Author: admin

ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಹಿರಿಯಡ್ಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ತನ್ನ ಊರಿನ ಪ್ರೌಢಶಾಲೆಯಲ್ಲಿ 1980ರಿಂದ ಸ್ಥಾಪಕ ಮುಖ್ಯ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿ ಮೂರು ದಶಕಗಳ ಕಾಲ ಸಲ್ಲಿಸಿದ್ದರು ಕುದಿ ವಸಂತ ಶೆಟ್ಟಿಯವರು ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿ 4 ವರ್ಷ, ಅಧ್ಯಕ್ಷರಾಗಿ 5 ವರ್ಷ ಸೇವೆ ಸಲ್ಲಿಸಿದ್ದಾರೆ. ಉತ್ತಮ ವಾಗ್ಮಿ, ಸಂಪನ್ಮೂಲ ವ್ಯಕ್ತಿಯಾಗಿದ್ದ ವಸಂತ ಶೆಟ್ಟಿಯವರು ಊರಿನ ದೇವಸ್ಥಾನ, ದೈವಸ್ಥಾನಗಳ ಸಮಿತಿಯಲ್ಲಿ ಸೇವೆ ಮಾಡಿದವರು. ಕುದಿ ವಸಂತ ಶೆಟ್ಟಿಯವರ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ದುಬಾಯಿ ಸರ್ವೋತ್ತಮ ಶೆಟ್ಟಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

Read More

“ರಂಗಚಾವಡಿ” ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಸುರತ್ಕಲ್ ಇದರ ಸಹಯೋಗದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಚಲನಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ ದೀಪ ಪ್ರಜ್ವಲನೆಗೈದರು. ಬಳಿಕ ಮಾತಾಡಿದ ಅವರು, ರಂಗಚಾವಡಿ ಪ್ರಶಸ್ತಿ ಸ್ವೀಕರಿಸುತ್ತಿರುವ ಹಿರಿಯ ರಂಗಕರ್ಮಿ ಕಿಶೋರ್ ಡಿ. ಶೆಟ್ಟಿ ಅವರದು ಸಾವಿರಾರು ಕಲಾವಿದರಿಗೆ ಸ್ಫೂರ್ತಿ ತುಂಬುವ ವ್ಯಕ್ತಿತ್ವ. ಅವರನ್ನು ಪಡೆದಿರುವುದು ನಮ್ಮ ತುಳುನಾಡಿನ ಸಮಸ್ತ ಕಲಾವಿದರ ಪುಣ್ಯ. ಬಡ ಹೆಣ್ಣುಮಕ್ಕಳ ಮದುವೆ, ಬಡಕುಟುಂಬದ ಆರ್ಥಿಕ ಸಂಕಷ್ಟಕ್ಕೆ ಕಿಶೋರ್ ಶೆಟ್ಟಿ ಅವರು ಸದಾ ನೆರವು ನೀಡಿದವರು. ಅವರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಸಂದಿದೆ. ಸಂಘಟನೆಯ ಈ ಕ್ರಮ ಶ್ಲಾಘನೀಯವಾದುದು“ ಎಂದರು. ವೇದಿಕೆಯಲ್ಲಿ ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ-2024 ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಅವರು, “ನನ್ನ ತಂಡದ ಕಲಾವಿದರಿಂದ ನಾನಿದ್ದೇನೆ, ಅವರಿಲ್ಲದೆ ನಾನೇನೂ ಇಲ್ಲ. ನಾನು ಮಾಡಿರುವ ದಾನ ಧರ್ಮ ಏನೂ ಇಲ್ಲ. ನೊಂದವರಿಗೆ…

Read More

ಮೂಡುಬಿದಿರೆ: ಭಾರತದ ರಾಜಕಾರಣ ಸಂವಿಧಾನದ ನಿರ್ದೇಶನ ಹಾಗೂ ತತ್ವಗಳ ಅಡಿಯಲ್ಲಿ ಕೆಲಸ ಮಾಡಿದರೆ ಇನ್ನು ಮುಂದಿನ ಹತ್ತು ವರ್ಷಗಳಲ್ಲಿ ಎರಡನೇ ದರ್ಜೆಯ ಪ್ರಜೆಗಳೆನಿಸಿರುವ ಆದಿವಾಸಿಗಳು ಸಮಾಜದ ಮುಖ್ಯವಾಹಿನಿಗೆ ಬರುವಂತಾಗುತ್ತದೆ. ರಾಜಕಾರಣವನ್ನು ಬದಿಗಿರಿಸಿ ಸಂವಿಧಾನದ ತತ್ವಗಳನ್ನು ಜಾರಿ ಮಾಡುವ ಮೂಲಕ ಸಮಸಮಾಜದ ನಿರ್ಮಾಣ ಸಾಧ್ಯ  ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ  ಡಾ ಎಚ್.ಸಿ.ಮಹಾದೇವಪ್ಪ ಹೇಳಿದರು. ಮೂಡುಬಿದಿರೆ ವಿದ್ಯಾಗಿರಿ ಆಳ್ವಾಸ್‌ನ ನುಡಿಸಿರಿ ಸಭಾಂಗಣದ ದಿವಂಗತ ಜ್ಯೋತಿ ಸುಂದರ ನಾಯ್ಕ ವೇದಿಕೆಯಲ್ಲಿ  ಭಾನುವಾರ ನಡೆದ ‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ 2024 ಉದ್ಘಾಟಿಸಿ ಅವರು ಮಾತನಾಡಿದರು. ಬಾಬಾ ಸಾಹೇಬರ ಮಂತ್ರ- ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಬಾಬಾ ಸಾಹೇಬರ ಮಂತ್ರ- ಶಿಕ್ಷಣ, ಸಂಘಟನೆ ಹಾಗೂ ಹೋರಾಟ. ಶಿಕ್ಷಿತರಾಗುವ ಮೂಲಕ ಸಂಘಟಿತ ಹೋರಾಟ ಸಾಧ್ಯ. ಆ ಮೂಲಕ ನಮ್ಮ ನಿರ್ದಿಷ್ಟ ಬೇಡಿಕೆಗಳು ಇಡೇರುತ್ತವೆ. ಹೋರಾಟ ವ್ಯಕ್ತಿತ್ವ, ನೈತಿಕತೆ ಹಾಗೂ ಚರಿತ್ರೆಯನ್ನು ನಿರ್ಮಾಣ ಮಾಡಬಲ್ಲದು ಎಂದು ಅಂಬೇಡ್ಕರ್ ನಂಬಿದ್ದರು. ನಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಬಾಬಾ ಸಾಹೇಬರು…

Read More

ವಿದ್ಯಾಗಿರಿ: ಮಂಗಳೂರು ವಿವಿ ಮತ್ತು ಬೆಸೆಂಟ್ ಮಹಿಳೆಯರ ಕಾಲೇಜು ಇವುಗಳ ಸಂಯುಕ್ರಾಶ್ರಯದಲ್ಲಿ ನಡೆದ ಅಂತರ್ಕಾ ಲೇಜು ಮಹಿಳೆಯರ  ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜಿನ ಮಹಿಳೆಯರ ತಂಡ ಸತತ ೪ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು.ಆಳ್ವಾಸ್ ಕಾಲೇಜು ತಂಡವು ವಾಮದಪದವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಹಾಗೂ  ಉಜಿರೆಯ ಎಸ್.ಡಿ.ಎಂ ಕಾಲೇಜು ತಂಡವು ಅಜ್ಜರಕಾಡಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಫೈನಲ್ ಹಂತಕ್ಕೆ ತೇರ್ಗಡೆಗೊಂಡವು. ಫೈನಲ್ಸ್ನಲ್ಲಿ ಆಳ್ವಾಸ್ ತಂಡವು ಎಸ್.ಡಿ.ಎಂ ಕಾಲೇಜು ತಂಡವನ್ನು ೩೯-೧೪ ಅಂತರದಲ್ಲಿ ಸೋಲಿಸಿ ವೆರಿ ರೆವೆರೆಂಡ್ಮೆ ಸೆಂಜರ್ ಎ ಪತ್ರಾವೋ ಮೆಮೋರಿಯಲ್ ರೋಲಿಂಗ್ ಟ್ರೋಫಿ ಹಾಗೂ ಶಾಶ್ವತ ಫಲಕವನ್ನು ಪಡೆದುಕೊಂಡಿತು. ಆಳ್ವಾಸ್ತಂ ಡದ ಸುಶ್ಮಿತಾ ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿ  ಪಡೆದರೆ,  ಧನಲಕ್ಷ್ಮಿ ಉತ್ತಮ ದಾಳಿಗಾರ್ತಿ, ಮತ್ತು ಎಸ್.ಡಿ.ಎಂ ತಂಡದ ಸುಮಯ್ಯ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಪಡೆದುಕೊಂಡರು.  ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಬ್ರಹ್ಮಾವರದ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನ ಸುಸಜ್ಜಿತ ಕ್ರೀಡಾಂಗಣ ಜಿ ಎಮ್ ಅರೆನಾದಲ್ಲಿ 20ನೇ ವಾರ್ಷಿಕ ಕ್ರೀಡಾಕೂಟ ಯಶಸ್ವಿಯಾಗಿ ಜರಗಿತು. ಉಡುಪಿ ಜಿಲ್ಲೆಯ ಪ್ರೊಬೇಷನರಿ ಡಿವೈಎಸ್‍ಪಿ ಗೀತಾ ಪಾಟೀಲ್ ಕ್ರೀಡಾ ಜ್ಯೋತಿಯನ್ನು ಬೆಳಗಿ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿ ಕ್ರೀಡೆಯು ಮಕ್ಕಳಲ್ಲಿ ಉತ್ತಮ ಮೌಲ್ಯವನ್ನು ಬೆಳೆಸಿ ಅತ್ಯುತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ನೆರವಾಗುತ್ತದೆ. ಸೋತವರು ಯಾವುದೇ ಕಾರಣಕ್ಕೂ ಪ್ರಯತ್ನವನ್ನು ಬಿಡದೆ ಮುನ್ನಡೆಯಬೇಕೆಂದರು. ಸಮಾರೋಪ ಸಮಾರಂಭದಲ್ಲಿ ಉಡುಪಿಯ ಯುನೈಟೆಡ್ ಅಥ್ಲೆಟಿಕ್ಸ್‍ನ ಕೋಚ್ ಶಾಲಿನಿ ರಾಜೇಶ್ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ ಕ್ರೀಡಾಕೂಟ ಮಕ್ಕಳಿಗೆ ವಿದ್ಯಾರ್ಥಿ ಜೀವನದಲ್ಲಿ ಬಹು ನಿರೀಕ್ಷೆಯ ಸಂತೋಷದ ದಿನವಾಗಿದೆ. ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ಕೊಡಬೇಕು. ಆರೋಗ್ಯಯುತ ಆಹಾರದ ಸೇವನೆ, ನಿರಂತರ ದೈಹಿಕ ಚಟುವಟಿಕೆಗೆ ಒತ್ತನ್ನು ನೀಡಿ ಮೊಬೈಲ್ ಬಳಕೆಯಿಂದ ದೂರವಿರಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಸಾಧಕರನ್ನು ನಮ್ಮ ಆದರ್ಶ ವ್ಯಕ್ತಿಯನ್ನಾಗಿ ತೆಗೆದುಕೊಳ್ಳಬೇಕು ಮತ್ತು ನಮ್ಮ…

Read More

ಮೂಲ್ಕಿ ಬಂಟರ ಸಂಘದ ಕಟ್ಟಡ ನವೀಕರಣದ ಕಾಮಗಾರಿಯು ನವೆಂಬರ್ 8 ರಂದು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಧರ್ಮದರ್ಶಿಗಳೂ, ಹಿರಿಯರೂ ಆದ ಮನೋಹರ ಶೆಟ್ಟಿ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಮೂಲ್ಕಿ ಬಂಟರ ಸಂಘದ ಗೌರವಾಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಇವರ ಘನ ಉಪಸ್ಥಿತಿಯಲ್ಲಿ ಅವರ ದಿವ್ಯ ಹಸ್ತದಿಂದ ಕಟ್ಟಡಕ್ಕೆ ಚಾಲನೆ ನೀಡಲಾಯಿತು. ಮುಂಬರುವ ವರ್ಷ ಬಂಟರ ಸಂಘಕ್ಕೆ ಶತಮಾನದ ವರ್ಷ. ನಮ್ಮ ಹಿರಿಯರು ಹಾಕಿ ಕೊಟ್ಟ ಈ ಸಂಘಟನೆಯನ್ನು ಕಿರಿಯರಾದ ನಾವು ಉತ್ತಮವಾದ ರೀತಿಯಲ್ಲಿ ಮುಂದುವರೆಸಿಕೊಂಡು ಹೋಗಬೇಕು. ಹಿರಿಯರ ಮಾರ್ಗದರ್ಶನಕ್ಕೆ ಅನುಸಾರವಾಗಿ ಮುಂದುವರಿಯಬೇಕು. ಇದಕ್ಕೆ ದೇವರ ಅನುಗ್ರಹವೂ ಇರುತ್ತದೆ. ನಾವೆಲ್ಲಾ ಒಂದಾಗಿ ಸಂಘಟನೆಯನ್ನು ಬಲಪಡಿಸೋಣ. ಕಟ್ಟಡದ ಕಾಮಗಾರಿ ಶೀಘ್ರವಾಗಿ ಪ್ರಗತಿಪಥದಲ್ಲಿ ಸಾಗಿ ಲೋಕಾರ್ಪಣೆಯಾಗಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭವನ್ನು ಹಾರೈಸಿದರು. ಮುಂದಿನ ದಿನಗಳಲ್ಲಿ ಬಪ್ಪನಾಡು ದುರ್ಗಾಪರಮೇಶ್ವರಿಯ ಅನುಗ್ರಹದಿಂದ ಶೀಘ್ರವೇ ಕಟ್ಟಡ ಲೋಕಾರ್ಪಣೆಯಾಗಿ ಸಮಾಜಕ್ಕೆ ಸ್ಪಂದಿಸಲಿ ಎಂದು ಮನೋಹರ ಶೆಟ್ಟಿ ಅವರು ಶುಭ ಹಾರೈಸಿದರು. ಬಂಟರ…

Read More

ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಲ ಬೆಂಗಳೂರು ಇದರ ನಿರ್ದೇಶಕರಾಗಿ, ಸಹಕಾರ ಭಾರತಿ ಪ್ರಮುಖ್ ರಾದ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಉದಯ ರೈ ಮಾದೋಡಿಯವರು ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಲ ಬೆಂಗಳೂರು ಇದರ 13 ನಿರ್ದೇಶಕರ ಸ್ಥಾನಗಳಿಗೆ ನವೆಂಬರ್ 4 ರಂದು ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಲದ ಬೆಂಗಳೂರು ಕಚೇರಿಯಲ್ಲಿ ಚುನಾವಣೆ ನಡೆಯಿತು. ಉದಯ ರೈ ಮಾದೋಡಿಯವರು 2018 – 23ನೇ ಅವಧಿಯಲ್ಲಿ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಲ ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಎರಡನೇ ಅವಧಿಗೆ ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ. 1994 ರಲ್ಲಿ ಬೆಳಂದೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ, 2000 ರಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚ ಅಧ್ಯಕ್ಷರಾಗಿದ್ದರು. ಆ ಬಳಿಕ ಬಿಜೆಪಿ ಜಿಲ್ಲಾ ಸಮಿತಿ, ಮಂಡಲ ಸಮಿತಿ, ಬಿಜೆಪಿ ಪಕ್ಷದ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. ಸವಣೂರು ಪ್ರಾಥಮಿಕ…

Read More

ಬ್ರಹ್ಮಾವರ ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ನವೆಂಬರ್ 9ರಂದು 10:35 ಕ್ಕೆ ಬಂಟರ ಭವನದಲ್ಲಿ ಜರಗಲಿದೆ. ಸಂಘದ ನೂತನ ಅಧ್ಯಕ್ಷ ಎಚ್. ಸುದರ್ಶನ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದು, ಮಣಿಪಾಲ ಮಾಹೆ ಸಹ ಕುಲಾಧಿಪತಿ ಡಾ. ಎಚ್. ಎಸ್ ಬಳ್ಳಾಲ್ ಉದ್ಘಾಟನೆ ನೆರವೇರಿಸುವರು. ಮನೆ ಕೊಡುಗೆಯ ಫಲಾನುಭವಿಗೆ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಂಜೂರಾತಿ ಪತ್ರ ಹಸ್ತಾಂತರಿಸಲಿದ್ದು, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ ಅವರು ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಯ ದತ್ತು ಸ್ವೀಕಾರವನ್ನು ನಡೆಸಿ ಕೊಡುವರು. ಸಂಘದ ಮಾಜಿ ಅಧ್ಯಕ್ಷರಾದ ಎಚ್. ವಿಠಲ ಶೆಟ್ಟಿ ಶೇಡಿಕೊಡ್ಲು, ಕೆ. ಬಾಲಕೃಷ್ಣ ಹೆಗ್ಡೆ ಅವರು ಪ್ರತಿಭಾ ಪುರಸ್ಕಾರವನ್ನು ನೆರವೇರಿಸುವರು. ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಅಧ್ಯಕ್ಷ ಶ್ರೀನಾಥ ಹೆಗ್ಡೆ, ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ…

Read More

ವಿದ್ಯಾಗಿರಿ:  ಶಿಕ್ಷಣ, ಕ್ರೀಡೆ, ಸಂಸ್ಕೃತಿ ಸಂಗಮವಾಗಿ ಅರಳಿದ ಆಳ್ವಾಸ್ ಅಂಗಣದಲ್ಲಿ ಗುರುವಾರ ಬೆಳಕಿನ ಸಂಭ್ರಮ. ಬಾನಂಗಳದಲ್ಲೂ  ಮೂಡಿದ ಚಿತ್ತಾರ. ಅದು ಅಕ್ಷರಶಃ ದೇಶದ ಉತ್ಸವ, ನಾಡಿನ ಹಬ್ಬ, ತುಳುನಾಡಿನ ಪರ್ಬ , ಬೆಳಗುವ ಬೆರಗು ‘ಆಳ್ವಾಸ್  ದೀಪಾವಳಿ’ಯ ಸೊಬಗು. ಸರ್ವಧರ್ಮಗಳ ಸಮಭಾವ, ಭಾರತೀಯತೆಯ ಭ್ರಾತೃತ್ವ, ಸೌಹಾರ್ದತೆಯ ಸಮಗ್ರತೆ ಎಂಬಂತೆ ಸರ್ವ ಹಬ್ಬಗಳನ್ನು ಆಚರಿಸಿಕೊಂಡು ಬಂದಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು, ಗುರುವಾರ ಸಂಜೆ ಇಲ್ಲಿನ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲುರಂಗ ಮಂದಿರದಲ್ಲಿ ‘ಆಳ್ವಾಸ್ ದೀಪಾವಳಿ-2024’ ಆಚರಿಸಿತು. 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ಪೋಷಕರು, ಸ್ಥಳೀಯರು ಸೇರಿ 20 ಸಾವಿರಕ್ಕೂ ಅಧಿಕ ಜನರ ಸಮ್ಮುಖದಲ್ಲಿ ದೀಪಾವಳಿಯ ಬೆಳಕು ಲೋಕ ಬೆಳಗಿತು. ಕೊಂಬು, ಕಹಳೆ, 36 ಛತ್ರಿ ಚಾಮರದ ಜೊತೆ, 100 ಕ್ಕೂ ಅಧಿಕ ದೇವಕನ್ಯೆಯರು, ದೀಪ, ಕಳಶ ಹಿಡಿದ ಬಾಲಿಕೆಯರು ಹಾಗೂ ಪುಟಾಣಿಗಳ ಜೊತೆ ಬಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹಾಗೂ…

Read More

ಹಿರಿಯ ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆಯವರಿಗೆ 90 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಅವರ 90ನೇ ಜನ್ಮದಿನವನ್ನು ಸಾರ್ವಜನಿಕವಾಗಿ ಸಂಭ್ರಮಿಸಬೇಕು ಎನ್ನುವ ನೆಲೆಯಲ್ಲಿ ಇದೇ ಡಿಸೆಂಬರ್ 24 ರಂದು ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆಯ ಆವರಣದಲ್ಲಿ ‘ಅಪ್ಪಣ್ಣ ಹೆಗ್ಡೆ -90‘ ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ನವೆಂಬರ್ 30 ರಂದು ಸಂಜೆ 6 ರಿಂದ ಬಸ್ರೂರು ಶ್ರೀ ಶಾರದಾ ಕಾಲೇಜು ಆವರಣದಲ್ಲಿ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 400 ವಿದ್ಯಾರ್ಥಿ ಕಲಾವಿದರು ‘ಆಳ್ವಾಸ್ ಸಾಂಸ್ಕೃತಿಕ ಲೋಕ‘ ಎನ್ನುವ ವಿಶೇಷ ಧ್ವನಿ ಬೆಳಕಿನ ಸಂಯೋಜನೆಯ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮವನ್ನು ಸಾದರಪಡಿಸಲಿದ್ದಾರೆ ಎಂದು ಮೂಡುಬಿದಿರೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುಮಾರು 2.30 ಗಂಟೆಗಳ ಕಾಲ ನಿರಂತರವಾಗಿ ನಡೆಯಲಿರುವ ಈ ಕಾರ್ಯಕ್ರಮವು ಆಳ್ವಾಸ್‌ನ ಈ ಹಿಂದಿನ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗಿಂತ ತೀರಾ ಭಿನ್ನವಾಗಿದೆ. ಕಲೆ, ಸಂಗೀತ ಹಾಗೂ ಶಿಕ್ಷಣ ಪ್ರೇಮಿಗಳೂ ಆಗಿರುವ…

Read More