Author: admin
ಆಧ್ಯಾ ಫೌಂಡೇಶನ್ ವತಿಯಿಂದ ನವೆಂಬರ್ ತಿಂಗಳಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳಿಗೆ ಶಿಪ್ ಬಿಲ್ಡಿಂಗ್ ಹಾಗೂ ಆರ್ ಸಿ ಡ್ರೋನ್ ಫ್ಲೈಯಿಂಗ್ ಅಂತರಾಷ್ಟ್ರೀಯ ತಜ್ಞರ ಮೂಲಕ ತರಬೇತಿ ನೀಡಲಾಗುವುದು ಎಂದು ಆಧ್ಯಾ ಫೌಂಡೇಶನ್ ನ ಅಧ್ಯಕ್ಷ ರಾಕೇಶ್ ಅಜಿಲ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಇದು ರಾಷ್ಟ್ರದ ಭವಿಷ್ಯದ ಭದ್ರತೆಗೆ ಪೂರಕವಾದ ಯೋಜನೆಯಾಗಿದ್ದು, ನಮ್ಮ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಇದರ ಭಾಗವಾಗುವ ಅವಕಾಶವನ್ನು ಕಲ್ಪಿಸಲಾಗುವುದು ಎಂದರು. ಜನವರಿ ತಿಂಗಳಲ್ಲಿ ಸೇನೆಗೆ ಸೇರಲು ಆಸಕ್ತ ವಿದ್ಯಾರ್ಥಿಗಳಿಗೆ ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳು ಹಾಗೂ ನುರಿತ ತರಬೇತಿದಾರರಿಂದ ಮೂರು ದಿನಗಳ ಸಂಯೋಜಿತ ತರಬೇತಿಯನ್ನು ಆಯೋಜಿಸಲಾಗುವುದು. ಆಸಕ್ತ ಯುವ ಜನರು ಇದರ ಪ್ರಯೋಜನವನ್ನು ಪಡೆಯಬಹುದು. ಮಾರ್ಚ್ 2026 ರಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳಿಗೆ ಸರ್ಫಿಂಗ್ ಹಾಗೂ ಕಯಾಕಿಂಗ್ ಜಲ ಕ್ರೀಡಾ ತರಬೇತಿಯನ್ನು ಆಯೋಜಿಸಲಾಗುವುದು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಂಜಾ ಹಾಗೂ…
ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ, ಮಂಗಳೂರು, ಬಂಟ್ವಾಳ, ಮೂಡಬಿದರೆ ತಾಲೂಕು ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆಯು ಮೊಟ್ಟ ಮೊದಲ ಬಾರಿಗೆ ಸಪ್ಟೆಂಬರ್ 2 ರಂದು ಬಿ.ಸಿ ರೋಡ್ ನ ರಂಗೋಲಿ ಸಭಾ ಭವನದಲ್ಲಿ ನಡೆಯಿತು. ಜಿಲ್ಲೆಯ ಎಲ್ಲಾ ತಾಲೂಕಿನ ಅಡಿಕೆ ವರ್ತಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಅಡಿಕೆ ವರ್ತಕರ ಸಂಘದ ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು ಆಯ್ಕೆಗೊಂಡರು. ಮಡಾಂತ್ಯಾರಿನಲ್ಲಿ ಶ್ರೀದೇವಿ ಸುಪಾರಿ ಟ್ರೇಡರ್ಸ್ ಇದರ ಮಾಲಕರಾಗಿರುವ ಪ್ರಶಾಂತ್ ಶೆಟ್ಟಿಯವರು ಬೆಳ್ತಂಗಡಿ ತಾಲೂಕು ಬಂಟರ ಸಂಘದ ಕಾರ್ಯಕಾರಿ ಮಂಡಳಿಯ ವಿಶೇಷ ಅಹ್ವಾನಿತ ಸದಸ್ಯರಾಗಿದ್ದಾರೆ. ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್, ಕೋಶಾಧಿಕಾರಿಯಾಗಿ ಸಲೀಂ, ಉಪಾಧ್ಯಕ್ಷರಾಗಿ ಜಲೇಶ್ ಜೀವನಿ ನಿರಾಬ್, ಭವೀನ್, ಕಮನಿ, ಜೊತೆ ಕಾರ್ಯದರ್ಶಿಯಾಗಿ ಸುದೀಪ್ ಶೆಟ್ಟಿ ಮೂಡಯೂರು, ಧರ್ನಪ್ಪ ಅಂಬಲ, ಜಿಲ್ಲೆಯ ವಿವಿಧ ತಾಲೂಕಿನಿಂದ ಹಾಗೂ 32 ಮಂದಿ ನಿರ್ದೇಶಕರಾಗಿ ಆಯ್ಕೆಯಾದರು.
ಬಂಟರ ಯಾನೆ ನಾಡವರ ಸಂಘ ಬೈಂದೂರು ಇದರ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಶ್ರೀ ಮಹಾಲಿಂಗೇಶ್ವರ ಕನ್ಸ್ಟ್ರಕ್ಷನ್ ನ ಆಡಳಿತ ನಿರ್ದೇಶಕ, ಉದ್ಯಮಿ ಗಾಯಾಡಿ ಗೋಕುಲ ಶೆಟ್ಟಿ ಉಪ್ಪುಂದ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಚಿತ್ತೂರು ಮಂಜಯ್ಯ ಶೆಟ್ಟಿ, ಉಪಾಧ್ಯಕ್ಷರಾಗಿ ಬಿ ಸದಾಶಿವ ಶೆಟ್ಟಿ, ನೆಲ್ಯಾಡಿ ಕರುಣಾಕರ ಶೆಟ್ಟಿ, ಕುದ್ರುಕೊಡು ಜಗದೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ನಿತಿನ್ ಬಿ ಶೆಟ್ಟಿ, ಕೋಶಾಧಿಕಾರಿಯಾಗಿ ಜಯರಾಮ ಶೆಟ್ಟಿ ಬಿಜೂರು, ಸಂಘಟನಾ ಕಾರ್ಯದರ್ಶಿಗಳಾಗಿ ಉದಯ ಕುಮಾರ ಅಡಿಕೆಕೊಡ್ಲು, ಸಂತೋಷ್ ಶೆಟ್ಟಿ ಬೈಂದೂರು, ಜೊತೆ ಕಾರ್ಯದರ್ಶಿಯಾಗಿ ಮನೋಹರ್ ಶೆಟ್ಟಿ ಉಪ್ಪುಂದ, ಜಯರಾಮ ಶೆಟ್ಟಿ ಗಂಟಿಹೊಳೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ನೂತನ ಅಧ್ಯಕ್ಷರನ್ನು ಅಭಿನಂದಿಸಿದ್ದಾರೆ.
ವ್ಯಕ್ತಿತ್ವದಲ್ಲಿ ತೃಪ್ತಿ ಎನ್ನುವ ಮೌಲ್ಯವನ್ನು ಅಳವಡಿಸಿಕೊಂಡರೆ ನೆಮ್ಮದಿಯ ಬದುಕು ನಡೆಸಲು ಸಾಧ್ಯವಾಗುತ್ತದೆ ಎಂದು ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ ನುಡಿದರು. ಕುಂದಾಪುರದ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕಾನೂನು ಬರುವ ಮೊದಲೇ ಸಮಾಜದಲ್ಲಿ ಕೆಲವು ಮೌಲ್ಯಗಳಿದ್ದವು. ಜನರು ಅದಕ್ಕೆ ಗೌರವ ನೀಡುತ್ತಿದ್ದರು. ಆದರೆ ಈಗ ಆ ಸಮಾಜ ಬದಲಾಗಿದೆ. ಶ್ರೀಮಂತರಿಗೆ ಮಣೆ ಹಾಕುವ ಪ್ರವೃತ್ತಿ ತಾಂಡವವಾಡುತ್ತಿದೆ. ಪ್ರಾಮಾಣಿಕತೆಗೆ, ಪ್ರಾಮಾಣಿಕರಿಗೆ ಬೆಲೆ ಇಲ್ಲದ ಹಾಗೇ ಆಗಿದೆ. ದುರಾಸೆ ಎಂಬ ರೋಗ ಇದಕ್ಕೆ ಕಾರಣವಾಗಿದೆ” ಎಂದು ವಿವರಿಸಿದರು. ಹಿಂದೆಲ್ಲಾ ತಪ್ಪು ಮಾಡಿದವರಿಗೆ ಅವರನ್ನು ದೂರ ಇಡುವ ಮೂಲಕ ಶಿಕ್ಷೆ ನೀಡಲಾಗುತ್ತಿತ್ತು. ಆದರೆ ಈಗ ಜೈಲಿಗೆ ಹೋಗಿ ಜಾಮೀನಿನ ಮೂಲಕ ಹೊರಗೆ ಬಂದವನಿಗೆ ಹಾರ ತುರಾಯಿ ಹಾಕಿ ಸ್ವಾಗತ ಕೋರುತ್ತೇವೆ. ಪ್ರಾಮಾಣಿಕತೆ, ಮೌಲ್ಯಗಳು ಹಣದ ಮುಂದೆ ಗೌಣ್ಯವಾಗಿವೆ ಎಂದು ವಿಷಾದ ವ್ಯಕ್ತಪಡಿಸಿದರು. ಮುಂದುವರಿದು ಮಾತನಾಡಿದ ಹೆಗ್ಡೆ ಅವರು, ಕ್ರಾಂತಿ ಮೂಲಕ ಬದಲಾವಣೆ ಆದರೆ ಈ ದೇಶ ಒಡೆದು…
ಜಯ ಸಿ ಸುವರ್ಣ ಸಂಸ್ಮರಣೆಯ ಅಂಗವಾಗಿ ಜಯ ಸಿ ಸುವರ್ಣ ಜನಸೇವಾ ಪುರಸ್ಕಾರ ಶಿವಗಿರಿ ಸಮ್ಮಾನ್ ಪ್ರಶಸ್ತಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಸೆಪ್ಟಂಬರ್ 7 ರಂದು ಭಾನುವಾರ ಮುಂಬಯಿಯ ಜಯಲೀಲಾ ಬ್ಯಾಂಕ್ವೆಟ್ ಹಾಲ್ ಗೋರೆಗಾಂವ್ ಪೂರ್ವ ಇಲ್ಲಿ ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ಆಯೋಜಿಸಿರುವ 171 ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಐಕಳ ಹರೀಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುತ್ತದೆ. ಐಕಳ ಹರೀಶ್ ಶೆಟ್ಟಿ ಅವರು ವಿಶ್ವ ಮಟ್ಟದಲ್ಲಿ ಸಮಾಜಸೇವೆಯ ಮೂಲಕ ಗುರುತಿಸಿಕೊಂಡವರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಜೊತೆಗೆ ನೂರಕ್ಕೂ ಮಿಕ್ಕಿದ ಸನ್ಮಾನ, ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವ ಐಕಳ ಅವರ ಸಮಾಜ ಸೇವೆ, ಸಂಘಟನಾ ಚತುರತೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರ ಮಾರ್ಗದರ್ಶನದೊಂದಿಗೆ ಬಂಟರ ಸಂಘದ ಆವರಣದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮಂದಿರದ ಕಾರ್ಯಾಧ್ಯಕ್ಷ ಶಿಬರೂರು ಸುರೇಶ್ ಎಲ್ ಶೆಟ್ಟಿ ಅವರ ನೇತೃತ್ವದಲ್ಲಿ ಹಾಗೂ ಪದಾಧಿಕಾರಿಗಳ ಮುಂದಾಳತ್ವದೊಂದಿಗೆ ಪ್ರತಿವರ್ಷದಂತೆ ಗಣೇಶೋತ್ಸವವು ವಿಜೃಂಭಣೆಯಿಂದ ಜರಗಿತು. ದೇವಸ್ಥಾನದ ಪ್ರಧಾನ ಅರ್ಚಕ ನಾಗೇಂದ್ರ ಭಟ್ ಅವರ ಪೌರೋಹಿತ್ಯದೊಂದಿಗೆ ಹಾಗೂ ವಿಪ್ರ ವೃಂದದವರ ಸಹಕಾರದೊಂದಿಗೆ ಧಾರ್ಮಿಕ ವಿಧಿ ವಿಧಾನಗಳು ಜರಗಿತು. ವಿವಿಧ ಸಂಘ ಸಂಸ್ಥೆಯ ಮಹಿಳೆಯರಿಂದ ಭಜನೆ ಸಂಕೀರ್ತನೆ ನಡೆಯಿತು. ಮಹಿಳಾ ಸದಸ್ಯರಿಂದ ಹೂ ಕಟ್ಟುವ ಸ್ಪರ್ಧೆ, ರಂಗೋಲಿ ಹಾಕುವ ಸ್ಪರ್ಧೆ ಜರಗಿತು. 5 ರಿಂದ 10 ವರ್ಷದ ವಯೋಮಿತಿಯ ಬಂಟ ಸದಸ್ಯರ ಮಕ್ಕಳಿಗಾಗಿ ಗಣಪತಿಯ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಉಪಾಧ್ಯಕ್ಷ ಮಹೇಶ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್ ಕೆ ಶೆಟ್ಟಿ, ಕೋಶಾಧಿಕಾರಿ ಸಿಎ ರಮೇಶ್ ಶೆಟ್ಟಿ ಇನ್ನ, ಜೊತೆ ಕಾರ್ಯದರ್ಶಿ ಗಿರೀಶ್…
ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ 2025 -26 ನೇ ಸಾಲಿನ ವಿವಿಧ ಶೈಕ್ಷಣಿಕ ಸಮಿತಿಗಳ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ, ವಿದ್ಯಾರ್ಥಿಗಳು ಕಾಲೇಜಿನ ವಿವಿಧ ಸಮಿತಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರ ಮುಖಾಂತರ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿಕೊಳ್ಳಬಹುದು ಹಾಗೂ ತಮ್ಮ ವ್ಯಕ್ತಿತ್ವ ವಿಕಸನ ಶೈಕ್ಷಣಿಕ ಸಮಿತಿಗಳ ಮೂಲಕ ಸಾಧ್ಯ ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿಸ್ವಸ್ಥ ಮಂಡಳಿಯ ಸದಸ್ಯರಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ವಹಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಚಂದ್ರಾವತಿ ಶೆಟ್ಟಿ ಉಪಸ್ಥಿತರಿದ್ದರು. ಶೈಕ್ಷಣಿಕ ಸಮಿತಿಯ ಸಂಯೋಜಕರು ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ| ರವಿಚಂದ್ರ ಅತಿಥಿಗಳನ್ನು ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕುಮಾರ್ ಪಿ ಪರಿಚಯಿಸಿದರು. ಕಾರ್ಯಕ್ರಮವನ್ನು ಆಂಗ್ಲ ಭಾಷೆ ಉಪನ್ಯಾಸಕಿ ಶ್ರೀಮತಿ ಶ್ವೇತ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ಸೂರಜ್ ಕುಮಾರ್ ಶೆಟ್ಟಿ ವಂದಿಸಿದರು ಹಾಗೂ ವಿದ್ಯಾರ್ಥಿನಿ ಕುಮಾರಿ ಸೌಮ್ಯ…
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸ್ಶೆಟಿಗೆ ದಾಖಲೆಯ ೧೪ನೇ ಬಾರಿಗೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಸಾಧನಾ ಪ್ರಶಸ್ತಿ
ರಾಜ್ಯದ ಅಗ್ರಗಣ್ಯ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲಿ ಒoದಾಗಿರುವ ಪ್ರತಿಷ್ಟಿತ ಸಹಕಾರ ಮಾಣಿಕ್ಯ ಪ್ರಶಸ್ತಿ ಪುರಸ್ಕöÈತ ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿಯು ೨೦೨೪-೨೫ನೇ ಸಾಲಿನಲ್ಲಿ ರೂ. ೫೮೯ ಕೋಟಿ ಠೇವಣಿ, ೫೦೫ ಕೋಟಿ ಸಾಲದೊಂದಿಗೆ ಒಟ್ಟು ವ್ಯವಹಾರ ರೂ. ೧೦೯೪ ಕೋಟಿ ಒಟ್ಟು ವ್ಯವಹಾರವನ್ನು ದಾಖಲಿಸಿ ರೂ.೧೬.೨೯ ಕೋಟಿ ನಿವ್ವಳ ಲಾಭ ಗಳಿಸಿ ಕಳೆದ ೧೮ ವರ್ಷದಿಂದ ನೆಟ್ ಎನ್.ಪಿ.ಎ. ಯನ್ನು ಶೂನ್ಯ ಪ್ರಮಾಣದಲ್ಲಿರಿಸಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಜಿಲ್ಲೆಯ ಅತ್ಯುತ್ತಮ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಎಂದು ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನವರು ಗುರುತಿಸಿ ತಮ್ಮ ದಿನಾಂಕ ೩೦.೦೮.೨೦೨೫ರಂದು ಜರಗಿದ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ರವರು, ಉಭಯ ಜಿಲ್ಲೆಗಳಾದ ದ.ಕ. ಮತ್ತು ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರುಗಳಾದ ಶ್ರೀ. ಎಚ್. ಎನ್. ರಮೇಶ್ ಮತ್ತು ಶ್ರೀಮತಿ ಲಾವಣ್ಯ ಕೆ. ಆರ್., ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ…
ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ ‘ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆ ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ. ಕೀರ್ತನ್ ಭಂಡಾರಿ ಅವರು ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಮಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಬಹುಪಾಲು ಚಿತ್ರೀಕರಣ ನಡೆದಿದೆ. ಈ ಚಿತ್ರದಲ್ಲಿ ನಿರ್ಮಾಪಕರಾದ ಪ್ರಜ್ವಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು, ಉಮೇಶ್ ಮಿಜಾರು, ಸಮತಾ ಅಮೀನ್, ಅನ್ವಿತಾ ಸಾಗರ್, ಸರ್ವೋತ್ತಮ ಶೆಟ್ಟಿ, ವಾಲ್ಟರ್…
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024 -25 ನೇ ಸಾಲಿನಲ್ಲಿ ಶೇಕಡ 100 ಸಾಧನೆ ಮಾಡಿದ್ದು, ಇವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರು ಬಾರ್ಯ ಸಿಎ ಬ್ಯಾಂಕ್ ಅಧ್ಯಕ್ಷ ಪ್ರವೀಣ್ ರೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಜಯರಾಮ್ ರೈ ಬಳಜ್ಜ, ಬಾರ್ಯ ಸಿಎ ಬ್ಯಾಂಕ್ ನಿರ್ದೇಶಕರು ಹಾಗೂ ಇತರರು ಉಪಸ್ಥಿತರಿದ್ದರು.