Author: admin
ವಿದ್ಯಾಗಿರಿ(ಮೂಡುಬಿದಿರೆ) : ಅನಾರೋಗ್ಯ ಮತ್ತು ಕ್ಷೇಮ ಎಂಬುದು ಎರಡು ಭಿನ್ನ ವಿಚಾರಗಳು. ಕ್ಷೇಮ ತರಬೇತಿ ಕೇಂದ್ರವು ವಿದ್ಯರ್ಥಿಗಳ ಶೈಕ್ಷಣಿಕ ಕರ್ಯಕ್ಷಮತೆ, ವೈಯಕ್ತಿಕ ಸಂಬಂಧಗಳು ಮತ್ತು ಒಟ್ಟಾರೆ ಯೋಗಕ್ಷೇಮವನ್ನು ವಿಚಾರಿಸಿ, ಸಮಾಲೋಚಿಸುವ ಕರ್ಯವನ್ನು ಮಾಡುತ್ತವೆ. ಇದೊಂದು ಮಾನಸಿಕ ಆರೋಗ್ಯವನ್ನು ಉನ್ನತೀಕರಣದ ಪರಿಕಲ್ಪನೆಯಾಗಿದೆ ಎಂದು ಉಡುಪಿಯ ಎವಿ ಬಾಳಿಗಾ ಸಂಸ್ಥೆಯ ಮನೋವೈದ್ಯ ಡಾ ಪಿ ವಿ ಭಂಡಾರಿ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆಳ್ವಾಸ್ ಸೆಂಟರ್ ಫಾರ್ ವೆಲ್ ನೆಸ್ ಟ್ರೈನಿಂಗ್ ಆಶ್ರಯದಲ್ಲಿ ಪದವಿ ಎವಿ ಕೊಠಡಿಯಲ್ಲಿ ಸೋಮವಾರ ನಡೆದ “ವೆಲ್ನೆಸ್ ರೂಮ್ನ ಉದ್ಘಾಟನೆ , ಬಡ್ಡಿಸ್ ಮೂಮೆಂಟ್ ಚಾಲನೆ ಮತ್ತು ಮಾನಸಿಕ ಸ್ವಾಸ್ಥ್ಯ ಕುರಿತ ಅಧಿವೇಶನ ಕರ್ಯಕ್ರಮ” ಉದ್ಘಾಟಿಸಿ ಅವರು ಮಾತನಾಡಿದರು. ಆತಂಕದ ಅಸ್ವಸ್ಥತೆಗಳು, ಖಿನ್ನತೆ, ನಿದ್ರಾ ಭಂಗಗಳು, ಮಾದಕ ವ್ಯಸನ, ಒತ್ತಡ ಸಂಬಂಧಿತ ಸಮಸ್ಯೆಗಳು ಹಾಗೂ ತಿನ್ನುವ ಕ್ರಮದಲ್ಲಿನ ಅಸ್ವಸ್ಥತೆ ಸಾಮಾನ್ಯ ಮಾನಸಿಕ ಆರೋಗ್ಯದ ಮುಖ್ಯ ಸವಾಲುಗಳಾಗಿವೆ ಎಂದರು. ಸಮಯ ನರ್ವಹಣೆ, ಒತ್ತಡ ನರ್ವಹಣೆ, ಸಾಮಾಜಿಕ ಸಂರ್ಕಗಳು, ಅಗತ್ಯವಿದ್ದಾಗ ಸಹಾಯವನ್ನು ಹುಡುಕುವುದೆಲ್ಲ…
ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ನೂತನ ಮಹಿಳಾ ಘಟಕವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ನೂತನ ಮಹಿಳಾ ಘಟಕ ಉದ್ಘಾಟಿಸಿ ಮಾತನಾಡಿ, ಸೂಕ್ತ ಕಾರ್ಯ ಯೋಜನೆ ರೂಪಿಸಿ, ಮಹಿಳೆಯರಿಗೆ ಉಪಯುಕ್ತವಾದ ಪುಟ್ಟ ಪುಟ್ಟ ಕಾರ್ಯಕ್ರಮಗಳ ಮೂಲಕ ಮಹಿಳಾ ಘಟಕ ಮುನ್ನಡೆಯಲಿ ಎಂದರು. ನೂತನ ಮಹಿಳಾ ಘಟಕಕ್ಕೆ ಮಾತೃ ಸಂಘದ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಘಟಕದ ಗೌರವ ಸಲಹೆಗಾರರಾದ ಡಾ. ಆಶಾ ಜ್ಯೋತಿ ರೈ ಅವರು ಮಾತನಾಡಿ, ಪರಸ್ಪರ ಸಹಕಾರದಿಂದ ಯಶಸ್ಸು ಸಾಧ್ಯ. ನೂತನ ಮಹಿಳಾ ಘಟಕಕ್ಕೆ ಶುಭವಾಗಲಿ ಎಂದು ಹಾರೈಸಿದರು. ಮಹಿಳಾ ಘಟಕದ ಅಧ್ಯಕ್ಷೆ ಸಬಿತಾ ಆರ್.ಶೆಟ್ಟಿ ಅವರು ನೂತನ ಮಹಿಳಾ ಘಟಕಕ್ಕೆ ಸರ್ವ ಮಹಿಳೆಯರ ಸಹಕಾರ ದೊರೆಯಲಿ ಎಂದರು. ವೀಣಾ ಟಿ. ಶೆಟ್ಟಿ ಅವರು ಬಂಟರ ಉಡುಗೆ ತೊಡುಗೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕಸ್ತೂರಿ ಶೆಟ್ಟಿ…
ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಉಡುಪಿ ಸಾಯಿರಾಧಾ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಮನೋಹರ್ ಎಸ್. ಶೆಟ್ಟಿ ಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೇಗುಲದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅರುಣ್ ಕುಮಾರ್ ಬಿ.ಕೆ. ಹಾಗೂ ವ್ಯವಸ್ಥಾಪನಾ ಸಮಿತಿಗೆ ಆಯ್ಕೆಯಾದ ನೂತನ ಸದಸ್ಯರ ಉಪಸ್ಥಿತಿಯಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ದೇಗುಲದ ಪ್ರಧಾನ ಅರ್ಚಕ ವೇ. ಮೂ. ನಾರಾಯಣ ತಂತ್ರಿ, ರವಿ ಕುಮಾರ್ ಮಂದಾರ, ಶಶಿಧರ್ ಸುವರ್ಣ ಉಳಿಯಾರಗೋಳಿ, ಸದಾನಂದ ಎ. ಸುವರ್ಣ ಪೊಲಿಪು, ಅಶ್ವಿನಿ ಬಂಗೇರ ಕಾಪು, ಶಾಂತಲತಾ ಎಸ್. ಶೆಟ್ಟಿ ಮಲ್ಲಾರು, ನಾಗರಾಜ್ ಎಸ್. ಮೂಳೂರು, ಶ್ರೀಕಾಂತ್ ಕಾಪು ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಸಂಸತ್ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವರಾದ ರಾಜ್ ನಾಥ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ ಸೇಠ್ ಅವರ ಅಧ್ಯಕ್ಷತೆಯ ಸಲಹಾ ಸಮಿತಿಯಲ್ಲಿ ಲೋಕಸಭೆಯ 14 ಹಾಗೂ ರಾಜ್ಯಸಭೆಯ 6 ಸದಸ್ಯರಿರುತ್ತಾರೆ. ಮಾತ್ರವಲ್ಲದೇ ಇಬ್ಬರು ಪದನಿಮಿತ್ತ ಸದಸ್ಯರು ಇರುತ್ತಾರೆ. ಲೋಕಸಭೆಯಲ್ಲಿ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ ಕೂಡಾ ಒಬ್ಬರು. ರಕ್ಷಣಾ ಸಚಿವಾಲಯದ ಈ ಸಲಹಾ ಸಮಿತಿಯು ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ ಕಾರ್ಯಕ್ರಮಗಳ ಅನುಷ್ಠಾನದ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತಂತೆ ಆಗಾಗ ಸಭೆ ನಡೆಸಿ ಸೂಕ್ತ ಸಲಹೆ ನೀಡಲಿದೆ. ಒಟ್ಟಾರೆ ರಾಷ್ಟ್ರದ ಭದ್ರತೆಯನ್ನು ಬಲಪಡಿಸುವ ರಕ್ಷಣಾ ನೀತಿಗಳ ರಚನೆ ಮತ್ತು ಅನುಷ್ಠಾನಕ್ಕೆ ಸೂಕ್ತ ಮಾರ್ಗದರ್ಶನ ಕೊಡಲಿದೆ. ಈ ಕುರಿತು ಪ್ರತಿಕ್ರಿಯಿಸುವ ಕ್ಯಾ. ಚೌಟ ನಮ್ಮ ರಾಷ್ಟ್ರ ಮತ್ತು ರಕ್ಷಣಾ ಕ್ಷೇತ್ರವು ಪ್ರಧಾನಮಂತ್ರಿ…
ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕುಂದಾಪುರ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ವಿದ್ಯಾರಣ್ಯ ಶಾಲೆಯ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ಕುಂದಾಪುರ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ನಡೆಯಿತು. ಶಿಕ್ಷಣ ಇಲಾಖೆ ಕುಂದಾಪುರ ವೃತ್ತದ ಇಸಿಓ ಶೇಖರ ಪಡುಕೋಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾರಣ್ಯ ಅಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಮಾತನಾಡುತ್ತಾ “ಮಕ್ಕಳ ಸೃಜನಶೀಲ ಚಿಂತನೆಗೆ ಇಂತಹ ಕಾರ್ಯಕ್ರಮಗಳು ತುಂಬಾ ಸಹಕಾರಿಯಾಗುತ್ತವೆ ಮತ್ತು ಮಕ್ಕಳ ಪಠ್ಯದ ವಿಷಯವನ್ನು ಅತ್ಯಂತ ಸರಳವಾಗಿ ಅರ್ಥೈಸಿಕೊಳ್ಳಲು ಸಹಾಯವಾಗುತ್ತದೆ. ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗುವ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ನಮ್ಮ ಸಂಸ್ಥೆ ಸದಾ ಸಹಕಾರ ನೀಡಲಿದೆ” ಎಂದರು. ಕಾರ್ಯಕ್ರಮದಲ್ಲಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಖಜಾಂಚಿ ಭರತ್ ಶೆಟ್ಟಿ, ಶಿಕ್ಷಣ ಇಲಾಖೆ ಹಾಲಾಡಿ…
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಘಗಳು ದೇಶಕ್ಕೆ ಮಾದರಿಯಾಗಿವೆ. ಎರಡು ಜಿಲ್ಲೆಯ ಸಹಕಾರಿ ಸಂಘಗಳಿಂದ ಗ್ರಾಹಕರಿಗೆ ಆಗುವ ಸಹಕಾರ ಬೇರೆ ಎಲ್ಲಿಯೂ ಸಿಗದು ಎಂದು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ ಶತಾಭಿವಂದನಂ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ, ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಉಭಯ ಜಿಲ್ಲೆಯ ಅತ್ಯುತ್ತಮ ಕೃಷಿಪತ್ತಿನ ಸಹಕಾರಿ ಸಂಘಗಳಲ್ಲಿ ಗಣಪತಿ ಸಹಕಾರಿ ವ್ಯವಸಾಯಕ ಸಂಘ ಒಂದು. ಇದರ ಕಾರ್ಯವೈಖರಿ ಉತ್ತಮವಾಗಿದೆ ಎಂದರು. ಮಾಜಿ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆ ಮಾತನಾಡಿ, ನಮ್ಮ ದೇಶವಿಂದು ಅಭಿವೃದ್ಧಿಯತ್ತ ಸಾಗದೆ ದುರಾಸೆ ಎಂಬ ರೋಗಕ್ಕೆ ಬಲಿಯಾಗುತ್ತಿದೆ. ಈ ರೋಗದಿಂದ ಯಾವಾಗ ಜನ ಮುಕ್ತರಾಗುತ್ತಾರೋ ಅಂದು ದೇಶದ ಅಭಿವೃದ್ದಿ ಸಾಧ್ಯವಾಗಬಹುದು ಎಂದರು. ಮಣಿಪಾಲದ ಡಾ| ಟಿ.ಎಂ.ಎ. ಪೈ ಫೌಂಡೇಶನ್ ಅಧ್ಯಕ್ಷ ಅಶೋಕ್ ಪೈ ಅವರು ಮಾತನಾಡಿ ಆಡಳಿತ ಮಂಡಳಿ, ಸಿಬಂದಿ ವರ್ಗದಲ್ಲಿ ಹೊಂದಾಣಿಕೆಯಿದ್ದರೆ ಸಂಸ್ಥೆಯೊಂದು…
ಮೂಡುಬಿದಿರೆ : ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ, ದ.ಕ. ಹಾಗೂ ಸರಕಾರಿ ಪ್ರೌಢಶಾಲೆ ನೆಲ್ಲಿಕಾರು, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 62 ಚಿನ್ನ, 53 ಬೆಳ್ಳಿ ಮತ್ತು 29 ಕಂಚಿನ ಪದಕಗಳೊಂದಿಗೆ 143 ಪದಕಗಳನ್ನು ಪಡೆದು ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿ, ಪ್ರೌಢಶಾಲಾ 14ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಹಾಗೂ ಪ್ರೌಢಶಾಲಾ 17ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿಯೊಂದಿಗೆ ಕ್ರೀಡಾಕೂಟದ ಸತತವಾಗಿ 18ನೇ ಬಾರಿ ಆಳ್ವಾಸ್ ಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು. ಮೂಡುಬಿದಿರೆ ತಾಲೂಕು ಗಳಿಸಿದ ಒಟ್ಟು 143 ಪದಕಗಳು ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು ಪಡೆದ ಪದಕಗಳಾಗಿವೆ ಎಂಬುದು ಉಲ್ಲೇಖನಿಯ. ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ: ಬಾಲಕರ ವಿಭಾಗ: ಸುಭಾಷ್ ಎ ಆರ್…
ಪುಣೆ ಬಂಟರ ಸಂಘದ ನವರಾತ್ರಿ ಉತ್ಸವ, ತೆನೆ ಹಬ್ಬ, ದಾಂಡಿಯಾ ಕಾರ್ಯಕ್ರಮವು ಅಕ್ಟೋಬರ್ 12ರಂದು ಬಂಟರ ಭವನದಲ್ಲಿ ಜರಗಿತು. ಪುಣೆ ಬಂಟರ ಸಂಘ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆಯವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮಹಾರಾಷ್ಟ್ರ ಸರಕಾರದ ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಸಚಿವರಾದ ಚಂದ್ರಕಾಂತ್ ದಾದಾ ಪಾಟೀಲ್, ಕೇಂದ್ರ ಸರಕಾರದ ಸಚಿವ ಪುಣೆ ಸಂಸದರಾದ ಮುರಳಿಧರ್ ಮೊಹೊಲ್, ಗೌರವ ಅತಿಥಿಗಳಾಗಿ ಬಾರಮತಿಯ ಹೋಟೆಲ್ ಉದ್ಯಮಿ ಪುಣೆ ಬಂಟರ ಸಂಘ ಟ್ರಸ್ಟಿ ಶ್ರೀಧರ್ ಶೆಟ್ಟಿ, ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದ ಮಹಿಳಾ ಕಾರ್ಯಾಧ್ಯಕ್ಷೆ ಪ್ರಭಾ ಎಸ್ ಶೆಟ್ಟಿ, ಬಂಟ್ಸ್ ಅಸೋಸಿಯೇಷನ್ ನ ಮಹಿಳಾ ಕಾರ್ಯಾಧ್ಯಕ್ಷೆ ರೇಷ್ಮಾ ಎಸ್ ಶೆಟ್ಟಿ, ಸಂಘದ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಕುಶಲ್ ಹೆಗ್ಡೆ, ಕಾರ್ಯಾಧ್ಯಕ್ಷ ವಿಶ್ವನಾಥ್ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷ ಸದಾನಂದ ಕೆ ಶೆಟ್ಟಿ, ಉಪಾಧ್ಯಕ್ಷರುಗಳಾದ ಎರ್ಮಾಳ್ ಚಂದ್ರಹಾಸ್ ಶೆಟ್ಟಿ, ಪ್ರವೀಣ್ ಶೆಟ್ಟಿ…
ಮುಂಬೈ ವಿಶ್ವವಿದ್ಯಾಲಯದ 65 ವಿಭಾಗಗಳಲ್ಲಿ ಅತೀ ಹೆಚ್ಚು ಕೃತಿಗಳನ್ನು ಪ್ರಕಟಣೆ ಮಾಡಿದ ಹಿರಿಮೆ ಕನ್ನಡ ವಿಭಾಗದ್ದಾಗಿದೆ. ಕನ್ನಡದ ಪ್ರಚಾರ, ಪ್ರಸಾರದ ಕೈಂಕರ್ಯವನ್ನು ವಿಭಾಗ ಸತತವಾಗಿ ಮಾಡುತ್ತಿದೆ. ಕನ್ನಡ ಸಾಹಿತ್ಯ ಅತ್ಯಂತ ಶ್ರೀಮಂತವಾದುದು, ಸಮೃದ್ಧವಾದುದು. ವಿದ್ಯಾರ್ಥಿಗಳು ಒಳ್ಳೆಯ ಸಾಹಿತ್ಯವನ್ನು ಬೆಳೆಯುವ, ಕಟಾವು ಮಾಡುವ, ಆನಂದ ಪಡುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರೂ ಆದ ಪ್ರೊ. ಜಿ. ಎನ್. ಉಪಾಧ್ಯ ಅವರು ಕರೆ ಕೊಟ್ಟರು. ಅವರು ಅಕ್ಟೋಬರ್ 19ರ ಶನಿವಾರದಂದು ಕಲೀನಾ ಕ್ಯಾಂಪಸ್ ನ ಜೆ.ಪಿ. ನಾಯಕ್ ಭವನದಲ್ಲಿ ನಡೆದ ಮೂರು ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡುತ್ತಿದ್ದರು. ಭರತನ ನಾಟ್ಯ ಶಾಸ್ತ್ರದಲ್ಲಿ ಹೇಳಿರುವಂತೆ ಕಾವ್ಯವನ್ನು ಓದುವುದರಿಂದ ಆಗುವ ಪ್ರಯೋಜನಗಳನ್ನು, ನಮ್ಮ ಚಿತ್ತದಲ್ಲಿ ಆಗುವ ವಿಕಾಸ, ವಿಸ್ತಾರ, ವಿಕ್ಷೋಭ ಮತ್ತು ವಿಕ್ಷೇಪ ಎಂಬ ನಾಲ್ಕು ರೀತಿಯ ಪ್ರಕ್ರಿಯೆಗಳನ್ನು ಅವರು ಈ ಸಂದರ್ಭದಲ್ಲಿ ಸವಿಸ್ತಾರವಾಗಿ ವಿವರಿಸಿದರು. ಅವರು ಅಂದು ಬಿಡುಗಡೆ ಕಂಡ ಕೃತಿಕಾರರ ಸಾಧನೆಗಳನ್ನು ಪರಿಚಯಿಸಿ…
ವಿದ್ಯಾಗಿರಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮೂಡಬಿದಿರೆ ರೋಟರಿ ಕ್ಲಬ್ನ ಸಹಯೋಗದಲ್ಲಿ ಪ್ರತಿಷ್ಠಾನದ ಎಲ್ಲಾ ಸಂಸ್ಥೆಗಳ ವಿದ್ಯಾರ್ಥಿನಿಯರಿಗೆ ಗರ್ಭಕಂಠದ ಕ್ಯಾನ್ಸರ್ ಮತ್ತು ಎಚ್ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಅಕ್ಟೋಬರ್15 ರಿಂದ 22ರವರೆಗೆ ಹಮ್ಮಿಕೊಂಡು ಯಶಸ್ವಿಗೊಳಿಸಲಾಯಿತು. ಆಳ್ವಾಸ್ (ಸ್ವಾಯತ್ತ) ಪದವಿ ವಿದ್ಯಾರ್ಥಿನಿಯರಿಗೆ ಎಚ್ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ಜಾಗೃತಿ ಕುರಿತು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಡಾ. ಮರಿಯಾ ನೆಲ್ಲಿಯನಿಲ್ ಮತ್ತು ಡಾ ಸುಶಾಂತ ಪೆರ್ಡೂರು, ಆಳ್ವಾಸ್ ಆಯುರ್ವೇದ ವಿದ್ಯಾರ್ಥಿನಿಯರಿಗೆ ಡಾ ರಮ್ಯಾ ಎನ್ ಆರ್, ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಾ ಸುಪ್ರಜ್ಯಾ ಶೆಟ್ಟಿ ಮತ್ತು ಡಾ ಸೌಧ, ನ್ಯಾಚುರೋಪತಿ ಹಾಗೂ ಹೋಮಿಯೋಪತಿ ವಿದ್ಯಾರ್ಥಿನಿಯರಿಗೆ ಡಾ ಅದಿತಿ ಶೆಟ್ಟಿ, ಫಿಸಿಯೋಥೆರಫಿ ಮತ್ತು ಅಲೈಡ್ ಹೆಲ್ತ್ ಸೈನ್ಸ್ಸ್ ವಿದ್ಯಾರ್ಥಿನಿಯರಿಗೆ ಡಾ ನಿಶಿತ ಶೆಟ್ಟಿಯಾನ್ ಫೆರ್ನಾಂಡಿಸ್, ಬಿಪಿಎಡ್, ಎಂಪಿಎಡ್, ಬಿ.ಎಡ್ ಹಾಗೂ ಆಳ್ವಾಸ್ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಡಾ ಹನಾ ಶೆಟ್ಟಿ, ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಡಾ ಸಹನಾ ಜಿ, ಡಾ ಮಾನಸಿ ಪಿ ಎಸ್ ರವರಿಂದ ಜಾಗೃತಿ ಕರ್ಯಕ್ರಮ…