Author: admin
ದೈವ ಆಳಿ ಬರುವ ಸಿನೆಮಾ ಕಾಂತಾರ ಮೊದಲಲ್ಲ ಮತ್ತು ಕೊನೆಯೂ ಅಲ್ಲ. ಹೋರಾಟಗಾರರು ಸೆಲೆಕ್ಟಿವ್ ಆಗೋದರ ಬಗ್ಗೆ ನನ್ನ ಸ್ಪಷ್ಟ ಆಕ್ಷೇಪವಿದೆ. ಸಿನೆಮಾದಲ್ಲಿ ಕೋಲದ ದೃಶ್ಯ ತೋರಿಸುವುದರಿಂದ ಅನ್ಯಾಯ ಆಗುತ್ತದೆ ಎಂದು ಕೆಲವೇ ಕೆಲವು ಮಂದಿ ವಾದ ಮಾಡುತ್ತಿದ್ದಾರೆ. ಕೋಟ ಶಿವರಾಮ ಕಾರಂತರ ಕಾದಂಬರಿ ಆಧಾರಿತ ಬಿ.ವಿ. ಕಾರಂತ ನಿರ್ದೇಶನದ ಚೋಮನ ದುಡಿ ಸಿನೆಮಾದ ಆದಿಯಾಗಿ ಮೊನ್ನೆ ಮೊನ್ನೆಯ ಗಗ್ಗರದ ತನಕ ಕೋಲದ ದೃಶ್ಯಗಳಿರುವ ಸಿನೆಮಾಗಳನ್ನ ನಾವು ನೋಡಿದ್ದೇವೆ. ಸಿನೆಮಾ ನೋಡಿ ಅದನ್ನ ಅನುಕರಣೆ ಮಾಡುವ ಯಡವಟ್ಟುಗಳಿಗೆ ಇರುವುದು ಪ್ರಚಾರದ ಅಮಲು. ಮೊನ್ನೆ ಒಬ್ಬ ಹುಡುಗ ದೊಂದಿಯೊಂದಿಗೆ ರೀಲ್ಸ್ ಮಾಡುತ್ತಾ ಕುಂದಾಪುರದ ಹುಡುಗ ಎಂದು ಬೊಬ್ಬೆ ಹಾಕುತ್ತಿದ್ದ! ಮನೆಯಲ್ಲಿ ಮೈಯಲ್ಲಿ ಬೊಬ್ಬೆ ಬೀಳುವಂತೆ ಬಡಿದರೆ ಆ ತೆವಲುಗಳೆಲ್ಲವೂ ನಿಲ್ಲುತ್ತದೆ. ಸಿನೆಮಾಗಳಲ್ಲಿ ಹೀರೊ ಮಚ್ಚು ಹಿಡಿದು ಕೊಚ್ಚುತ್ತಾನೆ ಎಂದು ತಾನೂ ಮಚ್ಚು ಹಿಡಿದು ಹೂಂಕಾರ ಮಾಡಿದರೆ ಆತ ಜೈಲುಪಾಲಾಗುವುದಿಲ್ಲವೇ? ಹಾಗೆಯೇ ಪ್ರಚಾರಕ್ಕಾಗಿ ಕೋಲದ ಮುಖವರ್ಣಿಕೆ ಹಾಕಿ ಅನುಕರಣೆ ಮಾಡುವವರ ಬಗ್ಗೆ ನಮ್ಮ ಆಕ್ಷೇಪ…
ಪೊನ್ನಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಾಮದೇವ ಭಜನಾ ಮಂಡಳಿ ಕುತ್ತೆತ್ತೂರು ಸೂರಿಂಜೆ 75 ನೇ ವರ್ಷದ ಭಜನಾ ಅಮೃತ ಮಹೋತ್ಸವ ಅಖಂಡ ಭಜನಾ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಪೊನ್ನಗಿರಿ ದೇವಸ್ಥಾನದಲ್ಲಿ ಜರುಗಿತು. ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಮನೋಹರ ಶೆಟ್ಟಿ ಸೂರಿಂಜೆ ಬೊಳ್ಳಾರು ಗುತ್ತು, ಕಾರ್ಯದರ್ಶಿ ಜಯಶೀಲ ಸೂರಿಂಜೆ, ಕೋಶಾಧಿಕಾರಿ ವಾಮನ ಶೆಟ್ಟಿ, ವಿನಯ ಕುಮಾರ್ ಸೂರಿಂಜೆ, ಹಯವದನ ಭಟ್, ಶಶಿಧರ ಶೆಟ್ಟಿ ಸೂರಿಂಜೆ, ಧನಂಜಯ ಶೆಟ್ಟಿ ಬೊಳ್ಳಾರು ಗುತ್ತು, ಗಿರೀಶ್ ಕೋಟೆ, ಸುಕೇಶ್ ಶೆಟ್ಟಿ ಬೈಲಗುತ್ತು, ಜಗನ್ನಾಥ ಶೆಟ್ಟಿ ತೇವು ಸೂರಿಂಜೆ, ಸುಜೀರ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಕವಿತಾ, ಶ್ರೀಕಾಂತ್ ಶೆಟ್ಟಿ, ಯೋಗೀಶ್ ಶೆಟ್ಟಿ, ದಾಸು ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಪ್ರಸಾದ್ ಅಂಚನ್, ದಿನೇಶ್ ಬಂಗೇರ, ರಾಧಕೃಷ್ಣ ಭಂಡಾರ್ಕರ್ ಉಪಸ್ಥಿತರಿದ್ದರು.
ವಿಜಯ ಬ್ಯಾಂಕ್ ನ ನಿವೃತ್ತ ಅಧಿಕಾರಿ ಪುತ್ತೂರು ಮೂಲದ ಅಗರಿ ಮೋಹನ್ ದಾಸ್ ಭಂಡಾರಿ ಅವರು ಅ. 5ರಂದು ರಾತ್ರಿ ಬೆಂಗಳೂರಿನ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾದರು. ಮೃತರು ಪತ್ನಿ ಶಕುಂತಲಾ ಭಂಡಾರಿ, ಪುತ್ರಿಯರಾದ ಭವ್ಯ, ದಿವ್ಯ, ಅಳಿಯಂದಿರಾದ ನಿತಿನ್ ರೈ, ವಿಜಯ್ ಶೆಟ್ಟಿ, ಸಹೋದರರಾದ ಕರ್ನಲ್ ಎ ಜೆ ಭಂಡಾರಿ, ಸಹಕಾರಿ ಧುರೀಣ ದಿ. ಅಗರಿ ಜಗಜೀವನ್ ಭಂಡಾರಿ, ಆರ್.ಬಿ.ಐ ನ ಮಾಜಿ ನಿರ್ದೇಶಕ ಸಹಕಾರ ರತ್ನ ಅಗರಿ ನವೀನ್ ಭಂಡಾರಿ, ಅಗರಿ ಭಗವಾನ್ ದಾಸ್ ಭಂಡಾರಿಯವರನ್ನು ಅಗಲಿದ್ದಾರೆ. ಮೋಹನ್ ದಾಸ್ ಭಂಡಾರಿ ಅವರು ದೆಹಲಿ, ಜೆಮ್ಶೆಡ್ ಪುರ, ಮದ್ರಾಸ್, ಕೊಲ್ಕತ್ತಾ, ಬೆಂಗಳೂರು, ಹೊಸೂರು, ಮೂಡಲಪಾಳ್ಯ, ದೊಮ್ಮಲೂರು ಸೇರಿದಂತೆ ವಿಜಯ ಬ್ಯಾಂಕಿನಲ್ಲಿ 35 ವರ್ಷ ಕಾಲ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾಗಿದ್ದ ಭಂಡಾರಿಯವರು ಭಾಂಧವ್ಯ ಕ್ರೆಡಿಟ್ ಸಹಕಾರಿ ಲಿಮಿಟೆಡ್ ಎಂಬ ಸೊಸೈಟಿ ಬ್ಯಾಂಕ್ ಬೆಂಗಳೂರಿನಲ್ಲಿ ಸ್ಥಾಪಿಸಿ ಅದರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಮಂಗಳೂರು ವಿ.ವಿ ಅಂತರ ಕಾಲೇಜು ಯೋಗಾಸನ ಸ್ಪರ್ಧೆ : ಆಳ್ವಾಸ್ನ ಪುರುಷರ ತಂಡ ಚಾಂಪಿಯನ್ಸ್ ಹಾಗೂ ಮಹಿಳೆಯರು ದ್ವಿತೀಯ ಸ್ಥಾನ
ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪುರುಷರ ತಂಡವು ಪ್ರಥಮ ಸ್ಥಾನವನ್ನು ಪಡೆದರೆ, ಮಹಿಳೆಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಆ ಮೂಲಕ ಆಳ್ವಾಸ್ ಪದವಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ದಶಮ ಸಂಭ್ರಮ ದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ನೆರವೇರಿತು. ದೆಹಲಿಯ ಸಂಸದರಾದ ಭಾನ್ಸುರಿ ಸ್ವರಾಜ್ ಸಮಾರಂಭವನ್ನು ಉದ್ಘಾಟಿಸಿ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಕಾರ್ಯ ಯೋಜನೆಗಳನ್ನು ಮತ್ತು ಪಟ್ಲ ಸತೀಶ್ ಶೆಟ್ಟಿಯವರಿಗೆ ಕಲಾವಿದರ ಮೇಲಿರುವ ಕಾಳಜಿಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಪಟ್ಲ ಟ್ರಸ್ಟ್ ಫೌಂಡೇಶನ್ ಗೆ ಪೂರ್ಣ ಪ್ರಮಾಣದ ಸಹಕಾರದ ಭರವಸೆಯನ್ನು ನೀಡಿದರು. ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ಅಧ್ಯಕ್ಷರಾದ ವಸಂತ ಶೆಟ್ಟಿ ಬೆಳ್ಳಾರೆಯವರು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಅತಿಥಿಗಳಾಗಿ ಜಮ್ಮು ಕಾಶ್ಮೀರ ಸರ್ಕಾರದ ಪ್ರಿನ್ಸಿಪಾಲ್ ಸೆಕ್ರೆಟರಿ ರಾಜೇಶ್ ಪ್ರಸಾದ್, ಐಎಎಸ್ ಸಿಬಿಐಯ ಜಂಟಿ ನಿರ್ದೇಶಕ ಅಶ್ವಿನ್ ಶೇನ್ವಿ ಐಪಿಎಸ್, ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಪಟ್ಲ ಟ್ರಸ್ಟ್ ನ ಮಹಾದಾನಿ ಶಶಿಧರ ಶೆಟ್ಟಿ ಬರೋಡ, ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ದೆಹಲಿಯ ಪ್ರಸಿಧ್ಧ ಉದ್ಯಮಿಗಳಾದ ವಿವೇಕ್ ಅಗರ್ವಾಲ್, ಶ್ರೀಮತಿ ದೀಪ್ತಿ ಶರ್ಮ, ದೆಹಲಿ ಕರ್ನಾಟಕ ಸಂಘದ…
ಮೂಡುಬಿದಿರೆ: ನದಿ ಹಾಗೂ ಸಮುದ್ರ ತೀರಗಳಲ್ಲಿ ಜನರ ಸೆಲ್ಫಿಯ ಹುಚ್ಚಿನಿಂದಾಗಿ ಹೆಚ್ಚಿನ ಅವಘಡಗಳು ಸಂಭವಿಸುತ್ತಿವೆ. ಜೀವಕ್ಕೆ ಅಪಾಯ ತಂದೊಡ್ಡುವ ಇಂತಹ ದುಸ್ಸಾಹಸಕ್ಕೆ ಮುಂದಾಗಬಾರದು ಎಂದು ಸಮಾಜ ಸೇವಕ ಹಾಗೂ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ನುಡಿದರು. ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸ್ಪಟಿಕ ಫೋರಂನ ಈ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಬಾರಿಯ ಮಳೆಗಾಲದಲ್ಲಿ ಒಟ್ಟು 50ಕ್ಕೂ ಹೆಚ್ಚು ಜನರು ನೀರಿನಲ್ಲಿ ಕೊಚ್ಚಿಹೋಗುತ್ತಿರುವ ಸಂದರ್ಭಗಳಲ್ಲಿ ಕೇವಲ ಐವರನ್ನು ಮಾತ್ರ ರಕ್ಷಿಸಲು ಸಾಧ್ಯವಾಯಿತು ಎಂದು ಬೇಸರ ವ್ಯಕ್ತಪಡಿಸಿದರು. ತನ್ನ ಬದುಕಿನ ವೃತ್ತಾಂತವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡ ಅವರು, ತಾನು ಬಾಲ್ಯದಲ್ಲಿ ಸೇನೆಗೆ ಸೇರಬೇಕೆಂದು ಕನಸು ಕಂಡಿದ್ದೆ, ಆದರೆ ಬಡತನದಿಂದಾಗಿ ವಿದ್ಯಾಭ್ಯಾಸ ಪಡೆಯಲಾಗಲಿಲ್ಲ. ಆದರೆ ಇಂದು ತನ್ನಿಷ್ಟದ ಈಜು ಕಲೆಯನ್ನು ಕರಗತ ಮಾಡಿಗೊಂಡು ಕೈಲಾದಷ್ಟು ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದೇನೆ. ನದಿ ಹಾಗೂ ಸಮುದ್ರದ ಅಲೆಗಳಲ್ಲಿ ಕೊಚ್ಚಿಹೋಗುವವರನ್ನು ರಕ್ಷಿಸುವುದು ನನ್ನ ಕಾಯಕವಾಗಿದೆ. ಅದರಲ್ಲೆ ಆತ್ಮ ತೃಪ್ತಿ ಕಾಣುತ್ತಿದ್ದೇನೆ.…
ಮುಂಬಯಿ: ನಮ್ಮ ಕನ್ನಡ ಸಾಹಿತ್ಯಕ್ಕೆ ಪ್ರಭುದ್ಧವಾದ ಹಿನ್ನೆಲೆಯಿದೆ. ನಮಗೆ ಕಲಿಯುವ ಹುಮ್ಮಸ್ಸು ಇರಬೇಕು. ಜ್ಞಾನಕಾಂಕ್ಷೆ ಬಹಳ ಮುಖ್ಯವಾದುದು.ಮುಂಬಯಿಯಲ್ಲಿ ಸೃಜನಶೀಲತೆಗೆ ಸಾವಿರ ದಾರಿಗಳಿವೆ. ಇಲ್ಲಿ ಪ್ರೋತ್ಸಾಹ ಸಿಗುವಷ್ಟು ಬೇರೆಲ್ಲೂ ಸಿಗುವುದಿಲ್ಲ. ಇಂತಹ ಮುಂಬಯಿ ಕೇಂದ್ರಿತ ಕಾರ್ನಾಡ್ ಅವರ ಕತೆಗಳಲ್ಲಿ ಧನಾತ್ಮಕ ಚಿಂತನೆಗಳಿವೆ ಎಂದು ಜಾನಪದ ವಿದ್ವಾಂಸರಾದ ಡಾ.ಕಾಳೇಗೌಡ ನಾಗವಾರ ಅವರು ನುಡಿದರು. ಅವರು ಸೆಪ್ಟೆಂಬರ್ 26ರ ಶುಕ್ರವಾರದಂದು ಮುಂಬಯಿ ವಿಶ್ವವಿದ್ಯಾಲಯದ ಜೆ.ಪಿ.ನಾಯಕ್ ಭವನದಲ್ಲಿ ನಡೆದ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಅಂದು ಡಾ.ವಿಶ್ವನಾಥ ಕಾರ್ನಾಡರ ‘ಲಿಲ್ಲಿ ಬಂದು ಹೋದಳು’ ಕತಾ ಸಂಕಲನ, ಅಪರಾಧಿ(ಕನ್ನಡದಿಂದ ಮರಾಠಿಗೆ) ಹಾಗೂ ಇಂತಹ ‘ಮಂಗಳಮೂರ್ತಿ ಗಣೇಶ’ (ಮರಾಠಿಯಿಂದ ಕನ್ನಡಕ್ಕೆ) ಸರೋಜಿನಿ ತರೆ ಅವರ ಅನುವಾದಿತ ಕೃತಿಗಳನ್ನು ವೇದಿಕೆಯ ಗಣ್ಯರು ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಕಾರ್ನಾಡ್ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ.ಜಿ.ಎನ್.ಉಪಾಧ್ಯ ಅವರು ಮಾತನಾಡುತ್ತಾ ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಯ ಬಲವರ್ಧನೆಗೆ ಡಾ.ವಿಶ್ವನಾಥರ ಕೊಡುಗೆ ದೊಡ್ಡದು. ಕಳೆದ ಅನೇಕ ವರ್ಷಗಳಿಂದ…
ಬಂಟರ ಸಂಘ (ರಿ) ಬಜಪೆ ವಲಯದ ಮುಂದಿನ 3 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸಮಾಜ ಮುಖಿ ಸೇವಾ ಮನೋಭಾವದ ಸರಳ ವ್ಯಕ್ತಿತ್ವದ ವೇಣುಗೋಪಾಲ್ ಶೆಟ್ಟಿ ಕರಂಬಾರು ಪಡುಮನೆ ಆಯ್ಕೆಯಾಗಿದ್ದಾರೆ. ಹೋಟೆಲು ಉದ್ಯಮಿಯಾಗಿರುವ ವೇಣುಗೋಪಾಲ್ ಎಲ್ ಶೆಟ್ಟಿಯವರು ಮುಂಬಯಿ ಥಾಣೆ ಬಂಟ್ಸ್ ಅಸೋಸಿಯೇಶನ್ ಸಂಘದ ಅಧ್ಯಕ್ಷರಾಗಿ ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ, ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ತಿರುಪತಿ ತಿಮ್ಮಪ್ಪನ ಪರಮ ಭಕ್ತರಾಗಿರುವ ವೇಣುಗೋಪಾಲ್ ಶೆಟ್ಟಿಯವರು ಸಮಾಜ ಸೇವೆಯೊಂದಿಗೆ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ.
ಹಿಂದೂ ಧರ್ಮದ ಪ್ರಕಾರ ಕೆಲವೊಂದು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುವುದರಿಂದ ವ್ಯಕ್ತಿಯು ತನ್ನೆಲ್ಲಾ ಸಂಕಷ್ಟಗಳಿಂದ ಮುಕ್ತನಾಗಿ ಮೋಕ್ಷವನ್ನು ಪಡೆದುಕೊಳ್ಳುತ್ತಾನೆ ಎಂಬ ನಂಬಿಕೆ ಅನಾದಿ ಕಾಲದಿಂದಲೂ ನಡೆದು ಬಂದಿದೆ. ಅದಲ್ಲದೇ ತೀರ್ಥಯಾತ್ರೆ ಭಾರತೀಯ ಸನಾತನ ಹಿಂದೂ ಸಂಸ್ಕ್ರತಿಯ ಅವಿಭಾಜ್ಯ ಅಂಗವಾಗಿದೆ. ಅದೇ ಧಾರ್ಮಿಕ ಭಾವನೆಯನ್ನು ಮನವರಿಸಿಕೊಂಡು ಬಾಂಬೆ ಬಂಟ್ಸ್ ಅಸೋಸಿಯೇಶನ್ನ ಅಧ್ಯಕ್ಷ ಅಡ್ವೋಕೇಟ್ ಡಿ.ಕೆ ಶೆಟ್ಟಿ, ಉಪಾಧ್ಯಕ್ಷ ಐಕಳ ಕಿಶೋರ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ನ್ಯಾ. ಶೇಖರ್ ಆರ್ ಶೆಟ್ಟಿ ಹಾಗೂ ಇನ್ನಿತರನ್ನೊಳಗೊಂಡ 57 ಸದಸ್ಯರ ತಂಡ, ಆಡಳಿತ ಮಂಡಳಿಯ ಸದಸ್ಯರುಗಳಾದ ಜಯ ಸಿ ಶೆಟ್ಟಿ ಮತ್ತು ಶಶಿಧರ ಶೆಟ್ಟಿ ಅವರ ಮುಂದಾಳತ್ವದಲ್ಲಿ, ಶ್ರೀ ಸಂತೋಷ್ ಶೆಟ್ಟಿ ಗುರುಸ್ವಾಮಿಯವರ ಮಾರ್ಗದರ್ಶನದಲ್ಲಿ ಸೆಪ್ಟೆಂಬರ್ 21 ರಿಂದ 24 ರ ತನಕ ಉತ್ತರ ಪ್ರದೇಶದ ಪುಣ್ಯ ಕ್ಷೇತ್ರಗಳಾದ ಪ್ರಯಾಗ್ ರಾಜ್, ತ್ರಿವೇಣಿ ಸಂಗಮ, ಅಯೋಧ್ಯೆ ರಾಮಮಂದಿರ, ಕಾಶಿ ವಿಶ್ವನಾಥ ಹಾಗೂ ಇನ್ನುಳಿದ ಹಲವಾರು ಕ್ಷೇತ್ರಗಳ ಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿದರು. ಹೆಚ್ಚಿನ ಯಾತ್ರಿಗಳು 60 ವರ್ಷಗಳಿಗಿಂತ ಮೇಲ್ಪಟ್ಟವರಾದರೂ…
ಬೈಂದೂರು ಬಂಟರ ಯಾನೆ ನಾಡವರ ಸಂಘದ 30 ರ ಸಂಭ್ರಮದ ಅತ್ಯುನ್ನತ ಸಾಧಕಿ ಪ್ರಶಸ್ತಿಯನ್ನು ಹೇರoಜಲು ಡಾ. ಸಿಂಚನಾ ಎಸ್ ಶೆಟ್ಟಿಯವರಿಗೆ ಅವರ ಸ್ವಗೃಹದಲ್ಲಿ 30 ರ ಸಂಭ್ರಮದ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆಯವರು ನೀಡಿ ಸನ್ಮಾನಿಸಿದರು. ಈ ಸಂಧರ್ಭ ಹಿರಿಯರಾದ ಗಂಟೆಹೊಳೆ ನಾರಾಯಣ ಶೆಟ್ಟಿ, ಜಯಶೀಲಾ ಶೆಟ್ಟಿ, ಶ್ರೀಮತಿ ಶಶಿಕಲಾ ಶೆಟ್ಟಿ, ಮಂಜುನಾಥ್ ಶೆಟ್ಟಿ ಹೇರಂಜಲು, ಸದಾಶಿವ ಶೆಟ್ಟಿ ಕಾಲ್ತೋಡು, ಸೀತಾರಾಮ್ ಶೆಟ್ಟಿ ಕಾಲ್ತೋಡು, ಸತ್ಯರoಜನ್ ಶೆಟ್ಟಿ, ಶ್ರೀಮತಿ ಬೇಬಿ ಶೆಟ್ಟಿ, ಡಾ. ಸಿಂಚನ ಶೆಟ್ಟಿಯವರ ತಂದೆ ಶರತ್ ಶೆಟ್ಟಿ ಗುಲ್ವಾಡಿ, ತಾಯಿ ಶ್ರೀಮತಿ ನಾಗರತ್ನ ಶೆಟ್ಟಿ ಹಾಗೂ ಅನೇಕ ಸಮಾಜ ಬಾಂಧವರು ಉಪಸ್ಥಿತರಿದ್ದು ಸಾಧಕಿಯನ್ನು ಆಶೀರ್ವದಿಸಿದರು. ಶಶಿಧರ್ ಶೆಟ್ಟಿ ಸಾಲ್ಗದ್ದೆಯವರು ಡಾ. ಸಿಂಚನ ಅವರನ್ನು ಸನ್ಮಾನಿಸಿ ಮಾತನಾಡಿ, ಸಿಂಚನ ಅವರು ಈವಾಗಲೇ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ಪಡೆದಿದ್ದಾರೆ. ಇನ್ನೂ ಉನ್ನತ ಮಟ್ಟದ ಸಾಧನೆ ಮಾಡಲಿ ಇವರಿಗೆ ದೇವರು ಹೆಚ್ಚಿನ ಶಕ್ತಿ ಕೊಟ್ಟು ಬೈಂದೂರು ಬಂಟರ ಸಂಘಕ್ಕೆ ಹಾಗೂ ಸಮಾಜಕ್ಕೆ…















