Author: admin

ವಿದ್ಯಾಗಿರಿ:  ದೇಶ ಬಿಟ್ಟು ಗಾಂಧಿಯಿಲ್ಲ,  ಗಾಂಧಿ ಬಿಟ್ಟು ಭಾರತವಿಲ್ಲ ಎಂಬುದನ್ನು ಎಲ್ಲರು ಅರಿತುಕೊಳ್ಳುವ ಅಗತ್ಯವಿದೆ ಎಂದು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ  ನಾಡೋಜ ಡಾ. ವೂಡೇ ಪಿ ಕೃಷ್ಣ ಹೇಳಿದರು . ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಕನ್ನಡ ವಿಭಾಗ ಮತ್ತು ಬೆಂಗಳೂರಿನ  ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಂಯುಕ್ತಾಶ್ರಯದಲ್ಲಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ನಡೆದ ‘ ಮಹಾತ್ಮರನ್ನು ಅರ್ಥ ಮಾಡಿಕೊಳ್ಳಲು ಕೆಲವು ಪ್ರಶ್ನೆಗಳು ‘ ಎರಡು ದಿನಗಳ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಂತಿಯುತವಾಗಿ ಸ್ವಾತಂತ್ರ‍್ಯವನ್ನು ತಂದುಕೊಟ್ಟು, ನೈತಿಕತೆಯ ಉತ್ತುಂಗದಲ್ಲಿ ಬದುಕಿ ಬಾಳಿದ ಕೀರ್ತಿ ಗಾಂಧಿಯವರಿಗೆ ಸಲ್ಲುತ್ತದೆ ಎಂದರು. ಗಾಂಧೀಜಿ ಅವರ ಬಗ್ಗೆ ಅಧಿಕೃತ ಸಾಹಿತ್ಯ  ಓದಿ ಅರ್ಥೈಸಿಕೊಳ್ಳಿ. ನಂತರ ಪ್ರಶ್ನಿಸಿ. ಆದರೆ ಗೊತ್ತಿಲ್ಲದೇ ಟೀಕಿಸಬೇಡಿ ಎಂದರು. ಅಹಿಂಸಾತ್ಮಕ ಮತ್ತು  ಸಾಮುದಾಯಿಕ ಸಮಾಜದ ಪರಿಕಲ್ಪನೆಯ ಆಲೋಚನೆಯನ್ನು ಮೈಗೂಡಿಸಿ  ಬದುಕಿದರೆ ಗಾಂಧಿಗೆ ಸಲ್ಲಿಸುವ ಗೌರವವಾಗುತ್ತದೆ ಎಂದು ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಮಾತನಾಡಿ…

Read More

ಬಂಟರ ಸಂಘ ಬೆಂಗಳೂರು ಯುವ ವಿಭಾಗವು ಈ ಬಾರಿ ಹೊಸ ವರ್ಷಾಚರಣೆಯನ್ನು ಬಂಟರ ಸಂಘದ ಆವರಣದಲ್ಲಿ ಡಿಸೆಂಬರ್ 31ರಂದು ಆಚರಿಸಲು ಉದ್ದೇಶಿಸಿದೆ. ಯುವ ವಿಭಾಗವು ಈಗಾಗಲೇ ಸಂಪೂರ್ಣ ಸಿದ್ಧತೆಯಲ್ಲಿ ತೊಡಗಿದ್ದು, 22ನೇ ನವಂಬರ್ 20204 ರಂದು ಹೊಸ ವರ್ಷ ಆಚರಣೆಯ ಪೋಸ್ಟರ್ ಅನಾವರಣ ಕಾರ್ಯಕ್ರಮವನ್ನು ಸಂಘದ ಆಶಾ ಪ್ರಕಾಶ್ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಗೌರವಾನ್ವಿತ ಅಧ್ಯಕ್ಷರಾದ ಸಿಎ ಅಶೋಕ್ ಶೆಟ್ಟಿಯವರು ವಹಿಸಿದ್ದು, ಸಂಜೆ 7 ಕ್ಕೆ ಸರಿಯಾಗಿ ಸಂಘದ ಶ್ರೀ ವರಸಿದ್ಧಿ ವಿನಾಯಕ ಪ್ರಾರ್ಥನಾ ಮಂದಿರದಲ್ಲಿ ಪೂಜೆ ಸಲ್ಲಿಸಿ ನಂತರ ಗಣ್ಯರೊಡಗೂಡಿ ಪೋಸ್ಟರನ್ನು ಅನಾವರಣಗೊಳಿಸಲಾಯಿತು. ಗೌರವ ಕಾರ್ಯದರ್ಶಿಗಳಾದ ವಿಜಯ್ ಜೆ ಶೆಟ್ಟಿ ಹಾಲಾಡಿ, ಕೋಶಾಧಿಕಾರಿ ಅಶೋಕ್ ಶೆಟ್ಟಿ, ಮಹಿಳಾ ಉಪಾಧ್ಯಕ್ಷೆ ಕಾಂತಿ ಶೆಟ್ಟಿ, ಜೊತೆ ಕಾರ್ಯದರ್ಶಿ ಜಯಶ್ರೀ ಸಿ ರೈ, ಯುವ ವಿಭಾಗದ ಚೇರ್ ಪರ್ಸನ್ ಅಜಿತ್ ವಿ ಶೆಟ್ಟಿ, ಸಂಚಾಲಕರಾದ ಪ್ರಸಾದ್ ಶೆಟ್ಟಿ ಅರೆಹೊಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂಧರ್ಭ ಸಂಘದ ಪದಾಧಿಕಾರಿಗಳು, ಯುವ ವಿಭಾಗದ…

Read More

ಪುತ್ತೂರು ಯುವ ಬಂಟರ ಸಂಘದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಕಥಾವಚನ, ಪ್ರವಚನ ಕಾರ್ಯಕ್ರಮವು ಡಿಸೆಂಬರ್ 15 ರಂದು ಪುತ್ತೂರು ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ವಿಶೇಷ ಮಂಟಪ ಹಾಗೂ ಅಲಂಕಾರದೊಂದಿಗೆ ದೇವರ ಪೂಜೆಯನ್ನು ನೆರವೇರಿಸಲಾಯಿತು. ವೇದಮೂರ್ತಿ ನಾಗರಾಜ್ ಭಟ್ ರವರಿಂದ ವೈದಿಕ ಕಾರ್ಯಕ್ರಮಗಳು ಜರಗಿತು. ಕಿರಣ್ ಕುಮಾರ್ ಪಡುಪಣಂಬೂರು, ಗೀತಾ ಹಾಗೂ ಡಾ. ಸತ್ಯನಾರಾಯಣ ಪುಣಿಚಿತ್ತಾಯರವರು ಶ್ರೀ ಸತ್ಯನಾರಾಯಣ ಪೂಜೆಯ ಕಥಾವಚನ ಮತ್ತು ಪ್ರವಚನವನ್ನು ನಡೆಸಿಕೊಟ್ಟರು. ಅಬುದಾಬಿಯ ಇಂಡಿಯಾ ಸೋಶಿಯಲ್ ಮತ್ತು ಕಲ್ಚರಲ್ ಸೆಂಟರ್ ನ ಅಧ್ಯಕ್ಷ ಮಿತ್ರಂಪಾಡಿ ಜಯರಾಮ್ ರೈರವರು ಅನ್ನ ಸಂತರ್ಪಣೆಯ ಸೇವಾಕರ್ತರಾಗಿ ಸಹಕರಿಸಿದರು. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ದಯಾನಂದ ರೈ ಮನವಳಿಕೆ, ಲಕ್ಷ್ಮೀನಾರಾಯಣ ರೈ ಅರಿಯಡ್ಕ, ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷ ರಮೇಶ್ ರೈ ಡಿಂಬ್ರಿ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಗುತ್ತು, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ,…

Read More

ಬೆಂಗಳೂರು: ಪುಸ್ತಕ ಲೋಕದಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಕ್ರಿಯೇಟಿವ್ಪುಸ್ತಕ ಮನೆ ವತಿಯಿಂದ 6 ಪುಸ್ತಕಗಳ ಅನಾವರಣ ಹಾಗೂ 'ಕ್ರಿಯೇಟಿವ್ ಪುಸ್ತಕ ಪ್ರಶಸ್ತಿ-2024 ಪ್ರದಾನ ಸಮಾರಂಭದಲ್ಲಿ ಖ್ಯಾತ ಬರಹಗಾರ ಪದ್ಮರಾಜ್ ದಂಡಾವತಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್‌ನ ಶ್ರೀಕೃಷ್ಣರಾಜ ಪರಿಷತ್ ಮಂದಿರದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿಗಳಾದ ಜೋಗಿ, ಬಿ. ಆರ್. ಲಕ್ಷ್ಮಣ್ ರಾವ್, ಡಾ.ನಾ.ಸೋಮೇಶ್ವರ ಅವರು 6 ಪುಸ್ತಕಗಳನ್ನು ಬಿಡುಗಡೆ ಮಾಡಿದರು. ಕ್ರಿಯೇಟಿವ್ ಕಾಲೇಜು ಹಾಗೂ ಪುಸ್ತಕ ಮನೆ ಸಂಸ್ಥಾಪಕರಲ್ಲಿ ಒಬ್ಬರಾದ ಅಶ್ವಥ್ ಎಸ್ ಎಲ್ ಪ್ರಾಸ್ತವಿಕ ಮಾತನಾಡಿ, ಕರಾವಳಿಯಿಂದ ರಾಜಧಾನಿಗೆ ನಮ್ಮ ಪುಸ್ತಕ ಪಯಣಕ್ಕೆ ಇದು ಸಂಭ್ರಮದ ಕ್ಷಣ. ಪುಸ್ತಕ ಮನೆಯನ್ನು ರಾಜ್ಯ ಮಟ್ಟಕ್ಕೆ ತರುವ ಜತೆಗೆ ಪುಸ್ತಕ ಓದುವ ಬೆಳೆಸುವ, ಯುವ ಜನತೆಗೆ ಪುಸ್ತಕವನ್ನು ಓದುವ ಬೆಳೆಸುವ ದೊಡ್ಡ ಜವಾಬ್ದಾರಿಯನ್ನು ಹೊಂದಿದೆ. ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಶಿಕ್ಷಣದ ಜತೆ ಜತೆಗೆ ಸಾಂಸ್ಕೃತಿಕ,…

Read More

ಮೂಡುಬಿದಿರೆ: ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಮಹತ್ವದ ಶೈಕ್ಷಣಿಕ ವಿನಿಮಯ ಒಡಂಬಡಿಕೆ ಸೋಮವಾರ ಮಾಡಿಕೊಂಡಿತು. ಶಿಕ್ಷಣ, ಸಂಶೋಧನೆ, ಬೋಧಕ, ಆಡಳಿತ ವರ್ಗ, ಸಂಶೋಧನಾ ಪ್ರಕಟಣೆಗಳು ಸೇರಿದಂತೆ ವಿವಿಧ ವಲಯದಲ್ಲಿ ಪರಸ್ಪರ ಸ್ವಾತಂತ್ರ್ಯವನ್ನು ಕಾಯ್ದುಕೊಂಡು ವಿನಿಮಯ, ಬೌದ್ಧಿಕ ಆಸ್ತಿಗಳ ರಕ್ಷಣೆ ಸೇರಿದಂತೆ ಶೈಕ್ಷಣಿಕ ಅಭ್ಯುದಯದ ದೃಷ್ಟಿಯ ಐದು ವರ್ಷಗಳ ಒಪ್ಪಂದಕ್ಕೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ಹಾಗೂ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಅಧ್ಯಕ್ಷ ಡಾ.ನಗಾಟೊ ಒನೊ ಸಹಿ ಮಾಡಿದರು. ಶೈಕ್ಷಣಿಕ ವಿನಿಮಯಕ್ಕೆ ಸಂಬಂಧಿಸಿದ ಬೋಧನೆ, ವಸತಿ ಸೌಕರ್ಯ, ಆರ್ಥಿಕ ಜವಾಬ್ದಾರಿ, ಬೌದ್ಧಿಕ ಆಸ್ತಿ ರಕ್ಷಣೆ, ಅವಧಿ, ತಿದ್ದುಪಡಿ ಸೇರಿದಂತೆ ಪ್ರಮುಖ ವಿಚಾರಗಳನ್ನು ಒಡಂಬಡಿಕೆ ಒಳಗೊಂಡಿದೆ. ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ನ ಪರಿಣಾಮಕಾರಿ ಎಂಜಿನಿಯರಿಂಗ್ ನ ಪ್ರಗತಿ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ…

Read More

ಮೂಡುಬಿದಿರೆ: ೩೦ನೇ ಆಳ್ವಾಸ್ ವಿರಾಸತ್ ೫ ದಿನಗಳ ಸಾಂಸ್ಕೃತಿಕ ಉತ್ಸವ ಹಾಗೂ ೬ ದಿನವೂ ನಡೆದ ಮಹಾಮೇಳ ಲಕ್ಷಾಂತರ ಜನರ ಪಾಲ್ಗೊಳ್ಳುವಿಕೆಯ ಮೂಲಕ ಆಯೋಜಕರು ಹಾಗೂ ಸಾರ್ವಜನಿಕರಲ್ಲಿ ಸರ್ವ ಶ್ರೇಷ್ಠ ವಿರಾಸತ್ ಎಂಬ ಭಾವ ಮೂಡಿಸಿ ಸಮಾಪನವಾಯಿತು. ವಿರಾಸತ್‌ನ ಮುಖ್ಯ ರೂವಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಹರ್ಷ ವ್ಯಕ್ತಪಡಿಸುತ್ತಾ ಅಭಿವ್ಯಕ್ತ ಪಡಿಸಿದ ಅಂಶಗಳು. ಪ್ರತಿ ವರ್ಷದಂತೆ ಈ ವರ್ಷದ ವಿರಾಸತ್  ಕೂಡ ಸರ್ವ ಶ್ರೇಷ್ಠ ಸಾಂಸ್ಕೃತಿಕ ಉತ್ಸವವಾಗಿ ಮೂಡಿಬಂದಿದ್ದು, ದೇವರ ಹಾಗೂ ಪ್ರಕೃತಿಯ ಸಂಪೂರ್ಣ ಅನುಗ್ರಹ ಕರ‍್ಯಕ್ರಮ ಯಶಸ್ಸಿಗೆ ಕಾರಣ. ಈ ಉತ್ಸವ ಎಲ್ಲಾ ವರ್ಗದ ಜನರು – ಮಕ್ಕಳು, ಯುವಕ ಯುವತಿಯರು, ಪ್ರಬುದ್ಧರು, ವಯೋವೃದ್ಧರಾಧಿಯಾಗಿ ಸರ್ವರನ್ನು ಆಕರ್ಷಿಸಿ, ಪಾಲ್ಗೊಳ್ಳುವಂತೆ ಮಾಡಿದೆ. ಭಾಗವಹಿಸಿದ ಎಲ್ಲರೂ ಮುಕ್ತ ಕಂಠದಿAದ ಶ್ಲಾಘಿಸಿದ್ದು, ಅಧ್ಬುತ ಎಂಬ ಉದ್ಘಾರದ ಭಾವ ಮೂಡಿಸಿರುವುದು ಸಂಘಕರಾದ ನಮಗೆ ಸಂಪೂರ್ಣ ತೃಪ್ತಿ ನೀಡಿದೆ. ಈ ಕರ‍್ಯಕ್ರಮ ಯಾವುದೇ ಒಂದು ಸಮುದಾಯದ ಕರ‍್ಯಕ್ರಮವಾಗದೇ ಎಲ್ಲಾ ವರ್ಗಗಳ,…

Read More

ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ವಿರಾಸತ್‌ನ ನಾಲ್ಕನೇ ದಿನವಾದ ಶುಕ್ರವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶೈಕ್ಷಣಿಕ ಸಮೂಹ ಸಂಸ್ಥೆಗಳ ವಿದ್ಯರ‍್ಥಿಗಳು ಮತ್ತೊಮ್ಮೆ ಸಾಂಸ್ಕೃತಿಕ ಸಂಚಲನ ಸೃಷ್ಟಿಸಿದರು. ಬಡಗುತಿಟ್ಟಿನ ಯಕ್ಷ ವೇಷಧಾರಿಗಳು ಕೃಷ್ಣನ ರಾಸಲೀಲೆಯನ್ನು ವೇದಿಕೆ ಮೇಲೆ ಪ್ರರ‍್ಶಿಸಿದರು. ಮಂಟಪ ಪ್ರಭಾಕರ ಮತ್ತು ವಿದ್ವಾನ್ ಚಂದ್ರಶೇಖರ ನಾವುಡ ನರ‍್ದೇಶನದಲ್ಲಿ ಮೋಡಿಬಂದ ‘ಬಡಗುತಿಟ್ಟು ಯಕ್ಷಗಾನ ರಾಸಲೀಲೆ’ ಯಕ್ಷ ರೂಪಕವು ಕೃಷ್ಣನ ಯದುಕುಲ ಲೋಕ ಕರಾವಳಿಯಲ್ಲಿ ಅವತರಿಸಿದಂತೆ ಭಾಸವಾಯಿತು. ‘ರಂಗನೇತಕೆ ಬಾರನೇ..’ ‘ಕೊಳಲನೂದುತ ಬಂದ ಕೃಷ್ಣ’  ಸಾಲಿಗೆ ಮಕ್ಕಳ ನೃತ್ಯ ಗೋಕುಲವನ್ನೇ ಸೃಷ್ಟಿಸಿತು. ಚೆಂಡು, ನೀರಾಟ, ಉಯ್ಯಾಲೆ, ಕೋಲಾಟವನ್ನುಬಯಕ್ಷ ರೂಪಕದಲ್ಲಿ ಬಿಂಬಿಸಿದರು. ಕೃಷ್ಣನ ಬಾಲ ಲೀಲೆ ಸಾರುವ ಕಾಳಿಂಗ ರ‍್ಧನ, ಕಂಸ ವಧೆ, ರಾಧೆಯರು, ವಸುದೇವ, ಪೂತನಿ ಸಂಹಾರದ ದೃಶ್ಯಾವಳಿಗಳನ್ನು ಅಂತಿಮವಾಗಿ ಮೂಡಿಸಿದ್ದು, ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿತು. ನಂತರ ವೇದಿಕೆಯಲ್ಲಿ ಮೊಳಗಿದ್ದು ಡೊಳ್ಳಿನ ಸದ್ದು. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯರ‍್ಥಿಗಳು ನೆಲದ ದೇಸಿ ಕಲೆಯನ್ನು ಉಳಿಸುವ ಸಲುವಾಗಿ ರೂಪಿಸಿದ ಸಾಂಸ್ಕೃತಿಕ ತಂಡವು ಡೊಳ್ಳಿನ ಅಬ್ಬರದ…

Read More

ವಿದ್ಯಾಗಿರಿ (ಮೂಡುಬಿದಿರೆ): ವೈಭವದಿಂದ ಅಲಂಕೃತಗೊಂಡ ಆಳ್ವಾಸ್ ವಿರಾಸತ್ ಸಭಾಂಗಣದ ಮೇಲೆ ಪಶ್ಚಿಮದಿಂದ ಸರ‍್ಯ ಹೊಂಗಿರಣ ಬೀರಿದರೆ, ಇತ್ತ ಪರ‍್ವದ ಕೋಲ್ಕತ್ತಾದಿಂದ ಬಂದ ನೀಲಾದ್ರಿ ಕುಮಾರ್ ಸಿತಾರ್- ಝಿತಾರ್ ತರಂಗಗಳ ಕಂಪನದ ಅಲೆ ಸೃಷ್ಟಿಸಿದರು. ದೃಶ್ಯ-ಶ್ರವ್ಯಕ್ಕೆ ಬೆರಗಾದ ಜನತೆ ತಲೆದೂಗಿದರು. ನೀಲಾದ್ರಿಯ ಬೆರಳುಗಳ ಸಂಚಲನದ ಕಂಪನ ತರಾಂಗಂತರಂಗಕ್ಕೆ ವಿರಾಸತ್‌ನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರವೇ ನಿನಾದಲ್ಲಿ ತುಂಬಿತ್ತು.ತಾವೇ ಅಭಿವೃದ್ಧಿ  ಪಡಿಸಿದ ಎಲೆಕ್ಟ್ರಿಕ್ ಸಿತಾರ್ ಕೆಂಪು ರ‍್ಣದ ‘ಝಿತಾರ್’ ಮೂಲಕ ಕಛೇರಿ ಆರಂಭಿಸಿದ ನೀಲಾದ್ರಿ, ತಮ್ಮದೇ ಸಂಯೋಜನೆಯ ‘ಸಮ್ಮಿಲನ’ (ಫ್ಯೂಜನ್) ಮೂಲಕ ಕಛೇರಿಗೆ ನಾಂದಿ ಹಾಡಿದರು.ಇದು ‘ಸೌಂಡ್ ಚೆಕ್’ ಎಂದು ಹಾಸ್ಯವಾಡಿದ ನೀಲಾದ್ರಿ, ‘ರಾಗಗಳು ಇನ್ನಷ್ಟೇ ಶುರುವಾಗ ಬೇಕು’ ಎಂದು ಪ್ರೇಕ್ಷಕರಿಗೆ ಪಂಚ್ ನೀಡಿದರು. ‘ಗ್ರೇಟ್ ಗ್ಯಾಂಬ್ಲರ್’ ಸಿನಿಮಾದ ‘ದೋ ಲಬ್ಜೋ ಕೀ ಹೇ’ ನಾದದ ಮೂಲಕ ಮತ್ತೆ ಚಾಲನೆ ನೀಡಿದ ಅವರು, ಬಳಿಕ ‘ರ‍್ಜ್’ ಸಿನಿಮಾದ ‘ ಏಕ್ ದಿವಾನಾ ಥಾ..’ ಸ್ವರ ನುಡಿಸಿದರು. ಮಹಾತ್ಮ ಗಾಂಧೀಜಿಯ ನೆಚ್ಚಿನ…

Read More

ಮೂಡುಬಿದಿರೆ: ಎನ್‌ಸಿಸಿ ವಿದ್ಯಾರ್ಥಿಗಳು  ಹೆಚ್ಚು ಹೆಚ್ಚು ಭಾರತೀಯ ಸೇನೆಯನ್ನು ಸೇರಬೇಕು. ಭಾರತೀಯ ಸೇನೆ ಒಂದು ಕುಟುಂಬ, ಸವಾಲನ್ನು ಎದುರಿಸುವ ಸ್ಥಳ. ಅಗ್ನಿವೀರ್ ಯೋಜನೆಯು ಯುವಜನತೆಗೆ ದೇಶ ಸೇವೆ ಮಾಡಲು ಉತ್ತಮ ಅವಕಾಶ ಕಲ್ಪಿಸಿದೆ ಎಂದು ಭಾರತೀಯ ಸೇನೆಯ ನಿವೃತ್ತ ಲೆಫ್ಟಿನಂಟ್ ಜನರಲ್ ಬಿಎಸ್ ರಾಜು ಹೇಳಿದರು. ಅವರು ಆಳ್ವಾಸ್‌ನ ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ತ್ರಂ ಸ್ಪೀಕರ್ಸ್ ಕ್ಲಬ್‌ವತಿಯಿಂದ ಎನ್‌ಸಿಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕರ‍್ಯಕ್ರಮದಲ್ಲಿ ಮಾತನಾಡಿದರು.   ಜೀವನದಲ್ಲಿ ಪ್ರತಿಬಾರಿ ನಾವು ಅಂದುಕೊಂಡಂತೆ ನಡೆಯುವುದಿಲ್ಲ. ಅದಕ್ಕಾಗಿ ನಾವು ಪರ್ಯಾಯ ಯೋಜನೆಗಳನ್ನು ಇಟ್ಟುಕೊಳ್ಳಬೇಕು. ಶಿಸ್ತು ಮತ್ತು ಘನತೆ ನಮ್ಮ ಜೀವನದಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಶಿಸ್ತು ನಮ್ಮ ಕೆಲಸವನ್ನು ಸರಿಯಾಗಿ ನಿರ್ವಹಿಸುವ ಶಕ್ತಿ ನೀಡುತ್ತದೆ. ಎನ್‌ಸಿಸಿ ಸಮವಸ್ತ್ರ ವನ್ನು ಧರಿಸುವ ಆಸೆ ನಮ್ಮಲ್ಲಿ ಮೂಡಬೇಕು. ಆಳ್ವಾಸ್ ಸಂಸ್ಥೆಯ ಎನ್‌ಸಿಸಿಯಲ್ಲಿ ಮೂರು ವಿಭಾಗಳಿದ್ದು, ಕ್ರೀಯಾಶೀಲತೆಯಿಂದ ಕರ‍್ಯನಿರ್ವಹಿಸುತ್ತಿದೆ ಎಂಬುದನ್ನು ಅರಿತಿದ್ದೇನೆ ಎಂದರು. ಜಗತ್ತು ಕ್ಷಿಪ್ರ ಬದಲಾವಣೆಯಾಗುತ್ತಾ ಸಾಗುತ್ತಿದೆ. ನಮ್ಮಲ್ಲಿ…

Read More

ಉತ್ತಮ ಅವಕಾಶಗಳ ಹುಡುಕಾಟದಲ್ಲಿ ತವರು ನೆಲವನ್ನು ತೊರೆದು ದೂರದ ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗ ಉದ್ಯಮದ ನೆಲೆಗಂಡು ಓರ್ವ ಪ್ರತಿಷ್ಠಿತ ವ್ಯಕ್ತಿಯಾಗಿ ಗುರುತಿಸಿಕೊಂಡವರು ಈ ಲೇಖನದ ನಾಯಕ, ಸಂಘಟಕ, ಮಯೂರ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಕ್ವಾಡಿ ಪ್ರವೀಣ್ ಶೆಟ್ಟಿ. ಈಗಿನ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿ ಎಂಬಲ್ಲಿ 1967 ಜುಲೈ 6 ರಂದು ನಾರಾಯಣ ಶೆಟ್ಟಿ ಮತ್ತು ಸರೋಜಿನಿ ಶೆಟ್ಟಿ ದಂಪತಿಯರಿಗೆ ಪ್ರೀತಿಯ ಕುಮಾರನಾಗಿ ಹುಟ್ಟಿದ ಪ್ರವೀಣ್ ಹೆಸರಿಗೆ ತಕ್ಕಂತೆ ಪಾಠ ಪಾಠೇತರ ಚಟುವಟಿಕೆಗಳಲ್ಲಿ ಜಾಣನೆಂಬಂತೆ ಗುರುತಿಸಿಕೊಳ್ಳುತ್ತಲೇ ತನ್ನ ಮಾತಾಪಿತರ ಉತ್ತಮ ಸಂಸ್ಕಾರದ ಪಾಠದಿಂದ ಬಾಲ್ಯವನ್ನು ಕಳೆದವರು. ಸರಕಾರಿ ಕಾಲೇಜು ಕೋಟೇಶ್ವರ ಹಾಗೂ ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜು ಮುಖಾಂತರ ಬಿ.ಎಸ್ಸಿ ಪದವಿಯನ್ನು ಸಂಪಾದಿಸಿದರು.ತನ್ನ ಕಠಿಣ ಪರಿಶ್ರಮ ದೃಢ ನಿರ್ಧಾರ ಹಾಗೂ ಜೀವನದಲ್ಲಿ ಸ್ಪಷ್ಟ ಗುರಿ ಇರಿಸಿಕೊಂಡ ಈ ಸ್ಫುರದ್ರೂಪಿ ತರುಣ ಕೊಲ್ಲಿ ರಾಷ್ಟ್ರದ ಯುಎಇಯಲ್ಲಿ ಪಾಲುದಾರಿಕೆ ಒಪ್ಪಂದ ಪ್ರಕಾರ ಫಾರ್ಚೂನ್ ಹೊಟೆಲನ್ನು ಆರಂಭಿಸಿದ ನಂತರ…

Read More