Author: admin

ಮೂಡುಬಿದಿರೆ: ಇತ್ತೀಚೆಗೆ ವಿಯೆಟ್ನಾಂನಲ್ಲಿ ಜರುಗಿದ ಎರಡನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಫ್‌ನಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ 8 ಯೋಗಪಟುಗಳು ಭಾರತ ದೇಶವನ್ನು ಪ್ರತಿನಿಧಿಸಿ 8 ಚಿನ್ನದ ಪದಕವನ್ನು ಜಯಿಸುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 8 ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿಯನ್ನು ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು. ಸಬ್‌ಜ್ಯೂನಿಯರ್ ವಿಭಾಗದಲ್ಲಿ ಯಶಿಕ ಹಾಗೂ ಚಂದನ – ತಾಳಬದ್ದ ಯೋಗಾಸನದಲ್ಲಿ ಚಿನ್ನ, ಕೋಮಲ – ಕಲಾತ್ಮಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗರ ವಿಭಾಗದಲ್ಲಿ ಪ್ರಜ್ವಲ್ – ಕಲಾತ್ಮಕ ಯೋಗಾಸನ ಹಾಗೂ ಪೃಥ್ವಿಚಾರ್ – ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗಿಯರ ವಿಭಾಗದಲ್ಲಿ ಹಿಮಜ – ಸಂಪ್ರದಾಯಿಕ ಯೋಗಾಸನ ಹಾಗೂ ಅನನ್ಯ ಗುರವ್ – ಕಲಾತ್ಮಕ ಯೋಗಾಸನದಲ್ಲಿ ಚಿನ್ನ, ಸೀನಿಯರ್ ಹುಡುಗಿಯರ ವಿಭಾಗದಲ್ಲಿ ನಿರ್ಮಲ ಸುಭಾಷ್ ಕೊಡ್ಲಿಕರ್ – ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆಯುವುದರ ಮೂಲಕ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದರು. ಪದಕ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ…

Read More

ವ್ಯಕ್ತಿತ್ವ ವಿಕಸನ ಮತ್ತು ತರಬೇತಿಯ ಅಂತಾರಾಷ್ಟ್ರೀಯ ಸಂಸ್ಥೆಯಾದ ಜೇಸಿಐನ ವಲಯ 15 ಮಧ್ಯಂತರ ಸಮ್ಮೇಳನದಲ್ಲಿ 53 ವರ್ಷಗಳ ಇತಿಹಾಸವಿರುವ ವಲಯದ ಅತ್ಯಂತ ದೊಡ್ಡ ಜೆಸಿಐ ಘಟಕವಾಗಿರುವ ಜೆಸಿಐ ಪುತ್ತೂರಿಗೆ 2025ರ ಸಾಲಿನಲ್ಲಿ ಡ್ರಗ್ಸ್ ಮುಕ್ತ ಪುತ್ತೂರು ಜಾಗೃತಿ ಕಾರ್ಯಕ್ರಮಗಳು, ವಿವಿಧ ವಿಶೇಷ ತರಬೇತಿ ಶಿಬಿರಗಳ ಆಯೋಜನೆಗಾಗಿ ವಿವಿಧ ಪ್ರಶಸ್ತಿಗಳ ಗೌರವ ಲಭಿಸಿದೆ. ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನವನ್ನು ಜೆಸಿಐ ಬೆಳ್ಮಣ್ಣು ಘಟಕವು ಜೂನ್ 8ರಂದು ಕಾರ್ಕಳ ನಿಟ್ಟೆಯ ಸನ್ಮಾನ್ ರೆಸಿಡೆನ್ಸಿಯಲ್ಲಿ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಜೆಸಿಐ ಪುತ್ತೂರು ಘಟಕಕ್ಕೆ ಔಟ್ ಸ್ಟ್ಯಾಂಡಿಂಗ್ ಸ್ಪೆಷಲ್ ಪ್ರಾಜೆಕ್ಟ್ ಅವಾರ್ಡ್, ಔಟ್ ಸ್ಟ್ಯಾಂಡಿಂಗ್ ಲೋಕಲ್ ಆರ್ಗಾನೈಸೆಷನ್ ರನ್ನರ್ ಅವಾರ್ಡ್, ಡೈಮಂಡ್ ಲೋ ಅವಾರ್ಡ್ ದೊರಕಿದೆ. ಪ್ರಶಸ್ತಿಗಳನ್ನು ಜೆಸಿಐ ವಲಯ 15ರ ಅಧ್ಯಕ್ಷರಾದ ಜೆಸಿ ಅಭಿಲಾಷ್, ವಲಯ ಉಪಾಧ್ಯಕ್ಷರಾದ ಜೆಸಿ ಸುಹಾಸ್ ಮರಿಕೆರವರು ಜೆಸಿಐ ಪುತ್ತೂರಿನ ಅಧ್ಯಕ್ಷರಾದ ಭಾಗ್ಯೇಶ್ ರೈ ಅವರಿಗೆ ಪ್ರಧಾನ ಮಾಡಿದರು. ಜೆಸಿಐ ಪುತ್ತೂರು ಘಟಕದ ಜಂಟಿ ಕಾರ್ಯದರ್ಶಿ ಜೆಸಿ ರಂಜಿನಿ ಶೆಟ್ಟಿ,…

Read More

ಒಮ್ಮೆ ಗಣೇಶ ಇಲಿಯ ಮೇಲೆ ಸಂಚಾರ ಮಾಡುತ್ತಾ ಚಂದ್ರಲೋಕಕ್ಕೆ ಬರುತ್ತಾನೆ. ಚಂದ್ರನೋ ಸರ್ವಾಂಗ ಸುಂದರ. ಅವನಿಗೆ ತನ್ನ ಸೌಂದರ್ಯದ ಮೇಲೆ ಅಪಾರ ಮಮತೆ. ವಿಕಟ ರೂಪನಾದ ಗಣಪನನ್ನು ಕಂಡು ಅಪಹಾಸ್ಯ ಮಾಡುತ್ತಾನೆ. ಜೋರಾಗಿ ನಗುತ್ತಾನೆ. ಗಣಪನಿಗೆ ಅಪಮಾನವಾಗುತ್ತದೆ. ಚಂದ್ರನಿಗೆ ಹೀಗೆ ಶಾಪ ನೀಡುತ್ತಾನೆ, ಎಲೈ ಚಂದ್ರ ನೀನು ಸೌಂದರ್ಯ ಮದದಿಂದ ಬೀಗುತ್ತಿದ್ದೀಯಾ ಮೂರ್ಖ ಅದಕ್ಕೆ ತಕ್ಕ ಫಲವನ್ನು ಅನುಭವಿಸು ನೀನೆಲ್ಲಾ ಗರ್ವ, ಅಜ್ಞಾನಕ್ಕೆ ಕಾರಣವಾದ ಸೌಂದರ್ಯ ಕುಂದಿ ಹೋಗಲಿ. ‘ಭಾದ್ರಪದ ಶುದ್ಧ ಚೌತಿಯಂದು ನಿನ್ನನ್ನು ನೋಡುವವರು ಅಪವಾದಕ್ಕೆ ಗುರಿಯಾಗಲಿ’ ಎಂದು ಶಪಿಸುತ್ತಾನೆ. ಶಾಪಗ್ರಸ್ತನಾದ ಕೂಡಲೇ ಚಂದ್ರನ ಅಹಂಕಾರ ಇಳಿದು ಹೋಗುತ್ತದೆ. ಅವನಿಗೆ ತನ್ನ ತಪ್ಪಿನ ಅರಿವಾಗುತ್ತದೆ. ಗಣೇಶನ ಮುಂದೆ ಭಯ ಭಕ್ತಿಗಳಿಂದ ಕೈ ಮುಗಿದು ನಿಂತು ‘ಸ್ವಾಮಿ, ನನ್ನ ಅಜ್ಞಾನವನ್ನು ಕ್ಷಮಿಸಿ ಬಿಡು ನನಗೆ ಕೊಟ್ಟ ಶಾಪವನ್ನು ಹಿಂತೆಗೆದುಕೊಂಡು ಉತ್ತರಿಸು ಎಂದು ಬೇಡಿಕೊಳ್ಳುತ್ತಾನೆ. ಗಣೇಶ ಚಂದ್ರನನ್ನು ಕ್ಷಮಿಸಿ, ‘ಚೌತಿಯ ದಿನ ನಿನ್ನನ್ನು ನೋಡಿ ಮಿಥ್ಯಾಪವಾದಕ್ಕೆ ಗುರಿಯಾದವರು ಶುದ್ಧ ಬಿದಿಗೆಯ ದಿನ ನಿನ್ನ…

Read More

ಮುಂಬಯಿಯ ಹೋಟೆಲು ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಹರೀಶ್ ಶೆಟ್ಟಿ ಪಡುಕುಡೂರು ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ.ಇವರು ಈ ಹಿಂದೆ ಪೋಷಕ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು ಮುಂದೆ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದಯೆ ಇವರ ಮತ್ತು ಇವರ ಕುಟುಂಬದ ಮೇಲೆ ಸದಾ ಇರಲಿ ಎಂದು ಹಾರೈಸಿ, ಒಕ್ಕೂಟದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ವತಿಯಿಂದ 2025-26ನೇ ವರ್ಷದ ‘ಪ್ರತಿಭಾ ಪುರಸ್ಕಾರ’ ಯೋಜನೆಗೆ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೈಂದೂರು ವಲಯದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 90 ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು ಸಿ.ಬಿ.ಎಸ್.ಸಿ. ಅಥವಾ ಐಸಿಎಸ್‌ಸಿ ಮಂಡಳಿ ಪರೀಕ್ಷೆಯಲ್ಲಿ ಶೇಕಡ 90 ಅಂಕ ಗಳಿಸಿದ ಬಂಟ ಸಮುದಾಯದ ವಿದ್ಯಾರ್ಥಿಗಳೂ ಸಹ ಅರ್ಜಿ ಸಲ್ಲಿಸಬಹುದು. ಪ್ರಥಮ ವರ್ಷದ ಪದವಿ ಪೂರ್ವ, ಪದವಿ ಅಥವಾ ವೃತ್ತಿಪರ ಶಿಕ್ಷಣ ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. www.bansbyndoor.com ಜಾಲ ತಾಣದಲ್ಲಿ prathiba puraskara-2025 ಲಿಂಕ್ Olympics ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಎನ್. ವಸಂತ ಹೆಗ್ಡೆ (ಸಂಚಾಲಕರು) 6361121382, 9481300846 ಇವರನ್ನು ಸಂಪರ್ಕಿಸಬಹುದು ಎಂದು ಅಧ್ಯಕ್ಷ ಸಾಲ್ಗದ್ದೆ ಶಶಿಧರ ಶೆಟ್ಟಿ ತಿಳಿಸಿದ್ದಾರೆ.

Read More

ಲಯನ್ಸ್ ಜಿಲ್ಲೆ 317 ಡಿ ಪ್ರಾಂತ್ಯ 8 ವಲಯ 2ರ ಅಧ್ಯಕ್ಷರಾಗಿ ಚಂದ್ರಶೇಖರ ರೈ ನಂಜೆ ಅವರನ್ನು ಲಯನ್ಸ್ ಜಿಲ್ಲಾ ಗವರ್ನರ್ ಕುಡುಪಿ ಅರವಿಂದ ಶೆಣೈ ಅವರು ನಿಯಕ್ತಿಗೊಳಿಸಿದ್ದಾರೆ. ಸುಳ್ಯ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರು, ಸುಳ್ಯ ಪಯಸ್ಸಿನಿ ಸೀನಿಯರ್ ಛೇಂಬರ್ ನ ನಿಕಟ ಪೂರ್ವ ಅಧ್ಯಕ್ಷರು, ಸುಳ್ಯ ಪಯಸ್ಸಿನಿ ಜೀಸಿಸ್ ನ ಪೂರ್ವಾಧ್ಯಕ್ಷರು ಹಾಗೂ ಇತರ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು ಸುಳ್ಯ ಡಿಜಿ ಪ್ಲಸ್ ಮಾಲಕರು. ಲಯನ್ಸ್ ಕ್ಲಬ್ ಸುಳ್ಯ ಲಯನ್ಸ್ ಕ್ಲಬ್ ಸಂಪಾಜೆ ಹಾಗೂ ಲಯನ್ಸ್ ಕ್ಲಬ್ ಗುತ್ತಿಗಾರು ಇವರ ವ್ಯಾಪ್ತಿಯಲ್ಲಿ ಒಳಗೊಂಡಿರುತ್ತದೆ. ಚಂದ್ರಶೇಖರ ರೈ ನಂಜೆ ಅವರು ಪುತ್ತೂರು ತಾಲೂಕಿನ ಕುರಿಯ ಏಳ್ನಾಡು ಗುತ್ತು ನಂಜೆ ಮನೆತನದವರು. ಪ್ರಸ್ತುತ ಬೆಳ್ಳಾರೆಯಲ್ಲಿ ವಾಸ್ತವ್ಯವಿದ್ದಾರೆ.

Read More

ಭಾರತೀಯ ಜನತಾ ಪಕ್ಷದ ಸಂಘಟನಾ ಪರ್ವ ದೇಶದಾದ್ಯಂತ ನಡೆಯುತ್ತಿದ್ದು, ಇದರ ಮುಂದುವರೆದ ಭಾಗವಾಗಿ ಕರ್ನಾಟಕ ಬಿಜೆಪಿಯು 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. ಈ ಕುರಿತು ಅಧಿಕೃತ ಪ್ರಕಟಣೆಯನ್ನು ಚುನಾವಣಾಧಿಕಾರಿ ಕ್ಯಾ. ಗಣೇಶ್ ಕಾರ್ಣಿಕ್ ಅವರು ಹೊರಡಿಸಿದ್ದು ಅದರಂತೆ ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ. ಆಯ್ಕೆಯಾದ ಹತ್ತು ನೂತನ ಅಧ್ಯಕ್ಷರಿಗೆ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಭಿನಂದನೆ ಸಲ್ಲಿಸಿದ್ದಾರೆ.

Read More

ಮೂಡುಬಿದಿರೆ: ದಕ್ಷಿಣಕೊರಿಯಾದ ಗುಮಿಯಲ್ಲಿ ನಡೆದ 26ನೇ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಸ್ಪೋರ್ಟ್ಸ್ಕ್ಲಬ್‌ನ ಆರು ಕ್ರೀಡಾಪಟುಗಳ ಭಾಗವಹಿಸಿ 3 ಚಿನ್ನ ಹಾಗೂ 3 ಬೆಳ್ಳಿಯ ಪದಕದೊಂದಿಗೆ ಆರು ಪದಕಗಳನ್ನು ಪಡೆದಿದ್ದಾರೆ. ಸ್ನೇಹಎಸ್ – 4*100ಮೀ ರಿಲೇ (ಚಿನ್ನ), ಶುಭ ಬಿ – 4*400ಮೀ ರಿಲೇ (ಬೆಳ್ಳಿ) ಮತ್ತು 4*400 ಮಿಕ್ಸ್ಡ್‌ರಿಲೇ (ಚಿನ್ನ), ಸಚಿನ್ – ಜಾವೆಲಿನ್ ತ್ರೋ (ಬೆಳ್ಳಿ), ಸಂತೋಷ್‌ಕುಮಾರ್ – 4*400 ಮಿಕ್ಸ್ಡ್‌ರಿಲೇ (ಚಿನ್ನ), ರಿನ್ಸ್ಜೋಸೆಫ್ – 4*400 ರಿಲೇ (ಬೆಳ್ಳಿ), ಪ್ರವೀಣ್ – ತ್ರಿವಿಧ ಜಿಗಿತದಲ್ಲಿ (ಬೆಳ್ಳಿ) ಪದಕವನ್ನು ಪಡೆದಿದ್ದಾರೆ. ಈ ಆರು ಕ್ರೀಡಾಪಟುಗಳು ಆಳ್ವಾಸ್ ಸ್ಪೋರ್ಟ್ಸ್ಕ್ಲಬ್‌ನ ದತ್ತು ಸ್ವೀಕಾರದ ಕ್ರೀಡಾಪಟುಗಳಾಗಿದ್ದು ಹಿಂದೆ ನಡೆದಿರುವಂತಹ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ, ಪದಕ ವಿಜೇತರಾಗಿ, ಸಂಸ್ಥೆಗೆ ಕೀರ್ತಿತಂದಿರುತ್ತಾರೆ. ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ-2025 ಜರ್ಮನಿಯ ರಿಯಾನ್-ರೋಹೂರ್‌ನಲ್ಲಿ ಜುಲೈ 16ರಿಂದ 27ರ ವರೆಗೆ ನಡೆಯಲಿರುವ ವರ್ಲ್ಡ್ಯುನಿವರ್ಸಿಟಿ ಗೇಮ್ಸ್ 2025(ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ-2025)ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾದತ್ತು ಯೋಜನೆಯ 11…

Read More

ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಮೊದಲಬಾರಿಗೆ ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿ ಬಿ.ಎ.ಪಿ.ಎಸ್. ಹಿಂದೂ ದೇವಾಲಯದಲ್ಲಿ ಮೇ 31ಮೇ 2025 ರಂದು ಗುರುವಂದನಾ ಸಂಸ್ಕೃತಿ ಸಿಂಚನ ಕಾರ್ಯಕ್ರಮ ನಡೆಯಿತು. ಸನಾತನ ಸಾಂಸ್ಕೃತಿ, ಕಲಾ ಆಧ್ಯಾತ್ಮಿಕ, ಗುರು ಪರಂಪರೆಯ ಕಾರ್ಯಕ್ರಮಕ್ಕೆ ಭಾರತದ ವಿವಿಧ ಭಾಗಗಳಿಂದ ಆಗಮಿಸಿದ್ದ ಪರಮ ಪೂಜ್ಯ ಮಠಾಧಿಪತಿಗಳು ಹಾಗೂ ಗಣ್ಯಾತಿ ಗಣ್ಯರು, ವಿವಿಧ ಕ್ಷೇತ್ರಗಳ ಸಾಧಕರುಗಳನ್ನು ಸುಮಂಗಲೆಯರಿಂದ ಪೂರ್ಣ ಕುಂಭ, ವೇದಘೋಷ, ಪಂಚವಾದ್ಯಗಳೊಂದಿಗೆ ಬಿ.ಎ.ಪಿ.ಎಸ್. ಹಿಂದೂ ಮಂದಿರದ ಅವರಣದಲ್ಲಿರುವ ಪ್ರಮುಖ್ ಸಭಾಂಗಣಕ್ಕೆ ಮೆರವಣಿಗೆಯ ಮೂಲಕ ಬರ ಮಾಡಿಕೊಳ್ಳಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರುಗಳನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಬುಧಾಬಿ ಹಿಂದೂ ಮಂದಿರದ ಮುಖ್ಯಸ್ಥರು ಪರಮ ಪೂಜ್ಯ ಶ್ರೀ ಬ್ರಹ್ಮವಿಹಾರಿ ದಾಸ್ ಸ್ವಾಮೀಜಿಯವರು, ಬೆಳಗಾವಿ ನಿಡಸೊಸಿ ಶ್ರೀ ಜಗದ್ಗುರು ದುರುದುಂಡೆಶ್ವರ ಮಠದ ಸ್ವಾಮಿಜಿ ಶ್ರೀ ಶ್ರೀ ಶ್ರೀ ನಿಜಲಿಂಗೇಶ್ವರ ಸ್ವಾಮಿಜಿ ಮತ್ತು ಗೋವಾ ರಾಜ್ಯದ ಶ್ರೀ ದತ್ತ ಪದ್ಮನಾಭ ಪೀಠದ ಪದ್ಮಶ್ರೀ ಪುರಸ್ಕೃತ ಪೂಜ್ಯ ಶ್ರೀ ಶ್ರೀ ಸದ್ಗುರು ಬ್ರಹ್ಮೇಶನಂದನಾಚಾರ್ಯ ಸ್ವಾಮಿಜಿ, ಸ್ವಾಮಿಜಿ…

Read More

ನಾವೆಲ್ಲರೂ ಪ್ರಕೃತಿಯ ಆರಾಧಕರು. ನಮಗರಿವಿಲ್ಲದೇ ಪ್ರಕೃತಿಯಿಂದ ಸಿಗುವ ಗಾಳಿ, ನೀರು, ಮರ, ಬೆಳಕು, ಮಣ್ಣಿನ ಆರಾಧಕರಾಗಿ ಪ್ರಕೃತಿಯನ್ನು ನಾವು ಪೂಜಿಸುತ್ತೇವೆ. ಜೀವ ಪೋಷಕ ಜೀವ ರಕ್ಷಕ ಇದೆಲ್ಲದರ ಮಹತ್ವ ಇಂದಿಗೂ ಮುಂದೆಯೂ ಎಂದೆಂದಿಗೂ ಇದ್ದೆ ಇರುತ್ತದೆ. ಭೂಮಿಯಲ್ಲಿನ ತೇವಾಂಶ ಭರಿತ ಜಾಗವನ್ನು ರಕ್ಷಣೆ ಪೋಷಣೆ ನೀಡಿದರೆ ಅರಣ್ಯ ಸಂಪತ್ತು ಯತೇಚ್ಛವಾಗಿ ಬೆಳೆಯಲು ಸಾದ್ಯ. ಇದಕ್ಕೆ ಪ್ರಾಮಾಣಿಕ ಬದ್ದತೆ ಬೇಕು. ಪ್ರಕೃತಿ ರಕ್ಷಣೆ ಕೂಡಾ ಹಾಗೂ ದೇಶ ರಕ್ಷಣೆ ಕೂಡಾ ನಮ್ಮಿಂದಲೇ ಆಗಬೇಕು. ನಮ್ಮ ಬಂಟರ ಸಂಘದ ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿನಂದನ್ ಶೆಟ್ಟಿ ಮತ್ತು ಯುವ ವಿಭಾಗದ ಸದಸ್ಯರಿಂದ ಪ್ರಕೃತಿಯ ಸಾಮಾನ್ಯ ಚಿಂತನೆಯಿಂದ ಅರ್ಥ ಪೂರ್ಣವಾದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಪ್ರಕೃತಿಗೆ ಕೊಡುಗೆ ನೀಡಲು ಪ್ರತಿಯೊಬ್ಬರೂ ತಮ್ಮ ಶಕ್ತಿ ಮತ್ತು ಉದಾತ್ತ ಮನೋಭಾವದಿಂದ ಒಗ್ಗೂಡಿ ತಮ್ಮ ಕರ್ತವ್ಯವನ್ನು ಮಾಡಿ ತೋರಿಸಿದ್ದಾರೆ. ಭವಿಷ್ಯದ ಪೀಳಿಗೆಗೆ ಪ್ರಕೃತಿಯನ್ನು ಕಾಪಾಡುವ ಕಡೆಗೆ ನಮ್ಮ ಸಾಮೂಹಿಕ ಜವಾಬ್ದಾರಿಯನ್ನು ತೋರಿಸೋಣ. ವನ ಮಹೋತ್ಸವ ಎಂದರೆ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮ…

Read More