Author: admin
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯೋಜನೆಗಳಲ್ಲಿ ಒಂದಾದ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಸೇವಾ ನಿರತರಾಗಿರುವ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆಯು ಮಂಗಳೂರಿನ ಪತ್ತುಮುಡಿ ಸಭಾಂಗಣದಲ್ಲಿ ನಡೆಯಿತು. ಪಟ್ಲ ಫೌಂಡೇಶನ್ ಇದರ ಸ್ಥಾಪಕಾಧ್ಯಕ್ಷರೂ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನಿರ್ದೇಶಕರಾಗಿರುವ ಪಟ್ಲ ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಪ್ರಸಕ್ತ ಶೈಕ್ಷಣಿಕ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ರೂಪುರೇಷೆಯ ಬಗ್ಗೆ ಯಕ್ಷಗಾನ ಶಿಕ್ಷಕರಿಗೆ ತಿಳಿದರು. ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಸಲಹಾ ಸಮಿತಿಯ ಗೌರವ ಸಲಹೆಗಾರರಾದ ಪ್ರೊ. ಎಂ ಎಲ್ ಸಾಮಗ ಪ್ರಸಕ್ತ ಕಾಲದಲ್ಲಿ ಯಕ್ಷಗಾನ ಶಿಕ್ಷಣದ ಸಾಧ್ಯತೆ ಮತ್ತು ಶೈಕ್ಷಣಿಕ ವೈಧಾನಿಕತೆಯ ಬಗ್ಗೆ ಯಕ್ಷಗಾನ ಶಿಕ್ಷಕರಿಗೆ ಮಾಹಿತಿ ನೀಡಿದರು. ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಸಲಹಾ ಸಮಿತಿಯ ಗೌರವ ಸಲಹೆಗಾರರಾದ ಡಾ.|ಎಂ ಪ್ರಭಾಕರ ಜೋಷಿ ಯಕ್ಷಗಾನ ಶಿಕ್ಷಕರನ್ನುದ್ದೇಶಿಸಿ ಮಾತನಾಡಿ ಯಕ್ಷಗಾನ ಶಿಕ್ಷಕರ ಸವಾಲು ಸಾಧ್ಯತೆಗಳ ಬಗ್ಗೆ ತಿಳಿಸಿದರು.ಈ ಸಂದರ್ಭದಲ್ಲಿ ಯಕ್ಷಧ್ರುವ ದಶಮ ಪಟ್ಲ ಸಂಭ್ರಮದಲ್ಲಿ ಬಿಡುಗಡೆಯಾದ ಯಕ್ಷಧ್ರುವ ಯಕ್ಷಶಿಕ್ಷಣ ತೆಂಕುತಿಟ್ಟು ಯಕ್ಷಗಾನ ಶಿಕ್ಷಣ…
ಮಂಗಳೂರಿನ ರೈಸನ್ ನ್ಯೂಟ್ರಿಷನ್ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅವರನ್ನು ಕರ್ನಾಟಕ ಸರ್ಕಾರವು ತತ್ಕ್ಷಣದಿಂದ ಜಾರಿಗೆ ಬರುವಂತೆ ಬೀದರ್ನ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ (ಕೆವಿಎಎಫ್ಎಸ್ಯು) ಆಡಳಿತ ಮಂಡಳಿಗೆ ನಾಮನಿರ್ದೇಶನ ಮಾಡಿದೆ. ಅವರ ಅಧಿಕಾರಾವಧಿ ಮುಂದಿನ ಮೂರು ವರ್ಷಗಳವರೆಗೆ ಇರುತ್ತದೆ. ಡಾ. ಸುಶಾಂತ್ ರೈ ಅವರು ಪಶುವೈದ್ಯಕೀಯ ಮತ್ತು ಕಕ್ಕುಟೋದ್ಯಮದಲ್ಲಿ ಗುರುತಿಸಲ್ಪಟ್ಟ ಜನಪ್ರಿಯ ವ್ಯಕ್ತಿಯಾಗಿದ್ದಾರೆ. ಅವರು ಈ ಹಿಂದೆ 2019 ರಿಂದ 2024 ರವರೆಗೆ ಕರ್ನಾಟಕ ಕೋಳಿ ಸಾಕಣೆದಾರರ ಮತ್ತು ತಳಿಗಾರರ ಸಂಘದ (ಕೆಪಿಎಫ್ಬಿಎ) ಅಧ್ಯಕ್ಷರಾಗಿ ಸತತ ಎರಡು ಬಾರಿ ಸೇವೆ ಸಲ್ಲಿಸಿದ್ದಾರೆ. ಅವರು ಹೈದರಾಬಾದ್ನ ಐಸಿಎಆರ್- ಎನ್ಐಎಎನ್ಪಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಆ್ಯಂಡ್ ಫಿಸಿಯಾಲಜಿ) ಮತ್ತು ಐಸಿಎಆರ್- ಡಿಪಿಆರ್ (ಡೈರೆಕ್ಟರೇಟ್ ಆಫ್ ಪೌಲ್ಟ್ರಿ ರಿಸರ್ಚ್) ನ ಸಂಶೋಧನಾ ಸಲಹಾ ಸಮಿತಿಯ ಸದಸ್ಯರಾಗಿದ್ದಾರೆ. 2024 ರಲ್ಲಿ ಡಾ ಸುಶಾಂತ್ ರೈಯವರು ಕರ್ನಾಟಕದಿಂದ ಭಾರತೀಯ ಪಶುವೈದ್ಯಕೀಯ ಮಂಡಳಿಯ (ವಿಸಿಐ) ಆಡಳಿತ ಮಂಡಳಿಗೆ…
ಮಕ್ಕಳ ಬೌದ್ಧಿಕ ಮತ್ತು ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ಸಾಧನೆ ಮಾಡುವಂತಹ ಕಲೆ ಅಡಗಿರಬೇಕು. ಮಕ್ಕಳು ಮೊಬೈಲ್ ಗಳಿಗೆ ವ್ಯಾಮೋಹವಾಗದೆ, ಬೇರೆ ಚಟುವಟಿಕೆಗಳತ್ತ ಗಮನಹರಿಸಿದರೆ ಸಮಾಜ ಸುಸ್ಥಿತ ವಾತಾವರಣ ನಿರ್ಮಾಣವಾಗುತ್ತದೆ. ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ.) ಮಾಡುತ್ತಿರುವ ಸಮಾಜಮುಖಿ ಕಾರ್ಯ ಇಂದಿನ ಯುವ ಜನತೆಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ. ಮಕ್ಕಳ ಬೌದ್ಧಿಕ ವಿಕಾಸಕ್ಕೆ ಇಂತಹ ಕಾರ್ಯಕ್ರಮಗಳು ಪೂರಕ ಎಂದು ಮಾಜಿ ತೋಟಗಾರಿಕಾ ನಿರ್ದೇಶಕರಾದ ಎಚ್. ಜಯಶೀಲ ಶೆಟ್ಟಿ ಮೊಳಹಳ್ಳಿ ಹೇಳಿದರು. ಇವರು ಇತ್ತೀಚಿಗೆ ಮೊಳಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿಭಾಗದಲ್ಲಿ 90% ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಕ್ಸಲೆಂಟ್ ಪಿಯು ಕಾಲೇಜು ಮತ್ತು ಶಾಲೆಯ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆ ಮಾತನಾಡಿ, ಮಕ್ಕಳ ಜ್ಞಾನ ಕೌಶಲ್ಯ ಮತ್ತು ಕ್ರಿಯಾಶೀಲ ಚಟುವಟಿಕೆಗಳನ್ನು ತೆರೆದಿಡಲು ಇದು ಮುಕ್ತ ವೇದಿಕೆ.…
ಮುಂಬರುವ ಅಗ್ನಿಪಥ್ ಲಿಖಿತ ಮತ್ತು ದೈಹಿಕ ಸದೃಢತೆಯ ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆಹೋರಾತ್ರಿ ತರಬೇತಿ ಪ್ರಾರಂಭ
ಭಾರತ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಅಗ್ನಿಪಥ್ ‘ ಯೋಜನೆಯಡಿಯಲ್ಲಿ ಪ್ರತಿ ವರ್ಷ ಅಗ್ನಿವೀರರಾಗಿ ಆಯ್ಕೆ ಮಾಡಲು ನಡೆಸಲಾಗುವ ನೇಮಕಾತಿ, ಲಿಖಿತ ಮತ್ತು ದೈಹಿಕ ಸಾಧ್ಯತೆಯ ಪರೀಕ್ಷೆಗಳಿಗೆ ಪೂರ್ವ ತಯಾರಿ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಜೂನ್ 18 ರಿಂದ ಆಹೋರಾತ್ರಿ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ. ತರಬೇತಿಯು ಮೂರು ವಿಭಾಗದಲ್ಲಿ ನಡೆಯುತ್ತದೆ. ಸದ್ಯ ಓದುತ್ತಿರುವ, ಉದ್ಯೋಗದಲ್ಲಿದ್ದು ಅಗ್ನಿಪಥ್ ಯೋಜನೆಗೆ ಅರ್ಜಿ ಸಲ್ಲಿಸಿದ್ದು ಜೂನ್ 30 ರಿಂದ ನಡೆಯಲಿರುವ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ರಾತ್ರಿ 7 ರಿಂದ 10 ರವರೆಗೆ ಲಿಖಿತ ಪರೀಕ್ಷಾ ನೇರ ತರಬೇತಿ ಮತ್ತು ಬೆಳಗ್ಗೆ 5 ರಿಂದ 7 ರವರೆಗೆ 2 ಗಂಟೆಗಳ ದೈಹಿಕ ಸದೃಢತೆಯ ಮೈದಾನ ತರಬೇತಿ ಇರುತ್ತದೆ. ಇವರು ತರಬೇತಿ ಅವಧಿಯನ್ನು ಹೊರತುಪಡಿಸಿ ಕಾಲೇಜು, ಉದ್ಯೋಗಕ್ಕೆ ತೆರಳಬಹುದಾಗಿದೆ. ಎರಡನೇ ವಿಭಾಗದಲ್ಲಿ ಪೂರ್ಣ ಅವಧಿಯ ತರಬೇತಿಯ ಕೂಡ ಲಭ್ಯವಿದ್ದು ವಿದ್ಯಾಮಾತಾ ಅಕಾಡೆಮಿಯಲ್ಲಿ ಸಂಪೂರ್ಣ ತರಬೇತಿಯನ್ನು ಪಡೆದುಕೊಳ್ಳಬಹುದಾಗಿದೆ. ಮೂರನೇ ವಿಭಾಗದಲ್ಲಿ ಇನ್ನೂ ಅರ್ಜಿ…
ಬ್ರಹ್ಮಾವರ: ಇಲ್ಲಿನ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ನ ಮಕ್ಕಳಲ್ಲಿ ಕೃಷಿಯ ಕುರಿತ ಆಸಕ್ತಿಯನ್ನು ಮೂಡಿಸಲು “ಭತ್ತ ಬೆಳೆಯುವತ್ತ ಮಕ್ಕಳ ಚಿತ್ತ” ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಉಡುಪಿ ಉದ್ಯಾವರದ ಕುತ್ಪಾಡಿಯ ಕೃಷಿ ಭೂಮಿಯಲ್ಲಿ ಭತ್ತದ ನಾಟಿಯನ್ನು ಮಾಡಿದರು. ಸಂಪ್ರದಾಯ ಶೈಲಿಯಲ್ಲಿ ಕಂಬಳದ ಕೋಣಗಳಿಂದ ಗದ್ದೆಯನ್ನು ಉಳುಮೆ ಮಾಡಿ ನಾಟಿಯನ್ನು ಪ್ರಾರಂಭಿಸಲಾಯಿತು. ಮಕ್ಕಳು ಸ್ಥಳೀಯ ರೈತರೊಂದಿಗೆ ನೇಜಿಯನ್ನು ನಾಟಿ ಮಾಡುವುದರ ಮೂಲಕ ಕೃಷಿಯ ಅನುಭವ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಸ್ಥಳೀಯ ರೈತರನ್ನು ಸನ್ಮಾಯಿಸಲಾಯಿತು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಕೃಷಿ ಭೂಮಿಯಲ್ಲಿ ಮಕ್ಕಳ ಜೊತೆಯಿದ್ದು ಸ್ಪೂರ್ತಿ ತುಂಬಿದರು. ಮಕ್ಕಳು ಮಧ್ಯಾಹ್ನ ಚಟ್ನಿಯ ಜೊತೆ ಗಂಜಿ ಊಟವನ್ನು ಮಾಡಿ ಹಳ್ಳಿಯ ಸೊಗಡನ್ನು ಅನುಭವಿಸಿದರು.
ಮೂಡುಬಿದಿರೆ: ಅಖಿಲ ಭಾರತ ಮಟ್ಟದ ಯುಜಿ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಒಂದೇ ಕ್ಯಾಂಪಸ್ನ ಕ್ಲಾಸ್ರೂಮ್ ವ್ಯವಸ್ಥೆಯಲ್ಲಿ ಅಖಿಲ ಭಾರತ ಮಟ್ಟದ ಟಾಪ್ AIR 10,000 ರ್ಯಾಂಕ್ಗಳಲ್ಲಿ 75 ವಿದ್ಯಾರ್ಥಿಗಳು ಸ್ಥಾನ ಪಡದು ಶ್ರೇಷ್ಠ ಸಾಧನೆ ಮೆರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು 600ಕ್ಕೂ ಅಧಿಕ ಒರ್ವ ವಿದ್ಯಾರ್ಥಿ, 550ಕ್ಕೂ ಅಧಿಕ 21 ವಿದ್ಯಾರ್ಥಿಗಳು, 500ಕ್ಕೂ ಅಧಿಕ 116 ವಿದ್ಯಾರ್ಥಿಗಳು, 450ಕ್ಕೂ ಅಧಿಕ 401 ವಿದ್ಯಾರ್ಥಿಗಳು, 400ಕ್ಕೂ ಅಧಿಕ 596 ವಿದ್ಯಾರ್ಥಿಗಳು ಅಂಕ ಪಡೆದಿದ್ದಾರೆ. ರಾಷ್ಟçಮಟ್ಟದಲ್ಲಿ ಅಖಿಲ ಭಾರತ ಮಟ್ಟದ ಟಾಪ್ 1,000 ರ್ಯಾಂಕ್ನ ಒಳಗೆ 9 ವಿದ್ಯಾರ್ಥಿಗಳು ಹಾಗೂ ಟಾಪ್ 2,000 ಒಳಗೆ 20 ವಿದ್ಯಾರ್ಥಿಗಳು ಹಾಗೂ ಟಾಪ್ 5,000 ರ್ಯಾಂಕ್ಗಳಲ್ಲಿ 48 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ. ಪ್ರೇಕ್ಷಾ ಎಂ.ಎಸ್ 82ನೇ ರ್ಯಾಂಕ್, ಲಿಖಾ ತಡಪ್ 235ನೇ ರ್ಯಾಂಕ್, ರಾಘವೇಂದ್ರ ಶಂಕರ್ 401ನೇ…
ಉಡುಪಿ : ರಾಷ್ಟ್ರಮಟ್ಟದಲ್ಲಿ ಎಂ.ಬಿ.ಬಿ.ಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್.ಟಿ.ಎ) ನಡೆಸಿದ ನೀಟ್- 2025ರ ಫಲಿತಾಂಶದಲ್ಲಿ ಪರೀಕ್ಷೆ ಬರೆದ 22ಲಕ್ಷದ 9 ಸಾವಿರದ 318 ವಿದ್ಯಾರ್ಥಿಗಳಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 20 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದಲ್ಲಿ ಹತ್ತು ಸಾವಿರದೊಳಗಿನ ರ್ಯಾಂಕ್ ಲಭಿಸಿದ್ದು, ಹರ್ಷ ಯು ಪೂಜಾರಿ 99.9360 ಪರ್ಸಂಟೈಲ್ನೊಂದಿಗೆ 720ರಲ್ಲಿ 600 ಅಂಕ ಪಡೆದು ರಾಷ್ಟ್ರಮಟ್ಟದಲ್ಲಿ 1411ನೇ ರ್ಯಾಂಕ್ ಪಡೆದಿರುತ್ತಾರೆ. 1. ಹರ್ಷ ಯು. ಪೂಜಾರಿ 600 ಅಂಕ (99.9360 ಪರ್ಸಂಟೈಲ್, 1411ನೇ ರ್ಯಾಂಕ್), 2. ಹರ್ಷಿತ್ 589 ಅಂಕ (99.8920 ಪರ್ಸಂಟೈಲ್, 2325ನೇ ರ್ಯಾಂಕ್), 3. ಉತ್ಸವ್ ಸಿ. ಪಟೇಲ್ 587 ಅಂಕ (99.8816 ಪರ್ಸಂಟೈಲ್, 2548ನೇ ರ್ಯಾಂಕ್), 4. ರಚಿತ್ ಜೆ ಬೊಲ್ಯಾ 585 ಅಂಕ (99.8697 ಪರ್ಸಂಟೈಲ್, 2838ನೇ ರ್ಯಾಂಕ್) 5. ಸತೀಶ್ ಎಸ್. ಕರಗನ್ನಿ 585 ಅಂಕ (99.8697 ಪರ್ಸಂಟೈಲ್, 2878ನೇ ರ್ಯಾಂಕ್), 6. ರಕ್ಷಿತ್ ಈರಪ್ಪ ಬೆಳ್ಕುಡ್ 584…
ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 04 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಸುಮಂತ ಗೌಡ ಎಸ್. ಡಿ 99.923686 ಪರ್ಸಂಟೈಲ್ ನೊಂದಿಗೆ 596 ಅಂಕಗಳನ್ನು ಗಳಿಸಿ ರಾಷ್ಟ್ರಮಟ್ಟದಲ್ಲಿ 1623ನೇ ರ್ಯಾಂಕ್, ಪ್ರಜ್ವಲ್ ಎಸ್. ಎನ್ 99.686435 ಪರ್ಸಂಟೈಲ್ನೊಂದಿಗೆ 588 ಅಂಕಗಳನ್ನು ಗಳಿಸಿ, ರಾಷ್ಟ್ರಮಟ್ಟದಲ್ಲಿ 2483ನೇ ರ್ಯಾಂಕ್, ರಾಜೇಶ್ ಹೆಚ್ ಎ 99.857286 ಪರ್ಸಂಟೈಲ್ ನೊಂದಿಗೆ 583 ಅಂಕಗಳಿಸಿ ರಾಷ್ಟ್ರಮಟ್ಟದಲ್ಲಿ 3025ನೇ ರ್ಯಾಂಕ್ ಪಡೆದು ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಸಾತ್ವಿಕ್ ಭಂಡಾರಿ 560, ಹೇಮಂತ್ ಕುಮಾರ್ 551, ಪ್ರಾಪ್ತಿ ಶೆಟ್ಟಿ 541, ಪ್ರಥಮ್ ಪಟೇಲ್ ಹೆಚ್. ಡಿ 539, ಸಂಗೀತಾ ಬಿ. ಎಮ್ 536, ಶ್ರೀನಿಧಿ ಡಿ 531, ವಿನಯ್ ಎಸ್ 523, ಸ್ನೇಹಾ ಬಸವರಾಜ್ ಬಿ. 521, ಯುವರಾಜ್ ಪಟೇಲ್ 521, ಗಣೇಶ್…
ಮುಂಬಯಿ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈ. ಲಿಮಿಟೆಡ್ ಇದರ ಆಡಳಿತ ನಿರ್ದೇಶಕ ಡಾ| ಆರ್.ಕೆ ಶೆಟ್ಟಿ ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಮಹಾ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ. ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2024 ರ ಸಾಲಿನ ಬಂಟ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿರುವ ಇವರು ಈ ಹಿಂದೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು ಮುಂದೆ ಮಹಾ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದಯೆ ಇವರ ಮತ್ತು ಇವರ ಕುಟುಂಬದ ಮೇಲೆ ಸದಾ ಇರಲಿ ಎಂದು ಹಾರೈಸಿ, ಒಕ್ಕೂಟದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
2024 25 ನೇ ಸಾಲಿನ ಮಾಸಿಕ ಸಭೆಯು ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿಯವರ ಅವಧಿಯ ಕೊನೆಯ ಮಾಸಿಕ ಸಭೆ ಬೆಳ್ತಂಗಡಿ ರೆಂಕೆದಗುತ್ತು ಸಿರಿ ಸಂಸ್ಥೆಯ ಕಾನ್ಫರೆನ್ಸ್ ಹಾಲ್ ನಲ್ಲಿ ಜೂನ್ 10 ರಂದು ನಡೆಯಿತು. ಲಯನ್ಸ್ ಸದಸ್ಯರಿಗೆ ಗೋಧಾಮ ವೀಕ್ಷಣೆ ಮತ್ತು ಸಿರಿಯ ಬಗ್ಗೆ ಯತೀಶ್ ಶೆಟ್ಟಿ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್, ವಲಯ ಅಧ್ಯಕ್ಷ ಉಮೇಶ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ ಆಗಮಿಸಿದ್ದರು. ಮಾಜಿ ಪ್ರಾಂತ್ಯ ಅಧ್ಯಕ್ಷ ಧರಣೇಂದ್ರ ಜೈನ್ ಸ್ವಾಗತಿಸಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು. ಲಯನ್ಸ್ ಸದಸ್ಯರು, ಲಿಯೋ ಸದಸ್ಯರು ಉಪಸ್ಥಿತರಿದ್ದರು. ನಿಯೋಜಿತ ಅಧ್ಯಕ್ಷ ಮುರಳಿದರ ಬಲಿಪ 2025- 26ನೇ ಸಾಲಿನ ಪದಾಧಿಕಾರಿಗಳ ಪಟ್ಟಿಯನ್ನು ಸಭೆಯ ಮುಂದಿಟ್ಟರು. ಸೇವಾ ಕಾರ್ಯಕ್ರಮದ ಅಂಗವಾಗಿ ಮುಂಡಾಜೆ ನಿವಾಸಿ ಯಕ್ಷಗಾನ ಕಲಾವಿದ ಪಕಲಕುಂಜ ಕೃಷ್ಣ ನಾಯ್ಕರವರ ಮೊಮ್ಮಗನಿಗೆ ವೀಲ್ ಚೇರ್ ನೀಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ 599 ಅಂಕ…














