Author: admin

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ಹಾಗೂ ಬಿವೋಕ್ ವಿಭಾಗಗಳು ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಮಾಧ್ಯಮ ಪರ್ವ-2025ರಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳು ಒಟ್ಟು 4 ವಿಭಾಗದಲ್ಲಿ ಪ್ರಥಮ, ಎರಡು ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಚಾಂಪಿಯನ್ಸ್ ಪಟ್ಟ ಅಲಂಕರಿಸಿದರು. ವಿದ್ಯಾರ್ಥಿಗಳಾದ ಇಶಿತ್ ಹಾಗೂ ಅಶ್ವಿನ್ ಕ್ರೈಸಿಸ್ ಮ್ಯಾನೇಜ್ಮೆಂಟ್ (ಬಿಕ್ಕಟ್ಟು ನಿರ್ವಹಣೆ) ನಲ್ಲಿ ಪ್ರಥಮ, ಪ್ರಧಾನ್ ಛಾಯಾಗ್ರಹಣದಲ್ಲಿ ಪ್ರಥಮ, ರುಧೀರ್ ಹಾಗೂ ಮಿಯಾರವರನ್ನು ಒಳಗೊಂಡ ತಂಡ ರಸಪ್ರಶ್ನೆಯಲ್ಲಿ ಪ್ರಥಮ, ರಚನ್, ಸರ್ವೇಶ್, ವಿಶಾಲ್, ದೀಕ್ಷಾ, ಸುರಕ್ಷಾ, ಆಕಾಶ್, ಸುಮಿತ್, ದಿಶಾ, ಪ್ರಗತಿ, ಸ್ವಾತಿ, ರಿಶಾಂತ್, ರಕ್ಷಿತಾ, ಶ್ರೀವಲ್ಲಿಯವರ ತಂಡ ವೆರೈಟಿ ಪ್ರದರ್ಶನದಲ್ಲಿ ( ವೈವಿಧ್ಯಮಯ ನೃತ್ಯ ಪ್ರಥಮ ಸ್ಥಾನ ಪಡೆದರು. ವೀಕ್ಷಿತಾ ಹಾಗೂ ರಾಹುಲ್ ಕ್ರಮವಾಗಿ ವರದಿಗಾರಿಕೆ ಹಾಗೂ ರೀಲ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಉಪನ್ಯಾಸಕ ಸುಧೀಂದ್ರ ಶಾಂತಿ…

Read More

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ನಡೆಯಲಿರುವ 2 ದಿನಗಳ ಟೆಕ್ ಉತ್ಸವ್ – 2025, ಅಂತರಕಾಲೇಜು ತಂತ್ರಜ್ಞಾನ ಸಂಬAಧಿ ಸ್ಪರ್ಧೆಗಳಿಗೆ ವಿದ್ಯಾಗಿರಿಯ ಡಾ ವಿ ಎಸ್ ಅಚಾರ್ಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು . ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಜ್ಯುಗೊ ಸ್ಟುಡಿಯೋ ಪ್ರೈ. ಲಿ. ನ ಉಪಾಧ್ಯಕ್ಷ ಅಭಿಜಿತ್ ಶೆಟ್ಟಿ ಮಾತನಾಡಿ, ತಂತ್ರಜ್ಞಾನ ಮುಂದುವರಿದAತೆ ಅವುಗಳ ಬಳಕೆಗೆ ಅಗತ್ಯವಿರುವ ಪರಿಣತಿಯನ್ನು ಪಡೆದುಕೊಳ್ಳುವುದು ಬಹಳ ಅವಶ್ಯ. ಬದಲಾಗುತ್ತಿರುವ ತಂತ್ರಜ್ಞಾನದ ಅವಶ್ಯಕತೆ ಹಾಗೂ ಅವುಗಳ ಬಳಕೆ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಕಳೆದ 15 ವರ್ಷಗಳ ತಾಂತ್ರಿಕ ಬದಲಾವಣೆ ಗಣನೀಯವಾಗಿದ್ದು, ಮುಂದಿನ 2 ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆಯ ಬೆಳವಣಿಗೆಯು ಇನ್ನಷ್ಟು ಪ್ರಗತಿ ಹೊಂದಲಿದೆ.ಟೆಕ್ಕಿಗಳು, ಇಂಜಿನಿಯರ್ ಗಳು ತಂತ್ರಜ್ಞಾನವನ್ನು ಬಳಸುವ ವಿಧಾನದ ಮೇಲೆ ಒಟ್ಟು ಸಮಾಜದ ರೀತಿ ಅವಲಂಬಿತವಾಗಿರುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ತಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಫೆಸ್ಟ್ಗಳಿಗೆ ಯಾವ ರೀತಿಯ ಹೆಚ್ಚು…

Read More

ಕನ್ನಡ ನಾಟ್ಯ ರಂಗ (ರಿ) ಹೈದರಾಬಾದ್ ಇದರ ವತಿಯಿಂದ ಮಾರ್ಚ್ 9ರಂದು ಹೈದರಾಬಾದ್ ನ ಸುಂದರಯ್ಯ ಕಲಾಭವನದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಯುವ ಸಂಘಟಕ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಕನ್ನಡ ನಾಟ್ಯ ರಂಗ(ರಿ.) ಇದರ ಅಧ್ಯಕ್ಷರಾದ ಶ್ರೀ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ಹೈದರಾಬಾದ್ ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ರತ್ನಾಕರ ರೈ, ಹೋಟೆಲ್ ಉದ್ಯಮಿಗಳಾದ ಅಲ್ತಾರು ದೇಬೆಟ್ಟು ಶ್ರೀ ಜಯರಾಮ ಶೆಟ್ಟಿ, ಶ್ರೀ ಅಣ್ಣಪ್ಪ ಶೆಟ್ಟಿ ಮಲ್ಯಾಡಿ ಮತ್ತು ನಾಟ್ಯರಂಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಕುಳಾಯಿ ಎಂಬ ಹಳ್ಳಿಯು ಈಗಿನ ಚಿತ್ರಾಪುರ. ಇದು ಮಂಗಳೂರು ತಾಲ್ಲೂಕಿನಲ್ಲಿರುವ ಪುಣ್ಯಕ್ಷೇತ್ರವಾಗಿದೆ. ಇಲ್ಲಿ ತಾಯಿ ದುರ್ಗಾಪರಮೇಶ್ವರಿಯನ್ನು ಪೂಜಿಸುತ್ತಾರೆ. ೧೩ ಶತಮಾನದಲ್ಲಿ ಮಧ್ವಾಮಠದ ಪೇಜಾವರ ಪೀಠವನ್ನು ವಿಜಯತೀರ್ಥ ಸ್ವಾಮೀಜಿಯವರು ಅಲಂಕರಿಸಿ ಇಲ್ಲಿ ದುರ್ಗಾಪರಮೇಶ್ವರಿಯನ್ನು ಲಿಂಗದ ರೂಪದಲ್ಲಿ ಪೂಜಿಸಿದರು. ಈ ದೇವಿಯು ಜಲದುರ್ಗೆಯ ಪುನರ್ಜನ್ಮ ಎಂಬ ನಂಬಿಕೆ ಇದೆ. ಈ ದೇವಿಯು ಅತಿ ಶಕ್ತಿಯುಳ್ಳ ದೇವತೆಯಾಗಿದ್ದಾಳೆ. ಪುರಾಣಗಳ ಪ್ರಕಾರ ಸಪ್ತದುರ್ಗಾ ಅಕ್ಕ ತಂಗಿಯರು ಈ ಜಾಗಗಳಲ್ಲಿ ಶಕ್ತಿದೇವತೆಯಾಗಿ ನೆಲೆಸಿದ್ದಾರೆ. ಅವುಗಳೆಂದರೆ ಚಿತ್ರಾಪುರ, ಸಸಿಹಿತ್ಲು, ಪೊಳಲಿ, ಕಟೀಲು, ಮುಂಡ್ಕೂರು, ಕುಂಜಾರು ಮತ್ತು ಬಪ್ಪನಾಡು ಸ್ಥಳಗಳಲ್ಲಿ ದಾರಿಗಾಸುರನನ್ನು ಕೊಂದ ನಂತರ ನೆಲೆಸಿದರು. ಈ ಸ್ಥಳಗಳು “ಶಕ್ತಿಕೇಂದ್ರ” ಎಂಬ ಹೆಸರಿನಿಂದ ಗುರುತಿಸಲ್ಪಟ್ಟಿವೆ. ಈ ಸ್ಥಳಕ್ಕೆ ಚಿತ್ರಾಪುರ ಎಂದು ಹೆಸರು ಬರಲು ಕಾರಣ ಸಪ್ತ ದುರ್ಗೆಯರಲ್ಲಿ ಅತಿ ಕಿರಿಯಳಾದ ಜಲದುರ್ಗೆ, ರಾಕ್ಷಸರಾದ ಚಿತ್ರಾಸುರ ಮತ್ತು ವಿಚಿತ್ರಾಸುರರನ್ನು ವಧಿಸಿದ್ದು. ರಾಕ್ಷಸರಾದ ಚಿತ್ರಾಸುರ ಮತ್ತು ವಿಚಿತ್ರಾಸುರರಿಗೆ ತಮ್ಮ ಗುರುಗಳನ್ನು ವಧಿಸಿದ ಜಲದುರ್ಗೆಯ ಮೇಲೆ ಸೇಡು ತೀರಿಸಿಕೊಳ್ಳುವ ಹಂಬಲವಿತ್ತು. ಈ ರಾಕ್ಷಸರ ಕಣ್ಣು ಓರ್ವ…

Read More

‘ಯಕ್ಷಗಾನ ತಾಳ ಮದ್ದಳೆ ಕಾರ್ಯಕ್ರಮಗಳು ಅಹೋರಾತ್ರಿ ನಡೆಯುತ್ತಿದ್ದ ಕಾಲವೊಂದಿತ್ತು. ಈಗಿನ ಯುವ ಸಮುದಾಯಕ್ಕೆ ಅದರ ಕಲ್ಪನೆಯೂ ಇರಲಾರದು. ಆದರೆ ವಿನಯ ಆಚಾರ್ಯರ ನೇತೃತ್ವದಲ್ಲಿ ನಡೆದ ವಿಶಿಷ್ಟ ಪರಿಕಲ್ಪನೆಯ ಶಾರದಾ ಮಾಸದ ಕೂಟವು ತಾಳಮದ್ದಳೆಯ ಗತಕಾಲದ ಇತಿಹಾಸವು ಮರುಕಳಿಸುವಂತೆ ಮಾಡಿದೆ’ ಎಂದು ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಕಾರದೊಂದಿಗೆ ಸುರತ್ಕಲ್ ಸಮೀಪ ಹೊಸಬೆಟ್ಟು ಮಾರುತಿ ಬಡಾವಣೆಯ ಶಾರದಾ ಮಂದಿರದಲ್ಲಿ ಇಡೀ ರಾತ್ರಿ ನಡೆದ ಶಾರದಾ ಮಾಸದ ಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಯಕ್ಷಗಾನ ಹಿಮ್ಮೇಳ ವಾದನಗಳ ನುಡಿತದೊಂದಿಗೆ ಜರಗಿದ ಉದ್ಘಾಟನೆಯನ್ನು ಹಿರಿಯ ವಿದ್ವಾಂಸ ಹೊಸಬೆಟ್ಟು ಗುರುರಾಜ ಆಚಾರ್ಯ ಜಾಗಟೆ ಬಾರಿಸುವುದರ ಮೂಲಕ ನೆರವೇರಿಸಿದರು. ಯಕ್ಷಗುರು ಶಂಕರನಾರಾಯಣ ಮೈರ್ಪಾಡಿ, ಕರ್ಣಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ರಾಜೇಶ ಕುಳಾಯಿ, ಉಜ್ವಲ್ ಎಂ. ಕೆ. ಅತಿಥಿಗಳಾಗಿ ಪಾಲ್ಗೊಂಡರು. ಕಾರ್ಯಕ್ರಮದ ಸಂಘಟಕರಾದ ವಿನಯ ಆಚಾರ್ಯ ಹೊಸಬೆಟ್ಟು ಸ್ವಾಗತಿಸಿ…

Read More

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಬಂಟರ ಸಂಘ ಪುತ್ತೂರು ತಾಲೂಕು ಸಮಿತಿ ಇದರ ಮಾರ್ಗದರ್ಶನದೊಂದಿಗೆ ಮಹಿಳಾ ಬಂಟರ ವಿಭಾಗದ ಸಾರಥ್ಯದಲ್ಲಿ ಯುವ ಬಂಟರ ವಿಭಾಗ, ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಮಾರ್ಚ್ 11 ರಂದು ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಪುತ್ತೂರು ಎಂ ಸುಂದರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ತುಳು ಉಪನ್ಯಾಸಕಿ ಮಣಿ ಎಂ ರೈ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತುಳುನಾಡಿನ ಬಂಟ ಮಹಿಳೆಯರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಗಳಾದ ಅನೇಕ ಉದಾಹರಣೆಗಳಿವೆ. ಬಂಟ ಮಹಿಳೆಯರು ಕೃಷಿ, ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿ ಬಂಟ ಸಮಾಜಕ್ಕೆ ಗೌರವವನ್ನು ತಂದಿದ್ದಾರೆ ಎಂದು ಹೇಳಿದರು. ಪುತ್ತೂರು ಬಂಟ ಸಮಾಜಕ್ಕೆ ಬಹುದೊಡ್ಡ ಹೆಸರನ್ನು ತಂದಿದ್ದ ಊರಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ,…

Read More

ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸರಕಾರವನ್ನು ಒತ್ತಾಯಿಸಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇರುವ ಬಂಟರ ಸಮುದಾಯವು ಒಟ್ಟು ಜನಸಂಖ್ಯೆಯಲ್ಲಿ ಶೇ.60 ಮಂದಿ ಬಡತನ ರೇಖೆಯಲ್ಲಿದ್ದು, ಶೇ.30 ರಷ್ಟು ಮಂದಿ ಮಧ್ಯಮ ವರ್ಗದಲ್ಲಿದ್ದು, ಕೇವಲ 10 ಶೇ. ಜನರು ಶ್ರೀಮಂತರಾಗಿದ್ದಾರೆ. ಈ ಬಂಟ ಸಮುದಾಯ ಕಡಿಮೆ ಜನರು ಇರುವ ಒಂದು ವಿಶಿಷ್ಟ ಸಮುದಾಯವಾಗಿದ್ದು, ತೀರ ಕೆಳಸ್ತರದ ಮಂದಿಯನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶ ನಮ್ಮದಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ. ಬಡ ಜನರನ್ನು ಮುಖ್ಯವಾಹಿನಿಗೆ ಕರೆತರಲು ಸರಕಾರದ ಸಂಪೂರ್ಣ ಸಹಾಯ ಇದ್ದಲ್ಲಿ ಮಾತ್ರ ಸಾಧ್ಯ. ಅದಕ್ಕಾಗಿ ಕರ್ನಾಟಕ ಘನ ಸರಕಾರ ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಿ, ಮುಂದಿನ ದಿನಗಳಲ್ಲಿ ಬಡ ಬಂಟರ ಉನ್ನತೀಕರಣ ಮಾಡಬೇಕೆಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಹಕ್ಕೊತ್ತಾಯ ಮಾಡುತ್ತಿದೆ ಎಂದು ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಮಾರ್ಚ್ 15 ರಂದು ಶನಿವಾರ ಸಂಜೆ 6.30 ಗಂಟೆಗೆ ಸುರತ್ಕಲ್ ಬಂಟರ ಭವನದ ವಠಾರದಲ್ಲಿ ನಡೆಯಲಿದೆ. ಸಂಜೆ 7.30 ಕ್ಕೆ ನಡೆಯುವ ಕಾರ್ಯಕ್ರಮವನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಶಂಕರ ನಾರಾಯಣ ಭಟ್ ದೀಪ ಪ್ರಜ್ವಲನೆಗೈಯ್ಯಲಿದ್ದಾರೆ.ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು, ಮುಂಬೈ ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಅಗರಿ ರಾಘವೇಂದ್ರ ರಾವ್, ಡಿ.ಕೆ ಶೆಟ್ಟಿ ಸುರತ್ಕಲ್, ಮನೋಹರ ಶೆಟ್ಟಿ ಸೂರಿಂಜೆ, ಜಗದೀಶ ಶೆಟ್ಟಿ ಪೆರ್ಮುದೆ, ಶ್ರೀಕಾಂತ್ ಕಾಮತ್ ಭಾಗವಹಿಸಲಿದ್ದಾರೆ. ಪುತ್ತಿಗೆ ರಘುರಾಮ ಹೊಳ್ಳರಿಗೆ ಗೌರವಾರ್ಪಣೆ ನಡೆಯಲಿದೆ. ಸಮಾರಂಭದಲ್ಲಿ ಶಂಕರ ನಾರಾಯಣ ಮೈರ್ಪಾಡಿ, ಶ್ರೀಧರ ಶೆಟ್ಟಿ ಕೊಕ್ಕಾರುಗುತ್ತು ಪೆರ್ಮುದೆ, ಜಗದೀಶ್ ಆಚಾರ್ಯ ಜೋಕಟ್ಟೆ, ಕೃಷ್ಣಪ್ಪ…

Read More

ಚಿಕ್ಕ ಮಕ್ಕಳ ಜತೆ ಮಕ್ಕಳಂತೆ ಬೆರೆತು ಆಟದ ಜತೆಗೆ ಶಾಲೆಯ ಚಟುವಟಿಕೆಗಳ ಬಗ್ಗೆ ಚರ್ಚಿಸಬೇಕು. ಈ ನಿಟ್ಟಿನಲ್ಲಿ ಮಕ್ಕಳ ಬೆನ್ನು ತಟ್ಟುವ ಕೆಲಸ ಮಾಡಬೇಕು. ಆಗ ವಿದ್ಯಾರ್ಥಿಗಳು ಮೊಬೈಲ್ ಕಡೆಗೆ ಹೆಚ್ಚು ಗಮನ ಕೊಡದೆ ಕ್ರಿಯಾಶೀಲ ಚಿಂತನೆಗೆ ಅವಕಾಶ ಕಲ್ಪಿಸಿದಂತಾಗುವುದು ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂದನಾ ರೈ ಕಾರ್ಕಳ ಅವರು ಹೇಳಿದರು. ಮಾ. 12ರಂದು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಯಡಾಡಿ ಮತ್ಯಾಡಿ, ಕುಂದಾಪುರ ಇವರ ವತಿಯಿಂದ ಕಿಂಡರ್ ಗಾರ್ಡನ್ ವಿದ್ಯಾರ್ಥಿಗಳ ಪದವಿ ಘಟಿಕೋತ್ಸವ ಸಮಾರಂಭ- 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಇದರ ಅಧ್ಯಕ್ಷ ಡಾ| ರಮೇಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಪಾಲಕರು ಮತ್ತು ಶಿಕ್ಷಕರು ಜತೆಯಾಗಿ ಮಗುವಿನ ಪಠ್ಯ ಹಾಗೂ ಪಕ್ಷೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಣೆ ಮಾಡಿದಾಗ ಮಗುವಿನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದರು. ಸುಜ್ಞಾನ ಎಜುಕೇಶನಲ್…

Read More

ಬಾಂಬೆ ಬಂಟ್ಸ್ ಅಸೋಸಿಯೇಷನ್ ಕಳೆದ 41 ವರ್ಷಗಳಿಂದ ಸಮಾಜಪರ ಕಾರ್ಯಗಳ ಮೂಲಕ ಮುಂಬೈ ಮಹಾನಗರದಲ್ಲಿ ಬಂಟರ ಸಮಾಜದ ಪ್ರತಿಷ್ಠಿತ ಸಂಸ್ಥೆಯಾಗಿ ಗುರುತಿಸಲ್ಪಟ್ಟಿದೆ. ಇದಕ್ಕೆ ನಮ್ಮ ಮಾಜಿ ಅಧ್ಯಕ್ಷರುಗಳು, ದಾನಿಗಳು, ಸಮಾಜದ ಗಣ್ಯರ ಸಹಕಾರ ಕಾರಣವಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲೂ ಬಾಂಬೆ ಬಂಟ್ಸ್ ಅಸೋಸಿಯೇಷನ್ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ನಮ್ಮ ಉನ್ನತ ಶಿಕ್ಷಣ ಸಂಸ್ಥೆಯು ನವಿಮುಂಬೈಯಲ್ಲಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳೆದಿದೆ ಎಂದು ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ ತಿಳಿಸಿದರು. ನವಿಮುಂಬಯಿಯ ಜೂಯಿ ನಗರದ ಬಂಟ್ಸ್ ಸೆಂಟರ್ ನ ಶ್ರೀಮತಿ ಸೌಮ್ಯಲತಾ ಸದಾನಂದ ಶೆಟ್ಟಿ ಆಡಿಟೋರಿಯಂನಲ್ಲಿ ಮಾರ್ಚ್ 9ರಂದು ನಡೆದ ಬಾಂಬೆ ಬಂಟ್ಸ್ ಅಸೋಸಿಯೇಷನ್ ಬಹಿರಂಗ ಸಭೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನನ್ನ ಅಧ್ಯಕ್ಷತೆ ಅವಧಿಯಲ್ಲಿ ಬಾಂಬೆ ಬಂಟ್ಸ್ ಅಸೋಸಿಯೇಷನ್ ಮುಖಾಂತರ ಹಲವಾರು ಸಮಾಜಪರ ಕಾರ್ಯಗಳನ್ನು ಮಾಡಿದ್ದೇನೆ. ಇದಕ್ಕೆ ನನಗೆ ಎಲ್ಲರ ಸಹಕಾರ ಪ್ರೋತ್ಸಾಹ ದೊರೆತಿದ್ದು,…

Read More