Author: admin
ಅಪ್ಪ ಅಷ್ಟು ಸುಲಭವಾಗಿ ಮಕ್ಕಳಿಗಾಗಲಿ, ಮಡದಿಗಾಗಲಿ, ಅರ್ಥವಾಗುವುದೇ ಇಲ್ಲ. ಅಪ್ಪನ ಅಂತರಾಳ ಅರ್ಧಾಂಗಿ ಎನಿಸಿಕೊಂಡು ಸದಾ ಅಪ್ಪನ ಮಗ್ಗುಲಲ್ಲೇ ಇರುವ ಅಮ್ಮನಿಗೂ ಸಹ ಅರ್ಥವಾಗುವುದಿಲ್ಲ. ಮೇಲಾಗಿ ಅಪ್ಪನನ್ನು ಅರ್ಥ ಮಾಡಿಕೊಳ್ಳಲು ಅಮ್ಮ ಬಿಡುವುದೇ ಇಲ್ಲ. ನಿಮ್ಮಪ್ಪ ಯಾವಾಗಲೂ ಹೀಗೆ ಅನ್ನುತ್ತಲೇ ಇರುತ್ತಾಳೆ. ನಿಜ ಹೇಳಬೇಕೆಂದರೆ ಸಾಲಗಾರರಿಗೆ ಅಪ್ಪ ಚೂರುಪಾರು ಅರ್ಥವಾಗಿರುತ್ತಾನೆ. ತನ್ನ ಗೆಳೆಯರಲ್ಲಿ ಒಬ್ಬಿಬ್ಬರಿಗೆ ಅಪ್ಪ ಕಾಲು ಭಾಗ ಮಾತ್ರ ಅರ್ಥ ಆಗಿರುತ್ತಾನೆ. ಅಪ್ಪನ ಸವೆದು ಹೋಗಿರುವ ಚಪ್ಪಲಿಗಳಿಗೆ, ಅಪ್ಪ ವರ್ಷಗಟ್ಟಲೆ ಹಾಕಿದ ಹಳೆಯ ಬಟ್ಟೆಗಳಿಗೆ ಮಕ್ಕಳು ಮತ್ತು ಮಡದಿಗಿಂತಲೂ ಅಪ್ಪ ಚೆನ್ನಾಗಿ ಅರ್ಥ ಆಗಿರುತ್ತಾನೆ. ಅವುಗಳು ಹಳೆಯದಾದರೂ ಅಪ್ಪ ಅವುಗಳನ್ನೇ ಪ್ರೀತಿಯಿಂದ ಬಳಸುತ್ತಾನೆ. ಅಪ್ಪ ಅವುಗಳನ್ನು ಬದಲಿಸುವುದಿಲ್ಲ. ಆ ಹಳೆಯ ವಸ್ತುಗಳಲ್ಲಿಯೇ ಅಪ್ಪ ಹೊಸದನ್ನು ಕಂಡುಕೊಂಡಿದ್ದಾನೆ. ಅಪ್ಪ ಹಳೆಯ ಕಾಲದವ. ಆತನಿಗೆ ಹೊಳೆಯುವುದೆಲ್ಲಾ ಬರೀ ಹಳೆಯ ಯೋಚನೆಗಳು. ಅಪ್ಪ ಈಗಿನ ಕಾಲಕ್ಕೆ ತಕ್ಕಂತೆ ಆಗಿಲ್ಲ ಅನ್ನುವ ಮಡದಿ ಮಕ್ಕಳು. ಅಪ್ಪ ಆದರೂ ಅಪ್ಪನ ಬೆಲೆ ಮೂರು ಕಾಸು. ಅಪ್ಪನ ಆಸೆ…
ಅಖಿಲ ಅಮೇರಿಕಾ ತುಳು ಅಸೋಸಿಯೇಷನ್ (ಆಟಾ) ವತಿಯಿಂದ ಆಯೋಜಿಸಲಾದ ಸಿರಿಪರ್ಬ -2025 ಕಾರ್ಯಕ್ರಮವು ಜುಲೈ 4,5,6 ರಂದು ಉತ್ತರ ಕೆರೊಲಿನಾ ರಾಜ್ಯದ ರಾಲೆ ನಗರದ ಟ್ರಯಾಂಗಲ್ ತುಳುವೆರೆ ಚಾವಡಿ ಸಹಯೋಗದಲ್ಲಿ ವಿಜೃಂಭಣೆಯಿಂದ ನೆರವೇರಿತು. ಶ್ರೀಮತಿ ಶ್ರೀವಲ್ಲಿ ರೈ ಮಾರ್ಟೆಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಐತಿಹಾಸಿಕ ಸಮ್ಮೇಳನದಲ್ಲಿ ಆಟಾದ ಸ್ಥಾಪಕ ಅಧ್ಯಕ್ಷ ಭಾಸ್ಕರ್ ಶೇರಿಗಾರ್, ಸಿರಿಪರ್ಬ ಸಂಚಾಲಕಿ ರಂಜನಿ ಅಸೈಗೋಳಿ, ‘ಆಟಾ’ದ ಪದಾಧಿಕಾರಿಗಳು, ರಾಲೆ ಟ್ರಯಾಂಗಲ್ ತುಳುವೆರೆ ಚಾವಡಿಯ ಪದಾಧಿಕಾರಿಗಳು ಮತ್ತು ವಿವಿಧ ರಾಷ್ಟ್ರಗಳಿಂದ ಆಗಮಿಸಿದ ತುಳು ಸಂಘಗಳ ಪ್ರತಿನಿಧಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. ಅಮೇರಿಕಾ – ಕೆನಡಾದ ತುಳುವರ ಸಂಘಟನೆಯ ಪ್ರಯತ್ನ ಈ ಸಿರಿಪರ್ಬವು ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಗುರುತಿಸುವಂತೆ ಮಾಡಿತು. ಅತಿಥಿಗಳ ಸ್ವಾಗತ ಮತ್ತು ಮೆರವಣಿಗೆ ಕಾರ್ಯಕ್ರಮದ ಮೊದಲ ದಿನ, ಮುಖ್ಯ ಅತಿಥಿಗಳಾಗಿ ತುಳುನಾಡಿನಿಂದ ಆಗಮಿಸಿದ ಡಾ. ಸಾಯಿಗೀತಾ ಹೆಗ್ಡೆ, ಕತಾರ್ನಿಂದ ಆಗಮಿಸಿದ ಡಾ. ರವಿ ಶೆಟ್ಟಿ ಮೂಡಂಬೈಲು, ಕನೆಕ್ಟಿಕಟ್ ನಿಂದ ಆಗಮಿಸಿದ ಶ್ರೀ ಶೇಖರ ನಾಯ್ಕ್, ನ್ಯೂಯಾರ್ಕಿನಿಂದ ಆಗಮಿಸಿದ…
ಕಲಾ ಸಂಘಟನೆ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿಯ ಆಶ್ರಯದಲ್ಲಿ ಊರಿನ ನುರಿತ ಕಲಾವಿದರ ಕೂಡುವಿಕೆಯಲ್ಲಿ ಸರಣಿ ಯಕ್ಷಗಾನ ತಾಳಮದ್ದಳೆಯು ಜುಲೈ 12ರಂದು ಪ್ರಾರಂಭ ಗೊಂಡಿದ್ದು, ಜು. 20ರವರೆಗೆ ನಗರ ಹಾಗೂ ಉಪನಗರಗಳ ವಿದಧೆಡೆ ನಡೆಯಲಿದೆ. ಬಳಗದ ಅಧ್ಯಕ್ಷ ಸಂಘಟಕ, ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ, ನೇತೃತ್ವದಲ್ಲಿ ಮುಂಬಯಿ ಪ್ರವಾಸದ ಉದ್ಘಾಟನಾ ಸಮಾರಂಭವು ಸಂಜೆ 5:30 ಕ್ಕೆ ಭಾಂಡೂಪ್ ಪಶ್ಚಿಮದ ಶ್ರೀ ಪಿಂಪ್ಲೇಶ್ವರ ಮಹಾದೇವ ಮಂಡ್ಯದ ಸಭಾಂಗಣದಲ್ಲಿ ಶ್ರೀ ಶನೀಶ್ವರ ಮಿತ್ರ ಮಂಡಳಿಯ ಪ್ರಾಯೋಜಕತ್ವದಲ್ಲಿ ದಮಯಂತಿ ಪುನರ್ ಸ್ವಯಂವರ ತಾಳಮದ್ದಳೆಯೊಂದಿಗೆ ನಡೆಯಿತು. ಅತಿಥಿಗಳಾಗಿ ಪಾಲ್ಗೊಂಡ ಕಿಶೋರ್ ಸಾಲ್ಯಾನ್, ಸಿ. ಲಕ್ಷ್ಮಣ್, ನವೀನ್ ಅಂಚನ್ ಕಾರ್ಕಳ ಅವರನ್ನು ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ ಪುಷ್ಪಗುಚ್ಛ ಸ್ಮರಣಿಕೆಯನ್ನಿತ್ತು ಗೌರವಿಸಿದರು. ಅರ್ಥದಾರಿಗಳಾಗಿ ಊರಿನ ನುರಿತ ಕಲಾವಿದರಾದ ಹಿಮ್ಮೇಳದಲ್ಲಿ ಭಾಗವತರಾಗಿ ಭರತ್ ಶೆಟ್ಟಿ ಸಿದ್ಧಕಟ್ಟೆ, ಚೆಂಡೆಯಲ್ಲಿ ಅದ್ವೈತ್ ಕನ್ಯಾನ, ಮದ್ದಳೆಯಲ್ಲಿ ಪ್ರಶಾಂತ್ ಶೆಟ್ಟಿ ವಗೆನಾಡು, ಮುಮ್ಮೇಳದಲ್ಲಿ ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಹರೀಶ್ ಭಟ್ ಬೊಳಂತಿಮೊಗರು, ಪ್ರಸಾದ್ ಸವಣೂರು,…
ಮೂಡುಬಿದಿರೆ: ನ್ಯಾಷನಲ್ ಕ್ಯಾಡೆಟ್ ಕಾರ್ಪ್ಸ್ನ (ಎನ್ಸಿಸಿ) ೨೧ ಕರ್ನಾಟಕ ಬೆಟಾಲಿಯಾನ್ನಿಂದ ಆಳ್ವಾಸ್ನ ವಿದ್ಯಾಗಿರಿಯ ಆವರಣದಲ್ಲಿ ೧೦ ದಿನಗಳ ಸಂಯೋಜಿತ ವಾರ್ಷಿಕ ತರಬೇತಿ ಶಿಬಿರ ನಡೆಯಿತು. ಮಂಗಳೂರಿನ ಎನ್ಸಿಸಿ ಸಮೂಹದ ಮುಖ್ಯ ಕಛೇರಿಯ ವ್ಯಾಪ್ತಿಗೊಳಪಟ್ಟ ವಿವಿಧ ಬ್ಯಾಟಾಲಿಯನ್ಗಳಿಂದ ೫೯೮ ಎನ್ಸಿಸಿ ಕೆಡೆಟ್ಗಳು ಭಾಗವಹಿಸಿದ್ದರು. ಈ ಶಿಬಿರವು ಮೈಸೂರಿನಲ್ಲಿ ನಡೆಯಲಿರುವ ಥಲ್ ಸೇನಾ ಸ್ಪರ್ಧೆಗೆ ಎನ್ಸಿಸಿ ಕೆಡೆಟ್ಗಳನ್ನು ತರಬೇತಿಗೊಳಿಸುವ ಉದ್ದೇಶವನ್ನು ಹೊಂದಿತ್ತು. ಸುಮಾರು ೧೩೩ ಕೆಡೆಟ್ಗಳಿಗೆ ಫೈರಿಂಗ್, ಬ್ಯಾಟಲ್ ಕ್ರಾಫ್ಟ್, ಡ್ರಿಲ್, ನಕ್ಷೆ ಓದುವಿಕೆ, ರೈಫಲ್ನ ನಿರ್ವಹಣೆ, ಫೀಲ್ಡ್ ಕ್ರಾಫ್ಟ್, ಮತ್ತು ಮಿಲಿಟರಿ ವಿಷಯಗಳಲ್ಲಿ ತರಬೇತಿ ನೀಡಲಾಯಿತು, ಮಂಗಳೂರಿನ ಎನ್ಸಿಸಿ ಸಮೂಹದ ಮುಖ್ಯ ಕಛೇರಿಯಿಂದ ಒಟ್ಟು ೮೩ ಕೆಡೆಟ್ಗಳು ಮೈಸೂರಿನಲ್ಲಿ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಮಂಗಳೂರಿನ ಎನ್ಸಿಸಿ ಸಮೂಹದ ಗ್ರೂಪ್ ಕಮಾಂಡರ್ ಕರ್ನಲ್ ವಿರಾಜ್ ಕಾಮತ್ ಮಾತನಾಡಿ, ಶಿಬಿರಗಳಲ್ಲಿ ಕಲಿಯುವ ಶಿಸ್ತು, ದೇಶಭಕ್ತಿ, ತಾಳ್ಮೆ ಮತ್ತು ಒಗ್ಗಟ್ಟು ಉತ್ತಮ ವ್ಯಕ್ತಿತ್ವವಿಕಾಸಕ್ಕೆ ನೆರವಾಗುತ್ತದೆ ಎಂದರು. ಶಿಸ್ತು ಮತ್ತು ಸ್ವಚ್ಛತೆ ಕೇವಲ ಶಿಬಿರದ ಪರಿಸರದಲ್ಲಷ್ಟೆ ಅಲ್ಲ, ದಿನ…
ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಶಾಖೆಯನ್ನು ಬೆಳ್ಮಣ್ ಸೂರಜ್ ಹಿಲ್ಸ್ ವನದುರ್ಗ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜುಲೈ 13ನೇ ಆದಿತ್ಯವಾರದಂದು ಬೆಳ್ಮಣ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೇದಮೂರ್ತಿ ವಿಘ್ನೇಶ್ ಭಟ್ ಅವರು ಉದ್ಘಾಟಿಸಿದರು. ಮುಂಬಯಿ ಕೃಷ್ಣ ಪ್ಯಾಲೇಸ್ ಹೋಟೆಲ್ ನ ಆಡಳಿತ ನಿರ್ದೇಶಕ ಕೃಷ್ಣ ವೈ ಶೆಟ್ಟಿ ಹಾಗೂ ವಿ.ಕೆ ಗ್ರೂಪ್ ನ ಸಿಎಂಡಿ ಕರುಣಾಕರ ಎಂ ಶೆಟ್ಟಿಯವರು ದೀಪ ಬೆಳಗಿಸಿ ನೂತನ ಶಾಖೆಗೆ ಶುಭ ಕೋರಿದರು. ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ ಈಶ ವಿಠಲ ದಾಸ ಸ್ವಾಮೀಜಿಯವರು ಹಾಗೂ ಬೆಳ್ಮಣ್ ಚರ್ಚಿನ ಧರ್ಮ ಗುರುಗಳಾದ ರೇ ಫಾ. ಫೆಡರಿಕ್ ಮಸ್ಕರೇನಸ್ ಆಶೀರ್ವಚನ ನೀಡಿದರು. ಸೊಸೈಟಿಯ ಅಧ್ಯಕ್ಷ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಬಿ ಜಯಕರ ಶೆಟ್ಟಿ ಇಂದ್ರಾಳಿ ಅವರು ಭದ್ರತಾ ಕೊಠಡಿಯ ಉದ್ಘಾಟನೆ ಹಾಗೂ ಸುಹಾಸ್ ಹೆಗ್ಡೆ ನಂದಳಿಕೆ ಅವರು ಗಣಕಯಂತ್ರ ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಯಾಗಿ…
ಬಂಟರ ಸಂಘ ಮುಂಬಯಿ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಆಶ್ರಯದಲ್ಲಿ ರಕ್ತದಾನ ಶಿಬಿರ ಜುಲೈ 6ರಂದು ಎಸ್.ಎಂ ಶೆಟ್ಟಿ ಶಾಲೆ ಪೊವಾಯಿ ಇಲ್ಲಿ ನಡೆಯಿತು. ರಕ್ತದಾನ ಶಿಬಿರವನ್ನು ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ, ಉಪಾಧ್ಯಕ್ಷ ಮಹೇಶ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್.ಕೆ ಶೆಟ್ಟಿ, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸೂರಜ್ ಶೆಟ್ಟಿ, ಪ್ರಸಿದ್ಧ ವೈದ್ಯ ಡಾ. ಸತ್ಯಪ್ರಕಾಶ್ ಶೆಟ್ಟಿ, ವೈದ್ಯಕೀಯ ಸಮಿತಿಯ ಕಾರ್ಯಾಧ್ಯಕ್ಷ ಡಾ. ಸ್ವರೂಪ್ ಹೆಗ್ಡೆ ಮತ್ತು ಇತರ ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಾತನಾಡುತ್ತಾ, ಬಂಟರ ಸಂಘಗಳ ಮೂಲಕ ಇಂತಹ ಹೆಚ್ಚಿನ ಸಮಾಜಸೇವಾ ಕಾರ್ಯಕ್ರಮಗಳು ನಡೆಯುತ್ತಿದ್ದು, ಪ್ರತಿ ವರ್ಷ 5000 ಯೂನಿಟ್ಗಳವರೆಗೆ ಸಂಗ್ರಹಿಸುವ ಕಾರ್ಯವನ್ನು ಮಾಡುತ್ತಿದ್ದೇವೆ. ಪ್ರತಿಯೊಬ್ಬರೂ ರಕ್ತದಾನ ಮಾಡುವ ಕ್ರಮವನ್ನು ರೂಡಿಸಿಕೊಳ್ಳಬೇಕು. ಅದರಿಂದ ಆರೋಗ್ಯಕ್ಕೂ ಒಳ್ಳೆಯದು ಎಂದು ನುಡಿದರು. ಡಾ. ಸತ್ಯಪ್ರಕಾಶ್ ಶೆಟ್ಟಿ ಮಾತನಾಡುತ್ತಾ,…
ಪುತ್ತೂರು ತಾಲೂಕು ಬಂಟರ ಸಂಘದಿಂದ ‘ಪೆರ್ಮೆದ ಬಂಟೆರ್’ : ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ
ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಮಹಿಳಾ ಬಂಟರ ವಿಭಾಗ ಯುವ ಬಂಟರ ವಿಭಾಗ, ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಜುಲೈ 12 ರಂದು ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ‘ಪೆರ್ಮೆದ ಬಂಟೆರ್’ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ನಡೆಯಿತು. ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿ.ಎ ಅಶೋಕ್ ಶೆಟ್ಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬಂಟ ಸಮುದಾಯದವರು ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಇದು ನಿಜಕ್ಕೂ ಸಮಾಜಕ್ಕೆ ಹೆಮ್ಮೆ ತರುವ ವಿಚಾರವಾಗಿದೆ. ಬಂಟ ಸಮಾಜ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಯಾರೂ ಶಿಕ್ಷಣದಿಂದ ವಂಚಿತರಾಗದೆ ಉತ್ತಮ ಶಿಕ್ಷಣ ಪಡೆಯಬೇಕೆಂಬ ಉದ್ದೇಶದಿಂದ ಬೆಂಗಳೂರು ಬಂಟರ ಸಂಘದಿಂದ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ. ನಮ್ಮ ಸಮಾಜದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಬೇಕು. ಅದಕ್ಕೆ ಬೇಕಾದ ಎಲ್ಲಾ…
ಬಂಟರ ಸಂಘಕ್ಕೆ ಸಮಾಜದಲ್ಲಿ ಉನ್ನತ ಗೌರವವಿದೆ. ಬಂಟ ಸಮಾಜ ಜಾತ್ಯಾತೀತ ಚಿಂತನೆಯಿಂದ ಕೂಡಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಆ ಚಿಂತನೆಯ ಮೂಲಕ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಹೇಳಿದರು. ಅವರು ಗುರುಪುರ ಬಂಟರ ಮಾತೃ ಸಂಘ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಹಾಗೂ ಬೆಂಗಳೂರು ಬಂಟರ ಸಂಘ ಇದರ ಸಹಯೋಗದೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಿಲಿಕುಲ ಮೂಡುಶೆಡ್ಡೆಯಲ್ಲಿ ಜರಗಿದ ಗುರುಪುರ ಬಂಟರ ಮಾತೃ ಸಂಘದ 12ನೇ ವಾರ್ಷಿಕ ಸಮಾವೇಶ, ಮಹಾಸಭೆ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿವೇತನ ವಿತರಣೆ, ವಿದ್ಯಾರ್ಥಿ ಪುರಸ್ಕಾರ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಶಿಕ್ಷಣ ಎಂಬುದು ಪ್ರತಿಭೆಗೆ ಬೇಕಾದ ವಸ್ತು. ಅದನ್ನು ಕಾಪಾಡುವುದು ಮುಖ್ಯ. ಶಿಕ್ಷಣದೊಟ್ಟಿಗೆ ಸಂಸ್ಕೃತಿ ರಂಗ ಉಳಿಸುವ ಕಾರ್ಯ ಆಗಬೇಕು ಎಂದರು. ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ…
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರು ಇಲ್ಲಿ ಯಕ್ಷ ಕಲಾರಂಗ (ರಿ) ಕಾರ್ಕಳ, ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಉದ್ಘಾಟನಾ ಸಮಾರಂಭ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಎಸ್ ಕೋಟ್ಯಾನ್ ರವರು ವಹಿಸಿಕೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಯಕ್ಷ ಕಲಾರಂಗದ ಕಾರ್ಕಳ ಘಟಕದ ಅಧ್ಯಕ್ಷರಾದ ವಿಜಯ ಶೆಟ್ಟಿ, ಸಂಚಾಲಕರಾದ ಪದ್ಮನಾಭ ಗೌಡ, ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಘಟಕದ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಯಕ್ಷ ಗುರುಗಳಾದ ಶ್ರೀ ಮಹಾವೀರ ಪಾಂಡಿ, ಊರಿನ ಹಿರಿಯರಾದ ಶ್ರೀ ಜಯಕೀರ್ತಿ ಕಡಂಬರು, ನಿವೃತ್ತ ಶಿಕ್ಷಕರಾದ ರಮಾನಾಥ ಶೆಣೈ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮಧ್ವರಾಜ್, ಶಾಲಾ ಹಿತೈಷಿ ಚಂದ್ರರಾಜ ಅತಿಕಾರಿ, ಗೋಪಾಲ ಪೂಜಾರಿ ಗರಡಿಮನೆ, ಪಂಚಾಯತ್ ಸದಸ್ಯರಾದ ಶೇಖರ ಅಂಚನ್, ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರಾದ ಅರುಣ್ ಕುಮಾರ್ ಶೇಟ್ ನಿರ್ವಹಿಸಿ ಶಿಕ್ಷಕರಾದ ಆನಂದ್ ಪೂಜಾರಿ ಸ್ವಾಗತಿಸಿ, ಯಕ್ಷ…
ಸುರತ್ಕಲ್ ಬಂಟರ ಸಂಘದ ಆಶ್ತಯದಲ್ಲಿ ನಡೆಯುವ ಯಕ್ಷಸಿರಿಯ ಯಕ್ಷ ಶಿಕ್ಷಣದ ಯಕ್ಷ ಗುರುಗಳಾದ ರಾಕೇಶ್ ರೈ ಅಡ್ಕ ಅವರಿಗೆ ಗುರುವಂದನೆ ಕಾರ್ಯಕ್ರಮ ಬಂಟರ ಭವನದಲ್ಲಿ ನಡೆಯಿತು. ಮತ್ತೋರ್ವ ಗುರುಗಳಾದ ವಿದ್ಯಾಭೂಷಣ್ ಅವರಿಗೂ ಗುರುನಮನಗಳನ್ನು ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಗುರುಗಳ ಆಶೀರ್ವಾದ ಪಡೆದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾದ ಬಾಳ ಜಗನ್ನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ಶುಭ ಹಾರೈಸಿದರು. ಮಹಿಳಾ ವೇದಿಕೆಯ ಅಧ್ಯಕ್ಷೆ ಸರೋಜ ಟಿ ಶೆಟ್ಟಿ, ಯಕ್ಷಸಿರಿ ಸಂಘಟಕಿ ಕವಿತಾ ಪಿ ಶೆಟ್ಟಿ, ಬಂಟರ ಸಂಘ ಹಾಗೂ ಮಹಿಳಾ ವೇದಿಕೆಯ ಪದಾಧಿಕಾರಿಗಳು, ಪೋಷಕರು ಈ ಸಂಧರ್ಭ ಉಪಸ್ಥಿತರಿದ್ದರು.















