Author: admin

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಮತ್ತು ವಾರ್ತಾಭಾರತಿ ಡಿಜಿಟಲ್ ಚಾನಲ್ ಇವರ ಸಹಯೋಗದೊಂದಿಗೆ ಗಣರಾಜ್ಯೋತ್ಸವದ ಪ್ರಯುಕ್ತ ನಡೆಸುವ ‘ನಮ್ಮ ಸಂವಿಧಾನ – ನಮ್ಮ ಹೆಮ್ಮೆ’ ವಿಶೇಷ ಸಂವಾದ ಕಾರ್ಯಕ್ರಮ ಮತ್ತು ಚಿತ್ರೀಕರಣ ದಿನಾಂಕ :20-01-2025 ಸೋಮವಾರದಂದು ಕ್ರಿಯೇಟಿವ್ ಚಿಂತಕರ ಚಾವಡಿ ಸಪ್ತಗಿರಿ ಕ್ಯಾಂಪಸ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂವಾದಕರಾಗಿ ನಿವೃತ್ತ ಪ್ರಾಧ್ಯಾಪಕರು ಹಾಗೂ ಖ್ಯಾತವಾಗ್ಮಿಗಳು ಶ್ರೀ ಸುರೇಂದ್ರ ಶೆಟ್ಟಿ ಕೊಕ್ಕರ್ಣೆ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು. ಸಂವಿಧಾನ ಎನ್ನುವುದು ಭಾರತ ದೇಶದ ಪ್ರತಿಯೊಬ್ಬ ನಾಗರಿಕನ ಧರ್ಮಗ್ರಂಥ. ಅದನ್ನು ಪ್ರತಿಯೊಬ್ಬರೂ ಓದಲೇಬೇಕು.ಸಂವಿಧಾನದಲ್ಲಿರುವ ಕಾಯ್ದೆ ಕಾನೂನುಗಳ ಬಗ್ಗೆ ತಿಳಿದುಕೊಂಡು ಅದರಂತೆ ನಡೆದುಕೊಳ್ಳುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಆದ್ಯ ಕರ್ತವ್ಯ. ಸಂವಿಧಾನ ರಚನೆಯಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರು ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಸಂವಿಧಾನವನ್ನು ನಮಗೆ ನೀಡಿರುವುದು ಪ್ರತಿಯೊಬ್ಬ ಭಾರತೀಯ ನಾಗರಿಕನು ನೆಮ್ಮದಿಯಿಂದ ಜೀವಿಸಲಿ ಎಂದು. ಸಂವಿಧಾನದಲ್ಲಿ ನೀಡಿರುವ ಹಕ್ಕುಗಳ ಬಗ್ಗೆ ಮಾತ್ರ ನಾವು ಮಾತನಾಡುತ್ತೇವೆ ಆದರೆ ಅದರಲ್ಲಿ ಅಡಕವಾಗಿರುವ ಪ್ರತಿಯೊಬ್ಬ ಭಾರತೀಯನ…

Read More

“ಮಕ್ಕಳೇ ಹೊಸ ಜಗತ್ತಿನ ನಿಜವಾದ ಸೃಷ್ಟಿಕರ್ತರು. ಮಕ್ಕಳು ವಿದ್ಯಾರ್ಥಿ ಜೀವನದಲ್ಲಿಯೇ ಉತ್ತಮ ಶಿಕ್ಷಣ ಮತ್ತು ಮೌಲ್ಯಯುತವಾದ ಮಾಹಿತಿ ಯನ್ನು ಪಡೆದರೆ ಉತ್ತಮ ವ್ಯಕ್ತಿತ್ವವನ್ನು ಹೊಂದಲು ಸಾಧ್ಯವಾಗುತ್ತದೆ. ಮಕ್ಕಳು ಮಾನಸಿಕ ಒತ್ತಡಗಳನ್ನು ನಿಭಾಯಿಸಲು ಕಾಲ ಕಾಲಕ್ಕೆ ಮಾರ್ಗದರ್ಶನ ಅಗತ್ಯ ನೀಡಬೇಕು. ಪೋಷಕರು ಪರೀಕ್ಷೆ ಸಮಯದಲ್ಲಿ ಸಾಧ್ಯವಾದಷ್ಟು ಮನೆಯಲ್ಲಿ ಉತ್ತಮ ವಾತಾವರಣ ಕಲ್ಪಿಸಬೇಕು ಮತ್ತು ಮಕ್ಕಳ ಮನಸ್ಸಿನ ಮೇಲೆ ಧನಾತ್ಮಕ ಒತ್ತಡ ಹಾಕಬೇಕು. ಮಕ್ಕಳು ಪರೀಕ್ಷೆ ಸಮೀಪಿಸಿದಂತೆ ಹೆಚ್ಚು ಒತ್ತಡಕ್ಕೆ ಒಳಗಾಗುತ್ತಾರೆ. ಮಕ್ಕಳು ಪರೀಕ್ಷಾ ತಯಾರಿಗೆ ಸಮಯ ಹೊಂದಾಣಿಕೆ ಮಾಡಿಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ. ಇದು ಉತ್ತಮ ಫಲಿತಾಂಶವನ್ನು ಪಡೆಯಲು ಸಹಕಾರಿಯಾಗುತ್ತದೆ” ಎಂದು ಖ್ಯಾತ ಮನೋವೈದ್ಯರು, ಸಂಪನ್ಮೂಲ ವ್ಯಕ್ತಿಯಾಗಿರುವ ಡಾ.ವಿರೂಪಾಕ್ಷ ದೇವರಮನೆ ಹೇಳಿದರು. ಅವರು ಯಡಾಡಿ- ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪೋಷಕ- ಶಿಕ್ಷಕ ಒರಿಯೆಂಟೇಶನ್ ಕಾರ್ಯಕ್ರಮದಲ್ಲಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಮಾತನಾಡುತ್ತಾ, “ಯಾವುದೇ ಒಂದು ಸಂಸ್ಥೆಯ ಪ್ರಗತಿಯಲ್ಲಿ…

Read More

ಮಂಗಳೂರು ಕೂಳೂರಿನಲ್ಲಿರುವ ಏನೆಪೋಯ ಶಿಕ್ಷಣ ಸಂಸ್ಥೆ ವೈಐಎಎಸ್ ಸಿಎಂ ಇದರ ಎನ್.ಎಸ್.ಎಸ್ 2, 9, 17 ಮತ್ತು 18ನೇ ಘಟಕಗಳು ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನವರಿ 12ರಂದು ದೇಶಾದ್ಯಂತ ಆಚರಿಸುವ ರಾಷ್ಟ್ರೀಯ ಯುವ ದಿನಾಚರಣೆ ಸಲುವಾಗಿ (ದಿನಾಂಕ 15 ರಂದು) ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿತ್ತು. ವಿಶ್ರಾಂತ ಪ್ರಾಧ್ಯಾಪಕ ಮತ್ತು ಲೇಖಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.’ನಮ್ಮ ದೇಶದಲ್ಲಿ ಜನಿಸಿದ ಅನೇಕ ಮಹಾತ್ಮರು ಸ್ವದೇಶದಲ್ಲಿ ಮಾತ್ರವಲ್ಲದೇ ವಿಶ್ವದಾದ್ಯಂತ ತಮ್ಮ ವರ್ಚಸ್ಸಿನ ಮೂಲಕ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿಪಾದಿಸಿ ಜಗತ್ಪ್ರಸಿದ್ಧರಾಗಿದ್ದಾರೆ. ಅಂತವರ ಬದುಕು ಇಂದಿನ ಪೀಳಿಗೆಗೆ ದಾರಿದೀಪವಾಗಿದೆ. ಸ್ವಾಮಿ ವಿವೇಕಾನಂದರು ತಮ್ಮ ಚಿಕಾಗೋ ಭಾಷಣದ ಮೂಲಕ ಪ್ರಾಚ್ಯದ ಮಹಾಪ್ರವಾದಿಯಾಗಿ ಹೊರಹೊಮ್ಮಿದ್ದಲ್ಲದೆ ‘ಏಳಿ ಎದ್ದೇಳಿ’ ಎಂಬ ಅಮೃತವಾಣಿಯ ಮೂಲಕ ಯುವಜನರಿಗೆ ಇಂದಿಗೂ ಸ್ಫೂರ್ತಿಯಾಗಿದ್ದಾರೆ’ ಎಂದು ಅವರು ನುಡಿದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲ ಡಾ. ಜೀವನ್ ರಾಜ್ ಅವರು ಇಂದಿನ ಯುವಜನರು ಹಿರಿಯರ ಆದರ್ಶಗಳನ್ನು ಪಾಲಿಸಿ ಯೋಗ್ಯ…

Read More

ಕುಂಬಳೆ ಸೀಮೆಯ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ 2025ರ ಮೇ 6ರಿಂದ 11ರ ತನಕ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಇದರ ಸಿದ್ಧತೆಗಳು ಆರಂಭಗೊಂಡಿರುವುದಾಗಿ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ತಾರನಾಥ ರೈ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2013ರಲ್ಲಿ ಬ್ರಹ್ಮಕಲಶೋತ್ಸವ ನಡೆದಿದ್ದು, ಸರಿಯಾಗಿ 12 ವರ್ಷದ ಬಳಿಕ ಇದೀಗ ಮತ್ತೆ ಬ್ರಹ್ಮಕಲಶೋತ್ಸವ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಶ್ರೀ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ಕಾಲಕಾಲಕ್ಕೆ ನಡೆಯುತ್ತಾ ಬಂದಿದೆ. ಕಾಟುಕುಕ್ಕೆ, ಎಣ್ಮಕಜೆ, ಶೇಣಿ ಮತ್ತು ಪಡ್ರೆ ಗ್ರಾಮಗಳ ಗ್ರಾಮ ದೇವಸ್ಥಾನವೂ ಇದಾಗಿದೆ. ತೆನ್ಕಾಯಿ ಕುಕ್ಕೆ ಎಂದು ಪ್ರಸಿದ್ಧಿಯನ್ನು ಹೊಂದಿದೆ. ಶ್ರೀ ಕ್ಷೇತ್ರದಲ್ಲಿ ಬಾಲ ಸುಬ್ರಮಣ್ಯ ಸ್ವಾಮಿ ಶ್ರೀ ಸುಬ್ರಾಯನಾಗಿ, ವನ ಶಾಸ್ತಾರ, ವನದುರ್ಗೆ ಮತ್ತು ಗಣಪತಿ ದೇವತಾ ಸಾನಿಧ್ಯವಿದೆ. ಅದಲ್ಲದೇ ಪಿಲಿ ಚಾಮುಂಡಿ ದೈವ ನೇಮ ತಂಬಿಲಗಳು ನಡೆಯುತ್ತವೆ. ಇದೀಗ ಕೇರಳ ಮಲಬಾರ್ ದೇವಸ್ವಂ ಮಂಡಳಿಯ ಅಧಿಕಾರದಲ್ಲಿದ್ದು, ತಾರಾನಾಥ ರೈ ಪಡ್ಡಂಬೈಲುಗುತ್ತು…

Read More

ಕನ್ನಡಿಗರ ಮುಂದಾಳತ್ವದ ಮಹಾನಗರದ ಪ್ರತಿಷ್ಠಿತ ಸೇವಾ ಸಂಸ್ಥೆ ಶಿವಾಯ ಫೌಂಡೇಶನ್ ವತಿಯಿಂದ ಶಿವಾಯ ಸಂಸ್ಥೆಯ 7ನೇ ಸಂಸ್ಥಾಪನಾ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದರ ಜನ್ಮದಿನ ದಿನಾಚರಣೆ ಪರೇಲ್ ನ ಟಾಟಾ ಕ್ಯಾನ್ಸರ್ ಆಸ್ಪತ್ರೆಯ ವಠಾರದಲ್ಲಿ ಜನವರಿ 12ರಂದು ಜರಗಿತು.ನೀನು ನಿನಗಾಗಿ ಬದುಕಿದರೆ ಅದು ಬದುಕಲ್ಲ. ಬದಲಾಗಿ ಸುತ್ತಲಿನ ಸಮಾಜಕ್ಕಾಗಿ, ಈ ದೇಶಕ್ಕಾಗಿ ಬದುಕಿದರೆ ಅದು ಬದುಕು ಎಂದು ಸಾರಿದ ಸ್ವಾಮಿ ವಿವೇಕಾನಂದರ ಜೀವನ ಸಂದೇಶಗಳಿಂದ ಪ್ರಭಾವಿತರಾಗಿ ಕಳೆದ ಏಳು ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರ ಜನ್ಮದಿನದಂದು ಸ್ಥಾಪನೆಯಾದ ಶಿವಾಯ ಫೌಂಡೇಶನ್ ಅಶಕ್ತ ಅರ್ಹರಿಗೆ ಟಾಟಾ ಆಸ್ಪತ್ರೆಯ ರೋಗಿಗಳು ಮತ್ತು ಸಂಬಂಧಿಕರಿಗೆ ಒಂದೊತ್ತಿನ ಊಟ, ಬಿಸ್ಕೆಟ್, ನೀರಿನ ಬಾಟಲಿಗಳನ್ನು ವಿತರಿಸುವ ಮೂಲಕ ಮತ್ತು ಏಳು ಕುಟುಂಬಗಳಿಗೆ ಒಟ್ಟು 1 ಲಕ್ಷಕ್ಕೂ ಹೆಚ್ಚು ರೂಪಾಯಿಗಳ ವೈದ್ಯಕೀಯ ಮತ್ತು ಶೈಕ್ಷಣಿಕ ನೆರವನ್ನು ನೀಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಶಿವಾಯದ ಸಂಸ್ಥಾಪನಾ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಆಚರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ವಿಭಿನ್ನ ರೀತಿಯ…

Read More

ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ದೇಶ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ. ಈ ಎರಡೂ ದೃಷ್ಟಿಕೋನವಿದ್ದರೆ ಸನಾತನ ಧರ್ಮ ಮತ್ತು ದೇಶ ಇನ್ನಷ್ಟು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಅವರು ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಕಾಟಿಪಳ್ಳ, ಹಿಂದು ಧಾರ್ಮಿಕ ಸೇವಾ ಸಮಿತಿ ಕಾಟಿಪಳ್ಳ ವತಿಯಿಂದ ಶ್ರೀ ಜಾರಂದಾಯ ಕೇಶವ ಶಿಶುಮಂದಿರದ ನೂತನ 3 ಅಂತಸ್ತಿನ ಕಟ್ಟಡ ಸಾರ್ಥಕ್ಯ ಎಂ.ಅರ್.ಪಿ.ಎಲ್ ಸಿ.ಎಸ್.ಅರ್ ವಿಭಾಗದ ಅನುದಾನದಿಂದ 40 ಲಕ್ಷ ಮಂಗಳೂರು ಮಹಾನಗರ ಪಾಲಿಕೆಯ ಅನುದಾನದಿಂದ 22 ಲಕ್ಷ ಮತ್ತು ದಾನಿಗಳ ಸಹಕಾರದಿಂದ 68 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಅದನ್ನು ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರ ಮತ್ತು ಧರ್ಮದ ಬಗ್ಗೆ ಎಲ್ಲರೂ ಶ್ರದ್ಧೆ ರೂಡಿಸಿಕೊಳ್ಳಬೇಕು. ಮೂಲ ಪರಂಪರೆಯಿಂದ ಬಂದಿರುವ ಆಚರಣೆಗಳನ್ನು ರೂಢಿಸಿಕೊಂಡು ಧರ್ಮವನ್ನು ಬಲಪಡಿಸಬೇಕು ಎಂದರಲ್ಲದೆ ಈ ನಿಟ್ಟಿನಲ್ಲಿ ನಮ್ಮ ಹಿಂದೂ ಸಂಸ್ಕೃತಿಗಳ ಬಗ್ಗೆ ಚಿಕ್ಕ ಮಕ್ಕಳಿಗೆ ಅರಿವು ಮೂಡಿಸುವ ಸಲುವಾಗಿ ಶಿಶುಮಂದಿರವನ್ನು ನಿರ್ಮಾಣ…

Read More

ಮೂಡುಬಿದಿರೆ: ಲವ್ಲೀ ಪ್ರೊಫೆಷನಲ್ ವಿ. ವಿ ಜಲಂಧರ್ ಪಂಜಾಬ್ ನಲ್ಲಿ ನಡೆದ ಅಖಿಲ ಭಾರತ ಅಂತರ್ ವಿ. ವಿ ವೇಟ್ ಲಿಫ್ಟಿಂಗ್ ಚಾಂಪಿಯಶಿಪ್ ನಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಪ್ರತಿನಿಧಿಸಿದ್ದ ಮಂಗಳೂರು ವಿ. ವಿ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. 32 ವರ್ಷಗಳ ಬಳಿಕ ರನ್ನರ್ಸ್ ಅಪ್ ಪ್ರಶಸ್ತಿ ಪಡೆದು ಮಂಗಳೂರು ವಿವಿ ಪ್ರಶಂಸೆಗೆ ಪಾತ್ರವಾಗಿದೆ. ವಿವಿ ಮಂಗಳೂರು ವಿವಿಯ ಒಟ್ಟು 9 ವಿದ್ಯಾರ್ಥಿಗಳ ತಂಡದಲ್ಲಿ ಆಳ್ವಾಸ್ ಸಂಸ್ಥೆಯ 6 ವಿದ್ಯಾಥಿಗಳು ಭಾಗಿಯಾಗಿದ್ದರು . ಆಳ್ವಾಸ್ ಕಾಲೇಜಿನ ಪ್ರಶಾಂತ್‌ಗೆ ಬೆಳ್ಳಿ, ಪ್ರತ್ಯುಶ್‌ಗೆ ನಾಲ್ಕನೇ ಸ್ಥಾನ, ಜೋಸುವ ರಾಜಕುಮಾರ್‌ಗೆ ನಾಲ್ಕನೇ ಸ್ಥಾನ ಪಡೆದರು. ಮಂಗಳೂರು ವಿವಿ ರನ್ನರ್ಸ್ ಅಪ್ ಪ್ರಶಸ್ತಿ ಪಡೆಯಲು ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳ ಕೊಡುಗೆ ಪ್ರಮುಖವಾಗಿದೆ . ಡಿಸೆಂಬರ್‌ನಲ್ಲಿ ಆಚಾರ್ಯ ನಾಗಾರ್ಜುನ ಯೂನಿವರ್ಸಿಟಿ ಗುಂಟೂರ್‌ನಲ್ಲಿ ನಡೆದ ದಕ್ಷಿಣ ಭಾರತ ಅಂತರ್ ವಿ. ವಿ ಚಾಂಪಿಯಶಿಪ್‌ನಲ್ಲಿ 3 ಚಿನ್ನ, 3 ಬೆಳ್ಳಿ ಹಾಗೂ 2 ಕಂಚಿನ ಪದಕದೊಂದಿಗೆ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿತ್ತು.…

Read More

ಕಾರ್ಕಳ : ದಿನಾಂಕ 11.01.2025ರಂದು ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು ನಡೆಸಿದ ಸಿ.ಎಸ್.ಇ.ಇ.ಟಿ (ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ 32 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 28 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಸಂಸ್ಥೆಯ ಕು.ರಕ್ಷಾ ರಾಮಚಂದ್ರ ಅವರು 200ರಲ್ಲಿ 163 ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಯಾಗಿರುತ್ತಾರೆ. ಜೊತೆಗೆ ಖತಿಜಾತುಲ್ ರಾಫಿಯಾ, ಹೃಷಿಕೇಶ್ ಸತೀಶ್ ಶೆಟ್ಟಿ, ಮ್ಯಾಕ್ಲಿನ್ ಜಾಕ್ ಡಿ’ಮೆಲ್ಲೊ, ಶ್ರೀಧಾ ಶೆಟ್ಟಿ, ರಕ್ಷಿತಾ ಜನ್ನೆ, ಶೋಧನ್ ಕುಮಾರ್ ಶೆಟ್ಟಿ, ಶ್ರಜಿತ್ ಕುಲಾಲ್, ಶ್ರಾವಂತ್ ಕುಮಾರ್ ಶೆಟ್ಟಿ, ಪ್ರಥಮ್ ನಾಯಕ್, ರಕ್ಷಿತ್ ಆರ್, ಪ್ರಜನ್, ಅಜಯ್ ಡಿ. ನಾಯಕ್, ಆಯುಶ್ ಶೆಟ್ಟಿ, ನಮೀಶ್ ಎನ್ ಶೆಟ್ಟಿ, ವಿಘ್ನೇಶ್, ಕೆ.ಆಂಕಿತಾ ಪೈ, ಪ್ರೇರಣಾ ಸುನಿಲ್ ಕುಮಾರ್, ಸಮರ್ಥ್ ವಿಜಯ್ ದೇವಾಡಿಗ, ಅಪೇಕ್ಷಾ, ಹುದಾಹಮ್ರಾ, ಕಾವ್ಯ ಸೆಲ್ಲಾಮುತು(100), ರಾಜೇಂದ್ರ ಎನ್.ಮಲ್ಯಾ, ಶುಧಿನ್ ಶೆಟ್ಟಿ, ಸುಭೀತ್, ಸುವೀಕ್ಷಾ,…

Read More

ಮಡ್ಗಾವ್ ರೈಲ್ವೇ ಸ್ಟೇಷನ್ ಸಮೀಪ ಲಕ್ಷ್ಮೀ ಎಂಪಾಯರ್ ಹೊಟೇಲ್ ಸಭಾಂಗಣದಲ್ಲಿ ಜನವರಿ 19 ರಂದು ದಿನ ಪೂರ್ತಿ ನಡೆಯಲಿರುವ ಗೋವಾ ಬಂಟರ ಸಂಘದ ರಜತ ಮಹೋತ್ಸವದ ವಿವಿಧ ಕಾರ್ಯಕ್ರಮಗಳು ಸಂಘದ ಅಧ್ಯಕ್ಷರಾದ ಕಾವಡಿ ಸದಾಶಿವ ಶೆಟ್ಟಿಯವರ ಘನ ಅಧ್ಯಕ್ಷತೆಯಲ್ಲಿ ಜರುಗಲಿದ್ದು, ಪರಿಸರದ ಸಮಾಜ ಬಾಂಧವರನ್ನು ಆತ್ಮೀಯವಾಗಿ ಆಮಂತ್ರಿಸಿದ್ದಾರೆ.ಜೆ.ಡಿ.ಎಸ್ ನ ರಾಜ್ಯ ಉಪಾಧ್ಯಕ್ಷರು, ಮೈಸೂರಿನ ಜ್ಞಾನಸರೋವರ ರೆಸಿಡೆನ್ಸಿಯಲ್ ಸ್ಕೂಲ್ ನ ಛೇರ್ಮನ್ ಸುಧಾಕರ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಯು.ಎ.ಇ ಬಂಟರ ಸಂಘದ ಅಧ್ಯಕ್ಷ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಡಾ| ಗಣನಾಥ ಶೆಟ್ಟಿ ಎಕ್ಕಾರ್ ಅವರು ಸಾಂದರ್ಭಿಕ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿಐಡಿ ಖ್ಯಾತಿಯ ದಯಾನಂದ ಶೆಟ್ಟಿ, ಉದ್ಯಮಿ, ಕಲಾವಿದ ಹರೀಶ್ ವಾಸು ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕೋಶಾಧಿಕಾರಿ ಉಳ್ತೂರು ಮೋಹನದಾಸ ಶೆಟ್ಟಿ, ಪತ್ರಕರ್ತ, ವಾಗ್ಮಿ ಶ್ರೀಕಾಂತ ಶೆಟ್ಟಿ ಕಾರ್ಕಳ ಮೊದಲಾದ ಗಣ್ಯರು ಉಪಸ್ಥಿತರಿದ್ದು ಸಭೆಯ ಶೋಭೆಯನ್ನು ಹೆಚ್ಚಿಸಲಿದ್ದಾರೆ.ಸಾಂಸ್ಕೃತಿಕ…

Read More

ಬೆಂಗಳೂರು ಬಂಟರ ಸಂಘದ ಅಧಿದೇವತೆ ಶ್ರೀ ವರಸಿದ್ಧಿ ವಿನಾಯಕ ಪ್ರಾರ್ಥನಾ ಮಂದಿರ ಜನವರಿ 19, 2000ರಲ್ಲಿ ಪ್ರತಿಷ್ಠಾಪನೆಗೊಂಡಿದ್ದು, ಇದೇ ಬರುವ 19, 2025 ರಂದು 25 ವರ್ಷವಾಗುತ್ತದೆ. ಇದರ ರಜತ ಮಹೋತ್ಸವವನ್ನು 19 ರಂದು ವಿಜೃಂಭಣೆಯಿಂದ ಆಚರಿಸಲು ತಯಾರಿ ನಡೆಯುತ್ತಿದೆ. ರಾಜ್ಯಗಳ ಪುನರ್ ವಿಂಗಡಣೆಯೊಂದಿಗೆ ಮೈಸೂರು ರಾಜ್ಯ 1956ರಲ್ಲಿ ಉದಯವಾಯಿತು. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ, ಮದ್ರಾಸ್ ಹಾಗೂ ಹೈದರಾಬಾದ್ ನಿಂದ ಬೆಂಗಳೂರಿಗೆ ಹೆಚ್ಚು ಹೆಚ್ಚು ಜನರು ಬರುವಂತಾಯಿತು. ಇದರಲ್ಲಿ ಅಧಿಕಾರಿಗಳು, ನ್ಯಾಯವಾದಿಗಳು ಹಾಗೂ ವಿವಿಧ ಕೈಗಾರಿಕೆಗಳನ್ನು ಪ್ರಾರಂಭಿಸಲು ಬರುವವರು ಸೇರಿದ್ದರು. ಇಂತಹ ಜನರಿಗೆ ಸಹಾಯ, ಸಲಹೆ ನೀಡುವ ಸದುದ್ದೇಶದಿಂದ ಬಂಟರ ಸಂಘವನ್ನು ಪ್ರಾರಂಭಿಸಬೇಕೆಂದು ಇಲ್ಲಿ ಮೊದಲೇ ನೆಲೆಸಿದ್ದ ಡಾ. ಕೆ.ಕೆ. ಹೆಗ್ಡೆ, ಸಿ.ಎಲ್ ನಾಯಕ್, ಡಾ. ನಾಗಪ್ಪ ಆಳ್ವ ಮೊದಲಾದ ಮುಖಂಡರು ಬಂಟರ ಸಂಘವನ್ನು 1957- 58 ರಲ್ಲಿ 31 ಸದಸ್ಯರ ನೋಂದಾಣಿಯೊಂದಿಗೆ ಸಂಘ ಪ್ರಾರಂಭಿಸಿದರು. ಇದಾದ ನಂತರ ಸಂಘ ಬೆಳೆದು ಸದಸ್ಯರ ಸಂಖ್ಯೆ ಹೆಚ್ಚಾಗುತ್ತಾ, ಸಂಘಕ್ಕೆ ತನ್ನದೇ ಸ್ವಂತ…

Read More