Author: admin

ಮೂಡುಬಿದಿರೆ: ಅಖಿಲ ಭಾರತ ಮಟ್ಟದ ಯುಜಿ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಒಂದೇ ಕ್ಯಾಂಪಸ್‌ನ ಕ್ಲಾಸ್‌ರೂಮ್ ವ್ಯವಸ್ಥೆಯಲ್ಲಿ ಅಖಿಲ ಭಾರತ ಮಟ್ಟದ ಟಾಪ್ AIR 10,000 ರ‍್ಯಾಂಕ್‌ಗಳಲ್ಲಿ 75 ವಿದ್ಯಾರ್ಥಿಗಳು ಸ್ಥಾನ ಪಡದು ಶ್ರೇಷ್ಠ ಸಾಧನೆ ಮೆರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು 600ಕ್ಕೂ ಅಧಿಕ ಒರ್ವ ವಿದ್ಯಾರ್ಥಿ, 550ಕ್ಕೂ ಅಧಿಕ 21 ವಿದ್ಯಾರ್ಥಿಗಳು, 500ಕ್ಕೂ ಅಧಿಕ 116 ವಿದ್ಯಾರ್ಥಿಗಳು, 450ಕ್ಕೂ ಅಧಿಕ 401 ವಿದ್ಯಾರ್ಥಿಗಳು, 400ಕ್ಕೂ ಅಧಿಕ 596 ವಿದ್ಯಾರ್ಥಿಗಳು ಅಂಕ ಪಡೆದಿದ್ದಾರೆ. ರಾಷ್ಟçಮಟ್ಟದಲ್ಲಿ ಅಖಿಲ ಭಾರತ ಮಟ್ಟದ ಟಾಪ್ 1,000 ರ‍್ಯಾಂಕ್‌ನ ಒಳಗೆ 9 ವಿದ್ಯಾರ್ಥಿಗಳು ಹಾಗೂ ಟಾಪ್ 2,000 ಒಳಗೆ 20 ವಿದ್ಯಾರ್ಥಿಗಳು ಹಾಗೂ ಟಾಪ್ 5,000 ರ‍್ಯಾಂಕ್‌ಗಳಲ್ಲಿ 48 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ. ಪ್ರೇಕ್ಷಾ ಎಂ.ಎಸ್ 82ನೇ ರ‍್ಯಾಂಕ್, ಲಿಖಾ ತಡಪ್ 235ನೇ ರ‍್ಯಾಂಕ್, ರಾಘವೇಂದ್ರ ಶಂಕರ್ 401ನೇ…

Read More

ಉಡುಪಿ : ರಾಷ್ಟ್ರಮಟ್ಟದಲ್ಲಿ ಎಂ.ಬಿ.ಬಿ.ಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್.ಟಿ.ಎ) ನಡೆಸಿದ ನೀಟ್- 2025ರ ಫಲಿತಾಂಶದಲ್ಲಿ ಪರೀಕ್ಷೆ ಬರೆದ 22ಲಕ್ಷದ 9 ಸಾವಿರದ 318 ವಿದ್ಯಾರ್ಥಿಗಳಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 20 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದಲ್ಲಿ ಹತ್ತು ಸಾವಿರದೊಳಗಿನ ರ್ಯಾಂಕ್ ಲಭಿಸಿದ್ದು, ಹರ್ಷ ಯು ಪೂಜಾರಿ 99.9360 ಪರ್ಸಂಟೈಲ್‍ನೊಂದಿಗೆ 720ರಲ್ಲಿ 600 ಅಂಕ ಪಡೆದು ರಾಷ್ಟ್ರಮಟ್ಟದಲ್ಲಿ 1411ನೇ ರ್ಯಾಂಕ್ ಪಡೆದಿರುತ್ತಾರೆ. 1. ಹರ್ಷ ಯು. ಪೂಜಾರಿ 600 ಅಂಕ (99.9360 ಪರ್ಸಂಟೈಲ್, 1411ನೇ ರ್ಯಾಂಕ್), 2. ಹರ್ಷಿತ್ 589 ಅಂಕ (99.8920 ಪರ್ಸಂಟೈಲ್, 2325ನೇ ರ್ಯಾಂಕ್), 3. ಉತ್ಸವ್ ಸಿ. ಪಟೇಲ್ 587 ಅಂಕ (99.8816 ಪರ್ಸಂಟೈಲ್, 2548ನೇ ರ್ಯಾಂಕ್), 4. ರಚಿತ್ ಜೆ ಬೊಲ್ಯಾ 585 ಅಂಕ (99.8697 ಪರ್ಸಂಟೈಲ್, 2838ನೇ ರ್ಯಾಂಕ್) 5. ಸತೀಶ್ ಎಸ್. ಕರಗನ್ನಿ 585 ಅಂಕ (99.8697 ಪರ್ಸಂಟೈಲ್, 2878ನೇ ರ್ಯಾಂಕ್), 6. ರಕ್ಷಿತ್ ಈರಪ್ಪ ಬೆಳ್ಕುಡ್ 584…

Read More

ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 04 ರಂದು ನಡೆಸಿದ ನೀಟ್‌ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಸುಮಂತ ಗೌಡ ಎಸ್‌. ಡಿ 99.923686 ಪರ್ಸಂಟೈಲ್‌ ನೊಂದಿಗೆ 596 ಅಂಕಗಳನ್ನು ಗಳಿಸಿ ರಾಷ್ಟ್ರಮಟ್ಟದಲ್ಲಿ 1623ನೇ ರ‍್ಯಾಂಕ್‌, ಪ್ರಜ್ವಲ್‌ ಎಸ್‌. ಎನ್‌ 99.686435 ಪರ್ಸಂಟೈಲ್‌ನೊಂದಿಗೆ 588 ಅಂಕಗಳನ್ನು ಗಳಿಸಿ, ರಾಷ್ಟ್ರಮಟ್ಟದಲ್ಲಿ 2483ನೇ ರ‍್ಯಾಂಕ್‌, ರಾಜೇಶ್‌ ಹೆಚ್‌ ಎ 99.857286 ಪರ್ಸಂಟೈಲ್‌ ನೊಂದಿಗೆ 583 ಅಂಕಗಳಿಸಿ ರಾಷ್ಟ್ರಮಟ್ಟದಲ್ಲಿ 3025ನೇ ರ‍್ಯಾಂಕ್‌ ಪಡೆದು ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಸಾತ್ವಿಕ್‌ ಭಂಡಾರಿ 560, ಹೇಮಂತ್‌ ಕುಮಾರ್‌ 551, ಪ್ರಾಪ್ತಿ ಶೆಟ್ಟಿ 541, ಪ್ರಥಮ್‌ ಪಟೇಲ್‌ ಹೆಚ್‌. ಡಿ 539, ಸಂಗೀತಾ ಬಿ. ಎಮ್‌ 536, ಶ್ರೀನಿಧಿ ಡಿ 531, ವಿನಯ್‌ ಎಸ್‌ 523, ಸ್ನೇಹಾ ಬಸವರಾಜ್‌ ಬಿ. 521, ಯುವರಾಜ್‌ ಪಟೇಲ್‌ 521, ಗಣೇಶ್‌…

Read More

ಮುಂಬಯಿ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈ. ಲಿಮಿಟೆಡ್ ಇದರ ಆಡಳಿತ ನಿರ್ದೇಶಕ ಡಾ| ಆರ್.ಕೆ ಶೆಟ್ಟಿ ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಮಹಾ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ. ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2024 ರ ಸಾಲಿನ ಬಂಟ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿರುವ ಇವರು ಈ ಹಿಂದೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು ಮುಂದೆ ಮಹಾ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದಯೆ ಇವರ ಮತ್ತು ಇವರ ಕುಟುಂಬದ ಮೇಲೆ ಸದಾ ಇರಲಿ ಎಂದು ಹಾರೈಸಿ, ಒಕ್ಕೂಟದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

2024 25 ನೇ ಸಾಲಿನ ಮಾಸಿಕ ಸಭೆಯು ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿಯವರ ಅವಧಿಯ ಕೊನೆಯ ಮಾಸಿಕ ಸಭೆ ಬೆಳ್ತಂಗಡಿ ರೆಂಕೆದಗುತ್ತು ಸಿರಿ ಸಂಸ್ಥೆಯ ಕಾನ್ಫರೆನ್ಸ್ ಹಾಲ್ ನಲ್ಲಿ ಜೂನ್ 10 ರಂದು ನಡೆಯಿತು. ಲಯನ್ಸ್ ಸದಸ್ಯರಿಗೆ ಗೋಧಾಮ ವೀಕ್ಷಣೆ ಮತ್ತು ಸಿರಿಯ ಬಗ್ಗೆ ಯತೀಶ್ ಶೆಟ್ಟಿ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್, ವಲಯ ಅಧ್ಯಕ್ಷ ಉಮೇಶ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ ಆಗಮಿಸಿದ್ದರು. ಮಾಜಿ ಪ್ರಾಂತ್ಯ ಅಧ್ಯಕ್ಷ ಧರಣೇಂದ್ರ ಜೈನ್ ಸ್ವಾಗತಿಸಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು. ಲಯನ್ಸ್ ಸದಸ್ಯರು, ಲಿಯೋ ಸದಸ್ಯರು ಉಪಸ್ಥಿತರಿದ್ದರು. ನಿಯೋಜಿತ ಅಧ್ಯಕ್ಷ ಮುರಳಿದರ ಬಲಿಪ 2025- 26ನೇ ಸಾಲಿನ ಪದಾಧಿಕಾರಿಗಳ ಪಟ್ಟಿಯನ್ನು ಸಭೆಯ ಮುಂದಿಟ್ಟರು. ಸೇವಾ ಕಾರ್ಯಕ್ರಮದ ಅಂಗವಾಗಿ ಮುಂಡಾಜೆ ನಿವಾಸಿ ಯಕ್ಷಗಾನ ಕಲಾವಿದ ಪಕಲಕುಂಜ ಕೃಷ್ಣ ನಾಯ್ಕರವರ ಮೊಮ್ಮಗನಿಗೆ ವೀಲ್ ಚೇರ್ ನೀಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ 599 ಅಂಕ…

Read More

ಬಂಟರ ಯಾನೆ ನಾಡವರ ಮಾತೃ ಸಂಘ ಕಾರ್ಕಳ ತಾಲೂಕು ಸಮಿತಿ, ಕಾರ್ಕಳ ತಾಲೂಕು ಮಹಿಳಾ ಬಂಟರ ಸಂಘ ಹಾಗೂ ಯುವ ಬಂಟರ ಸಂಘ ಕಾರ್ಕಳ ಇವರ ಜಂಟಿ ಸಹಯೋಗದಲ್ಲಿ ದಿನಾಂಕ ಜೂನ್ 13 ರಂದು ನಡೆಯುವ ಆಟಿಡೊಂಜಿ ಬಂಟ ಕೂಟದ ಪೂರ್ವಭಾವಿ ಸಭೆಯು ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಕಳ ತಾಲೂಕಿನ ಸಂಚಾಲಕರಾದ ವಿಜಯ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಕಾರ್ಕಳದ ಪ್ರಕಾಶ್ ಹೋಟೆಲ್ ನಲ್ಲಿ ನಡೆಯಿತು. ಸಭೆಯಲ್ಲಿ ಕಾರ್ಕಳ ತಾಲೂಕು ಬಂಟರ ಸಂಘದ ಸಂಚಾಲಕರಾದ ವಿಜಯ ಶೆಟ್ಟಿ, ಮಹಿಳಾ ಬಂಟ ಸಂಘದ ಅಧ್ಯಕ್ಷೆ ಪೂರ್ಣಿಮಾ ಶೆಟ್ಟಿ, ಗೋಪಾಲಕೃಷ್ಣ ಶೆಟ್ಟಿ, ರವಿ ಶೆಟ್ಟಿ ಕುಕ್ಕುಂದೂರು, ಕೃಷ್ಣರಾಜ ಶೆಟ್ಟಿ, ಅವಿನಾಶ್ ಶೆಟ್ಟಿ, ಚೇತನ್ ಶೆಟ್ಟಿ ಹಾಗೂ ಮತ್ತಿತರ ಸಂಘದ ಸದಸ್ಯರು ಮತ್ತು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ತುಳುನಾಡಿನ ಅಸ್ಮಿತೆಯ ಚಳುವಳಿಯಾದ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ಸಂಧರ್ಭದಲ್ಲಿ ಭಾನುಮತಿ ಶೆಟ್ಟಿ ಕಕ್ವಗುತ್ತು ಅವರನ್ನು ತುಳುವ ಮಹಾಸಭೆ ಮೂಲ್ಕಿ ತಾಲೂಕು ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ. ಭಾನುಮತಿ ಶೆಟ್ಟಿ ಅವರು ಜರ್ಮನಿಯ ಕೋಲೋನ್ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣ ಪಡೆದು, ಪ್ರವಾಸೋದ್ಯಮದಲ್ಲಿ ಡಿಪ್ಲೋಮಾ ಪೂರೈಸಿದ ನಂತರ 39 ವರ್ಷಗಳ ಕಾಲ ಜರ್ಮನಿಯಲ್ಲಿ ವಾಸವಿದ್ದು, ತಮ್ಮದೇ ಆದ ಟ್ರಾವೆಲ್ ಏಜೆನ್ಸಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ವಿದೇಶದಲ್ಲಿದ್ದರೂ ಅವರು ತುಳು ಭಾಷೆ ಮತ್ತು ಸಂಸ್ಕೃತಿಗೆ ಅತ್ಯಂತ ಪ್ರಾಮುಖ್ಯತೆ ನೀಡುತ್ತಾ, “ಅಟಿಲ್ ಮಲ್ಪುಲೆ ತುಳು ಕಲ್ಪುಲೆ” ಎಂಬ ಯೂಟ್ಯೂಬ್ ಚಾನೆಲ್ ಮುಖಾಂತರ ತುಳುನಾಡಿನ ಪರಂಪರೆಯನ್ನು ಜಾಗೃತಗೊಳಿಸುತ್ತಿದ್ದಾರೆ. ಕಡಲಾಯೆರೆಡ ತುಳುವೆರು ಸಂಘದ ಸದಸ್ಯೆಯಾಗಿರುವ ಅವರು, ನಿವೃತ್ತಿಯಾದ ನಂತರ ಈಗ ಮುಲ್ಕಿ ತಾಲೂಕಿನ ಏಳು ಹಳ್ಳಿಗಳನ್ನು ಒಳಗೊಂಡ ಮೂಲ್ಕಿ ತಾಲೂಕು ಸಂಜೀವಿನಿ ಒಕ್ಕೂಟ (ರಿ)ದ ಅಧ್ಯಕ್ಷೆ ಆಗಿ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಜೊತೆಗೆ, ಲಯನ್ಸ್ ಕ್ಲಬ್ ಹಾಗೂ ಮೂಲ್ಕಿ ರೋಟರಿ ಕ್ಲಬ್ ನಲ್ಲೂ…

Read More

ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನ ಪದವಿ ಪ್ರಧಾನ ಕಾರ್ಯಕ್ರಮವನ್ನು ಇತ್ತೀಚಿಗೆ ವಿಶೇಷವಾಗಿ ನಡೆಸಲಾಯಿತು. ಕಾಲೇಜಿನ ವಿವಿಧ ವಿಭಾಗದ ಪದವಿ ಪಡೆದ ನೂರಾರು ವಿದ್ಯಾರ್ಥಿಗಳನ್ನು ಮಹತ್ವದ ಶೈಕ್ಷಣಿಕ ಮೈಲಿಗಲ್ಲಾಗಿ ಗುರುತಿಸಲಾಯಿತು. ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ನಾರಾಯಣ ಸ್ವಾಮಿಯವರು ಸ್ವಂತ ಜೀವನ ಮಾದರಿ ಮತ್ತು ಸಾರ್ವಜನಿಕ ಸೇವೆಗಳ ಬಗ್ಗೆ ಉದಾಹರಣೆ ನೀಡುವ ಮೂಲಕ ಸಮಗ್ರತೆ, ಪರಿಶ್ರಮದ ಮೌಲ್ಯದ ಬಗ್ಗೆ ಒತ್ತಿ ಹೇಳಿದರು. ಸಂಸ್ಥೆಯ ಅಧ್ಯಕ್ಷರಾದ ಆರ್ ಉಪೇಂದ್ರ ಶೆಟ್ಟಿಯವರು ಶಿಸ್ತಿನ ಮಹತ್ವ, ಸಮಗ್ರ ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಸಂಸ್ಥೆಯ ಬದ್ಧತೆ ಬಗ್ಗೆ ಮಾತನಾಡಿದರು. ಪದವೀಧರರು ಜವಾಬ್ದಾರಿ ನಮ್ರತೆಯಿಂದ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು. ಸಂಸ್ಥೆಯ ಆಡಳಿತಾಧಿಕಾರಿ ಜಪ್ತಿ ಸಂತೋಷ ಶೆಟ್ಟಿ ಅವರು ಪದವೀಧರರಿಗೆ ಪ್ರಮಾಣ ವಚನ ಬೋಧಿಸಿದರು. ಬಿಎ, ಬಿಕಾಂ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು. ಶೈಕ್ಷಣಿಕ ಶ್ರೇಷ್ಠತೆ, ಸಹಪಠ್ಯ ಕೊಡುಗೆಗಳಿಗಾಗಿ ಅತ್ಯುತ್ತಮ ಸಾಧಕರಿಗೆ ಪದಕ, ವಿಶೇಷ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಯಿತು. ಯುಸಿಸಿ ಸ್ಪರ್ಧಾತ್ಮಕ ಕಪ್…

Read More

ಮುಂಬಯಿಯ ಹೋಟೆಲು ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ವಸಾಯಿ ಡ್ರೀಮ್ ಲ್ಯಾಂಡ್ ಹೊಟೇಲ್ಸ್ ನ ಆಡಳಿತ ನಿರ್ದೇಶಕ ರತ್ನಾಕರ ಎಂ ಶೆಟ್ಟಿ ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಮಹಾ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ.ಇವರು ಈ ಹಿಂದೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು ಮುಂದೆ ಮಹಾ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದಯೆ ಇವರ ಮತ್ತು ಇವರ ಕುಟುಂಬದ ಮೇಲೆ ಸದಾ ಇರಲಿ ಎಂದು ಹಾರೈಸಿ, ಒಕ್ಕೂಟದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

Zee ಕನ್ನಡದ ಜನಪ್ರಿಯ ಧಾರಾವಾಹಿ ಪುಟ್ಟಕ್ಕನ ಮಕ್ಕಳು ಯಶಸ್ವಿಯಾಗಿ ಸಾವಿರ ಸಂಚಿಕೆ ಪೂರೈಸಿದ್ದು, ಆರಂಭದಿಂದ ಇಲ್ಲಿವರೆಗೂ ಪ್ರೇಕ್ಷಕರ ಪ್ರೀತಿ ಪಡೆದುಕೊ‌ಂಡಿದೆ. ಗಂಡನಿಂದ ವಂಚಿಳಾದ ಹೆಣ್ಣು ಕುಗ್ಗದೇ ಜೀವನ ಕಟ್ಟಿಕೊಂಡ ಕಥೆ. ಛಲವೊಂದಿದ್ದರೆ ಸಾಕು ಸಾಧಿಸಿ ತೋರಿಸಬಹುದು ಎಂಬುಸನ್ನು ಸಾಬೀತುಪಡಿಸಿದ‌ ಕಥೆಯೇ ಪುಟ್ಟಕ್ಕನ ಮಕ್ಕಳು. ಜೆ.ಎಸ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿ, ಜೀ ಕನ್ನಡದಲ್ಲಿ 13ನೇ ಡಿಸೆಂಬರ್ 2021 ರಿಂದ ಪ್ರಸಾರವಾದ ಧಾರಾವಾಹಿ ಪುಟ್ಟಕ್ಕನ ಮಕ್ಕಳು. ಹೆಣ್ಣು ಮಕ್ಕಳ ಹೆತ್ತೋಳೂ ಎಲ್ಲ ದೇವರಿಗೂ ದೊಡ್ಡೋಳು ಎಂಬ ಶೀರ್ಷಿಕೆ ಗೀತೆಯಿಂದಲೇ ಎಲ್ಲರ ಮನಸೆಳೆದು, ಮೊದಲ ವಾರದ ರೇಟಿಂಗ್ ನಲ್ಲಿ 13.5 ಟಿ.ವಿ.ಆರ್ ಗಳಿಸಿ ಇಡೀ ಭಾರತದಲ್ಲೇ ಅತಿ ಹೆಚ್ಚು ಓಪನಿಂಗ್ ಪಡೆದ ಧಾರಾವಾಹಿ ಎಂಬ ದಾಖಲೆ ಸೃಷ್ಟಿಸಿತು. ಆರೂರು ಜಗದೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಚಿತ್ರೀಕರಣಗೊಂಡ ಮೊದಲ ಕಂತುಗಳು ‘ಸಣ್ಣ ಪರದೆಯ ದೊಡ್ಡ ಸಿನಿಮಾ’ ಎಂಬ ಮನ್ನಣೆ ಗಳಿಸಿದವು. ನಿರ್ಮಾಪಕಿ ಸ್ಮಿತಾ ಜೆ ಶೆಟ್ಟಿಯವರ, ಜೆ ಎಸ್ ಪ್ರೊಡಕ್ಷನ್ಸ್ ಸಂಸ್ಥೆಯು ‘ಶುಭ ವಿವಾಹ, ಜೋಡಿ ಹಕ್ಕಿ, ಜೊತೆ…

Read More