Author: admin
ಮೂಡುಬಿದಿರೆ: ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶಕ್ಕಾಗಿ ನಡೆಯುವ ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ ಪರೀಕ್ಷೆಯ ಫಲಿತಾಂಶದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಐದು ಸಾವಿರ ರ್ಯಾಂಕ್ನ ಒಳಗೆ ಹಾಗೂ 13 ಜನ ವಿದ್ಯಾರ್ಥಿಗಳು ಹತ್ತು ಸಾವಿರ ರ್ಯಾಂಕ್ನ ಒಳಗಡೆ ಸ್ಥಾನ ಪಡೆದಿದ್ದಾರೆ. ಕೆಟಗರಿ ವಿಭಾಗದಲ್ಲಿ ಆಕಾಶ ಪೂಜಾರ್ (924 ರ್ಯಾಂಕ್), ತನುಶ್ರೀ ಹೆಚ್ಟಿ (1295 ರ್ಯಾಂಕ್), ಪುನೀತ್ ಕುಮಾರ್ ಬಿಜಿ(2030 ರ್ಯಾಂಕ್), ತುಷಾರ್ ಘನಶ್ಯಾಮ್ (3027 ರ್ಯಾಂಕ್), ಸುಮಿತ್ (3359 ರ್ಯಾಂಕ್) ಮೋಹನ್ ಶಿವಶಂಕರ್ ಪೈ (3510 ರ್ಯಾಂಕ್), ಜೀವನ್ ಪಿ ವಿ (4164 ರ್ಯಾಂಕ್), ಪಾಡುರಂಗ ಜಿವಿ (4222 ರ್ಯಾಂಕ್), ರೋಶನ್ ಶೆಟ್ಟಿ (5857 ರ್ಯಾಂಕ್), ಗಣೇಶ್ (6073 ರ್ಯಾಂಕ್), ಭಾನು ಹರ್ಷ (6485 ರ್ಯಾಂಕ್), ಶೋಹೆಬ್ ರೆಹ್ಮಾನ್ (7184 ರ್ಯಾಂಕ್), ವಿಜೇತ್ ಜಿ ಗೌಡ (8993 ರ್ಯಾಂಕ್ ) ಪಡೆದಿದ್ದಾರೆ. ಒಟ್ಟು ಸಂಸ್ಥೆಯ 20 ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ. ಸಾಧನೆ…
ಅಂಧೇರಿ ಪಶ್ಚಿಮದ ಲೋಖಂಡ್ವಾಲ ಆಜಾದ್ ನಗರ, ಭಕ್ತಿ ವೇದಾಂತ ಸ್ಕೂಲ್ ಸಮೀಪದ ಶಾಸ್ತ್ರಿ ನಗರ, 105 ವಿಕ್ಟೋರಿಯಾ ಬಿಲ್ಡಿಂಗ್ ಬಿ/25 ರ ನಿವಾಸಿ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಹರಿಪ್ರಸಾದ್ ಬಿ. ಶೆಟ್ಟಿ (54) ಅವರು ಮೇ 19 ರಂದು ನಿಧನರಾಗಿದ್ದಾರೆ. ತುಂಗಾ ಹಾಸ್ಪಿಟಲ್ ಮತ್ತು ತಿರುಮಲ ಫುಡ್ ಇಂಡಸ್ಟ್ರೀಸ್ ನ ನಿರ್ದೇಶಕರಾಗಿದ್ದ ಅವರು ಮಧ್ವ ಗುತ್ತು ದಿವಂಗತ ಭೋಜ ಎಂ. ಶೆಟ್ಟಿ ಮತ್ತು ಬೈಲು ಕೊಳಂಬೆ ವಸಂತಿ ಬಿ. ಶೆಟ್ಟಿ ದಂಪತಿಯ ಜೇಷ್ಠ ಪುತ್ರರಾಗಿದ್ದರು. ಮೃತರು ಪತ್ನಿ ಕಾಂತಿ ಎಚ್. ಶೆಟ್ಟಿ, ಇಬ್ಬರು ಪುತ್ರರಾದ ಆದರ್ಶ್, ಅಭಿಷೇಕ್ ಮತ್ತು ಇಬ್ಬರು ಸಹೋದರರಾದ ರಾಜೇಶ್ ಬಿ. ಶೆಟ್ಟಿ ( ಜವಾಬ್ ನ ಅಧ್ಯಕ್ಷರು ಹಾಗೂ ತುಂಗಾ ಹಾಸ್ಪಿಟಲ್ ನ ನಿರ್ದೇಶಕರು) ಮತ್ತು ಡಾ. ಸತೀಶ್ ಬಿ. ಶೆಟ್ಟಿ (ತುಂಗಾ ಹಾಸ್ಪಿಟಲ್ ನ ನಿರ್ದೇಶಕರು) ಮತ್ತು ಡಾ. ಸತೀಶ್ ಬಿ. ಶೆಟ್ಟಿ (ತುಂಗಾ ಹಾಸ್ಪಿಟಲ್ ನ ಸಿಎಂಡಿ) ಹಾಗೂ ಸಹೋದರಿ ಪೂಜಾ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮದ ಸಭಾ ಕಾರ್ಯಕ್ರಮ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಎಂಆರ್ ಜಿ ಗ್ರೂಪ್ ನ ಸಿಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿ ಅವರು, ಸತೀಶ್ ಪಟ್ಲರಿಗೆ ಅವರ ಕಂಠವೇ ದೇವರು, ಆದರೆ ಯಕ್ಷಗಾನ ಕಲಾವಿದರಿಗೆ ಸತೀಶ್ ಪಟ್ಲರೇ ದೇವರು. ಯಕ್ಷಗಾನ ಕಲಾವಿದರು ತಮ್ಮ ಕಷ್ಟವನ್ನು ಬದಿಗಿರಿಸಿ ಜನರಿಗೆ ಮನೋರಂಜನೆ ನೀಡುತ್ತಾರೆ. ಎಂದಿಗೂ ಯಾರ ಮುಂದೆಯೂ ಕೈಚಾಚುವುದಿಲ್ಲ. ಅವರ ಸ್ವಾಭಿಮಾನದ ಬದುಕು ಹಾಗಿರುತ್ತದೆ. ಇಂತಹ ಕಲಾವಿದರಿಗೆ ನೆರವಾಗಲು ಯಕ್ಷಧ್ರುವ ಪಟ್ಲ ಟ್ರಸ್ಟ್ ಸ್ಥಾಪಿಸಿ ರಾತ್ರಿ ಹಗಲು ಕಲಾವಿದರ ನೋವಿಗೆ ಸ್ಪಂದಿಸಿದರು. ಅವರು ಪ್ರಾರಂಭದಲ್ಲಿ ನನ್ನ ಬಳಿ ತೊಟ್ಟಿಲು ಕೇಳಿದಾಗ ನಾನು ಹಿಂದೆ ಮುಂದೆ ಯೋಚಿಸದೆ ಬೆಳ್ಳಿ ತೊಟ್ಟಿಲು ನೀಡಿದೆ. ನಂತರ ನನ್ನ ಜೀವನದಲ್ಲಿ ವ್ಯವಹಾರದಲ್ಲಿ ಬಹಳಷ್ಟು ಅಭಿವೃದ್ಧಿಯನ್ನು ಕಂಡೆ. ನಾವೆಲ್ಲರೂ ಅವರು ಮಾಡುವ ಒಳ್ಳೆಯ ಕೆಲಸಕ್ಕೆ ಕೈಜೋಡಿಸೋಣ. ಅವರ ಸಮಾಜಮುಖಿ ಚಿಂತನೆ,…
ಪುಣೆಯ ಬಂಟರ ಸಂಘದ ಯುವ ವಿಭಾಗದ ನೂತನ ಸಮಿತಿಯ ಪ್ರಥಮ ಸಭೆಯು ಮೇ 25ರಂದು ಪುಣೆ ಶಿವಾಜಿನಗರದ ಕೋರೋನೆಟ್ ಹೋಟೆಲ್ ನಲ್ಲಿ ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿನಂದನ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಬಂಟರ ಸಂಘದ ಯುವ ವಿಭಾಗದ ನೂತನ ಸಮಿತಿಯ ಉಪಾಧ್ಯಕ್ಷರುಗಳಾದ ನಿಶಾನ್ ಶೆಟ್ಟಿ, ಶ್ರಾವ್ಯಾ ಎಸ್ ಶೆಟ್ಟಿ, ಕಾರ್ಯದರ್ಶಿ ಜಿತೇಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ನಿಧಿ ಹೆಗ್ಡೆ ಹಾಗೂ ಕಾರ್ಯಕಾರಿ ಸಮಿತಿ ಪ್ರಮುಖರುಗಳಾದ ಧೀರ್ ಶೆಟ್ಟಿ, ಸುಮೀತ್ ಶೆಟ್ಟಿ, ಪ್ರಾಣೇಶ್ ಶೆಟ್ಟಿ, ಅಕ್ಷಯ್ ಶೆಟ್ಟಿ, ಅಭಿಜಿತ್ ಶೆಟ್ಟಿ, ದೃತಿ ಶೆಟ್ಟಿ, ಸುಚೀತ್ ಶೆಟ್ಟಿ, ದಿಶಾಂಕ್ ಶೆಟ್ಟಿ, ಹೃತಿಕ್ ಶೆಟ್ಟಿ, ಅಕ್ಷತಾ ರೈ, ಸಾನ್ಯಾ ಶೆಟ್ಟಿ, ಖುಶಿ ಶೆಟ್ಟಿ, ಸಾಗರ್ ಶೆಟ್ಟಿ, ಶರಣ್ ಶೆಟ್ಟಿ, ಸಾನ್ವಿ ಶೆಟ್ಟಿ, ಅಕ್ಷಯ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.2025 -27 ರ ಸಾಲಿಗೆ ಆಯ್ಕೆಯಾದ ನೂತನ ಸದಸ್ಯರನ್ನು ಸ್ವಾಗತಿಸಲಾಯಿತು ಹಾಗೂ ಅಭಿನಂದಿಸಲಾಯಿತು. ಯುವ ವಿಭಾಗದ ಕಾರ್ಯಕಾರಿ ಸಮಿತಿಯ ಸದಸ್ಯರ ಕೂಡುವಿಕೆಯಲ್ಲಿ ನಡೆದ ಸಭೆಯಲ್ಲಿ ಪುಣೆ ಬಂಟರ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮ ಕಾರ್ಯಕ್ರಮ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ಕಟೀಲು ದುರ್ಗಾಪರಮೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಪ್ರಾಸ್ತಾವಿಕ ಮಾತನ್ನಾಡಿದ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಅವರು, ಇಂದು ಮೂರು ವೇದಿಕೆಗಳಲ್ಲಿ ನಿರಂತರ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮ ಇಷ್ಟೊಂದು ಯಶಸ್ವಿಯಾಗಿ ನಡೆಯಬೇಕಾದರೆ ಕೇಂದ್ರೀಯ ಸಮಿತಿಯ ಪ್ರತೀ ಪದಾಧಿಕಾರಿಗಳು, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಶ್ರಮವಿದೆ. ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಪಟ್ಲ ಫೌಂಡೇಶನ್ ದಾನಿಗಳ ನೆರವಿನಿಂದ ಇನ್ನಷ್ಟು ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಎಲ್ಲರ ಒಗ್ಗಟ್ಟಿನಲ್ಲಿ ಮಾತ್ರ ಸಾಧ್ಯ ಎಂದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಗೌರವಾಧ್ಯಕ್ಷ ಹೇರಂಭ ಇಂಡಸ್ಟ್ರಿಸ್ ಸಿಎಂಡಿ ಡಾ| ಕನ್ಯಾನ ಸದಾಶಿವ ಶೆಟ್ಟಿ ಮಾತಾಡಿ, ನನಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಭಾಗವಾಗಿರಲು ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಇದಕ್ಕಾಗಿ ಎಲ್ಲಾ ಪದಾಧಿಕಾರಿಗಳು, ದೇಶ ವಿದೇಶದಲ್ಲಿರುವ ಘಟಕದ ಪದಾಧಿಕಾರಿಗಳಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ. ಪಾರ್ತಿಸುಬ್ಬರಿಂದ…
ಮೂಡುಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಇದರ ದಶಮ ಸಂಭ್ರಮದ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡ್ನಲ್ಲಿ 15 ವರ್ಷದಿಂದ 25 ವರ್ಷದೊಳಗಿನ ಯುವ ಪ್ರತಿಭೆಗಳಿಗಾಗಿ ಏರ್ಪಡಿಸಿದ ಯಕ್ಷಗಾನ ಸ್ಪರ್ಧೆಯಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ತಂಡವು ಪ್ರಥಮ ಬಹುಮಾನವನ್ನು ಪಡೆಯಿತು. ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ವಿರಚಿಸಿದ, ಶೇಖರ ಶೆಟ್ಟಿಗಾರ್ ಮತ್ತು ಆದಿತ್ಯ ಅಂಬಲಪಾಡಿ ನಿರ್ದೇಶನದಲ್ಲಿ ‘ಸತಿ ಉಲೂಪಿ’ ಪ್ರಸಂಗ ಪ್ರದರ್ಶನವನ್ನು ನೀಡಿ, ಒಂದು ಲಕ್ಷ ರೂಪಾಯಿ ಹಾಗೂ ಸ್ಮರಣಿಕೆಯನ್ನು ಒಳಗೊಂಡ ಪ್ರಥಮ ಬಹುಮಾನವನ್ನು ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಪಡೆಯಿತು.ಸಮಗ್ರ ವೈಯಕ್ತಿಕ ವಿಭಾಗದಲ್ಲಿ ಶಬರೀಶ್ ಆಚಾರ್ಯ, ಆಹಾರ್ಯ ವಿಭಾಗದಲ್ಲಿ ಮುಖೇಶ್ ದೇವಧರ್, ಲಿಖಿತ ವಿಭಾಗಲ್ಲಿ ಪ್ರಜ್ವಲ್ ಬಿ ಶೆಟ್ಟಿ ಬಹುಮಾನಗಳನ್ನು ಪಡೆದರು. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಕಳೆದ ಎರಡು ದಶಕಗಳಿಂದ ಯಕ್ಷಗಾನದ ವಿವಿಧ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ನಮ್ಮ ನಾಡಿನ ವಿವಿಧ ಯಕ್ಷಗಾನ ಮೇಳಗಳಲ್ಲಿ ವೃತ್ತಿಪರವಾಗಿ ದುಡಿಯುತ್ತಿದ್ದು…
ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪೋಷಕರಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಭಾರತೀಯ ಸಂಸ್ಕೃತಿಯ ನೆಲೆಯಲ್ಲಿ ಜೀವನಕ್ಕಾಗಿ ಶಿಕ್ಷಣವನ್ನು ನೀಡುವುದು ನಮ್ಮ ಗುರಿಯಾಗಿದೆ. ಪೋಷಕರು ಜಿ ಎಮ್ನ ಮೇಲೆ ಇಟ್ಟ ಭರವಸೆಯನ್ನು ಕೊನೆಯವರೆಗೂ ಉಳಿಸಿಕೊಳ್ಳುತ್ತೇವೆ. ಪೋಷಕರು ಮನೆಯಲ್ಲಿ ಮಕ್ಕಳಿಗೆ ಪ್ರೀತಿಯ ಜೊತೆಗೆ ಹೆಚ್ಚಿನ ಸಮಯವನ್ನು ಕೊಡಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಮಕ್ಕಳ ಆಸಕ್ತಿಯ ವಿಷಯಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಮಕ್ಕಳನ್ನು ವಿದ್ಯಾವಂತರನ್ನಾಗಿಸುವುದು ಸುಸಂಸ್ಕೃತರನ್ನಾಗಿಸುವುದು ಪೋಷಕರ, ಶಿಕ್ಷಕರ ಕರ್ತವ್ಯವಾಗಿದೆ. ಎಲ್ಲರೂ ಮಕ್ಕಳ ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು. ಜಿ ಎಮ್ ಮಕ್ಕಳಿಗೆ ಜೀವನ ಕೌಶಲ್ಯದ ಜೊತೆಗೆ ವ್ಯಕ್ತಿತ್ವ ಬೆಳವಣಿಗೆಗೆ ಪ್ರಾಮುಖ್ಯತೆ ನೀಡುತ್ತದೆ ಎಂದರು. ಶಾಲಾ ವಿಭಾಗದ ಮುಖ್ಯಸ್ಥರು ಶಾಲಾ ಚಟುವಟಿಕೆಗಳು, ಪೋಷಕರ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಡಾ. ಅನುಷಾ ಸುಬ್ರಹ್ಮಣ್ಯಂ,…
ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ನ ಚೇತನ್ ಗೌಡ ಎನ್. ಎಸ್. ಸಾಮಾನ್ಯ ವಿಭಾಗದಲ್ಲಿ 3420 (OBC ವರ್ಗದಲ್ಲಿ 639)ನೇ ರ್ಯಾಂಕ್ , ತೇಜಸ್ ವಿ ನಾಯಕ್ ಸಾಮಾನ್ಯ ವಿಭಾಗದಲ್ಲಿ 7773(OBC ವರ್ಗದಲ್ಲಿ 1661)ನೇ ರ್ಯಾಂಕ್, ಸಾನಿಕ ಕೆ. ಎನ್. ಸಾಮಾನ್ಯ ವಿಭಾಗದಲ್ಲಿ 9701, ಮೋಹಿತ್ ಎಂ. ಸಾಮಾನ್ಯ ವಿಭಾಗದಲ್ಲಿ 17504 (ST ವರ್ಗದಲ್ಲಿ 143)ನೇ ರ್ಯಾಂಕ್, ಎಂ. ಮಂಜುನಾಥ್ ಸಾಮಾನ್ಯ ವಿಭಾಗದಲ್ಲಿ 20743ನೇ ರ್ಯಾಂಕ್, ಸಾಚಿ ಶಿವಕುಮಾರ್ ಕಡಿ 24728ನೇ ರ್ಯಾಂಕ್ , ಶ್ರೀರಕ್ಷಾ 28163ನೇ ರ್ಯಾಂಕ್ , ಯೋಗೇಶ್ ದೀಪಕ್ ನಾಯಕ್ ಸಾಮಾನ್ಯ ವಿಭಾಗದಲ್ಲಿ 31133 (OBC ವರ್ಗದಲ್ಲಿ 8989)ನೇ ರ್ಯಾಂಕ್ , ಹರ್ಷಿತ್ ರಾಜು ಹೆಚ್. ಎಂ.. ಸಾಮಾನ್ಯ ವಿಭಾಗದಲ್ಲಿ 31140ನೇ ರ್ಯಾಂಕ್ , ಪ್ರೀತಿ ಸಿ. ಎಲ್. ಸಾಮಾನ್ಯ ವಿಭಾಗದಲ್ಲಿ 31939ನೇ ರ್ಯಾಂಕ್…
ಕೆ.ಸಿ.ಇ.ಟಿ. ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 6 ನೇ ರ್ಯಾಂಕ್ ಪಡೆದ ತರುಣ್ ಸುರಾನಾನಿಗೆ ರಾಷ್ಟ್ರ ಮಟ್ಟದಲ್ಲಿ ಜನರಲ್ ಮೆರಿಟ್ ನಲ್ಲಿ 2403 ನೇ ರ್ಯಾಂಕ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರವೇಶಾತಿಗಾಗಿ ನಡೆಸಲಾಗುವ ಜೆ.ಇ.ಇ.ಅಡ್ವನ್ಸ್ಡ್ 2025 ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಐವರು ವಿದ್ಯಾರ್ಥಿಗಳು ಹತ್ತು ಸಾವಿರದ ಒಳಗಿನ ರ್ಯಾಂಕ್ ಗಳಿಸಿದ್ದಾರೆ. ಜನರಲ್ ಮೆರಿಟ್ ನಲ್ಲಿ ತರುಣ್ ಎ. ಸುರಾನಾ (2403) ( ಕೆಟಗರಿಯಲ್ಲಿ429 ರ್ಯಾಂಕ್),ಮನೋಜ್ ಕಾಮತ್( 3911 ) (ಜನರಲ್ ಇ.ಡಬ್ಲು.ಎಸ್ 394ರ್ಯಾಂಕ್). ಆಕಾಶ್ ಪ್ರಭು (5105 ), ಚಿಂತನ್ ಮೇಗಾವತ್ (6375 ) (ಕೆಟಗರಿಯಲ್ಲ್ಲಿ142 ರ್ಯಾಂಕ್),ವಿಷ್ಣು ಧರ್ಮಪ್ರಕಾಶ್ (8565) ರ್ಯಾಂಕ್ ಗಳಿಸಿದ್ದಾರೆ. ಒಟ್ಟು ಹನ್ನೆರಡು ವಿದ್ಯಾರ್ಥಿಗಳು ಐ.ಐ.ಟಿ ಪ್ರವೇಶಕ್ಕೆ ಅರ್ಹತೆ ಗಳಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಎ.ಪಿ.ಜಿ.ಇ.ಟಿ ಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.
ಪುಣೆ ಬಂಟರ ಸಂಘದ ನೂತನ ಸಮಿತಿಯ ಪ್ರಥಮ ಸಭೆಯು ಮೇ 27ರಂದು ಪುಣೆ ಬಂಟರ ಭವನದ ಬ್ಯಾಂಕ್ವೇಟ್ ಹಾಲ್ ನಲ್ಲಿ ಅಧ್ಯಕ್ಷರಾದ ಕೆ ಅಜಿತ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಸಂಘದ ಗೌರವಾಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಉಪಾಧ್ಯಕ್ಷರುಗಳಾದ ವಿಶ್ವನಾಥ್ ಶೆಟ್ಟಿ, ರಾಮಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣಂಜಾರು, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಮ್ಮಿ ಎ ಹೆಗ್ಡೆ, ನಿಕಟಪೂರ್ವ ಕಾರ್ಯಾಧ್ಯಕ್ಷೆ ಸುಲತಾ ಎ ಶೆಟ್ಟಿ ಮತ್ತು ಸಮಿತಿಯ ಪದಾಧಿಕಾರಿಗಳಾದ ಮೋಹನ್ ಶೆಟ್ಟಿ, ಸತೀಶ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ ಎರ್ಮಾಳ್, ಪ್ರಭಾಕರ್ ಶೆಟ್ಟಿ, ಗಣೇಶ್ ಶೆಟ್ಟಿ, ಮಾಧವ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ ನಿಟ್ಟೆ, ವಿವೇಕಾನಂದ ಶೆಟ್ಟಿ, ಶೇಖರ್ ಶೆಟ್ಟಿ, ಗಣೇಶ್ ಪೂಂಜಾ, ರವಿ ಶೆಟ್ಟಿ ಕಾಪು, ಉದಯ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿನಂದನ್ ಶೆಟ್ಟಿ, ಮಹಿಳಾ ವಿಭಾಗದ ಪ್ರಮುಖರಾದ ನೀನಾ ಬಿ ಶೆಟ್ಟಿ, ವೀಣಾ ಪಿ ಶೆಟ್ಟಿ, ಗೀತಾ ಅರ್…














