Author: admin
ಉಡುಪಿ : ವಿದ್ಯಾರ್ಥಿಗಳ ಏಳಿಗೆಗೆ ಶ್ರಮಿಸಿದ ಶಿಕ್ಷಕರ ಶ್ರಮ ಎಂದೂ ವ್ಯರ್ಥವಾಗದು. ಅಂತಹ ಕಾರ್ಯದಲ್ಲಿ ತೊಡಗಿಸಿಕೊಂಡ ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ಸಂಘದ ಕಾರ್ಯ ಶ್ಲಾಘನೀಯ ಎಂದು ಮಾಹೆಯ ಪ್ರಿನ್ಸಿಪಾಲ್ ಆಫಿಸರ್ ಡಾ. ಆದಿತ್ಯ ಮೋಹನ್ ಜಾಧವ್ ಹೇಳಿದರು. ಮಾಹೆ ಮಣಿಪಾಲದಲ್ಲಿ ಆಗಸ್ಟ್ ೫, ೨೦೨೫ರಂದು ಜರುಗಿದ ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸ0ಘದ ವಾರ್ಷಿಕ ಸಭೆ ಹಾಗೂ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಾಹೆ ಮಣಿಪಾಲದಲ್ಲಿ ಕೇವಲ ವೈದ್ಯಕೀಯ, ಇಂಜಿನಿಯರಿ0ಗ್ ಮಾತ್ರವಲ್ಲದೇ ಇತರ ನೂರಾರು ಪದವಿ- ವೃತ್ತಿಪರ ಕೋರ್ಸುಗಳಿಗೆ ಅವಕಾಶವಿದೆ ಎಂದರು. ಸಭೆಯಲ್ಲಿ ಉಪಸ್ಥಿತರಿದ್ದ ಮಾಹೆಯ ಡಬ್ಲ್ಯು.ಜಿ.ಎಸ್.ಎಚ್.ಎ ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಸತೀಶ್ ಜಯರಾಮ್ ಇವರು ವಿದ್ಯಾರ್ಥಿಗಳಿಗೆ ಹೋಟೆಲ್ ಮ್ಯಾನೇಜ್ ಮೆಂಟ್ ಕೋರ್ಸ್ನ ಅವಕಾಶಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.…
ಮಂತ್ರಾಲಯದಲ್ಲಿ ‘ಪರಿಮಳ ತೀರ್ಥಂ’ ಪುಷ್ಕರಣಿ ಉದ್ಘಾಟನೆ : ಡಾ| ಕೆ. ಪ್ರಕಾಶ್ ಶೆಟ್ಟಿ ದಂಪತಿಗಳಿಂದ 4 ಕೋಟಿಗಳ ಮಹಾದಾನ
ಮಂತ್ರಾಲಯದ ಪವಿತ್ರ ಭೂಮಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಭಕ್ತರು ಹಾರೈಸಿದ್ದ ಮಹತ್ವದ ಯೋಜನೆ ಸಾಕಾರಗೊಂಡಿದೆ. ಇಲ್ಲಿಗೆ ತೀರ್ಥಸ್ನಾನಕ್ಕಾಗಿ ಅಗತ್ಯವಾಗಿದ್ದ ‘ಪರಿಮಳ ತೀರ್ಥಂ’ ಪುಷ್ಕರಣಿ ಇಲ್ಲದ ಕೊರತೆಯನ್ನು ನಿವಾರಿಸುವಂತೆ, ಅಲಂಕೃತವಾಗಿ ಸೌಕರ್ಯ ಸಮೇತ ನಿರ್ಮಿಸಲ್ಪಟ್ಟ ಈ ಅದ್ಭುತ ಪುಷ್ಕರಣಿ ಉದ್ಘಾಟನೆಗೊಂಡಿತು. ಈ ಮಹತ್ತಾದ ಸೇವೆಯನ್ನು ಮಂತ್ರಾಲಯದ ಶ್ರೀ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಜಿಯವರೊಂದಿಗೆ, ಡಾ| ಕೆ. ಪ್ರಕಾಶ್ ಶೆಟ್ಟಿ ಹಾಗೂ ಅವರ ಪತ್ನಿ ಅಶಾ ಪ್ರಕಾಶ್ ಶೆಟ್ಟಿ ಅವರು ತಮ್ಮ ಹೃದಯಪೂರ್ವಕ ದೇಣಿಗೆಯಿಂದ ನೆರವೇರಿಸಿದ್ದಾರೆ. ಸುಮಾರು 4 ಕೋಟಿಗಳ ವೆಚ್ಚದಲ್ಲಿ ರೂಪುಗೊಂಡಿರುವ ಈ ಯೋಜನೆ, ಭಕ್ತರ ಆತ್ಮಶಾಂತಿ ಮತ್ತು ಸೌಕರ್ಯಕ್ಕಾಗಿ ನಿರ್ಮಿಸಲ್ಪಟ್ಟ ಒಂದು ಅನನ್ಯ ಕಾಣಿಕೆ. ಶ್ರೀ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಜಿಯವರ ಸಾನಿಧ್ಯದಲ್ಲಿ ಡಾ| ಪ್ರಕಾಶ್ ಶೆಟ್ಟಿ ಮತ್ತು ಅಶಾ ಪ್ರಕಾಶ್ ಶೆಟ್ಟಿ ದಂಪತಿಗಳು ಸ್ವತಃ ಉದ್ಘಾಟನೆ ನೆರವೇರಿಸಿ, ಭಕ್ತ ಸಮುದಾಯಕ್ಕೆ ಈ ಮಹಾನ್ ಕಾಣಿಕೆಯನ್ನು ಅರ್ಪಿಸಿದರು. ಮಂತ್ರಾಲಯದ ಪವಿತ್ರ ವಾತಾವರಣಕ್ಕೆ ಹೊಸ…
ಬಂಟರ ಮಾತೃ ಸಂಘದ ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ
ಬಂಟರ ಯಾನೆ ನಾಡವರ ಮಾತೃಸಂಘ ಮತ್ತು ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ ಹಾಸ್ಟೇಲ್ ಮಂಗಳೂರು ಇದರ ಆಶ್ರಯದಲ್ಲಿ ಆಗೋಸ್ಟ್ 27 ರಿಂದ 29 ರ ವರೆಗೆ ನಡೆಯುವ 19 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗದ ಆಮಂತ್ರಣ ಪತ್ರಿಕೆ ಬಿಡಗಡೆ ಸಮಾರಂಭವು ಬಂಟ್ಸ್ ಹಾಸ್ಟೇಲ್ ನಲ್ಲಿರುವ ಗೀತಾ ಎಸ್ ಎಂ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಕೊಡಿಯಾಲ್ ಗುತ್ತು ಅಜಿತ್ ಕುಮಾರ್ ರೈ ವಹಿಸಿದ್ದರು. ಎಲ್ಲಾ ಜಾತಿ ಮತ ಬಾಂಧವರ ಸಹಕಾರದಿಂದ ಶ್ರದ್ದಾ ಭಕ್ತಿಯೊಂದಿಗೆ ನಡೆಯುವ ದೇವತಾ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಕೆಲವು ಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ನೀಡಲಾಗಿದೆ. ಇನ್ನು ಕೆಲವರು ದೇವರ ಕೆಲಸ ಎಂದು ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ…
ಬಂಟರ ಸಂಘ ಕಟಪಾಡಿ ವತಿಯಿಂದ ಆಟಿಡ್ ಒಂಜಿ ದಿನ ಕಾರ್ಯಕ್ರಮವು ಕಟಪಾಡಿ ಎಸ್ ವಿ ಎಸ್ ಕಾಲೇಜು ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ದಯಾನಂದ ಆರ್. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ದೀಪ ಬೆಳಗಿಸಿ ಚಾಲನೆಯನ್ನು ನೀಡಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನ್ಯಾಯವಾದಿ ಮಟ್ಟಾರು ರತ್ನಾಕರ್ ಹೆಗ್ಡೆ ಮಾತನಾಡಿ, ಪೂರ್ವಜರ ಆಟಿಯ ದಿನಗಳು ಇಂದು ಆಚರಿಸುವ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿದ್ದ ಪಡುಬಿದ್ರಿ ಆಸ್ಟಿನ್ ಸೆಜ್ ಸೀನಿಯರ್ ಜನರಲ್ ಮ್ಯಾನೇಜರ್, ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ. ಶೆಟ್ಟಿ ಪಡುಬಿದ್ರಿ, ಉಡುಪಿ ಶ್ರೀ ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಸುರೇಶ್ ಶೆಟ್ಟಿ ಶುಭ ಹಾರೈಸಿದರು. ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರತಿಭಾವಂತೆ ಸುಹನಾ ಶೆಟ್ಟಿ ಹಾಗೂ ಹಲವು ಸಾಧಕರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಹಿರಿಯ ವೈದ್ಯ ಡಾ.…
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ಕಳವಳ ಮೂಡಿಸುತ್ತಿದೆ. ಧರ್ಮಸ್ಥಳ ಎನ್ನುವುದು ಕೇವಲ ಒಂದು ಊರಲ್ಲ, ಅದು ನಮ್ಮ ನಂಬಿಕೆ, ಅದು ನಮ್ಮ ಭಕ್ತಿಯ ಕ್ಷೇತ್ರ. ಪರಂಪರೆ, ಅಲ್ಲಿಗೆ ನಡೆದುಕೊಳ್ಳುವುದು ನಮ್ಮ ಪೂರ್ವ ಹಿರೀಕರಿಂದ ಬಂದ ಪರಂಪರೆ. “ಎಸ್ಐಟಿ ತನಿಖೆ” ನೆಪದಲ್ಲಿ ಶ್ರದ್ಧಾ ಕೇಂದ್ರದ ಮೂಲ ಸ್ಥಾನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಗೊಂದಲ ಸೃಷ್ಟಿಸುವ ದುಷ್ಕೃತ್ಯ ಖಂಡನೀಯ. ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನಡೆಯುತ್ತಿದೆ. ಸರ್ಕಾರವಾಗಲಿ, ಸಚಿವರಾಗಲಿ, ಎಸ್ಐಟಿ ಮುಖ್ಯಸ್ಥರಾಗಲಿ ಬುರುಡೆ ಪ್ರಕರಣದ ಕುರಿತು ಇದುವರೆಗೂ ಅಧಿಕೃತ ಮಾಹಿತಿ ಸಾರ್ವಜನಿಕವಾಗಿ ಹಂಚಿಕೊಂಡಿಲ್ಲ. ಹೀಗಿರುವಾಗ ಕೆಲವೊಂದು ಮಾಧ್ಯಮಗಳು, ಯೂಟ್ಯೂಬರ್ಗಳು “ಹೆಣದ ರಾಶಿ, ಮೂಳೆಯ ರಾಶಿ, 10 ಹೆಣ, ನೂರಾರು ಶವ, ಧರ್ಮಸ್ಥಳ ಗಢಗಢ, 13 ನೇ ಗುಂಡಿಯಲ್ಲಿ ಹತ್ತಾರು ಶವ, ಧರ್ಮಸ್ಥಳ ಕರ್ಮಸ್ಥಳ, ದೇವಸ್ಥಾನಕ್ಕೆ ಬರಬೇಡಿ ಕೊಲೆಯಾಗುತ್ತೀರಿ, ಅತ್ಯಾಚಾರವಾಗುತ್ತೀರಿ, ಹೆಂಗಸಿನ ಶವ ಪತ್ತೆ, ಬಾಲಕಿಯ ಶವ ಪತ್ತೆ” ಎಂದೆಲ್ಲಾ ನಿರಂತರವಾಗಿ ಸುಳ್ಳು ಮಾಹಿತಿ ಪಸರಿಸುವ ಮೂಲಕ ನಮ್ಮ ಧಾರ್ಮಿಕ ನಂಬಿಕೆಯನ್ನು ಕೆಡಿಸುವ ಕೆಲಸಕ್ಕೆ ಕೈ…
ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಕಾತ್ರಜ್ ಪುಣೆ : ಆಗಸ್ಟ್ 9 ರಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಯಕ್ಷಗಾನ ಪ್ರದರ್ಶನ
ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಕಾತ್ರಜ್ ಪುಣೆ ಆವರಣದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಆಗಸ್ಟ್ 9 ರಂದು ನಡೆಯಲಿದೆ. ಶ್ರೀ ಸತ್ಯನಾರಾಯಣ ಪೂಜೆಯು ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ನೇತೃತ್ವದಲ್ಲಿ ಅಪರಾಹ್ನ 4ಕ್ಕೆ ಆರಂಭಗೊಳ್ಳಲಿದ್ದು, 5.30ಕ್ಕೆ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6ರಿಂದ ದೇವಸ್ಥಾನದ ರಂಗಮಂಟಪದಲ್ಲಿ ಪ್ರವೀಣ್ ಶೆಟ್ಟಿ ಪುತ್ತೂರು ಸಾರಥ್ಯದ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಕಲಾವಿದರು ಮತ್ತು ಊರ ಪರವೂರ ಹೆಸರಾಂತ ಕಲಾವಿದರ ಕೂಡುವಿಕೆಯಲ್ಲಿ ಸ್ವಾಮಿ ಕೊರಗಜ್ಜ ಎಂಬ ತುಳು ಪೌರಾಣಿಕ ಪ್ರಸಂಗ ಪ್ರದರ್ಶನಗೊಳ್ಳಲಿದೆ. ಯಕ್ಷಗಾನದ ಬಳಿಕ ಮಹಾಪ್ರಸಾದ ರೂಪದಲ್ಲಿ ಅನ್ನ ಸಂತರ್ಪಣೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸತ್ಯನಾರಾಯಣ ದೇವರು, ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷ ಸುಭಾಷ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಅಧ್ಯಕ್ಷ…
ಶ್ರೀ ವನದುರ್ಗಾದೇವಿ ದೇವಸ್ಥಾನ ಮೂಡುಬೆಟ್ಟು ಕಾಳಾವರ ಇಲ್ಲಿನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶ್ರೀಕಾಂತ್ ಶೆಟ್ಟಿ ವಳಬ್ಬಿ ಮೆಲ್ಮನೆ ಸಳ್ವಾಡಿ ಇವರು ಆಯ್ಕೆಗೊಂಡಿದ್ದಾರೆ. ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಗೋಪಾಲ ಜೋಗಿ ಕಾಳಾವರ ಮೂಡುಬೆಟ್ಟು, ಶಿವರಾಮ ಮೂಡುಬೆಟ್ಟು, ಶ್ರೀಮತಿ ರೆಷ್ಮಾ ಜೋಗಿ, ಶ್ರಿಮತಿ ಸುರೇಖಾ ಕಾಳಾವಾರ, ಗಿರೀಶ್ ಶೆಟ್ಟಿ ಕೋಡಿಮನೆ, ಸಂಜೀವ್ ಯಾನೆ ಮಾಣಿ ಸಳ್ವಾಡಿ, ಸುಕುಮಾರ ಶೆಟ್ಟಿ ಬೀಡಿನಮನೆ, ರತ್ನಾಕರ ಶೆಟ್ಟಿ ಏನಕೆರೆಮನೆ ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ತಾಲೂಕು ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಕೃತಿ ಪಿ. ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿಜೇತ ವಿದ್ಯಾರ್ಥಿನಿಗೆ ಸಮಾರೋಪ ಸಮಾರಂಭದಲ್ಲಿ ವಿಜಯ ಫಲಕ ಹಾಗೂ ಪ್ರಶಸ್ತಿ ಪತ್ರ ನೀಡಿ ಇನ್ನು ಹೆಚ್ಚಿನ ಸಾಧನೆಗೆ ಹಾರೈಸಲಾಯಿತು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ ಕುಮಾರ್ ಮಾರ್ಗದರ್ಶನ ನೀಡಿದ್ದರು. ಸಂಸ್ಥೆಯ ವಸತಿ ನಿಲಯದ ಪಾಲಕಿ ಸ್ಪೂರ್ತಿ ತಂಡ ವ್ಯವಸ್ಥಾಪಕಿಯಾಗಿ ಕಾರ್ಯವನ್ನು ನಿರ್ವಹಿಸಿದ್ದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ತಂಡವನ್ನು ಅಭಿನಂದಿಸಿದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ…
ಬದುಕಿನ ಔನ್ನತ್ಯಕ್ಕೆ ಗುರು ಹಿರಿಯರ ಮಾರ್ಗದರ್ಶನ ಪ್ರೇರಣೆಯೆ ಕಾರಣ. ಸಂಸ್ಕೃತಿ, ಸಂಸ್ಕಾರ ಕಲಿಸಿಕೊಟ್ಟು ಬದುಕು ರೂಪಿಸುವ ಶಿಕ್ಷಣ ಸಂಸ್ಥೆಗಳ ಮೇಲೆ ಅಭಿಮಾನವಿರಿಸಿ ಬೆಂಬಲಿಸಬೇಕು ಎಂದು ಎಚ್.ಪಿ.ಸಿ.ಎಲ್ ಬಾಳ ಸಂಸ್ಥೆಯ ಜನರಲ್ ಮ್ಯಾನೇಜರ್ ಪ್ರಕಾಶ್ ಕುಮಾರ್ ಪಟ್ನಾಯಕ್ ನುಡಿದರು. ಅವರು ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಎಚ್.ಪಿ.ಸಿ.ಎಲ್ ಬಾಳ ಸಂಸ್ಥೆಯ ವತಿಯಿಂದ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಬಾಲಕರ ಮತ್ತು ಬಾಲಕಿಯರ ಶೌಚಾಲಯ ಹಾಗೂ ಕೊಳವೆ ಬಾವಿಯನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಸರಕಾರಿ ಶಾಲೆಯು ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಶಾಲೆಯಾಗಿರುವುದು ಶ್ಲಾಘನೀಯ. ಮುಂದೆಯೂ ನಮ್ಮ ಸಂಸ್ಥೆಯ ವತಿಯಿಂದ ಈ ಶಾಲೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು. ವೇದಿಕೆಯಲ್ಲಿ ಎಚ್.ಪಿ.ಸಿ.ಎಲ್ ಸಂಸ್ಥೆಯ ಆಪರೇಷನ್ ವಿಭಾಗದ ಸೀನಿಯರ್ ಮ್ಯಾನೇಜರ್ ವೆಂಕಟೇಶ್ ಚಿಂತಾಕಿಂಡಿ, ಮ್ಯಾನೇಜರ್ ಸೃಷ್ಠಿ, ಎಚ್.ಆರ್ ವಿಭಾಗದ ಅಸಿಸ್ಟೆಂಟ್ ವಾಸು ನಾಯಕ್ ಎಸ್, ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್…
ಹೃದಯ ಪೂರ್ವಕವಾಗಿ ಸಮಯಕ್ಕೆ ಸರಿಯಾಗಿ ಮತ್ತು ಅವಶ್ಯಕತೆಗೆ ಅನುಗುಣವಾಗಿ ನಾವು ಮಾಡುವ ಸೇವೆ ಸರಿಯಾದ ವ್ಯಕ್ತಿಗೆ ತಲುಪಿಸುವ ಸೇವಾಧರ್ಮ ನಮ್ಮಿಂದ ಆಗಬೇಕು. ಅದೇ ರೀತಿ ಯಾವುದೇ ವ್ಯಕ್ತಿಯ ಕಷ್ಟ ಸಮಯದಲ್ಲಿ ಅವಶ್ಯಕತೆಗೆ ಸಹಾಯ ಮಾಡಲು ಯಾರಾದರೂ ಸಿಕ್ಕೇ ಸಿಗುತ್ತಾರೆ ಇದು ನಿಯಮ. ಪುಣೆ ಬಂಟರ ಭವನದ ರೂವಾರಿ ಸಂತೋಷ್ ಶೆಟ್ಟಿಯವರ ಮಹತ್ವಾಕಾಂಕ್ಷೆಯ ಯೋಜನೆ ಕಲ್ಪ ವೃಕ್ಷದಲ್ಲಿ ಅದೆಷ್ಟೋ ಸಮಾಜದ ಅಶಕ್ತರಿಗೆ ಸಹಾಯ ಆಗಿದೆ. ಇದರಲ್ಲಿ ಸೇವಾ ಕಾರ್ಯ ಮಾಡುವ ಭಾಗ್ಯ ನನಗೂ ಸಿಕ್ಕಿದೆ. ಇದು ನನ್ನ ಸಮಾಜಕ್ಕಾಗಿ ನಾನು ಮಾಡುವ ಸೇವೆಯೆಂದೇ ಪರಿಗಣಿಸಿದ್ದೇನೆ. ಸಮಾಜದ ಮಕ್ಕಳು ಯಾರೂ ಕೂಡಾ ವಿದ್ಯೆಯಿಂದ ವಂಚಿತರಾಗಬಾರದು. ಸೃಷ್ಟಿಕರ್ತ ಪ್ರತಿಯೊಬ್ಬನ ಬದುಕಿನಲ್ಲಿ ಏನಾದರು ಬರೆದಿಡುತ್ತಾನೆ. ಅದನ್ನು ಸಾದಿಸುವ ಇಚ್ಚಾ ಶಕ್ತಿ ನಮ್ಮಲ್ಲಿರಬೇಕು. ಇದೇ ನನ್ನ ಜೀವನದಲ್ಲಿ ಕೂಡಾ ಬಂದಿದೆ. ವಿಚಾರಧಾರೆ ಸರಿಯಾಗಿದ್ದು ಒಂದೇ ದೃಡ ನಿರ್ಧಾರ, ಇಳಿದ ಕಾರ್ಯದಲ್ಲಿ ಸಾಧನೆ ಮಾಡಿ ಗುರಿ ಮುಟ್ಟಬೇಕು ಎಂಬ ಛಲ ಕಠಿನ ಪರಿಶ್ರಮ ಇದ್ದಿದರಿಂದ ಇಲ್ಲಿಯವರೆಗೆ ಬಂದಿದ್ದೇನೆ ಮತ್ತು ದೇಶ…