Author: admin

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕ್ರಿಯೇಟಿವ್ ಕೆಸರ್ಡೊಂಜಿ ದಿನ ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮವನ್ನು 5 ಆಗಸ್ಟ್ 2025 ರಂದು ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಡಾ. ರವೀಂದ್ರ ಶೆಟ್ಟಿ ಬಜಗೋಳಿ, ರಾಜ್ಯಾಧ್ಯಕ್ಷರು, ಫೆಡರೇಷನ್ ಆಫ್ ಕ್ವಾರಿ ಮತ್ತು ಕ್ರಷರ್ ಓನರ್ಸ್ ಅಸೋಸಿಯೇಷನ್ (ರಿ) ಬೆಂಗಳೂರು ಇವರು ಉದ್ಘಾಟನಾ ಭಾಷಣದಲ್ಲಿ ಪ್ರಕೃತಿಯ ಮಹತ್ವ, ಸಾಂಸ್ಕೃತಿಕ ಪರಂಪರೆಯ ಹಿನ್ನೆಲೆ ಮತ್ತು ಯುವ ಪೀಳಿಗೆಗೆ ಉತ್ತಮವಾದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಅಗತ್ಯಗಳ ಬಗ್ಗೆ ಜಾಗೃತಿ ಮೂಡಿಸಿ ಸಭೆಯನ್ನು ಉದ್ದೇಶಿಸಿ ಮಾತುಗಳನ್ನಾಡಿದರು . ಕೆಸರಿನಲ್ಲಿ ಆಡೋದು ಕೇವಲ ಆಟವಲ್ಲ, ಅದು ಒಂದು ಅನುಭವ, ಜೀವನಕ್ಕೆ ಪಾಠ ಕಲಿಸುವ ಕ್ರಿಯೆ ಎಂದು ತಿಳಿಸಿದರು. ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ. ಬಿ. ರವರು ಪ್ರಾಸ್ತಾವಿಕ ನುಡಿಗಳನ್ನಡುತ್ತಾ ನಮ್ಮ ಸಂಸ್ಥೆಯ ವಿದ್ಯಾರ್ಥಿ ಗಳಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿರುವ ಉದ್ದೇಶಗಳ ಬಗ್ಗೆ ತಿಳಿಸುತ್ತಾ, ಆಗಮಿಸಿದ ಸರ್ವರನ್ನು ಸ್ವಾಗತಿಸಿದರು. ಸ್ಥಳ…

Read More

ಪುಣೆಯ ತ್ರಿನಿಟಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ನಡೆದ ಸೆಂಟ್ರಲ್ ಶಾಲೆಗಳ ದಕ್ಷಿಣ ವಲಯ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 17 ವಯೋಮಾನದ ಬಾಲಕ ಮತ್ತು ಬಾಲಕಿಯ ತಂಡ 3ನೇ ಸ್ಥಾನವನ್ನು ಪಡೆಯಿತು. ಇಂಡಿಯನ್ ರೌಂಡ್ ಟೀಮ್ ಅಂಡರ್ 17 ಬಾಲಕರ ವಿಭಾಗದಲ್ಲಿ ಆದಿತ್ಯ, ಶ್ರೀರಾಮ ಶಿವಾನಂದ, ಅಕ್ಷಯ್ ಪ್ರಕಾಶ್, ಬಸಯ್ಯ ವಿ ಸ್ವಾಮಿಯನ್ನು ಒಳಗೊಂಡ ತಂಡ 3ನೇ ಸ್ಥಾನ ಪಡೆದರೆ, ಬಾಲಕಿಯ ವಿಭಾಗದಲ್ಲಿ ಅಪೂರ್ವ ಪಿ, ಚೈತ್ರಾ ಕೆ, ಜೋನ್ನಾ ಪಾಟೀಲ್ ತಂಡವು 3ನೇ ಸ್ಥಾನ ಪಡೆಯಿತು. ಇಂಡಿಯನ್ ರೌಂಡ್ ಮಿಕ್ಸ್ ಟೀಮ್ ಅಂಡರ್ 17 ವಿಭಾಗದಲ್ಲಿ ಅಪೂರ್ವ ಪಿ, ಆದಿತ್ಯ ತಂಡ 5ನೇ ಸ್ಥಾನ ಪಡೆಯಿತು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

1929 ಜುಲಾಯಿ ತಿಂಗಳ 26 ನೇ ತಾರೀಕಿನಂದು ಕೆ ಸಂಕಪ್ಪ ಶೆಟ್ಟಿ ಹಾಗೂ ಮಹಾಲಕ್ಷ್ಮಿ ದಂಪತಿಗಳ ಮುದ್ದಿನ ಮಗನಾಗಿ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಕುಲ್ಲಂಜ ಎಂಬಲ್ಲಿ ಜನಿಸಿ, ತನ್ನ ಒಡಹುಟ್ಟಿದ ಸಹೋದರಿಯೊಂದಿಗಿನ ವಾತ್ಸಲ್ಯ, ತತ್ ತತ್ಸಂಬಂಧ ತಮ್ಮ ಭಾವನವರಾದ ಪಂಡಿತ್ ವೆಂಕಪ್ಪ ರೈಗಳ ಅಕ್ಕರೆ ಉಪ್ಪಿನಂಗಡಿಗೆ ಬರುವಂತಾಗಿತ್ತು. ಪ್ರೌಢ ಶಿಕ್ಷಣವನ್ನು ಪಡೆದ ಬಳಿಕ ಭಾವ ವೆಂಕಪ್ಪ ರೈಯವರ ಮಾರ್ಗದರ್ಶನದಲ್ಲಿ ಔಷಧಿ ತಯಾರಿಕೆಯಲ್ಲಿ ನೈಪುಣ್ಯತೆಯನ್ನು ಪಡೆದು, ಬ್ರಿಟಿಷ್ ಸರಕಾರದ ಅವಧಿಯಲ್ಲಿ ನಡೆಸುತ್ತಿದ್ದ ಪಾರಂಪರಿಕ ವೈದ್ಯ ಶಾಸ್ತ್ರದ ವೈದ್ಯ ವಿಶಾರದಾ ಪದವಿ ಪರೀಕ್ಷೆಯನ್ನು ಉತ್ತೀರ್ಣರಾಗಿ ವೈದ್ಯ ಕೆ ಎಸ್ ಶೆಟ್ಟಿ ಎಂಬ ಹೆಸರಿನೊಂದಿಗೆ ಜನಾನುರಾಗಿಯಾಗಿದ್ದರು. ಈ ಮಣ್ಣಿನಲ್ಲಿ ದೈವದತ್ತವಾಗಿ ಲಭಿಸಿರುವ ಔಷಧೀಯ ಗುಣಗಳನ್ನು ಹೊಂದಿರುವ ಗಿಡಮೂಲಿಕೆಗಳ ಬಗ್ಗೆ ಅಮೂಲಾಗ್ರ ಮಾಹಿತಿಯನ್ನು ಹೊಂದಿ, ದ.ಕ ಜಿಲ್ಲೆಯ ಶಿರಾಡಿ ದಟ್ಟಾರಣ್ಯದವರೆಗೂ ಸಂಚರಿಸಿ ಗಿಡಮೂಲಿಕೆಗಳನ್ನು ಸಂಗ್ರಹಿಸಿ ಬಗೆ ಬಗೆಯ ಔಷಧಿಗಳನ್ನು ತಯಾರಿಸಿದ ಹೆಗ್ಗಳಿಕೆಯನ್ನು ಹೊಂದಿದ್ದ ಇವರು ವೈದ್ಯ ಪರಂಪರೆಯ ಶ್ರೇಷ್ಠತೆಯನ್ನು ಬೆಳಗಿಸಿದ್ದರು. ಅಂದು ತನ್ನ 13ನೇ ವಯಸ್ಸಿನಲ್ಲಿ…

Read More

ಬದಿಯಡ್ಕ ಬಂಟರ ಸಂಘದ ನೇತೃತ್ವದಲ್ಲಿ ಆಟಿದ ಕೂಟ, ಬಂಟರ ಸಮ್ಮಿಲನ ಕಾರ್ಯಕ್ರಮವು ಇಲ್ಲಿನ ಇರಾ ಸಭಾಭವನ ವಲಮಲೆಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದಿಯಡ್ಕ ಬಂಟರ ಸಂಘದ ಅಧ್ಯಕ್ಷ ನಿರಂಜನ ರೈ ಪೆರಡಾಲ ವಹಿಸಿದರು. ಜಿಲ್ಲಾ ಬಂಟರ ಭವನದ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ, ಕೊಡುಗೈ ದಾನಿ ಡಾ| ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, “ಬಂಟರು ಈ ಭೂಮಿಯ ಮೂಲ ನಿವಾಸಿಗಳು. ತುಳುನಾಡಿನ ಪ್ರತಿಯೊಂದು ಆಚರಣೆಯ ಕಾರಣೀ ಭೂತರು ಬಂಟ ಸಮಾಜದವರು. ತುಳುನಾಡಿಗೆ ಬಂಟರು ಕೊಟ್ಟ ಕೊಡುಗೆ ಅಪಾರವಾಗಿದೆ. ರಕ್ತಗತವಾಗಿ ನಾಯಕತ್ವ ಗುಣವನ್ನು ಬೆಳೆಸಿಕೊಂಡು ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಶೈಕ್ಷಣಿಕ ಕ್ಷೇತ್ರ, ಸಂಸ್ಕೃತಿ ಕಲೆಗಳಲ್ಲಿ ಬಂಟರು ತಮ್ಮನ್ನು ತೊಡಗಿಸಿಕೊಂಡು ಒಂದು ಭಾಗವನ್ನು ಸಮಾಜಕ್ಕೆ ಅರ್ಪಿಸುತ್ತಿದ್ದಾರೆ ಎಂದರು. ಮುಖ್ಯ ಅತಿಥಿಯಾಗಿ ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಐ ಸುಬ್ಬಯ್ಯ ರೈ ಮಾತನಾಡಿ, ಆಗಸ್ಟ್ 10 ರಂದು ಜಿಲ್ಲಾ ಬಂಟರ ಸಂಘದ ಸಹಯೋಗದೊಂದಿಗೆ ಡಾ| ಸದಾಶಿವ ಶೆಟ್ಟಿ ಕುಳೂರು ಕನ್ಯಾನ…

Read More

ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಇವರು ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಅಂಗವಾಗಿ ಯಡ್ತರೆ ನೆಲ್ಯಾಡಿ ಜೆ.ಎನ್.ಆರ್ ಹಾಲ್ ನಲ್ಲಿ ಕೆಸರಲ್ಲೊಂದು ದಿನ ಗಮ್ಮತ್ ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಐಕಳ ಹರೀಶ್ ಶೆಟ್ಟಿಯವರು, ಕುಂದಾಪುರದ ಭಾಷೆ ಸಂಸ್ಕೃತಿಯನ್ನು ಉಳಿಸುವಲ್ಲಿ ಪ್ರತಿಷ್ಠಾನವು ಅರ್ಥಪೂರ್ಣವಾದ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ನಮ್ಮ ಸಂಸ್ಕೃತಿಯನ್ನು ಯುವ ಪೀಳಿಗೆಗೆ ತಿಳಿಸುವ ಈ ಕಾರ್ಯಕ್ರಮದ ಮೂಲಕ ಸಂಸ್ಕೃತಿ ಜಾಗೃತವಾಗುತ್ತದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ಐಕಳ ಹರೀಶ್ ಶೆಟ್ಟಿ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕೋಶಾಧಿಕಾರಿ ಉಳ್ತೂರು ಮೋಹನದಾಸ ಶೆಟ್ಟಿಯವರನ್ನು ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಕೆ ಜಯಪ್ರಕಾಶ್ ಹೆಗ್ಡೆ, ಬೈಂದೂರು ಮಂಡಲ ಬಿಜೆಪಿ ಮಾಜಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರತಿಷ್ಠಾನದ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ, ದಿವಾಕರ್ ಶೆಟ್ಟಿ ಬೈಂದೂರು, ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಮತ್ತಿತರರು ಉಪಸ್ಥಿತರಿದ್ದರು.

Read More

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಚಂದನ್ ಬಿ.ಎಂ, ಉಸ್ಮಾ, ಪ್ರೇಕ್ಷಾ ಹಾಗೂ ಸಾವನ್ ಶೆಟ್ಟಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತು ಶಿವಮೊಗ್ಗದ ಜವಾಹರಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ಆಯೋಜಿಸಿದ್ದ 48ನೇ ಸರಣಿಯ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್ ಪ್ರದರ್ಶನದಲ್ಲಿ ಅವರು ತಯಾರಿಸಿದ ಪ್ರಾಜೆಕ್ಟ್ ಗೆ ‘ವರ್ಷದ ಅತ್ಯುತ್ತಮ ಪ್ರಾಜೆಕ್ಟ್’ ಪ್ರಶಸ್ತಿ ಲಭಿಸಿತು. ಒಟ್ಟು ಈ ವಿಭಾಗದಲ್ಲಿ 496 ಪ್ರಾಜೆಕ್ಟ್ ಗಳು ಸ್ಪರ್ಧೆಗೆ ಆಗಮಿಸಿದ್ದವು. ಮೆಕ್ಕೆ ಜೋಳದ ಒಣಗಿದ ಸಿಪ್ಪೆಯಿಂದ ಕಪ್ ತಯಾರಿಕಾ ಯಂತ್ರದ ಅಭಿವೃದ್ಧಿಗಾಗಿ ಈ ಪ್ರಶಸ್ತಿ ಪಡೆದುಕೊಂಡರು. ಪರಿಸರ ಸ್ನೇಹಿ ಆವಿಷ್ಕಾರ ಮತ್ತು ದಕ್ಷತೆಯ ಹಿನ್ನೆಲೆಯಲ್ಲಿ ಈ ಪ್ರಾಜೆಕ್ಟ್ ಮೌಲ್ಯಮಾಪನಾ ಸಮಿತಿಯ ಸದಸ್ಯರ ಮೆಚ್ಚುಗೆಗೆ ಪಾತ್ರವಾಯಿತು. ಈ ಪ್ರಾಜೆಕ್ಟ್ ಗೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಾ. ಕೆ.ವಿ ಸುರೇಶ್ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ…

Read More

ಕರ್ನಾಟಕ ರಾಜ್ಯ ಔಷಧ ತಯಾರಕರ ಸಂಘದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ತೀರ್ಥಹಳ್ಳಿ ಮೂಲದ ಯಶಸ್ವಿ ಉದ್ಯಮಿಗಳು, ನೀಮಸ್ ಫಾರ್ಮಾಸ್ಯುಟಿಕಲ್ಸ್‌ನ ವ್ಯವಸ್ಥಾಪಕ ನಿರ್ದೇಶಕರೂ ಆದ ಶ್ರೀಧರ ಶೆಟ್ಟಿ ಅವರನ್ನು ಅಯ್ಕೆ ಮಾಡಲಾಗಿದೆ. ಶ್ರೀಧರ್ ಶೆಟ್ಟಿ ಎನ್.ಕೆ.ಡಿ.ಪಿ.ಎಂ.ಎ ಯ ಗೌರವ ಕಾರ್ಯದರ್ಶಿಯಾಗಿ ಈಗಾಗಲೇ ಸೇವೆ ಸಲ್ಲಿಸಿದ್ದು, ಈಗ ಔಷಧ ಉದ್ಯಮದ ಅತ್ಯಂತ ಗೌರವಾನ್ವಿತ ಸ್ಥಾನಕ್ಕೆ ಆಯ್ಕೆಗೊಂಡಿರುವುದು ಅವರ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ಗೌರವ ಕಾರ್ಯದರ್ಶಿಗಳಾಗಿ ಆಯ್ಕೆ ಆಗಿರುವ ಶ್ರೀಧರ ಶೆಟ್ಟಿಯವರಿಗೆ ತೀರ್ಥಹಳ್ಳಿ ಬಂಟರ ಸಂಘದ ಗೌರವಾಧ್ಯಕ್ಷರಾದ ಅಡ್ಡಮನೆ ಪ್ರಭಾಕರ್ ಶೆಟ್ಟಿ, ಅಧ್ಯಕ್ಷರಾದ ಪ್ರಭಾಕರ್ ಹೆಗ್ಡೆ, ಉಪಾಧ್ಯಕ್ಷ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ, ಸಹ ಕಾರ್ಯದರ್ಶಿ ಕುಡುಮಲ್ಲಿಗೆ ಭಾಸ್ಕರ ಶೆಟ್ಟಿ, ಬೆಟ್ಟಮಕ್ಕಿ ಅಶೋಕ ಶೆಟ್ಟಿ, ಬಂಟರ ಮಹಿಳಾ ವಿಭಾಗದ ಪದಾಧಿಕಾರಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Read More

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ / ವಾಹನ ಚಾಲಕ ಮತ್ತು ಗ್ರೂಪ್ ಡಿ ನೌಕರರ ಸಂಘ (ರಿ) ಜಿಲ್ಲಾ ಶಾಖೆ ಮಂಗಳೂರು ಇದರ ಸಹ ಕಾರ್ಯದರ್ಶಿಯಾಗಿ ಸಮಾಜ ಸೇವಕ, ಕಲಾ ರತ್ನ, ಕಲಾ ತಿಲಕ, ಪ್ಲಾಸ್ಮಾದಾನಿ ಯು.ಆರ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Read More

ಸಮಾಜದಲ್ಲಿ ಉಳ್ಳವರು, ಮಧ್ಯಮ ವರ್ಗದವರು ಮತ್ತು ಅದಕ್ಕಿಂತ ಆರ್ಥಿಕವಾಗಿ ಹಿಂದುಳಿದವರು ಇದ್ದೇ ಇರುತ್ತಾರೆ. ಶಿಕ್ಷಣ, ಆರೋಗ್ಯ, ಉದ್ಯೋಗ ಹೀಗೆ ಬಹು ಬಗೆಯಲ್ಲಿ ಸಮುದಾಯದ ಸಮಗ್ರ ಪ್ರಗತಿಗಾಗಿ ಉಳ್ಳವರಿಂದ ಬೇಡಿ ಇಲ್ಲದವರಿಗೆ ನೀಡಿ ಅವರ ಅವಶ್ಯಕತೆಗಳನ್ನು ಪೂರೈಸಬೇಕು. ಬಂಟರಲ್ಲೂ ಈ ರೀತಿಯ ಸ್ಥಿತಿಗತಿಗಳ ಮಂದಿ ಇರುವುದು ಸಹಜ. ಅದನ್ನೆಲ್ಲಾ ನಿವಾರಿಸಿ ತಕ್ಕಮಟ್ಟಿಗೆ ಎಲ್ಲರ ಕ್ಷೇಮ ಚಿಂತನೆ ಮಾಡಲು ಪ್ರಯತ್ನಿಸೋಣ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಕರೆ ನೀಡಿದರು. ಮೂಡಬಿದ್ರಿ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನ ಕೃಷಿ ಸಿರಿ ವೇದಿಕೆಯಲ್ಲಿ ಆಗಸ್ಟ್ 3 ರಂದು ಮೂಡಬಿದ್ರಿ ಬಂಟರ ಸಂಘದ ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಮೂರನೇ ವರ್ಷದ ಆಟಿಡೊಂಜಿ ದಿನ, ಪ್ರತಿಭಾ ಪುರಸ್ಕಾರ ಸನ್ಮಾನ, ಸಹಾಯಧನ ವಿತರಣೆ, ಅಡುಗೆ ಸ್ಪರ್ಧೆ, ಸಾಂಸ್ಕೃತಿಕ ಕಲಾಪಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಶೇಷವಾಗಿ ಉಪಸ್ಥಿತರಿದ್ದು ಮಾತನಾಡಿದ ಶ್ರೀಯುತರು ಎಲ್ಲಾ ಸಮಾಜದವರನ್ನು ಪ್ರೀತಿಸುತ್ತಾ 35 ವರ್ಷಗಳಿಂದಲೂ ಬಂಟರ ಸಂಘದ ಜೊತೆ ಓಡಾಡಿಕೊಂಡು ಬರುತ್ತಿರುವ ತಾನು…

Read More

ಉಡುಪಿ ಗ್ರಾಮೀಣ ಬಂಟರ ಸಂಘದ ವತಿಯಿಂದ ಕುಂತಳನಗರ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಹಾಲ್ ನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ 27ರಂದು ಯಶಸ್ವಿಯಾಗಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ ಶೆಟ್ಟಿ ಬೆಳ್ಳೆ ಸ್ವಾಗತಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭವನ್ನು ಹಾರೈಸಿದರು. ಮುಖ್ಯ ಅತಿಥಿಗಳಾದ ಮೂಳೂರು ಸುನಂದ ವೆಲ್ನೆಸ್ ಸೆಂಟರ್ ನ ಡಾ. ನಿರಂಜನ್ ಎಸ್. ಶೆಟ್ಟಿ, ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥಾಪಕ ರಾಜೇಂದ್ರ ವಿ. ಶೆಟ್ಟಿ, ವಾಗ್ಮಿ ಜಾನಪದ ಚಿಂತಕ ಶ್ರೀಕಾಂತ್ ಶೆಟ್ಟಿ ಆಟಿಡೊಂಜಿ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಚಲನಚಿತ್ರ ನಟ ಶೋಧನ್ ಉಮೇಶ್ ಶೆಟ್ಟಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷರಾದ ಅಲೆವೂರು ಶ್ರೀಧರ್ ಶೆಟ್ಟಿ, ಹೇಮಂತ್ ಶೆಟ್ಟಿ, ಕಾರ್ಯಾಧ್ಯಕ್ಷ ಪದ್ಮನಾಭ ಹೆಗ್ಡೆ, ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಖಜಾಂಚಿ ರಂಜನಿ ಹೆಗ್ಡೆ ಬೆಳ್ಳೆ…

Read More