Author: admin
ಸಮಾಜ ಸೇವೆ ಮಾಡಲು ಬದುಕಿನಲ್ಲಿ ಸಿಕ್ಕಿದ ಯೋಗ ಎಂದು ಭಾವಿಸಿದ್ದೇನೆ. ಬಡವರಿಗೆ ಮಾಡುವ ದಾನದಿಂದ ತೃಪ್ತನಾಗಿದ್ದೇನೆ. ನನ್ನ ಸಾಧನೆಗೆ ಸಮಾಜದ ಸರ್ವರ ಸಹಕಾರ ಇದೆ ಎಂದು ಉದ್ಯಮಿ, ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಕನ್ಯಾನ ಸದಾಶಿವ ಕೆ. ಶೆಟ್ಟಿ ಹೇಳಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಸಮಾಜದಲ್ಲಿ ನೊಂದ ಬಹಳಷ್ಟು ಮಂದಿ ಸಹಾಯ ಕೇಳಿಕೊಂಡು ಬರುತ್ತಾರೆ. ಅನೇಕ ಸಂಘ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳಿಗೆ ನನ್ನಿಂದಾದ ಸಹಾಯ ಮಾಡುತ್ತಿದ್ದೇನೆ. ಆರ್ಥಿಕವಾಗಿ ಕೆಳಸ್ತರದ ಕುಟುಂಬದಿಂದ ಬಂದು ಶಿಕ್ಷಣದ ಮೂಲಕ ಹಂತ ಹಂತವಾಗಿ ಉದ್ಯಮ ಕ್ಷೇತ್ರದಲ್ಲಿ ಬೆಳೆದು ನಿಂತಿದ್ದೇನೆ. ಹಲವಾರು ಮಂದಿ ಸಹಾಯ ಮಾಡಿದ್ದಾರೆ. ಬಂದ ಹಾದಿಯನ್ನು ಮರೆಯುವುದಿಲ್ಲ. ಪಟ್ಲ ಫೌಂಡೇಶನ್ ಟ್ರಸ್ಟ್ ಹೊಸ ಪರಿಕಲ್ಪನೆಯೊಂದಿಗೆ ಅಧ್ಬುತವಾಗಿ ಸನ್ಮಾನ ಮಾಡಿದ್ದಾರೆ. ಇದರಿಂದ ಪರಮಾನಂದವಾಗಿದೆ. ಜೀವನ ಪಾವನವಾಯಿತು ಎಂದವರು ಸಂತಸ ವ್ಯಕ್ತಪಡಿಸಿದರು. ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅತಿಥಿಯಾಗಿ ಮಾತನಾಡಿ, ಕನ್ಯಾನ ಸದಾಶಿವ…
ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಉಚಿತ ಎನ್.ಎಂ.ಎಂ.ಎಸ್ ತರಬೇತಿ ಕಾರ್ಯಾಗಾರ ವಿದ್ಯಾರಣ್ಯ ಶಾಲೆಯಲ್ಲಿ ನಡೆಯಿತು. ಈ ಕಾರ್ಯಾಗಾರವು ವಿದ್ಯಾರಣ್ಯ ಶಾಲೆಯ ಸಹಕಾರದೊಂದಿಗೆ ಆರು ವಾರಗಳು ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ತರಬೇತಿ ನೀಡಲಿದ್ದಾರೆ. ಕಾರ್ಯಕ್ರಮ ಉದ್ಘಾಟಿಸಿದ ಎನ್.ಎಂ.ಎಂ.ಎಸ್ ಜಿಲ್ಲಾ ನೋಡೆಲ್ ಆಗಿರುವ ಚಂದ್ರ ನಾಯ್ಕ್ ಮಾತನಾಡುತ್ತಾ “ಮಕ್ಕಳು ಈ ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡು ಹೆಚ್ಚು ಮಕ್ಕಳು ಆಯ್ಕೆಯಾಗಿ ತಾಲೂಕಿಗೆ ಕೀರ್ತಿ ತರಬೇಕು. ಪ್ರಸ್ತುತ ವರ್ಷ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಬಡತನವನ್ನು ಹೊಂದಿರುವ ಪ್ರತಿಭಾನ್ವಿತ ಮಕ್ಕಳು ಬಡತನದ ಕಾರಣವಾಗಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸದೆ ಮುಂದುವರಿಸಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈ ಎನ್.ಎಂ.ಎಂ.ಎಸ್ ಯೋಜನೆಯನ್ನು ಜಾರಿಗೆ ತಂದಿದ್ದು, ಇಂದು ಈ ಯೋಜನೆಯಿಂದ ಹಲವಾರು ಪ್ರತಿಭಾನ್ವಿತ ಮಕ್ಕಳು ಶಿಕ್ಷಣವನ್ನು ಮುಂದುವರಿಸಲು…
ವಿದ್ಯಾಗಿರಿ: ದೌರ್ಜನ್ಯ ಕುರಿತು ಕೇವಲ ನೊಂದ ಮಹಿಳೆ ಮಾತ್ರವಲ್ಲ, ಅವರ ಪರವಾಗಿ ಯಾರು ಬೇಕಾದರೂ ದೂರು ನೀಡಬಹುದು. ಮಹಿಳೆ ಮೇಲೆ ಮಹಿಳೆಯೇ ದೌರ್ಜನ್ಯ ಎಸಗಿದರೂ ಅಪರಾಧ ಎಂದು ಹೊಳ್ಳ ಆ್ಯಂಡ್ ಹೊಳ್ಳ ಅಸೋಸಿಯೇಟ್ಸ್ನ ಮೇಘನಾ ಆರ್. ಬಲ್ಲಾಳ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜು ಆಂತರಿಕ ಗುಣಮಟ್ಟ ಮೌಲ್ಯಮಾಪನ ಘಟಕ (ಐಕ್ಯೂಎಸಿ), ಲೈಂಗಿಕ ದೌರ್ಜನ್ಯ ತಡೆ ಘಟಕ, ಸಮಾಜಕಾರ್ಯ ವಿಭಾಗವು ಬೋಧನಾಂಗ ಅಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ‘ ಸಂಸ್ಥೆಯ ಆವರಣದಲ್ಲಿ ಜವಾಬ್ದಾರಿಯುತ ಸಂಸ್ಕೃತಿಯ ನಿರ್ಮಾಣ’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮೂಡುಬಿದಿರೆ ಮನೆತನದ ಅಬ್ಬಕ್ಕ ನಮ್ಮ ಹೆಮ್ಮೆ. ಆಕೆಯ ಸಾಧನೆ ಎಲ್ಲರಿಗೂ ಮಾದರಿಯಾಗಬೇಕು ಎಂದರು. ದೇಶದಲ್ಲಿ 1990 ಬಳಿಕ ಮಹಿಳೆಯರು ಕೆಲಸಕ್ಕೆ ಬರುವ ಸಂಖ್ಯೆ ಹೆಚ್ಚಾಯಿತು. ರಾಜಸ್ಥಾನದ ಭವಾರಿ ದೇವಿ ಅತ್ಯಾಚಾರಕ್ಕೆ ಒಳಗಾದ ಸಂದರ್ಭದಲ್ಲಿ ವಿಶಾಖ ಸಂಸ್ಥೆಯ ಹೋರಾಟದ ಫಲವಾಗಿ ಕಾಯಿದೆ ರೂಪಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತು. ಹೀಗಾಗಿ ‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (ತಡೆ, ಮುಂಜಾಗ್ರತೆ…
ರಾಜ್ಯ ಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ ಆಳ್ವಾಸ್ ಶಾಲೆಗೆ 11 ಪದಕದೊಂದಿಗೆ ತಂಡ ಪ್ರಶಸ್ತಿ
ಮೂಡುಬಿದಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 03 ಚಿನ್ನ, 06 ಬೆಳ್ಳಿ ಮತ್ತು 02 ಕಂಚಿನ ಪದಕಗಳೊಂದಿಗೆ 11 ಪದಕದೊಂದಿಗೆ 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಫಲಿತಾಂಶ: ಪ್ರೌಢ ಶಾಲಾ 14 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಫಲಿತಾಂಶ : ಅಮೂಲ್ಯ – 80ಮೀ ಹರ್ಡಲ್ಸ್ (ಪ್ರಥಮ), 4*100ಮೀ ರಿಲೇ (ದ್ವಿತೀಯ), ಪ್ರೇಕ್ಷಾ ಎಲ್ ಗೌಡ – ಎತ್ತರ ಜಿಗಿತ (ದ್ವಿತೀಯ), ಅನುಶ್ರೀ – 600ಮೀ (ದ್ವಿತೀಯ), ಕೌಶಿಕ್ – 80ಮೀ ಹರ್ಡಲ್ಸ್ (ಪ್ರಥಮ), ಉದ್ದ ಜಿಗಿತ (ತೃತೀಯ), ಲೋಹಿತ್ ಗೌಡ – ಗುಂಡು…
ಸಮಾಜದ ಋಣ ತೀರಿಸುವ ಕಾರ್ಯವನ್ನು ಪ್ರತಿಯೊಬ್ಬರೂ ಮಾಡಬೇಕು. ಅದು ಶಿಕ್ಷಣ, ಸಮಾಜ ಸೇವೆ, ಸಾಂಸ್ಕೃತಿಕ ರಂಗವೇ ಇರಬಹುದು. ಆದರೆ ಯಕ್ಷಗಾನ, ಜಾನಪದ ಕಲೆಗಳಿಗೆ ಪ್ರೋತ್ಸಾಹ ನೀಡಿ, ಸಾಧಕರನ್ನು ಗುರುತಿಸಿ ಅಭಿನಂದಿಸುವುದರಲ್ಲಿ ಸಿಗುವ ಆತ್ಮ ತೃಪ್ತಿ ಇನ್ನಾವುದೇ ಸೇವೆಯಿಂದ ಸಿಗುವುದು ದುರ್ಲಭ. ಹೀಗಾಗಿ ಕಲಾ ಸೇವೆಯಲ್ಲಿಯೇ ಬದುಕಿನ ಸಾರ್ಥಕ್ಯವನ್ನು ಕಂಡುಕೊಂಡಿದ್ದೇನೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಯಕ್ಷಲೋಕ ಹೆಬ್ಬೇರಿ ಸಂಸ್ಥೆಯ ೫ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು. ನಾವು ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು. ಅದೇ ಉದ್ದೇಶದಿಂದ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಯಕ್ಷಗಾನ ಆಸಕ್ತಿ ನನಗೆ ವರವಾಗಿ ಪರಿಣಮಿಸಿದೆ. ೬೦ರ ವರ್ಷದಲ್ಲಿ ಯಕ್ಷಗಾನವನ್ನು ಗುರು ಸಂಜೀವ ಸುವರ್ಣರ ಬಳಿ ಕಲಿತು ೪೦೦ಕ್ಕೂ ಅಧಿಕ ಪ್ರದರ್ಶನ ಮಾಡಿದ್ದೇನೆ. ಯಕ್ಷಲೋಕದ ಗುರು ಸುಬ್ರಹ್ಮಣ್ಯ ಪ್ರಸಾದ್ ಅವರೊಡನೆಯೂ ಪಾತ್ರವನ್ನು ಮಾಡಿದ ಸಂತೃಪ್ತಿಯಿದೆ. ಈ…
ಬಾಗಲಕೋಟೆಯಲ್ಲಿ ನವೆಂಬರ್ 17 ರಂದು ನಡೆಯಲಿರುವ 71ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರಂಭದಲ್ಲಿ ದ.ಕ ಹಾಲು ಒಕ್ಕೂಟ ನಿಯಮಿತ ಮಂಗಳೂರು ಇದರ ನಿರ್ದೇಶಕರು ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ ಉಪ್ಪುಂದ ಇದರ ಅಧ್ಯಕ್ಷರಾದ ಎಸ್ ಪ್ರಕಾಶ್ಚಂದ್ರ ಶೆಟ್ಟಿಯವರು ರಾಜ್ಯ ಮಟ್ಟದ ಸಹಕಾರಿ ರತ್ನ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದಿಂದ ಸ್ವೀಕರಿಸಲಿದ್ದಾರೆ.
ಬೆಂಗಳೂರಿನಲ್ಲಿ ನೆಲೆಸಿರುವ ಮಂಗಳೂರಿನ ದೇಹದಾರ್ಢ್ಯ ಪಟು ಶೋಧನ್ ರೈ ಅವರು ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ನಡೆದ ವಿಶ್ವಕಪ್ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಸಮಗ್ರ ವಿಜೇತರ (ಅಥ್ಲೆಟಿಕ್ಸ್) ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ ಪ್ರತಿಷ್ಠಿತ ಚಾಂಪಿಯನ್ಷಿಪ್ನಲ್ಲಿ ಶೋಧನ್ ರೈ ಹಾಗೂ ಶೆಲ್ಲಿ ಅರೋರ ಭಾರತವನ್ನು ಪ್ರತಿನಿಧಿಸಿದ್ದರು. ಶೋಧನ್ ದೇಹದಾರ್ಡ್ಯ (ಅಥ್ಲೆಟಿಕ್ಸ್) ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಆಗಿ ಚಿನ್ನ ಗೆದ್ದಿರುವುದು ಮಾತ್ರವಲ್ಲದೇ 35+ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ದೇಹದಾರ್ಢ್ಯ 40+ ವಿಭಾಗದಲ್ಲೂ ಬೆಳ್ಳಿಯ ಸಾಧನೆ ಮಾಡಿದ್ದಾರೆ. ಈ ಚಾಂಪಿಯನ್ಷಿಪ್ನಲ್ಲಿ 20 ರಾಷ್ಟ್ರಗಳಿಂದ ಸುಮಾರು 300ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಂಡಿದ್ದರು. ಅಮೆರಿಕದ ಲಾಸ್ ವೇಗಾಸ್ನಲ್ಲಿ ನಡೆದ ನ್ಯಾಚುರಲ್ ಒಲಿಂಪಿಯಾದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶೋಧನ್ ರೈ ಒಂದು ವಿಭಾಗದಲ್ಲಿ ಕಂಚಿನ ಪದಕ ಗೆದ್ದರೆ ಇನ್ನೊಂದು ವಿಭಾಗದಲ್ಲಿ ನಾಲ್ಕನೇ ಸ್ಥಾನ ಗಳಿಸಿರುತ್ತಾರೆ. ಈ ಚಾಂಪಿಯನ್ಷಿಪ್ನಲ್ಲಿ 38 ರಾಷ್ಟ್ರಗಳಿಂದ 500ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಂಡಿದ್ದರು. ಈ ಎರಡೂ ಚಾಂಪಿಯನ್ಷಿಪ್ಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಶೋಧನ್ ರೈ ವಿವಿಧ ವಯೋಮಿತಿಗಳಲ್ಲಿ ಸ್ಪರ್ಧಿಸಿದ್ದಾರೆ.…
‘ಕೊಳ್ನಾಡು ಗ್ರಾಮದ ಕುಳಾಲು ಕುಟುಂಬದಲ್ಲಿ ಜನಿಸಿದ ವಿದ್ವಾನ್ ಕಾಂತ ರೈ ಮೂಡಬಿದಿರೆಯಲ್ಲಿ ವೃತ್ತಿ ಜೀವನವನ್ನು ನಡೆಸುತ್ತಾ ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯ. ಹಳೆಯ ತಲೆಮಾರಿನ ಅರ್ಥಧಾರಿಯಾಗಿ, ಬಹುಶ್ರುತ ವಿದ್ವಾಂಸರಾಗಿ ಯಕ್ಷಗಾನ ರಂಗದಲ್ಲಿ ಮೆರೆದ ಅವರು ಪ್ರಗತಿಪರ ಕೃಷಿಕರಾಗಿ, ಕುಟುಂಬದ ಯಜಮಾನರಾಗಿ ಹುಟ್ಟಿದ ಮನೆಗೆ ಕೀರ್ತಿ ತಂದ ಮೇರು ವ್ಯಕ್ತಿ’ ಎಂದು ಯಕ್ಷಗಾನ ಹವ್ಯಾಸಿ ಕಲಾವಿದ ಹಾಗೂ ಆರೋಗ್ಯ ಇಲಾಖೆಯ ನಿವೃತ್ತ ಅಧಿಕಾರಿ ಕೆ. ಜಯರಾಮ ಸಾಂತ ಹೇಳಿದರು. ‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ನಡೆಯುತ್ತಿರುವ 12ನೇ ವರ್ಷದ ಕನ್ನಡ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2024’ ಅಂಗವಾಗಿ ನ.13 ರಂದು ಜರಗಿದ ವಿದ್ವಾನ್ ಕೆ.ಕಾಂತ ರೈ ಮೂಡಬಿದಿರೆ ಅವರ ಸಂಸ್ಮರಣಾ ಸಮಾರಂಭದಲ್ಲಿ ದೀಪ ಪ್ರಜ್ವಲನೆ ಮಾಡಿ ಅವರು ಮಾತನಾಡಿದರು. ಹರೇಕಳ ವಿದ್ಯಾ…
ವಿದ್ಯಾಗಿರಿ (ಮೂಡಬಿದಿರೆ): ಪ್ರಪಂಚದ ಎಲ್ಲೆಡೆ ಬಳಸಲಾಗುವ ಪ್ಲಾಸ್ಟಿಕ್ ಕೊನೆಗೆ ಸಾಗರವನ್ನು ಸೇರುತ್ತಿದೆ. ಭವಿಷ್ಯದಲ್ಲಿ ಅತ್ಯಂತ ಕಠಿಣ ದಿನಗಳನ್ನು ಎದುರಿಸುವ ಸಾಧ್ಯತೆ ಇದೆ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿನ ಮುಂದುವರಿದ ಅಧ್ಯಯನಗಳ ರಾಷ್ಟ್ರೀಯ ಸಂಸ್ಥೆ (ಎನ್ಐಎಎಸ್)ಯ ಇಸ್ರೋ ಮುಖ್ಯ ಪ್ರಾಧ್ಯಾಪಕ ಡಾ. ಪಿ. ಜಿ. ದಿವಾಕರ್ ಅಭಿಪ್ರಾಯಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಎನ್ಐಎಎಸ್ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡ ವಿದ್ಯಾರ್ಥಿ- ವಿಜ್ಞಾನಿ ಕಾರ್ಯಕ್ರಮದಲ್ಲಿ ಶುಕ್ರವಾರ ಅವರು ಮಾತನಾಡಿದರು. ಹವಾಮಾನ ಬದಲಾವಣೆಯು ಇತ್ತೀಚಿನ ದಿನಗಳಲ್ಲಿ ತೀವ್ರ ಸಮಸ್ಯೆಯಾಗಿದ್ದು, ವಾತಾವರಣದಲ್ಲಿ ಇಂಗಾಲದ ಡೈ ಆಕ್ಸೈಡ್ ಹೆಚ್ಚಳವೇ ಇದಕ್ಕೆ ಪ್ರಮುಖ ಕಾರಣ ಎಂದರು. ವಿದ್ಯಾರ್ಥಿಗಳನ್ನು ವಿಜ್ಞಾನಿಗಳನ್ನಾಗಿ ಮಾಡಲು ಎನ್ಐಎಎಸ್ ಆಯೋಜಿಸಿರುವ ‘ಕರಾವಳಿ ಭಾಗದ ಹವಾಮಾನ ಬದಲಾವಣೆ’ಯ ಅಧ್ಯಯನ ಯೋಜನೆಯು ಸಹಕರಿಯಾಗಲಿದೆ ಎಂದು ಹೇಳಿದರು. ಶಿಕ್ಷಣದ ಮೂಲಕ ಯುವಜನಾಂಗದಲ್ಲಿ ವಿಜ್ಞಾನ ಮತ್ತು ಅನ್ವೇಷಣೆಯತ್ತ ಒಲವು ಮೂಡಿಸಬೇಕು ಎಂದರು. ಇಸ್ರೋ ಜಿಯೋ ಎಐಯನ್ನು ಬಿಡುಗಡೆಗೊಳಿಸಳಿದ್ದು ಇದರಲ್ಲಿ ಮುಂದಿನ 10 ವರ್ಷದದಲ್ಲಿ ವಿಶ್ವದ ವಾತಾವರಣ ಹೇಗಿರುತ್ತವೆ…
ಮೂಡುಬಿದಿರೆ: ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 14 ಚಿನ್ನ, 03 ಬೆಳ್ಳಿ ಹಾಗೂ 02 ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಫಲಿತಾಂಶ : ಪುರುಷರ ವಿಭಾಗದಲ್ಲಿ : ನಿಖಿಲ್ – 61 ಕೆಜಿ ವಿಭಾಗದಲ್ಲಿ (ದ್ವಿತೀಯ), ಗುಡ್ಡಪ್ಪ – 61 ಕೆಜಿ ವಿಭಾಗದಲಿ (ತೃತೀಯ), ರಾಕೇಶ್ – 65 ಕೆಜಿ ವಿಭಾಗದಲ್ಲಿ (ಪ್ರಥಮ), ಶಿವರಾಜು – 70 ಕೆಜಿ ವಿಭಾಗದಲ್ಲಿ (ಪ್ರಥಮ), ಸುರೇಂದ್ರ – 74 ಕೆಜಿ ವಿಭಾಗದಲ್ಲಿ (ದ್ವಿತೀಯ), ಚೇತನ್ – 79 ಕೆಜಿ ವಿಭಾಗದಲ್ಲಿ (ಪ್ರಥಮ), ಕೀರ್ತಿ – 86 ಕೆಜಿ ವಿಭಾಗದಲ್ಲಿ (ಪ್ರಥಮ), ಪ್ರಜ್ವಲ್ – 92 ಕೆಜಿ ವಿಭಾಗದಲ್ಲಿ (ಪ್ರಥಮ), ಕಾರ್ತಿಕ್ – 97 ಕೆಜಿ ವಿಭಾಗದಲ್ಲಿ (ಪ್ರಥಮ), ಬಸವರಾಜು – 97+ ಕೆಜಿ ವಿಭಾಗದಲ್ಲಿ (ಪ್ರಥಮ)…