Author: admin

ಖ್ಯಾತ ಪತ್ರಕರ್ತೆ ಅಂಕಣಕಾರ್ತಿ ಶ್ರೀಮತಿ ಕವಿತಾ ಅಡೂರ್ ಅವರ ಸಾಹಿತ್ಯದ ಉತ್ಕಟ ಪ್ರೀತಿ ಅಭಿವ್ಯಕ್ತದ ಗೀತೆಯನ್ನು ವಿ ಮನೋಹರ್ ಸಂಗೀತ ಸಂಯೋಜನೆಯಲ್ಲಿ ಐಲೇಸಾದ ಯುವ ಗಾಯಕಿ ಸುಮಾ ಕೋಟೆ ಭಾವಪೂರ್ಣವಾಗಿ ಹಾಡಿದ್ದಾರೆ. ಐಲೇಸಾದಲ್ಲಿ ಈ ಹಿಂದೆ ತುಳುವೆರ್ ಸಿಂಗಾಪುರ ಕೂಟದ ಸ್ಥಾಪಕ ಅಧ್ಯಕ್ಷ ರಾಜೇಶ್ ಆಚಾರ್ಯ ಕೃತಕ ಬುದ್ಧಿಮತ್ತೆಯ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರು. ಮೊದಲ ಬಾರಿಗೆ AI ತಂತ್ರಜ್ಞಾನ ಬಳಸಿ ಐಲೇಸಾ ಮ್ಯೂಸಿಕ್ ಚಾನೆಲ್ ಈ ಹಾಡಿನ ವಿಡಿಯೋವನ್ನು ತಯಾರಿಸಿದ್ದು ತುಳುವೆರ್ ಸಿಂಗಾಪುರದ ಸಹಕಾರದಲ್ಲಿಯೇ ಈ ಹಾಡನ್ನು ಬಿಡುಗಡೆಗೊಳಿಸಲು ಬಯಸಿತ್ತು. ರಾಜೇಶ್ ಆಚಾರ್ಯ ತಮ್ಮ ಸಂಸ್ಥೆಯ ಸದಸ್ಯರ ಜೊತೆ ಸೇರಿಕೊಂಡು ಬ್ರಹ್ಮಾವರ ರಾಕೇಶ್ ಶೆಟ್ಟಿ, ಪ್ರಶಾಂತ್ ರಾವ್ ಪೇಜಾವರ, ನಲ್ಲೂರು ಆನಂದ ಶೆಟ್ಟಿ, ಭರಣಗೆರೆ ನಿತ್ಯಾನಂದ ಹೆಗ್ಡೆ, ರಾಜೇಶ್ ಹಯವದನ ಆಚಾರ್ಯ ಇವರ ಮುತುವರ್ಜಿಯಿಂದ ಈ ಹಾಡಿನ ಲೋಕಾರ್ಪಣೆಗೆ ಸಹಕಾರವಿತ್ತಿದ್ದಾರೆ. ಗುಜರಾತಿನ ರಾಮ್ ಪಟೇಲ್ ವೀಡಿಯೊ ತಯಾರಿಸಿದರೆ ಸುಮಾ ಕೋಟೆ ಸಹಕರಿಸಿದ್ದಾರೆ. ಹಾಡನ್ನು ಈ ತಿಂಗಳ 31 ರಂದು ಸಂಜೆ ಆರು ಗಂಟೆಗೆ…

Read More

ಬಂಟರ ಯಾನೆ ನಾಡವರ ಮಾತೃ ಸಂಘ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವ ಸ್ಫರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ಸದಸ್ಯರು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ತ್ರೋಬಾಲ್ ಪಂದ್ಯಾಕೂಟದಲ್ಲಿ ದ್ವಿತೀಯ ಪ್ರಶಸ್ತಿ ಗಳಿಸಿದರು. ಪ್ರಶಸ್ತಿಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ, ಲೋಟಸ್ ಪ್ರಾಪರ್ಟಿಸ್ ನ ಎಂಡಿ ಸಂಪತ್ ಶೆಟ್ಟಿ, ಗಣೇಶ್ ಶೆಟ್ಟಿ, ಸುಂದರ ಶೆಟ್ಟಿ, ರತ್ನಾಕರ ಶೆಟ್ಟಿ, ರವೀಂದ್ರನಾಥ ಶೆಟ್ಟಿ, ಉದಯಕುಮಾರ್ ಶೆಟ್ಟಿ, ಜಯಶೀಲ ಅಡ್ಯಂತಾಯ, ವಸಂತ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ, ಸುಬ್ಬಯ್ಯ ರೈಯವರು ವಿತರಿಸಿದರು. ಪ್ರಶಸ್ತಿಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರು ಹಾಗೂ ಮಹಿಳಾ ಕ್ರೀಡಾ ಕಾರ್ಯದರ್ಶಿ ಬಬಿತಾ ಶೆಟ್ಟಿ ಸ್ವೀಕರಿಸಿದರು. ಸಂಘದ ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ…

Read More

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಒಂದು ಸರ್ಕಾರೇತರ ಸಂಸ್ಥೆಯಾಗಿದ್ದು, ಮಂಗಳೂರು ಮತ್ತು ಉಡುಪಿ ಜಿಲ್ಲೆಗಳ ಜನರ ಜೀವನಶೈಲಿಯನ್ನು ಸುಧಾರಿಸಲು ಹಾಗೂ ಅವಳಿ ಜಿಲ್ಲೆಗಳ ಕೈಗಾರಿಕಾ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಗೆ ನಿರಂತರವಾಗಿ ಶ್ರಮಿಸುತ್ತಿದೆ. ಸಮಿತಿಯ ಈ ಬೆಳ್ಳಿಹಬ್ಬದ ವರ್ಷದಲ್ಲಿ, ಮುಂಬಯಿಯ ಕೇಂದ್ರ ಸಮಿತಿಯ ಪದಾಧಿಕಾರಿಗಳು ಹಾಗೂ ಸಮಿತಿಯ ಜಿಲ್ಲಾ ಸಮಿತಿಯ ( ದಕ್ಷಿಣ ಕನ್ನಡ/ ಉಡುಪಿ) ಪದಾಧಿಕಾರಿಗಳು ನಿರಂತರ ಕಾರ್ಯ ಚಟುವಟಿಕಿಯೊಂದಿಗೆ ಹಲವಾರು ಜನಪರ ಕಾರ್ಯಗಳತ್ತ ಗಮನ ಹರಿಸಿ ಅವಿರತವಾಗಿ ಪ್ರಯತ್ನಿಸುತ್ತಿದ್ದಾರೆ. ಈ ಹಂತದಲ್ಲಿ ಸಮಿತಿಯ ಈಗಿನ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಎಂ ಶೆಟ್ಟಿ ಇವರು ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣ ಅಧಿಕಾರಿ ರಾಜೇಶ್ ಶೆಟ್ಟಿ ಅವರನ್ನು ಭೇಟಿ ಮಾಡಿ ಎರಡು ಹೊಸ ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಯನ್ನು ಪ್ರಾರಂಭಿಸಲು ಮನವಿ ಮಾಡಿದರು. ಈ ಮನವಿಯಲ್ಲಿ ಒಂದು ಮಾರ್ಗವು ಸ್ಟೇಟ್‌ಬ್ಯಾಂಕ್ ಮಂಗಳೂರು – ಮಂಗಳೂರು ವಿಮಾನ ನಿಲ್ದಾಣ- ಸ್ಟೇಟ್ ಬ್ಯಾಂಕ್ ಮಂಗಳೂರು ಆಗಿರುತ್ತದೆ. ಎರಡನೇ ಮಾರ್ಗವು ಮಣಿಪಾಲ (ಉಡುಪಿ ಮೂಲಕ) -…

Read More

ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು  ‘ನಿಮಗೆ ನೀವೇ ಕನ್ನಡಿಯಾಗಿ’ ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ಅಸಿಸ್ಟೆಂಟ್ ಪ್ರೊಫೆಸರಾದ ಡಾ. ಅನುರಾಧ ಕುರುಂಜಿ ನಡೆಸಿಕೊಟ್ಟರು. “ತಂದೆ ತಾಯಿ ಮತ್ತುಗುರುಗಳಿಗೆ ಗೌರವ ನೀಡಿ ಓದಿನಲ್ಲಿ ಕಠಿಣ ಶ್ರಮವನ್ನು ಹಾಕಿದ್ದಲ್ಲಿ ಖಂಡಿತ ಉತ್ತುಂಗ ಮಟ್ಟಕ್ಕೆ ಏರಬಹುದು. ಸಿಕ್ಕ ಅವಕಾಶವನ್ನು ಬಾಚಿಕೊಳ್ಳುವವನೇ ಜಾಣ. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಪ್ರತಿಕ್ಷಣವೂ ಕೂಡ ಅಮೂಲ್ಯವಾದದ್ದು, ಋಣಾತ್ಮಕ ಚಿಂತನೆಯನ್ನು ಬಿಟ್ಟು ಧನಾತ್ಮಕವಾಗಿ ಆಲೋಚಿಸಿದಾಗ ನಮ್ಮ ಪ್ರಗತಿ ಸಾಧ್ಯ.” ಎಂದು ವಿದ್ಯಾರ್ಥಿಗಳೊಂದಿಗೆ ಗಾದೆ, ಮನೋರಂಜನೆಯ ಆಟಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತುಗಳನ್ನಾಡಿದರು.ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಹಾಗೂ ಸಹ ಸಂಸ್ಥಾಪಕರಲ್ಲಿ ಓರ್ವರಾದ ಶ್ರೀ ಆದರ್ಶ ಎಂ.ಕೆ. ಮತ್ತು ಉಪನ್ಯಾಸಕ ವರ್ಗ, ಬೋಧಕೇತರ…

Read More

ಗಣೇಶ ಚತುರ್ಥಿಗೆ ಐತಿಹಾಸಿಕ ಹಿನ್ನಲೆ ಇದೆ. ಪರಕೀಯರನ್ನು ದೂರ ಮಾಡಿದ ಶಕ್ತಿ ಗಣೇಶನಿಗೆ ಇದೆ. ಹೀಗಾಗಿ ಗಣೇಶೋತ್ಸವ ಸಮಾರಂಭದಲ್ಲಿ ಶಿಸ್ತು ಶ್ರದ್ದೆ ಮುಖ್ಯ. ಗಣೇಶೋತ್ಸವ ಕೇವಲ ಧಾರ್ಮಿಕ ಸಭೆ ಸಮಾರಂಭಗಳಿಗೆ ಸೀಮಿತವಾಗದಿರಲಿ. ಗಣೇಶೋತ್ಸವ ಸಂದರ್ಭದಲ್ಲಿ ನಾವೆಲ್ಲರೂ ನಮ್ಮ ನಗರವನ್ನು ಸ್ವಚ್ಛ ಸುಂದರವನ್ನಾಗಿಸಲು ಪಣ ತೊಡೋಣ. ನಮಗೆ ಪರಿಸರ ಕಾಳಜಿಯೂ ಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮಂಗಳೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಲೆಫ್ಟಿನೆಂಟ್ ಕಮಂಡರ್ ರಮಾನಾಥ ಶೆಟ್ಟಿ ಮತ್ತು ಕ್ಷಮಾ ರಮಾನಾಥ ಶೆಟ್ಟಿ ಧ್ವಜಾರೋಹಣಗೈದರು. ಡಾ. ಮಹಾಬಲ ರೈ ಮತ್ತು ಮಲ್ಲಿಕಾ ಎಂ ರೈ ತೆನೆ ವಿತರಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಕೊಡಿಯಾಲ್ ಗುತ್ತು ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ…

Read More

ಬೆಳ್ಮಣ್ ವಲಯ ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ವಾರ್ಷಿಕ ಸಮಾವೇಶ ಆಗಸ್ಟ್ 24ರಂದು ಬೆಳ್ಮಣ್ ನ ಹೋಟೆಲ್ ಸೂರಜ್ ಇನ್ ಸಭಾಂಗಣದಲ್ಲಿ ನಡೆಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿಯವರು ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ನೆರವೇರಿಸಿ ಪ್ರತಿಜ್ಞಾವಿಧಿ ಬೋಧಿಸಿದರು. ಮುನಿಯಾಲು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮುನಿಯಾಲ್ ಸಂದರ್ಭೋಚಿತ ಮಾತುಗಳನ್ನಾಡಿದರು. ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಪನ್ಯಾಸಕಿ ಸುಧಾರಾಣಿಯವರು ಬಂಟ ಸಮುದಾಯದ ಹಿನ್ನೆಲೆ, ಸಂಪ್ರದಾಯದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮುಂಬೈಯ ಉದ್ಯಮಿ ಕೃಷ್ಣ ಶೆಟ್ಟಿ ಕಾಪಿಕೆರೆ ನಂದಳಿಕೆ, ಬಾಂಬೆ ಬಂಟ್ಸ್ ಅಸೋಸಿಯೇಷನ್ ಇದರ ನಿಕಟಪೂರ್ವ…

Read More

ಬೇರೆಯವರಲ್ಲಿ ನಿರೀಕ್ಷಿಸುವ ಗುಣಮಟ್ಟ ನಮ್ಮಲ್ಲೂ ಇರಬೇಕು. ಜೀವನದಲ್ಲಿ ಒಮ್ಮೆಯಾದರೂ ಸತ್ಯ, ನ್ಯಾಯ, ಆದರ್ಶ ಮೌಲ್ಯಕ್ಕಾಗಿ ದೃಢವಾಗಿ ನಿಂತರೆ ನಿಮ್ಮ ಜೀವನ ಸಾರ್ಥಕ ಎಂದು ಜಿಲ್ಲಾ ಎಸ್ ಪಿ ಹರಿರಾಮ್ ಶಂಕರ್ ಹೇಳಿದರು. ಆಗಸ್ಟ್ 24 ರಂದು ಕುಂದಾಪುರ ಬಂಟರ ಭವನದ ಆರ್.ಎನ್ ಶೆಟ್ಟಿ ಸಭಾಭವನದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನಡೆದ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ, ದಿ. ಎಂ ಗೋಪಾಲಕೃಷ್ಣ ಶೆಟ್ಟಿ ಸಂಸ್ಮರಣ ಪ್ರಗತಿಪರ ಕೃಷಿಕ ಪ್ರಶಸ್ತಿ, ಹಿರಿಯ ಸಾಧಕ ಗಣ್ಯರಿಗೆ ಗೌರವಾರ್ಪಣೆ, ದಿ. ಡಾ| ಮಧುಕರ ಶೆಟ್ಟಿ ಸಂಸ್ಮರಣ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಜೆ.ಎನ್.ಎಸ್ ಕನ್ಸ್ಟ್ರಕ್ಷನ್ ಮತ್ತು ಮನಿಷ್ ಗ್ರೂಪ್ ಆಫ್ ಹೋಟೆಲ್ಸ್ ಇದರ ಸಿಎಂಡಿ ಜಯಶೀಲ ಶೆಟ್ಟಿ ಘಟಪ್ರಭಾ, ಹೆರಂಭ ಗ್ರೂಪ್ ನ ಸಿಎಂಡಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿದರು. ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ ನೀರ್ಕೋಡ್ಲು ಚಂದ್ರಶೇಖರ ಶೆಟ್ಟಿ ಅವರಿಗೆ ದಿ. ಎಂ…

Read More

ಎಲ್ಲಾ ಜಾತಿ, ಮತ, ಧರ್ಮದವರನ್ನು ಗೌರವಿಸುವ ಸಾಮರಸ್ಯದ ಮನೋಭಾವನೆ ಬೆಳೆಸಿಕೊಂಡಿರುವುದೇ ಇಂದು ಬದುಕಿಗೆ ಶಕ್ತಿ ತುಂಬಿದೆ. ಉತ್ತಮ ಸಂಸ್ಕಾರದ ಜತೆಗೆ ಸಾಮರ್ಥ್ಯ ಅರಿತು ದುಡಿದ ಪರಿಣಾಮ ಬದುಕಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದು ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್‌ನ ಛೇರ್ಮನ್ ಡಾ. ಎಂ. ಮೋಹನ ಆಳ್ವ ಹೇಳಿದರು. ನಗರದ ಎ.ಜೆ.ಗ್ರಾೃಂಡ್ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ಸ್ವೀಕರಿಸಿ ಅವರು ಮಾತನಾಡಿದರು. ಬಾಲ್ಯದಿಂದಲೇ ಕಲೆ ಮತ್ತು ಕ್ರೀಡೆಯಲ್ಲಿ ಆಸಕ್ತಿ ಹೊಂದಿದೆ. ಸಾಂಸ್ಕೃತಿಕ ಕ್ಷೇತ್ರ ಬದುಕಿಗೆ ಒಳ್ಳೆಯ ಮೌಲ್ಯಗಳನ್ನು ನೀಡಿದರೆ, ಕ್ರೀಡೆಯ ಮೇಲಿನ ಆಸಕ್ತಿ ಹೋರಾಟದ ಮನೋಭಾವನೆ ಬೆಳೆಸಿಕೊಳ್ಳಲು ಸಹಕಾರಿಯಾಯಿತು ಎಂದು ಡಾ. ಆಳ್ವ ಹೇಳಿದರು. ಮುಖ್ಯ ಅತಿಥಿಯಾಗಿದ್ದ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಡಾ. ಎಂ. ಶಾಂತಾರಾಮ ಶೆಟ್ಟಿ ಮಾತನಾಡಿ ‘ಡಾ. ಎಂ. ಮೋಹನ ಆಳ್ವ ಅವರ ಸಾಧನೆ ಬಂಟ ಸಮಾಜಕ್ಕೆ ಪ್ರೇರಣಾ ಶಕ್ತಿಯಾಗಿದೆ’…

Read More

ಉಡುಪಿ ಜಿಲ್ಲೆ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಉಡುಪಿ ಇವರು ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಜೂನಿಯರ್ ಮತ್ತು ಸೀನಿಯರ್- 23 ಅಥ್ಲೆಟಿಕ್ ಮೀಟ್- 2025ರಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ಸಮಿತ್ ಜಾವೆಲಿನ್ ಎಸೆತದಲ್ಲಿ ಮೂರನೇ ಸ್ಥಾನ ಗಳಿಸಿದ್ದಾನೆ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಬಿ ಶೆಟ್ಟಿ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿ, ಅರುಣ್ ಮಾನೆ ತರಬೇತಿ ನೀಡಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

Read More

ಪ್ರತಿಯೊಂದು ಹೊಸ ಕಾರ್ಯಕಾರಿ ಸಮಿತಿ ರಚನೆಯಾದಾಗ ಅನುಸರಿಸಿಕೊಂಡು ಬರುವಂತೆ ಈ ಸಾರಿಯೂ ಭಾವಚಿತ್ರದೊಂದಿನ ನಿರ್ದೇಶಿಕ ಪುಸ್ತಕವನ್ನು ಮುದ್ರಿಸಿ, ಪ್ರತಿಯೊಬ್ಬ ಸಮಿತಿ ಸದಸ್ಯರಿಗೆ, ಪೋಷಕರಿಗೆ ಮತ್ತು ಹಿತ್ಯೇಷಿಗಳಿಗೆ ಹಂಚುವ ಕಾರ್ಯಕ್ರಮ ನಡೆಯಿತು. ಭಾವಚಿತ್ರದೊಂದಿಗೆ ಮುದ್ರಿತವಾದ ನಿರ್ದೇಶಿಕ ಪುಸ್ತಕವನ್ನು ಶ್ರೀಧರ ಶೆಟ್ಟಿ (ಕಾರ್ಯದಕ್ಷರು, ಶೈಕ್ಷಣಿಕ ಸಮಿತಿ ಹಾಗೂ ನಿರ್ದೇಶಿಕ ಪುಸ್ತಕದ ಉಸ್ತುವಾರಿ) ಅವರ ದಿವ್ಯ ಹಸ್ತದಿಂದ, ಅಸೋಸಿಯೇಷನ್ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿ, ಪದಾಧಿಕಾರಿಗಳು, ವಿಶ್ವಸ್ಥ ಮಂಡಳಿ ಮತ್ತು ಸಮಿತಿ ಸದಸ್ಯರ ಸಮಕ್ಷಮದಲ್ಲಿ ಆಗಸ್ಟ್ 23 ರಂದು ನಿತ್ಯಾನಂದ ಸಭಾಗೃಹ ಸಯನ್ ಇಲ್ಲಿ ಬಿಡುಗಡೆಗೊಳಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿಯವರು ಶ್ರೀಧರ ಶೆಟ್ಟಿಯವರಿಗೆ ಹೂಗುಚ್ಚವನ್ನು ಕೊಟ್ಟು ಗೌರವಿಸಿ ಮಾತನಾಡಿ, ಅವರು ಮಾಡಿದ ಘನತರದ ಕೆಲಸ ಅಂದರೆ ಎಲ್ಲಾ ಸದಸ್ಯರ ಮಾಹಿತಿಯನ್ನು ಸಂಗ್ರಹಿಸಿ, ನಿಪುಣತೆಯಿಂದ, ಅಚ್ಚುಕಟ್ಟಾಗಿ ಸೂಕ್ಷ್ಮತೆಯಿಂದ ಮುದ್ರಿಸಿದ ವಿಚಾರವಾಗಿ ಶ್ಲಾಘನೆ ಮಾಡಿದರು. ಈ ಪುಸ್ತಕದಲ್ಲಿ ವಿಘ್ನ ನಿವಾರಕ ಶ್ರೀ ಗಣಪತಿಯ ಚಿತ್ರದೊಂದಿಗೆ ಪ್ರಾರಂಭವಾಗಿ, ಮುನ್ನುಡಿ, ವಿಶ್ವ ಬಂಟಗೀತೆ, ಬಂಟರ ಉಪನಾಮಗಳ ಹೆಸರು…

Read More