Author: admin
ಕನ್ನಡ ಕಥಾ ಸಂಕಲನ ಅವಳೆಂದರೆ ಬರಿ ಹೆಣ್ಣೆ ಕನ್ನಡ ಕಥಾ ಲೋಕಕ್ಕೆ ಸೇರ್ಪಡೆಯಾದ ಒಂದು ಮೌಲ್ಯಯುತ ಕೃತಿ. ಕನ್ನಡ ಕಥಾ ಪರಂಪರೆಗೆ ಶತಮಾನಗಳ ಇತಿಹಾಸ ಇರುವುದಾದರೂ ಇಂದಿಗೂ ಭಿನ್ನ ರೀತಿಯ ನಿರೂಪಣೆಯೊಡನೆ ಉತ್ತಮ, ಅಪೂರ್ವ ಹಾಗೂ ಹೊಸ ಹೊಸ ಕಥಾವಸ್ತುವುಳ್ಳ ಕಥೆಗಳು ಸಾಹಿತ್ಯ ಲೋಕಕ್ಕೆ ದಕ್ಕುತ್ತಿರುವುದು, ಕಥಾಲೋಕ ಓದುಗರನ್ನು ಹೆಚ್ಚು ಹೆಚ್ಚು ಸೆಳೆಯುತ್ತಿರುವುದಕ್ಕೆ ಬಹು ಮುಖ್ಯ ಕಾರಣ. ಇಂತಹದೇ ಒಂದು ಅಪೂರ್ವ, ಭಿನ್ನ ಶೈಲಿಯ ನಿರೂಪಣೆಗಳುಳ್ಳ, ಬಹು ನೆಲೆಯ ಕಥಾ ವಸ್ತುಗಳನ್ನುಳ್ಳ ಕೃತಿ, ‘ಅವಳೆಂದರೆ ಬರಿ ಹೆಣ್ಣೆ’. ಈ ಕೃತಿಯಲ್ಲಿರುವ ಒಟ್ಟು ಹದಿಮೂರು ಕಥೆಗಳಲ್ಲಿ ಹೆಚ್ಚಿನ ಎಲ್ಲಾ ಕಥೆಗಳು ಹೆಣ್ಣು ಬದುಕಿನ ವಿವಿಧ ಮಜಲುಗಳನ್ನು ಚಿತ್ರಿಸುತ್ತವೆ. ಈ ಕಥೆಗಳನ್ನು, “ಪ್ರಯೋಗಾತ್ಮಕವಾಗಿ ಕಟ್ಟಿದ ಕಥೆಗಳು ಹಾಗು ಸಹಜ ಹರಿವಿನ ಕತೆಗಳು” ಎಂದು ಎರಡು ರೀತಿಯಲ್ಲಿ ಗುರುತಿಸಬಹುದು. ಆದರೆ ಎಲ್ಲಾ ಕಥೆಗಳಲ್ಲೂ ಇರುವ ಸಮಾನ ಗುಣವೆಂದರೆ ಜೀವಪರವಾದ ನೋಟ ಅಥವಾ ಸೂಕ್ಷ್ಮ ಸಂವೇದನೆಯ ಸ್ತೀಕೇಂದ್ರಿತ ನೋಟ. ಇಲ್ಲಿ ಯಾವುದೋ ರೀತಿಯಲ್ಲಿ ಶೋಷಣೆಗೊಳಗಾದ ಪಾತ್ರಗಳು ಸೋತು…
ರಂಗ ಸಂಗಾತಿ ಪ್ರತಿಷ್ಟಾನದ ವತಿಯಿಂದ ಕುದ್ಮಲ್ ರಂಗರಾವ್ ಸಭಾಭವನದಲ್ಲಿ ಇತ್ತೀಚೆಗೆ ಪ್ರಾಧ್ಯಾಪಕಿ ಅಕ್ಷಯ ಆರ್ ಶೆಟ್ಟಿ ಅವರ ಕಥಾ ಸಂಕಲನ ಅವಳೆಂದರೆ ಬರಿ ಹೆಣ್ಣೆ ಕೃತಿಯನ್ನು ಭಾರತಿ ಶೆಟ್ಟಿ ಮುಂಡಬೆಟ್ಟು ಗುತ್ತು ಲೋಕಾರ್ಪಣೆಗೊಳಿಸಿದರು. ಕೃತಿಯ ಕುರಿತು ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ ನ ಪ್ರಾಧ್ಯಾಪಕಿ ಡಾ. ಸುಧಾರಾಣಿ ಕೃತಿಯ ಕುರಿತು ಮಾತನಾಡಿದರು. ಈ ಸಂದರ್ಭ ರಂಗ ಸಂಗಾತಿ ಪ್ರತಿಷ್ಟಾನದ ಶಶಿರಾಜ್ ರಾವ್ ಕಾವೂರು, ಎಕ್ಸ್ಪರ್ಟ್ ಕಾಲೇಜಿನ ಉಪಪ್ರಾಂಶುಪಾಲರಾದ ಕರುಣಾಕರ್ ಉಪಸ್ಥಿತರಿದ್ದರು.
ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಸಂಬಂಧ ಬಜೆಟ್ ಅಧಿವೇಶನ ಮುಗಿದ ಬಳಿಕ ಕರಾವಳಿ ಭಾಗದ ಹಿರಿಯ ಸಾಹಿತಿಗಳು, ಜನಪ್ರತಿನಿಧಿಗಳನ್ನು ಒಳಗೊಂಡಂತೆ ಮುಖ್ಯಮಂತ್ರಿಗಳ ಜೊತೆ ಸಭೆ ಆಯೋಜಿಸುವುದಾಗಿ ಸ್ವೀಕರ್ ಯು.ಟಿ. ಖಾದರ್ ಹೇಳಿದರು. ತುಳುಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಜರಗಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿ, ಈ ಬೇಡಿಕೆ ಬಹಳ ಹಳೆಯದ್ದು, ಪ್ರಯತ್ನಗಳು ಸತತವಾಗಿ ನಡೆದಿವೆ ಎಂದು ಹೇಳಿದರು. ತುಳು ಭಾಷೆಯಲ್ಲಿ ಕಲಿತವರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು ರಾಜ್ಯ ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿದ ಅವರು, ತುಳು ಭಾಷೆಯನ್ನು ಉಳಿಸಿ, ಬೆಳೆಸುವ ಮಹತ್ತರ ಹೊಣೆ ನಮ್ಮೆಲ್ಲರ ಮೇಲಿದೆ. ತುಳು ಕೇವಲ ಭಾಷೆಯಲ್ಲ ಸಂಸ್ಕೃತಿ, ಉಡುಗೆ, ವೈದ್ಯಕೀಯ ಪದ್ಧತಿಯೆಲ್ಲಾ ಸೇರಿದೆ. ತುಳು ಭಾಷೆಗೆ ಲಿಪಿ ಇದ್ದು ಶಾಲೆಗಳಲ್ಲಿ ಕಲಿಯಲು ಪ್ರೋತ್ಸಾಹ ನೀಡಬೇಕು. ಉಳ್ಳಾಲದಲ್ಲಿ ತುಳು ಗ್ರಾಮ ನಿರ್ಮಾಣಕ್ಕೆ ಜಾಗ ಗುರುತಿಸಿ ಅನುಷ್ಠಾನಗೊಳಿಸುತ್ತೇವೆ ಎಂದು ಹೇಳಿದರು. ದಿಕ್ಸೂಚಿ ಭಾಷಣಗೈದ ಕನ್ನಡ…
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿ.ವಿ(RGUHS) ರ್ಯಾಂಕ್ ಪ್ರಕಟ : ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, 2024ನೇ ಸಾಲಿನಲ್ಲಿ ನಡೆಸಿದ್ದ ಪದವಿ ಪರೀಕ್ಷೆಗಳ ರ್ಯಾಂಕ್ ಪಟ್ಟಿ ಪ್ರಕಟಗೊಳಿಸಿದ್ದು, ಆಳ್ವಾಸ್ನ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನ ವಿದ್ಯಾರ್ಥಿಗಳು ಒಟ್ಟು 9 ರ್ಯಾಂಕ್ಗಳಿಸಿದ್ದಾರೆ. ಪದವಿ ರ್ಯಾಂಕ್ಗಳು: ಬಿಎಚ್ಎ ವಿಭಾಗದ ಪ್ರತೀಕ್ಷಾ ದ್ವಿತೀಯ ರ್ಯಾಂಕ್, ಸಾಕ್ಷಿ ಸಿಎಸ್ ತೃತೀಯ ರ್ಯಾಂಕ್, ಸ್ನೇಹಾ 5ನೇ ರ್ಯಾಂಕ್, ವರ್ಷಿಣಿ ಎ 9ನೇ ರ್ಯಾಂಕ್, ಸೌರಕ್ಷಾ ಶೆಟ್ಟಿ 10ನೇ ರ್ಯಾಂಕ್ ಪಡೆದರೆ, ಬಿಎಸ್ಸಿ ಎಂಎಲ್ಟಿ ವಿಭಾಗದ ಸುಪ್ರೀತಾ ಜೈನ್ 6ನೇ ರ್ಯಾಂಕ್ ಗಳಿಸಿ ಪದವಿ ವಿಭಾಗದಲ್ಲಿ ಒಟ್ಟು 6 ರ್ಯಾಂಕ್ಗಳು ಕಾಲೇಜಿಗೆ ಲಭಿಸಿದೆ. ಸ್ನಾತಕೋತ್ತರ ರ್ಯಾಂಕ್ಗಳು: ಎAಎಚ್ಎ ವಿಭಾಗದಲ್ಲಿ ಪ್ರಜ್ಞಾ 5ನೇ ರ್ಯಾಂಕ್ ಹಾಗೂ ರಮ್ಯಾ ಕೆ ಎನ್ 8ನೇ ರ್ಯಾಂಕ್ ಪಡೆದರೆ, ಎಂ.ಎಸ್ಸಿ ಕ್ಲಿನಿಕಲ್ ಸೈಕಾಲಜಿಯ ಫಾತಿಮಾ ಫಾಹಿಮಾ 9ನೇ ರ್ಯಾಂಕ್ ಗಳಿಸಿದ್ದಾರೆ.ರ್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ಟ್ರಸ್ಟಿ ಡಾ ವಿನಯ್ ಆಳ್ವ, ಆಳ್ವಾಸ್ ಅಲೈಡ್ ಹೆಲ್ತ್…
ವಿದ್ಯಾಗಿರಿ : ದೇಸಿ ಕ್ರೀಡೆ ಖೋ-ಖೋ ಎಲ್ಲಾ ಕ್ರೀಡೆಗಳಿಗೆ ಅಡಿಪಾಯವಿದ್ದಂತೆ. ಈ ಆಟವನ್ನು ಪ್ರೋತ್ಸಾಹಿಸುವ ಮೂಲಕ, ಯುವಜನತೆಯಲ್ಲಿ ಶಾರೀರಿಕ ಹಾಗೂ ಮಾನಸಿಕ ಸಿದ್ಧತೆಯನ್ನು ಹೆಚ್ಚಿಸಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ ಜೆರಾಲ್ಡ್ ಡಿ ಸೋಜಾ ಹೇಳಿದರು. ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್ -2025 ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾ ಮನೋಭಾವ ನಮ್ಮನ್ನು ಈ ಕ್ಷೇತ್ರದಲ್ಲಿ ಹೆಚ್ಚಿನದ್ದನ್ನು ಸಾಧಿಸಲು ಸಹಕಾರಿಯಾಗುತ್ತದೆ. ಅಂತರ್ ಕಾಲೇಜು ಪಂದ್ಯಾಟವು ಎಲ್ಲಾ ಕ್ರೀಡಾಳುಗಳನ್ನ್ನು ಒಟ್ಟುಗೂಡಿಸುವ ಉದ್ದೇಶ ಹೊಂದಿರುತ್ತದೆ. ಪ್ರತಿಯೊಬ್ಬರೂ ಅವರವರ ಕ್ರೀಡಾ ಶಕ್ತಿಯ ಅನುಸಾರ ಪ್ರದರ್ಶನ ನೀಡಬೇಕು ಎಂದರು. ಆಳ್ವಾಸ್ ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ,ಹಿಂದೆಲ್ಲ ದೇಸಿ ಕ್ರೀಡೆಯಾದ ಖೋ-ಖೋ ಆಟವು ಗ್ರಾಮೀಣ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಮೀಸಲಾಗಿತ್ತು. ಆದರೆ, ಇಂದು ಕ್ರೀಡೆಯಲ್ಲಿನ ಬೆಳವಣಿಗೆಯು ದೇಸಿ ಕ್ರೀಡೆಯನ್ನು ರಾಷ್ಟ್ರೀಯ ಮಟ್ಟದಲ್ಲಿ…
ಬಂಟರ ಸಂಘ (ರಿ) ಹೈದರಾಬಾದ್ ಇದರ ವತಿಯಿಂದ ಮಾರ್ಚ್ 10 ರಂದು ಸೋಮವಾರ ಹೈದರಾಬಾದ್ ಬಂಟರ ಸಂಘದ ಆಡಳಿತ ಕಚೇರಿಗೆ ಆಗಮಿಸಿದ ಯುವ ಸಂಘಟಕ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಬಂಟರ ಸಂಘ (ರಿ) ಹೈದರಬಾದ್ ಇದರ ಅಧ್ಯಕ್ಷರಾದ ಶ್ರೀ ಶಂಕರ ಶೆಟ್ಟಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಹೈದರಾಬಾದ್ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ರತ್ನಾಕರ ರೈ, ಕೋಶಾಧಿಕಾರಿ ರವಿರಾಜ್ ಶೆಟ್ಟಿ, ಹೋಟೆಲ್ ಉದ್ಯಮಿಗಳಾದ ಅಲ್ತಾರು ದೇಬೆಟ್ಟು ಜಯರಾಮ ಶೆಟ್ಟಿ, ಅಣ್ಣಪ್ಪ ಶೆಟ್ಟಿ ಮಲ್ಯಾಡಿ, ಉದಯ್ ಕುಮಾರ್ ಶೆಟ್ಟಿ ಹಕ್ಲಾಡಿ ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಕಾರ್ಯಕ್ರಮ ಶನಿವಾರ ಸಂಜೆ ಬಂಟರ ಭವನ ವಠಾರದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು, ಪಟ್ಲ ಫೌಂಡೇಶನ್ ಸುರತ್ಕಲ್ ಘಟಕ ಬಹಳಷ್ಟು ಒಳ್ಳೆಯ ಕೆಲಸ ಮಾಡುತ್ತಾ ಬಂದಿದೆ. ಈಗಾಗಲೇ 21 ಮಂದಿ ಟ್ರಸ್ಟಿಗಳಾಗಿದ್ದಾರೆ. ಟ್ರಸ್ಟ್ ನಂಬಿ ದಾನಿಗಳು ಕೋಟ್ಯಂತರ ರೂಪಾಯಿ ದಾನ ನೀಡಿದ್ದಾರೆ. ನಾವು ತುಳುನಾಡಿನಲ್ಲಿ ಹುಟ್ಟಿದ್ದಕ್ಕೆ ಹೆಮ್ಮೆ ಪಡಬೇಕು. ಇಂದು ಸನ್ಮಾನ ಸ್ವೀಕರಿಸಿದ ಪುತ್ತಿಗೆ ರಘುರಾಮ ಹೊಳ್ಳರ ಭಾಗವತಿಕೆ ನೋಡಲು ಬಾಲ್ಯದಲ್ಲಿ ಎಲ್ಲೆಲ್ಲಿಗೋ ಹೋಗುತ್ತಿದ್ದೆವು. ಇಂದು ಅವರನ್ನು ಈ ವೇದಿಕೆಯಲ್ಲಿ ಸನ್ಮಾನಿಸಿರುವುದು ಸಂತಸ ತಂದಿದೆ. ಎಲ್ಲರಿಗೂ ಸುಬ್ರಮಣ್ಯ ಸ್ವಾಮಿ ಒಳ್ಳೆಯದು ಮಾಡಲಿ ಎಂದರು. ಬಳಿಕ ಮಾತಾಡಿದ ಅಗರಿ ಎಂಟರ್ ಪ್ರೈಸಸ್ ಮಾಲಕ ಅಗರಿ ರಾಘವೇಂದ್ರ ರಾವ್ ಅವರು, ಜಾಗತಿಕ ಮಟ್ಟದಲ್ಲಿ ಯಕ್ಷಗಾನ ಪರಂಪರೆಯನ್ನು ಬೆಳಗಿಸಿದ ಕೀರ್ತಿ ಪಟ್ಲ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಕೇಂದ್ರೀಯ ಘಟಕ ಮಂಗಳೂರು ಇದರ 8 ನೇ ವಾರ್ಷಿಕೋತ್ಸವ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್, ಮಮತ ಹೆಗ್ಡೆ, ಸತ್ಯವತಿ ಡಿ ಶೆಟ್ಟಿ ದೀಪ ಪ್ರಜ್ವಲನೆಗೈದರು. ಸಂಜೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ನೃತ್ಯ ವಿದುಷಿ, ವಿಮರ್ಶಕಿ ಪ್ರತಿಭಾ ಎಲ್ ಸಾಮಗ ವಹಿಸಿದ್ದರು. ಪ್ರಸಕ್ತ ಕಾಲಘಟ್ಟದಲ್ಲಿ ಮಹಿಳೆಯರೂ ಕೂಡಾ ಯಕ್ಷಗಾನದಲ್ಲಿ ಮುಂಚೂಣಿಯಲ್ಲಿದ್ದು ಕಲಾಸೇವೆಗೈಯುತ್ತಿದ್ದಾರೆ. ಅದರಲ್ಲೂ ಮಕ್ಕಳು ಯಕ್ಷಗಾನದತ್ತ ಆಕರ್ಷಿತರಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಮಕ್ಕಳನ್ನು ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವಂತೆ ಮಹಿಳಾ ಕೇಂದ್ರ ಸಮಿತಿ ಶ್ರಮ ಪಟ್ಟಿದೆ. ನೇಪಥ್ಯಕ್ಕೆ ಸರಿದ ಮತ್ತು ಸಾಧನೆಗೈದ ಮಹಿಳಾ ಕಲಾವಿದರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ ಕಾರ್ಯ ಎಂದರು. ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದ್ಮಪ್ರಸಾದ್ ಜೈನ್, ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ವಿದ್ಯಾ ರಾಕೇಶ್, ಪೂರ್ಣಿಮಾ ಪ್ರಭಾಕರ ರಾವ್ ಪೇಜಾವರ, ಸುಜಾತ ಧನಂಜಯ ಶೆಟ್ಟಿ ಹೊಸಬೆಟ್ಟು, ಚೈತ್ರಾ ಶೆಟ್ಟಿ…
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ 2024ನೇ ಸಾಲಿನಲ್ಲಿ ನಡೆಸಿದ್ದ ಪದವಿ ಪರೀಕ್ಷೆಗಳ ರ್ಯಾಂಕ್ ಪಟ್ಟಿ ಪ್ರಕಟಗೊಳಿಸಿದ್ದು, ಆಳ್ವಾಸ್ನ ವಿದ್ಯಾರ್ಥಿಗಳು ಒಟ್ಟು 10 ರ್ಯಾಂಕ್ಗಳಿಸಿದ್ದಾರೆ. ಪದವಿ ರ್ಯಾಂಕ್ಗಳು: ಬಿಬಿಎ ವಿಭಾಗದ ಕೃತಿ, ಬಿಎಸ್ಸಿ ಅನಿಮೇಷನ್ನ ಅಪೂರ್ವ ಪ್ರಥಮ ರ್ಯಾಂಕ್ ಗಳಿಸಿದರೆ, ಬಿವಿಎ ವಿಭಾಗದಲ್ಲಿ ಅರ್ಪಿತಾ ಹೆಗ್ಡೆ ದ್ವಿತೀಯ ರ್ಯಾಂಕ್ ಹಾಗೂ ಮೆಲ್ರೊಯಿ ತೃತೀಯ ರ್ಯಾಂಕ್ ಗಳಿಸಿದ್ದಾರೆ. ಬಿಎಸ್ಸಿ ಹಾಸ್ಪಿಟ್ಯಾಲಿಟಿ ಸೈನ್ಸ್ ವಿಭಾಗದಲ್ಲಿ ರಿತೇಶ್ ದ್ವಿತೀಯ ರ್ಯಾಂಕ್ ಪಡೆದರೆ, ಬಿಕಾಂನಲ್ಲಿ ದೀಕ್ಷಾ ಶೆಟ್ಟಿ 10ನರ್ಯಾಂಕ್ ಪಡೆದು ಪದವಿ ವಿಭಾಗದಲ್ಲಿ ಒಟ್ಟು 6 ರ್ಯಾಂಕ್ಗಳು ಆಳ್ವಾಸ್ ಕಾಲೇಜಿಗೆ ಲಭಿಸಿದೆ. ಸ್ನಾತಕೋತ್ತರ ರ್ಯಾಂಕ್ಗಳು: ಎಂಎಸ್ಸಿ ಆಹಾರ ವಿಜ್ಞಾನ ವಿಭಾಗದ ಭವ್ಯ ಕೆ, ಸಸ್ಯಶಾಸ್ತ್ರ ವಿಭಾಗದ ಪಿ.ಎಸ್. ನಿರಂಜನ ಹಾಗೂ ಮನಃಶಾಸ್ತ್ರ ವಿಭಾಗದ ಪ್ರಕೃತಿ ಎಸ್ಕೆ ಪ್ರಥಮ ರ್ಯಾಂಕ್ನೊAದಿಗೆ ಮೂರು ಪ್ರಥಮ ರ್ಯಾಂಕ್ಗಳು ಆಳ್ವಾಸ್ ಸ್ನಾತಕೋತ್ತರ ವಿದ್ಯಾರ್ಥಿಗಳು ಪಡೆದಿದ್ದಾರೆ. ದೈಹಿಕ ಶಿಕ್ಷಣ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವರ್ಷಿಣಿ ಪ್ರಥಮ ರ್ಯಾಂಕ್ಗಳಿಸಿದ್ದಾರೆ.ರ್ಯಾAಕ್ ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.…
ಮೂಡುಬಿದಿರೆ: ಇಲ್ಲಿನ ವಿದ್ಯಾಗಿರಿಯ ಕೃಷಿಸಿರಿ ಆವರಣದಲ್ಲಿ ರಮಝಾನ್ನ ಬೃಹತ್ ಇಫ್ತಾರ್ ಕೂಟವು ಶನಿವಾರ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ವತಿಯಿಂದ ನಡೆಸಲಾದ 22ನೇ ವರ್ಷದ ಇಫ್ತಾರ್ ಕೂಟದಲ್ಲಿ ವಿದ್ಯಾರ್ಥಿಗಳಲ್ಲದೆ ಸ್ಥಳೀಯರ ಸಹಿತ ಸುಮಾರು 12,000ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಇಫ್ತಾರ್ ಬಳಿಕ ಸಾಮೂಹಿಕ ನಮಾಝ್ಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ರಮ್ಜಾನ್ ಸಂದೇಶ ನೀಡಿದ ಜಮಾಅತೆ ಇಸ್ಲಾಮೀ ಹಿಂದ್ನ ರಾಜ್ಯ ಕರ್ಯದರ್ಶಿ ಹಾಗೂ ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞ, ಡಾ ಮೋಹನ ಆಳ್ವರ ನೇತೃತ್ವದಲ್ಲಿ ಆಳ್ವಾಸ್ ಸಂಸ್ಥೆ ನಡೆಸುತ್ತಿರುವ ಇಫ್ತರ್ ಕೂಟ ಸಮಾಜಕ್ಕೆ ಮಾದರಿ. ಕೆಡುಕನ್ನು ಕೆಡುಕಿನಿಂದ ನಿವಾರಿಸಲು ಅಸಾಧ್ಯ. ಅದನ್ನು ಒಳಿತು, ಪ್ರೀತಿಯ ಸಂದೇಶದ ಮೂಲಕ ನಿವಾರಿಸಬೇಕು. ಈ ನಿಟ್ಟಿನಲ್ಲಿ ಇದು ಸಮಾಜಕ್ಕೆ ಶಕ್ತಿಯುತ ಸಂದೇಶ ನೀಡುವ ಕರ್ಯಕ್ರಮ ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಬೀದರ್ನ ಶಾಯಿನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ನ ಅಧ್ಯಕ್ಷ ಅಬ್ದುಲ್ ಖಾದಿರ್ ಶಾಯಿನ್ “ಮುಸಲ್ಮಾನರ ಸಂಪ್ರದಾಯದAತೆ ಇಫ್ತಾರ್ ಕೂಟ ಆಯೋಜಿಸಲಾಗಿದೆ. ದೇಶದ ಜನರು ಸೌಹಾರ್ದದಿಂದ ಬದುಕಬೇಕು. ಎಲ್ಲಾ…