Author: admin
ಬಂಟರ ಸಮುದಾಯದವರು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದಕ್ಕಾಗಿ ಬೆಂಗಳೂರು ಬಂಟರ ಸಂಘವು ಸಮುದಾಯದ ಹಿತಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಬೆಂಗಳೂರು ಬಂಟರ ಸಂಘದ ವಿದ್ಯಾರ್ಥಿ ವೇತನ ವಿಭಾಗದ ಛೇರ್ಮನ್ ಉಮೇಶ್ ಕುಮಾರ್ ಶೆಟ್ಟಿ ಹೇಳಿದರು. ತೀರ್ಥಹಳ್ಳಿ ತಾಲೂಕು ಬಂಟರ ಸಂಘದ ವತಿಯಿಂದ ಸೌರಮಾನ ಯುಗಾದಿಯ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿದರು. ಬೆಂಗಳೂರು ಬಂಟರ ಸಂಘವು ಪ್ರತಿ ವರ್ಷ ಒಂದು ಕೋಟಿ ರೂಪಾಯಿ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು, ಸಮಾಜದ ಬಡ ಹೆಣ್ಣು ಮಕ್ಕಳ ಮದುವೆಗೆ 50 ಲಕ್ಷ ರೂಪಾಯಿ ಮತ್ತು ಬಡವರ ಅರೋಗ್ಯ ಚಿಕಿತ್ಸೆಗೆ 25 ಲಕ್ಷ ರೂಪಾಯಿಗಳನ್ನು ಮೀಸಲಾಗಿ ಇಟ್ಟಿದ್ದೇವೆ ಎಂದು ಹೇಳಿದರು. ತೀರ್ಥಹಳ್ಳಿ ಬಂಟರ ಸಂಘದ ಉಪಾಧ್ಯಕ್ಷ ಡಿ.ಎಸ್ ವಿಶ್ವನಾಥ್ ಶೆಟ್ಟಿ ಮಾತನಾಡಿ, ನಮ್ಮ ತಾಲೂಕು ಬಂಟರ ಸಂಘವು ಇತರ ಸಮಾಜ ಬಂಧುಗಳೊಂದಿಗೆ ಸೇರಿ ಸೌಹಾರ್ದವಾಗಿ ಸಮಾಜದಲ್ಲಿ ಬೆರೆತಿದೆ. ನಮ್ಮ ಮಕ್ಕಳನ್ನು ಮಾನವ ಸಂಪತ್ತಾಗಿ ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ…
ಎಕ್ಸಲೆಂಟ್ ಹೈಸ್ಕೂಲು ಸುಣ್ಣಾರಿ, ಕುಂದಾಪುರ ಇದರ ಆಶ್ರಯದಲ್ಲಿ ದಿನಾಂಕ: 06-04-2025 ಉದ್ಘಾಟನೆಗೊಂಡಂತಹ ಚಿಣ್ಣರ ಅಂಗಳದ ಬೇಸಿಗೆ ಶಿಬಿರವಾದ ‘ ಬೆಸುಗೆ’ ಕಾರ್ಯಕ್ರಮವು ಸತತ ಎಂಟು ದಿನಗಳ ಕಾಲ ಬಹಳ ಸಾಂಸ್ಕøತಿಕ ವೈಭವಗಳೊಂದಿಗೆ ಅದ್ಧೂರಿ ಕಾರ್ಯಕ್ರಮವಾಗಿ 13-04-2025 ರಂದು ಸಮಾರೋಪಗೊಂಡಿತು. ಈ ಶಿಬಿರವು 200 ವಿದ್ಯಾರ್ಥಿಗಳ ಸೇರ್ಪಡೆಯ ನಿರೀಕ್ಷೆಯನ್ನು ಇಟ್ಟುಕೊಂಡು ಪ್ರಾರಂಭಿಸಲು ಯೋಜನೆ ಹಾಕಿಕೊಂಡರೂ, ನಿರೀಕ್ಷೆಗೂ ಮೀರಿ 250 ಕ್ಕಿಂತಲೂ ಅಧಿಕ ಚಿಣ್ಣರೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿಬಂದಿತು. ಚಿಣ್ಣರ ಉತ್ಸಾಹವನ್ನು ಇಮ್ಮಡಿಗೊಳಿಸುತ್ತಾ ಪ್ರತಿದಿನವು ಹೊಸ ಹೊಸ ಯೋಜನೆಗಳ ಬಣ್ಣ ಬಣ್ಣದ ಚಿತ್ತಾರಗಳೊಂದಿಗೆ ಮೂಡಿಬಂದ ಈ ಚಿಣ್ಣರ ಕಾರ್ಯಕ್ರಮವು 13-04-2025ರ ಸುಂದರ ಸಂಜೆಯಲ್ಲಿ ಸಮಾರೋಪಗೊಂಡಿರುತ್ತದೆ. ಈ ಸಮಾರೋಪ ಕಾರ್ಯಕ್ರಮಕ್ಕೆ ಹೊಸ ಮೆರುಗನ್ನು ನೀಡಲು ಹಾಗೂ ಚಿಣ್ಣರ ಜೊತೆ ಹಾಸ್ಯದ ಹೊನಲನ್ನು ಹರಿಸಲು ಅತಿಥಿ ಅಭ್ಯಾಗತರಾಗಿ ಆಗಮಿಸಿದ ಕರಾವಳಿ ಕುಂದಾಪುರದ ಕುಂದಗನ್ನಡದ ಹರಿಕಾರ ಹಾಗೂ ರಾಯಭಾರಿಯೆಂದು ಜನಮನದಲ್ಲಿ ಖ್ಯಾತರಾಗಿರುವ ಮನು ಹಂದಾಡಿಯವರು ಆಗಮಿಸಿ ಈ ಸಮಾರೋಪ ಕಾರ್ಯಕ್ರಮದಲ್ಲಿ ಚಿಣ್ಣರ ಬಳಗದೊಂದಿಗೆ ರಸವತ್ತಾದ ಕುಂದಗನ್ನಡದಲ್ಲಿ ಹಾಸ್ಯ ಚಟಾಕಿಯ…
ಮುಂಬಯಿಯ ಹಿರಿಯ ಹೋಟೆಲ್ ಉದ್ಯಮಿ ಸುಬ್ಬಯ್ಯ ವಿ ಶೆಟ್ಟಿಯವರು ಅಲ್ಪಕಾಲದ ಅಸೌಖ್ಯದಿಂದ ಏಪ್ರಿಲ್ 17 ರಂದು ಮುಂಬಯಿಯ ಬ್ರೀಜ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಮುಂಬಯಿಯ ವಿಲೇಪಾರ್ಲೆ, ಲೋನಾವಾಲ, ಪುಣೆ ನಗರಗಳಲ್ಲಿ ಹೋಟೆಲ್ ರಾಮಕೃಷ್ಣ ಮುಖಾಂತರ ಕರಾವಳಿ ಕನ್ನಡಿಗರು ನೆಲೆಯಾಗಲು ಶ್ರಮಿಸಿದ ಹಿರಿಯ ಉದ್ಯಮಿಗಳಲ್ಲಿ ಸುಬ್ಬಯ್ಯ ಶೆಟ್ಟಿಯವರೂ ಒಬ್ಬರು. ಮೂಲತಃ ಬೋಳ ಪರ್ತಿಮಾರ್ ಗುತ್ತಿನವರಾದ ಇವರು ಬೋಳ ಶ್ರೀ ಮೃತ್ಯುಂಜಯ ರುದ್ರ ಸೋಮನಾಥೇಶ್ವರ ದೇವಸ್ಥಾನ, ಬೋಳ ಶ್ರೀ ಬ್ರಹ್ಮಬೈದರ್ಕಳ ಗರಡಿ ಸೇರಿದಂತೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ದೇವಸ್ಥಾನ ಮತ್ತು ದೈವಸ್ಥಾನಗಳ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು. ಪತ್ನಿ, ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಶ್ರೀ ಕ್ಷೇತ್ರ ಗಣೇಶಪುರದಲ್ಲಿ ಬ್ರಹ್ಮಕಲಶೋತ್ಸವ, ಬ್ರಹ್ಮರಥ ಸಮರ್ಪಣೆ, ನಾಗಮಂಡಲ, ಜಾರಂದಾಯ ನೇಮೋತ್ಸವ, ಭಜನಾ ಸಂಭ್ರಮೋತ್ಸವ ಕಾರ್ಯಕ್ರಮವು ಏಪ್ರಿಲ್ 18 ರಿಂದ 26ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಬ್ರಹ್ಮರಥ ಸಮರ್ಪಣೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ ಹೇಳಿದ್ದಾರೆ. ಅವರು ದೇವಳದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 1960ರ ದಶಕದಲ್ಲಿ ತುಳುನಾಡಿನ ಪಾರಂಪರಿಕ ಪಟ್ಟಣವಾಗಿದ್ದ ಪಣಂಬೂರು ನವ ಮಂಗಳೂರು ಬಂದರ್ ಆಗಿ ಪರಿವರ್ತನೆಗೊಂಡಾಗ ಅಲ್ಲಿನ ನಿವಾಸಿಗಳು ಕಾಟಿಪಳ್ಳಕ್ಕೆ ಬಂದು ನೆಲೆಸಿದರು. 1988ನೇ ಇಸವಿಯಲ್ಲಿ ಪುನನಿರ್ವಸಿತ ಕಾಟಿಪಳ್ಳ ಕೈಕಂಬ ಪ್ರದೇಶದಲ್ಲಿ ಸರಕಾರದಿಂದ ಮಂಜೂರಾದ ಜಮೀನಿನಲ್ಲಿ ಕಾಟಿಪಳ್ಳ, ಕೃಷ್ಣಾಪುರ, ಬಾಳ, ಕುತ್ತೆತ್ತೂರು, ಕಾನ, ಕಟ್ಲ, ಸೂರಿಂಜೆ, ಮಧ್ಯ ಇತ್ಯಾದಿ ಪರಿಸರದ ಗ್ರಾಮಸ್ಥರು ಸೇರಿಕೊಂಡು ಶ್ರೀ ಮಹಾಗಣಪತಿ ದೇವಸ್ಥಾನವನ್ನು ನಿರ್ಮಿಸಿದರು. ಬಲಮುರಿ ಶ್ರೀ ಮಹಾಗಣಪತಿ ದೇವರು ನೆಲೆಯಾದ ಪುಣ್ಯ ಪ್ರದೇಶಕ್ಕೆ ಯತಿಶ್ರೇಷ್ಠರಾದ ಪೇಜಾವರ ವಿಶ್ವೇಶ್ವತೀರ್ಥ ಶ್ರೀಪಾದರು ಶ್ರೀ ಕ್ಷೇತ್ರ ಗಣೇಶಪುರ ಎಂಬ ನಾಮಕರಣವನ್ನು ಮಾಡಿದರು.…
ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ ವತಿಯಿಂದ ರಾಮನವಮಿ ಆಚರಣೆಯು ಏಪ್ರಿಲ್ 6 ರಂದು ಮತ್ತು ಹನುಮ ಜಯಂತಿ ಆಚರಣೆಯು ಏಪ್ರಿಲ್ 12ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ರಾಮನವಮಿ ಆಚರಣೆಯು ಬಳಗದ ಪ್ರಮುಖರಾದ ಶ್ರೀಮತಿ ಪ್ರೇಮಾ ಸಂಜಯ್ ಶೆಟ್ಟಿ ದಂಪತಿಗಳ ಆಯೋಜನೆಯಲ್ಲಿ ಬಿಬ್ವೆವಾಡಿಯಲ್ಲಿ ಹಾಗೂ ಹನುಮ ಜಯಂತಿ ಆಚರಣೆಯು ಬಳಗದ ಪ್ರಮುಖರಾದ ಜಗದೀಶ್ ಹೆಗ್ಡೆ, ಸ್ವರ್ಣಲತಾ ಜೆ ಹೆಗ್ಡೆ ದಂಪತಿಗಳ ಆಯೋಜನೆಯಲ್ಲಿ ಲುಲ್ಲಾ ನಗರದಲ್ಲಿ ಜರಗಿತು. ಕಾರ್ಯಕ್ರಮದ ಅಂಗವಾಗಿ ದೇವರಿಗೆ ದೀಪ ಬೆಳಗಿಸಿ, ನಂತರ ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಸದೆಸ್ಯೆಯರು ಹಾಗೂ ಬಳಗದ ಸದಸ್ಯರಿಂದ ದಾಮೋದರ ಬಂಗೇರರವರ ಮಾರ್ಗದರ್ಶನದಲ್ಲಿ ಬಳಗದ ಭಜನಾ ಮಂಡಳಿಯಿಂದ ಭಜನೆ ನಡೆಯಿತು. ನಂತರ ಸೇರಿದ ಭಕ್ತರೆಲ್ಲರೂ ಸಾಮೂಹಿಕವಾಗಿ ಹನುಮಾನ್ ಚಾಲೀಸವನ್ನು ಪಠಿಸಿದರು. ಹನುಮ ಪೂಜೆಯ ನಂತರ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಿತು. ಕಾರ್ಯಕ್ರಮದ ಆಯೋಜಕ ದಂಪತಿಗಳು, ಪುಣೆ ಶ್ರೀ ಗುರುದೇವ ಸೇವಾ ಬಳಗದ…
ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ ಎಸ್ ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ತುಳು ಚಲನಚಿತ್ರ ಮಂಗಳೂರಿನ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಮಾಜಿ ಮೇಯರ್ ಮನೋಜ್ ಕುಮಾರ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಬಿಡುಗಡೆಗೊಳಿಸಿದರು. ತುಳುವಿನಲ್ಲಿ ಬಿಡುಗಡೆಗೊಂಡಿರುವ ಮೀರಾ ಸಿನಿಮಾದಲ್ಲಿ ನಮ್ಮ ಮನೆಯ ಸುತ್ತಮುತ್ತಲಿನ ಕಥೆ ಇದೆ. ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸಬೇಕು ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ತುಳುವಿನಲ್ಲಿ ಈಗ ಉತ್ತಮ ಸದಭಿರುಚಿಯ ಸಿನಿಮಾಗಳು ಬರುತ್ತಿದೆ. ಅದರಲ್ಲೂ ಮೀರಾ ಸಿನಿಮಾ ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಮನೆಮಂದಿ ಎಲ್ಲರೂ ಇಂತಹ ಸಿನಿಮಾವನ್ನು ನೋಡಿ ಪ್ರೋತ್ಸಾಹಿಸಬೇಕೆಂದರು.ನಟ, ನಿರ್ದೇಶಕ ರಾಹುಲ್ ಮಾತನಾಡಿ, ನಗರದಲ್ಲೀಗ ಫ್ಲೆಕ್ಸ್ ಗಳನ್ನು ಅಳವಡಿಸಲು ಮಹಾನಗರ ಪಾಲಿಕೆ ನಿಷೇಧ ಏರಿರುವುದರಿಂದು ತುಳು ಸಿನಿಮಾ ರಂಗದ ಮೇಲೆ ನೇರ ಪರಿಣಾಮ ಬೀರಿದೆ. ಹೀಗಾಗಿ ತುಳು ಸಿನಿಮಾ ರಂಗದ ನಿರ್ಮಾಪಕರು ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕಾಗಿದೆ ಎಂದರು.…
ಪುಣೆ ಬಂಟರ ಸಂಘದ ಯುವ ವಿಭಾಗದ ಕಾರ್ಯಾಧ್ಯಕ್ಷರಾಗಿ 2025 – 2027 ರ ಅವಧಿಗೆ ಬಹುಮುಖ ಪ್ರತಿಭೆಯ ಅಭಿನಂದನ್ ಎಸ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಏಪ್ರಿಲ್ 14 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆಯವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಿಶೇಷ ಮಹಾಸಭೆಯಲ್ಲಿ ಸಂಘದ ನೂತನ ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ದಕ್ಷಿಣ, ಉತ್ತರ, ಪೂರ್ವ ಹಾಗೂ ಪಶ್ಚಿಮ ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಪುಣೆಯ ಸಿಂಹಘಡ್ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಪೂರೈಸಿ, ಪುಣೆಯ MIT ಕಾಲೇಜಿನಲ್ಲಿ ಎಂಬಿಎ ಪದವಿ ಗಿಟ್ಟಿಸಿಕೊಂಡಿದ್ದಾರೆ. ಪ್ರಸ್ತುತ ಐಟಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಅಭಿನಂದನ್ ಶೇಖರ್ ಶೆಟ್ಟಿಯವರು ವಿದ್ಯಾರ್ಥಿ ಜೀವನದಲ್ಲಿ ಆದರ್ಶ ವಿದ್ಯಾರ್ಥಿಯಾಗಿದ್ದುಕೊಂಡು ಕಾಲೇಜಿನ ಶಿಕ್ಷಕರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿ ಪ್ರಶಂಸೆಯನ್ನು ಪಡೆದಿರುವುದು ಮಾತ್ರವಲ್ಲದೆ ಕಾಲೇಜಿನಿಂದ “ಸ್ಟೂಡೆಂಟ್ ಆಫ್ ದ ಇಯರ್ ಅವಾರ್ಡ್ -2019” ನ್ನು…
ಪ್ರತಿಷ್ಠಿತ ಪುಣೆ ಬಂಟರ ಸಂಘದ 2025 – 2027 ರ ಅವಧಿಗೆ ನೂತನ ಅಧ್ಯಕ್ಷರಾಗಿ ಹೋಟೆಲ್ ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಕೆಂಜಾರು ಅಜಿತ್ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಏಪ್ರಿಲ್ 14 ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ನಡೆದ ವಿಶೇಷ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಎರಡು ವರ್ಷಗಳಿಗಾಗಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಕೆಂಜಾರು ಅಜಿತ್ ಹೆಗ್ಡೆಯವರು ಪುಣೆಯಲ್ಲಿ ಪ್ರತಿಷ್ಠಿತ ಹೋಟೆಲ್ ಉದ್ಯಮಿಯಾಗಿ ಮಾತ್ರವಲ್ಲದೇ ಉದ್ಯಮದ ಯಶಸ್ಸಿನೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. ಸಿಂಪೋಣಿ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾಗಿದ್ದಾರೆ. ಪುಣೆ ಬಂಟರ ಸಂಘದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಪ್ರತಿಷ್ಠಿತ ಸಂಘದ ಭವನದ ನಿರ್ಮಾಣ ಹಂತದಲ್ಲಿ ಗುರುತರ ಸೇವೆಯನ್ನು ಸಲ್ಲಿಸಿದ್ದಾರೆ. ಅಲ್ಲದೆ ಸಂಘದ ಮೂಲಕ ವರ್ಷವಿಡೀ ಹತ್ತು ಹಲವು ಕಾರ್ಯಕ್ರಮಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾ ಬಂದಿದ್ದಾರೆ. ಪುಣೆಯಲ್ಲಿನ ವಿವಿಧ ಸಂಘ ಸಂಸ್ಥೆಗಳಲ್ಲಿಯೂ…
ಪ್ರತಿಷ್ಠಿತ ಪುಣೆ ಬಂಟರ ಸಂಘದ 2025 – 2027 ರ ಅವಧಿಗೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಶಮ್ಮಿ ಅಜಿತ್ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಏಪ್ರಿಲ್ 14 ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ನಡೆದ ವಿಶೇಷ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಎರಡು ವರ್ಷಗಳಿಗಾಗಿ ಮಹಿಳಾ ವಿಭಾಗದ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.ಶಮ್ಮಿಅಜಿತ್ ಹೆಗ್ಡೆಯವರು ಪುಣೆ ಬಂಟರ ಸಂಘದ ಮಹಿಳಾ ವಿಭಾಗದಲ್ಲಿ ಹಲವಾರು ವರ್ಷಗಳಿಂದ ಸಕ್ರಿಯವಾಗಿ ಗುರುತಿಸಿಕೊಂಡು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಮಹಿಳೆಯರ ಅಪಾರವಾಗಿ ಶ್ರಮಿಸಿದ್ದಾರೆ. ಈ ಹಿಂದೆ ಸಮಿತಿಯ ವಿವಿಧ ವಿಭಾಗಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ್ದಾರೆ.
ಮೇ.14ರಂದು ಖಂಡಿಗೆ ಮೀನು ಹಿಡಿಯುವ ಜಾತ್ರೆಯೊಂದಿಗೆ ಕಂಡೇವುದ ಆಯನ ಪ್ರಾರಂಭಗೊಳ್ಳಲಿದ್ದು, ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಚೇಳಾಯರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ಹಾಗೂ ಪರಿವಾರ ದೈವಗಳ ವಾರ್ಷಿಕ ಜಾತ್ರೆ ನಡೆಯಲಿದೆ ಎಂದು ತೋಕೂರು ಗುತ್ತು ಉದಯ್ ಕುಮಾರ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ಮೇ 14ರಂದು ಬೆಳಿಗ್ಗೆ ಗಂಟೆ 9ಕ್ಕೆ ಮೂಲಸ್ಥಾನದಲ್ಲಿ ಶುದ್ಧಕಲಶ, ಗಣಹೋಮ, ಬೆಳಿಗ್ಗೆ ಗಂಟೆ 11ಕ್ಕೆ ಸಂಕ್ರಮಣ ಪೂಜೆ, 12 ಗಂಟೆಗೆ ಮಹಾ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 8ಕ್ಕೆ ಮಹಾ ಅನ್ನಸಂತರ್ಪಣೆ, ರಾತ್ರಿ 9 ಗಂಟೆಗೆ ಬ್ರಹ್ಮಸ್ಥಾನದಲ್ಲಿ ಬ್ರಹ್ಮರಿಗೆ ತಂಬಿಲ, ಕುಮಾರ ಸಿರಿಗಳ ದರ್ಶನ, ಧರ್ಮದ ಶ್ರೀ ಉಳ್ಳಾಯ ಹಾಗೂ ಪರಿವಾರ ದೈವಗಳ ಭಂಡಾರ ಮೂಲಸ್ಥಾನ ಹೋಗುವುದು. ಸಿಡಿಮದ್ದು ಪ್ರದರ್ಶನ ನಂತರ ಧ್ವಜಾರೋಹಣ ನಡೆಯಲಿದೆ. ಮೇ 15 ಗುರುವಾರದಂದು ಬೆಳಿಗ್ಗೆ ಗಂಟೆ 5-00ಕ್ಕೆ ಧರ್ಮರಸು ಶ್ರೀ ಉಳ್ಳಾಯ, ಇಷ್ಟದೇವತೆ, ಬಬ್ಬರ್ಯ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ ನಂತರ ನಂದಿಗೋಣ ಕುಮಾರ ಸಿರಿಗಳ ಭೇಟಿ,…