Author: admin

ಬಂಟರ ಸಂಘ ಮುಂಬಯಿ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಗುತ್ತಿನಾರ್ ರವೀಂದ್ರ ಶೆಟ್ಟಿ ಕೊಟ್ರಪಾಡಿಯವರ ನೇತೃತ್ವದಲ್ಲಿ ಹಾಗೂ ಯುವ ವಿಭಾಗದ ಕಾರ್ಯಾಧ್ಯಕ್ಷ ವೃಷಭ್ ಶೆಟ್ಟಿಯವರ ಮುಂದಾಳತ್ವದಲ್ಲಿ ದಾಂಡಿಯಾ ರಾಸ್ ಹಾಗೂ ಗರ್ಬಾ ನೈಟ್ ಮತ್ತು ವಿವಿಧ ರೀತಿಯ ಕಾರ್ಯಕ್ರಮಗಳು ಇದೇ ಬರುವ ಅಕ್ಟೋಬರ್ 2 ರ ಗುರುವಾರದಂದು ಸಂಜೆ 7 ಗಂಟೆಯಿಂದ ಭಯಂದರ್ ಗೊಲ್ಡನ್ ನೆಸ್ಟ್ ಸರ್ಕಲ್ ಸಮೀಪದ ದಿ ಕ್ರೌನ್ ಬ್ಯುಸಿನೆಸ್ ಹೊಟೇಲ್ ಇಲ್ಲಿ ನಡೆಯಲಿದೆ. ಪ್ರಾದೇಶಿಕ ಸಮಿತಿಯ ಯುವ ವಿಭಾಗದ ವತಿಯಿಂದ ಅದ್ದೂರಿಯಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ 7 ವರ್ಷ ಕೆಳಗಿನ ವಯೋಮಿತಿಯ ಪುಟಾಣಿಗಳಿಗೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು. ದಾಂಡಿಯಾ ರಾಸ್ ಹಾಗೂ ಗರ್ಬಾ ನೈಟ್ ನಲ್ಲಿ ಭಾಗವಹಿಸುವ ಪುರುಷ ಹಾಗೂ ಮಹಿಳೆಯರಿಗೆ ರಮಣೀಯವಾಗಿ ಧರಿಸುವ ಬಟ್ಟೆಗಳ ಆಧಾರದ ಮೇಲೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಮತ್ತು ಪುರುಷ ಹಾಗೂ ಮಹಿಳಾ ವಿಭಾಗದ ನೃತ್ಯಗಾರರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಪ್ರಾಶಸ್ತ್ಯದ ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಗುವುದು.…

Read More

ಬಾಂಬೆ ಬಂಟ್ಸ್ ಅಸೋಸಿಯೇಷನ್ ನ ಮಹಿಳಾ ವಿಭಾಗದ ವತಿಯಿಂದ ಸೆಪ್ಟೆಂಬರ್ 26 ರಂದು ಮಹಿಳಾ ಕಾರ್ಯಾಧ್ಯಕ್ಷೆ ಶಾಂತ ಎನ್ ಶೆಟ್ಟಿಯವರ ಮುತಾಲಿಕೆಯಲ್ಲಿ ಲಲಿತ ಸಹಸ್ರನಾಮ, ಭಜನೆ ಹಾಗೂ ದಸರಾ ಮಹೋತ್ಸವದ ಅಂಗವಾಗಿ ಕೀರ್ತನೆ ಮತ್ತು ದಾಂಡಿಯ ನೃತ್ಯ ಕಾರ್ಯಕ್ರಮ ನಡೆಯಿತು. ಬಾಂಬೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಅಡ್ವೋಕೇಟ್ ಡಿ.ಕೆ ಶೆಟ್ಟಿಯವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಸಂಸ್ಥೆಯ ಮಹಿಳೆಯರ ಉತ್ಸಾಹದ ಲವಲವಿಕೆಯನ್ನು ಕಂಡು, ನಮ್ಮ ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸಿ ನಮ್ಮ ಕರ್ತವ್ಯವನ್ನು ನಾವು ಮಾಡುತ್ತಿರಬೇಕು. ಇದು ನಮ್ಮ ಮುಂದಿನ ಪೀಳಿಗೆಗೆ ಮಾದರಿ ಆಗಬೇಕು ಎಂದು ನುಡಿದರು. ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಹಿರಿಯ ಮಹಿಳಾ ಸದಸ್ಯೆ ವಸಂತಿ ಸಿ ಶೆಟ್ಟಿಯವರು ಆಗಮಿಸಿದ್ದರು. ಅಲ್ಲದೇ ಉಪಾಧ್ಯಕ್ಷರಾದ ಐಕಳ ಕಿಶೋರ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಅಡ್ವೊಕೇಟ್ ಶೇಖರ್ ಆರ್ ಶೆಟ್ಟಿ, ಸಮಿತಿ ಸದಸ್ಯರಾದ ರತ್ನಾಕರ ಶೆಟ್ಟಿ ಐಕಳ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯವರಾದ ಶೈಲಜಾ ಎ.ಶೆಟ್ಟಿ, ಶಾರದಾ ಎಸ್…

Read More

ಮೈಸೂರು ದಸರಾ ಪ್ರಯುಕ್ತ ನಡೆದ ರಾಜ್ಯ ಮಟ್ಟದ ದಸರಾ ಸಿಎಂ ಕಪ್ 2025 ರಲ್ಲಿ ಆಳ್ವಾಸ್ ತಂಡವು ಹಲವು ಪ್ರಶಸ್ತಿ ಮತ್ತು ಪದಕಗಳನ್ನು ಪಡೆದುಕೊಂಡಿದೆ. ತಂಡ ವಿಭಾಗದ ಕ್ರೀಡೆಗಳಾದ ಪುರುಷರ ಕಬಡ್ಡಿಯಲ್ಲಿ ಆಳ್ವಾಸ್ ತಂಡ ಬೆಂಗಳೂರು ಸಿಟಿಯ ವಿರುದ್ಧ 13 ಅಂಕಗಳ ಅಂತರದಿಂದ ಜಯಶಾಲಿಯಾದರೆ, ಮಹಿಳೆಯರ ಬಾಲ್‌ ಬ್ಯಾಡ್ಮಿಂಟನ್‌ನಲ್ಲಿ ಆಳ್ವಾಸ್ ತಂಡ ಬೆಂಗಳೂರು ಗ್ರಾಮಾಂತರ ತಂಡದ ವಿರುದ್ಧ 30-08, 35-20 ನೇರ ಸೆಟ್‌ಗಳಿಂದ ಸೋಲಿಸಿ ಪ್ರಥಮ ಸ್ಥಾನವನ್ನು ಪಡೆಯಿತು. ಅಂತೆಯೇ ಮಹಿಳಾ ಕಬಡ್ಡಿ, ಪುರುಷರ ಖೋ-ಖೋ, ಬಾಲ್‌ ಬ್ಯಾಡ್ಮಿಂಟನ್‌ನಲ್ಲಿ ಆಳ್ವಾಸ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಅಥ್ಲೇಟಿಕ್ಸ್ ನಲ್ಲಿ ಆಳ್ವಾಸ್‌ನ ನಾಗ್ರೇಂದ್ರ ಡಿಸ್ಕಸ್ ಥ್ರೋನಲ್ಲಿ ನೂತನ ಕೂಟ ದಾಖಲೆ ನಿರ್ಮಿಸಿದರೆ, 800 ಮೀ ಓಟದಲ್ಲಿ ಆಳ್ವಾಸ್‌ನ ರೇಖಾ ಬಸಪ್ಪ ನೂತನ ಕೂಟ ದಾಖಲೆ ನಿರ್ಮಿಸಿದ್ದಾರೆ. ವೈಯಕ್ತಿಕ ವಿಭಾಗದ ಅಥ್ಲೆಟಿಕ್ಸ್ ನಲ್ಲಿ ಪುರುಷ ಮತ್ತು ಮಹಿಳಾ ವಿಭಾಗದ ಒಟ್ಟು ಕ್ರೀಡಾಕೂಟದಲ್ಲಿ 6 ಚಿನ್ನ, 2 ಬೆಳ್ಳಿ, 2 ಕಂಚಿನ ಪದಕವನ್ನು, ವೇಯ್ಟ್ ಲಿಫ್ಟಿಂಗ್‌ನಲ್ಲಿ…

Read More

ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಓದಿನ ಅಭಿರುಚಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಸಾಹಿತಿ ಹಾಗೂ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಎಂಟನೇ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ತಲೆಮಾರಿಗೆ ತುಳು ಭಾಷೆಯನ್ನು ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ವಿದ್ಯಾರ್ಥಿಗಳಲ್ಲಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬ್ರಹ್ಮಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ. ದಯಾಕರ್ ಅವರು ಮಾತನಾಡಿ, ತುಳು ಭಾಷೆ, ಸಾಹಿತ್ಯದ ಸಂಸ್ಕ್ರತಿ ಬಗ್ಗೆ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಕಾರ್ಯಕ್ರಮ ಒಂದು ವಿಶಿಷ್ಟ ಪರಿಕಲ್ಪನೆಯ ಕಾರ್ಯಕ್ರಮ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಾತನಾಡಿ, ತುಳು…

Read More

ಶ್ರಮಯೇವ ಜಯತೆ ಎನ್ನುವ ಧ್ಯೇಯದೊಂದಿಗೆ ದೇಶದಲ್ಲಿ ಅತೀ ಹೆಚ್ಚು ಸದಸ್ಯರ ಸಂಘಟನೆ ಎನ್. ಎಸ್. ಎಸ್. ಅಂತಹ ಸುಭದ್ರ ತಳಹದಿಯ ಸಂಘಟನೆ ಸದಸ್ಯರಾಗಿರುವುದೇ ಹೆಮ್ಮೆಯ ವಿಷಯ. ಯುವಜನತೆಗೆ ವಿಧ್ಯಾಭ್ಯಾಸದ ಜೊತೆಗೆ ಸಾಮಾಜಿಕ ಜವಾಬ್ದಾರಿ ಸೇವಮಾನೋಭಾವನೆ ರೂಢಿಸಲು ಸೃಷ್ಟಿಯಾದ ಎನ್.ಎಸ್.ಎಸ್. ಕ್ರಾಂತಿಕಾರಿ ಸಾಧನಾ ಪಥದಲ್ಲಿ ಸಾಗುತ್ತಾ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸುತ್ತಿದೆ. ಎಂದು ಕರ್ನಾಟಕ ಸರಕಾರ (ಎನ್.ಎಸ್.ಎಸ್ ಕೋಶ)ದ ನಿಕಟಪೂರ್ವ ರಾಜ್ಯ ಎನ್.ಎಸ್.ಎಸ್ ಅಧಿಕಾರಿ ಡಾ. ಗಣನಾಥ ಎಕ್ಕಾರ್ ಅಭಿಪ್ರಾಯಪಟ್ಟಿದ್ದಾರೆ. ಅವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಹೊಸ ಘಟಕ ಉದ್ಘಾಟಿಸಿ ಮಾತನಾಡಿದರು. ಎನ್.ಎಸ್.ಎಸ್. ಇತಿಹಾಸ ಹಾಗೂ ಪ್ರಸಕ್ತ ಸಾಧನೆಗಳ ವಿವರಣೆ ನೀಡಿ ಮಣಿಪಾಲ ಜ್ಞಾನಸುಧಾ ಹೊಸ ಎನ್.ಎಸ್.ಎಸ್.  ಘಟಕಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಮಂಗಳೂರು ವಿಭಾಗದ ಎನ್.ಎಸ್.ಎಸ್. ವಿಭಾಗಾಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ನುಡಿಗಳನ್ನಾಡಿದರು. ಇನ್ನೋರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾರ್ಕಳ ಜ್ಞಾನಸುಧಾ…

Read More

ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ರೋಟರಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ ಹಾಗೂ ಡಾ. ಟಿ. ಎಂ. ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ವಾಕಥಾನ್ ಹೃದಯ ದಿನಾಚರಣೆಯ ಅವಾರ್ಡ್ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಗರಿಷ್ಠ ವಿದ್ಯಾರ್ಥಿಗಳ ಭಾಗವಹಿಸುವಿಕೆಯಲ್ಲಿ ಪ್ರಥಮ ಸ್ಥಾನ, ಅತ್ಯಂತ ಶಿಸ್ತಿನ ತಂಡಕ್ಕೆ ಪ್ರಥಮ ಸ್ಥಾನ, ಘೋಷಣೆ ಕೂಗುವಿಕೆಯಲ್ಲಿ ಪ್ರಥಮ, ಸ್ಕಿಟ್ ಸ್ಪರ್ಧೆಯಲ್ಲಿ ದ್ವಿತೀಯ, ಫ್ಲಕಾರ್ಡ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗದವರು ಪ್ರಶಂಸಿಸಿದ್ದಾರೆ.

Read More

ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಿರುವ ಪ್ರತಿಷ್ಠಿತ ‘ಯುವ ದಸರಾ’ ವೇದಿಕೆಯಲ್ಲಿ ಕುಂದಾಪುರದ ಸುಜ್ಞಾನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ‘ಪರಿಸರ ಸಂರಕ್ಷಣೆ’ ವಿಷಯ ಆಧರಿಸಿ ನೃತ್ಯ ಪ್ರದರ್ಶನ ನೀಡಿ ನೆರೆದಿದ್ದ ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದಾರೆ. ಈ ಸ್ಪರ್ಧೆಗೆ ರಾಜ್ಯದ ವಿವಿಧೆಡೆಯ ಒಟ್ಟು 700 ಕಾಲೇಜುಗಳು ಭಾಗವಹಿಸಿದ್ದವು. ಅತ್ಯುತ್ತಮ ಪ್ರದರ್ಶನಕ್ಕಾಗಿ ಕೇವಲ 8 ಕಾಲೇಜುಗಳು ಆಯ್ಕೆಯಾಗಿದ್ದವು. ಅದರಲ್ಲಿ ಸುಜ್ಞಾನ ಪಿಯು ಕಾಲೇಜು ಕೂಡಾ ಒಂದಾಗಿರುವುದು ಕಾಲೇಜಿಗೆ ಮತ್ತು ಕುಂದಾಪುರಕ್ಕೆ ಹೆಮ್ಮೆಯ ವಿಷಯವಾಗಿದೆ.ಸುಜ್ಞಾನ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸೆಪ್ಟೆಂಬರ್ 14ರಂದು ಯುವ ಸಂಭ್ರಮದಲ್ಲಿ ಮೊದಲು ನೃತ್ಯ ಪ್ರದರ್ಶನ ನೀಡಿದ್ದರು. ಈ ಸಂದರ್ಭದಲ್ಲಿ ಉತ್ತಮ ಪ್ರದರ್ಶನ ನೀಡಿ, ಆಯ್ಕೆಯಾದ ನಂತರ ಸೆಪ್ಟೆಂಬರ್ 24ರಂದು ಯುವ ದಸರಾದ ಮುಖ್ಯ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿದರು. ಈ ನೃತ್ಯ ಪ್ರದರ್ಶನಕ್ಕೆ Zee ಕನ್ನಡ ವಾಹಿನಿಯ ‘ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌’ನ ರವಿ ಮಾಸ್ಟರ್ ಪರಿಕಲ್ಪನೆ ನೀಡಿದ್ದು, ‘ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌’ನ ರೋಶನ್ ಮಾಸ್ಟರ್…

Read More

ಅವನ ಹೆಸರು ಹಾಗಲ್ಲ. ಅದ್ಯಾಕೆ‌ ಅವ? ನನಗಿಂತ ನಾಲ್ಕಾರು ವರ್ಷ ಮೊದಲೇ ಜನ್ಮ ಪಡೆದಾತ. ಏಕವಚನ ಏಕೆಂದರೆ, ಅವನ ಒಡ ಹುಟ್ಟಿದ ತಂಗಿಯರು, ಅಳಿಯ ಸೇರಿದಂತೆ ಆತನನ್ನು ಯಾರೂ ಬಹುವಚನದಲ್ಲಿ ಕರೆದುದು ಇಲ್ಲ. ಆ ಹೆಸರಿನ ಅನೇಕರು ಇದ್ದರು ನಮ್ಮೂರಿನಲ್ಲಿ. ಅವರನ್ನು ನಿರ್ದಿಷ್ಟವಾಗಿ ಗುರುತಿಸಲು, ಅವರೆಲ್ಲರ ಹೆಸರಿನ ಮುಂದೆ ಮನೆ ಹೆಸರು ಸೇರಿಸುತ್ತಿದ್ದರು. ಮುಲ್ಲಡ್ಕ ಬೊಗ್ಗು, ಹೊಸವಕ್ಲು ಬೊಗ್ಗು, ಹಾಡಿಮನೆ ಬೊಗ್ಗು, ಕೋಡಿಮನೆ ಬೊಗ್ಗು… ಹೀಗೆ. ಆದರೆ ನಾನು ಹೇಳ ಹೊರಟಿರುವ ಬೊಗ್ಗು, ಮನೆಯ ಹೆಸರಿನಿಂದಾಗಲಿ, ಅಪ್ಪನ ಹೆಸರಿನಿಂದಾಗಲಿ ಗುರುತಿಸಿಕೊಂಡಿಲ್ಲ. ಆತನಿಗೆ ಹೆಸರಿಗೊಂದು ಹೆಸರಿತ್ತಷ್ಟೇ ವಿನಾಃ ತನ್ನದೇ ಆದ ಅಸ್ಮಿತೆ ಇರಲಿಲ್ಲ. ಆ ಹೆಸರಿನಿಂದ ಕರೆದರೆ‌ ಓಗೊಡುತ್ತಿರಲಿಲ್ಲ, ತಿರುಗಿ ನೋಡುತ್ತಿದ್ದ. ಆದರೆ ಆ ಹೆಸರಿನಿಂದ ಹೊರಗಿನವರು ಯಾರೂ ಕರೆದುದಿಲ್ಲ. ತೀರಾ ಅಗತ್ಯ ಬಿದ್ದರೆ, “ಅವ ಮೂಗ” ಎಂದೇ ಜನ ಅವನನ್ನು ಹಿಂದಿನಿಂದ ಕರೆಯುತ್ತಿದ್ದರು. ಆ ಹೆಸರು ಕೇಳಿದಾಗ, ಓದಿದಾಗಲೆಲ್ಲಾ ನನಗೆ ಈ ಬೊಗ್ಗುನ ರೂಪ ಕಣ್ಣೆದುರು ನಿಲ್ಲುತ್ತದೆ. ಆರಡಿಗೂ ಮಿಕ್ಕಿದ ಎತ್ತರದ,…

Read More

ಬಂಟರು ಆರ್ಥಿಕವಾಗಿ ಬಲಿಷ್ಠರಾಗುತ್ತಿದ್ದಂತೆ ತಮ್ಮ ಪದ್ದತಿ, ಸಂಪ್ರದಾಯಕ್ಕೆ ನಿಧಾನವಾಗಿ ಎಳ್ಳುನೀರು ಬಿಡುತ್ತಿದ್ದಾರೆ. ಯಾಕೋ ನಾಗಾರಾಧನೆಯಲ್ಲಾಗಲೀ, ಭೂತಾರಾಧನೆಯಲ್ಲಾಗಲೀ, ವಿವಾಹ ಅಪರಕ್ರಿಯೆಯಂತಹ ಕಾರ್ಯಕ್ರಮಗಳಲ್ಲಿಯೂ ನಮಗೆ ತೌಳವ ಸಂಪ್ರದಾಯವೆಂದರೆ ಒಂದು ರೀತಿ ಅಸಡ್ಡೆ. ವೈದಿಕ ಸಂಪ್ರದಾಯವೇ ಶ್ರೇಷ್ಠ ಎಂಬ ಭಾವನೆ. ಇದಕ್ಕೆ ಸರಿಯಾಗಿ ತೌಳವ ಸಂಪ್ರದಾಯದ ಬಗ್ಗೆ ಮಾರ್ಗದರ್ಶನ ಮಾಡಬಲ್ಲ ಹಿರಿಯರ ಕೊರತೆಯೂ ನಮ್ಮಲ್ಲಿದೆ. ನಮ್ಮ ಭೂತಗಳಿಗೆ ಬ್ರಹ್ಮಕಲಶ ಮಾಡಿಸುವ, ನಾಗನ ಪ್ರಾಕೃತಿಕ ಆವಾಸ ಸ್ಥಾನವನ್ನು ಕಡಿದು ಕಾಂಕ್ರೀಟ್ ಗುಡಿಯಲ್ಲಿ ಕುಳ್ಳಿರಿಸಲು ಪ್ರಯತ್ನಿಸುವ ನಮಗೆ ವಿವಾಹವೇನು ಮಹಾ? ವೈದಿಕ ಸಂಪ್ರದಾಯದಂತೆ ಹೋಮ, ಸಪ್ತಪದಿ, ಕನ್ಯಾದಾನ ಮಾಂಗಲ್ಯಧಾರಣೆ ಇದ್ದರೇನೆ ಅದು ಮದುವೆ. ಸದ್ಯಕ್ಕೆ ವರಪೂಜೆ, ಕಾಶೀಯಾತ್ರೆ, ಉರುಟಣೆ ಇತ್ಯಾದಿಗಳು ಪ್ರಾಂಭವಾಗಿಲ್ಲ. ಕ್ರಮೇಣ ಪ್ರಾರಂಭವಾಗಲೂಬಹುದು. ಬಂಟರು ಮೂಲತಃ ಕ್ಷತ್ರಿಯರು ಹಾಗೂ ಕೃಷಿಯನ್ನು ನಂಬಿ ಬದುಕಿದವರು. ನಮ್ಮಲ್ಲಿ ಭೂಮಿ ಸಾಕ್ಷಿಯಾಗಿ ಹಿರಿಯರ ಸಮ್ಮುಖದಲ್ಲಿ ಮದುವೆಯಾಗುವುದೇ ಸಂಪ್ರದಾಯ. ಹಿಂದೆ ಅಂದರೆ ಸುಮಾರು ಅರುವತ್ತು ಎಪ್ಪತ್ತು ವರ್ಷಗಳ ಹಿಂದೆ ಮಾಂಗಲ್ಯಧಾರಣೆಯೂ ನಮ್ಮಲ್ಲಿ ಇರಲಿಲ್ಲವಂತೆ. ವಧುವನ್ನು ಅಲಂಕರಿಸುವಾಗ ಮುತ್ತೈದೆಯರೇ ಅವಳ ಕೊರಳಿಗೆ ಕರಿಮಣಿ ಕಟ್ಟಿ,…

Read More

ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ಪ್ರೌಢಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ರೂಪಾಯಿ 1 ಲಕ್ಷ 50 ಸಾವಿರ ಅನುದಾನ ಮಂಜೂರಾಗಿದ್ದು, ಅದರ ಆದೇಶ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಬಜಪೆ ವಲಯ ಯೋಜನಾಧಿಕಾರಿ ಗಿರೀಶ್ ಅವರು ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿಯವರಿಗೆ ಹಸ್ತಾಂತರ ಮಾಡಿದರು. ಈ ಸಂಧರ್ಭದಲ್ಲಿ ಟ್ರಸ್ಟ್ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್, ಕೋಶಾಧಿಕಾರಿ ವಿಠಲ ಶೆಟ್ಟಿ, ಸದಸ್ಯರಾದ ವಜ್ರಾಕ್ಷಿ ಪಿ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪ್ರಪುಲ್ಲ ಪಂಜ, ಉಪಾಧ್ಯಕ್ಷ ಅನಿಲ್ ಸಾಲ್ಯಾನ್, ಸದಸ್ಯೆ ಕಾವ್ಯ, ಗ್ರಾಮಾಭಿವೃದ್ದಿ ಯೋಜನೆ ಮೇಲ್ವಿಚಾರಕಿ ನಿಶ್ಮಿತಾ ಸುರೇಶ್ ಶೆಟ್ಟಿ, ಸೇವಾ ಪ್ರತಿನಿಧಿ ಯಶೋದ ಬಾಲಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

Read More