Author: admin
ತುಳುವರ ಹೆಮ್ಮೆಯ ಅಂತಾರಾಷ್ಟ್ರೀಯ ಸಂಸ್ಥೆ ಅಮೆರಿಕಾದಲ್ಲಿರುವ ಆಲ್ ಅಮೆರಿಕಾ ತುಳು ಅಸೋಸಿಯೇಷನ್ ತನ್ನ ನಾಲ್ಕನೇ ಹುಟ್ಟುಹಬ್ಬವನ್ನು ತುಳುಸಿರಿ ಪರ್ಬ ಹೆಸರಲ್ಲಿ ಜುಲೈ 4,5,6 ರಂದು ಮೂರು ದಿನಗಳ ಸಂಭ್ರಮಾಚರಣೆಯಲ್ಲಿ ನಡೆಸಲಿದೆ. ಮೊದಲ ದಿನ ಜುಲೈ 4 ರಂದು ವಿಶ್ವದ ಎಲ್ಲಾ ತುಳುವರ ಸೇರುವಿಕೆಯೊಂದಿಗೆ ನಾರ್ಥ್ ಕೆರೋಲಿನದ ದಿ ಲೋಟಸ್ ಪಾರ್ಟಿ ಹಾಲ್ ಇಲ್ಲಿ ಔತಣಕ್ಕಾಗಿ ಸೇರುವುದರೊಂದಿಗೆ ಕಾರ್ಯಕ್ರಮ ವಿದ್ಯುಕ್ತವಾಗಿ ಆರಂಭವಾಗಲಿದೆ. ಜುಲೈ 5 ರಂದು ಆಟ ಸಿರಿಮುಡಿ, ಆಟ ಸನ್ಮಾನ, ಮತ್ತು ಆಟ ಸಿರಿನುಡಿ ಪ್ರಶಸ್ತಿ ಪ್ರದಾನದೊಂದಿಗೆ ಅಲ್ಸ್ಟನ್ ರಿಡ್ಜ್ ಮಿಡ್ಲ್ ಸ್ಕೂಲ್ ಕ್ಯಾರಿ ಕೆರೋಲಿನಾ ಇಲ್ಲಿ ಆಯೋಜನೆಗೊಳ್ಳಲಿದ್ದು, ಇದರಲ್ಲಿ ಕರ್ನಾಟಕದ ವಿಧಾನಸಭಾ ಸಭಾಪತಿ ಯು.ಟಿ ಖಾದರ್, ನಿಟ್ಟೆ ವಿಶ್ವ ವಿದ್ಯಾಲಯದ ತುಳು ಅಧ್ಯಯನ ವಿಭಾಗದ ಮುಖ್ಯಸ್ಥೆ ಡಾ. ಸಾಯಿಗೀತ ಹೆಗ್ಡೆ, ಕತಾರ್ ಕನ್ನಡ ಸಂಘದ ಅಧ್ಯಕ್ಷ ಎ.ಟಿ.ಎಸ್ ಸಂಸ್ಥೆಯ ಮುಖ್ಯಸ್ಥ ಡಾ| ರವಿ ಶೆಟ್ಟಿ ಮೂಡಂಬೈಲ್ ಮತ್ತು ಎಮ್ ರಿಸಲ್ಟ್ ಸಂಸ್ಥೆಯ ಸಂಸ್ಥಾಪಕ ಮುಖ್ಯಾಧಿಕಾರಿ ಶೇಖರ್ ನಾಯ್ಕ್ ಮುಖ್ಯ ಅತಿಥಿಗಳಾಗಿ…
ತುಳುನಾಡಿನ ಧ್ವಜವಾಹಕತ್ವ ವಹಿಸಿಕೊಂಡಿರುವ ತುಳುವ ಮಹಾಸಭೆ ತನ್ನ ಚಟುವಟಿಕೆಗಳನ್ನು ವಿಸ್ತಾರಗೊಳಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ, ಸಮತೋಲಿತ ಆಹಾರ ಹಾಗೂ ಮನಃಶಾಂತಿಯ ಏಕ ಸಂಯೋಜನೆಯ ಸೇವೆ ನೀಡುತ್ತಿರುವ ಮನುಜ ಮನಸ್ಸಿನ ತಜ್ಞ ಡಾ| ನಿರಂಜನ್ ಎಸ್ ಶೆಟ್ಟಿ ಅವರನ್ನು ಕಾಪು ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕಗೊಳಿಸಲಾಗಿದೆ. ಮನೋವಿಜ್ಞಾನದಲ್ಲಿ ಡಾಕ್ಟರೇಟ್ ಪಡೆದಿರುವ ಡಾ| ಶೆಟ್ಟಿ ಅವರು ಪ್ರಸಿದ್ಧ ಸುನಂದ ವೆಲ್ನೆಸ್ ಸೆಂಟರ್ ನ ಸ್ಥಾಪಕರಾಗಿದ್ದು, ಔಷಧವಿಲ್ಲದ ಚಿಕಿತ್ಸಾ ವಿಧಾನಗಳ ಮೂಲಕ ನೂರಾರು ಜನರ ಜೀವನದಲ್ಲಿ ಹೊಸ ಬೆಳಕು ತಂದಿದ್ದಾರೆ. ಅವರು ಸುಮಾರು 80ಕ್ಕೂ ಹೆಚ್ಚು ದೈಹಿಕ ಮಾನಸಿಕ ತೊಂದರೆಗಳಿಗೆ ಸುಸೂಕ್ತ ಪರಿಹಾರಗಳನ್ನು ನೀಡುತ್ತಾ, ದೇಶದ ವಿವಿಧ ಕಡೆ ಆರೋಗ್ಯ ಮತ್ತು ಆತ್ಮಶಾಂತಿಯ ಮಾರ್ಗದರ್ಶನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ರಾಷ್ಟ್ರೀಯ ಮಾನವ ಹಕ್ಕು ಸಮಿತಿ ಹಾಗೂ ಮಹಿಳಾ, ಮಕ್ಕಳ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾಗಿ, ಸಾಮಾಜಿಕ ನ್ಯಾಯಕ್ಕಾಗಿ ಬದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಅಮೆರಿಕದ ಲಿಂರಾ ವಿಂಡ್ಸರ್ ವತಿಯಿಂದ ಸುವರ್ಣ ಪದಕ, ಸಿಂಗಾಪುರದ ಚಾಂಪಿಯನ್…
ಮಂಗಳೂರು ಕದ್ರಿ ಚಿನ್ಮಯ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಭತ್ತದ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಪಾಲಡ್ಕ ಗ್ರಾಪಂ ವ್ಯಾಪ್ತಿಯ ಪುತ್ತಿಗೆಗುತ್ತು ಕಡಂದಲೆ ಪರಾಡಿಯಲ್ಲಿ ಜೂನ್ 27 ರಂದು ನಡೆಯಿತು. ಗುತ್ತಿನ ಯಜಮಾನ ಕೆ.ಪಿ ಸಂತೋಷ್ ಕುಮಾರ್ ಎಂ. ಶೆಟ್ಟಿ ಪ್ರಾರ್ಥನೆ ನೆರವೇರಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ಗುತ್ತಿಗೆ ಸೇರಿದ ಸುಮಾರು 60 ಎಕರೆ ಜಾಗದಲ್ಲಿ ಕೃಷಿ ಚಟುವಟಿಕೆ ನಿರಂತರವಾಗಿ ನಡೆಯುತ್ತಿದೆ. ಪ್ರತಿ ವರ್ಷವು ಭತ್ತದ ಕೃಷಿಗೆ ಹೆಚ್ಚಿನ ಆಧ್ಯತೆ ನೀಡಿದ್ದೇವೆ. ವರ್ಷಕ್ಕೆ ಮೂರು ಬಾರಿ ಭತ್ತದ ಬೆಳೆ ಬೆಳೆಯುತ್ತೇವೆ. ನೂರಕ್ಕೂ ಅಧಿಕ ಕೃಷಿ ಕಾರ್ಮಿಕರಿಗೆ ದುಡಿಮೆಯ ಅವಕಾಶವನ್ನೂ ನೀಡಿದ್ದೇವೆ. ನಗರದಲ್ಲಿ ಬೆಳೆಯುತ್ತಿರುವ ವಿದ್ಯಾರ್ಥಿಗಳಿಗೆ ಭತ್ತದ ಕೃಷಿಯ ಬಗ್ಗೆ ಮಾಹಿತಿ ನೀಡುವ ಅವಕಾಶ ದೊರೆತ್ತಿರುವುದು ಸಂತಸದ ವಿಷಯ ಎಂದರು. ಕೆಎಂಎಫ್ ನಿರ್ದೇಶಕ ಕೆ.ಪಿ ಸುಚರಿತ ಶೆಟ್ಟಿ ಮಾತನಾಡಿ, ಪುತ್ತಿಗೆಗುತ್ತು ಕಡಂದಲೆ ಪರಾಡಿ ಕೂಡು ಕುಟುಂಬ ದೈವ ಹಾಗೂ ಕೃಷಿಗೆ ಹೆಚ್ಚಿನ ಮಹತ್ವ ನೀಡಿ ಬೆಳೆಯುತ್ತಿರುವ ಪ್ರತಿಷ್ಠಿತ ಮನೆತನ ಎಂದರು. ಶಾಲೆಯ ವತಿಯಿಂದ ಕೆ.ಪಿ…
ಬಂಟ ಸಮಾಜದವರು ಮುಂದುವರಿದಿದ್ದಾರೆ ಎನ್ನುವುದು ತಪ್ಪು. ಬಂಟರಲ್ಲಿ ಅರ್ಧಾಂಶದಷ್ಟು ಬಡವರಿದ್ದಾರೆ. ಎಲ್ಲಾ ಬಂಟರ ಸಂಘಗಳು ಶ್ರೀಮಂತವಾಗಿದ್ದು ಬಡವರಿಗೆ, ಆರ್ಥಿಕ ಶೈಕ್ಷಣಿಕವಾಗಿ ನೆರವಾಗಲು ಸರ್ವೆ ನಡೆಸಬೇಕು. ಸಂಘಗಳು ನೀಡುವ ಸಹಾಯ ದುರುಪಯೋಗವಾಗದಂತೆ ಎಚ್ಚರಿಕೆಯೂ ಅಗತ್ಯ ಎಂದು ಬೆಂಗಳೂರಿನ ಡಿವೈಎಸ್ಪಿ ದಿನಕರ ಶೆಟ್ಟಿ ಪಡ್ರೆ ಅಭಿಪ್ರಾಯಪಟ್ಟರು. ಸುರತ್ಕಲ್ ಬಂಟರ ಭವನದಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರತ್ಕಲ್ ಬಂಟರ ಸಂಘದ 25ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಸಹಾಯಹಸ್ತ ವಿತರಣೆ, ವಿದ್ಯಾರ್ಥಿವೇತನ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಿದ್ದರು. ಮುಂಬಯಿ ಹೇರಂಭ ಇಂಡಸ್ಟ್ರೀಸ್ ಸಂಸ್ಥೆಯ ಸಿಎಂಡಿ ಡಾ| ಕನ್ಯಾನ ಸದಾಶಿವ ಶೆಟ್ಟಿ, ಪೂಣೆ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ ಮಾತನಾಡಿದರು. ಡಾ| ಕನ್ಯಾನ ಸದಾಶಿವ ಶೆಟ್ಟಿ, ದಿನಕರ ಶೆಟ್ಟಿ ಪಡ್ರೆ, ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ…
ಶುಭಾ ಶೆಟ್ಟಿ ಪ್ರೊಡಕ್ಷನ್ ಲಾಂಛನದಡಿಯಲ್ಲಿ ಶರತ್ ಪೂಜಾರಿ ಬಗ್ಗತೋಟ ನಿರ್ದೇಶನದಲ್ಲಿ ಧನರಾಜ್ ಶೆಟ್ಟಿ, ಉಮೇಶ್ ಶೆಟ್ಟಿ ನಿರ್ಮಾಣದಲ್ಲಿ ಶೋಧನ್ ಶೆಟ್ಟಿ ನಾಯಕ ನಟನಾಗಿ ಅಭಿನಯಿಸುತ್ತಿರುವ ‘ತರವಾಡ್’ ತುಳು ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ಮಂದಿರದಲ್ಲಿ ನಡೆಯಿತು. ಸಮಾರಂಭವನ್ನು ನಿರ್ದೇಶಕರಾದ ವಿಜಯಕುಮಾರ್ ಕೊಡಿಯಾಲ್ ಬೈಲ್ ಮತ್ತು ಪ್ರಕಾಶ್ ಪಾಂಡೇಶ್ವರ್ ಉದ್ಘಾಟಿಸಿದರು. ತುಳುವಿನಲ್ಲಿ ವಿಭಿನ್ನ ಕತೆಯನ್ನು ಒಳಗೊಂಡ ತರವಾಡ್ ಸಿನಿಮಾಕ್ಕೆ ಪ್ರೇಕ್ಷಕರ ಪ್ರೋತ್ಸಾಹ ಅಗತ್ಯ ಎಂದರು. ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ತುಳುವಿನಲ್ಲಿ ತೆರೆ ಕಾಣುವ ಎಲ್ಲಾ ಸಿನಿಮಾಗಳಿಗೂ ಪ್ರೇಕ್ಷಕರ ಪ್ರೋತ್ಸಾಹ ಇರಲಿ ಎಂದರು. ಸಮಾರಂಭದಲ್ಲಿ ಸಂತೋಷ್ ಶೆಟ್ಟಿ ಪಲ್ಲವಿ, ಗೋಪಿನಾಥ ಭಟ್, ಬಿಕೆ ಶೆಟ್ಟಿ, ಮಿಥುನ್ ಹೆಗ್ಡೆ, ನವೀನ್ ಚಂದ್ರ ಜೆ ಶೆಟ್ಟಿ, ಸಂಜಯ್ ಶೆಟ್ಟಿ, ವಿಠಲ್ ಶೆಟ್ಟಿ ಕನಕಪಾಡಿ, ಗುರು ಶೆಟ್ಟಿ, ಪ್ರಸನ್ನ ಶೆಟ್ಟಿ, ಅನಿಲ್ ರಾಜ್ ಉಪ್ಪಲ, ನಿತಿನ್ ರೈ ಕುಕ್ಕುವಳ್ಳಿ, ಭರತ್ ಶೆಟ್ಟಿ, ದೇವರಾಜ ಶೆಟ್ಟಿ, ಪಿಬಿ ಹೆಗ್ಡೆ, ಶ್ರೀನಾಥ್ ಹೆಗ್ಡೆ, ನವೀನ್…
ಆಗಸ್ಟ್ 10 ರಂದು ಕಾರ್ಕಳ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಕಾರ್ಕಳ ಹೆಬ್ರಿ ತಾಲೂಕು ಬಂಟರ ಸಂಘ, ಕಾರ್ಕಳ ತಾಲೂಕು ಬಂಟ ಮಹಿಳಾ ಸಂಘ ಹಾಗೂ ಕಾರ್ಕಳ ಯುವ ಬಂಟರ ಸಂಘದ ವತಿಯಿಂದ ನಡೆಯಲಿರುವ ಆಟಿಡೊಂಜಿ ಕೆಸರ್ದ ಕೂಟ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜುಲೈ 01 ರಂದು ಕಾರ್ಕಳ ತಾಲೂಕು ಸಂಚಾಲಕರಾದ ವಿಜಯ ಶೆಟ್ಟಿಯವರು ಬಿಡುಗಡೆಗೊಳಿಸಿದರು. ಸನ್ಮಾನ, ಕ್ರೀಡೆಗಳು ಮತ್ತು ಪ್ರತಿಭಾ ಪುರಸ್ಕಾರ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಂಟ ಸಮಾಜಕ್ಕೆ ಮಾತ್ರ ಸೀಮಿತವಾಗಿದ್ದು, ಈ ಕಾರ್ಯಕ್ರಮದಲ್ಲಿ ಕಾರ್ಕಳ ಬಂಟ ಮಹಿಳಾ ತ್ರೋಬಾಲ್ ತರಬೇತುದಾರ ನವೀನ್ ಚಂದ್ರ ನಾಯಕ್ ಅವರನ್ನು ಸನ್ಮಾನಿಸಲಾಗುವುದು. ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಹೆಗ್ಡೆ, ಯುವ ಬಂಟರ ಸಂಘದ ಅಧ್ಯಕ್ಷ ಅವಿನಾಶ್ ಶೆಟ್ಟಿ, ರವಿ ಶೆಟ್ಟಿ ಕುಕ್ಕುಂದೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಣಂಜಾರು ಗ್ರಾಮದ ಮಡಿಬೆಟ್ಟು ಅನುದಾನಿತ ಶಾಲಾ ಮಕ್ಕಳಿಗೆ ಉಚಿತವಾಗಿ ಮೈತ್ರಿ ಸೇವಾ ಸಂಘದ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಪೆಲತ್ತೂರು ಫ್ರೆಂಡ್ಸ್ ವತಿಯಿಂದ ನೋಟ್ ಪುಸ್ತಕಗಳ ವಿತರಣಾ ಸಮಾರಂಭ ನೆರವೇರಿತು. ಈ ಸಂದರ್ಭದಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಶ್ರೀಯುತ ಶಿವಪ್ರಸಾದ್ ಹೆಗ್ಡೆ, ಟ್ರಸ್ಟಿನ ಸದಸ್ಯರಾದ ವಿಕ್ರಂ ಹೆಗ್ಡೆ, ಶಶಿಧರ ಶೆಟ್ಟಿ ಕೆಂಜೂರು, ಹರಿದಾಸ ಹೆಗ್ಡೆ, ಶಾಲಾ ಸಂಚಾಲಕರಾದ ಸಿ.ಎ. ಚಂದನ್ ಹೆಗ್ಡೆ, ಕೋಶಾಧಿಕಾರಿ ಪ್ರಕಾಶ್ ಪ್ರಭು, ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಯುತ ಸುಧೀರ್ ಹೆಗ್ಡೆ, ನೀರೆ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭು, ಉಪಾಧ್ಯಕ್ಷೆ ವಿದ್ಯಾ ಶೆಟ್ಟಿ, ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷ ಸುರೇಶ್ ಶೆಟ್ಟಿ, ಮೈತ್ರಿ ಸಂಘದ ಅಧ್ಯಕ್ಷರಾದ ಹರಿಶ್ಚಂದ್ರ ಶೆಟ್ಟಿ ಹಾಗೂ ಕಾರ್ಯದರ್ಶಿ ರಮೇಶ್ ಕಲ್ಲೊಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಸ್ಥೆಯ ಟ್ರಸ್ಟಿಯವರಾದ ವಿಕ್ರಂ ಹೆಗ್ಡೆಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೈತ್ರಿ ಸೇವಾ ಸಂಘ ಹಾಗೂ ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷರು ಸಂಸ್ಥೆಗೆ ಹಾಗೂ ವಿದ್ಯಾರ್ಥಿಗಳಿಗೆ ಶುಭ…
ಅರಬ್ ಸಂಯುಕ್ತ ಸಂಸ್ಥಾನ ಯಕ್ಷಗಾನ ಅಭ್ಯಾಸ ಕೇಂದ್ರ ಯು.ಎ.ಇ., ಯು.ಎ.ಇ.ಯ ಸರ್ವಪ್ರಥಮ ಮತ್ತು ಏಕೈಕ ಸಮಗ್ರ ಯಕ್ಷಗಾನ ಅಭ್ಯಾಸ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ೨೦೧೫ ರಲ್ಲಿ ದುಬಾಯಿಯಲ್ಲಿ ಪ್ರಾರಂಭವಾಗಿರುವ ಈ ಸಂಸ್ಥೆಯ ದಶಮಾನೋತ್ಸವ – ೨೦೨೫ ಸಂಭ್ರಮ ಇಂಡಿಯನ್ ಹೈಸ್ಕೂಲ್ ಶೇಖ್ ರಾಶೀದ್ ಆಡಿಟೋರಿಯಂ ದುಬಾಯಿಯಲ್ಲಿ ನಡೆಯಿತು. ಯಕ್ಷಾಗಾನ ಚೌಕಿ ಪೂಜೆ ಮಹಾ ಮಂಗಳಾರತಿ ನಂತರ ಭವ್ಯ ಮೆರವಣಿಗೆಯ ಮೂಲಕ ದಶಮಾನೋತ್ಸವ ಯಕ್ಷಗಾನದ ಭಾಗವತರು ಹಾಗೂ ಹಿಮ್ಮೇಳ ಮುಮ್ಮೇಳದ ಕಲಾವಿದರು, ಯಕ್ಷಶ್ರೀರಕ್ಷ ಪ್ರಶಸ್ತಿ ಪುರಸ್ಕöತರು ಹಾಗೂ ದಶಮಾನೋತ್ಸವದ ಹತ್ತು ಮಂದಿ ಸಾಧಕರನ್ನು ವೇದಿಕೆಗೆ ಬರಮಾಡಿ ಕೊಳ್ಳಲಾಯಿತು ಹತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರುಗಳಲ್ಲಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಶ್ರೀ ಬಿ. ಕೆ. ಗಣೇಶ್ ರೈಯವರ ಶಿಲ್ಪಕಲೆ, ಚಿತ್ರಕಲೆ, ಲೇಖಕ ಮತ್ತು ಬರಹಗಾರರಾಗಿ, ಕಳೆದ ನಾಲ್ಕು ದಶಕಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವುದನ್ನು ಗುರುತ್ತಿಸಿ “ಕಲಾಮಾಧ್ಯಮ” ಗೌರವ ಪುರಸ್ಕಾರ ನೀಡಿ ಗೌರವಿಸಲಾಯಿತು. ಸನ್ಮಾನ ಸಮಾರಂಭದಲ್ಲಿ ಯಕ್ಷಧ್ರುವ ಫೌಂಡೆಶನ್ ಅಧ್ಯಕ್ಷರು ಶ್ರೀ…
‘ವೈದ್ಯೋ ನಾರಾಯಣೊ ಹರಿಃ’ ಎಂಬ ಮಾತೊಂದಿದೆ. ವೈದ್ಯರಾದವನು ದೇವರಿಗೆ ಸಮಾನರಾದವರು. ರೋಗಿಯು ತನ್ನ ಅಂತರಂಗವನ್ನು ಬಿಚ್ಚಿಡುವುದು ವೈದ್ಯನ ಮುಂದೆ ಮಾತ್ರ. ಇಂದು ವೈದ್ಯರಾದ ಡಾ. ಎ.ಎ ಶೆಟ್ಟಿ ಎಂದೇ ಖ್ಯಾತರಾದ ಅಸೋಡು ಅನಂತರಾಮ ಶೆಟ್ಟಿಯವರನ್ನು ಪರಿಚಯಿಸುತ್ತಿದ್ದೇನೆ. ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಅಸೋಡು ಎಂಬ ಗ್ರಾಮ ಪರಿಸರದಲ್ಲಿ ಹುಟ್ಟಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಮುಗಿಸಿ, ಕೇವಲ ಒಂದು ಸಾವಿರ ರೂಪಾಯಿ ಹಿಡಿದುಕೊಂಡು ಲಂಡನ್ ಗೆ ಹೋದ ಇವರು ಇಂದು ಪ್ರಪಂಚದ ಟಾಪ್ 10 ವೈದ್ಯರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿರುವ ಹೆಮ್ಮೆಯ ಬಂಟ. ಅಸೋಡು ಅನಂತರಾಮ ಶೆಟ್ಟಿ ಅವರ ಬಗ್ಗೆ ಅನೇಕ ಕಡೆಗಳಲ್ಲಿ, ಜಾಲತಾಣಗಳಲ್ಲಿ, ಸಮೂಹ ಮಾಧ್ಯಮಗಳಲ್ಲಿ, ಹುಟ್ಟೂರಿನ ಸನ್ಮಾನದಲ್ಲಿ ನೋಡಿ ಒಮ್ಮೆ ಅವರನ್ನು ಭೇಟಿ ಆಗಬೇಕೆಂಬ ಆಸೆ ಆಗಿತ್ತು. ವಿಸ್ಮಯವೇ ಎಂಬಂತೆ ಅಂದು ಹಾಲಾಡಿಯ ಯುವ ಮೆರಿಡಿಯನ್ ಸಭಾಭವನದ ರೆಸಾರ್ಟ್ ನಲ್ಲಿ ಅವರನ್ನು ಭೇಟಿಯಾಗಲು ಹೋದಾಗ ನನ್ನನ್ನು ಕರೆದು ಅತ್ಯಂತ ಆತ್ಮೀಯವಾಗಿ ಮಾತನಾಡಿಸಿದರು. ಅಂದು ಅವರೊಂದಿಗೆ ಮಾತನಾಡಿ ಅವರಿಗೆ ನಮಸ್ಕರಿಸಿದ ಆ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ 2025- 26 ನೇ ಸಾಲಿನ ಯಕ್ಷಗಾನ ತರಗತಿಯು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ ಇಲ್ಲಿ ರವಿವಾರ ಆರಂಭಗೊಂಡಿತು. ತರಗತಿಯನ್ನು ಪಟ್ಲ ಫೌಂಡೇಶನ್ ಎಕ್ಕಾರ್ ಘಟಕದ ಗೌರವಾಧ್ಯಕ್ಷರಾದ ರತ್ನಾಕರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ಪ್ರಾಂಶುಪಾಲರಾದ ಡಾ. ಪುಟ್ಟಸ್ವಾಮಿ ಸಭೆಯನ್ನುದ್ದೇಶಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕ ಪಣಂಬೂರು ವಾಸುದೇವ ಐತಾಳ್, ಎಕ್ಕಾರು ಘಟಕದ ಕಾರ್ಯದರ್ಶಿ ಸತೀಶ್ ಶೆಟ್ಟಿ, ಯಕ್ಷಗಾನ ಶಿಕ್ಷಕರಾದ ವರುಣ್ ಆಚಾರ್ಯ, ಸಂಸ್ಥೆಯ ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಧ್ಯಕ್ಷರಾದ ಜಕೀಯ ಬತೂಲ್ ಯಕ್ಷಗಾನದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಧ್ಯಾಪಕ ಭೀಮಶಂಕರ ಸ್ವಾಗತಿಸಿದರು. ಅಧ್ಯಾಪಕ ಸಂಗಮೇಶ್ ವಂದಿಸಿದರು. ಉಪನ್ಯಾಸಕ ಮಹೇಶ್ ಕಾರ್ಯಕ್ರಮ ನಿರೂಪಿಸಿದರು.














