Author: admin
ಮೂರನೇ ಆವೃತ್ತಿಯ ಮಂಗಳೂರು ಬೀಚ್ ಫೆಸ್ಟಿವಲ್, ಮಂಗಳೂರು ಟ್ರಯಾಥ್ಲನ್ -2025 ಇದರ ಉದ್ಘಾಟನಾ ಸಮಾರಂಭ ಶನಿವಾರ ಸಂಜೆ ಓಶಿಯನ್ ಪರ್ಲ್ ಹೋಟೆಲ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, “ದಕ್ಷಿಣ ಕನ್ನಡ ಎಲ್ಲಾ ರೀತಿಯಲ್ಲಿ ಮುಂದೆ ಇರುವ ಜಿಲ್ಲೆ. ಇಲ್ಲಿ ಎಲ್ಲ ಜಾತಿ ಭಾಷೆ ಮತದ ಜನರು ಒಗ್ಗಟ್ಟಾಗಿ ಬದುಕುತ್ತಿದ್ದಾರೆ. ಇಲ್ಲಿ ಸಂಸ್ಕೃತಿ ಮತ್ತು ಕ್ರೀಡೆಯ ಬಗ್ಗೆ ಮಹತ್ವವನ್ನು ಸಾರುವ ಇಂತಹ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವುದು ಸಂತಸದ ವಿಚಾರ. ಒಂದು ಒಳ್ಳೆಯ ಕಾರ್ಯಕ್ಕಾಗಿ ಇಂತಹ ಕಾರ್ಯ ಮಾಡುತ್ತಿರುವ ತಪಸ್ಯ ಫೌಂಡೇಶನ್ ಶ್ರಮ ಶ್ಲಾಘನೀಯವಾದುದು. ಕಾರ್ಯಕ್ರಮ ಯಶಸ್ವಿಗೊಳಿಸಲು ನಾವೆಲ್ಲರೂ ಒಂದಾಗಿ ದುಡಿಯಬೇಕು. ಜಿಲ್ಲಾಡಳಿತ ಇಂತಹ ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಸಹಕಾರ ನೀಡಲಿದೆ” ಎಂದರು. ಬಳಿಕ ಮಾತಾಡಿದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಅವರು, “ಸಾಮಾಜಿಕ ಕಳಕಳಿಯ ಉದ್ದೇಶದಿಂದ ನಡೆಸುತ್ತಿರುವ ಇಂತಹ ಕಾರ್ಯಕ್ರಮ ಯಶಸ್ವಿಯಾಗಲಿ. ಇಂತಹ…
ಮೂಡುಬಿದಿರೆ: ಬೆಂಗಳೂರಿನ ಕ್ರೈಸ್ಟ್ ವಿವಿಯಲ್ಲಿ ನಡೆದ 38ನೇ ಅಂತರ್ ವಿವಿ ಆಗ್ನೇಯ ವಲಯದ ಸಾಂಸ್ಕೃತಿಕ ಯುವಜನೋತ್ಸವ – ‘ಕ್ರೆಸೆಂಡೋ’ದಲ್ಲಿ ಮಂಗಳೂರು ವಿವಿ ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಸಂಗೀತ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳಿಸಿ, ಸಮಗ್ರ ವಿಭಾಗದಲ್ಲಿ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ. ಜಾನಪದ ವಾದ್ಯ ಮೇಳ ಪ್ರಥಮ, ಭಾರತೀಯ ಶಾಸ್ತ್ರೀಯ ಸ್ವರ ವಾದ್ಯ(ಬಾನ್ಸೂರಿ)ದಲ್ಲಿ ಪ್ರಥಮ, ಸಮೂಹ ಗೀತೆಯಲ್ಲಿ ದ್ವಿತೀಯ, ಜಾನಪದ ನೃತ್ಯ (ಗುಂಪು) ದ್ವಿತೀಯ, ಶಾಸ್ತ್ರೀಯ ಗಾಯನ ವೈಯಕ್ತಿಕದಲ್ಲಿ ದ್ವಿತೀಯ, ಶಾಸ್ತ್ರೀಯ ನೃತ್ಯದಲ್ಲಿ ತೃತೀಯ, ಭಾರತೀಯ ಲಘು ಶಾಸ್ತ್ರೀಯ ಸಂಗೀತದಲ್ಲಿ ತೃತೀಯ, ಪಾಶ್ಚಾತ್ಯ ವಾದ್ಯ ವೈಯಕ್ತಿಕ- ಐದನೇ ಸ್ಥಾನ, ಪಾಶ್ಚಾತ್ಯ ಗಾಯನ ವೈಯಕ್ತಿಕ ಐದನೇ ಸ್ಥಾನ, ಪಾಶ್ಚಾತ್ಯ ಗಾಯನ ಸಮೂಹ ಐದನೇ ಸ್ಥಾನ, ಏಕಾಂಕ ನಾಟಕದಲ್ಲಿ ಐದನೇ ಸ್ಥಾನ ಪಡೆದು ರನ್ರ್ಸ್ ಅಪ್ ಪಟ್ಟ ತನ್ನದಾಗಿಸಿಕೊಂಡಿತು. ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಆಳ್ವಾಸ್ ವಿದ್ಯಾರ್ಥಿಗಳು ಭಾರತೀಯ ಶಾಸ್ತ್ರೀಯ ಸ್ವರ ವಾದ್ಯ(ಬಾನ್ಸೂರಿ)ದಲ್ಲಿ ಸ್ವಯಂ ಪ್ರಕಾಶ ಪ್ರಭು ಪ್ರಥಮ, ಶಾಸ್ತ್ರೀಯ ಗಾಯನ ವೈಯಕ್ತಿಕದಲ್ಲಿ ಅಶ್ವಿಜ ಉಡುಪ…
ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆಯು ದಿನಾಂಕ 21 12.2024 ಶನಿವಾರದಂದು ಜರುಗಿತು. ಸಭೆಯನ್ನು ಉದ್ದೇಶಿಸಿ ಸಹ ಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು ವೈಯಕ್ತಿಕ ವಿಷಯಗಳಲ್ಲಿ ವಿದ್ಯಾರ್ಥಿಗಳ ಸಾಧನೆ, ತರಗತಿಗಳಲ್ಲಿ ಶಿಸ್ತು ಮತ್ತು ಅವರ ಹಾಜರಾತಿ ಶೇಖಡಾವಾರು ಬಗ್ಗೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ, ಸಕಾರಾತ್ಮಕ ಚಿಂತನೆ, ಪ್ರೇರಣೆ, ನಿರ್ದಿಷ್ಟ ಗುರಿ ಇತ್ಯಾದಿ ವಾಸ್ತವಾಂಶಗಳನ್ನು ಮನದಟ್ಟು ಮಾಡುವುದು ಅಗತ್ಯ ಎಂದರು. ಸಂಸ್ಥಾಪಕರಲ್ಲಿ ಓರ್ವರಾದ ಡಾ. ಬಿ ಗಣನಾಥ ಶೆಟ್ಟಿ ಯವರು ನಿತ್ಯ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸುವ ಕೌಶಲ ಸಹಿತ ಶಿಕ್ಷಣವೇ ನಮ್ಮ ಗುರಿ ಎಂದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣದ ಜೊತೆಗೆ ಸಿ. ಎ, ಸಿ. ಎಸ್, ಕಂಪ್ಯೂಟರ್ ಸಂಬಂಧಿತ ವಿವಿಧ ಕಲಿಕೆಗಳ ಜೊತೆಗೆ ಎನ್ ಎಸ್ ಎಸ್, ಕೆಸಡೊರ್ಂಜಿ ದಿನ, ಕೈಗಾರಿಕಾ ಪ್ರದೇಶಗಳ ಭೇಟಿಯ ಜೊತೆಗೆ ಹಲವಾರು ಕಾರ್ಯಕ್ರಮಗಳ ಆಯೋಜನೆಯ ಮೂಲಕ ನೈತಿಕ ಮತ್ತು ವ್ಯಾವಹಾರಿಕ ಜ್ಞಾನವನ್ನು ನೀಡುತ್ತಿರುವ…
ಸಂಘಟನಾತ್ಮಕ ಹೋರಾಟದಿಂದ ಸರಕಾರಿ ಶಾಲೆ ಉಳಿಯಲಿ ಬೆಳೆಯಲಿ ಎಂದು ಉದ್ಯಮಿ ಚಿತ್ರರಂಜನ್ ಹೆಗ್ಡೆ ಹೇಳಿದರು. ಬೈಂದೂರು ವಲಯದ ಸರಕಾರಿ ಕಿರಿಯ ಪ್ರಾಥಮಿಕ ಕಟ್ಟಿನಮಕ್ಕಿ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಳೆ ವಿದ್ಯಾರ್ಥಿಗಳು ಹಾಗೂ ಊರಿನವರ ಬಾಂಧವ್ಯ ಒಂದಾದಾಗ ಮಾತ್ರ ಸರಕಾರಿ ಶಾಲೆ, ಉಳಿವಿಗೆ ಮತ್ತು ಅಭಿವೃದ್ಧಿಗೆ ಸಹಕಾರಿಯಾಗುವುದು ಎಂದು ಹೇಳಿದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಆಲೂರು ಪಂಚಾಯಿತಿ ಅಧ್ಯಕ್ಷ ರಾಜೇಶ ಎನ್. ದೇವಾಡಿಗ, ಮತ್ತು ಸದಸ್ಯರಾದ ರಾಜೇಂದ್ರ ದೇವಾಡಿಗ, ಪ್ರಮೋದ ಶೆಟ್ಟಿ, ವಿಜಯಕುಮಾರ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಶೇಖರ ಪೂಜಾರಿ, ಉದ್ಯಮಿ ಚಂದ್ರಶೇಖರ ಶೆಟ್ಟಿ ಕುಷ್ಟಗಿ, ರಘುರಾಮ ದೇವಾಡಿಗ, ಚಂದ್ರಯ್ಯ ಆಚಾರ್ಯ ಕಳಿ, ಅರುಣ ಕುಮಾರ್ ಶೆಟ್ಟಿ, ರಾಜೇಶ್ ಶೆಟ್ಟಿ ಗಾಣದರ ಹಕ್ಲು, ಭರತ್ ಶೆಟ್ಟಿ ನಾರ್ಕಳಿ, ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಚಿತ್ರಂಜನ್ ದೇವಾಡಿಗ,…
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಇನ್ನು ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ. ‘ಜೈ’ ಸಿನೆಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಕುತ್ತಾರ್, ದಂಬೇಲ್, ಮರಕಡ, ಶೂಲಿನ್ ಪ್ಯಾಲೇಸ್ ಮರವೂರು, ಬೋಂದೆಲ್, ಪಣಂಬೂರು, ಬೈಕಂಪಾಡಿಯಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ.ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನೆಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನೆಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ. ರೂಪೇಶ್ ಶೆಟ್ಟಿ ಸಿನೆಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕೆಮರಾ ವಿನುತ್ ಕೆ., ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ್ಹಾ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ…
ಬಂಟರ ಸಂಘ ಮುಂಬಯಿಯ ಸಿಟಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಪಕ್ಕಳರ ನೇತೃತ್ವದಲ್ಲಿ ಮನೆ ಮನೆಗೆ ಭಜನಾ ಸತ್ಸಂಗ ಎಂಬ ವಿನೂತನ ಪರಿಕಲ್ಪನೆಯ ತಿಂಗಳ ಭಜನೆ ಸಿಟಿ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷೆ ಶ್ರೀಮತಿ ಅನಿತಾ ಅಶೋಕ್ ಶೆಟ್ಟಿಯವರ ಸ್ವಗೃಹದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಸಮಿತಿಯ ನಿಕಟಪೂರ್ವ ಕಾರ್ಯಾಧ್ಯಕ್ಷ ಕಾರ್ಯಾನಗುತ್ತು ಶಿವರಾಮ ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷ ಕೃಷ್ಣ ವಿ ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗ ಮತ್ತು ಸಿಟಿ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷೆಯರಾದ ಕಲ್ಪನ ಕೃಷ್ಣ ಶೆಟ್ಟಿ, ಸುಚಿತ ಕೆ ಶೆಟ್ಟಿ, ಸಮಿತಿಯ ಉಪ ಕಾರ್ಯಾಧ್ಯಕ್ಷ ಪದ್ಮನಾಭ ಶೆಟ್ಟಿ, ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಮಾರ್ನಾಡ್, ಜತೆ ಕಾರ್ಯದರ್ಶಿ ನಿತೇಶ್ ಶೆಟ್ಟಿ, ಜತೆ ಕೋಶಾಧಿಕಾರಿ ಕೇಶವ ಶೆಟ್ಟಿ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ತನುಜ ಶೆಟ್ಟಿ, ಭಜನಾ ಕಾರ್ಯಾಧ್ಯಕ್ಷೆ ಶೋಭಾ ಶೆಟ್ಟಿ ಮತ್ತಿತರ ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅನಿತಾ ಅಶೋಕ್ ಶೆಟ್ಟಿಯವರು ಮಹಿಳಾ…
‘ಶಾಲಾ ಕಾಲೇಜುಗಳಲ್ಲಿ ಯಕ್ಷಗಾನೀಯ ಚಟುವಟಿಕೆಗಳಿಗೆ ಪ್ರೋತ್ಸಾಹ ಲಭಿಸುತ್ತಿರುವುದು ಇತ್ತೀಚಿನ ಒಂದು ಉತ್ತಮ ಬೆಳವಣಿಗೆ. ಮೂರೂವರೆ ದಶಕಗಳ ಹಿಂದೆ ಎಸ್.ಡಿ.ಎಂ ಲಾ ಕಾಲೇಜಿನಲ್ಲಿ ಪ್ರಾರಂಭವಾದ ಅಂತರ್ ಕಾಲೇಜು ಯಕ್ಷಗಾನ ಸ್ಪರ್ಧೆ ಯಕ್ಷೋತ್ಸವದಿಂದಾಗಿ ವಿದ್ಯಾರ್ಥಿಗಳಲ್ಲಿ ಯಕ್ಷಗಾನದ ಬಗ್ಗೆ ವಿಶೇಷ ಜಾಗೃತಿ ಉಂಟಾಗಿದೆ’ ಎಂದು ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ 2024 -25 ನೇ ಸಾಲಿನ ನೂತನ ಯಕ್ಷೋತ್ಸವ ಸಮಿತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.’ಪ್ರಸ್ತುತ ಅಲ್ಲಲ್ಲಿ ನಡೆಯುವ ಯಕ್ಷಗಾನ ಪ್ರದರ್ಶನ ಮತ್ತು ಸ್ಪರ್ಧಾ ಕಾರ್ಯಕ್ರಮಗಳನ್ನು ಯಕ್ಷೋತ್ಸವ ಎಂದು ಕರೆಯುವುದು ವಾಡಿಕೆಯಾಗಿದೆ. ಧರ್ಮಸ್ಥಳ ಸಂಸ್ಥೆಯ ಯಕ್ಷೋತ್ಸವವೇ ಅದಕ್ಕೆ ಮೂಲ ಪ್ರೇರಣೆ. ವಿವಿಧ ವೃತ್ತಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಯಕ್ಷಗಾನದ ಹವ್ಯಾಸಿ ಕಲಾವಿದರಲ್ಲಿ ಹೆಚ್ಚಿನವರು ಬೇರೆ ಬೇರೆ ಕಾಲೇಜು ತಂಡಗಳ ಮೂಲಕ ಯಕ್ಷೋತ್ಸವದಲ್ಲಿ ಭಾಗವಹಿಸಿದವರೇ ಆಗಿದ್ದಾರೆ’ ಎಂದ ಅವರು ಅದಕ್ಕೆ ಕಾರಣವಾದ ಸಂಘಟನಾ ಸಮಿತಿಯನ್ನು ಅಭಿನಂದಿಸಿದರು.ಯಕ್ಷೋತ್ಸವದ ನಿರ್ದೇಶಕರಾದ ಉಪನ್ಯಾಸಕ ಪ್ರೊ.…
ಮುಂಬಯಿ : ಪ್ರತಿಷ್ಠಿತ ಮತ್ತು ಗೌರವಾನ್ವಿತ ಸಮುದಾಯ ಸಂಸ್ಥೆಯಾದ ಬಂಟ್ಸ್ ಸಂಘ ಅಹಮದಾಬಾದ್(ರಿ) ಗುಜರಾತ್ ತನ್ನ 31ನೇ ವಾರ್ಷಿಕೋತ್ಸವವನ್ನು ಅಹಮದಾಬಾದ್ನ ಗುಜರಾತ್ ವಿಶ್ವವಿದ್ಯಾಲಯದ ಸೆನೆಟ್ ಹಾಲ್ನಲ್ಲಿ ಕಳೆದ ರವಿವಾರ (ಡಿ.15)ರಂದು ಸಂಭ್ರಮದಿಂದ ಆಚರಿಸಿತು. ಬಂಟ್ಸ್ ಸಂಘ ಅಹಮದಾಬಾದ್ನ ಅಧ್ಯಕ್ಷ ಶಿರ್ವಾ ಕೋಡು ನಿತೇಶ್ ಎಸ್. ಶೆಟ್ಟಿ ಅಧ್ಯಕ್ಷತೆಯಲ್ಲಿ ನೇರವೇರಿದ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಉಪಸ್ಥಿತರಿದ್ದು, ಗೌರವ ಅತಿಥಿsಗಳಾಗಿ ಕರ್ನಾಟಕ ಸಮಾಜ ಸೂರತ್ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ, ತುಳುನಾಡ ಐಸಿರಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ತುಳು ಸಂಘ ಅಂಕಲೇಶ್ವರ ಅಧ್ಯಕ್ಷ ಶಂಕರ ಶೆಟ್ಟಿ ಉಪಸ್ಥಿತರಿದ್ದು, ತುಳು ಸಂಘ ಬರೋಡಾ ಅಧ್ಯಕ್ಷ ಶಶಿಧರ ಬಿ.ಶೆಟ್ಟಿ ಅವರನ್ನು ಬಂಟರೆನ ರತ್ನ ಬಿರುದು ನೀಡಿ ಗೌರವಿಸಲಾಯಿತು. ಶಶಿಧರ ಶೆಟ್ಟಿ ಮಾತನಾಡಿ, ಔದಾರ್ಯ ಮತ್ತು ದಾನದ ಮನೋಭಾವವು ಸಮಾಜದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಮತ್ತು ಜನರು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಕೊಡುಗೆ ನೀಡಿದಾಗ, ಸಮಯ, ಶ್ರಮ, ಹಣ, ಆಲೋಚನೆಗಳು…
ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಉಡುಪಿ ತಾಲೂಕು ಸಮಿತಿ ಹಾಗೂ ಉಡುಪಿ ತಾಲೂಕು ಸಮಿತಿ ವ್ಯಾಪ್ತಿಯ ಬಂಟರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಅಮ್ಮಣ್ಣಿ ರಾಮಣ್ಣ ಸಭಾಭವನದಲ್ಲಿ ನಡೆದ ದಿವಂಗತ ಕೆ ಸತೀಶ್ಚಂದ್ರ ಹೆಗ್ಡೆ ವಿದ್ಯಾರ್ಥಿ ವೇತನ ವಿತರಣೆ ಮತ್ತು ಬಂಟ ಸಮ್ಮಿಲನ ಕಾರ್ಯಕ್ರಮದಲ್ಲಿ ಬಂಟ ಸಮುದಾಯದ ಐವರು ಸಾಧಕರನ್ನು ಸನ್ಮಾನಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಬ್ರಿಗೇಡಿಯರ್ ರಂಜಿತ್ ಆಳ್ವ (ಸೇವಾ ಮೆಡಲ್) ಸತೀಶ್ಚಂದ್ರ ಹೆಗ್ಡೆ ವಿದ್ಯಾರ್ಥಿವೇತನಕ್ಕೆ ಚಾಲನೆ ನೀಡಿದರು. ಬ್ರಿಗೇಡಿಯರ್ ರಂಜಿತ್ ಆಳ್ವ ಅವರನ್ನು ಗೌರವಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಂದಿಕೂರು ಅಸ್ಪೆನ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ನ ಜಿಎಂ ಅಶೋಕ್ ಕುಮಾರ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಭುವನಪ್ರಸಾದ್ ಹೆಗ್ಡೆ, ಅಂತರರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಕ್ರೀಡಾಪಟು ಅವಿನಾಶ್ ಕುಮಾರ್ ವಿ ಶೆಟ್ಟಿ ಕಟಪಾಡಿ, ಪ್ರಗತಿಪರ ಕೃಷಿಕರಾದ ಮಲ್ಲಿಕಾ ಶಿವರಾಂ ಶೆಟ್ಟಿ ಗಿಳಿಯಾರು, ಕರ್ನಾಟಕ ರಣಜಿ ಕ್ರಿಕೆಟ್ ಆಟಗಾರ ಅಭಿಲಾಶ್ ಶೆಟ್ಟಿ ಅವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಈ…
ವಿದ್ಯಾಗಿರಿ: ಗೋದಲಿಯಲ್ಲಿ ಬಾಲ ಯೇಸು ಜನನದ ದರ್ಶನ, ಕ್ಯಾರೆಲ್ ಹಾಡಿದ ವಿದ್ಯಾರ್ಥಿಗಳ ಗುಂಪು, ನಡುವೆ ಬಂದ ಸಂತ ಕ್ಲಾಸ್, ವಿದ್ಯುದ್ದೀಪಾಲಂಕಾರದಿಂದ ಕಂಗೊಳಿಸಿದ ಕ್ರಿಸ್ ಮಸ್ ಮರ- ಸಭಾಂಗಣ, ಏಂಜೆಲ್ಸ್, ಜಿಂಗಲ್ ಬೆಲ್ ಸಂಗೀತ, ಪುಟಾಣಿಗಳ ಬಾಯಿ ಸಿಹಿ ಮಾಡಿದ ಕೇಕ್… ಕರುಣಾಮಯಿ ಬಾಲಯೇಸು ಜನನದ ಕ್ರಿಸ್ ಮಸ್ ಸಂಭ್ರಮ, ಭಕ್ತಿ -ಭಾವ , ಆರಾಧನೆಯ ಸಂಪ್ರೀತಿಯು ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಗುರುವಾರ ಸಂಜೆ ಮೂಡಿತು. ಅದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ. ಸಂದೇಶ ನೀಡಿದ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯಾಧ್ಯಕ್ಷ (ಬಿಷಪ್) ಡಾ.ಪೀಟರ್ ಪಾವ್ಲ್ ಸಲ್ಡಾನಾ, ‘ಭರವಸೆ ನಿರಾಶೆ ಮೂಡಿಸುವುದಿಲ್ಲ. ಬದುಕು ಪ್ರೀತಿಯ ಪಥ. ಜೀವನದಲ್ಲಿ ಉನ್ನತ ಭರವಸೆಯೇ ಕ್ರಿಸ್ ಮಸ್ ಸಂದೇಶ’ ಎಂದರು. ‘ಹ್ಯಾಪಿ ಕ್ರಿಸ್ ಮಸ್’ ಎಂದು ಶುಭಕೋರಿ ಮಾತು ಆರಂಭಿಸಿದ ಅವರು, ‘ಇಲ್ಲಿಗೆ ಕ್ರಿಸ್ ಮಸ್ ಬಂದಿದೆ. ಸತ್ಯ ಮತ್ತು ಬದುಕು ನಮ್ಮದಾಗಲಿ. ನಮ್ಮೆಲ್ಲ ಒಳಿತಿಗಾಗಿ ದೈವಿಕ ಮನುಷ್ಯನಾದರು. ಅವರ…