Author: admin
ಕರಾವಳಿಯಲ್ಲಿ ಪ್ರತಿವರ್ಷ ಏನಾದರೂ ಒಂದು ಹೊಸತು ಇದ್ದೇ ಇರುತ್ತದೆ. ಸ್ಥಳೀಯತೆಯನ್ನು ಉಳಿಸಿಕೊಳ್ಳಬೇಕೆನ್ನುವ ಉದ್ದೇಶದಿಂದ ಒಂದು ವರ್ಷ ಮೊಸರು ಕುಡಿಕೆ, ಮತ್ತೊಂದು ವರ್ಷ ಪಿಲಿ ನಲಿಕೆ, ಆನಂತರದ ವರ್ಷ ದೇಸೀ ಕಬಡ್ಡಿ, ಮಗದೊಂದು ವರ್ಷ ಹಗ್ಗ ಜಗ್ಗಾಟ… ಹೀಗೆ ಏನಾದರೂ ಒಂದು ಇಲ್ಲಿ ವಿಜೃಂಭಿಸುತ್ತದೆ. ಕಂಬಳಕ್ಕಂತು ಲೆಕ್ಕವಿಲ್ಲ. ಪಕ್ಷಕ್ಕೊಂದು ರಾಜಕಾರಣಿಗೊಂದು ಇಲ್ಲಿ ಕಂಬಳಗಳಿವೆ. ಹೀಗೆ ನಮ್ಮೂರ ಯುವಕರು ಏನಾದರೊಂದು ಕೂಡುಕೂಟದಲ್ಲಿ ಸಂಭ್ರಮಿಸುತ್ತಲೇ ಇರುತ್ತಾರೆ. ಇಲ್ಲಿಯ ಮಂತ್ರಿಗಳು ಎಮ್ಮೆಲ್ಲೆಗಳು ರಾಜಕಾರಣಿಗಳು ಉದ್ಯಮಿಗಳು ಈ ದೇಸಿ ಸಂಭ್ರಮದಲ್ಲಿ ಪಾಲ್ಗೊಳ್ಳುವುದು, ಆಯೋಜಿಸುವುದು ಎಲ್ಲಾ ಇದ್ದೇ ಇದೆ. ಅವುಗಳ ಲಾಭ ನಷ್ಟ ಧರ್ಮ ಜಾತಿ ವೋಟು ಗೀಟು ಪ್ರಯೋಜನಗಳ ಬಗ್ಗೆ ಪಿಎಚ್ಡಿ ಮಾಡಬಹುದಾದ ವಿಷಯ. ಅದು ಏನೇ ಇರಲಿ, ಈ ಸರಣಿಗೆ ಈ ವರ್ಷ ದೊಡ್ಡಮಟ್ಟದಲ್ಲಿ ಸೇರಿಕೊಂಡದ್ದು ಕೆಸರಿನಲ್ಲಿ ಒಂದು ದಿನ- ಕೆಸರಡೊಂಜಿ ದಿನ! ಕರಾವಳಿಯ ಉದ್ದಕ್ಕೂ ಬೇಸಾಯವಿರುವ, ಇಲ್ಲದ ಗದ್ದೆಗಳನ್ನೆಲ್ಲಾ ಹುಡುಕಿ ಹುಡುಕಿ ಉಳುಮೆ ಮಾಡಿ ಹದಗೊಳಿಸಿ, ಕಟ್ಟಪುಣಿಯಲ್ಲಿ ಚಪ್ಪರ ಎಬ್ಬಿಸಿ ಬಣ್ಣ ಬಣ್ಣದ ಪತ್ರಪತಾಕೆ ಹಾರಿಸಿ…
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಬೆಳಕು-ಆಪ್ತ ಸಮಾಲೋಚನಾ ಕೇಂದ್ರ’ವನ್ನು ಆಳ್ವಾಸ್ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಸ್ಥಳಾಂತರಿಸಿ ಉದ್ಘಾಟಿಸಲಾಯಿತು. ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಭೂಮಿಯಲ್ಲಿರುವ ಎಲ್ಲಾ ಜೀವಿಗಳ ಪೈಕಿ ಮನುಷ್ಯ ಅತ್ಯಂತ ವಿಶೇಷ. ತನ್ನ ಬುದ್ಧಿಶಕ್ತಿ, ಕಲ್ಪನೆ, ನೈತಿಕ ಮೌಲ್ಯಗಳು ಹಾಗೂ ಸಮಾಜವನ್ನು ರೂಪಿಸುವ ಸಾಮರ್ಥ್ಯವು ಮನುಷ್ಯನನ್ನು ಇತರ ಜೀವರಾಶಿಗಳಿಗಿಂತ ಭಿನ್ನಗೊಳಿಸಿದೆ. ಆದರೆ, ಈ ಅಸಾಧಾರಣ ಸಾಮರ್ಥ್ಯಗಳ ಜೊತೆಗೆ ಮನುಷ್ಯ ತನ್ನ ಭಾವನಾತ್ಮಕ ಅಸ್ಥಿರತೆಯ ಬಲೆಗೆ ಸುಲಭವಾಗಿ ಸಿಲುಕ ಬಲ್ಲ ಎಂದರು. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯತ್ನ ಮಾಡುವ ಸಂದರ್ಭಗಳಲ್ಲಿ, ಸ್ಪರ್ಧೆ, ಅತಿಯಾದ ಆಕಾಂಕ್ಷೆ ಹಾಗೂ ಪೋಷಕರ ಒತ್ತಡದಿಂದಾಗಿ ನಿರೀಕ್ಷಿತ ಫಲಿತಾಂಶವನ್ನು ಸಾಧಿಸಲು ಕೆಲವೊಮ್ಮೆ ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭಗಳು ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಈ ಸಮಯದಲ್ಲಿ ಆಪ್ತ ಸಮಾಲೋಚನೆಯ ಅಗತ್ಯತೆಯಿದೆ’ ಎಂದರು. ಸಮಸ್ಯೆಯಿಂದ ಬಳಲುವ ವಿದ್ಯಾರ್ಥಿಗಳನ್ನು ಶಿಕ್ಷಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲಕರು ಕೂಡಲೇ…
ನಿರುದ್ಯೋಗ ನಿವಾರಣೆ, ಯುವ ಜನರಿಗೆ ಉದ್ಯೋಗ ಮಾರ್ಗದರ್ಶನ, ಉಚಿತ ಕಂಪ್ಯೂಟರ್ ತರಬೇತಿಯು ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ಉಚಿತವಾಗಿ ನೀಡುತ್ತಿರುವ ಕಂಪ್ಯೂಟರ್ ಸಾಕ್ಷರತಾ ತರಬೇತಿಯು ಉತ್ತಮ ಹೆಜ್ಜೆಯಾಗಿದೆ. ಸದುಪಯೋಗದ ಮೂಲಕ ಸವಾಲುಗಳನ್ನು ಮೆಟ್ಟಿನಿಂತು ಸುಂದರ ಬದುಕನ್ನು ಕಟ್ಟಿಕೊಳ್ಳಿರಿ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನ್ಯಾಯವಾದಿ ಮಟ್ಟಾರು ರತ್ನಾಕರ್ ಹೆಗ್ಡೆ ಹೇಳಿದರು. ಅವರು ಆಗಸ್ಟ್ 9ರಂದು ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕುಂತಳನಗರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ ಕಂಪನಿ ಮಂಗಳೂರು ಪ್ರಾಯೋಜಕತ್ವದಲ್ಲಿ ಉಡುಪಿಯ ಮೈಸ್ ಕಂಪ್ಯೂಟರ್ ಸಹಾಯೋಗದಲ್ಲಿ ನಡೆಯುತ್ತಿರುವ ಒಂದು ತಿಂಗಳ ಉಚಿತ ಕಂಪ್ಯೂಟರ್ ಸಾಕ್ಷರತಾ ತರಬೇತಿಯು 19-20 ನೇ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ, ಕೆಪಿಸಿಸಿ ಕೋ ಆರ್ಡಿನೇಟರ್ ನವೀನ್ ಚಂದ್ರ ಜೆ. ಶೆಟ್ಟಿ ಪಡುಬಿದ್ರಿ ಮಾತನಾಡಿ, ಯುವಜನತೆಯ ಬದುಕು ರೂಪಿಸುವ ಉತ್ತಮ ಭವಿಷ್ಯದ ದೃಷ್ಟಿಕೋನದಲ್ಲಿ…
ಯಕ್ಷಗಾನವಿಂದು ಕೇವಲ ಕರಾವಳಿಯ ಕಲೆಯಾಗಿ ಉಳಿದಿಲ್ಲ. ತನ್ನ ವಿಶಿಷ್ಟವಾದ ಪ್ರಭಾವ ಮತ್ತು ಪ್ರಯೋಗಶೀಲತೆಯಿಂದ ನಾಡು ಹೊರನಾಡುಗಳಲ್ಲಿ ಮೆರೆದು ಸೀಮೋಲ್ಲಂಘನೆ ಮಾಡಿರುವ ಯಕ್ಷಗಾನ ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಪರಿಪೂರ್ಣ ರಂಗಕಲೆಯಾಗಿ ಗಮನ ಸೆಳೆದಿದೆ. ಅದು ಜಗತ್ತಿನ ಶ್ರೇಷ್ಠ ರಂಗಕಲೆಗಳಲ್ಲೊಂದು. ಅದರ ಮೌಖಿಕ ವಿಭಾಗವಾದ ತಾಳಮದ್ದಳೆಯನ್ನು ಮುಂಬಯಿಯಲ್ಲಿ ಜನಪ್ರಿಯಗೊಳಿಸಿರುವ ಅಜೆಕಾರು ಬಾಲಕೃಷ್ಣ ಶೆಟ್ಟರ ಕಾರ್ಯ ಶ್ಲಾಘನೀಯ ಎಂದು ಹಿರಿಯ ಯಕ್ಷಗಾನ ಅರ್ಥಧಾರಿ, ಬಹುಶ್ರುತ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ಹೇಳಿದರು. ಮುಂಬಯಿ ವಿದ್ಯಾವಿಹಾರ್ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ಮಂದಿರದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ 24 ನೇ ವರ್ಷದ ಯಕ್ಷಗಾನ ತಾಳಮದ್ದಳೆ ಸರಣಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಮುಂಬಯಿಯ ಹಿರಿಯ ಅರ್ಥಧಾರಿ ಕೆ.ಕೆ ಶೆಟ್ಟಿ ಅವರು ಶ್ರೀದೇವಿ ಸನ್ನಿಧಿಯಲ್ಲಿ ದೀಪ ಬೆಳಗಿ 2024 – 25 ನೇ ಸಾಲಿನ ಸರಣಿ ತಾಳಮದ್ದಳೆಯನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು. ಮುಂಬಯಿಯಲ್ಲಿ ಯಕ್ಷಗಾನಕ್ಕೆ ದೀರ್ಘ ಪರಂಪರೆಯಿದೆ. ಆ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿರುವುದು ಅಜೆಕಾರು ಕಲಾಭಿಮಾನಿ…
ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ದಿನಾಂಕ :09-08-2025 ರಂದು ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ 'ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ'ಯನ್ನು ಆಚರಿಸಲಾಯಿತು. ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾದ ಶ್ರೀ ಶಿವಕುಮಾರ್ ರವರು, ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಅದರಿಂದ ಜೀವ/ ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ. ಎಂಬ ಎಚ್ಚರಿಕೆಯ ನುಡಿ ಗಳೊಂದಿಗೆ, ಅದನ್ನು ಹೋಗಲಾಡಿಸುವಲ್ಲಿ ಯುವಜನತೆಯ ಜವಾಬ್ದಾರಿ ಮಹತ್ತರವಾದುದು ಮತ್ತು ಅಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾನೂನಿನ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಎಂದು ಕಾನೂನಿನ ಅರಿವನ್ನು ಮೂಡಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಪೋಕ್ಸೋ ಕಾನೂನು, ಸಂಚಾರ ನಿಯಮಗಳ ಬಗ್ಗೆ ಅರಿವು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಆಗುವ ಸಮಸ್ಯೆಗಳ ಕುರಿತು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್…
ಗಣಿತನಗರ : ಬದುಕು ಆಕರ್ಷಣೆಯ ಗುಚ್ಚ. ಅದರಾಚೆಗಿರುವ ಮೌಲ್ಯವನ್ನು ಅರಿತರೆ ಜೀವನ ಸ್ವಚ್ಛವಾಗಿರಲು ಸಾಧ್ಯ. ಸಮಾಜದೆದುರು ನಾವು ಏನು ಅನ್ನೋದನ್ನು ತೋರಿಸಿಕೊಡುವಲ್ಲಿ ತಲೆತಗ್ಗಿಸದಂತೆ ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ನಮ್ಮೊಳಗಿನ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಂಡು ಮುನ್ನಡೆದ ಪ್ರಾಮಾಣಿಕರು ಆರೋಗ್ಯವಾಗಿರುತ್ತಾರೆ ಎಂದು ಹಿಪ್ನೋಥೆರಪಿಸ್ಟ್ ಶ್ರೀಮತಿ ಜ್ಯೋತಿ ಮಹಾದೇವ್ ಹೇಳಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಕಳದ ರೋಟರಿ ಕ್ಲಬ್, ಆನ್ಸ್ ಕ್ಲಬ್ ಹಾಗೂ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಘಟಕದ ವತಿಯಿಂದ ನಡೆದ ಮಕ್ಕಳು ಎದುರಿಸುತ್ತಿರುವ ಮನೋಸಮಸ್ಯೆಗಳ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ನ ಅಧ್ಯಕ್ಷ ರೊ.ನವೀನ್ಚಂದ್ರ ಶೆಟ್ಟಿ ಮಾತನಾಡಿದರು, ಇದೇ ಸಂದರ್ಭ ರೋ.ವೃಂದ ಶೆಟ್ಟಿ ಸ್ವಾಗತಿಸಿ, ಆನ್ಸ್ಕ್ಲಬ್ ಅಧ್ಯಕ್ಷೆ ಜಯಂತಿ ನಾಯ್ಕ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿ ಶ್ರೀಮತಿ ಜ್ಯೋತಿ ಮಹಾದೇವ್ ಅವರಿಗೆ ಮೇಜರ್ ಡೋನರ್ ಲೆವಲ್ ೨ ರೋ.ಸುವರ್ಣ ನಾಯಕ್ ನೇತೃತ್ವದಲ್ಲಿ ಉಡಿ ತುಂಬಿಸಿ ಸನ್ಮಾನಿಸಲಾಯಿತು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರ್,…
ಕ್ರಿಯೇಟಿವ್ ಕಾಲೇಜಿಗೆ ಆಗಸ್ಟ್ 15ರಂದು ಪದ್ಮಶ್ರೀ ಪುರಸ್ಕೃತ, ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್ ಕಿರಣ್ ಕುಮಾರ್ ಆಗಮನ
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. 15 ಆಗಸ್ಟ್ 2025ರ ಶುಕ್ರವಾರದಂದು ಪೂರ್ವಾಹ್ನ 10. 00 ಗಂಟೆಗೆ ಸರಿಯಾಗಿ ಕಾಲೇಜಿನ ಸಪ್ತಗಿರಿ ಕ್ಯಾಂಪಸ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ಜರುಗಲಿರುವುದು. ಬಳಿಕ 11.00 ಗಂಟೆಗೆ ಎ.ಎಸ್ ಕಿರಣ್ ಕುಮಾರ್ ರವರಿಂದ From Class Room to Cosmos : Science, Youth and Nation Building ಎಂಬ ವಿಚಾರದ ಕುರಿತು ವಿದ್ಯಾರ್ಥಿಗಳಿಗೆ CEF inspiro ಎಂಬ ಶೀರ್ಷಿಕೆಯಲ್ಲಿ ಸ್ಪೂರ್ತಿ ಮಾತು ಕಾರ್ಯಕ್ರಮ ನಡೆಯಲಿರುವುದು. ನಂತರ ಜೀ ಸರಿಗಮಪ ಮತ್ತು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಖ್ಯಾತಿಯ ಶ್ರೀ ಯಶವಂತ ಎಂ.ಜಿ ಹಾಗೂ ತಂಡದವರಿಂದ ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿರುವುದು.
ಗಣಿತನಗರ : ವ್ಯಕ್ತಿತ್ವ ನಮ್ಮ ನೈತಿಕತೆಯ ಮೇಲೆ ನಿಂತಿದೆ. ನಡೆ-ನುಡಿ-ನಡವಳಿಕೆಯಿಂದ ಚಾರಿತ್ರö್ಯ ನಿರ್ಮಾಣ ಸಾಧ್ಯ. ನಮ್ಮಲ್ಲಿ ನಮಗೆ ನಂಬಿಕೆಯಿರಲಿ ಎಂದು ಜೆ.ಸಿ.ಐ ರಾಷ್ಟ್ರೀಯ ತರಬೇತುದಾರ ಶ್ರೀ ದೀಪಕ್ ರಾಜ್ ಹೇಳಿದರು. ಅವರು ಜೆ.ಸಿ.ಐ ಕಾರ್ಕಳದ ಸಹಯೋಗದೊಂದಿಗೆ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜೆ.ಸಿ.ಐ ಕಾರ್ಕಳದ ಅಧ್ಯಕ್ಷೆ ಶ್ವೇತಾ ಎಸ್. ಜೈನ್, ಗ್ರೋತ್ ಮತ್ತು ಡೆವಲಪ್ ಮೆಂಟ್ ಝೋನ್ ಡೈರೆಕ್ಟರ್ ಶ್ರೀ ವಿಘ್ನೇಶ್, ಕಾರ್ಯದರ್ಶಿ ಸುಶ್ಮಿತಾ ರಾವ್, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲ ಶ್ರೀ ಸಾಹಿತ್ಯ, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸುಮಿತ್ರಾ ಹಾಗೂ ಎನ್.ಎಸ್.ಎಸ್ ಘಟಕಾಧಿಕಾರಿ ಶ್ರೀ ಶೈಲೇಶ್ ಶೆಟ್ಟಿ ಉಪಸ್ಥಿತರಿದ್ದರು. ಉಪನ್ಯಾಸಕಿ ಕು.ಅನಿಶಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ…
ಮೂಡುಬಿದಿರೆ: ಇಂದಿನ ಯುಗದಲ್ಲಿ ಕೃಷಿಯನ್ನು ವೃತ್ತಿಯಾಗಿ ಆಯ್ಕೆ ಮಾಡುವುದು ಕೇವಲ ಪರಂಪರೆಯ ನಿರ್ವಹಣೆಯಲ್ಲ, ಅದೊಂದು ಜಾಣ ಆಯ್ಕೆ ಎಂದು ಸಾವಯವ ಕೃಷಿಕ ಹಾಗೂ ಶಾಸಕ ರಾಜೇಶ್ ನಾಯ್ಕ್ ನುಡಿದರು. ಅವರು ಆಳ್ವಾಸ್ ಮ್ಯಾನೆಜ್ಮೆಂಟ್ ವಿಭಾಗದ ಟ್ರೆöÊಬ್ಲೇಜ್ ವೇದಿಕೆ ಶುಕ್ರವಾರ, ಕುವೆಂಪು ಹಾಲ್ನಲ್ಲಿ ಆಯೋಜಿಸಿದ್ದ ವಿಶೇಷ ಅತಿಥಿ ಉಪನ್ಯಾಸ- ‘ನೆಲದಿಂದ ನೆಲೆವರೆಗೆ: ಕೃಷಿ ಉದ್ಯಮಿಯ ಯಶೋಗಾಥೆ’ ಕರ್ಯಕ್ರಮದಲ್ಲಿ ಮಾತನಾಡಿದರು. ಕೃಷಿಯಲ್ಲಿ ವರ್ಷದಲ್ಲಿ ಕೇವಲ ಎರಡು ತಿಂಗಳು ಶ್ರಮಿಸಿದರೆ, ಉಳಿದ ಹತ್ತು ತಿಂಗಳು ಇತರ ಚಟುವಟಿಕೆಗಳಿಗೆ ಮೀಸಲಿಡಲು ಸಾಧ್ಯ. ಎಲ್ಲಾ ವೃತ್ತಿಗಳಿಗಿಂತಲೂ ಕೃಷಿಯೇ ಹೆಚ್ಚು ಸಂತಸ ಮತ್ತು ತೃಪ್ತಿ ನೀಡುವ ಉದ್ಯೋಗವಾಗಿದೆ ಎಂದು ಅವರು ಹೇಳಿದರು. ಬಂಜರು ಭೂಮಿಯನ್ನು ಸಮೃದ್ಧ ಕೃಷಿಭೂಮಿಯಾಗಿಸಿದ ಪರಿ ಮಂಗಳೂರಿನ ಸಮೀಪ ಒಡ್ಡೂರಿನಲ್ಲಿರುವ 150 ಎಕರೆ ಬಂಜರು ಭೂಮಿಯನ್ನು ಸಾವಯವ ಕೃಷಿ ತೋಟವನ್ನಾಗಿ ಪರಿವರ್ತಿಸಿದ ಪರಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊ0ಡರು. ಹಲವಾರು ಸವಾಲುಗಳನ್ನು ಎದುರಿಸಿದರೂ, ನಿರಂತರ ಶ್ರಮ, ಹೋರಾಟ ಮನೋಭಾವ ಮತ್ತು ಸದಾ ಆಶಾವಾದೊಂದಿಗಿನ ಮನಸ್ಥಿತಿಯಿಂದ ಈ ಸಾಧನೆ ಸಾಧ್ಯವಾಯಿತು ಎಂದರು.…
ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು "ಕ್ರಿಯೇಟಿವ್ ಪುಸ್ತಕ ಧಾರೆ – 2025" ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚಿತ್ರ ನಿರ್ದೇಶಕರು ಹಾಗೂ ಖ್ಯಾತ ಸಾಹಿತಿಗಳಾದ ಡಾ. ನಾಗತಿಹಳ್ಳಿ ಚಂದ್ರಶೇಖರ್, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಇವರು ಆಗಮಿಸಲಿದ್ದಾರೆ. ಜೊತೆಗೆ ಶ್ರೀ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಸಾಹಿತಿಗಳು ಮತ್ತು ಅಧ್ಯಕ್ಷರು, ಕ.ಸಾ.ಪ ಕಾರ್ಕಳ ತಾಲೂಕು, ಡಾ. ಪ್ರದೀಪಕುಮಾರ ಹೆಬ್ರಿ, ಮಹಾಕಾವ್ಯಗಳ ಲೇಖಕರು, ಮಂಡ್ಯ, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು ಘನ ಉಪಸ್ಥಿತಿ ವಹಿಸಲಿದ್ದಾರೆ. ಅನಾವರಣಗೊಳ್ಳಲಿರುವ ಕೃತಿಗಳು ಯಾತ್ರೆ – ಚಂದ್ರಕಾಂತ ಪೋಕಳೆ ವಿಜ್ಞಾನ ಕೌತುಕಗಳ ಮಹಾಯಾನ – ಎಲ್.ಪಿ ಕುಲಕರ್ಣಿ ಹರ್ಷ ರಾಗ – ಪೌಝಿಯಾ ಸಲೀಂ ಹಿತಶತ್ರು – ಪದ್ಮಲತಾ ಮೋಹನ್ ಪುಟ್ಟ ದೇವರ ಕಣ್ಣೀರು – ಸದಾಶಿವ ಸೊರಟೂರು ಬದುಕು…