Author: admin

ಬಂಟ್ಸ್ ಪ್ರೀಮಿಯರ್ ಲೀಗ್ ಸೀಸನ್ – 4 ದಿವಂಗತ ದಿವೇಶ್ ಆಳ್ವರ ಸ್ಮರಣಾರ್ಥವಾಗಿ ನಡೆದ ಕ್ರಿಕೆಟ್ ಪಂದ್ಯಾಟವನ್ನು ಸಂಗೀತ ನಿರ್ದೇಶಕ ಗುರುಕಿರಣ್ ಶೆಟ್ಟಿಯವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನಾನು ದಿವೇಶ್ ಶಾಲಾ ಜೀವನದ ಸಮಯದಿಂದ ಆತ್ಮೀಯ ಸ್ನೇಹಿತರು. ಅವನಿಗೆ ಕ್ರೀಡೆಯ ಬಗ್ಗೆ ಅತಿಯಾದ ಆಸಕ್ತಿ ಇತ್ತು. ನನ್ನ ಆತ್ಮೀಯನ ಕನಸಿನ ಕೂಸೆ ಈ ಬಂಟ್ಸ್ ಪ್ರೀಮಿಯರ್ ಲೀಗ್. ಈ ವರ್ಷದ‌ ಸೀಸನ್ ಗೆ ಕತಾರ್ ನ ರವಿ ಅಣ್ಣನ ತಂಡವು ಸೇರ್ಪಡೆಯಾದುದರಿಂದ ಮುಂದೆ ಗಲ್ಫ್ ರಾಷ್ಟ್ರದ ಎಲ್ಲಾ ತಂಡಗಳು ಸೇರ್ಪಡೆಗೊಂಡು ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟವಾಗಲಿ ಎಂದು ಮಾತನಾಡುತ್ತಾ ಕ್ರೀಡಾ ಕೂಟಕ್ಕೆ ಶುಭವನ್ನು ಹಾರೈಸಿದರು. ಯುಎಇ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರು ಮಾತನಾಡುತ್ತಾ, ಈ ಕ್ರಿಕೆಟ್ ಪಂದ್ಯಾಟದ ಹತ್ತು ತಂಡದಲ್ಲಿ ಇನ್ನೂರಕ್ಕೂ ಅಧಿಕ ಮಂದಿ ಕ್ರೀಡಾ ಪಟುಗಳಾಗಿ ಬಾಗವಹಿಸಿದ್ದೀರಿ. ನಿಮಗೆ ಅಭಿನಂದನೆಗಳು. ನೀವೆಲ್ಲಾ ಕೇವಲ ಕ್ರಿಕೆಟ್ ಗೆ ಮಾತ್ರ ಸೀಮಿತವಲ್ಲ. ಯುಎಇ ಬಂಟ್ಸ್ ನ ಪ್ರತಿಯೊಂದು ಕಾರ್ಯಕ್ರಮಕ್ಕೆ…

Read More

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ, ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತ, ಬೆಲ್ಜಿಯಮ್‌ನ ಕಿಂಗ್ ಫಿಲಿಪ್ ಅವರಿಂದ ಆರ್ಡರ್ ಆಫ್ ಲಿಯೋಪೋಲ್ಡ್ ಕಮಾಂಡರ್ ಪದಕವನ್ನು ಪಡೆದ ಬಂಟ ಸಮಾಜದ ದಿಗ್ಗಜ, ಅಗ್ರಮಾನ್ಯ ಸಮಾಜ ಸೇವಾ ಸಾಧಕರಾದ ಆಲ್ ಕಾರ್ಗೋ ಲಾಜಿಸ್ಟಿಕ್ ಲಿಮಿಟೆಡ್ ನ ಸಿಎಂಡಿ ಡಾ|ಶಶಿಕಿರಣ್ ಶೆಟ್ಟಿಯವರಿಗೆ ಜಿ.ಎಂ ಶೆಟ್ಟಿ ಬೆಸ್ಟ್ ಸೋಶಿಯಲ್ ಸರ್ವಿಸ್ ಪ್ರಶಸ್ತಿ ಪ್ರಧಾನ ಮಾಡಿ, ವಿವಿಧ ಬಗೆಯ ತುಳುನಾಡ ಸಂಸ್ಕ್ರತಿಯನ್ನು ಬಿಂಬಿಸುವ ರೀತಿಯಲ್ಲಿ ಫಲಪುಷ್ಪ ತರಕಾರಿ ಸೇರಿದಂತೆ, ಸನ್ಮಾನ ಪೀಠದಲ್ಲಿ ಕುಳ್ಳಿರಿಸಿ ಶಾಲು, ಹಾರ, ದೇವರ ಮೂರ್ತಿ, ಶಿವಾಜಿ ಪ್ರತಿಮೆ, ಸನ್ಮಾನ ಪತ್ರ ಸ್ಮರಣಿಕೆ ನೀಡಿ ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ, ಡಾ| ಕೆ ಪ್ರಕಾಶ್ ಶೆಟ್ಟಿ ಸೇರಿದಂತೆ ವೇದಿಕೆಯಲ್ಲಿದ್ದ ಗಣ್ಯಾತಿಗಣ್ಯರು ಸನ್ಮಾನಿಸಿದರು.ಈ ಸಂಧರ್ಭ ವಿ.ಕೆ ಗ್ರೂಪ್ ಆಫ್ ಕಂಪನಿ ಸಿಎಂಡಿ ಕೆ.ಎಂ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಅಜಂತಾ…

Read More

ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಮ್ ನಲ್ಲಿ ಜರಗುವ 25ನೇ ತುಳು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ, ತುಳು ಕನ್ನಡ ಸಾಹಿತಿ ಹಾಗೂ ಹಿರಿಯ ಯಕ್ಷಗಾನ ಅರ್ಥಧಾರಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಆಯ್ಕೆಯಾಗಿದ್ದಾರೆ. ಇದೇ 2025 ಫೆಬ್ರವರಿ 6ರಂದು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಮಾರ್ಗದರ್ಶನದೊಂದಿಗೆ ‘ತುಳು ಬಾಸೆ ಸಂಸ್ಕೃತಿದ ಜಾಗೃತಿಗಾದ್’ ಎಂಬ ಧ್ಯೇಯ ವಾಕ್ಯದೊಂದಿಗೆ ಒಡಿಯೂರು ಶ್ರೀ ದತ್ತಾಂಜನೇಯ ಕ್ಷೇತ್ರದಲ್ಲಿ ಸಮ್ಮೇಳನ ನಡೆಯಲಿದೆ. ಶಿಕ್ಷಣ, ಸಾಹಿತ್ಯ, ಕಲೆ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಭಾಸ್ಕರ ರೈ ಕುಕ್ಕುವಳ್ಳಿ ಓರ್ವ ಬಹುಮುಖೀ ಸಾಧಕರು. ಪುತ್ತೂರು ತಾಲೂಕು ಇರ್ದೆ ಗ್ರಾಮದ ಪ್ರತಿಷ್ಠಿತ ಬಾಲ್ಯೊಟ್ಟು ಗುತ್ತು ಮನೆತನದಲ್ಲಿ ಜನಿಸಿ ನವೋದಯ ಪ್ರೌಢಶಾಲೆ ಬೆಟ್ಟಂಪಾಡಿ ಮತ್ತು ಪುತ್ತೂರಿನ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಪದವಿ, ಮಂಗಳೂರಿನ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಎಡ್ ಹಾಗೂ…

Read More

ಮೂಡುಬಿದಿರೆ: ನವದೆಹಲಿಯ ಕರ್ತವ್ಯಪಥ್‌ದಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನ ಶಿಬಿರ ೨೦೨೫ರಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ(ಎನ್‌ಸಿಸಿ) ಕರ್ನಾಟಕ ಗೋವಾ ನಿರ್ದೇಶನಾಲಯವು ಪ್ರತಿಷ್ಠಿತ ಪ್ರಧಾನಮಂತ್ರಿಗಳ ಬ್ಯಾನರ್‌ನ್ನು ಗೆದ್ದುಕೊಂಡಿತು. ಕರ್ನಾಟಕ ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಡಿಸೈನ್ ವಿಭಾಗದ ವಾಯುದಳದ ಎನ್‌ಸಿಸಿ ಕೆಡೆಟ್ ಹಾರ್ದಿಕ್ ಶೆಟ್ಟಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಸ್ವೀಕಾರ ಮಾಡುವ ಅವಕಾಶ ಒದಗಿತು. ಎನ್‌ಸಿಸಿ ಕರ್ನಾಟಕ ಗೋವಾ ನಿರ್ದೇಶನಾಲಯವು ೧೨೪ ಕೆಡೆಟ್‌ಗಳನ್ನು ಈ ಭಾರಿ ಗಣರಾಜ್ಯೋತ್ಸವ ಪಥಸಂಚಲನ ಶಿಬಿರಕ್ಕೆ ಕಳುಹಿಸಿದ್ದು, ಅವರಲ್ಲಿ ಆಳ್ವಾಸ್‌ನ ಹಾರ್ದಿಕ್ ಶೆಟ್ಟಿ ಎಲ್ಲಾ ವಿಭಾಗದಲ್ಲೂ ಉತ್ತಮ ಕರ‍್ಯಕ್ಷಮತೆ ಮೆರೆದಿದ್ದು, ಡ್ರಿಲ್ ಚಟುವಟಿಕೆಯಲ್ಲಿ ಶ್ರೇಷ್ಠ ಮಟ್ಟದ ಪ್ರದರ್ಶನ ತೋರಿದ್ದರಿಂದಾಗಿ ಈ ಅವಕಾಶ ಒದಗಿ ಬಂದಿದೆ. ಪ್ರಧಾನಮಂತ್ರಿಗಳ ಬ್ಯಾನರ್ ಪ್ರಶಸ್ತಿಯನ್ನು ಪಡೆಯುವ ತಂಡವು ಹಲವು ಹಂತದ ಸ್ಪರ್ಧೆಗಳನ್ನು ಗೆದ್ದು, ಈ ಪ್ರಶಸ್ತಿಯನ್ನು ಸ್ವೀಕಾರ ಮಾಡುತ್ತದೆ. ಮುಖ್ಯವಾಗಿ ಅತ್ಯುತ್ತಮ ಗೌರವ ರಕ್ಷೆ, ಲೈನ್ ಏರಿಯದ ಸದ್ಬಳಕೆ, ಪ್ಲಾö್ಯಗ್ ಏರಿಯದ ಬಳಕೆ,…

Read More

ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಇದರ ಅಧಿಕೃತ ಜಿಲ್ಲಾ ಕಚೇರಿಯನ್ನು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉದಯ ಕುಮಾರ್ ಶೆಟ್ಟಿ ಮುನಿಯಾಲು ಮತ್ತಿತರರು ಉಪಸ್ಥಿತರಿದ್ದರು.

Read More

ತುಳುನಾಡಿನ ಕೃಷಿ ಪ್ರಧಾನವಾದ ಕುಟುಂಬದಿಂದ ಮಹಾನಗರ ಮುಂಬಯಿ, ಪುಣೆಗೆ ಬಂದು ಕಳೆದ ನೂರು ವರ್ಷಗಳಿಂದ ಹೋಟೆಲ್ ಉದ್ಯಮದಲ್ಲಿ ತೊಡಗಿಸಿಕೊಂಡಿರುವುದಲ್ಲದೇ ಸಮಾಜದ ಏಳಿಗೆಗಾಗಿ ಅದೆಷ್ಟೋ ಬಂಟರು ದುಡಿದಿದ್ದಾರೆ. ಸಮಾಜದಲ್ಲಿ ಬಂಟರೆಂದರೆ ಹೆಮ್ಮೆಯ ಗೌರವವಿದೆ. ಜನ್ಮ ಭೂಮಿಯಿಂದ ಬಂದು ಕರ್ಮ ಭೂಮಿಯಲ್ಲಿ ಕಠಿನ ಪರಿಶ್ರಮದಿಂದ ನಾವು ಮೇಲೆ ಬಂದವರು. ನಮ್ಮ ಸಂಘವೆಂದರೆ ನಮಗೆ ಗೌರವ ಹೆಮ್ಮೆ ಇರುತ್ತದೆ. ಇಂದಿನ ಈ ಕಾರ್ಯಕ್ರಮದಲ್ಲಿ ಪುಣೆ ಬಂಟರ ಸಂಘದ ಅಧಾರ ಸ್ಥಂಬ ಜಗನ್ನಾಥ್ ಶೆಟ್ಟಿಯವರನ್ನು ನೆನೆಯಲೇಬೇಕು. ಅವರು ಕಂಡ ಭವನದ ಕನಸು ನನಸುಗೊಂಡಿದೆ. ಈ ಕಾರ್ಯವನ್ನು ಡೈನಾಮಿಕ್ ನಾಯಕ, ಅಧ್ಯಕ್ಷರಾದ ಸಂತೋಷ್ ಶೆಟ್ಟಿಯವರು ಮಾಡಿಕೊಟ್ಟ ನಂತರವೂ ವಿರಮಿಸದೇ ಹಲವಾರು ಯೋಜನೆಗಳ ಮೂಲಕ ತೊಡಗಿಸಿಕೊಂಡಿದ್ದಾರೆ. ಸಂತೋಷ್ ಶೆಟ್ಟಿ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡಿರುವ ಈ ಭವನಕ್ಕೆ ಬಂದಾಗ ದೇವಸ್ಥಾನಕ್ಕೆ ಬಂದಂತೆ ಭಾಸವಾಗುತ್ತದೆ. ಚಾವಡಿಯಲ್ಲಿರುವ ಆ ಶಕ್ತಿಗಳ ಮಹಿಮೆ ಬಹಳಷ್ಟಿದೆ. ನಾವು ಬೆಳೆದಂತೆ, ನಮ್ಮ ಸಮಾಜ ಬೆಳೆಯಬೇಕು. ದೇಶವು ಬೆಳಗಬೇಕು. ಸಮಾಜದ ಸಂಸ್ಥೆಯ ಜೊತೆ ಎಲ್ಲರೂ ಸೇರಿಕೊಂಡು ಸೇವೆ ಮಾಡಬೇಕು ಎಂದು…

Read More

ಕಾಸರಗೋಡು ಜಿಲ್ಲಾ 7 ನೇ ಚುಟುಕು ಸಾಹಿತ್ಯ ಸಮ್ಮೇಳನಾ ಅಧ್ಯಕ್ಷರಾಗಿ ಕವಿ, ಅಧ್ಯಾಪಕ, ಸಂಘಟಕ, ಹವ್ಯಾಸಿ ಯಕ್ಷಗಾನ, ನಾಟಕ ಕಲಾವಿದ ಹರೀಶ್ ಸುಲಾಯ ಒಡ್ಡಂಬೆಟ್ಟು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ತಿಳಿಸಿದ್ದಾರೆ. ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ಮಾರ್ಚ್ 27, ಗುರುವಾರ ನಡೆಯುವ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯಮಟ್ಟದ ಚುಟುಕು ಗೋಷ್ಠಿ, ರಾಜ್ಯ ಮಟ್ಟದ ವಿದ್ಯಾರ್ಥಿ ಚುಟುಕು ಗೋಷ್ಠಿ, ರಾಜ್ಯಮಟ್ಟದ ಚುಟುಕು ಕಥಾ ಗೋಷ್ಠಿಯೂ ಸಾಹಿತ್ಯಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿರುವುದು. ತುಳು, ಕನ್ನಡ ದ್ವಿಭಾಷಾ ಕವಿ ಹರೀಶ್ ಸುಲಾಯ ಒಡ್ಡಂಬೆಟ್ಟು ಅವರು ಈಗಾಗಲೇ ಬೆಳಕು, ಉದಿಪು ಸುರಗಿ, ದನಿಯಾದ ಹನಿಗಳು, ಮಿಠಾಯಿ ಡಬ್ಬ ಎಂಬ ಕೃತಿಗಳನ್ನು ಸಾರಸ್ವತ ಲೋಕಕ್ಕೆ ನೀಡಿರುವುದಲ್ಲದೇ ಹಲವಾರು ಪುಸ್ತಕಗಳಿಗೆ ಮುನ್ನುಡಿ ಮತ್ತು ಬೆನ್ನುಡಿಗಳನ್ನು ಕೂಡಾ ಬರೆದಿರುವರು. ಇವರು ಸುಮಾರು 5000 ಕ್ಕಿಂತಲೂ ಹೆಚ್ಚಿನ ಹನಿಗವನ ಮತ್ತು ಚುಟುಕುಗಳನ್ನು…

Read More

ಯಸ್ ಬಿ ಗ್ರೂಪ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಅವರ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿ ನಿರ್ದೇಶನದ “ಪಿಲಿಪಂಜ” ವಿಭಿನ್ನ ಶೈಲಿಯ ತಂತ್ರಜ್ಞಾನದ ತುಳು ಸಿನಿಮಾದ “ಫಸ್ಟ್ ಲುಕ್ ಪೋಸ್ಟರನ್ನು ಜನವರಿ 27 ರಂದು ಸಾವಿರಾರು ವರ್ಷಗಳ ಇತಿಹಾಸವಿರುವ ವನದುರ್ಗೆ ಎಂದೇ ಪ್ರಸಿದ್ಧಿ ಪಡೆದಿರುವ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೇದಮೂರ್ತಿ ಬಿ ಕೆ ವಿಘ್ಣೇಶ್ ಭಟ್ ಅವರು ಶ್ರೀ ಕ್ಷೇತ್ರದಲ್ಲಿ ಬಿಡುಗಡೆ ಮಾಡಿ ಚಿತ್ರಕ್ಕೆ ಶುಭಾಶೀರ್ವಾದ ನೀಡಿದರು. ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀಧರ್ ಭಟ್, ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ (ರಿ) ಅಬ್ಬನಡ್ಕ ಇದರ ಸಂಚಾಲಕರಾದ ಸಂದೀಪ್ ವಿ ಪೂಜಾರಿ, ಚಿತ್ರದ ನಿರ್ಮಾಪಕರಾದ ಪ್ರತೀಕ್ ಯು ಪೂಜಾರಿ ಕಾವೂರು, ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಹಾಗೂ ನಟ ರಮೇಶ್ ರೈ ಕುಕ್ಕುವಳ್ಳಿ, ಪ್ರೊಡಕ್ಷನ್ ಮೆನೇಜರ್ ಕಾರ್ತಿಕ್ ಶೆಟ್ಟಿ, ಸಂಕಲನಕಾರ ಶ್ರೀನಾಥ್ ಪವರ್ ಮುಂತಾದವರು ಉಪಸ್ಥಿತರಿದ್ದರು. “ಪಿಲಿಪಂಜ” ಚಲನಚಿತ್ರವು ಎರಡು…

Read More

ಬಂಟರ ಸಂಘ ಮುಂಬಯಿಯ ಉಪಾಧ್ಯಕ್ಷರಾದ ಮಹೇಶ್ ಎಸ್ ಶೆಟ್ಟಿಯವರ ಮಾತೃಶ್ರೀ ಲೀಲಾವತಿ ಎಸ್‌ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆಯು ಜನವರಿ 23 ರಂದು ಪೊವಾಯಿಯ ಮಾತೃಭೂಮಿ ಕಚೇರಿಯಲ್ಲಿ ನಡೆಯಿತು. ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿ ಆಶ್ರಯದಲ್ಲಿ ಮಹೇಶ್ ಎಸ್ ಶೆಟ್ಟಿಯವರು ತಾಯಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಾದೇಶಿಕ ಸಮಿತಿಯ ಸಮನ್ವಯಾಧಿಕಾರಿಗಳಾದ ರವೀಂದ್ರನಾಥ ಎಮ್ ಭಂಡಾರಿ, ಕಾರ್ಯಾಧ್ಯಕ್ಷ ಸೂರಜ್ ಶೆಟ್ಟಿ, ಮಹಿಳಾ ಕಾರ್ಯಾಧ್ಯಕ್ಷೆ ಶೋಭಾ ಶೆಟ್ಟಿ, ಬಂಟರ ಸಂಘದ ಮ್ಯಾರೇಜ್ ಸೆಲ್ ನ ಕಾರ್ಯಾಧ್ಯಕ್ಷ ರಮೇಶ್ ರೈ ಮತ್ತು ಉಪ ಕಾರ್ಯಾಧ್ಯಕ್ಷ ಯಶವಂತ ಶೆಟ್ಟಿ ಅವರು ಸಂತಾಪ ವ್ಯಕ್ತಪಡಿಸುತ್ತಾ, ಲೀಲಾವತಿ ಅಮ್ಮನ ಸೇವಾ ಕಾರ್ಯಗಳ ಬಗ್ಗೆ ವಿವರವಾಗಿ ಮಾತನಾಡಿದರು ಮತ್ತು ಮಹೇಶ್ ಶೆಟ್ಟಿ ಅವರು ತಮ್ಮ ತಾಯಿಗೆ ನೀಡಿದ ಸೇವೆಯ ಬಗ್ಗೆ ಶ್ಲಾಘಿಸಿದರು. ತಾಯಿಯ ಪ್ರೇರಣೆಯಿಂದ ಬಂಟರ ಸಮುದಾಯಕ್ಕೆ ಮಹೇಶ್ ಶೆಟ್ಟಿಯವರು ಸಲ್ಲಿಸಿದ ಸೇವೆಯ ಬಗ್ಗೆ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಾದೇಶಿಕ ಸಮಿತಿಯ ಸದಸ್ಯರು ನುಡಿದರು. ಸಭೆಯಲ್ಲಿ ಪೊವಾಯಿ…

Read More

ಬ್ರಹ್ಮಾವರ ಜ 29 : ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಅದ್ಧೂರಿಯ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸೈಂಟ್ ಜೋಸೆಫ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ. ಜೆ. ಜೋಸೆಪ್‍ರವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು ಅವರು ಮಾತನಾಡಿ ಜಿ ಎಮ್ ಸಂಸ್ಥೆ ನಿಮಗೆ ಉತ್ತಮ ಆಕಾರವನ್ನು ಕೊಟ್ಟು ಪ್ರಜ್ವಲಿಸುವಂತೆ ಮಾಡಿದೆ. ಇಲ್ಲಿ ಪಡೆದ ಜ್ಞಾನವನ್ನು ವಿವೇಕದಿಂದ ಉಪಯೋಗಿಸಬೇಕು, ಪ್ರತಿಯೊಬ್ಬರು ಶಿಸ್ತು, ಮೌಲ್ಯಗಳೊಂದಿಗೆ ಗುರಿಯತ್ತ ಸಾಗಬೇಕೆಂದರು. ಸಂಸ್ಥೆಯ ಹಳೆ ವಿದ್ಯಾರ್ಥಿನಿ ಡಾ. ರಿತಿಕಾ ಶೆಟ್ಟಿ ಮಾತನಾಡಿ ಈ ಸ್ಪರ್ದಾತ್ಮಕ ಯುಗದಲ್ಲಿ ನಾವು ಸಮಯವನ್ನು ವ್ಯರ್ಥಮಾಡದೇ ಆತ್ಮಸ್ಥೈರ್ಯದೊಂದಿಗೆ ಸಾಧನೆಯತ್ತ ಮುನ್ನುಗ್ಗಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿ ಎಲ್ಲರೂ ತಮ್ಮ ಪೆÇೀಷಕರ ಮುಖದಲ್ಲಿ ನಗುವನ್ನು, ಅವರು ಹೆಮ್ಮೆ ಪಡುವಂತಹ ಕೆಲಸವನ್ನು ಮಾಡಬೇಕು. ಹಾಗೆಯೇ ಭವಿಷ್ಯದಲ್ಲಿ ನಿಮ್ಮ ಸಾಧನೆಗಳನ್ನು ನಮ್ಮೊಂದಿಗೆ ಹಂಚಿಕೊಂಡಾಗ ಸಾರ್ಥಕತೆಯ ಭಾವನೆ ಉಂಟಾಗುತ್ತದೆ ಎಂದರು.ಶಾಲಾ ಪ್ರಾಂಶುಪಾಲರಾದ ಜಾರ್ಜ್…

Read More