Author: admin

ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. 15 ಆಗಸ್ಟ್ 2025ರ ಶುಕ್ರವಾರದಂದು ಪೂರ್ವಾಹ್ನ 10. 00 ಗಂಟೆಗೆ ಸರಿಯಾಗಿ ಕಾಲೇಜಿನ ಸಪ್ತಗಿರಿ ಕ್ಯಾಂಪಸ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ಜರುಗಲಿರುವುದು. ಬಳಿಕ 11.00 ಗಂಟೆಗೆ ಎ.ಎಸ್ ಕಿರಣ್ ಕುಮಾರ್ ರವರಿಂದ From Class Room to Cosmos : Science, Youth and Nation Building  ಎಂಬ ವಿಚಾರದ ಕುರಿತು ವಿದ್ಯಾರ್ಥಿಗಳಿಗೆ CEF inspiro ಎಂಬ ಶೀರ್ಷಿಕೆಯಲ್ಲಿ ಸ್ಪೂರ್ತಿ ಮಾತು ಕಾರ್ಯಕ್ರಮ ನಡೆಯಲಿರುವುದು. ನಂತರ ಜೀ ಸರಿಗಮಪ ಮತ್ತು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಖ್ಯಾತಿಯ ಶ್ರೀ ಯಶವಂತ ಎಂ.ಜಿ ಹಾಗೂ ತಂಡದವರಿಂದ ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿರುವುದು.

Read More

ಗಣಿತನಗರ : ವ್ಯಕ್ತಿತ್ವ ನಮ್ಮ ನೈತಿಕತೆಯ ಮೇಲೆ ನಿಂತಿದೆ. ನಡೆ-ನುಡಿ-ನಡವಳಿಕೆಯಿಂದ ಚಾರಿತ್ರö್ಯ ನಿರ್ಮಾಣ ಸಾಧ್ಯ. ನಮ್ಮಲ್ಲಿ ನಮಗೆ ನಂಬಿಕೆಯಿರಲಿ ಎಂದು ಜೆ.ಸಿ.ಐ ರಾಷ್ಟ್ರೀಯ ತರಬೇತುದಾರ ಶ್ರೀ ದೀಪಕ್ ರಾಜ್ ಹೇಳಿದರು. ಅವರು ಜೆ.ಸಿ.ಐ ಕಾರ್ಕಳದ ಸಹಯೋಗದೊಂದಿಗೆ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜೆ.ಸಿ.ಐ ಕಾರ್ಕಳದ ಅಧ್ಯಕ್ಷೆ ಶ್ವೇತಾ ಎಸ್. ಜೈನ್, ಗ್ರೋತ್ ಮತ್ತು ಡೆವಲಪ್ ಮೆಂಟ್ ಝೋನ್ ಡೈರೆಕ್ಟರ್ ಶ್ರೀ ವಿಘ್ನೇಶ್, ಕಾರ್ಯದರ್ಶಿ ಸುಶ್ಮಿತಾ ರಾವ್, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲ ಶ್ರೀ ಸಾಹಿತ್ಯ, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸುಮಿತ್ರಾ ಹಾಗೂ ಎನ್.ಎಸ್.ಎಸ್ ಘಟಕಾಧಿಕಾರಿ ಶ್ರೀ ಶೈಲೇಶ್ ಶೆಟ್ಟಿ ಉಪಸ್ಥಿತರಿದ್ದರು. ಉಪನ್ಯಾಸಕಿ ಕು.ಅನಿಶಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ…

Read More

ಮೂಡುಬಿದಿರೆ: ಇಂದಿನ ಯುಗದಲ್ಲಿ ಕೃಷಿಯನ್ನು ವೃತ್ತಿಯಾಗಿ ಆಯ್ಕೆ ಮಾಡುವುದು ಕೇವಲ ಪರಂಪರೆಯ ನಿರ್ವಹಣೆಯಲ್ಲ, ಅದೊಂದು ಜಾಣ ಆಯ್ಕೆ ಎಂದು ಸಾವಯವ ಕೃಷಿಕ ಹಾಗೂ ಶಾಸಕ ರಾಜೇಶ್ ನಾಯ್ಕ್ ನುಡಿದರು. ಅವರು ಆಳ್ವಾಸ್ ಮ್ಯಾನೆಜ್ಮೆಂಟ್ ವಿಭಾಗದ ಟ್ರೆöÊಬ್ಲೇಜ್ ವೇದಿಕೆ ಶುಕ್ರವಾರ, ಕುವೆಂಪು ಹಾಲ್‌ನಲ್ಲಿ ಆಯೋಜಿಸಿದ್ದ ವಿಶೇಷ ಅತಿಥಿ ಉಪನ್ಯಾಸ- ‘ನೆಲದಿಂದ ನೆಲೆವರೆಗೆ: ಕೃಷಿ ಉದ್ಯಮಿಯ ಯಶೋಗಾಥೆ’ ಕರ‍್ಯಕ್ರಮದಲ್ಲಿ ಮಾತನಾಡಿದರು. ಕೃಷಿಯಲ್ಲಿ ವರ್ಷದಲ್ಲಿ ಕೇವಲ ಎರಡು ತಿಂಗಳು ಶ್ರಮಿಸಿದರೆ, ಉಳಿದ ಹತ್ತು ತಿಂಗಳು ಇತರ ಚಟುವಟಿಕೆಗಳಿಗೆ ಮೀಸಲಿಡಲು ಸಾಧ್ಯ. ಎಲ್ಲಾ ವೃತ್ತಿಗಳಿಗಿಂತಲೂ ಕೃಷಿಯೇ ಹೆಚ್ಚು ಸಂತಸ ಮತ್ತು ತೃಪ್ತಿ ನೀಡುವ ಉದ್ಯೋಗವಾಗಿದೆ ಎಂದು ಅವರು ಹೇಳಿದರು. ಬಂಜರು ಭೂಮಿಯನ್ನು ಸಮೃದ್ಧ ಕೃಷಿಭೂಮಿಯಾಗಿಸಿದ ಪರಿ ಮಂಗಳೂರಿನ ಸಮೀಪ ಒಡ್ಡೂರಿನಲ್ಲಿರುವ 150 ಎಕರೆ ಬಂಜರು ಭೂಮಿಯನ್ನು ಸಾವಯವ ಕೃಷಿ ತೋಟವನ್ನಾಗಿ ಪರಿವರ್ತಿಸಿದ ಪರಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊ0ಡರು. ಹಲವಾರು ಸವಾಲುಗಳನ್ನು ಎದುರಿಸಿದರೂ, ನಿರಂತರ ಶ್ರಮ, ಹೋರಾಟ ಮನೋಭಾವ ಮತ್ತು ಸದಾ ಆಶಾವಾದೊಂದಿಗಿನ ಮನಸ್ಥಿತಿಯಿಂದ ಈ ಸಾಧನೆ ಸಾಧ್ಯವಾಯಿತು ಎಂದರು.…

Read More

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು "ಕ್ರಿಯೇಟಿವ್ ಪುಸ್ತಕ ಧಾರೆ – 2025" ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚಿತ್ರ ನಿರ್ದೇಶಕರು ಹಾಗೂ ಖ್ಯಾತ ಸಾಹಿತಿಗಳಾದ ಡಾ. ನಾಗತಿಹಳ್ಳಿ ಚಂದ್ರಶೇಖರ್, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಇವರು ಆಗಮಿಸಲಿದ್ದಾರೆ. ಜೊತೆಗೆ ಶ್ರೀ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಸಾಹಿತಿಗಳು ಮತ್ತು ಅಧ್ಯಕ್ಷರು, ಕ.ಸಾ.ಪ ಕಾರ್ಕಳ ತಾಲೂಕು, ಡಾ. ಪ್ರದೀಪಕುಮಾರ ಹೆಬ್ರಿ, ಮಹಾಕಾವ್ಯಗಳ ಲೇಖಕರು, ಮಂಡ್ಯ, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು ಘನ ಉಪಸ್ಥಿತಿ ವಹಿಸಲಿದ್ದಾರೆ. ಅನಾವರಣಗೊಳ್ಳಲಿರುವ ಕೃತಿಗಳು ಯಾತ್ರೆ – ಚಂದ್ರಕಾಂತ ಪೋಕಳೆ ವಿಜ್ಞಾನ ಕೌತುಕಗಳ ಮಹಾಯಾನ – ಎಲ್.ಪಿ ಕುಲಕರ್ಣಿ ಹರ್ಷ ರಾಗ – ಪೌಝಿಯಾ ಸಲೀಂ ಹಿತಶತ್ರು – ಪದ್ಮಲತಾ ಮೋಹನ್ ಪುಟ್ಟ ದೇವರ ಕಣ್ಣೀರು – ಸದಾಶಿವ ಸೊರಟೂರು ಬದುಕು…

Read More

ಉಡುಪಿ : ವಿದ್ಯಾರ್ಥಿಗಳ ಏಳಿಗೆಗೆ ಶ್ರಮಿಸಿದ ಶಿಕ್ಷಕರ ಶ್ರಮ ಎಂದೂ ವ್ಯರ್ಥವಾಗದು. ಅಂತಹ ಕಾರ್ಯದಲ್ಲಿ ತೊಡಗಿಸಿಕೊಂಡ ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ಸಂಘದ ಕಾರ್ಯ ಶ್ಲಾಘನೀಯ ಎಂದು ಮಾಹೆಯ ಪ್ರಿನ್ಸಿಪಾಲ್ ಆಫಿಸರ್ ಡಾ. ಆದಿತ್ಯ ಮೋಹನ್ ಜಾಧವ್ ಹೇಳಿದರು. ಮಾಹೆ ಮಣಿಪಾಲದಲ್ಲಿ ಆಗಸ್ಟ್ ೫, ೨೦೨೫ರಂದು ಜರುಗಿದ ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸ0ಘದ ವಾರ್ಷಿಕ ಸಭೆ ಹಾಗೂ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಾಹೆ ಮಣಿಪಾಲದಲ್ಲಿ ಕೇವಲ ವೈದ್ಯಕೀಯ, ಇಂಜಿನಿಯರಿ0ಗ್ ಮಾತ್ರವಲ್ಲದೇ ಇತರ ನೂರಾರು ಪದವಿ- ವೃತ್ತಿಪರ ಕೋರ್ಸುಗಳಿಗೆ ಅವಕಾಶವಿದೆ ಎಂದರು. ಸಭೆಯಲ್ಲಿ ಉಪಸ್ಥಿತರಿದ್ದ ಮಾಹೆಯ ಡಬ್ಲ್ಯು.ಜಿ.ಎಸ್.ಎಚ್.ಎ ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಸತೀಶ್ ಜಯರಾಮ್ ಇವರು ವಿದ್ಯಾರ್ಥಿಗಳಿಗೆ ಹೋಟೆಲ್ ಮ್ಯಾನೇಜ್ ಮೆಂಟ್ ಕೋರ್ಸ್ನ ಅವಕಾಶಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.…

Read More

ಮಂತ್ರಾಲಯದ ಪವಿತ್ರ ಭೂಮಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಭಕ್ತರು ಹಾರೈಸಿದ್ದ ಮಹತ್ವದ ಯೋಜನೆ ಸಾಕಾರಗೊಂಡಿದೆ. ಇಲ್ಲಿಗೆ ತೀರ್ಥಸ್ನಾನಕ್ಕಾಗಿ ಅಗತ್ಯವಾಗಿದ್ದ ‘ಪರಿಮಳ ತೀರ್ಥಂ’ ಪುಷ್ಕರಣಿ ಇಲ್ಲದ ಕೊರತೆಯನ್ನು ನಿವಾರಿಸುವಂತೆ, ಅಲಂಕೃತವಾಗಿ ಸೌಕರ್ಯ ಸಮೇತ ನಿರ್ಮಿಸಲ್ಪಟ್ಟ ಈ ಅದ್ಭುತ ಪುಷ್ಕರಣಿ ಉದ್ಘಾಟನೆಗೊಂಡಿತು. ಈ ಮಹತ್ತಾದ ಸೇವೆಯನ್ನು ಮಂತ್ರಾಲಯದ ಶ್ರೀ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಜಿಯವರೊಂದಿಗೆ, ಡಾ| ಕೆ. ಪ್ರಕಾಶ್ ಶೆಟ್ಟಿ ಹಾಗೂ ಅವರ ಪತ್ನಿ ಅಶಾ ಪ್ರಕಾಶ್ ಶೆಟ್ಟಿ ಅವರು ತಮ್ಮ ಹೃದಯಪೂರ್ವಕ ದೇಣಿಗೆಯಿಂದ ನೆರವೇರಿಸಿದ್ದಾರೆ. ಸುಮಾರು 4 ಕೋಟಿಗಳ ವೆಚ್ಚದಲ್ಲಿ ರೂಪುಗೊಂಡಿರುವ ಈ ಯೋಜನೆ, ಭಕ್ತರ ಆತ್ಮಶಾಂತಿ ಮತ್ತು ಸೌಕರ್ಯಕ್ಕಾಗಿ ನಿರ್ಮಿಸಲ್ಪಟ್ಟ ಒಂದು ಅನನ್ಯ ಕಾಣಿಕೆ. ಶ್ರೀ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಜಿಯವರ ಸಾನಿಧ್ಯದಲ್ಲಿ ಡಾ| ಪ್ರಕಾಶ್ ಶೆಟ್ಟಿ ಮತ್ತು ಅಶಾ ಪ್ರಕಾಶ್ ಶೆಟ್ಟಿ ದಂಪತಿಗಳು ಸ್ವತಃ ಉದ್ಘಾಟನೆ ನೆರವೇರಿಸಿ, ಭಕ್ತ ಸಮುದಾಯಕ್ಕೆ ಈ ಮಹಾನ್ ಕಾಣಿಕೆಯನ್ನು ಅರ್ಪಿಸಿದರು. ಮಂತ್ರಾಲಯದ ಪವಿತ್ರ ವಾತಾವರಣಕ್ಕೆ ಹೊಸ…

Read More

ಬಂಟರ ಯಾನೆ ನಾಡವರ ಮಾತೃಸಂಘ ಮತ್ತು ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ ಹಾಸ್ಟೇಲ್ ಮಂಗಳೂರು ಇದರ ಆಶ್ರಯದಲ್ಲಿ ಆಗೋಸ್ಟ್ 27 ರಿಂದ 29 ರ ವರೆಗೆ ನಡೆಯುವ 19 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗದ ಆಮಂತ್ರಣ ಪತ್ರಿಕೆ ಬಿಡಗಡೆ ಸಮಾರಂಭವು ಬಂಟ್ಸ್ ಹಾಸ್ಟೇಲ್ ನಲ್ಲಿರುವ ಗೀತಾ ಎಸ್ ಎಂ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಕೊಡಿಯಾಲ್ ಗುತ್ತು ಅಜಿತ್ ಕುಮಾರ್ ರೈ ವಹಿಸಿದ್ದರು. ಎಲ್ಲಾ ಜಾತಿ ಮತ ಬಾಂಧವರ ಸಹಕಾರದಿಂದ ಶ್ರದ್ದಾ ಭಕ್ತಿಯೊಂದಿಗೆ ನಡೆಯುವ ದೇವತಾ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಕೆಲವು ಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ನೀಡಲಾಗಿದೆ. ಇನ್ನು ಕೆಲವರು ದೇವರ ಕೆಲಸ ಎಂದು ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ…

Read More

ಬಂಟರ ಸಂಘ ಕಟಪಾಡಿ ವತಿಯಿಂದ ಆಟಿಡ್ ಒಂಜಿ ದಿನ ಕಾರ್ಯಕ್ರಮವು ಕಟಪಾಡಿ ಎಸ್ ವಿ ಎಸ್ ಕಾಲೇಜು ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ದಯಾನಂದ ಆರ್. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ದೀಪ ಬೆಳಗಿಸಿ ಚಾಲನೆಯನ್ನು ನೀಡಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನ್ಯಾಯವಾದಿ ಮಟ್ಟಾರು ರತ್ನಾಕರ್ ಹೆಗ್ಡೆ ಮಾತನಾಡಿ, ಪೂರ್ವಜರ ಆಟಿಯ ದಿನಗಳು ಇಂದು ಆಚರಿಸುವ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿದ್ದ ಪಡುಬಿದ್ರಿ ಆಸ್ಟಿನ್ ಸೆಜ್ ಸೀನಿಯರ್ ಜನರಲ್ ಮ್ಯಾನೇಜರ್, ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ. ಶೆಟ್ಟಿ ಪಡುಬಿದ್ರಿ, ಉಡುಪಿ ಶ್ರೀ ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಸುರೇಶ್ ಶೆಟ್ಟಿ ಶುಭ ಹಾರೈಸಿದರು. ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರತಿಭಾವಂತೆ ಸುಹನಾ ಶೆಟ್ಟಿ ಹಾಗೂ ಹಲವು ಸಾಧಕರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಹಿರಿಯ ವೈದ್ಯ ಡಾ.…

Read More

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ಕಳವಳ ಮೂಡಿಸುತ್ತಿದೆ. ಧರ್ಮಸ್ಥಳ ಎನ್ನುವುದು ಕೇವಲ ಒಂದು ಊರಲ್ಲ, ಅದು ನಮ್ಮ ನಂಬಿಕೆ, ಅದು ನಮ್ಮ ಭಕ್ತಿಯ ಕ್ಷೇತ್ರ. ಪರಂಪರೆ, ಅಲ್ಲಿಗೆ ನಡೆದುಕೊಳ್ಳುವುದು ನಮ್ಮ ಪೂರ್ವ ಹಿರೀಕರಿಂದ ಬಂದ ಪರಂಪರೆ. “ಎಸ್‌ಐಟಿ ತನಿಖೆ” ನೆಪದಲ್ಲಿ ಶ್ರದ್ಧಾ ಕೇಂದ್ರದ ಮೂಲ ಸ್ಥಾನದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಗೊಂದಲ ಸೃಷ್ಟಿಸುವ ದುಷ್ಕೃತ್ಯ ಖಂಡನೀಯ. ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ನಡೆಯುತ್ತಿದೆ. ಸರ್ಕಾರವಾಗಲಿ, ಸಚಿವರಾಗಲಿ, ಎಸ್‌ಐಟಿ ಮುಖ್ಯಸ್ಥರಾಗಲಿ ಬುರುಡೆ ಪ್ರಕರಣದ ಕುರಿತು ಇದುವರೆಗೂ ಅಧಿಕೃತ ಮಾಹಿತಿ ಸಾರ್ವಜನಿಕವಾಗಿ ಹಂಚಿಕೊಂಡಿಲ್ಲ. ಹೀಗಿರುವಾಗ ಕೆಲವೊಂದು ಮಾಧ್ಯಮಗಳು, ಯೂಟ್ಯೂಬರ್‌ಗಳು “ಹೆಣದ ರಾಶಿ, ಮೂಳೆಯ ರಾಶಿ, 10 ಹೆಣ, ನೂರಾರು ಶವ, ಧರ್ಮಸ್ಥಳ ಗಢಗಢ, 13 ನೇ ಗುಂಡಿಯಲ್ಲಿ ಹತ್ತಾರು ಶವ, ಧರ್ಮಸ್ಥಳ ಕರ್ಮಸ್ಥಳ, ದೇವಸ್ಥಾನಕ್ಕೆ ಬರಬೇಡಿ ಕೊಲೆಯಾಗುತ್ತೀರಿ, ಅತ್ಯಾಚಾರವಾಗುತ್ತೀರಿ, ಹೆಂಗಸಿನ ಶವ ಪತ್ತೆ, ಬಾಲಕಿಯ ಶವ ಪತ್ತೆ” ಎಂದೆಲ್ಲಾ ನಿರಂತರವಾಗಿ ಸುಳ್ಳು ಮಾಹಿತಿ ಪಸರಿಸುವ ಮೂಲಕ ನಮ್ಮ ಧಾರ್ಮಿಕ ನಂಬಿಕೆಯನ್ನು ಕೆಡಿಸುವ ಕೆಲಸಕ್ಕೆ ಕೈ…

Read More

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಕಾತ್ರಜ್ ಪುಣೆ ಆವರಣದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಆಗಸ್ಟ್ 9 ರಂದು ನಡೆಯಲಿದೆ. ಶ್ರೀ ಸತ್ಯನಾರಾಯಣ ಪೂಜೆಯು ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ನೇತೃತ್ವದಲ್ಲಿ ಅಪರಾಹ್ನ 4ಕ್ಕೆ ಆರಂಭಗೊಳ್ಳಲಿದ್ದು, 5.30ಕ್ಕೆ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6ರಿಂದ ದೇವಸ್ಥಾನದ ರಂಗಮಂಟಪದಲ್ಲಿ ಪ್ರವೀಣ್ ಶೆಟ್ಟಿ ಪುತ್ತೂರು ಸಾರಥ್ಯದ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಕಲಾವಿದರು ಮತ್ತು ಊರ ಪರವೂರ ಹೆಸರಾಂತ ಕಲಾವಿದರ ಕೂಡುವಿಕೆಯಲ್ಲಿ ಸ್ವಾಮಿ ಕೊರಗಜ್ಜ ಎಂಬ ತುಳು ಪೌರಾಣಿಕ ಪ್ರಸಂಗ ಪ್ರದರ್ಶನಗೊಳ್ಳಲಿದೆ. ಯಕ್ಷಗಾನದ ಬಳಿಕ ಮಹಾಪ್ರಸಾದ ರೂಪದಲ್ಲಿ ಅನ್ನ ಸಂತರ್ಪಣೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸತ್ಯನಾರಾಯಣ ದೇವರು, ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷ ಸುಭಾಷ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಅಧ್ಯಕ್ಷ…

Read More