Author: admin
ಇಂದಿನ ಮಕ್ಕಳೇ ಮುಂದಿನ ಭವಿಷ್ಯ. ಇದನ್ನು ರೂಪಿಸುವಲ್ಲಿ ಅನೇಕ ತ್ಯಾಗಗಳೊಂದಿಗೆ ಶಿಕ್ಷಕರು ಮಕ್ಕಳ ವ್ಯಕ್ತಿತ್ವವನ್ನು ರೂಪಿಸುತ್ತಾರೆ. ಯುವಶಕ್ತಿಗೆ ಪ್ರೇರಣಾ ಶಕ್ತಿ ಶಿಕ್ಷಕರು. ಅಂತಹ ಎಲ್ಲಾ ಶಿಕ್ಷಕರಿಗೆ ಶಿಕ್ಷಕ ರಕ್ಷಕ ಪದಾಧಿಕಾರಿಗಳ ನಮನ ಎಂದು ಪುಷ್ಪರಾಜ್ ಶೆಟ್ಟಿ ಮಧ್ಯ ಹೇಳಿದರು. ಇವರು ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಗೋವಿಂದದಾಸ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಆಡಳಿತ ನಿರ್ದೇಶಕ ಪ್ರೊ ರಮೇಶ್ ಭಟ್ ಇವರು ಶಿಕ್ಷಕರ ಕರ್ತವ್ಯವನ್ನು ನೆನಪಿಸಿದರು. ಈ ಸಂದರ್ಭ ಎಲ್ಲಾ ಅಧ್ಯಾಪಕರನ್ನು ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳಾದ ಇಸ್ಮಾಯಿಲ್, ಪ್ರದೀಪ್ ರಾವ್, ವಾಸುದೇವ ಶಾನುಭೋಗ, ಸವಿತಾ, ಲಕ್ಷ್ಮಿ, ವಿಭ ಗೌರವಿಸಿದರು. ಪ್ರಾಂಶುಪಾಲೆ ಲಕ್ಷ್ಮಿ ಪಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲೆ ಸುನಿತಾ ಕೆ, ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಗಂಗಾಧರ್ ಕೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧೃತಿ ಕೋಟ್ಯಾನ್ ಸ್ವಾಗತಿಸಿ, ಕುಮಾರಿ ಗ್ರೀಷ್ಮ ವಂದಿಸಿದರು. ಸುಜಾತ ಸತೀಶ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.
ಮುಂಬೈಯ ತುಳು ಕನ್ನಡಿಗರ ಪ್ರತಿಷ್ಠಿತ ಹಣಕಾಸು ಸಲಹೆಗಾರರೆಂದೇ ಪ್ರಸಿದ್ಧಿ ಪಡೆದ ಅಂತರಾಷ್ಟ್ರೀಯ ಖ್ಯಾತಿಯ ಆರ್ಥಿಕ ತಜ್ಞ, ಪ್ರಸಿದ್ಧ ಜೀವವಿಮಾ ಸಲಹೆಗಾರ ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಆರ್ ಕೆ ಶೆಟ್ಟಿ ಆಂಡ್ ಕಂಪನಿಯ ಆಡಳಿತ ನಿರ್ದೇಶಕ ಡಾ| ಆರ್ ಕೆ ಶೆಟ್ಟಿ ಅವರಿಗೆ ಭಾರತೀಯ ಜೀವವಿಮಾ ನಿಗಮದ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ ಪುರಸ್ಕಾರ ಲಭಿಸಿದೆ. ಭಾರತೀಯ ಜೀವವಿಮಾ ನಿಗಮದ ಕೇಂದ್ರ ಕಚೇರಿ ವತಿಯಿಂದ ಮುಂಬೈ ನರಿಮಾನ್ ಪಾಯಿಂಟ್ ನ ಯೋಗ ಕ್ಷೇಮ ಸಭಾಗೃಹದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಅಧ್ಯಕ್ಷ ಆಲಿಸ್ಟೇರ್ ರಿಚರ್ಡ್ಸ್ ಸಹಿ ಹಾಕಿರುವ ಪ್ರಮಾಣ ಪತ್ರವನ್ನು ಎಲ್ಐಸಿ ಸಿಇಓ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಿದ್ದಾರ್ಥ ಮೋಹಂತಿ ಹಸ್ತಾಂತರಿಸಿ ಎಲ್ಐಸಿ ಗಿನ್ನಿಸ್ ಓಲ್ಡ್ ರೆಕಾರ್ಡ್ ಸಾಧನ ಗೌರವ ಪುರಸ್ಕಾರವನ್ನು ಡಾ| ಆರ್ ಕೆ ಶೆಟ್ಟಿ ಅವರಿಗೆ ಪ್ರಧಾನ ಮಾಡಿ ಅಭಿನಂದಿಸಿದರು. ಗ್ಲೋಬಲ್ ಇಂಡಿಯನ್ ಅವಾರ್ಡ್, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಹಾರಾಷ್ಟ್ರ…
ಮರಾಠಿ ಮಣ್ಣಿನಲ್ಲಿ ಚಿಣ್ಣರಬಿಂಬ ನಮ್ಮ ಸಂಸ್ಕೃತಿಯನ್ನು ಬಿತ್ತರಿಸುತ್ತಿರುವುದು ಶ್ಲಾಘನೀಯ – ಶೋಭಾ ಅಮರನಾಥ ಶೆಟ್ಟಿ
ಚಿಣ್ಣರಬಿಂಬ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಒಂದು ಒಳ್ಳೆಯ ಕಾರ್ಯಕ್ರಮವನ್ನು ಮಾಡುತ್ತಾ ಇರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ನಿಸ್ವಾರ್ಥ ಮನೋಭಾವನೆ ಇರುವ ಈ ಸಂಸ್ಥೆ ನಮ್ಮ ಊರಿನ ನೆಲದ ಸಾರ ಹಾಗೂ ಜನಪದ ಸಂಸ್ಕೃತಿಯನ್ನು ಮಹಾರಾಷ್ಟ್ರದ ಮಣ್ಣಿನಲ್ಲಿ ನಮ್ಮ ಊರಿನ ಮಕ್ಕಳಿಗೆ ಕಲಿಸಿಕೊಡುವ ಕೆಲಸ ನಿಜವಾಗಿಯೂ ಶ್ಲಾಘನೀಯ. ಈ ಸಂಸ್ಥೆ ಇನ್ನಷ್ಟು ಹೆಮ್ಮರವಾಗಿ ಬೆಳೆಯಲಿ ಎಂದು ನಾನು ಆಶಿಸುತ್ತೇನೆ. ಈ ಸಂಸ್ಥೆಯಲ್ಲಿರುವ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಬಂಟರ ಸಂಘ ಮುಂಬಯಿ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷೆ ಶೋಭಾ ಅಮರನಾಥ ಶೆಟ್ಟಿಯವರು ನುಡಿದರು. ಅವರು ಸೆಪ್ಟೆಂಬರ್ 14 ರಂದು ಭಾನುವಾರ ಸಮತ ವಿದ್ಯಾ ಮಂದಿರ ಸಾಕಿನಾಕದಲ್ಲಿ ನಡೆದ ಚಿಣ್ಣರಬಿಂಬ 2025- 26 ನೇ ಸಾಲಿನ ಸಾಕಿನಾಕ ಶಿಬಿರದ ಮಕ್ಕಳ ಪ್ರತಿಭಾ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ನಾನು ತುಂಬಾ ಸಂಘ ಸಂಸ್ಥೆಗಳಿಗೆ ಭೇಟಿದಾಗ ಸಿಗುವ ಆನಂದಕ್ಕಿಂತ ಮಕ್ಕಳ ಈ ಸಂಸ್ಥೆಯಲ್ಲಿ ಸ್ವಲ್ಪ ಹೊತ್ತು ಕಳೆದದ್ದು ಖುಷಿಯನ್ನು ನೀಡಿದೆ. ಇಲ್ಲಿಯ ಮಕ್ಕಳ…
ಬಾರ್ಕೂರಿನಂತಹ ಐತಿಹಾಸಿಕ ಪ್ರದೇಶ ಚಾರಿತ್ರಿಕ ಕಾಲಘಟ್ಟದಲ್ಲಿ ತುಳುನಾಡಿನ ರಾಜಧಾನಿಯಾಗಿದ್ದು, ತನ್ನದೇ ವೈಶಿಷ್ಟತೆ ಹೊಂದಿದೆ ಎಂದು ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡು ಹೇಳಿದರು. ಬಾರ್ಕೂರಿನ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತುಳು ಸಾಹಿತ್ಯ ಅಕಾಡೆಮಿ ಸಹಯೋಗದೊಂದಿಗೆ ನಡೆದ ‘ಬಾರ್ಕೂರು ಮರೆಯಲಾಗದ ತುಳುನಾಡಿನ ರಾಜಧಾನಿ’ ಎಂಬ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಗೋವಾ ವಿಶ್ವವಿದ್ಯಾಲಯದ ಕಲಾನಿಕಾಯದ ಡೀನ್ ಮತ್ತು ಇತಿಹಾಸಕಾರ ಪ್ರೊ ನಾಗೇಂದ್ರ ರಾವ್ ದಿಕ್ಸೂಚಿ ಭಾಷಣ ಮಾಡಿ ಬಾರ್ಕೂರಿನ ಸಾಂಸ್ಕೃತಿಕ, ಆರ್ಥಿಕ ಮತ್ತು ಭೌಗೋಳಿಕ ಅನನ್ಯತೆ, ತುಳುನಾಡು ಮತ್ತು ವಿಜಯನಗರ ಸಾಮ್ರಾಜ್ಯದ ನಡುವೆ ಬಾರ್ಕೂರು ಮುಖ್ಯ ಪ್ರದೇಶವಾಗಿದ್ದುದರ ಕುರಿತು ವಿವರಿಸಿದರು. ಸಂಸ್ಥೆಯ ಪ್ರಿನ್ಸಿಪಲ್ ಪ್ರೊ. ಭಾಸ್ಕರ್ ಶೆಟ್ಟಿ ಸಲ್ವಾಡಿ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಮಹೇಶ್ ಉಡುಪ, ತುಳು ಅಕಾಡೆಮಿ ರಿಜಿಸ್ಟರ್ ಪೂರ್ಣಿಮಾ, ಅಕಾಡೆಮಿ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ಉಪಸ್ಥಿತರಿದ್ದರು. ವಿಚಾರ…
ಮೂಡುಬಿದಿರೆ: ಇಂದಿನ ಜಾಗತಿಕ ಯುಗದಲ್ಲಿ ವಿದ್ಯಾಭ್ಯಾಸದ ಉದ್ದೇಶ ಕೇವಲ ಉದ್ಯೋಗ ಪಡೆಯುವುದಲ್ಲ. ಸಮಾಜದಲ್ಲಿ ಬದಲಾವಣೆ ತರಲು, ಹೊಸ ಅವಕಾಶಗಳನ್ನು ಸೃಷ್ಟಿಸಲು, ಮತ್ತೊಬ್ಬರಿಗೆ ಜೀವನೋಪಾಯ ಕಲ್ಪಿಸಲು ನಾವು ಉದ್ಯೋಗದಾತರಾಗಬೇಕು ಎಂದು ಪುದುಚೇರಿಯ ಕರಾವಳಿ ರಕ್ಷಣಾ ಪಡೆಯ ಇನ್ಸ್ಪೆಕ್ಟರ್ ಜನರಲ್ ಸುರೇಂದ್ರಸಿಂಗ್ ದಾಸೀಲರು ನುಡಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಉದ್ಯೋಗವನ್ನು ಮಾತ್ರ ಕನಸು ಕಾಣದೆ, ಸಮಾಜಕ್ಕೆ ಹೊಸ ಉದ್ಯೋಗಾವಕಾಶಗಳನ್ನು ನೀಡಬಲ್ಲ ನಾಯಕರಾಗಿ ರೂಪುಗೊಳ್ಳಬೇಕು. ನಾಯಕತ್ವದ ನಿಜವಾದ ಅರ್ಥವು ಸಂಕಷ್ಟದ ಸಂದರ್ಭಗಳಲ್ಲಿ ಸಹಾನುಭೂತಿಯೊಂದಿಗೆ ನಡೆದುಕೊಳ್ಳುವುದರಲ್ಲಿ ಅಡಗಿದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳು ಸದಾ ಆತ್ಮವಿಶ್ವಾಸದಿಂದಿರಬೇಕು. ತಮಗೆ ತಾವೇ ಪ್ರೋತ್ಸಾಹ ನೀಡುವ ಗುಣವನ್ನು ಬೆಳೆಸಿಕೊಳ್ಳಬೇಕು. ಕೀಳರಿಮೆ ಬೆಳೆಸದೆ, ತಮ್ಮ ಬೆನ್ನನ್ನು ತಾವೇ ತಟ್ಟುತ್ತಾ ಮುಂದೆ ಸಾಗುವುದು ಸಾಧನೆಯ ರಹಸ್ಯವಾಗಿದೆ. ಮಾನಸಿಕ, ದೈಹಿಕ, ಭಾವನಾತ್ಮಕ, ಸಾಮಾಜಿಕ ಹಾಗೂ ಆರ್ಥಿಕ ಆರೋಗ್ಯಗಳ ಕಡೆಗೆ ಪ್ರಾಮುಖ್ಯತೆಯನ್ನು ನೀಡಿ. ವಿದ್ಯಾರ್ಥಿ ಜೀವನವೇ ವ್ಯಕ್ತಿತ್ವ ನಿರ್ಮಾಣದ ಅವಧಿ. ಈ ಹಂತದಲ್ಲಿ ನೈತಿಕ ಮೌಲ್ಯಗಳು,…
ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2025–26ನೇ ಸಾಲಿನ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರವು ಕಾರ್ಕಳ ತಾಲೂಕಿನ ಕಲತ್ರಪಾದೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ಕರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಪೂಜಾರಿ, ಈ ವಿಶೇಷ ಶಿಬಿರವು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಾಮಾಜಿಕ ಹೊಣೆಗಾರಿಕೆ ಹಾಗೂ ಸಕಾರಾತ್ಮಕ ಬದಲಾವಣೆಯನ್ನು ತರಲಿ ಎಂದು ಆಶಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದ್ಯಮಿ ನಿರಂಜನ್ ಮಾತನಾಡಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸಾಂಸ್ಕೃತಿಕವಾಗಿ ಹಾಗೂ ಶೈಕ್ಷಣಿಕವಾಗಿ ಶ್ರೇಷ್ಠ ಸಾಧನೆ ತೋರಿದೆ. ಈ ಸಂಸ್ಥೆಯ ಮಕ್ಕಳು ನಮ್ಮ ಶಾಲೆಯಲ್ಲಿ ಶಿಬಿರ ನಡೆಸುತ್ತಿರುವುದು ನಮಗೆ ಹರ್ಷ ತಂದಿದೆ ಎಂದರು. ಅಧ್ಯಕ್ಷತೆವಹಿಸಿದ ಮಾತನಾಡಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸದಾಕತ್, ಈ ವರ್ಷದ ವಿಶೇಷ ಶಿಬಿರವು ನಶಾ ಮುಕ್ತ ಭಾರತ ಎಂಬ ಘೋಷವಾಕ್ಯದೊಂದಿಗೆ ನಡೆಯಲಿದೆ. ಈ ಘೋಷವಾಕ್ಯ ಕೇವಲ ಪೋಷಣೆಗೆ ಮಾತ್ರ ಸೀಮಿತವಲ್ಲ, ಅದರ ಮಹತ್ವವನ್ನು ಅರಿತು, ಜೀವನದಲ್ಲಿ ಅಳವಡಿಸಿಕೊಳ್ಳಿ…
ಮೂಡುಬಿದಿರೆ: ಕರ್ನಾಟಕ ವಾಲಿಬಾಲ್ ಸಂಸ್ಥೆ ಆಯೊಜಿಸಿದ್ದ ಲೋಕೆಶ್ ಗೌಡ ಟ್ರೋಫಿ ಕರ್ನಾಟಕ ಸೀನಿಯರ್ ವಾಲಿಬಾಲ್ ಚಾಂಪಿಯನ್ಶಿಪ್ನಲ್ಲಿ ಮೂಡುಬಿದಿರೆಯ ಆಳ್ವಾಸ್ ಸ್ಪೋಟ್ಸ್ ಕ್ಲಬ್ ತಂಡ ಪುರುಷರ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿತು. ಬೆಂಗಳೂರಿನ ಶ್ರೀಕಂಠಿರವ ಕ್ರೀಡಾಂಗಣದಲ್ಲಿ ನಡೆದ ಪುರುಷರ ವಿಭಾಗದ ಫೈನಲ್ನಲ್ಲಿ ಆಳ್ವಾಸ್ ತಂಡ 3-1 ಅಂತರದಿ0ದ ಕರ್ನಾಟಕ ರಾಜ್ಯ ಪೋಲಿಸ್ ತಂಡವನ್ನು ಮಣಿಸಿತು. ತೀವ್ರ ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ ಮೇಲುಗೈ ಸಾಧಿಸಿದ ಆಳ್ವಾಸ್ ಆಟಗಾರರು ಪ್ರಶಸ್ತಿಗೆ ಮುತ್ತಿಕ್ಕಿದರು. ಇದಕ್ಕೂ ಮೊದಲು ನಡೆದ ಸೆಮಿಫೈನಲ್ನಲ್ಲಿ ಆಳ್ವಾಸ್ ತಂಡ, ಕ್ರೀಡಾ ಹಾಸ್ಟೆಲ್ ಬಿಜಿ ತಂಡವನ್ನು 3-1 ಅಂತರದಿ0ದ ಪರಭವಗೊಳಿಸಿತ್ತು. ವಿಜೇತರಿಗೆ ಕರ್ನಾಟಕದ ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಪ್ರಶಸ್ತಿ ವಿತರಿಸಿದರು. ವಿಜೇತ ತಂಡದ ಸದಸ್ಯರನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕಾಂತಾರ ಚಾಪ್ಟರ್ ೧ ರ ಟ್ರೈಲರ್ ಬಂದಿದೆ. ರಿಷಬ್ ಶೆಟ್ಟಿಯವರಿಂದ ದೈವಗಳ ನಂಬಿಕೆ ಹಾಳಾಯಿತು ಎಂದು ವಾದಿಸುವ ಒಂದು ವರ್ಗ ಈಗ ಮೆಲ್ಲ ಥಿಯೇಟರ್ ಕಡೆ ಸಾಗುವ ಪರಿಸ್ಥಿತಿ ಬರಬಹುದು. ಯಾಕೆಂದರೆ ಟ್ರೈಲರ್ ನಲ್ಲಿ ಬೆರ್ಮೆರೆ ಹಾಗೂ ಇತರ ದೇವರ ಕಥೆಯೂ ಉಲ್ಲೇಖ ಆಗಿದೆ. ದೈವಗಳ ವೇಷವನ್ನು ಹಿಂದೆ ಅಂದರೆ ನಮ್ಮ ಶಾಲಾ ದಿನಗಳಲ್ಲಿ ನಾಟಕದಲ್ಲಿ, ಆಟದಲ್ಲಿ ಹಾಕಿ ಕುಣಿದವರು ನಾವುಗಳು. ನಮಗ್ಯಾರಿಗೂ ಅದನ್ನು ಅಪಹಾಸ್ಯ ಮಾಡುವ ಉದ್ಧೇಶ ಇರಲಿಲ್ಲ. ಕಾಂತಾರ ಬರುವುದಕ್ಕೂ ಮೊದಲೇ ದೈವಗಳ ಬಗ್ಗೆ ವಿಶ್ವದ ಅನೇಕ ಭಾಗದ ಜನ ಅಧ್ಯಯನಕ್ಕೂ ಬಂದಿದ್ದರು. ಹಾಗಾಗಿ ರಿಷಬ್ ಶೆಟ್ಟಿಯವರಿಂದ ದೈವಗಳು ಜಗತ್ತಿನ ಜನಕ್ಕೆ ಗೊತ್ತಾದದ್ದಲ್ಲ. ಆದರೂ ಅವರನ್ನು ಟಾರ್ಗೆಟ್ ಮಾಡುವ ಉದ್ಧೇಶ ಸ್ಪಷ್ಟ.ಯಾರು ದೈವಗಳನ್ನ ಅಪಹಾಸ್ಯ ಮಾಡುತ್ತಾರೋ ಅವರ ನಿಂದನೆ ಸರಿ. ಅವರ ವಿರುದ್ಧ ಈ ಸಂಸ್ಕೃತಿ ರಕ್ಷಕರು ಅಂದುಕೊಂಡಿರುವವರು ಕೇಸು ಹಾಕಲಿ. ಹಾಗಂತಾ ತಾನು ಭಕ್ತಿಯಲ್ಲಿದ್ದು ಚಿತ್ರದ ಮೂಲಕ ತೋರಿಸಿದಕ್ಕೆ ಟೀಕಿಸುವುದು ಸರಿ ಅಲ್ಲ. ಒಟ್ಟಿನಲ್ಲಿ ಕಾಂತಾರ ಗೆಲ್ಲಲಿ.…
ಬೆಳುವಾಯಿ ಶ್ರೀ ಯಕ್ಷದೇವ ಮಿತ್ರ ಮಂಡಳಿಯವರು 28 ನೇಯ ವರ್ಷದ ಯಕ್ಷ ಸಂಭ್ರಮ ಕಾರ್ಯಕ್ರಮದಲ್ಲಿ ಯುವ ಉದ್ಯಮಿ, ಸಮಾಜ ಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಸಮರ್ಥ ಬಿಲ್ಡರ್ಸ್ ನ ಆಡಳಿತ ನಿರ್ದೇಶಕರಾದ ಬೆಳುವಾಯಿ ಸಂದೀಪ್ ಶೆಟ್ಟಿಯವರಿಗೆ ಉದ್ಯಮ ಕ್ಷೇತ್ರದ ಸಾಧನೆಗಾಗಿ 2025 ರ ಸಾಲಿನ ಶ್ರೀ ಯಕ್ಷದೇವ ಸಾಧನಾ ಪುರಸ್ಕಾರ ನೀಡಿ ಗೌರವಿಸಿದ್ದಾರೆ. ಸಂದೀಪ್ ಶೆಟ್ಟಿಯವರು ಮೂಡಬಿದಿರೆ ಯುವ ಬಂಟರ ಸಂಘದ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಈ ಸಂಧರ್ಭದಲ್ಲಿ ಹರಿಕೃಷ್ಣ ಪುನರೂರು, ನಿಕಟಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಲಯನ್ ಗೋವರ್ಧನ್ ಶೆಟ್ಟಿ, ದೇವಾನಂದ ಭಟ್, ಉದ್ಯಮಿ ಶ್ರೀಪತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಗಾಗಿ ಸುದ್ದಿ ಬಿಡುಗಡೆ ದಿನಪತ್ರಿಕೆಯ ಹಿರಿಯ ವರದಿಗಾರ ಉಮಾಪ್ರಸಾದ್ ರೈ ನಡುಬೈಲುರವರನ್ನು ಸಮರ್ಥ ಜನಸೇವಾ ಟ್ರಸ್ಟ್ ಪುಣ್ಚಪಾಡಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಉಮಾಪ್ರಸಾದ್ ರೈ ನಡುಬೈಲುರವರು 1993 ರಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಪುತ್ತೂರಿನ ಸುದ್ದಿ ಬಿಡುಗಡೆ ದಿನಪತ್ರಿಕೆಯಲ್ಲಿ 20 ವರ್ಷಗಳಿಂದ ವರದಿಗಾರರಾಗಿದ್ದು, ಪತ್ರಿಕಾ ಕ್ಷೇತ್ರದಲ್ಲಿ 32 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಸಮರ್ಥ ಜನ ಸೇವಾ ಟ್ರಸ್ಟ್ ನ ಅಧ್ಯಕ್ಷ ಗಿರಿಶಂಕರ ಸುಲಾಯರವರು ಅಧ್ಯಕ್ಷತೆ ವಹಿಸಿದ್ದರು. ಜೊತೆ ಕಾರ್ಯದರ್ಶಿ ನಾಗರಾಜ ನಿಡ್ವಣ್ಣಾಯ, ಕೋಶಾಧಿಕಾರಿ ಶೀನಪ್ಪ ಶೆಟ್ಟಿ ನೆಕ್ರಾಜೆ, ಟ್ರಸ್ಟಿಗಳಾದ ನಾಗೇಶ್ ಓಡಂತರ್ಯ, ರಾಜೇಶ್ವರಿ ಕನ್ಯಾಮಂಗಳ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಶ್ರೀ ಕುಚ್ಚೆಜಾಲು, ಯಶೋದ ನೂಜಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.















