆಗಳು ಪುನಃ ರಕ್ತವನ್ನು ಉತ್ಪಾದಿಸುತ್ತದೆ. ನಮ್ಮ ಹಿರಿಯರು ಯುವ ಪೀಳಿಗೆಗೆ ರಕ್ತದಾನ ಮಾಡುವಂತೆ…
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ : ದಕ್ಷಿಣ ಕನ್ನಡದಲ್ಲಿ ಸೌಹಾರ್ದತೆ, ಶಾಂತಿ ಮರುಸ್ಥಾಪನೆಗೆ ಪ್ರತಿ ತಾಲೂಕಿನಲ್ಲಿ ಸಮಿತಿ ರಚನೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೌಹಾರ್ದತೆ, ಶಾಂತಿಯ ವಾತಾವರಣ ಮರುಸ್ಥಾಪನೆ ಕಾರ್ಯದಲ್ಲಿ ಸಂಬಂಧಿಸಿದ ಜಿಲ್ಲಾಡಳಿತ ಜತೆ ಸಹಕರಿಸಲು ಪ್ರತೀ ತಾಲೂಕುಗಳಲ್ಲಿ ತಲಾ 8, 10 ಸದಸ್ಯರ ಸಮಿತಿ ರಚಿಸಲು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ತೀರ್ಮಾನಿಸಿದೆ. ಮುಂದಿನ ಆರು ತಿಂಗಳಲ್ಲಿ ಸಮಿತಿ ರಚನೆ ಪ್ರಕ್ರಿಯೆ ಪೂರ್ಣ ಸ್ವರೂಪ ಪಡೆದುಕೊಳ್ಳಲಿದೆ. ಗೃಹ ಸಚಿವ ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸ್ಪೆಷಲ್ ಆ್ಯಕ್ಷನ್ ಫೋರ್ಸ್ (ಎಸ್ಎಎಫ್) ಸ್ಥಾಪಿಸಿರುವ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ಮಂಗಳೂರು ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪರಿಸರ ಪ್ರೇಮಿ ಸಮಿತಿ ಸ್ಥಾಪಕ ತೋನ್ಸೆ ಜಯಕೃಷ್ಣ ಎ.ಶೆಟ್ಟಿ ಹೇಳಿದರು. ಅಭಿವೃದ್ಧಿ, ಉದ್ಯೋಗ ಸೃಷ್ಟಿ ಮತ್ತು ಯುವ ಜನಾಂಗದ ಉಜ್ವಲ ಭವಿಷ್ಯ ರೂಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೌಹಾರ್ದತೆ, ಶಾಂತಿಯ ವಾತಾವರಣ ಮರು ಸ್ಥಾಪಿಸುವಂತೆ ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಮಂಗಳೂರು ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಅವರು ಒತ್ತಾಯಿಸಿದರು. ಕಳೆದ…
ಬಹರೈನಿನಲ್ಲಿ ನಡೆದ ಬಂಟ್ಸ್ ಬಹರೈನ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಡಾ. ಭರತ್ ಶೆಟ್ಟಿ (ಶಾಸಕರು, ಮಂಗಳೂರು ನಗರ ಉತ್ತರ), ಕಿಶೋರ್ ಆಳ್ವ (ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು, ಅದಾನಿ ಗ್ರೂಪ್) ಮತ್ತು ಚಲನಚಿತ್ರ ನಟ ವಜ್ರಾಂಗ್ ಶೆಟ್ಟಿ ಅವರು ಕನ್ನಡ ಸಂಘ ಬಹರೈನ್ನ ಆಹ್ವಾನವನ್ನು ಸ್ವೀಕರಿಸಿ ಕನ್ನಡ ಭವನಕ್ಕೆ ಸಂದರ್ಶನ ನೀಡಿದರು. ಅತಿಥಿಗಳನ್ನು ಸಂಘದ ಅಧ್ಯಕ್ಷ ಅಜಿತ್ ಬಂಗೇರ ಹಾಗೂ ಪದಾಧಿಕಾರಿಗಳು ಹೂಗುಚ್ಛ, ಶಾಲು ಮತ್ತು “ಕಾವೇರಿ” ಸ್ಮರಣ ಸಂಚಿಕೆ ನೀಡಿ ಗೌರವಿಸಿದರು. ಕನ್ನಡ ಸಂಘ ಬಹರೈನ್ನ ಸಾಧನೆ ಹಾಗೂ ವಿದೇಶಿ ನೆಲದಲ್ಲೂ ಕನ್ನಡ ಸಂಸ್ಕೃತಿಯ ಪೋಷಣೆಗಾಗಿ ಅತಿಥಿಗಳು ಸಂತೋಷ ವ್ಯಕ್ತಪಡಿಸಿದರು. ಡಾ. ಭರತ್ ಶೆಟ್ಟಿ, ಕಿಶೋರ್ ಆಳ್ವ ಮತ್ತು ವಜ್ರಾಂಗ್ ಶೆಟ್ಟಿ ಅವರು ಸ್ಥಳೀಯ ಕನ್ನಡಿಗರ ಭಾಷಾಭಿಮಾನಕ್ಕೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ಅಮರನಾಥ್ ರೈ, ಮಾಜಿ ಅಧ್ಯಕ್ಷ ಪ್ರದೀಪ್ ಶೆಟ್ಟಿ, ಬಂಟ್ಸ್ ಬಹರೈನ್ ಉಪಾಧ್ಯಕ್ಷ ಅಜೇಯ್ ಶೆಟ್ಟಿ ಹಾಗೂ ಅನೇಕ ಸದಸ್ಯರು ಉಪಸ್ಥಿತರಿದ್ದರು. ಸಂಘದ…
ಭಾರತೀಯ ಬ್ಯಾಡ್ಮಿಂಟನ್ ಆಟಗಾರ, ಖೇಲ್ ರತ್ನ ಪುರಸ್ಕೃತ ಚಿರಾಗ್ ಶೆಟ್ಟಿ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಆರ್ಚಕ ವೇ. ಶ್ರೀನಿವಾಸ ತಂತ್ರಿ ಕಲ್ಯ ಅವರು ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನ ಸಮಿತಿ ಸದಸ್ಯ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಶೇರಿಗಾರ್ ಉಪಸ್ಥಿತರಿದ್ದರು. ಚಂದ್ರಶೇಖರ ಶೆಟ್ಟಿ ಮತ್ತು ಸುಜಾತಾ ಶೆಟ್ಟಿ ದಂಪತಿಯ ಪುತ್ರನಾಗಿರುವ 27 ವರ್ಷದ ಚಿರಾಗ್ ಶೆಟ್ಟಿ ಅವರು ಪುರುಷರ ಡಬಲ್ಸ್ ನಲ್ಲಿ (ಸಾತ್ವಿಕ್ ರಾಜ್ ರಾಂಕಿ ರೆಡ್ಡಿ ಜತೆ) ಏಷ್ಯಾನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್ ಮತ್ತು ಏಷ್ಯಾನ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಉಡುಪಿ ಎಂಜಿಎಂ ಪದವಿಪೂರ್ವ ಕಾಲೇಜಿನ ರೊನಾಕ್ ಆರ್ ಶೆಟ್ಟಿಯವರು 2025 ರ ರಾಷ್ಟ್ರ ಮಟ್ಟದ ನೀಟ್ ಪರೀಕ್ಷೆಯಲ್ಲಿ 646/720 ಗಳಿಸುವುದರೊಂದಿಗೆ ರಾಷ್ಟ್ರ ಮಟ್ಟದಲ್ಲಿ 107 ನೇ ಸ್ಥಾನ, ರಾಜ್ಯ ಮಟ್ಟದಲ್ಲಿ 8ನೇ ಸ್ಥಾನ, ಅವಿಭಜಿತ ದ.ಕ ಜಿಲ್ಲಾ ಮಟ್ಟದಲ್ಲಿ 3ನೇ ಸ್ಥಾನ, ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟದ ವೈದ್ಯಕೀಯ ಪ್ರವೇಶಾತಿ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದಿದ್ದಾರೆ. ಉಡುಪಿ ಜಿಲ್ಲೆಯ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೇೂಷನ್ ಕುಮಾರ್ ಶೆಟ್ಟಿ ಹಾಗೂ ಉಡುಪಿ ಎಂಜಿಎಂ ಕಾಲೇಜಿನ ಜೀವ ಶಾಸ್ತ್ರ ವಿಭಾಗದ ಉಪನ್ಯಾಸಕಿ ಅನಿತಾ ಆರ್ ಶೆಟ್ಟಿಯವರ ಸುಪುತ್ರ ರೊನಾಕ್ ಆರ್ ಶೆಟ್ಟಿಯವರ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಶಿಕ್ಷಕೇತರ ವರ್ಗದವರು ಶ್ಲಾಘಿಸಿದ್ದಾರೆ.
ಮೂಡುಬಿದಿರೆ: ಆಳ್ವಾಸ್ ಕಾಲೇಜು (ಸ್ವಾಯತ್ತ) ವತಿಯಿಂದ 2025-26 ನೇ ಸಾಲಿನ ಪದವಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ‘ಅಂಕುರ’ ಆಳ್ವಾಸ್ ನ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ , ಶಿಕ್ಷಣ ಸಂಸ್ಥೆಗಳು ಬಹುಮಹಡಿ ಕಟ್ಟಡಗಳಿದ್ದ ಮಾತ್ರಕ್ಕೇ ಶ್ರೇಷ್ಠವೆನಿಸಿಕೊಳ್ಳಲಾರವು. ಆ ಕಟ್ಟಡಗಳಿಗೆ ಜೀವಕಳೆ ವಿದ್ಯಾರ್ಥಿಗಳಿಂದ ಮಾತ್ರ ತುಂಬಲು ಸಾಧ್ಯ. ಅಂತಹ ವಿದ್ಯಾರ್ಥಿ ಸಮೂಹ ನೀವಾಗಬೇಕು. ಆಳ್ವಾಸ್ ನ ವಿದ್ಯಾರ್ಥಿಗಳೇ ‘ಆಳ್ವಾಸ್ ಬ್ರಾಂಡ್’ ಎಂದರು. ವಿದ್ಯಾರ್ಥಿಗಳು ಪದವಿ ಕಾಲೇಜಿಗೆ ಸೇರುವ ಮೂಲ ಉದ್ದೇಶವನ್ನು ಅರಿಯಬೇಕು. ಆಳ್ವಾಸ್ ಶಿಕ್ಷಣ ಸಂಸ್ಥೆ ತನ್ನ ಸಮಕಾಲೀನ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಿಗೆ ಪ್ರಪಂಚದ ಆಧುನಿಕ ಅಗತ್ಯಗಳಿಗೆ ತಕ್ಕಂತಹ ಜ್ಞಾನ ಮತ್ತು ಕೌಶಲಗಳನ್ನು ಸದಾ ನೀಡುತ್ತಿದೆ. ಸ್ವಾಯತ್ತ ಕಾಲೇಜಿನ ನೆಲೆಯಲ್ಲಿ ನಿತ್ಯ ಬದಲಾಗುತ್ತಿರುವ ಉದ್ಯೋಗ ಮಾರುಕಟ್ಟೆ, ತಂತ್ರಜ್ಞಾನ, ಸಾಮಾಜಿಕ ಬದಲಾವಣೆಗಳಿಗೆ ತಕ್ಕಂತೆ ಪಠ್ಯ ಕ್ರಮವನ್ನು ರೂಪಿಸಲಾಗುತ್ತಿದೆ. ಇವು ವಿದ್ಯಾರ್ಥಿಗಳಲ್ಲಿ ವಾಸ್ತವಿಕ ಜ್ಞಾನ, ತಂತ್ರಜ್ಞಾನಾಧಾರಿತ ಕೌಶಲಗಳು, ಸೃಜನಾತ್ಮಕತೆ ಮತ್ತು ವಿಶ್ಲೇಷಣಾತ್ಮಕ ಚಿಂತನೆಯ…
ವಿದ್ಯಾಗಿರಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಹಾಗೂ ಮಂಗಳೂರಿನ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಈ ವರ್ಷದ 4ನೇ ನೇತ್ರ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಉದ್ಘಾಟಿಸಿ ಶಿಬಿರದ ಯಶಸ್ಸಿಗೆ ಶುಭ ಹಾರೈಸಿದರು. ಈ ಮೊದಲು ನಡೆಸಿದ ಒಂಬತ್ತು ಶಿಬಿರಗಳಲ್ಲಿ 1,478 ಜನರಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 784 ಜನರಿಗೆ ಉಚಿತ ಕನ್ನಡಕ ನೀಡಲಾಗಿತ್ತು. ಈ ಪೈಕಿ 221 ಜನರಿಗೆ ಶಸ್ತಚಿಕಿತ್ಸೆಯ ಶಿಫಾರಸ್ಸು ಮಾಡಲಾಗಿದ್ದು, 109 ಶಸ್ತಚಿಕಿತ್ಸೆಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದವು. ಈ ವರ್ಷವೂ ಇದೇ ಹಾದಿಯಲ್ಲಿ ಸಾಗುತ್ತಾ ಈಗಾಗಲೇ ಮೂರು ಶಿಬಿರಗಳು ನಡೆದಿದ್ದು, ಇಂದು ನಡೆದ 4ನೇ ಶಿಬಿರವು ಸೇರಿದಂತೆ ಒಟ್ಟು 470 ಜನರು ತಪಾಸಣೆಗೆ ಒಳಪಟ್ಟಿದ್ದಾರೆ. 235 ಜನರಿಗೆ ಕನ್ನಡಕ ವಿತರಿಸಲಾಗಿದೆ ಮತ್ತು 45 ಜನರಿಗೆ ಶಸ್ತಚಿಕಿತ್ಸೆಯ ಶಿಫಾರಸ್ಸು ಮಾಡಲಾಗಿದೆ. ಇವರಲ್ಲಿ 11 ಜನರಿಗೆ ಶಸ್ತಚಿಕಿತ್ಸೆ ಪೂರ್ಣಗೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ…
ಬಂಟರ ಯಾನೆ ನಾಡವರ ಮಾತೃ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಅಕ್ಷಯ ಪಾತ್ರೆ ಯೋಜನೆಯನ್ನು ಇಸ್ಕಾನ್ ಸಂಸ್ಥೆಯ ಉಪಾಧ್ಯಕ್ಷರಾದ ಪರಮ ಪೂಜ್ಯ ಸನಾಂದನ ದಾಸ ಸ್ವಾಮೀಜಿಯವರು ಉದ್ಘಾಟಿಸಿ ಆಶೀರ್ವದಿಸಿದರು. ಶಾಲಾ ಆರೋಗ್ಯ ಮತ್ತು ಸ್ವಾಸ್ಥ್ಯ ಮಂಡಳಿಯ ಅಧ್ಯಕ್ಷರಾದ ಡಾ. ಆಶಾಜ್ಯೋತಿ ರೈ, ಸಂಚಾಲಕರಾದ ಡಾ. ಸಂಜೀವ ರೈ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಗಣೇಶ ಶೆಟ್ಟಿ, ಶಾಲಾ ಆಡಳಿತ ಮಂಡಳಿಯ ಸದಸ್ಯೆ ಕೀರ್ತಿರೈ, ಪ್ರಾಂಶುಪಾಲೆ ಡಾ| ಪೆಸ್ಲಿಲ ಡಿಸೋಜ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಯಶೋದ ಶೆಟ್ಟಿ ಉಪಸ್ಥಿತರಿದ್ದರು. ಉಪಪ್ರಾಂಶುಪಾಲೆ ರೂಪ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಸುಜಾತ ಸ್ವಾಮೀಜಿಯವರನ್ನು ಸಭೆಗೆ ಪರಿಚಯಿಸಿದರು. ಶಶಿಕಲಶೆಟ್ಟಿ ವಂದಿಸಿದರು. ಶಿಕ್ಷಕ ರಕ್ಷಕ ಸಂಘದ ಸಭೆ : ಬಂಟರ ಯಾನೆ ಮಾತೃ ಸಂಘದ ನೇತೃತ್ವದಲ್ಲಿ ನಡೆಯುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಸಭೆಯು ಗೀತಾ ಎಸ್ ಎಮ್ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಸಭೆಯನ್ನು…














