Author: admin

ವಿದ್ಯಾಗಿರಿ: ಹಿಂದೆ ಕ್ರೀಡಾ ಸೌಲಭ್ಯಗಳ ಕೊರತೆ ಇದ್ದು, ಕ್ರೀಡಾಪಟುಗಳಿಗೆ ಸಾಧನೆ ಮಾಡಲು ಕಷ್ಟವಾಗುತ್ತಿತ್ತು. ಇಂದು ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿ ಕಾಣುತ್ತಿದ್ದು, ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡುವಂತಾಗಬೇಕು ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮಂಗಳವಾರ ಮೂಡುಬಿದಿರೆ ಸ್ವರಾಜ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟ 2024 25 ವನ್ನು ಉದ್ಘಾಟಿಸಿ ಅವರು ಮಾತನಾಡಿದರು . ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕ ಸಿ.ಡಿ. ಜಯಣ್ಣ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯು ಕ್ರೀಡಾಕೂಟಗಳ ಆಯೋಜನೆಗೆ ಹೆಸರುವಾಸಿ. ಯಾವುದೇ ಕ್ರೀಡಾಕೂಟದಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ. ಕ್ರೀಡಾಪಟುಗಳು ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳುವುದು ಬಹಳ ಅವಶ್ಯಕ ಎಂದು ಸಲಹೆ ನೀಡಿದರು. ಶಿಸ್ತು, ಶ್ರದ್ಧೆ ಮತ್ತು ಸತತ ಪರಿಶ್ರಮದಿಂದ ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಯಶಸ್ಸು ಖಚಿತ ಎಂದರು. ಮೋಹನ ಆಳ್ವರು…

Read More

ಕರಾವಳಿ ಕರ್ನಾಟಕದ ತುಳುನಾಡಿನ ಮಂಗಳೂರಿನ ಶ್ರೀ ವಿಶ್ವನಾಥ್ ಶೆಟ್ಟಿ ಮತ್ತು ಶ್ರೀಮತಿ ಉಷಾ ವಿಶ್ವನಾಥ್ ಶೆಟ್ಟಿ ದಂಪತಿಗಳ ಪುತ್ರಿ ಕು|| ಸನ್ನಿಧಿ ವಿಶ್ವನಾಥ್ ಶೆಟ್ಟಿ ಪ್ರಸ್ತುತ ದುಬಾಯಿಯಲ್ಲಿ ನೆಲೆಸಿದ್ದಾರೆ. ವೃತ್ತಿಯಲ್ಲಿ ವಿಶ್ವನಾಥ್ಶೆ ಟ್ಟಿಯವರು ಮಲ್ಟಿ ನ್ಯಾಶನಲ್ ಕಂಪನಿಯ ಬ್ರ್ಯಾಂಚ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರವೃತ್ತಿಯಲ್ಲಿ ರಂಗಭೂಮಿ ನಟರು, ನಿರ್ದೇಶಕರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಕರ್ನಾಟಕ ಸಂಘ ಶಾರ್ಜಾದ ಉಪಾಧ್ಯಕ್ಷರಾಗಿದ್ದಾರೆ. ಜನ್ಮದಾತೆ ಶ್ರೀಮತಿ ಉಷಾ ಶೆಟ್ಟಿ ಯವರು ಸಹ ತನ್ನ ಗಾಯನ, ನೃತ್ಯಗಳಲ್ಲಿ ಪ್ರತಿಭೆಗಳ ಮೂಲಕ ಹಲವಾರು ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ. ಸನ್ನಿಧಿ ಶೆಟ್ಟಿ ಬಾಲ್ಯದಿಂದಲೇ ತನ್ನಲ್ಲಿರುವ ಪ್ರತಿಭೆಯನ್ನು ವಿವಿಧ ಸಾಂಸ್ಕೃತಿಕ ವೇದಿಕೆಯಲ್ಲಿ ಅನಾವರಣ ಗೊಳಿಸುತ್ತಾ ಹೆಜ್ಜೆ ಗುರುತನ್ನು ಮೂಡಿಸಿದ್ದಾಳೆ. ಒಂದೂವರೆ ವಯಸಿನಲ್ಲೇ ಕಿನ್ನಿ ಪಿಲಿ (ಮರಿ ಹುಲಿವೇಷಧಾರಿಣಿಯಾಗಿ) ವೇದಿಕೆಮೇಲೆ ಪ್ರಥಮ ಪ್ರದರ್ಶನ ನೀಡಿದ್ದಾಳೆ. ತನ್ನ ಮೂರನೇಯ ವಯಸ್ಸಿನಲ್ಲಿ ದುಬಾಯಿಯ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿಯಲ್ಲಿ ತನ್ನ ಪುಟ್ಟ ಕಂಠಸಿರಿಯಲ್ಲಿ ಪ್ರಾರಂಭಿಸಿರುವ ಭಜನಾ ಸಂಗೀತ ಗಾಯನ ಇಂದಿಗೂ ಮುದುವರೆಸಿಕೊಂಡು ಬರುತ್ತಿದ್ದಾಳೆ. ನಾಲ್ಕನೆಯ…

Read More

ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿತು. ಗೋವಾ ತುಳು ಕೂಟವನ್ನು ಪುತ್ತೂರಿನ ಜನಪ್ರಿಯ ಶಾಸಕರು ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಭಾಷೆಯಾಗಿ ಜಾರಿಗೆ ತರುವ ಪ್ರಯತ್ನವನ್ನು ಮಾಡುತ್ತಿರುವ ಶ್ರೀ ಅಶೋಕ್ ಕುಮಾರ್ ರೈಯವರು ಉದ್ಘಾಟಿಸಿದರು. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಕೆ ಶೆಟ್ಟಿ ಇರ್ವತ್ತೂರು ಗೋವಾದಲ್ಲಿ ತುಳುಕೂಟ ಆರಂಭಿಸಲು ಕಾರಣವಾದ ಅಂಶಗಳನ್ನು ವಿವರಿಸಿದರು. ಮುಂಬಯಿ ಮತ್ತು ಬೆಂಗಳೂರಿನಲ್ಲಿ ತುಳುವರು ತುಳುವರ ಸಂಘಗಳನ್ನು ಕಟ್ಟಿಕೊಂಡು ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಅವರು ತುಳುನಾಡಿನಲ್ಲೇ ಇರುವಂತಹ ಅನುಭವವನ್ನು ಪಡೆದಿದ್ದಾರೆ. ಅದೇ ರೀತಿ ಗೋವಾದಲ್ಲೂ ತುಂಬಾ ಜನ ತುಳುವರಿದ್ದಾರೆ. ಅವರನ್ನು ಸಂಘಟಿಸುವ ಅವಕಾಶವಿರಲಿಲ್ಲ. ಯಾರಾದರೂ ತುಳುವಿನಲ್ಲಿ ಮಾತನಾಡುವುದನ್ನು ಕೇಳಿದರೆ ಯಾವ ಊರು? ಎಂದು ಕೇಳುವಷ್ಟು ಮಾತುಕತೆ ಮಾತ್ರ ನಡೆಯುತ್ತಿತ್ತು. ಅದಕ್ಕಿಂತ ಮುಂದೆ ಹೋಗುತ್ತಿರಲಿಲ್ಲ. ಹೀಗಾಗಿ ತುಳುವರನ್ನು…

Read More

ಪುತ್ತೂರು ತಾಲೂಕು ಬಂಟರ ಸಂಘ ಇದರ ಮಹಿಳಾ ವಿಭಾಗದ ಮಾಸಿಕ ಸಭೆ ಅಕ್ಟೋಬರ್ 17 ರಂದು ಪುತ್ತೂರು ಬಂಟರ ಭವನದಲ್ಲಿ ಜರಗಿತು. ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಬಂಟ್ಸ್ ಹಾಸ್ಟೆಲ್ ಮಂಗಳೂರು ಇಲ್ಲಿ ನಡೆದ ಬಂಟರ ಕ್ರೀಡಾ ಕೂಟದಲ್ಲಿ ಬಂಟರ ಮಹಿಳಾ ವಿಭಾಗ, ಪುತ್ತೂರು ಬಂಟರ ಸಂಘವನ್ನು ಪ್ರತಿನಿಧಿಸಿ, ತ್ರೋಬಾಲ್ ಆಟದಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡ ಬಗ್ಗೆ ಬಂಟರ ಮಹಿಳಾ ತಂಡಕ್ಕೆ ಸೂಕ್ತ ರೀತಿಯಲ್ಲಿ ತರಬೇತಿ ಹಾಗೂ ಮಾರ್ಗದರ್ಶನ ನೀಡುತ್ತಿರುವ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಪ್ರೇಮನಾಥ ಶೆಟ್ಟಿ ಕಾವು ಇವರನ್ನು ಗೌರವಿಸಲಾಯಿತು. ಹಾಗೆಯೇ ಆಟಗಾರ್ತಿಯರನ್ನು ಮತ್ತು ಬಂಟರ ಮಹಿಳಾ ವಿಭಾಗದ ಕ್ರೀಡಾ ಸಂಚಾಲಕರಾದ ಸಬಿತಾ ಭಂಡಾರಿ ಹಾಗೂ ಸ್ವರ್ಣಲತಾ ಜೆ ರೈ ಇವರನ್ನು ಅಭಿನಂದಿಸಲಾಯಿತು. ಪುತ್ತೂರು ನಗರಸಭಾ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಮತ್ತು ಹರಿಣಾಕ್ಷಿ ಜೆ ಶೆಟ್ಟಿ ಇವರ ಪುತ್ರಿ ಸಮೃದ್ಧಿ ಜೆ.…

Read More

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದಲ್ಲಿ ಸತತ ೧೬ನೇ ಬಾರಿ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ತಂಡವು ‘ಶ್ರೀ ಕೆಮ್ಮಾರು ಬಾಲಕೃಷ್ಣ ಗೌಡ ಸ್ಮರಣಾರ್ಥ ಟ್ರೋಫಿ’ಯನ್ನು ಎತ್ತಿ ಹಿಡಿದಿದೆ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತೃತೀಯ ಸ್ಥಾನ ಪಡೆದಿದೆ. ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ನಡೆದ ಟೂರ್ನಿಯ ಪುರುಷರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ೩-೦ ನೇರ ಸೆಟ್‌ಗಳಿಂದ ಪ್ರೇರಣಾ ಕಾಲೇಜು ತಂಡವನ್ನು ಮಣಿಸಿ, ಪ್ರಶಸ್ತಿಯನ್ನು ತನ್ನಲ್ಲಿ ಉಳಿಸಿಕೊಂಡಿತು. ಉತ್ತಮ ಪ್ರದರ್ಶನ ನೀಡಿದ ಮಹಿಳಾ ತಂಡವು ತೃತೀಯ ಸ್ಥಾನ ಪಡೆಯಿತು. ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

‘ಯಜ್ಞದಂತೆ ಸರ್ವಸಮರ್ಪಣೆಯ ಭಾವ ಬದುಕಿನಲ್ಲಿ ಇರಲಿ’ ವಿದ್ಯಾಗಿರಿ: ಎಲ್ಲಾದರೂ ಇರಿ, ಹೇಗಾದರೂ ಇರಿ. ಭಾರತೀಯತೀಯತೆ ಎತ್ತಿ ಹಿಡಿಯಿರಿ. ಉತ್ತಮ ಜೀವನ ರೂಪಿಸಿಕೊಳ್ಳಲು ಭಾರತವೇ ಶ್ರೇಷ್ಠ ಎಂದು ಶ್ರೀ ಕ್ಷೇತ್ರ ಕಟೀಲಿನ ವಿದ್ವಾನ್ ಕಮಲಾದೇವಿ ಪ್ರಸಾದ ಆಸ್ರಣ್ಣ ಹೇಳಿದರು . ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಳ್ವಾಸ್ ಕಾಲೇಜು (ಸ್ವಾಯತ್ತ) ಸಂಸ್ಕೃತ ವಿಭಾಗ ಮತ್ತು ಪ್ರಜ್ಞಾ -ಜಿಜ್ಞಾಸಾವೇದಿ ಆಶ್ರಯದಲ್ಲಿ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ಆರಂಭಗೊಂಡ ೭ ದಿನಗಳ “ಶ್ರೀಮದ್ ವಾಲ್ಮೀಕಿರಾಮಾಯಣ -ಶ್ರವಣಸಪ್ತಾಹ ” ಉದ್ಘಾಟಿಸಿ ಅವರು ಮಾತನಾಡಿದರು. ರಾಮಾಯಣ ಎನ್ನುವುದು ರಾಮ, ರಾಮಸ್ಯ, ಅಯಣಂ. ಅಂದರೆ ರಾಮ ನಡೆದ ದಾರಿಯಲ್ಲಿ ಸಾಗುವುದು ಎಂದರ್ಥ. ರಾಮಾಯಣ ಎಂಬ ಪೂಜ್ಯನೀಯ ಕಾವ್ಯವನ್ನು ಲೋಕಕ್ಕೆ ಕೊಡುಗೆಯಾಗಿ ನೀಡಿದ ಕೀರ್ತಿ ಶ್ರೀ ವಾಲ್ಮೀಕಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು. ರಾಮನ ಕಾಲದಲ್ಲಿ ಪ್ರಜಾಪ್ರಭುತ್ವ ಇಲ್ಲದ್ದಿದರೂ ಪ್ರಜೆಗಳು ರಾಮನ ಆದರ್ಶಗಳನ್ನು ಪರಿಪಾಲನೆ ಮಾಡುತ್ತಿದ್ದರು. ಕೇವಲ ರಾಮನ ಹೆಸರನ್ನು ಪೂಜಿಸುವುದಲ್ಲದೆ ರಾಮನ ನಿಜಗುಣ , ಆದರ್ಶಗಳ ಪರಿಪಾಲನೆ ಮಾಡುತ್ತಾ ಜೀವನವನ್ನು…

Read More

ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಬಿಎ ವಿದ್ಯಾರ್ಥಿ ಚಿರಾಗ್ ರೈ ಮೇಗಿನಗುತ್ತು ಅವರು ಅಕ್ಟೋಬರ್ 30ರಿಂದ ಚೆನ್ನೈಯಲ್ಲಿ ನಡೆಯಲಿರುವ ದಕ್ಷಿಣ ವಲಯ ವಿಶ್ವವಿದ್ಯಾಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ತಂಡಕ್ಕೆ ಆಯ್ಕೆಯಾಗಿದ್ದಾರೆ. ಚಿರಾಗ್ ರೈ ಅವರು ಸರ್ವೆ ಗ್ರಾಮದ ಮೇಗಿನಗುತ್ತಿನಲ್ಲಿ ವಾಸವಾಗಿದ್ದು, ಇವರ ತಂದೆ ಯತೀಶ್ ರೈ ಮುಂಡೂರು ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿದ್ದಾರೆ. ತಾಯಿ ಯೋಗಿನಿ ರೈ ಮುಂಡೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದಾರೆ.

Read More

ಆರೋಗ್ಯವೇ ಭಾಗ್ಯ ಎನ್ನುವಂತೆ ನಮ್ಮ ಆರೋಗ್ಯವನ್ನು ಪ್ರಕೃತಿಯ ಬದಲಾವಣೆಗನುಗುಣವಾಗಿ ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯ. ದಿನ ನಿತ್ಯದ ಜೀವನದಲ್ಲಿ ಪ್ರಾಯಕ್ಕೆ ಅನುಗುಣವಾಗಿ ಶರೀರಕ್ಕೆ ಆಗುವ ತ್ರಾಸದಾಯಕ ಸನ್ನಿವೇಶಳಿಗೆ ಹೊಂದಿಕೊಳ್ಳಬೇಕು. ಹಿರಿ ಪ್ರಾಯದಲ್ಲಿ ಒತ್ತಡಕ್ಕೆ ಒಳಗಾಗುವುದು ಸರ್ವೇ ಸಾಮಾನ್ಯ. ಆದರೆ ತಾಳ್ಮೆಯಿಂದ ವ್ಯವಹರಿಸುವ ಗುಣ ನಮ್ಮಲ್ಲಿರಬೇಕು. ವ್ಯಾಯಮ, ಕ್ರೀಡೆ ಮತ್ತು ಚಟುವಟಿಕೆಯಿಂದ ಇರುವ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳಬೇಕು. ಇಂದಿನ ಯಾಂತ್ರಿಕ ಜೀವನದಲ್ಲಿ ಯುವ ಮಕ್ಕಳು ಕೂಡಾ ಒತ್ತಡಕ್ಕೆ ಒಳಾಗಾಗುವುದನ್ನು ನಾವು ಕಾಣುತ್ತೇವೆ. ಇದು ಇಂದಿನ ಜೀವನ ಪದ್ದತಿಯಿಂದ ಆಗುವ ಪರಿಣಾಮಗಳಾಗಿವೆ. ಪ್ರಕೃತಿಯ ಬದಲಾವಣೆಗೆ ಹೊಂದಿಕೊಂಡು ದೈಹಿಕ ಮಾನಸಿಕ ಯೋಗ ಕ್ಷೇಮದೊಂದಿಗೆ ಆರೋಗ್ಯ ಕಾಪಾಡಿಕೊಳ್ಳುವ ದೃಡತೆ ನಮ್ಮಲ್ಲಿರಬೇಕು ಎಂದು ಪುಣೆಯ ಖ್ಯಾತ ವೈದ್ಯರಾದ ಡಾ. ಚಿತ್ತರಂಜನ್ ಶೆಟ್ಟಿ ನುಡಿದರು. ಬಂಟ್ಸ್ ಅಸೋಸಿಯೇಷನ್ ಪುಣೆ ಇದರ ವತಿಯಿಂದ ನವರಾತ್ರಿಯ ಪ್ರಯುಕ್ತ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಹಾಗೂ ದಾಂಡಿಯಾ ರಾಸ್ ಧಾರ್ಮಿಕ ಕಾರ್ಯಕ್ರಮವು ಅಕ್ಟೋಬರ್ 11 ರಂದು ಪುಣೆಯ ಕ್ಯಾಂಪ್ ನಲ್ಲಿಯ ಪೂನಾ ಕ್ಲಬ್…

Read More

ಅನಾದಿ ಕಾಲದಲ್ಲಿ ವ್ಯಕ್ತಿ ಕೌಶಲತೆಯ ಆಧಾರದಲ್ಲಿ ಜನರನ್ನು ನಾಲ್ಕು ವಿಭಾಗ ವರ್ಣವಾಗಿ ವಿಂಗಡಿಸಲಾಗಿತ್ತು. ಅದೇ ಮುಂದೆ ಮಾನವತೆಗೆ ಶಾಪವಾದ ಉಚ್ಚ, ನೀಚ ಜಾತಿ ಪದ್ಧತಿ ಕಾರಣವಾಯಿತು. ಅದರೊಂದಿಗೆ ಮೇಲು ಕೀಳು ಅಸ್ಪಶ್ಯತೆಯು ಅಂಟಿಕೊಂಡಿತು. ಅದರ ಆಧಾರದಲ್ಲಿಯೇ ಕಲಕಸುಬು ಹಂಚಲಾಯಿತು. ಸ್ವಾತಂತ್ರ್ಯ ನಂತರದ ಭಾರತದಲ್ಲಿ ಕಲಕಸುಬುಗಳು ಜಾತಿವರ್ಣಗಳಿಂದ ಹೊರಬಂದು ವ್ಯಕ್ತಿಗೆ (ಕೆಲಸ) ಬುದ್ಧಿ ಕೌಶಲ್ಯವೇ ಮಾನದಂಡವಾಯಿತು. ಮುಂದುವರಿದ ರಾಷ್ಟ್ರಗಳಲ್ಲಿ ಮಕ್ಕಳಿಗೆ 15 ವರ್ಷ ಪ್ರಾಯವಾಗುವಾಗಲೇ ಅವನ ಇಚ್ಛೆಯನ್ನು ಅರಿತು ಅವರಿಗೆ ಐಚ್ಚಿಕ ಶಿಕ್ಷಣ ಕೊಡುತ್ತಿದ್ದಾರೆ. ಪೌರೋಹಿತ್ಯ, ಕರಕುಶಲ, ಬಡಗಿ, ಅಕ್ಕಸಾಲಿಗ, ಕಮ್ಮಾರ, ಮಡಿಕೆ ತಯಾರಿ, ಬುಟ್ಟಿ, ಚಾಪೆ ತಯಾರಿ ಕಲ್ಲು ಕಟ್ಟುವ, ಮೀನು ಹಿಡಿಯುವುದು ಇತ್ಯಾದಿಯಾಗಿ ಎಲ್ಲವೂ ಜಾತಿ ಆಧಾರಿತವಾಗಿತ್ತು. ಪ್ರಸ್ತುತ ಶಾಸ್ತ್ರ ಕಲಿತರೆ ಪುರೋಹಿತ್ಯವನ್ನು ದಲಿತನು ಮಾಡಬಹುದಾಗಿದೆ. ಮೇಲಿನ ಯಾವ ಕಸುಬುಗಳು ಇಂದು ಜಾತಿ ಆಧಾರಿತವಾಗಿಲ್ಲ. ಆದರೆ ತೌಳವ ಮೂಲದ ಪ್ರಕೃತಿ ಶಕ್ತಿಗಳಾದ ದೈವರಾದನೆ ಮಾತ್ರ ಇಂದೂ ಕೂಡ ಜಾತಿ ಸೀಮಿತವಾಗಿಯೇ ನೆಲೆ ನಿಂತಿರುವುದು ಅಚ್ಚರಿಯಾದರೂ ಇದು ಅಪ್ಪಟ ಸತ್ಯ. ಇತ್ತೀಚೆಗೆ…

Read More

ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು ಶಾಂತಿನಿಕೇತನ ಪದವಿಪೂರ್ವ ಕಾಲೇಜು ಕುಪ್ಪಟಗೇರಿ ಇವರ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 2 ಕಂಚು ಒಟ್ಟು 5 ಪದಕ ಪಡೆದುಕೊಂಡರು. ಫಲಿತಾಂಶ : ಟೆನ್ನಿ ಕೃಷ್ಣ – 120ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ – 92ಕೆಜಿ ವಿಭಾಗದಲ್ಲಿ (ದ್ವಿತೀಯ), ಸಂಕೇತ್ ಶೆಟ್ಟಿ – 74 ಕೆಜಿ ವಿಭಾಗದಲ್ಲಿ (ತೃತೀಯ), ಶಶಿಕುಮಾರ್ – 63 ಕೆಜಿ ವಿಭಾಗದಲ್ಲಿ (ತೃತೀಯ), ಊರ್ಮಿಳಾ – 62 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದರು. ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ ಮೋಹನ ಆಳ್ವರು ಅಭಿನಂದಿಸಿದ್ದಾರೆ.

Read More