Author: admin

ಮೂಡುಬಿದಿರೆ: ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್ ಪುರುಷರ ಹಾಗೂ ಮಹಿಳೆಯರ ತಂಡ ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟ ಪಡೆಯಿತು. ಪುರುಷರ ತಂಡವು  ನಾಲ್ಕನೇ ಭಾರಿ ಸಮಗ್ರ ತಂಡ ಪ್ರಶಸ್ತಿ ಪಡೆಯುತ್ತಿದ್ದರೆ, ಮಹಿಳೆಯರ ತಂಡವು ಮೂರನೇ ಬಾರಿ ಪ್ರಶಸ್ತಿ ಪಡೆದಿದೆ. ಮಂಗಳೂರು ವಿವಿ ಪ್ರತಿನಿಧಿಸಿದ ಪುರುಷರ ಹಾಗೂ ಮಹಿಳೆಯರ ತಂಡದಲ್ಲಿದ್ದ 12 ಜನ ಕ್ರೀಡಾಳುಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿದ್ದರೆ. ಪುರುಷರ ವಿಭಾಗದಲ್ಲಿ ಮಂಗಳೂರು ವಿವಿ 69 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದರೆ, ಮುಂಬೈ ವಿವಿ 71 ಅಂಕಗಳೊಂದಿಗೆ ದ್ವಿತೀಯ ಸ್ಥಾನ, 83 ಅಂಕಗಳೊಂದಿಗೆ ರಾಜಸ್ಥಾನ ವಿವಿ ತೃತೀಯ ಸ್ಥಾನ ಗಳಿಸಿತು. ಮಹಿಳಾ ವಿಭಾಗದಲ್ಲಿ ಮಂಗಳೂರು ವಿವಿ 33 ಅಂಕಗಳೊಂದಿಗೆ ಪ್ರಥಮ, 46 ಅಂಕಗಳೊಂದಿಗೆ ಮಹರ್ಷಿದಯನಂದ ವಿವಿಯು  ದ್ವಿತೀಯ, ಕೋಲ್ಹಾಪುರದ ಶಿವಾಜಿ ಯುನಿವರ್ಸಿಟಿ 64 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆಯಿತು ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸ್‌ನ ಬಸಂತಿಕುಮಾರಿ ದ್ವಿತೀಯ,…

Read More

ಮಣಿಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುಂತಳನಗರದಲ್ಲಿರುವ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ನ ಸ್ಕಿಲ್ ಡೆವಲಪ್‌ಮೆಂಟ್‌ ಸೆಂಟರ್ ಆಯೋಜನೆಯಲ್ಲಿ ಸತತ 3ನೇ ಬಾರಿಗೆ ಬೆಂಗಳೂರಿನ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳವನ್ನು ಎಂಆರ್‌ಜಿ ಗ್ರೂಪ್ ಮುಖ್ಯಸ್ಥ ಬಂಜಾರ ಡಾ| ಕೆ. ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಉದ್ಯೋಗಾರ್ಥಿಗಳು ಉದ್ಯೋಗ ಸಿಕ್ಕಿಲ್ಲ ಎಂದು ಬೇಸರಿಸದೆ ತಮ್ಮ ಪ್ರಯತ್ನ ಮುಂದುವರಿಸಿ. ಗೋಲ್ಡ್‌ಫ್ಲಿಂಚ್‌ ಸಿಟಿಯಲ್ಲಿ ಮುಂದೆ 50 ಸಾವಿರ ಉದ್ಯೋಗಾವಕಾಶ ಇದೆ. 3ನೇ ಬಾರಿಯ ಉದ್ಯೋಗ ಮೇಳದಲ್ಲಿ ಹೆಚ್ಚು ಕಂಪೆನಿಗಳು ಮತ್ತು ಹೆಚ್ಚು ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದು, ಉದ್ಯೋಗ ಮೇಳ ಆಯೋಜಿಸಿದ್ದಕ್ಕೆ ಸಾರ್ಥಕವಾಗಿದೆ ಎಂದರು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಮಾತನಾಡಿ, ಖಾಸಗಿ ಸಂಸ್ಥೆಗಳು ಉದ್ಯೋಗ ಮೇಳ ಆಯೋಜನೆ ಮಾಡಿ, ನಿರುದ್ಯೋಗಕ್ಕೆ ಸವಾಲು ಒಡ್ಡಿರುವುದು ಅತ್ಯಂತ ಸಂತಸದ ಸಂಗತಿ. ಇನ್ನೂ ಹತ್ತು ಹಲವು ಸಂಸ್ಥೆಗಳು ಉದ್ಯೋಗ ಮೇಳ…

Read More

‘ತುಳು ಭಾಷೆಯಲ್ಲಿ ಬರೆಯುವ ಹೆಚ್ಚಿನ ಲೇಖಕರು ಭಾಷೆಯ ಬಗ್ಗೆ ಗಂಭೀರವಾಗಿ ಯೋಚಿಸುವುದಿಲ್ಲ. ಆದರೆ ಭಾಸ್ಕರ ರೈ ಕುಕ್ಕುವಳ್ಳಿಯವರ ಸೀಯನ ಕೃತಿಯಲ್ಲಿ ವಸ್ತು ವೈವಿಧ್ಯತೆಯೊಂದಿಗೆ ಭಾಷೆಯನ್ನು ಸಶಕ್ತವಾಗಿ ಬಳಸಲಾಗಿದೆ. ಸೀಯನ ಶೀರ್ಷಿಕೆಯೇ ಅಪ್ಪಟ ತುಳು ದೇಸಿ ಪದ. ಮೂರು ವಿಭಾಗಗಳಲ್ಲಿ ಪ್ರಕಟವಾಗಿರುವ ನೂರಕ್ಕೂ ಹೆಚ್ಚಿನ ಅವರ ಕವಿತೆಗಳಲ್ಲಿ ತುಳು ಬದುಕಿನ ನೈಜ ಚಿತ್ರಣವನ್ನು ವಿವಿಧ ಆಯಾಮಗಳಲ್ಲಿ ಕಟ್ಟಿ ಕೊಡಲಾಗಿದೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಮತ್ತು ಹಿರಿಯ ಜಾನಪದ ಸಂಶೋಧಕ ಪ್ರೊ.ಎ.ವಿ.ನಾವಡ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ಸಹಯೋಗದಲ್ಲಿ ನವೆಂಬರ್ 17 ರಂದು ಕದ್ರಿ ಶ್ರೀ ಮಂಜುನಾಥ ದೇವಾಲಯದಲ್ಲಿ ಜರಗಿದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ನೂತನ ಕೃತಿ ‘ಸೀಯನ’ ಚೀಪೆ ಕೋಪೆದ ಪಾಕ ಪದೊಕುಲು ಕವನ ಸಂಕಲನ ಬಿಡುಗಡೆ ಮತ್ತು ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ‘ಆಧುನಿಕ ಕವಿತೆಗಳು…

Read More

ಸಮಾಜ ಸೇವಕ, ಹೇರಂಭ ಗ್ರೂಪ್ ಆಫ್ ಕಂಪನಿಯ ಆಡಳಿತ ನಿರ್ದೇಶಕರು, ಕರ್ನಾಟಕ ಸರಕಾರದಿಂದ ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿನ ನವಂಬರ್ 16ರಂದು ನಡೆದ ಸನ್ಮಾನ ಸಮಾರಂಭದಲ್ಲಿ ಬಂಟರ ಸಂಘ ಪುತ್ತೂರು ತಾಲೂಕು ವತಿಯಿಂದ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಅನಿತಾ ಹೇಮನಾಥ ಶೆಟ್ಟಿ, ದಯಾನಂದ ರೈ ಮನವಳಿಕೆ ಗುತ್ತು, ನಿತ್ಯಾನಂದ ಶೆಟ್ಟಿ ಮನವಳಿಕೆ, ರವಿಪ್ರಸಾದ್ ಶೆಟ್ಟಿ ಬನ್ನೂರು, ಲಕ್ಷ್ಮೀನಾರಾಯಣ ರೈ ಹರೇಕಲ, ಸಂತೋಷ್ ಶೆಟ್ಟಿ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

Read More

ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿ ಅವರಿಗೆ ಪುಣೆ ಬಂಟರ ಭವನದಲ್ಲಿ ನಡೆದ ತುಳುಕೂಟದ ರಜತ ಸಂಭ್ರಮ ಮತ್ತು ತುಳುನಾಡ ಜಾತ್ರೆ ಸಂದರ್ಭದಲ್ಲಿ ‘ತುಳುನಾಡ ಧನ್ವಂತರಿ’ ಬಿರುದು ಪ್ರಧಾನ ಮಾಡಲಾಯಿತು. ಒಡಿಯೂರು ಗುರುದೇವಾನಂದ ಸ್ವಾಮೀಜಿ ಮತ್ತು ಕಟೀಲು ಅಸ್ರಣ್ಣ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಐಪಿಎಸ್, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ನಾಡೋಜ ಡಾ. ಜಿ. ಶಂಕರ್, ತುಳುಕೂಟದ ಅಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು, ಪ್ರವೀಣ್ ಶೆಟ್ಟಿ ಪುತ್ತೂರು, ರೋಹಿತ್ ಶೆಟ್ಟಿ ನಗ್ರಿಗುತ್ತು ಮೊದಲಾದ ಗಣ್ಯರ ಸಮ್ಮುಖದಲ್ಲಿ ಡಾ. ಸುಧಾಕರ ಶೆಟ್ಟಿ ಅವರಿಗೆ ಬಿರುದು ಪ್ರಧಾನ ಮಾಡಲಾಯಿತು. ವೈದ್ಯಕೀಯ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಮೂರುವರೆ ದಶಕಗಳ ನಿಸ್ವಾರ್ಥ ಸಮಾಜ ಸೇವೆಗಾಗಿ ಅವರಿಗೆ ತುಳುನಾಡ ಧನ್ವಂತರಿ ಬಿರುದು ನೀಡಿ ಗೌರವಿಸಲಾಗಿದೆ. ಡಾ. ಸುಧಾಕರ ಶೆಟ್ಟಿಯವರಿಗೆ ಈ ಹಿಂದೆ ಹೊರನಾಡ ಕನ್ನಡ…

Read More

ಮೂಡುಬಿದಿರೆ: ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಮಹತ್ವದ ಪ್ರಯೋಗ, ನಾಡೋಜ ಹಂಪನಾ ವಿರಚಿತ ದೇಸೀ ಮಹಾಕಾವ್ಯದ ರಂಗರೂಪ “ಚಾರುವಸಂತ ” ನಾಟಕವು ಮತ್ತೆ ರಂಗಕ್ಕೆ ಬರಲು ಸಿದ್ಧತೆ ನಡೆಸಿದೆ. ನ.21 ,22 ರಂದು ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡಭವನದಲ್ಲಿ ಮೊದಲೆರಡು ಪ್ರದರ್ಶನ ಏರ್ಪಡಿಸಲಾಗಿದೆ. ಡಾ.ನಾ.ದಾಮೋದರ ಶೆಟ್ಟಿ ರಚಿಸಿದ, ಡಾ.ಜೀವನ್ ರಾಂ ಸುಳ್ಯ ನಿರ್ದೇಶನದ ಚಾರುವಸಂತವು ಕಳೆದ ವರ್ಷ ರಾಜ್ಯಾದ್ಯಂತ ಪ್ರದರ್ಶನ ನಡೆಸಿ ಸಂಚಲನ ಮೂಡಿಸಿತ್ತು. ಬಹುಬೇಡಿಕೆಯ ನಾಟಕವಾಗಿರುವ ಚಾರುವಸಂತ ಮತ್ತೆ ತನ್ನ ಚೈತ್ರಯಾತ್ರೆ ಕೈಗೊಳ್ಳಲಿದೆ. ನ.21 ರಂದು ಗುರುವಾರ ಸಂಜೆ 6.15 ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವರು ಚಾರುವಸಂತ ರಂಗ ಪಯಣವನ್ನು ಉದ್ಘಾಟಿಸಲಿದ್ದಾರೆ. ಚಾರುವಸಂತ ನಾಟಕ ಕೃತಿಯನ್ನು ವಿಶ್ರಾಂತ ಕುಲಪತಿಗಳಾದ ಫ್ರೊ| ಬಿ.ಎ.ವಿವೇಕ ರೈ ಬಿಡುಗಡೆಗೊಳಿಸಲಿದ್ದಾರೆ. ನಾಟಕಕಾರ ನಾ.ದಾಮೋದರ ಶೆಟ್ಟಿ ಉಪಸ್ಥಿತರಿರುವರು. ಬಳಿಕ ಸಂಜೆ 6.45 ಕ್ಕೆ “ಚಾರುವಸಂತ” ನಾಟಕ ಪ್ರದರ್ಶನ ನಡೆಯಲಿದೆ. ನ.22ರಂದು ಶುಕ್ರವಾರ ಯಾವುದೇ ಸಭಾ ಕಾರ್ಯಕ್ರಮ ಇರದೆ ಆದಿನ ಸಂಜೆ 6.30 ಕ್ಕೆ…

Read More

ಮೂಡುಬಿದಿರೆ: ಪ್ರಕೃತಿ ಚಿಕಿತ್ಸಾ ಪದ್ಧತಿಯು ಅತ್ಯುತ್ತಮ ಜೀವನವನ್ನು ನಡೆಸಲು ರಹದಾರಿಯಾಗಿದ್ದು ಇದರ ಮೂಲ ತತ್ವಗಳನ್ನು ಪಾಲಿಸುವುದರಿಂದ ಜೀವನ ಶೈಲಿ ಬದಲಾವಣೆಯಾಗುವುದಲ್ಲದೇ ಯೋಗಭ್ಯಾಸಗಳಿಂದ ಆಯುಷ್ಯ ವೃದ್ಧಿಯಾಗುತ್ತದೆ ಎಂದು ಪ್ರಕೃತಿ ಚಿಕಿತ್ಸಾ ತಜ್ಞ ಡಾ. ಮಹಮ್ಮದ್ ರಫೀಕ್ ತಿಳಿಸಿದರು. ಅವರು ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕಾಲೇಜು ಆಯೋಜಿಸಿದ್ದ 7ನೇ ರಾಷ್ಟಿçÃಯ ಪ್ರಕೃತಿ ಚಿಕಿತ್ಸಾ ದಿನದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿ ಚಿಕಿತ್ಸೆ ಮತ್ತು ಯೋಗವನ್ನು ಸರಿಯಾಗಿ ಪಾಲಿಸುವುದರಿಂದ ಮಾನಸಿಕ ಸ್ಥಿತಿಗತಿಗಳನ್ನು ಸಮತೋಲನದಲ್ಲಿಟ್ಟುಕೊಳ್ಳಬಹುದು. ಆ ಮೂಲಕ ಎಲ್ಲಾ ವರ್ಗದ ಮತ್ತು ವಯೋಮಾನದವರಿಗೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಅಧ್ಯಕ್ಷತೆವಹಿಸಿ ಮಾತನಾಡಿದ ಡಾ ಗ್ರೀಷ್ಮಾ ವಿವೇಕ್ ಆಳ್ವ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಶಿಕ್ಷಣವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡಲ್ಲಿ ಜೀವನವನ್ನು ಅನುಭವಿಸಲು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪ್ರಥಮ ವರ್ಷದ ವಿದ್ಯಾರ್ಥಿ ಯೋಗೀಶ್ವರನ್ ಕಾರ್ಯಕ್ರಮ ನಿರೂಪಿಸಿ, ಯೋಗ ವಿಭಾಗದ ಮುಖ್ಯಸ್ಥೆ ಡಾ ಅರ್ಚನಾ ಸ್ವಾಗತಿಸಿ, ಡಾನಿಯ ಹಾಗೂ ತಂಡದವರು ಪ್ರಾರ್ಥಸಿ,…

Read More

ಕಾರ್ಕಳ : ವಿದ್ಯಾರ್ಥಿಯ ಸಾಧನೆಯ ಹಿಂದೆ ಗುರುಗಳ ಪಾತ್ರ ಮಹತ್ವದ್ದು. ಅಂತಹ ಗುರುಗಳನ್ನು ಯಾವುದೇ ಕ್ಷೇತ್ರದಲ್ಲಿ ಮುನ್ನುಗ್ಗುವವರು ಆರಿಸಿಕೊಳ್ಳ ಬೇಕು. ಅಡೆತಡೆಗಳನ್ನು ಸಾಧನೆಯ ಏಣಿಯಾಗಿಸಿಕೊಂಡವರು ಸಾಧಕರಾಗಿ ಹೊರಬರುತ್ತಾರೆ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ, ದೈ.ಶಿ.ವಿಭಾಗದ ಮುಖ್ಯಸ್ಥ ಶ್ರೀ ರಮೇಶ್ ಎಚ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟ-2024ರ ಕ್ರೀಡಾಕೂಟದ ಧ್ವಜಾರೋಹಣವನ್ನು ನೆರವೇರಸಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕವಾಗಿ, ಹಾಗೂ ಕ್ರೀಡೆಯನ್ನು ಉತ್ತೇಜಿಸುತ್ತಿರುವ ಇಲ್ಲಿನ ಆಡಳಿತ ಮಂಡಳಿಯ ಕಾರ್ಯ ಶ್ಲಾಘನೀಯ,ಇಲ್ಲಿನ ಕ್ರೀಡಾಂಗಣವು ರಾಜ್ಯ ಹಾಗೂ ರಾಷ್ಟ್ರೀಯ ಕ್ರೀಡಾಕೂಟ ನಡೆಸುವುದಕ್ಕೂ ಸುಯೋಗ್ಯವಾಗಿದೆ ಎಂದು ಕೊಂಡಾಡಿದರು. ಕ್ರೀಡಾಕೂಟವನ್ನು ಉದ್ಘಾಟಿಸಿದ ಕಾಮನ್ ವೆಲ್ತ್ ವೈಟ್ ಲಿಫ್ಟಿಂಗ್ ಪದಕ ವಿಜೇತ ಹಾಗೂ ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತರಾಷ್ಟ್ರೀಯ ಕ್ರೀಡಾಪಟು ಶ್ರೀ ಗುರುರಾಜ್ ಪೂಜಾರಿ ಮಾತನಾಡಿ, ಕ್ರೀಡೆಯಲ್ಲಿ ತೊಡಗಿಕೊಂಡವರಿಗೆ ಇಂದು ಸರಕಾರದ ವಿವಿಧ ಸ್ತರಗಳಲ್ಲಿ ಉದ್ಯೋಗವನ್ನು ಪಡೆಯುವುದಕ್ಕೆ ಸಾದ್ಯವಿದೆ. ಅದರ ಸದುಪಯೋಗ ಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.…

Read More

ಕನ್ನಡ ನಾಡಿನ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಪರಮಧ್ಯೇಯ ಹೊಂದಿರುವ ಡಾ. ವೇಮಗಲ್ ನಾರಾಯಣ ಸ್ವಾಮಿಯವರ ಒತ್ತಾಸೆಯಿಂದ ಆರಂಭವಾದ ‘ಡಾ. ವೇಮಗಲ್ ನಾರಾಯಣ ಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನ’ ವತಿಯಿಂದ ಪ್ರತಿ ವರ್ಷ ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವೆ ಮಾಡುತ್ತಿರುವ ಸಾಧಕರನ್ನು ಗುರುತಿಸಿ, ಗೌರವಿಸಿ ”ಸಂಸ್ಕೃತಿ ಸಿರಿ’ ಪ್ರಶಸ್ತಿಯೊಂದಿಗೆ 25000 ರೂಪಾಯಿ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡ ಪ್ರಶಸ್ತಿಯನ್ನು ಬಂಟರ ಸಂಘ ಮುಂಬಯಿಯ ಪ್ರಧಾನ ಕಾರ್ಯದರ್ಶಿ, ಖ್ಯಾತ ಆರ್ಥಿಕ ಸಲಹೆಗಾರ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, 2024 ರ ಸಾಲಿನ ಬಂಟರತ್ನ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಅಧ್ಯಕ್ಷ ಡಾ| ಆರ್. ಕೆ. ಶೆಟ್ಟಿಯವರಿಗೆ ಪ್ರಧಾನಿಸಿ ಗೌರವಿಸಲಾಯಿತು. ನವೆಂಬರ್ 8 ರಂದು ರಂದು ಬೆಂಗಳೂರಿನ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಬಸವಲಿಂಗಯ್ಯ, ಎಸ್. ಜಿ. ಸಿದ್ದರಾಮಯ್ಯ, ಮಲ್ಲೇಶ್ವರಪುರಂ ಜಿ, ವೆಂಕಟೇಶ್, ದೊಡ್ಡರಂಗೇಗೌಡ, ಯಲ್ಲಪ್ಪ ರೆಡ್ಡಿ, ಜಯಶ್ರೀ ಅರವಿಂದ್, ತಿಮ್ಮೇಶ್, ಬಿ.ಕೆ. ಶಿವರಾಂ, ವೇಮಗಲ್ ನಾರಾಯಣ ಸ್ವಾಮಿ, ಗೊಲ್ಲಹಳ್ಳಿ ಶಿವಪ್ರಸಾದ್,…

Read More

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರ್‌ನಲ್ಲಿ “ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪ” ನಡೆಯಿತು. ಈ ಸಂದರ್ಭದಲ್ಲಿ ಸಹಸ್ರಾರು ಜನರಿಂದ ಸಂಕಲ್ಪ ಪೂಜೆ ನಡೆಯಿತು. ರಾಜಧಾನಿಯಲ್ಲಿ ನೆಲೆಸಿರುವ ದ.ಕ. ಮತ್ತು ಉಡುಪಿ ಭಾಗದ ಹಲವು ಭಕ್ತರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ ಹಾಗೂ ಮಹಾಮಂಗಳಾರತಿ ಜರಗಿತು. ಈ ಸಂದರ್ಭ ಎಂಆರ್‌ಜಿ ಗ್ರೂಪ್‌ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಕಾಶ್‌ ಶೆಟ್ಟಿ ಮಾತನಾಡಿ, ಮಾರಿಯಮ್ಮನ ಜೀರ್ಣೋದ್ಧಾರ ಆರಂಭವಾಗಿ 5 ವರ್ಷವಾಯಿತು. 2025ರ ಫೆಬ್ರವರಿಯಲ್ಲಿ ಕಾಪುವಿನಲ್ಲಿ 9 ದಿನಗಳ ಅಭೂತಪೂರ್ವ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದರು. ಯುನಿರ್ವಸಲ್‌ ಸ್ಕೂಲ್‌ ಆಫ್ ಆಡ್ಮಿನಿಸ್ಟ್ರೇಶನ್‌ನ ಅಧ್ಯಕ್ಷ ಉಪೇಂದ್ರ ಶೆಟ್ಟಿ ಮಾತನಾಡಿ, ಲೇಖನ ಸಂಕಲ್ಪಕ್ಕೆ ಬೆಂಗಳೂರಿನಿಂದ 9999 ಹಸ್ತ ಪ್ರತಿಗಳ ಆವಶ್ಯಕತೆಯಿದೆ. ಈ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ನಗರದ ವಿವಿಧೆಡೆ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಬೇಕು ಎಂದು ಮನವಿ ಮಾಡಿದರು. ಜೀರ್ಣೋದ್ಧಾರ ಕಾರ್ಯಕ್ರಮಗಳನ್ನು ನಾವು…

Read More