Author: admin
ಶ್ರೀ ವನದುರ್ಗಾದೇವಿ ದೇವಸ್ಥಾನ ಮೂಡುಬೆಟ್ಟು ಕಾಳಾವರ ಇಲ್ಲಿನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶ್ರೀಕಾಂತ್ ಶೆಟ್ಟಿ ವಳಬ್ಬಿ ಮೆಲ್ಮನೆ ಸಳ್ವಾಡಿ ಇವರು ಆಯ್ಕೆಗೊಂಡಿದ್ದಾರೆ. ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಗೋಪಾಲ ಜೋಗಿ ಕಾಳಾವರ ಮೂಡುಬೆಟ್ಟು, ಶಿವರಾಮ ಮೂಡುಬೆಟ್ಟು, ಶ್ರೀಮತಿ ರೆಷ್ಮಾ ಜೋಗಿ, ಶ್ರಿಮತಿ ಸುರೇಖಾ ಕಾಳಾವಾರ, ಗಿರೀಶ್ ಶೆಟ್ಟಿ ಕೋಡಿಮನೆ, ಸಂಜೀವ್ ಯಾನೆ ಮಾಣಿ ಸಳ್ವಾಡಿ, ಸುಕುಮಾರ ಶೆಟ್ಟಿ ಬೀಡಿನಮನೆ, ರತ್ನಾಕರ ಶೆಟ್ಟಿ ಏನಕೆರೆಮನೆ ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ತಾಲೂಕು ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಕೃತಿ ಪಿ. ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿಜೇತ ವಿದ್ಯಾರ್ಥಿನಿಗೆ ಸಮಾರೋಪ ಸಮಾರಂಭದಲ್ಲಿ ವಿಜಯ ಫಲಕ ಹಾಗೂ ಪ್ರಶಸ್ತಿ ಪತ್ರ ನೀಡಿ ಇನ್ನು ಹೆಚ್ಚಿನ ಸಾಧನೆಗೆ ಹಾರೈಸಲಾಯಿತು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ ಕುಮಾರ್ ಮಾರ್ಗದರ್ಶನ ನೀಡಿದ್ದರು. ಸಂಸ್ಥೆಯ ವಸತಿ ನಿಲಯದ ಪಾಲಕಿ ಸ್ಪೂರ್ತಿ ತಂಡ ವ್ಯವಸ್ಥಾಪಕಿಯಾಗಿ ಕಾರ್ಯವನ್ನು ನಿರ್ವಹಿಸಿದ್ದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ತಂಡವನ್ನು ಅಭಿನಂದಿಸಿದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ…
ಬದುಕಿನ ಔನ್ನತ್ಯಕ್ಕೆ ಗುರು ಹಿರಿಯರ ಮಾರ್ಗದರ್ಶನ ಪ್ರೇರಣೆಯೆ ಕಾರಣ. ಸಂಸ್ಕೃತಿ, ಸಂಸ್ಕಾರ ಕಲಿಸಿಕೊಟ್ಟು ಬದುಕು ರೂಪಿಸುವ ಶಿಕ್ಷಣ ಸಂಸ್ಥೆಗಳ ಮೇಲೆ ಅಭಿಮಾನವಿರಿಸಿ ಬೆಂಬಲಿಸಬೇಕು ಎಂದು ಎಚ್.ಪಿ.ಸಿ.ಎಲ್ ಬಾಳ ಸಂಸ್ಥೆಯ ಜನರಲ್ ಮ್ಯಾನೇಜರ್ ಪ್ರಕಾಶ್ ಕುಮಾರ್ ಪಟ್ನಾಯಕ್ ನುಡಿದರು. ಅವರು ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಎಚ್.ಪಿ.ಸಿ.ಎಲ್ ಬಾಳ ಸಂಸ್ಥೆಯ ವತಿಯಿಂದ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಬಾಲಕರ ಮತ್ತು ಬಾಲಕಿಯರ ಶೌಚಾಲಯ ಹಾಗೂ ಕೊಳವೆ ಬಾವಿಯನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಸರಕಾರಿ ಶಾಲೆಯು ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಶಾಲೆಯಾಗಿರುವುದು ಶ್ಲಾಘನೀಯ. ಮುಂದೆಯೂ ನಮ್ಮ ಸಂಸ್ಥೆಯ ವತಿಯಿಂದ ಈ ಶಾಲೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು. ವೇದಿಕೆಯಲ್ಲಿ ಎಚ್.ಪಿ.ಸಿ.ಎಲ್ ಸಂಸ್ಥೆಯ ಆಪರೇಷನ್ ವಿಭಾಗದ ಸೀನಿಯರ್ ಮ್ಯಾನೇಜರ್ ವೆಂಕಟೇಶ್ ಚಿಂತಾಕಿಂಡಿ, ಮ್ಯಾನೇಜರ್ ಸೃಷ್ಠಿ, ಎಚ್.ಆರ್ ವಿಭಾಗದ ಅಸಿಸ್ಟೆಂಟ್ ವಾಸು ನಾಯಕ್ ಎಸ್, ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್…
ಹೃದಯ ಪೂರ್ವಕವಾಗಿ ಸಮಯಕ್ಕೆ ಸರಿಯಾಗಿ ಮತ್ತು ಅವಶ್ಯಕತೆಗೆ ಅನುಗುಣವಾಗಿ ನಾವು ಮಾಡುವ ಸೇವೆ ಸರಿಯಾದ ವ್ಯಕ್ತಿಗೆ ತಲುಪಿಸುವ ಸೇವಾಧರ್ಮ ನಮ್ಮಿಂದ ಆಗಬೇಕು. ಅದೇ ರೀತಿ ಯಾವುದೇ ವ್ಯಕ್ತಿಯ ಕಷ್ಟ ಸಮಯದಲ್ಲಿ ಅವಶ್ಯಕತೆಗೆ ಸಹಾಯ ಮಾಡಲು ಯಾರಾದರೂ ಸಿಕ್ಕೇ ಸಿಗುತ್ತಾರೆ ಇದು ನಿಯಮ. ಪುಣೆ ಬಂಟರ ಭವನದ ರೂವಾರಿ ಸಂತೋಷ್ ಶೆಟ್ಟಿಯವರ ಮಹತ್ವಾಕಾಂಕ್ಷೆಯ ಯೋಜನೆ ಕಲ್ಪ ವೃಕ್ಷದಲ್ಲಿ ಅದೆಷ್ಟೋ ಸಮಾಜದ ಅಶಕ್ತರಿಗೆ ಸಹಾಯ ಆಗಿದೆ. ಇದರಲ್ಲಿ ಸೇವಾ ಕಾರ್ಯ ಮಾಡುವ ಭಾಗ್ಯ ನನಗೂ ಸಿಕ್ಕಿದೆ. ಇದು ನನ್ನ ಸಮಾಜಕ್ಕಾಗಿ ನಾನು ಮಾಡುವ ಸೇವೆಯೆಂದೇ ಪರಿಗಣಿಸಿದ್ದೇನೆ. ಸಮಾಜದ ಮಕ್ಕಳು ಯಾರೂ ಕೂಡಾ ವಿದ್ಯೆಯಿಂದ ವಂಚಿತರಾಗಬಾರದು. ಸೃಷ್ಟಿಕರ್ತ ಪ್ರತಿಯೊಬ್ಬನ ಬದುಕಿನಲ್ಲಿ ಏನಾದರು ಬರೆದಿಡುತ್ತಾನೆ. ಅದನ್ನು ಸಾದಿಸುವ ಇಚ್ಚಾ ಶಕ್ತಿ ನಮ್ಮಲ್ಲಿರಬೇಕು. ಇದೇ ನನ್ನ ಜೀವನದಲ್ಲಿ ಕೂಡಾ ಬಂದಿದೆ. ವಿಚಾರಧಾರೆ ಸರಿಯಾಗಿದ್ದು ಒಂದೇ ದೃಡ ನಿರ್ಧಾರ, ಇಳಿದ ಕಾರ್ಯದಲ್ಲಿ ಸಾಧನೆ ಮಾಡಿ ಗುರಿ ಮುಟ್ಟಬೇಕು ಎಂಬ ಛಲ ಕಠಿನ ಪರಿಶ್ರಮ ಇದ್ದಿದರಿಂದ ಇಲ್ಲಿಯವರೆಗೆ ಬಂದಿದ್ದೇನೆ ಮತ್ತು ದೇಶ…
ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ಮಹತ್ವದ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅಂಬಿ ನಿಂಗೆ ವಯಸ್ಸಾಯ್ತೋ’ ಖ್ಯಾತಿಯ ಗುರುದತ್ ಗಾಣಿಗ ನಿರ್ದೇಶನದ ಈ ಚಿತ್ರದ ರಾಜ್ ಬಿ ಶೆಟ್ಟಿ ಪಾತ್ರದ ಫಸ್ಟ್ ಲುಕ್ ಇದೀಗ ಬಿಡುಗಡೆಯಾಗಿದೆ. ಅದ್ದೂರಿಯಾಗಿ ಗಮನ ಸೆಳೆಯುವಂತೆ ಫಸ್ಟ್ ಲುಕ್ ಟೀಸರ್ ಕೂಡ ಮೂಡಿಬಂದಿದೆ. ರಾಜ್ ಬಿ ಶೆಟ್ಟಿ ನಟನೆ, ನಿರ್ಮಾಣದ ‘ಸು ಫ್ರಂ ಸೋ’ ಭಾರಿ ಜನಪ್ರಿಯತೆ ಪಡೆದ ಬೆನ್ನಲ್ಲಿಯೇ ಈ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಇಲ್ಲಿಯವರೆಗೂ ಚಿತ್ರತಂಡ ರಾಜ್ ಬಿ ಶೆಟ್ಟಿ ನಟಿಸುತ್ತಿರುವ ಸಂಗತಿಯನ್ನು ಗುಟ್ಟಾಗಿ ಇಟ್ಟಿತ್ತು. ಈ ಚಿತ್ರದ ಫಸ್ಟ್ ಲುಕ್ ಹೊರತಾಗಿ ಬೇರೆ ಯಾವುದೇ ಮಾಹಿತಿಯನ್ನು ಚಿತ್ರತಂಡ ನೀಡಿಲ್ಲ. ಮಾವೀರ ಎಂಬ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕತೆಯನ್ನು ಒಳಗೊಂಡಿರುವ ಸಿನಿಮಾವಾಗಿದ್ದು, ಪ್ರಜ್ವಲ್ ದೇವರಾಜ್ ವಿಶಿಷ್ಟ ಗೆಟಪ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಎಕ್ಕ’ ಚಿತ್ರದಲ್ಲಿ ಜನಪ್ರಿಯತೆ ಗಳಿಸಿದ್ದ ಸಂಪದಾ ಈ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ.…
ತಂತ್ರಜ್ಞಾನ ಬೆಳೆದ ಬಳಿಕ ಮಾಧ್ಯಮ ಕ್ಷೇತ್ರ ವಿಸ್ತಾರವಾಗಿದೆ. ಸಮಾಜದ ವಾಸ್ತವದ ಸತ್ಯ ಸಂಗತಿಗಳನ್ನು ಜನರ ಮುಂದಿಡುವ ಕೆಲಸ ಆಗಬೇಕು. ಮಾಧ್ಯಮ ಶಕ್ತಿಯ ಸದ್ಭಳಕೆ ಇಂದಿನ ಅಗತ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದರು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಉದ್ಘಾಟಿಸಿ, ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳ ಅವ್ಯಾಹತ ಬಳಕೆಯಿಂದ ಸಮಾಜದ ಸ್ವಾಸ್ಥೃ ಹಾಳಾಗುತ್ತಿದೆ. ಮಾಧ್ಯಮಗಳು ವಾದ, ಪ್ರತಿವಾದ, ತೀರ್ಪು ನೀಡದೆ ತೀರ್ಮಾನ ಕೈಗೊಳ್ಳಲು ಓದುಗರ, ವೀಕ್ಷಕರಿಗೆ ಅವಕಾಶ ಕಲ್ಪಿಸಬೇಕು. ವಸ್ತುನಿಷ್ಠ, ನಿಪ್ಷಕ್ಷಪಾತವಾಗಿ ಮಾಧ್ಯಮಗಳು ಕೆಲಸ ಮಾಡಿದಾಗ ಪ್ರಭಾವ ಶಾಲಿಯಾಗಲು ಸಾಧ್ಯ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರಿಗೆ ಸುವರ್ಣ ಸಂಭ್ರಮ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮತ್ತು ಪತ್ರಿಕೋದ್ಯಮ ಪರಸ್ಪರ ಸಂಬಂಧ ಹೊಂದಿದ್ದು, ಸಾರ್ವಜನಿಕರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಪ್ರತಿಯೊಂದು…
ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಶಾಲೆಯಲ್ಲಿ “ಕನ್ನಡ ಸಾಹಿತ್ಯ ಪ್ರೇರಣೆ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬ್ರಹ್ಮಾವರದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಜಿ ರಾಮಚಂದ್ರ ಐತಾಳ್ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಶಾಲಾ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಕನ್ನಡ ಭಾಷೆಯ ಮಹತ್ವವನ್ನು ವಿವರಿಸಿ ಅದನ್ನು ಉಳಿಸಿ ಬೆಳೆಸುವಲ್ಲಿ ನಾವೆಲ್ಲರೂ ಸಕ್ರಿಯವಾಗಿ ತೊಡಗಿಕೊಳ್ಳಬೇಕೆಂಬ ಸಂದೇಶವನ್ನು ನೀಡಿದರು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಹನಿಗವನ ರಚನೆ, ಕವನ ಪಠಣ, ಜ್ಞಾಪಕಶಕ್ತಿ ಪರೀಕ್ಷೆ ಹೀಗೆ ಅನೇಕ ಚಟುವಟಿಕೆಗಳನ್ನು ಆಯೋಜಿಸಿದ್ದು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ವೈಯಕ್ತಿಕ ಕಲ್ಪನೆಗಳನ್ನು ಕನ್ನಡದಲ್ಲಿ ಸಮರ್ಥವಾಗಿ ಮಂಡಿಸಿದರು. ಹಲವರು ತಮ್ಮದೇ ಆದ ಕವನಗಳನ್ನು ರಚಿಸಿ ಸವಿನಯವಾಗಿ ಪಠಿಸಿದರು. ಉತ್ತಮ ಪ್ರತಿಭೆಯನ್ನು ತೋರ್ಪಡಿಸಿದ ವಿದ್ಯಾರ್ಥಿಗಳನ್ನು ಸಂಪನ್ಮೂಲ ವ್ಯಕ್ತಿಗಳು ಗೌರವಿಸಿದರು. ಜೊತೆಗೆ ಅಭಿನಯ ಗೀತೆಯನ್ನು ವಿದ್ಯಾರ್ಥಿಗಳ ಮೂಲಕ ಮಾಡಿಸಿದರು. ಕನ್ನಡ ಸಾಹಿತ್ಯದ ವಿವಿದ ಪ್ರಕಾರಗಳಾದ ಯಕ್ಷಗಾನ, ಜನಪದ ಗೀತೆ, ನಾಟಕ, ಏಕಪಾತ್ರ ಅಭಿನಯವನ್ನು ಸಂಪನ್ಮೂಲ ವ್ಯಕ್ತಿಗಳು ಮಾಡುವುದರ ಮೂಲಕ ಮಕ್ಕಳಿಗೆ…
ನಮ್ಮ ಪೂರ್ವಜರು ಅನುಸರಿಸಿಕೊಂಡು ಬಂದಿರುವ ನಮ್ಮ ಹಿಂದಿನ ಸಂಸ್ಕೃತಿ, ಸಂಪ್ರದಾಯಗಳನ್ನು ಇಂದಿನ ಯುವ ಪೀಳಿಗೆ ತಿಳಿಸುವ ಕಾರ್ಯದೊಂದಿಗೆ ಮುಂದುವರೆಸಿಕೊಂಡು ಹೋಗಲು ಪ್ರೇರಣೆ ನೀಡಬೇಕು. ಇಂತಹ ಕಾರ್ಯಕ್ಕೆ ಆಟಿಡೊಂಜಿ ಐಸಿರೊ ಕಾರ್ಯಕ್ರಮ ಪೂರಕವಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಭಿಪ್ರಾಯಪಟ್ಟರು. ಬಂಟರ ಸಂಘ ಉಳ್ಳಾಲ ವಲಯ, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗೂ ಬೆಂಗಳೂರು ಬಂಟರ ಸಂಘ ಇವರ ಸಹಯೋಗದೊಂದಿಗೆ ಇಪ್ಪತ್ತ ನಾಲ್ಕು ಗ್ರಾಮಗಳ ಸಮಾಜ ಬಾಂಧವರಿಂದ ಅಸೈಗೋಳಿ ಬಂಟರ ಭವನದಲ್ಲಿ ನಡೆದ ಆಟಿದ ಐಸಿರೊ ಹಾಗೂ ನೂತನ ವಲಯ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘ ಉಳ್ಳಾಲ ವಲಯ ಇದರ ಅಧ್ಯಕ್ಷ ರವೀಂದ್ರ ರೈ ಕಲ್ಲಿಮಾರು ಮಾತನಾಡಿ, ಸಂಘದ ಎಲ್ಲಾ ಸದಸ್ಯರು ಪದಾಧಿಕಾರಿಗಳು ಮತ್ತು ಸಮಾಜ ಬಾಂಧವರು ಸಂಘಟಿತರಾಗಿ ವಿವಿಧ ಸಮಾಜಮುಖಿ ಕಾರ್ಯ ಆಗಬೇಕು…
ಬಂಟರ ಸಂಘ ಕಾವಳಕಟ್ಟೆ ವಲಯದ ಪದಗ್ರಹಣ, ಆಟಿದ ಕೂಟ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಕೆದ್ದಳಿಕೆ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಪಶುಪಾಲನ ಕಾರ್ಯಕರ್ತ ತುಕಾರಾಂ ಶೆಟ್ಟಿಯವರು ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಾಮದಪದವು ವಲಯದ ಅಧ್ಯಕ್ಷರಾದ ವಸಂತ ಶೆಟ್ಟಿ ಕೇದಗೆ ಮತ್ತು ಉಪಾಧ್ಯಕ್ಷರಾದ ಯಶೋಧರ್ ಶೆಟ್ಟಿ ದಂಡೆ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸೀತಾರಾಮ್ ಶೆಟ್ಟಿ ಉಪಸ್ಥಿತರಿದ್ದರು. ವಲಯದ ಅಧ್ಯಕ್ಷರಾದ ಮೋಹನ್ ಶೆಟ್ಟಿ ನರ್ವಲ್ದಡ್ಡ, ಗೌರವಾಧ್ಯಕ್ಷರಾದ ಜಗನ್ನಾಥ್ ಶೆಟ್ಟಿ ಕೆದ್ದಳಿಕೆ, ಉಪಾಧ್ಯಕ್ಷರಾದ ಪ್ರದೀಪ್ ಶೆಟ್ಟಿ ಬಿಯಂತಬೆಟ್ಟು, ಲೋಕನಾಥ್ ಶೆಟ್ಟಿ ಬಂಗೇರಕೆರೆ, ಸದಾನಂದ ಪೂಂಜಾ ದೈಕಿನಕಟ್ಟೆ, ಪ್ರಕಾಶ್ ವಿ ಶೆಟ್ಟಿ ಮದ್ವ, ಸಂದರ್ ಶೆಟ್ಟಿ ಶಾಂತಿ ನಿಲಯ, ಯುವ ವಿಭಾಗದ ಅಧ್ಯಕ್ಷರಾದ ಕಿಶೋರ್ ಕುಮಾರ್ ರೈ, ಉಷಾ ಪ್ರಕಾಶ್ ಶೆಟ್ಟಿ ಮದ್ವ ಕಾಡಬೆಟ್ಟು ಹಾಗೂ ವಲಯದ ಪ್ರಮುಖರು ಭಾಗವಹಿಸಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ನಾಗೇಶ್ ರೈ ಬೆಂಗತ್ತೋಡಿ, ಗಣೇಶ್ ಶೆಟ್ಟಿ ನಡೆಸಿಕೊಟ್ಟರು. ಪ್ರಾರ್ಥನೆಯನ್ನು ಕು. ನಿಧಿಶಾ ಮತ್ತು ಕು.…
ಅಮೆರಿಕದಲ್ಲಿ ನಡೆದ ಯುಎಸ್ ಓಪನ್ ಸೂಪರ್ 300 ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಟೂರ್ನಿಯಲ್ಲಿ ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದು ದೇಶವೇ ಹೆಮ್ಮೆ ಪಡುವ ಸಾಧನೆಗೈದ ಕಾರ್ಕಳದ ರಾಮಪ್ರಕಾಶ್ ಶೆಟ್ಟಿ ಮತ್ತು ಶ್ರೀಮತಿ ಶಲ್ಮಿಲಿ ಶೆಟ್ಟಿ ದಂಪತಿಗಳ ಸುಪುತ್ರ ಆಯುಷ್ ಶೆಟ್ಟಿ ಅವರನ್ನು ಮುನಿಯಾಲು ಉದಯ ಕುಮಾರ್ ಶೆಟ್ಟಿಯವರು ಅವರ ಮನೆಗೆ ತೆರಳಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ಪುರಸಭಾ ಮಾಜಿ ಅಧ್ಯಕ್ಷರಾದ ಸುಭಿತ್ ಎನ್.ಆರ್, ಕೆ.ಎಮ್.ಎಫ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಪ್ರವೀಣ್ ಶೆಟ್ಟಿ, ಸುದರ್ಶನ್ ಬಂಗೇರ ಕಾಂತಾವರ, ಸೂರಜ್ ಶೆಟ್ಟಿ ನಕ್ರೆ, ಮಂಜುನಾಥ ಜೋಗಿ, ಸುಹಾಸ್ ಕಾವ ಮೊದಲಾದವರು ಉಪಸ್ಥಿತರಿದ್ದರು.















