Author: admin
ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ಮಹತ್ವದ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅಂಬಿ ನಿಂಗೆ ವಯಸ್ಸಾಯ್ತೋ’ ಖ್ಯಾತಿಯ ಗುರುದತ್ ಗಾಣಿಗ ನಿರ್ದೇಶನದ ಈ ಚಿತ್ರದ ರಾಜ್ ಬಿ ಶೆಟ್ಟಿ ಪಾತ್ರದ ಫಸ್ಟ್ ಲುಕ್ ಇದೀಗ ಬಿಡುಗಡೆಯಾಗಿದೆ. ಅದ್ದೂರಿಯಾಗಿ ಗಮನ ಸೆಳೆಯುವಂತೆ ಫಸ್ಟ್ ಲುಕ್ ಟೀಸರ್ ಕೂಡ ಮೂಡಿಬಂದಿದೆ. ರಾಜ್ ಬಿ ಶೆಟ್ಟಿ ನಟನೆ, ನಿರ್ಮಾಣದ ‘ಸು ಫ್ರಂ ಸೋ’ ಭಾರಿ ಜನಪ್ರಿಯತೆ ಪಡೆದ ಬೆನ್ನಲ್ಲಿಯೇ ಈ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಇಲ್ಲಿಯವರೆಗೂ ಚಿತ್ರತಂಡ ರಾಜ್ ಬಿ ಶೆಟ್ಟಿ ನಟಿಸುತ್ತಿರುವ ಸಂಗತಿಯನ್ನು ಗುಟ್ಟಾಗಿ ಇಟ್ಟಿತ್ತು. ಈ ಚಿತ್ರದ ಫಸ್ಟ್ ಲುಕ್ ಹೊರತಾಗಿ ಬೇರೆ ಯಾವುದೇ ಮಾಹಿತಿಯನ್ನು ಚಿತ್ರತಂಡ ನೀಡಿಲ್ಲ. ಮಾವೀರ ಎಂಬ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕತೆಯನ್ನು ಒಳಗೊಂಡಿರುವ ಸಿನಿಮಾವಾಗಿದ್ದು, ಪ್ರಜ್ವಲ್ ದೇವರಾಜ್ ವಿಶಿಷ್ಟ ಗೆಟಪ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಎಕ್ಕ’ ಚಿತ್ರದಲ್ಲಿ ಜನಪ್ರಿಯತೆ ಗಳಿಸಿದ್ದ ಸಂಪದಾ ಈ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ.…
ತಂತ್ರಜ್ಞಾನ ಬೆಳೆದ ಬಳಿಕ ಮಾಧ್ಯಮ ಕ್ಷೇತ್ರ ವಿಸ್ತಾರವಾಗಿದೆ. ಸಮಾಜದ ವಾಸ್ತವದ ಸತ್ಯ ಸಂಗತಿಗಳನ್ನು ಜನರ ಮುಂದಿಡುವ ಕೆಲಸ ಆಗಬೇಕು. ಮಾಧ್ಯಮ ಶಕ್ತಿಯ ಸದ್ಭಳಕೆ ಇಂದಿನ ಅಗತ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದರು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಉದ್ಘಾಟಿಸಿ, ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳ ಅವ್ಯಾಹತ ಬಳಕೆಯಿಂದ ಸಮಾಜದ ಸ್ವಾಸ್ಥೃ ಹಾಳಾಗುತ್ತಿದೆ. ಮಾಧ್ಯಮಗಳು ವಾದ, ಪ್ರತಿವಾದ, ತೀರ್ಪು ನೀಡದೆ ತೀರ್ಮಾನ ಕೈಗೊಳ್ಳಲು ಓದುಗರ, ವೀಕ್ಷಕರಿಗೆ ಅವಕಾಶ ಕಲ್ಪಿಸಬೇಕು. ವಸ್ತುನಿಷ್ಠ, ನಿಪ್ಷಕ್ಷಪಾತವಾಗಿ ಮಾಧ್ಯಮಗಳು ಕೆಲಸ ಮಾಡಿದಾಗ ಪ್ರಭಾವ ಶಾಲಿಯಾಗಲು ಸಾಧ್ಯ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರಿಗೆ ಸುವರ್ಣ ಸಂಭ್ರಮ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮತ್ತು ಪತ್ರಿಕೋದ್ಯಮ ಪರಸ್ಪರ ಸಂಬಂಧ ಹೊಂದಿದ್ದು, ಸಾರ್ವಜನಿಕರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಪ್ರತಿಯೊಂದು…
ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಶಾಲೆಯಲ್ಲಿ “ಕನ್ನಡ ಸಾಹಿತ್ಯ ಪ್ರೇರಣೆ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬ್ರಹ್ಮಾವರದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಜಿ ರಾಮಚಂದ್ರ ಐತಾಳ್ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಶಾಲಾ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಕನ್ನಡ ಭಾಷೆಯ ಮಹತ್ವವನ್ನು ವಿವರಿಸಿ ಅದನ್ನು ಉಳಿಸಿ ಬೆಳೆಸುವಲ್ಲಿ ನಾವೆಲ್ಲರೂ ಸಕ್ರಿಯವಾಗಿ ತೊಡಗಿಕೊಳ್ಳಬೇಕೆಂಬ ಸಂದೇಶವನ್ನು ನೀಡಿದರು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಹನಿಗವನ ರಚನೆ, ಕವನ ಪಠಣ, ಜ್ಞಾಪಕಶಕ್ತಿ ಪರೀಕ್ಷೆ ಹೀಗೆ ಅನೇಕ ಚಟುವಟಿಕೆಗಳನ್ನು ಆಯೋಜಿಸಿದ್ದು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ವೈಯಕ್ತಿಕ ಕಲ್ಪನೆಗಳನ್ನು ಕನ್ನಡದಲ್ಲಿ ಸಮರ್ಥವಾಗಿ ಮಂಡಿಸಿದರು. ಹಲವರು ತಮ್ಮದೇ ಆದ ಕವನಗಳನ್ನು ರಚಿಸಿ ಸವಿನಯವಾಗಿ ಪಠಿಸಿದರು. ಉತ್ತಮ ಪ್ರತಿಭೆಯನ್ನು ತೋರ್ಪಡಿಸಿದ ವಿದ್ಯಾರ್ಥಿಗಳನ್ನು ಸಂಪನ್ಮೂಲ ವ್ಯಕ್ತಿಗಳು ಗೌರವಿಸಿದರು. ಜೊತೆಗೆ ಅಭಿನಯ ಗೀತೆಯನ್ನು ವಿದ್ಯಾರ್ಥಿಗಳ ಮೂಲಕ ಮಾಡಿಸಿದರು. ಕನ್ನಡ ಸಾಹಿತ್ಯದ ವಿವಿದ ಪ್ರಕಾರಗಳಾದ ಯಕ್ಷಗಾನ, ಜನಪದ ಗೀತೆ, ನಾಟಕ, ಏಕಪಾತ್ರ ಅಭಿನಯವನ್ನು ಸಂಪನ್ಮೂಲ ವ್ಯಕ್ತಿಗಳು ಮಾಡುವುದರ ಮೂಲಕ ಮಕ್ಕಳಿಗೆ…
ನಮ್ಮ ಪೂರ್ವಜರು ಅನುಸರಿಸಿಕೊಂಡು ಬಂದಿರುವ ನಮ್ಮ ಹಿಂದಿನ ಸಂಸ್ಕೃತಿ, ಸಂಪ್ರದಾಯಗಳನ್ನು ಇಂದಿನ ಯುವ ಪೀಳಿಗೆ ತಿಳಿಸುವ ಕಾರ್ಯದೊಂದಿಗೆ ಮುಂದುವರೆಸಿಕೊಂಡು ಹೋಗಲು ಪ್ರೇರಣೆ ನೀಡಬೇಕು. ಇಂತಹ ಕಾರ್ಯಕ್ಕೆ ಆಟಿಡೊಂಜಿ ಐಸಿರೊ ಕಾರ್ಯಕ್ರಮ ಪೂರಕವಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಭಿಪ್ರಾಯಪಟ್ಟರು. ಬಂಟರ ಸಂಘ ಉಳ್ಳಾಲ ವಲಯ, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗೂ ಬೆಂಗಳೂರು ಬಂಟರ ಸಂಘ ಇವರ ಸಹಯೋಗದೊಂದಿಗೆ ಇಪ್ಪತ್ತ ನಾಲ್ಕು ಗ್ರಾಮಗಳ ಸಮಾಜ ಬಾಂಧವರಿಂದ ಅಸೈಗೋಳಿ ಬಂಟರ ಭವನದಲ್ಲಿ ನಡೆದ ಆಟಿದ ಐಸಿರೊ ಹಾಗೂ ನೂತನ ವಲಯ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘ ಉಳ್ಳಾಲ ವಲಯ ಇದರ ಅಧ್ಯಕ್ಷ ರವೀಂದ್ರ ರೈ ಕಲ್ಲಿಮಾರು ಮಾತನಾಡಿ, ಸಂಘದ ಎಲ್ಲಾ ಸದಸ್ಯರು ಪದಾಧಿಕಾರಿಗಳು ಮತ್ತು ಸಮಾಜ ಬಾಂಧವರು ಸಂಘಟಿತರಾಗಿ ವಿವಿಧ ಸಮಾಜಮುಖಿ ಕಾರ್ಯ ಆಗಬೇಕು…
ಬಂಟರ ಸಂಘ ಕಾವಳಕಟ್ಟೆ ವಲಯದ ಪದಗ್ರಹಣ, ಆಟಿದ ಕೂಟ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಕೆದ್ದಳಿಕೆ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಪಶುಪಾಲನ ಕಾರ್ಯಕರ್ತ ತುಕಾರಾಂ ಶೆಟ್ಟಿಯವರು ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಾಮದಪದವು ವಲಯದ ಅಧ್ಯಕ್ಷರಾದ ವಸಂತ ಶೆಟ್ಟಿ ಕೇದಗೆ ಮತ್ತು ಉಪಾಧ್ಯಕ್ಷರಾದ ಯಶೋಧರ್ ಶೆಟ್ಟಿ ದಂಡೆ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸೀತಾರಾಮ್ ಶೆಟ್ಟಿ ಉಪಸ್ಥಿತರಿದ್ದರು. ವಲಯದ ಅಧ್ಯಕ್ಷರಾದ ಮೋಹನ್ ಶೆಟ್ಟಿ ನರ್ವಲ್ದಡ್ಡ, ಗೌರವಾಧ್ಯಕ್ಷರಾದ ಜಗನ್ನಾಥ್ ಶೆಟ್ಟಿ ಕೆದ್ದಳಿಕೆ, ಉಪಾಧ್ಯಕ್ಷರಾದ ಪ್ರದೀಪ್ ಶೆಟ್ಟಿ ಬಿಯಂತಬೆಟ್ಟು, ಲೋಕನಾಥ್ ಶೆಟ್ಟಿ ಬಂಗೇರಕೆರೆ, ಸದಾನಂದ ಪೂಂಜಾ ದೈಕಿನಕಟ್ಟೆ, ಪ್ರಕಾಶ್ ವಿ ಶೆಟ್ಟಿ ಮದ್ವ, ಸಂದರ್ ಶೆಟ್ಟಿ ಶಾಂತಿ ನಿಲಯ, ಯುವ ವಿಭಾಗದ ಅಧ್ಯಕ್ಷರಾದ ಕಿಶೋರ್ ಕುಮಾರ್ ರೈ, ಉಷಾ ಪ್ರಕಾಶ್ ಶೆಟ್ಟಿ ಮದ್ವ ಕಾಡಬೆಟ್ಟು ಹಾಗೂ ವಲಯದ ಪ್ರಮುಖರು ಭಾಗವಹಿಸಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ನಾಗೇಶ್ ರೈ ಬೆಂಗತ್ತೋಡಿ, ಗಣೇಶ್ ಶೆಟ್ಟಿ ನಡೆಸಿಕೊಟ್ಟರು. ಪ್ರಾರ್ಥನೆಯನ್ನು ಕು. ನಿಧಿಶಾ ಮತ್ತು ಕು.…
ಅಮೆರಿಕದಲ್ಲಿ ನಡೆದ ಯುಎಸ್ ಓಪನ್ ಸೂಪರ್ 300 ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಟೂರ್ನಿಯಲ್ಲಿ ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದು ದೇಶವೇ ಹೆಮ್ಮೆ ಪಡುವ ಸಾಧನೆಗೈದ ಕಾರ್ಕಳದ ರಾಮಪ್ರಕಾಶ್ ಶೆಟ್ಟಿ ಮತ್ತು ಶ್ರೀಮತಿ ಶಲ್ಮಿಲಿ ಶೆಟ್ಟಿ ದಂಪತಿಗಳ ಸುಪುತ್ರ ಆಯುಷ್ ಶೆಟ್ಟಿ ಅವರನ್ನು ಮುನಿಯಾಲು ಉದಯ ಕುಮಾರ್ ಶೆಟ್ಟಿಯವರು ಅವರ ಮನೆಗೆ ತೆರಳಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ಪುರಸಭಾ ಮಾಜಿ ಅಧ್ಯಕ್ಷರಾದ ಸುಭಿತ್ ಎನ್.ಆರ್, ಕೆ.ಎಮ್.ಎಫ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಪ್ರವೀಣ್ ಶೆಟ್ಟಿ, ಸುದರ್ಶನ್ ಬಂಗೇರ ಕಾಂತಾವರ, ಸೂರಜ್ ಶೆಟ್ಟಿ ನಕ್ರೆ, ಮಂಜುನಾಥ ಜೋಗಿ, ಸುಹಾಸ್ ಕಾವ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕ್ರಿಯೇಟಿವ್ ಕೆಸರ್ಡೊಂಜಿ ದಿನ ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮವನ್ನು 5 ಆಗಸ್ಟ್ 2025 ರಂದು ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಡಾ. ರವೀಂದ್ರ ಶೆಟ್ಟಿ ಬಜಗೋಳಿ, ರಾಜ್ಯಾಧ್ಯಕ್ಷರು, ಫೆಡರೇಷನ್ ಆಫ್ ಕ್ವಾರಿ ಮತ್ತು ಕ್ರಷರ್ ಓನರ್ಸ್ ಅಸೋಸಿಯೇಷನ್ (ರಿ) ಬೆಂಗಳೂರು ಇವರು ಉದ್ಘಾಟನಾ ಭಾಷಣದಲ್ಲಿ ಪ್ರಕೃತಿಯ ಮಹತ್ವ, ಸಾಂಸ್ಕೃತಿಕ ಪರಂಪರೆಯ ಹಿನ್ನೆಲೆ ಮತ್ತು ಯುವ ಪೀಳಿಗೆಗೆ ಉತ್ತಮವಾದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಅಗತ್ಯಗಳ ಬಗ್ಗೆ ಜಾಗೃತಿ ಮೂಡಿಸಿ ಸಭೆಯನ್ನು ಉದ್ದೇಶಿಸಿ ಮಾತುಗಳನ್ನಾಡಿದರು . ಕೆಸರಿನಲ್ಲಿ ಆಡೋದು ಕೇವಲ ಆಟವಲ್ಲ, ಅದು ಒಂದು ಅನುಭವ, ಜೀವನಕ್ಕೆ ಪಾಠ ಕಲಿಸುವ ಕ್ರಿಯೆ ಎಂದು ತಿಳಿಸಿದರು. ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ. ಬಿ. ರವರು ಪ್ರಾಸ್ತಾವಿಕ ನುಡಿಗಳನ್ನಡುತ್ತಾ ನಮ್ಮ ಸಂಸ್ಥೆಯ ವಿದ್ಯಾರ್ಥಿ ಗಳಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿರುವ ಉದ್ದೇಶಗಳ ಬಗ್ಗೆ ತಿಳಿಸುತ್ತಾ, ಆಗಮಿಸಿದ ಸರ್ವರನ್ನು ಸ್ವಾಗತಿಸಿದರು. ಸ್ಥಳ…
ಪುಣೆಯ ತ್ರಿನಿಟಿ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆದ ಸೆಂಟ್ರಲ್ ಶಾಲೆಗಳ ದಕ್ಷಿಣ ವಲಯ ಆರ್ಚರಿ ಚಾಂಪಿಯನ್ಶಿಪ್ನಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 17 ವಯೋಮಾನದ ಬಾಲಕ ಮತ್ತು ಬಾಲಕಿಯ ತಂಡ 3ನೇ ಸ್ಥಾನವನ್ನು ಪಡೆಯಿತು. ಇಂಡಿಯನ್ ರೌಂಡ್ ಟೀಮ್ ಅಂಡರ್ 17 ಬಾಲಕರ ವಿಭಾಗದಲ್ಲಿ ಆದಿತ್ಯ, ಶ್ರೀರಾಮ ಶಿವಾನಂದ, ಅಕ್ಷಯ್ ಪ್ರಕಾಶ್, ಬಸಯ್ಯ ವಿ ಸ್ವಾಮಿಯನ್ನು ಒಳಗೊಂಡ ತಂಡ 3ನೇ ಸ್ಥಾನ ಪಡೆದರೆ, ಬಾಲಕಿಯ ವಿಭಾಗದಲ್ಲಿ ಅಪೂರ್ವ ಪಿ, ಚೈತ್ರಾ ಕೆ, ಜೋನ್ನಾ ಪಾಟೀಲ್ ತಂಡವು 3ನೇ ಸ್ಥಾನ ಪಡೆಯಿತು. ಇಂಡಿಯನ್ ರೌಂಡ್ ಮಿಕ್ಸ್ ಟೀಮ್ ಅಂಡರ್ 17 ವಿಭಾಗದಲ್ಲಿ ಅಪೂರ್ವ ಪಿ, ಆದಿತ್ಯ ತಂಡ 5ನೇ ಸ್ಥಾನ ಪಡೆಯಿತು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
1929 ಜುಲಾಯಿ ತಿಂಗಳ 26 ನೇ ತಾರೀಕಿನಂದು ಕೆ ಸಂಕಪ್ಪ ಶೆಟ್ಟಿ ಹಾಗೂ ಮಹಾಲಕ್ಷ್ಮಿ ದಂಪತಿಗಳ ಮುದ್ದಿನ ಮಗನಾಗಿ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಕುಲ್ಲಂಜ ಎಂಬಲ್ಲಿ ಜನಿಸಿ, ತನ್ನ ಒಡಹುಟ್ಟಿದ ಸಹೋದರಿಯೊಂದಿಗಿನ ವಾತ್ಸಲ್ಯ, ತತ್ ತತ್ಸಂಬಂಧ ತಮ್ಮ ಭಾವನವರಾದ ಪಂಡಿತ್ ವೆಂಕಪ್ಪ ರೈಗಳ ಅಕ್ಕರೆ ಉಪ್ಪಿನಂಗಡಿಗೆ ಬರುವಂತಾಗಿತ್ತು. ಪ್ರೌಢ ಶಿಕ್ಷಣವನ್ನು ಪಡೆದ ಬಳಿಕ ಭಾವ ವೆಂಕಪ್ಪ ರೈಯವರ ಮಾರ್ಗದರ್ಶನದಲ್ಲಿ ಔಷಧಿ ತಯಾರಿಕೆಯಲ್ಲಿ ನೈಪುಣ್ಯತೆಯನ್ನು ಪಡೆದು, ಬ್ರಿಟಿಷ್ ಸರಕಾರದ ಅವಧಿಯಲ್ಲಿ ನಡೆಸುತ್ತಿದ್ದ ಪಾರಂಪರಿಕ ವೈದ್ಯ ಶಾಸ್ತ್ರದ ವೈದ್ಯ ವಿಶಾರದಾ ಪದವಿ ಪರೀಕ್ಷೆಯನ್ನು ಉತ್ತೀರ್ಣರಾಗಿ ವೈದ್ಯ ಕೆ ಎಸ್ ಶೆಟ್ಟಿ ಎಂಬ ಹೆಸರಿನೊಂದಿಗೆ ಜನಾನುರಾಗಿಯಾಗಿದ್ದರು. ಈ ಮಣ್ಣಿನಲ್ಲಿ ದೈವದತ್ತವಾಗಿ ಲಭಿಸಿರುವ ಔಷಧೀಯ ಗುಣಗಳನ್ನು ಹೊಂದಿರುವ ಗಿಡಮೂಲಿಕೆಗಳ ಬಗ್ಗೆ ಅಮೂಲಾಗ್ರ ಮಾಹಿತಿಯನ್ನು ಹೊಂದಿ, ದ.ಕ ಜಿಲ್ಲೆಯ ಶಿರಾಡಿ ದಟ್ಟಾರಣ್ಯದವರೆಗೂ ಸಂಚರಿಸಿ ಗಿಡಮೂಲಿಕೆಗಳನ್ನು ಸಂಗ್ರಹಿಸಿ ಬಗೆ ಬಗೆಯ ಔಷಧಿಗಳನ್ನು ತಯಾರಿಸಿದ ಹೆಗ್ಗಳಿಕೆಯನ್ನು ಹೊಂದಿದ್ದ ಇವರು ವೈದ್ಯ ಪರಂಪರೆಯ ಶ್ರೇಷ್ಠತೆಯನ್ನು ಬೆಳಗಿಸಿದ್ದರು. ಅಂದು ತನ್ನ 13ನೇ ವಯಸ್ಸಿನಲ್ಲಿ…
ಬದಿಯಡ್ಕ ಬಂಟರ ಸಂಘದ ನೇತೃತ್ವದಲ್ಲಿ ಆಟಿದ ಕೂಟ, ಬಂಟರ ಸಮ್ಮಿಲನ ಕಾರ್ಯಕ್ರಮವು ಇಲ್ಲಿನ ಇರಾ ಸಭಾಭವನ ವಲಮಲೆಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದಿಯಡ್ಕ ಬಂಟರ ಸಂಘದ ಅಧ್ಯಕ್ಷ ನಿರಂಜನ ರೈ ಪೆರಡಾಲ ವಹಿಸಿದರು. ಜಿಲ್ಲಾ ಬಂಟರ ಭವನದ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ, ಕೊಡುಗೈ ದಾನಿ ಡಾ| ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, “ಬಂಟರು ಈ ಭೂಮಿಯ ಮೂಲ ನಿವಾಸಿಗಳು. ತುಳುನಾಡಿನ ಪ್ರತಿಯೊಂದು ಆಚರಣೆಯ ಕಾರಣೀ ಭೂತರು ಬಂಟ ಸಮಾಜದವರು. ತುಳುನಾಡಿಗೆ ಬಂಟರು ಕೊಟ್ಟ ಕೊಡುಗೆ ಅಪಾರವಾಗಿದೆ. ರಕ್ತಗತವಾಗಿ ನಾಯಕತ್ವ ಗುಣವನ್ನು ಬೆಳೆಸಿಕೊಂಡು ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಶೈಕ್ಷಣಿಕ ಕ್ಷೇತ್ರ, ಸಂಸ್ಕೃತಿ ಕಲೆಗಳಲ್ಲಿ ಬಂಟರು ತಮ್ಮನ್ನು ತೊಡಗಿಸಿಕೊಂಡು ಒಂದು ಭಾಗವನ್ನು ಸಮಾಜಕ್ಕೆ ಅರ್ಪಿಸುತ್ತಿದ್ದಾರೆ ಎಂದರು. ಮುಖ್ಯ ಅತಿಥಿಯಾಗಿ ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಐ ಸುಬ್ಬಯ್ಯ ರೈ ಮಾತನಾಡಿ, ಆಗಸ್ಟ್ 10 ರಂದು ಜಿಲ್ಲಾ ಬಂಟರ ಸಂಘದ ಸಹಯೋಗದೊಂದಿಗೆ ಡಾ| ಸದಾಶಿವ ಶೆಟ್ಟಿ ಕುಳೂರು ಕನ್ಯಾನ…