Author: admin
ಪಾರೊಂದು ಬತ್ತುಂಡ್ ಪೊಸ ವರ್ಷ ಸೇರಾವೊಂದ್ ತಿಗ ನೆಯಿತ್ತ ಚೀಪೆನ್ l ದೂರ ಮಲ್ತೊಂದ್ ಕೈಪೆ ನೆನೆಪುಲೆನ್ ಬೆರಿ ಪತ್ತೊಂದ್ ಕೋಡ್ಯೆತ್ತಾಯೆರೆ ಕನೊಕ್ಲೆನ್ll ಎಡ್ಡೆ ವಿಷಯೊನ್ ಮದಪಂದೆ ಒರಿಪೊಡ್ ಮೊಡೆತಿ ಕುರ್ಕಿಲ್ದಂಚಿತ್ತಿನ ದಿಂಜಿ ಮನಸ್ಸ್ಡ್ l ಉಡಲ್ಡ್ ಕಮ್ಮೆನೆದ ಪುರ್ಪ ಪಾರಾವೊಡ್ ಎಡ್ಡೆ ಬದ್ಕ್ಗಾದ್ ಮೋಕೆದ ಸೇಸೆ ಬಿರ್ಕೊಡ್ ll ಕೊಸಿತ್ತ ತುಡಾರ್ ಏಪಲಾ ಅರ್ಲೊಂದಿಪ್ಪೊಡ್ ಅರ್ತಿ ಪಿರ್ತಿಡ್ ಸಂಬಂದೊ ಬುಲೆವೊಡ್ l ದೈವೊಲ್ ಎಡ್ಡೆಪ್ಪುದ ಸಾದಿ ತೊದೆಪಾವಡ್ ಮಾತೆರ್ನಲಾ ಬದ್ಕ್ಡ್ ಸುಕೊ ನಲಿಪೊಡ್ ll ವರ್ಷ ಕರಿವುಂಡ್ ಆಯುಷ್ಯ ಕಲೆವುಂಡ್ ನಾಲು ದಿನತ್ತ ಬಾಳು ನಮ್ಮವು ತೆರಿವೊಡ್ l ಮಾತೆರ್ಲಾ ಪೊಡಮಿ ಅಪ್ಪೆನ ಮಟ್ಟೆಲ್ಡ್ ನೇಸರ ದೇಬೆರ್ಲಕ ಕಾಂತಿ ಪಸರಾವೊಡ್ ll ಶೋಭಾ ಎಸ್.ಶೆಟ್ಟಿ ನೆಲ್ಲಿದಡಿಗುತ್ತು
ಇರಾ, ಮಂಚಿ, ಬೋಳಂತೂರು ಗ್ರಾಮದ ಭಕ್ತರಿಂದ ಆರಾಧಿಸಲ್ಪಡುತ್ತಿರುವ ಅರಸು ಕುರಿಯಾಡ್ದಾರ್ ಮೂವೆರ್ ದೈವಗಳಿಗೆ ಇರಾ ಪಾತ್ರಾಡಿಗುತ್ತುವಿನ ಸಾಮಾನಿ ನಾಮಾಂಕಿತ ಗಡಿ ಪ್ರದಾನವು ಇರಾ ಪಾತ್ರಾಡಿಗುತ್ತು ಕುಟುಂಬಿಕರಿಂದ ಆಯ್ಕೆಯಾಗಿರುವ ಪುಷ್ಪರಾಜ ಶೆಟ್ಟಿ ಅವರಿಗೆ ನಡೆಯಲಿದೆ. ಈ ಸಂಬಂಧ ಇರಾ ಪಾತ್ರಾಡಿಗುತ್ತು ಮನೆಯಲ್ಲಿ ಕುಟುಂಬಿಕರ ಸಮಾಲೋಚನ ಸಭೆಯಲ್ಲಿ ಕುಟುಂಬದ ದೇವತಾ ಕಾರ್ಯಗಳು ಹಾಗೂ ಇನ್ನಿತರ ಕೆಲಸ ಕಾರ್ಯಗಳನ್ನು ಸುಸೂತ್ರವಾಗಿ ನಡೆಸಲು ಪಾತ್ರಾಡಿಗುತ್ತು ಚಾರಿಟೇಬಲ್ ಟ್ರಸ್ಟ್ ರಚಿಸಲಾಯಿತು. ಗಡಿ ಪ್ರಧಾನ ಕಾರ್ಯಕ್ರಮ ವಿಧಿವತ್ತಾಗಿ ಜನವರಿ 4 ರಂದು ಸಂಜೆ 5ರಿಂದ ರಾತ್ರಿ 10ರವರೆಗೆ ಶ್ರೀ ದೈವಗಳಿಗೆ ನಡೆಯುವ ಕುರಿಯಾಡಿ ಸಾರದ ಮಂಜಪಿಲ ನೇಮದ ಸಂದರ್ಭದಲ್ಲಿ ನಡೆಯಲಿದೆ. ಜನವರಿ 12 ರಂದು ಗಡಿಪ್ರದಾನ ಕೃತಜ್ಞತಾ ಸಮಾರಂಭವು ಇರಾ ಬಂಟರ ಭವನದಲ್ಲಿ ಜರಗಲಿದೆ. ಬಡಾಜೆಬೀಡು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳು ಆಶೀರ್ವಚನ ನೀಡಲಿದ್ದಾರೆ. ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಮಂಜುನಾಥ್ ಭಂಡಾರಿ, ಶ್ರೀದೇವಿ ಎಜುಕೇಶನ್ ಟ್ರಸ್ಟ್ ನ ಮುಖ್ಯಸ್ಥ…
ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನೂತನ ಅಧ್ಯಕ್ಷರಾಗಿ ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ರತ್ನಾಕರ ಶೆಟ್ಟಿ ನಡಿಕೆರೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಅಧಿಕಾರಿ ಮತ್ತು ದತ್ತಿ ಇಲಾಖೆ ಆಯುಕ್ತ ಪ್ರಶಾಂತ್ ಕುಮಾರ್ ಶೆಟ್ಟಿ ಮತ್ತು ಕಾರ್ಯ ನಿರ್ವಹಣಾಧಿಕಾರಿ ರವಿ ಕಿರಣ್ ಉಪಸ್ಥಿತಿಯಲ್ಲಿ ನೂತನ ವ್ಯವಸ್ಥಾಪನ ಸಮಿತಿ ಸದಸ್ಯರ ಸಭೆಯಲ್ಲಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ರತ್ನಾಕರ ಶೆಟ್ಟಿ ನಡಿಕೆರೆ ಅವರು ಹೊಸ ಮಾರಿಗುಡಿ ದೇವಸ್ಥಾನದ ಮೊಕ್ತೇಸರರಾಗಿ, ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ಡಿಸೆಂಬರ್ 29 ರಂದು ಪಡುಬಿದ್ರಿಯಲ್ಲಿ ನಡೆದ ಅಂತರ್ ರಾಜ್ಯ ಬಂಟ ಕ್ರೀಡೋತ್ಸವದಲ್ಲಿ ಬೆಂಗಳೂರು ಬಂಟರ ಸಂಘದ ಮಹಿಳಾ ತ್ರೋಬಾಲ್ ತಂಡ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ, ದ್ವಿತೀಯ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿ ಎಂ.ಆರ್.ಜಿ ಟ್ರೋಫಿ ಹಾಗೂ ರೂಪಾಯಿ 40,001 ನಗದನ್ನು ತನ್ನದಾಗಿಸಿಕೊಂಡಿತು. ಟ್ರೋಫಿಯನ್ನು ಸುರೇಂದ್ರ ಶೆಟ್ಟಿ (ಛೇರ್ ಪರ್ಸನ್, ಕ್ರೀಡಾ ಸಮಿತಿ) ಸಬನ್ ಶೆಟ್ಟಿ (ಸಂಚಾಲಕರು, ಕ್ರೀಡಾ ಸಮಿತಿ) ಹಾಗೂ ಮಹಿಳಾ ತಂಡ ಅದಾನಿ ಗ್ರೂಪ್ ನ ಕಿಶೋರ್ ಆಳ್ವ, ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಹಾಗೂ ಪದಾಧಿಕಾರಿಗಳಿಂದ ಸ್ವೀಕರಿಸಿದರು.
ಬ್ರಹ್ಮಾವರ : ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ವಿಜ್ಞಾನ ಮಾದರಿ, ಕಲೆ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಜೆ.ಸಿ.ಐ.ನ ಸೆನೆಟರ್, ರಾಷ್ಟ್ರೀಯ ತರಬೇತುದಾರ ರಾಜೇಶ್ ಡಿ ಶೆಣೈ ಆಗಮಿಸಿದ್ದರು. ಅವರು ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ ನೀವೆಲ್ಲರೂ ಇಂದು ವಿಜ್ಞಾನಿಗಳಾಗಿ ಕಾಣುತ್ತಿದ್ದೀರಿ. ತಾವೆಲ್ಲರೂ ವಿಜ್ಞಾನ ಮಾದರಿಗಳನ್ನು ತಯಾರಿಸಲು ಮೊದಲು ಪೂರ್ವ ಯೋಜನೆಗಳನ್ನು ಮಾಡಿ ವೈಜ್ಞಾನಿಕ ದೃಷ್ಟಿ ಕೋನದಲ್ಲಿ ವಸ್ತುಗಳನ್ನು ಸಂಗ್ರಹಿಸಿ, ಮಾದರಿಯನ್ನು ತಯಾರಿಸಿ ಪ್ರದರ್ಶನಕ್ಕೆ ಇಟ್ಟಿದ್ದೀರಿ. ಇಲ್ಲಿ ಪಡೆದ ಅನುಭವದಿಂದ ಮುಂದಿನ ದಿನಗಳಲ್ಲಿ ಅತ್ಯದ್ಭುತವನ್ನು ಸೃಷ್ಟಿಸಲಿದ್ದೀರಿ. ಈಗ ನೀವು ಸಾಕಷ್ಟು ಕುತೂಹಲವನ್ನು ಹೊಂದಿದ್ದರೆ ಆವಿಷ್ಕಾರದ ಮೂಲ ಏನು ಎಂದು ಕಂಡುಹಿಡಿಯಬಹುದೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ನಮ್ಮ ಮೊದಲ ಹೆಜ್ಜೆ ಯಾವಾಗಲೂ ಅತ್ಯುತ್ತಮವಾಗಿರಬೇಕು. ಮಹತ್ತರ ಗುರಿಯೊಂದಿಗೆ ಇಟ್ಟ ಮೊದಲ ಹೆಜ್ಜೆಯಲ್ಲಿ ಸೋತರೂ ಅದರ ಬಗ್ಗೆ ಚಿಂತಿಸಬಾರದು. ನನ್ನಿಂದ ಎಲ್ಲವೂ ಸಾಧ್ಯವೆನ್ನುವ ಸಕಾರಾತ್ಮಕ ಚಿಂತನೆಯೊಂದಿಗೆ ಮುನ್ನುಗ್ಗಬೇಕೆಂದರು. ವಿದ್ಯಾರ್ಥಿಗಳ ಕಲಾಕುಂಚದಲ್ಲಿ ಅರಳಿದ…
ಮೂಡುಬಿದಿರೆ: ಒಡಿಶಾದ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಸಂಸ್ಥೆಯಲ್ಲಿ, ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಸಹಭಾಗಿತ್ವದಲ್ಲಿ ಡಿ 26ರಿಂದ 30ರವರೆಗೆ ನಡೆದ 84ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷ ಹಾಗೂ ಮಹಿಳಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮಂಗಳೂರು ವಿವಿ ತಂಡವು ರಾಷ್ಟ್ರೀಯ ಮಟ್ಟದಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಸಿಂಹಪಾಲಿನ ಕೊಡುಗೆಯಿಂದ ಸತತ 8ನೇ ಬಾರಿಗೆ ಸಮಗ್ರ ಚಾಂಪಿಯನ್ಶಿಪ್ ಪಟ್ಟ ಮುಡಿಗೇರಿಸಿಕೊಂಡಿತು. ಪುರುಷ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ ಮಂಗಳೂರು ವಿವಿ 48(ಪುರುಷರ) ಹಾಗೂ 73(ಮಹಿಳೆಯರ) ಅಂಕಗಳೊಂದಿಗೆ ಒಟ್ಟು 121 ಅಂಕ ಪಡೆದು ಎರಡು ವಿಭಾಗದ ಸಮಗ್ರ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಮಂಗಳೂರು ವಿವಿ ಎರಡು ವಿಭಾಗಗಳಲ್ಲಿ ಒಟ್ಟು 5 ಚಿನ್ನ, 5 ಬೆಳ್ಳಿ, 7 ಕಂಚಿನ ಪದಕದೊಂದಿಗೆ ಒಟ್ಟು 17 ಪದಕವನ್ನು ಪಡೆದುಕೊಂಡಿತು. ಪದಕ ವಿಜೇತ ಎಲ್ಲಾ ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಪದಕಗಳ ವಿವರ ಪುರುಷರ ವಿಭಾಗದಲ್ಲಿ 5000ಮೀ ಓಟದಲ್ಲಿ ಗಗನ ಪ್ರಥಮ, 20ಕೀ.ಮಿ ನಡಿಗೆ ಓಟದಲ್ಲಿ ಸಚಿನ್ ಪ್ರಥಮ,…
ಪಡುಬಿದ್ರೆ ಬಂಟರ ಸಂಘ ಮತ್ತು ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಪಡುಬಿದ್ರೆಯಲ್ಲಿ ದಿವಂಗತ ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಅಂತಾರಾಜ್ಯ ಬಂಟ ಕ್ರೀಡೋತ್ಸವದಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡ ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಸೆಮಿಫೈನಲ್ ನಲ್ಲಿ ಬಂಟ್ವಾಳ ತಂಡದ ಎದುರು ಜಯ ಸಾಧಿಸಿದ ಸುರತ್ಕಲ್ ತಂಡ ಫೈನಲ್ ನಲ್ಲಿ ಮಂಜೇಶ್ವರ ತಂಡವನ್ನು 2-0 ಅಂತರದಿಂದ ಸೋಲಿಸಿ ಪ್ರಶಸ್ತಿ ಜಯಿಸಿತು.ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಡುಬಿದ್ರೆ ಬಂಟರ ಸಂಘದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಮುನಿಯಾಲು ಉದಯಕುಮಾರ್ ಶೆಟ್ಟಿ ಪ್ರಶಸ್ತಿ ಹಸ್ತಾಂತರಿಸಿದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಕ್ರೀಡಾ ಕಾರ್ಯದರ್ಶಿಗಳಾದ ಶಿಶಿರ್ ಶೆಟ್ಟಿ, ಬಬಿತಾ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿಯು 75 ಸಾವಿರ ನಗದು ಮತ್ತು ಪ್ರಶಸ್ತಿಯನ್ನು ಒಳಗೊಂಡಿತ್ತು. ಬಬಿತಾ, ಅಕ್ಷತಾ, ಮಂದಾರ್ತಿ, ಶಿಲ್ಪಾ, ಧನ್ಯ, ನವ್ಯ, ಪ್ರತೀಕ್ಷಾ, ದೀಕ್ಷಾ, ಭಾರತಿ,…
ತೆಂಕು ಬಡಗು ಯಕ್ಷಗಾನ ರಂಗದ ಚಾರ್ಲಿ ಚಾಪ್ಲಿನ್ ಬಿರುದಾಂಕಿತ ಸೀತಾರಾಮ ಕುಮಾರ್ ಕಟೀಲು ಅವರ ಯಕ್ಷ ಪಯಣದ ಸುವರ್ಣ ಸಂಭ್ರಮಾಚರಣೆಯನ್ನು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ನಾಗವೃಜ ಕ್ಷೇತ್ರ ಪಾವಂಜೆ ಇಲ್ಲಿ ಸಿದ್ದಕಟ್ಟೆ ಚೆನ್ನಪ್ಪ ಶೆಟ್ಟಿ ಸಂಸ್ಮರಣಾ ವೇದಿಕೆಯಲ್ಲಿ ವಿವಿಧ ಯಕ್ಷಗಾನ, ತಾಳಮದ್ದಲೆ, ನೃತ್ಯ ವೈಭವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಶ್ರೀ ಕ್ಷೇತ್ರ ಕಟೀಲು ಅನುವಂಶಿಕ ಮೊಕ್ತೇಸರ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ ಹಾಗೂ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಎಡನೀರು ಮಠ ಅವರ ಉಪಸ್ಥಿತಿಯಲ್ಲಿ ಜರಗಿತು. ಈ ಸಂದರ್ಭ ಪುಣೆಯ ಉದ್ಯಮಿ, ಸಮಾಜ ಸೇವಕ, ಪುಣೆ ಬಂಟರ ಸಂಘದ ಉಪಾಧ್ಯಕ್ಷ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಪುಣೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯ ಸಂಚಾಲಕ, 2024ರ ಸಾಲಿನ ಬಂಟರತ್ನ ಪ್ರಶಸ್ತಿ ಪುರಸ್ಕೃತ ಶ್ರೀ ಪ್ರವೀಣ್ ಶೆಟ್ಟಿ ಪುತ್ತೂರು ಅವರಿಗೆ ಯಕ್ಷರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್, ಕಲಾ ಪೋಷಕ ಟಿ…
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಆಡಳಿತ ಮಂಡಳಿಯ 13 ನಿರ್ದೇಶಕರ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಪುತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಚುನಾವಣಾ ಅಧಿಕಾರಿ ಸುಧೀರ್ ಕುಮಾರ್ ಕೆ. ರವರು ಆಯ್ಕೆ ಪ್ರಕ್ರಿಯೆ ನಡೆಸಿ ನಿರ್ದೇಶಕರ ಹೆಸರನ್ನು ಘೋಷಣೆ ಮಾಡಿದ್ದಾರೆ. ಶಶಿಕುಮಾರ್ ರೈ ಬಾಲ್ಯೊಟ್ಟುರವರು ಇರ್ದೆ ಗ್ರಾಮದ ಬಾಲ್ಯೊಟ್ಟು ನಿವಾಸಿಯಾಗಿದ್ದು, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, 8 ವರ್ಷ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನ ಜಾಗೃತಿ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ, ಇರ್ದೆ ಹಾಗೂ ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬೆಂದ್ರತೀರ್ಥ ಅಭಿವೃದ್ಧಿ ಸಮಿತಿಯ ಸಂಚಾಲಕರಾಗಿ, ಪೇರ್ಲತ್ತಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಇರ್ದೆ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾಗಿ, ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕರಾಗಿ, ಸಾರ್ವಜನಿಕ ಶಾರದೋತ್ಸವ ಸಮಿತಿಯಲ್ಲಿ…
ಮುಂಬಯಿ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ ಸಿಎ ಫೈನಲ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಮಾನಸ್ ವಿ.ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಎಂ.ಸಿ.ಸಿ ಕಾಲೇಜ್ ಮುಲುಂಡ್ ಇಲ್ಲಿ ಪದವೀಧರರಾಗಿದ್ದು ಥಾಣೆಯ ವಾಗ್ಲೇ ಎಸ್ಟೇಟ್ನ ಹೆಸರಾಂತ ಸಿಎ ಕಂಪನಿಯಲ್ಲೊಂದಾದ ಪಂಕಜ್ ಪರೇಖ್ ಆಂಡ್ ಕಂಪೆನಿಯಲ್ಲಿ ಆರ್ಟಿಕಲ್ಸಿಫ್ನ್ನು ಮಾಡುತ್ತಿದ್ಡಾರೆ. ಮಾನಸ್ ಶೆಟ್ಟಿ ಇವರು ಬೋಳ ಪರಾರಿ ವಿನಯ್ ಪಿ.ಶೆಟ್ಟಿ ಮತ್ತು ಮೂಲ್ಕಿ ಕಕ್ಕ ಪರಾರಿ ರೇಷ್ಮಾ ವಿ.ಶೆಟ್ಟಿ ದಂಪತಿ ಸುಪುತ್ರರಾಗಿದ್ದಾರೆ.