Author: admin

ಬಹುನಿರೀಕ್ಷಿತ “ಕಾಂತಾರ ಚಾಪ್ಟರ್ -1” ಪ್ರೀಮಿಯರ್ ಶೋ ದುಬೈನಲ್ಲಿ ಹೌಸ್ ಫುಲ್ ಪ್ರದರ್ಶನಗೊಂಡು ಒಳ್ಳೆಯ ಪ್ರತಿಕ್ರಿಯೆಗೆ ಪಾತ್ರವಾಗಿದೆ. ಫೋರ್ಚುನ್ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರ ನೇತೃತ್ವದಲ್ಲಿ ನಡೆದ ಪ್ರೀಮಿಯರ್ ಪ್ರದರ್ಶನದಲ್ಲಿ ಯುಎಇಯ ತುಳು ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಿನಿಮಾವನ್ನು ನೋಡಿ ಒಳ್ಳೆಯ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸರಳ ರೀತಿಯಲ್ಲಿ ನಡೆದ ಪ್ರೀಮಿಯರ್ ಶೋ ನ ಬಿಡುಗಡೆಯ ಸಭಾ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಯುಎಇಯಲ್ಲಿ ಚಿತ್ರ ಬಿಡುಗಡೆಗೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಯುಎಇ ಎಮಿರೇಟ್ಸ್ ನ ಉದ್ಯಮಿ ಡಾ. ಬು. ಅಬ್ಧುಲ್ಲಾ, ಅಬ್ದುಲ್ಲಾ ಅಲ್ ಝಫಾಲೀ, ಅಮಲ್ ಅಬ್ದುಲ್ಲಾ,ಜ್ಯೊಲ್ಲೆ ಜಬ್ಬಾರ್, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಹರೀಶ್ ಬಂಗೇರ, ದೀಪಕ್ ಸೋಮಶೇಖರ್ ಉಪಸ್ಥಿತರಿದ್ದರು. ಎಲ್ಲಾ ಅತಿಥಿಗಳನ್ನು ಪ್ರವೀಣ್ ಕುಮಾರ್ ಶೆಟ್ಟಿಯವರು ಶಾಲು ಹೊದಿಸಿ ಗೌರವಿಸಿದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕಥೆ ಏನು? ಬಾಂಗ್ರಾ ರಾಜ ಮನೆತನ ಮತ್ತು…

Read More

ಬ್ರಹ್ಮಾವರ: ಅ 2: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರು ಮಹಾನ್ ನಾಯಕರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ಮಾತನಾಡಿ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಮಂದಿ ಪ್ರಾಣವನ್ನು ತ್ಯಾಗಮಾಡಿದ್ದಾರೆ. ಆದರೆ ಗಾಂಧೀಜಿಯವರನ್ನು ಮಾತ್ರ ರಾಷ್ಟ್ರಪಿತ ಎಂದು ಕರೆಯುತ್ತೇವೆ. ಅವರು ತಮ್ಮ ಅಹಿಂಸಾ ತತ್ವದಿಂದ ಪ್ರಪಂಚದ ಎಲ್ಲಾ ಜನರ ಮನಸ್ಸನ್ನು ಗೆದ್ದವರು. ಅದೇ ರೀತಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ತಮ್ಮ ಸರಳತೆಯ ಜೊತೆಗೆ ದೇಶವನ್ನು ಕಾಯುವ ಸಶಸ್ತ್ರ ಪಡೆಗಳಿಗೆ ಹೆಚ್ಚಿನ ಗೌರವ ಮತ್ತು ಪ್ರಾಮುಖ್ಯತೆಯನ್ನು ನೀಡಿದ್ದರು. ಅವರ ‘ಜೈ ಜವಾನ್ ಜೈ ಕಿಸಾನ್’ ಘೋಷವಾಕ್ಯ ರೈತರು ಹಾಗೂ ಸೈನಿಕರ ಕುರಿತು ಅವರಿಗಿರುವ ಕಾಳಜಿ ಮತ್ತು ಗೌರವವನ್ನು ಎತ್ತಿ ತೋರಿಸುತ್ತದೆ ಎಂದರು. ಶಾಲಾ ದೈಹಿಕ ಶಿಕ್ಷಕರಾದ ಸೀತರಾಮ ಗೌಡ ಲಾಲ್ ಬಹದ್ದೂರ್ ಶಾಸ್ತ್ರೀಯವರು ದೇಶಕ್ಕೆ ನೀಡಿದ ಕೊಡುಗೆಗಳು ಹಾಗೂ ದಿನೇಶ್‍ರವರು ಗಾಂಧೀಜಿಯವರ ಜೀವನ ಸಾಧನೆ, ತತ್ವಗಳ…

Read More

ಕೇಂದ್ರ ಲೋಕಸೇವಾ ಆಯೋಗ ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹುದ್ದೆಗೆ ನಡೆದ ಎರಡನೇ ಹಂತದ ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ 14 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಎಸ್.ಎಸ್.ಬಿ. ( ಸರ್ವಿಸ್ ಸೆಲೆಕ್ಷನ್ ಬೋರ್ಡ್ ) ಸಂದರ್ಶನಕ್ಕೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ನಾಗದೇವ ಎಂ.ಜಿ, ಪ್ರಥಮ್ ತಮ್ಮಣ್ಣಗೌಡರ್, ನಿಶಾಂತ್ ಹೊನ್ನಾವರ, ನಮಿತ್ ಕೃಷ್ಣಮೂರ್ತಿ ಹೆಗ್ಡೆ, ಸಂವಿತ್ ಅಮಿತ್ ಗೋಕರ್ಣ, ಸುಕ್ಷಿತ್ ಗಿರೀಶ್ ಗೌಡ, ಅಭಿರಾಮ್ ಭಟ್ ಜಿ.ಪಿ, ಪ್ರಜ್ವಲ್ ಭಟ್, ಆರ್ಯ. ವಿ, ಸೃಜನಾ. ಎಸ್, ಯಜತ್ ಗೌಡ ಎಸ್.ಪಿ, ವಿಶ್ವೇಶ್ ಎನ್.ಎಚ್, ನಿನಾದ್ ರಾಜೇಶ್ ನಾಯ್ಕ್, ಅನುರಾಗ್ ಎಸ್. ಶಿರ್ಸಟ್ ತಮ್ಮ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಸಾಧನೆಗೈದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ತೇರ್ಗಡೆಗೊಂಡ 7,650 ವಿದ್ಯಾರ್ಥಿಗಳಲ್ಲಿ 14 ಜನ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ತೇರ್ಗಡೆಗೊಂಡ 500 ವಿದ್ಯಾರ್ಥಿನಿಯರಲ್ಲಿ ಒಬ್ಬರು ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿನಿ ಎಂಬುದು ಶ್ಲಾಘನೀಯ ವಿಚಾರ. ಎನ್. ಡಿ. ಎ. ದೇಶಮಟ್ಟದಲ್ಲಿ ನಡೆಯುವ ಅತ್ಯಂತ…

Read More

ನಾಡಿನೆಲ್ಲೆಡೆ ವಿಜಯ ದಶಮಿಯ ಸಂಭ್ರಮ ಕಳೆಗಟ್ಟಿರುವ ಸಂದರ್ಭದಲ್ಲಿ, ಅಕ್ಟೋಬರ್ 2ರಂದು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಾರದ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾ ನಗರ, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ನ ವಿದ್ಯಾರ್ಥಿಗಳು ಭಕ್ತಿ ಸುಧೆಯ ಗೀತ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಮನೋವೈದ್ಯರಾದ ಡಾ.ವಿರೂಪಾಕ್ಷ ದೇವರಮನೆ, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ರವಿ ಜಿ, ಹೇಮಂತ್ , ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ ಉಪಸ್ಥಿತರಿದ್ದರು. ಮಣಿಪಾಲ ಜ್ಞಾನಸುಧಾ ಮತ್ತು ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಸಂಭ್ರಮದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಆಂಗ್ಲ ಭಾಷೆ ಉಪನ್ಯಾಸಕಿ ಶ್ರೀಮತಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.

Read More

ನಿಟ್ಟೆ : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ವಿದ್ಯಾರ್ಥಿಗಳು ನಿಟ್ಟೆಯ ಪರ್ಪಲೆಯಲ್ಲಿರುವ ಕ್ರಿಸ್ತ ಸೇವಕೀ ಆಶ್ರಮವನ್ನು ಸಂದರ್ಶಿಸಿದರು. ಅಲ್ಲಿನ ನಿವಾಸಿಗಳಿಗೆ ಆಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟು ಸುಮಾರು ಎರಡು ಗಂಟೆಗೂ ಹೆಚ್ಚು ಹೊತ್ತು ಬೆರೆತರು. ಇದೇ ಸಂದರ್ಭ ಆಶ್ರಮದ ನಿವಾಸಿಗಳಿಗೆ ವಿದ್ಯಾರ್ಥಿಗಳು ತಂದ ದಿನಸಿ ಸಾಮಾಗ್ರಿಗಳನ್ನು ಹಂಚಿ ಖುಷಿಪಟ್ಟರು. ಇದೇ ಸಂದರ್ಭ ಸಂಸ್ಥೆಯ ಉಪಪ್ರಾಂಶುಪಾಲ ಶ್ರೀ ಸಾಹಿತ್ಯ, ಘಟಕಾಧಿಕಾರಿ, ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀ ಶೈಲೇಶ್, ಕನ್ನಡ ಉಪನ್ಯಾಸಕ ಸಂತೋಷ್ ನೆಲ್ಲಿಕಾರು ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಕೀರ್ತಿ ಆಚಾರ್ಯ, ಹಿಂದಿ ಉಪನ್ಯಾಸಕಿ ಶ್ರೀಮತಿ ಅಶ್ವಿನಿ, ಕ್ಷೇಮಪಾಲಕರಾದ ಸುಕೇಶ್, ಮಂಜುನಾಥ್, ಚಾಲಕರಾದ ಚಂದ್ರಶೇಖರ್ ಮತ್ತು ಅಕ್ಷಯ್ ಕುಮಾರ್ ಉಪಸ್ಥಿತರಿದ್ದರು.

Read More

ದುಷ್ಟ ಸಂಹಾರಕ್ಕಾಗಿಯೇ ಅವತರಿಸಿದ ದುರ್ಗಾ ಮಾತೆಯ ಪೂಜನೀಯ ಪುಣ್ಯ ಪರ್ವವಿದು. ನವರಾತ್ರಿ ಉತ್ಸವದಲ್ಲಿ ಭಕ್ತರು ಒಂಬತ್ತು ರೂಪಗಳಲ್ಲಿ ದುರ್ಗಾ ದೇವಿಯನ್ನು ಪೂಜಿಸುತ್ತಾರೆ. ಲೋಕ ಕಲ್ಯಾಣಾರ್ಥವಾಗಿ ಕೂಡಾ ಇದು ಮಹತ್ವದ್ದು. ವಿಶೇಷವಾಗಿ ನವರಾತ್ರಿ ಈ ಸುಸಂದರ್ಭದಲ್ಲಿ ಪುಣೆ ಬಂಟರ ಸಂಘದ ದುರ್ಗಾ ಪೂಜೆಯಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ವಿಶೇಷ ರೀತಿಯ ಸಂಪ್ರದಾಯದ ಪ್ರಕಾರ ಇಲ್ಲಿ ದುರ್ಗಾ ಪೂಜೆ, ಮತ್ತು ತಮ್ಮ ಪ್ರಕೃತಿಯೊಂದಿಗಿನ ಬಾಂಧವ್ಯದ ಆಚರಣೆಯನ್ನು ನೋಡುವ ಭಾಗ್ಯ ಸಿಕ್ಕಿದೆ. ಅದೇ ರೀತಿ ನನ್ನ ಸಾಮಾಜಿಕ ಸೇವೆಯನ್ನು ಪರಿಗಣಿಸಿ ನೀಡಿದ ನವದುರ್ಗಾ ಪ್ರಶಸ್ತಿಗೆ ಋಣಿಯಾಗಿದ್ದೇನೆ. ಈ ಪ್ರಶಸ್ತಿಯನ್ನು ನನ್ನ ಸೇವಾ ಸಂಸ್ಥೆಯ ಅನಾಥ ಮಕ್ಕಳಿಗೆ ಅರ್ಪಣೆ ಮಾಡುತಿದ್ದೇನೆ. ಅನಾಥ ಮತ್ತು ಅಂಗವಿಕಲ ಮಕ್ಕಳನ್ನು ಮಾನಸಿಕ ಸಮತೋಲನಕ್ಕೆ ತಂದು, ಸಾಮಾಜಿಕ ಚಿಂತನೆಯನ್ನು ತಿಳಿ ಹೇಳುವ ಮೂಲಕ ಅಜ್ಞಾನದಿಂದ ಜ್ಞಾನದೆಡೆಗೆ ಪರಿವರ್ತಿಸಿ, ಸ್ವಪರಿಶ್ರಮದಿಂದ ಸಬಲೀಕರಣಗೊಳಿಸಿ ಸ್ವಾವಲಂಭಿಗಳಾಗಿ ಮಾಡುವುದರಲ್ಲಿ ನಮಗೆ ಆತ್ಮ ತೃಪ್ತಿ ಇದೆ. ಇದು ನಮಗೆ ಸವಾಲಿನ ಪ್ರಶ್ನೆಯಾದರೂ ಹಲವಾರು ವರ್ಷಗಳಿಂದ ಈ ಅನಿಕೇತ್ ಸೇವಾಭಾವಿ ಸಂಸ್ಥೆ…

Read More

ಒಳ್ಳೆಯತನ ಎಂದರೆ ಮಾನವೀಯ ಗುಣಗಳನ್ನು ಹೊಂದಿರುತ್ತದೆ. ಅಂತಹ ಮಾನವೀಯ ಗುಣಗಳೆಂದರೆ ಸಹಕಾರ, ಸಹಾಯ, ದಯೆ, ಕರುಣೆ, ಸಹಾನುಭೂತಿ, ಸಾಮಾಜಿಕ ಪ್ರಜ್ಞೆ, ಭಾತೃತ್ವ, ಪ್ರೀತಿ, ಸೇವಾ ಮನೋಭಾವನೆ, ಹೃದಯ ವೈಶಾಲ್ಯತೆ. ಇಂತಹ ಎಲ್ಲಾ ಗುಣಗಳನ್ನು ಹೊಂದಿರುವ ನಮ್ಮ ಬಂಟ ಸಮಾಜದ ಮುಂದಿನ ಯುವ ಪೀಳಿಗೆಯ ಅಭಿವೃದ್ದಿ ಹೇಗೆ ಎಂಬದನ್ನು ಅರಿತು ಮುನ್ನಡೆಯಬೇಕಾದ ಸವಾಲು ನಮ್ಮ ಸಮಾಜದ ಮುಂದಿದೆ. ಸನಾತನ ಭಾರತೀಯ ಸಂಸ್ಕ್ರತಿ, ಹಿಂದುತ್ವದ ತತ್ವದ ಮೇಲೆ ನಿಂತಿದೆ. ಧಾರ್ಮಿಕ ಆಚರಣೆಗಳ ಮಹತ್ವ, ಸಂಸ್ಕೃತಿ, ಸಂಸ್ಕಾರಗಳ ಅರಿವು ಮಕ್ಕಳಿಗೆ ಮೂಡಿಸುವ ಕಾರ್ಯ ಕೂಡಾ ಆಗಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಸಮಾಜದ ಸಂಘ ಸಂಸ್ಥೆಗಳ ಮೇಲೆ ಮಹತ್ತರವಾದ ಜವಾಬ್ದಾರಿ ಇದೆ. ನಮ್ಮಬಂಟರ ಸಾಂಘಿಕ ಶಕ್ತಿಯಿಂದ ಇದು ಸಾಧ್ಯ ಎಂಬುದನ್ನು ಅರಿತಿದ್ದೇವೆ. ಈ ಬಗ್ಗೆ ನಾವು ಬಂಟರ ಸಂಘ ಮುಂಬಯಿ ಮತ್ತು ನನ್ನ ಸೇವಾ ಸಂಸ್ಥೆ ಸಂಜೀವಿನಿ ಟ್ರಸ್ಟ್ ಮೂಲಕ ಬಹಳಷ್ಟು ಕಾರ್ಯಗಳನ್ನು ಮಾಡುತ್ತಿದ್ದೇವೆ. ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘ ಕೂಡಾ ಈ ಕಾರ್ಯ ಮಾಡುತ್ತಿದೆ ಎಂದು…

Read More

ಜನ್ಮ ಕ್ರಿಯೇಷನ್ ಪುತ್ತೂರು ಅರ್ಪಿಸುವ ಉದ್ಯಮಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಡಾ| ಹರ್ಷಕುಮಾರ್ ರೈ ಮಾಡಾವು ನಿರ್ಮಾಣದಲ್ಲಿ ಮೂಡಿ ಬಂದಿರುವ ಇರ್ದೆ ಶ್ರೀ ವಿಷ್ಣುಮೂರ್ತಿ ದೇವರ ಕುರಿತಾದ ಮೊಟ್ಟ ಮೊದಲ ತುಳು ಭಕ್ತಿಗೀತೆ ‘ಇರ್ದೆ ವಿಷ್ಣುಮೂರ್ತಿ’ ಇದರ ಪೋಸ್ಟರನ್ನು ಶಾಸಕ ಅಶೋಕ್ ಕುಮಾರ್ ರೈ ಮತ್ತು ಸುಮಾ ಅಶೋಕ್ ರೈಯವರು ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ಡಾ| ಹರ್ಷಕುಮಾರ್ ರೈ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು, ರೈ ಚಾರಿಟೇಬಲ್ ಟ್ರಸ್ಟ್ ಇದರ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಸದಾಶಿವ ರೈ ಮಠಂತಬೆಟ್ಟು, ದೇವಸ್ಥಾನದ ವ್ಯವಸ್ಥಾಪಕ ಸಂತೋಷ್ ಕುಮಾರ್ ರೈ ಕೆದಿಕಂಡೆ ಗುತ್ತು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು. ಅಕ್ಟೋಬರ್ 2ರಂದು ಇರ್ದೆಯಲ್ಲಿ ನಡೆಯುವ ಶಾರದೋತ್ಸವ ಕಾರ್ಯಕ್ರಮದಲ್ಲಿ ಅನು ಆಡಿಯೋಸ್ ಯೌಟ್ಯೂಬ್ ಚಾನೆಲ್ ನಲ್ಲಿ ಭಕ್ತಿಗೀತೆ ಬಿಡುಗಡೆಗೊಳ್ಳಲಿದೆ. ಚರಣ್ ಉಪ್ಪಳಿಗೆ, ಸಾರಥ್ಯ ಶೆಟ್ಟಿ, ಅಜಯ್ ರಾಜ್ ಸಾಹಿತ್ಯದಲ್ಲಿ ಮೂಡಿ ಬಂದಿರುವ…

Read More

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ರಾಜಾಂಗಣದಲ್ಲಿ ಸೆಪ್ಟೆಂಬರ್ 27 ರಂದು ಯಕ್ಷಕಲಾ ಪೊಳಲಿ ಇದರ 30 ನೇ ವರ್ಷದ ಪ್ರಯುಕ್ತ ತ್ರಿಂಶತಿ ಸಂಭ್ರಮದ ‘ಪೊಳಲಿ ಯಕ್ಷೋತ್ಸವ’ವು ಪ್ರಶಸ್ತಿ ಪ್ರದಾನ, ಗೌರವಾರ್ಪಣೆ, ಸಮ್ಮಾನ, ಸಂಸ್ಮರಣೆ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ಸಂಪನ್ನಗೊಂಡಿತು. ಪೊಳಲಿ ರಾಮಕೃಷ್ಣ ತಪೋವನದ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಯಕ್ಷಕಲಾ ಪೋಷಕ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಇವರಿಗೆ ‘ಪೊಳಲಿ ಯಕ್ಷೋತ್ಸವ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಅಲ್ಲದೇ ಯಕ್ಷಗಾನ ರಂಗದ ವಿಶಿಷ್ಟ ಸಾಧನೆಗಾಗಿ ಹಿರಿಯ ಕಲಾವಿದರಾದ ಭಾಸ್ಕರ ರೈ ಕುಕ್ಕುವಳ್ಳಿ, ಮಾಂಬಾಡಿ ಸುಬ್ರಹ್ಮಣ್ಯ ಭಟ್, ಅಡೂರು ಲಕ್ಷ್ಮೀನಾರಾಯಣ ರಾವ್, ಕೊಳ್ತಿಗೆ ನಾರಾಯಣ ಗೌಡ, ಉಬರಡ್ಕ ಉಮೇಶ್ ಶೆಟ್ಟಿ, ಜಬ್ಬಾರ್ ಸಮೋ ಸಂಪಾಜೆ, ಶಿವರಾಮ ಪಣಂಬೂರು, ಗಿರೀಶ್ ಹೆಗ್ಡೆ ಪುತ್ತೂರು, ಜಗದಾಭಿರಾಮ ಸ್ವಾಮಿ ಪಡುಬಿದ್ರೆ, ನಾ. ಕಾರಂತ ಪೆರಾಜೆ, ನಗ್ರಿ ಮಹಾಬಲ ರೈ, ಮಹಾಬಲೇಶ್ವರ ಭಟ್ ಭಾಗಮಂಡಲ ಹಾಗೂ ಲೇಖಕ ಡಾ. ವಸಂತಕುಮಾರ ಪೆರ್ಲ…

Read More

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರಗಿದ ಸೌಹಾರ್ದ ಸಹಕಾರಿಗಳ ರಜತ ಮಹೋತ್ಸವ ಸಮಾವೇಶ ಸಂದರ್ಭದಲ್ಲಿ ಸಹಕಾರ ರತ್ನ ಪುರಸ್ಕೃತ ಆರ್‌ಬಿಐನ ಮಾಜಿ ನಿರ್ದೇಶಕರೂ ಆಗಿರುವ ಪುತ್ತೂರಿನ ಡಾ| ಅಗರಿ ನವೀನ್ ಭಂಡಾರಿಯವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಅನೇಕ ಗಣ್ಯರು ಹಾಗೂ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಮಾವೇಶದಲ್ಲಿ ಉಪಸ್ಥಿತರಿದ್ದರು. ಚಿತ್ರ, ವರದಿ : ಉಮಾಪ್ರಸಾದ್ ರೈ

Read More