Author: admin

ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಮೊದಲಬಾರಿಗೆ ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿ ಬಿ.ಎ.ಪಿ.ಎಸ್. ಹಿಂದೂ ದೇವಾಲಯದಲ್ಲಿ ಮೇ 31ಮೇ 2025 ರಂದು ಗುರುವಂದನಾ ಸಂಸ್ಕೃತಿ ಸಿಂಚನ ಕಾರ್ಯಕ್ರಮ ನಡೆಯಿತು. ಸನಾತನ ಸಾಂಸ್ಕೃತಿ, ಕಲಾ ಆಧ್ಯಾತ್ಮಿಕ, ಗುರು ಪರಂಪರೆಯ ಕಾರ್ಯಕ್ರಮಕ್ಕೆ ಭಾರತದ ವಿವಿಧ ಭಾಗಗಳಿಂದ ಆಗಮಿಸಿದ್ದ ಪರಮ ಪೂಜ್ಯ ಮಠಾಧಿಪತಿಗಳು ಹಾಗೂ ಗಣ್ಯಾತಿ ಗಣ್ಯರು, ವಿವಿಧ ಕ್ಷೇತ್ರಗಳ ಸಾಧಕರುಗಳನ್ನು ಸುಮಂಗಲೆಯರಿಂದ ಪೂರ್ಣ ಕುಂಭ, ವೇದಘೋಷ, ಪಂಚವಾದ್ಯಗಳೊಂದಿಗೆ ಬಿ.ಎ.ಪಿ.ಎಸ್. ಹಿಂದೂ ಮಂದಿರದ ಅವರಣದಲ್ಲಿರುವ ಪ್ರಮುಖ್ ಸಭಾಂಗಣಕ್ಕೆ ಮೆರವಣಿಗೆಯ ಮೂಲಕ ಬರ ಮಾಡಿಕೊಳ್ಳಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರುಗಳನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಬುಧಾಬಿ ಹಿಂದೂ ಮಂದಿರದ ಮುಖ್ಯಸ್ಥರು ಪರಮ ಪೂಜ್ಯ ಶ್ರೀ ಬ್ರಹ್ಮವಿಹಾರಿ ದಾಸ್ ಸ್ವಾಮೀಜಿಯವರು, ಬೆಳಗಾವಿ ನಿಡಸೊಸಿ ಶ್ರೀ ಜಗದ್ಗುರು ದುರುದುಂಡೆಶ್ವರ ಮಠದ ಸ್ವಾಮಿಜಿ ಶ್ರೀ ಶ್ರೀ ಶ್ರೀ ನಿಜಲಿಂಗೇಶ್ವರ ಸ್ವಾಮಿಜಿ ಮತ್ತು ಗೋವಾ ರಾಜ್ಯದ ಶ್ರೀ ದತ್ತ ಪದ್ಮನಾಭ ಪೀಠದ ಪದ್ಮಶ್ರೀ ಪುರಸ್ಕೃತ ಪೂಜ್ಯ ಶ್ರೀ ಶ್ರೀ ಸದ್ಗುರು ಬ್ರಹ್ಮೇಶನಂದನಾಚಾರ್ಯ ಸ್ವಾಮಿಜಿ, ಸ್ವಾಮಿಜಿ…

Read More

ನಾವೆಲ್ಲರೂ ಪ್ರಕೃತಿಯ ಆರಾಧಕರು. ನಮಗರಿವಿಲ್ಲದೇ ಪ್ರಕೃತಿಯಿಂದ ಸಿಗುವ ಗಾಳಿ, ನೀರು, ಮರ, ಬೆಳಕು, ಮಣ್ಣಿನ ಆರಾಧಕರಾಗಿ ಪ್ರಕೃತಿಯನ್ನು ನಾವು ಪೂಜಿಸುತ್ತೇವೆ. ಜೀವ ಪೋಷಕ ಜೀವ ರಕ್ಷಕ ಇದೆಲ್ಲದರ ಮಹತ್ವ ಇಂದಿಗೂ ಮುಂದೆಯೂ ಎಂದೆಂದಿಗೂ ಇದ್ದೆ ಇರುತ್ತದೆ. ಭೂಮಿಯಲ್ಲಿನ ತೇವಾಂಶ ಭರಿತ ಜಾಗವನ್ನು ರಕ್ಷಣೆ ಪೋಷಣೆ ನೀಡಿದರೆ ಅರಣ್ಯ ಸಂಪತ್ತು ಯತೇಚ್ಛವಾಗಿ ಬೆಳೆಯಲು ಸಾದ್ಯ. ಇದಕ್ಕೆ ಪ್ರಾಮಾಣಿಕ ಬದ್ದತೆ ಬೇಕು. ಪ್ರಕೃತಿ ರಕ್ಷಣೆ ಕೂಡಾ ಹಾಗೂ ದೇಶ ರಕ್ಷಣೆ ಕೂಡಾ ನಮ್ಮಿಂದಲೇ ಆಗಬೇಕು. ನಮ್ಮ ಬಂಟರ ಸಂಘದ ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿನಂದನ್ ಶೆಟ್ಟಿ ಮತ್ತು ಯುವ ವಿಭಾಗದ ಸದಸ್ಯರಿಂದ ಪ್ರಕೃತಿಯ ಸಾಮಾನ್ಯ ಚಿಂತನೆಯಿಂದ ಅರ್ಥ ಪೂರ್ಣವಾದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಪ್ರಕೃತಿಗೆ ಕೊಡುಗೆ ನೀಡಲು ಪ್ರತಿಯೊಬ್ಬರೂ ತಮ್ಮ ಶಕ್ತಿ ಮತ್ತು ಉದಾತ್ತ ಮನೋಭಾವದಿಂದ ಒಗ್ಗೂಡಿ ತಮ್ಮ ಕರ್ತವ್ಯವನ್ನು ಮಾಡಿ ತೋರಿಸಿದ್ದಾರೆ. ಭವಿಷ್ಯದ ಪೀಳಿಗೆಗೆ ಪ್ರಕೃತಿಯನ್ನು ಕಾಪಾಡುವ ಕಡೆಗೆ ನಮ್ಮ ಸಾಮೂಹಿಕ ಜವಾಬ್ದಾರಿಯನ್ನು ತೋರಿಸೋಣ. ವನ ಮಹೋತ್ಸವ ಎಂದರೆ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮ…

Read More

ಸಾಂಸ್ಕೃತಿಕ ನಗರಿ ಪುಣೆಯ ಕನ್ನಡಿಗರ ಹಿರಿಮೆಯ ಸಂಸ್ಥೆ 73ರ ಹರೆಯದ ಪುಣೆ ಕನ್ನಡ ಸಂಘವು ಶೈಕ್ಷಣಿಕವಾಗಿ, ಸಾಹಿತ್ಯಕವಾಗಿ, ಸಾಂಸ್ಕೃತಿಕವಾಗಿ ಕನ್ನಡ ಸೇವೆಗೈಯುತ್ತಾ ಕನ್ನಡ ಅಭಿಮಾನಿಗಳಿಗೆಲ್ಲರಿಗೂ ಮಾತೃ ಸಂಸ್ಥೆಯಾಗಿ ಬೆಳೆದು ನಿಂತಿದೆ. 1952 ರಲ್ಲಿ ಸ್ಥಾಪನೆಗೊಂಡ ಕನ್ನಡ ಸಂಘವು ಮೊದಲು ಕನ್ನಡ ಮಾಧ್ಯಮ ಶಾಲೆಯನ್ನು ಆರಂಭಿಸಿತ್ತು. ಬಳಿಕದ ದಿನಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿದ್ದು, ಪ್ರಾಥಮಿಕ ಶಿಕ್ಷಣದಿಂದ ಉಚ್ಚ ಶಿಕ್ಷಣದವರೆಗೆ ಪ್ರಸ್ತುತ ಕನ್ನಡ ಸಂಘದ ಕಾವೇರಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂಬತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. 500ಕ್ಕೂ ಹೆಚ್ಚು ಶಿಕ್ಷಕರು ಮತ್ತು ಶಿಕ್ಷಕೇತರ ಸಿಬಂದಿ ಸಂಸ್ಥೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳು : ನಗರದ ಬಾಣೇರ್, ಕೇತ್ಕರ್ ರೋಡ್, ಗಣೇಶ್ ನಗರ, ಲೋಹ್ ಗಾಂವ್ ನಲ್ಲಿ ಕ್ಯಾಂಪಸ್ ಗಳನ್ನು ಹೊಂದಿರುವ ಕನ್ನಡ ಸಂಘದ ಕಾವೇರಿ ಸಮೂಹ ಶಿಕ್ಷಣ ಸಂಸ್ಥೆಗಳು ಪುಣೆಯ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲೊಂದಾಗಿ ಗುರುತಿಸಿಕೊಂಡಿರುವುದು ಸಂಘದ ಹೆಗ್ಗಳಿಕೆಯಾಗಿದೆ. ಸಾಹಿತ್ಯ ಕ್ಷೇತ್ರಕ್ಕೂ ಬಹಳಷ್ಟು ಕೊಡುಗೆ ನೀಡುತ್ತಿರುವ ಪುಣೆ ಕನ್ನಡ ಸಂಘವು…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕ ಇದರ ಪದಾಧಿಕಾರಿಗಳ ಸಭೆಯು ಅಧ್ಯಕ್ಷರಾದ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ ಇವರ ಅಧ್ಯಕ್ಷತೆಯಲ್ಲಿ ಬಿ.ಸಿ ರೋಡಿನ ಹೋಟೆಲ್ ರಂಗೋಲಿಯಲ್ಲಿ ಜರಗಿತು. ಮುಂದಿನ ಅವಧಿಗೆ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ, ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಪರಾರಿಗುತ್ತು, ಪ್ರಧಾನ ಕಾರ್ಯದರ್ಶಿಯಾಗಿ ಬಿ ದೇವದಾಸ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಸಭೆಯಲ್ಲಿ ಜಗನ್ನಾಥ ಚೌಟ ಬದಿಗುಡ್ಡೆ, ಸದಾನಂದ ಶೆಟ್ಟಿ ರಂಗೋಲಿ, ಸಂಕಪ್ಪ ಶೆಟ್ಟಿ ಸಂಚಯಗಿರಿ, ಸೇಸಪ್ಪ ಮಾಸ್ಟರ್, ಸಂಜೀವ ಶೆಟ್ಟಿ ಬೋಳಂತೂರು, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಪ್ರಕಾಶ್ ಜಕ್ರಿಬೆಟ್ಟು, ದೇವದಾಸ್ ಶೆಟ್ಟಿ, ಮೋಹನ್ ದಾಸ್ ಕೊಟ್ಟಾರಿ, ಶಂಕರ ಶೆಟ್ಟಿ ಪರಾರಿಗುತ್ತು, ದಿವಾಕರ ಶೆಟ್ಟಿ ಪರಾರಿಗುತ್ತು, ಸತೀಶ್ ಶೆಟ್ಟಿ ಮೊಡಂಕಾಪು ಉಪಸ್ಥಿತರಿದ್ದರು.

Read More

ವಿದ್ಯಾಗಿರಿ: ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ, ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವರ್ಷದ ಮೂರನೇ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಶಿಬಿರದ ಉದ್ಘಾಟನಾ ಕ್ರಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ, ಕಳೆದ ಬಾರಿ ವಿವಿಧ ಸಮುದಾಯಗಳ ಸಹಯೋಗದಲ್ಲಿ 9 ಉಚಿತ ನೇತ್ರ ತಪಾಸಣಾ ಶಿಬಿರಗಳನ್ನು ನಡೆಸಲಾಗಿತ್ತು. ಇದರಲ್ಲಿ 1478 ಜನರು ಪಾಲ್ಗೊಂಡು, 784 ಜನರಿಗೆ ಉಚಿತ ಕನ್ನಡಕ ಹಾಗೂ 109 ಜನರಿಗೆ ಶಸ್ತ್ರ ಚಿಕಿತ್ಸೆಯನ್ನು ಕೈಗೊಳ್ಳಲಾಗಿದೆ ಎಂದರು. ಜೂನ್ 16ಕ್ಕೆ ಮುಂದಿನ ಹಂತದ ಉಚಿತ ನೇತ್ರ ತಪಾಸಣಾ ಶಿಬಿರವು ನಡೆಯಲಿದೆ ಎಂದು ತಿಳಿಸಿದರು. ಈ ಬಾರಿಯ ಒಟ್ಟು ಮೂರು ಹಂತದ ಶಿಬಿರಗಳಲ್ಲಿ 348 ಮಂದಿ ಭಾಗಿಯಾಗಿ 178 ಜನರು ಉಚಿತ ಕನ್ನಡಕ ಪಡೆಯಲು ಹಾಗೂ 39 ಜನರು ಶಸ್ತç ಚಿಕಿತ್ಸೆಯನ್ನು ಪಡೆಯಲು ಹೆಸರು ನೋಂದಾಯಿಸಿಕೊ0ಡರು.ಕಾರ್ಯಕ್ರಮದಲ್ಲಿ…

Read More

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 618 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ 8ನೇ ಸ್ಥಾನ ಪಡೆದ ಯರುಕೋಣೆ ಸಂತೋಷ್ ಶೆಟ್ಟಿ ಮತ್ತು ಜನ್ನಾಲು ಚಂದ್ರಾವತಿ ಶೆಟ್ಟಿ ದಂಪತಿಗಳ ಪುತ್ರ ಚಿತ್ತೂರು ಪ್ರೌಢಶಾಲೆಯ ವಿದ್ಯಾರ್ಥಿ ರವಿತೇಜ ಶೆಟ್ಟಿ ಇವರನ್ನು ಬೈಂದೂರು ಬಂಟರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬೈಂದೂರು ಬಂಟರ ಸಂಘದ ಅಧ್ಯಕ್ಷ ಸಾಲ್ಗದ್ದೆ ಶಶಿಧರ್ ಶೆಟ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಯ ಮನೆಗೆ ತೆರಳಿದ ತಂಡದಲ್ಲಿ ಸಂಘದ ಕಾರ್ಯಕಾರಿ ಸದಸ್ಯ ಕೊಲ್ಲೂರು ದೇಗುಲದ ಮಾಜಿ ಧರ್ಮದರ್ಶಿ ವಂಡವಳ್ಳಿ ಜಯರಾಮ ಶೆಟ್ಟಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕುದ್ರುಕೋಡು ಜಗದೀಶ ಶೆಟ್ಟಿ ನಗದು ಪುರಸ್ಕಾರ ವಿತರಿಸಿದರು. ಸಂಘದ ಉಪಾಧ್ಯಕ್ಷ ಕರುಣಾಕರ್ ಶೆಟ್ಟಿ ನೆಲ್ಯಾಡಿ, ಸಾಂಸ್ಕೃತಿಕ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ, ಜನ್ನಾಲು ಶೇಷು ಶೆಟ್ಟಿ ಹಾಗೂ ಸಾಧಕ ವಿದ್ಯಾರ್ಥಿ ರವಿತೇಜ ಶೆಟ್ಟಿ ಕುಟುಂಬಸ್ಥರು ಉಪಸ್ಥಿತರಿದ್ದರು.

Read More

ಎಚ್ ಪಿಆರ್ ಫಿಲ್ಮ್ಸ್ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ “ಲೈಫ್ ಈಸ್ ಜಿಂಗಾಲಾಲ” ತುಳು ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಲಯನ್ ಹರಿಪ್ರಸಾದ್ ರೈ ನಿರ್ಮಾಣದಲ್ಲಿ, ತ್ರಿಶೂಲ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಜಿಂಗಾಲಾಲ ಸಿನಿಮಾಕ್ಕೆ ಕರಾವಳಿ ಭಾಗದಲ್ಲಿ ಚಿತ್ರೀಕರಣಗೊಂಡಿದೆ. ಹರಿಪ್ರಸಾದ್ ರೈ ಮತ್ತು ತ್ರಿಶೂಲ್ ಶೆಟ್ಟಿ ಈ ಹಿಂದೆ ಪುಳಿಮುಂಚಿ ಎನ್ನುವ ಹಾಸ್ಯ ಸಿನಿಮಾವನ್ನು ನಿರ್ಮಿಸಿದ್ದರು. ಇದೀಗ ಇದೇ ಜೋಡಿ ಮತ್ತೊಂದು ಹೊಸ ಬಗೆಯ ಸಿನಿಮಾವನ್ನು ತುಳು ಸಿನಿಮಾರಂಗಕ್ಕೆ ನೀಡಲು ಸಿದ್ದತೆ ನಡೆಸಿದ್ದಾರೆ.‌ ಮಳೆಯ ಕಾರಣದಿಂದ ಜಿಂಗಾಲಾಲ ಸಿನಿಮಾಕ್ಕೆ ಮೊದಲ ಹಂತದ ಚಿತ್ರೀಕರಣ ನೀಡಿ ಬ್ರೇಕ್ ನೀಡಲಾಗಿದೆ. ಸಿನಿಮಾಕ್ಕೆ ಕ್ಯಾಮಾರ ಮಯೂರ್ ಆರ್ ಶೆಟ್ಟಿ, ಸಂಗೀತ ಕಿಶೋರ್ ಕುಮಾರ್ ಶೆಟ್ಟಿ, ಸಂಕಲನ ಗಣೇಶ್ ನೀರ್ಚಾಲ್, ಸಂಭಾಷಣೆ ಡಿಬಿಸಿ ಶೇಖರ್, ಗೀತಾ ಸಾಹಿತ್ಯ ಮಯೂರ್ ಆರ್ ಶೆಟ್ಟಿ, ಕೀರ್ತನ್ ಭಂಡಾರಿ, ಕಲಾ ನಿರ್ದೇಶನ ಹರೀಶ್ ನಾಯ್ಕ್ ಬಜಪೆ, ಸ್ಥಿರ ಚಿತ್ರಣ ಕರುಣಾಕರ ಮಂಜೇಶ್ವರ, ಮ್ಯಾನೇಜರ್ ಪ್ರಜ್ವಲ್ ಶೆಟ್ಟಿ, ವಿಶ್ವನಾಥ, ಪಿಆರ್ ಒ ಬಾಳ…

Read More

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ 28 ನೇ ಹಿರಿಯಡ್ಕ ಶಾಖೆಯನ್ನು ಜೂನ್ 09 ರಂದು ಎಸ್.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ ಎನ್ ರಾಜೇಂದ್ರ ಕುಮಾರ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗಣ್ಯರಾದ ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯಕುಮಾರ್ ಸೊರಕೆ, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ ಜೈರಾಜ್ ಬಿ ರೈ, ಲಾವಣ್ಯ ಕೆ ಆರ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಪೆರ್ಡೂರು ಬಂಟರ ಸಂಘದ ಅಧ್ಯಕ್ಷ ಶಾಂತರಾಮ್ ಸೂಡ, ರವೀಂದ್ರ ಪೂಜಾರಿ, ಕೆ ರಾಜಾರಾಮ್ ಹೆಗ್ಡೆ, ರವೀಂದ್ರನಾಥ ಜಿ ಹೆಗ್ಡೆ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

Read More

ವಿದ್ಯಾವಂತ ಯುವಕರಿಗೆ ಅವರು ಪಡೆದ ಶಿಕ್ಷಣಕ್ಕೆ ಅನುಸಾರ ಅವರ ಕುಶಲತೆ ಜಾಣ್ಮೆಗಳನ್ನು ಪರೀಕ್ಷೆಗೆ ಒಳಪಡಿಸಿ ಯೋಗ್ಯ ಮಾರ್ಗದರ್ಶನ ತರಬೇತಿ ನೀಡಿ, ಅವಶ್ಯಕತೆ ಇರುವ ಕಂಪನಿಗಳಿಗೆ ಸಂದರ್ಶನಕ್ಕೆ ಕಳುಹಿಸಿ ಆಯ್ಕೆ ಪ್ರಕ್ರಿಯೆ ನಡೆಸಿ ನೇಮಕಾತಿಗಳಿಗೆ ಸಹಕರಿಸುವ ವಿಶೇಷ ವ್ಯಕ್ತಿತ್ವ ಶ್ರೀ ಲಕ್ಷ್ಮೀ ನಾರಾಯಣ ಶೆಟ್ಟಿ ಅವರು ಈ ಕ್ಷೇತ್ರದಲ್ಲಿ ದೀರ್ಘ ಕಾಲದ ಅನುಭವ ಹೊಂದಿದ ಶೆಟ್ಟರು ಒಂದರ್ಥದಲ್ಲಿ ನಿರುದ್ಯೋಗ ವಿದ್ಯಾವಂತರಿಗೆ ಅವರು ಯೋಗ್ಯತೆಗನುಸಾರ ಉದ್ಯೋಗ ದೊರೆಯುವಂತೆ ಸಹಕರಿಸಿ ಮಹಾದುಪಕಾರ ಮಾಡುತ್ತಾರೆ. ಹಣಕಾಸು ಕ್ಷೇತ್ರ, ವಿಮೆ ಆಡಿಟಿಂಗ್ ಬುಕ್ ಕೀಪಿಂಗ್ ಹೀಗೆ ಒಂದು ಉತ್ತಮ ಗುಣಮಟ್ಟದ ಕಾರ್ಯ ನಿರ್ವಹಣೆ ಕುರಿತ ಜ್ಞಾನ ಹೊಂದಿದ ಶೆಟ್ಟರು ಸಮರ್ಥ ಹಾಗೂ ಉದ್ಯೋಗಾಕಾಂಕ್ಷಿಗಳ ನಿರೀಕ್ಷೆಯಲ್ಲಿದ್ದು ಅಭ್ಯರ್ಥಿಗಳ ಅರ್ಜಿ ಕರೆದು ಉದ್ಯೋಗಾವಕಾಶ ಒದಗಿಸಿ ಕೊಡುವ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ. ಅವರಿಗೆ ಪೂರ್ವಭಾವಿ ತರಬೇತಿಯನ್ನೂ ನೀಡಲಾಗುತ್ತದೆ. ಸೇಲ್ಸ್ ಟ್ರೇಡಿಂಗ್ ಫೈನಾನ್ಸ್ ಕಂಪನಿಗಳ ಸಲಹೆಗಾರರಾಗಿ ಕಾರ್ಯ ನಿರ್ವಹಿಸುವ ಇವರು ಅನೇಕ ವಿಷಯಗಳ ಡಿಪ್ಲೋಮಾ ಜೊತೆಗೆ ಮುಂಬಯಿ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು. ಒಬ್ಬ ಹವ್ಯಾಸಿ ಮಾಧ್ಯಮ…

Read More

ಮೇ 10 ರಂದು ಶಾಲಿನಿ ಶೆಟ್ಟಿ ಸಚ್ಚೇರಿಗುತ್ತು ಇವರ ನಿಸ್ವಾರ್ಥ ಸಮಾಜ ಸೇವೆಯನ್ನು ಮೆಚ್ಚಿ ದಿನೇಶ್ ಜಯ ಶೆಟ್ಟಿ ಬೆಳ್ಳೂರು ಇವರು ಅಧ್ಯಕ್ಷರಾಗಿರುವ ನಾಯರ್ ಕೋಡಿ ಫ್ರೆಂಡ್ಸ್ ಸರ್ಕಲ್ (ರಿ) ಕೋಟೆ ಸೂರಿಂಜೆ ಇದರ ಅದ್ದೂರಿಯ ರಜತ ಮಹೋತ್ಸವ ಸಮಾರಂಭದಲ್ಲಿ ಹಲವಾರು ಬಿರುದುಗಳ ಮುಕುಟಕ್ಕೆ ನವಿಲ ಗರಿ ಎಂಬಂತೆ ವೇದಿಯಲ್ಲಿ ಆಸೀನರಾಗಿದ್ದ ಅತಿಥಿ ಗಣ್ಯರ ಸಮ್ಮುಖದಲ್ಲಿ “ತೌಳವ ಸಿರಿ” ಎಂಬ ಬಿರುದನ್ನು ನೀಡಿ ಗೌರವಿಸಿವೆ. ಶಾಲಿನಿ ಸತೀಶ್ ಶೆಟ್ಟಿಯವರು ಬಹುಮುಖ ಪ್ರತಿಭಾ ಶಾಲಿನಿ. ಸದಾ ಸಮಾಜ ಸೇವೆಯ ತುಡಿತದಲ್ಲಿದ್ದು ಮುಂಬಯಿಯಲ್ಲಿ ಮುಖ್ಯವಾಗಿ ಮೀರಾ ಭಾಯಂಧರ್ ಪರಿಸರದ ಹಲವಾರು ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಇಲ್ಲವೇ ಸದಸ್ಯೆಯಾಗಿ ಹಾಗೂ ಪ್ರಾದೇಶಿಕ ಬಂಟರ ಸಂಘ ಮೀರಾ ಭಾಯಂಧರ್ ಇದರ ಮಾಜಿ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿಯೂ ಸಮಾಜ ಸೇವೆಯಲ್ಲಿ ನಿರತರಾಗಿರುವುದು ಹೆಚ್ಚಿನವರು ಬಲ್ಲ ವಿಷಯ. ಸಮಾಜ ಸೇವೆಗಾಗಿಯೇ ಸಂಸ್ಥೆಯೊಂದು ಬೇಕೆಂಬ ಆಶಯ ಹೊಂದಿದ್ದ ಇವರು ಸಮಾನ ಮನಸ್ಕ ಮಹಿಳೆಯರನ್ನು ಒಗ್ಗೂಡಿಸಿ ಶ್ರೀ ಶಕ್ತಿ ಫೌಂಡೇಷನ್ ಮುಂಬೈ ಮಹಾರಾಷ್ಟ್ರ…

Read More