Author: admin
ವಿದ್ಯಾಗಿರಿ: ‘ಲೇಕ್ 2024’ ಸಮ್ಮೇಳನವು ಪ್ರಸ್ತುತ ಜ್ವಲಂತ ಸಮಸ್ಯೆಗಳಿಗೆ ಪ್ರಕೃತಿ ಆಧಾರಿತ ಪರಿಹಾರಗಳನ್ನು ಕಂಡುಕೊಳ್ಳುವ ಸುಸ್ಥಿರ ಹಾಗೂ ಸದುದ್ದೇಶಗಳನ್ನು ಹೊಂದಿದೆ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ಎನರ್ಜಿ ಆ್ಯಂಡ್ ವೆಟ್ಲ್ಯಾಂಡ್ಸ್ ರಿಸರ್ಚ್ ಗ್ರೂಪ್, ಇವುಗಳ ಜಂಟಿ ಆಶ್ರಯದಲ್ಲಿ ನಾಲ್ಕು ದಿನಗಳ ‘ಲೇಕ್2024- 14ನೇ ದ್ವೈವಾರ್ಷಿಕ ಕೆರೆ (ಸರೋವರ) ಸಮ್ಮೇಳನ’ವನ್ನು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಹಲವು ವರ್ಷಗಳಿಂದ ದೇಶದಲ್ಲಿ ಅಪಾರ ಪ್ರಮಾಣದಲ್ಲಿ ಮಳೆ ಹಾನಿ, ಭೂಕುಸಿತ ಮತ್ತು ಜಲಪ್ರಳಯದ ಆಘಾತಕಾರಿ ಘಟನೆಗಳು ನಡೆಯುತ್ತಿವೆ. ಪ್ರಕೃತಿ, ಪ್ರಾಣಿಸಂಕುಲ, ಸಸ್ಯವರ್ಗ ನಾಶವಾಗುತ್ತಿವೆ. ಈ ನಿಟ್ಟಿನಲ್ಲಿ ಕೆರೆಗಳ ಕುರಿತು ಚಿಂತನ ನಡೆಸುವುದು ಬಹಳ ಅವಶ್ಯಕವಾಗಿದೆ ಎಂದು ಅವರು ವಿವರಿಸಿದರು. ಅಳಿವೆ ಉಳಿಸುವ ಕಾರ್ಯ, ಹಸಿರು ಬಜೆಟ್ ಆರಂಭಿಸುವುದು ಮತ್ತು ಪರಿಸರ ಪೂರಕ…
ಅರಬ್ ಸಂಯುಕ್ತ ಸಂಸ್ಥಾನದ ವಾಣಿಜ್ಯ ನಗರಿ ದುಬಾಯಿಯಲ್ಲಿ ಪ್ರಥಮ ಬಾರಿಗೆ ದಸರಾ ನವರಾತ್ರಿ ಉತ್ಸವದಲ್ಲಿ 2024 ಅಕ್ಟೋಬರ್ 11ನೇ ತಾರೀಕು ಶುಕ್ರವಾರ ಸಂಜೆ 4.00 ಗಂಟೆಯಿಂದ ದುಬಾಯಿ ಅಲ್ ಸಫಾದಲ್ಲಿರುವ ಜೆ. ಎಸ್. ಎಸ್. ಪ್ರವೈಟ್ ಸ್ಕೂಲ್ ಸಭಾಂಗಣದಲ್ಲಿ ಅತ್ಯಂತ ಭಕ್ತಿ ಭಾವದಿಂದ ನೆರವೇರಿತು. ದುಬಾಯಿಯಲ್ಲಿ ಪ್ರಥಮ ಬಾರಿಗೆ ದುರ್ಗಾ ಮಾತೆಯ ವಿಗ್ರಹವನ್ನು ಪ್ರತಿಷ್ಠಾಪಿಸಿ ಕೊಲ್ಲೂರಿನಿಂದ ಪುರೋಹಿತರಾದ ಪಂಡಿತ್ ಶ್ರೀ ಶೇಷಗಿರಿ ಭಟ್ ಮತ್ತು ಶ್ರೀ ಸಂಜೀವ ಹೆಗ್ಡೆ ಮತ್ತು ಕಿರಣ್ ಕುಮಾರ್ ಭಟ್ ರವರ ಪೌರೋಹಿತ್ಯದಲ್ಲಿ ಗುರುವಂದನೆ, ಶಾಂತಿ ಮಂತ್ರ, ಗಣಪತಿ ಪೂಜೆ ಮಹಾ ಸಂಕಲ್ಪ, ದೀಪಾ ಪ್ರತಿಷ್ಠಾಪನೆ ಅಹ್ವಾನ ಪೂಜೆ, ಲಲಿತಾ ಸಹಸ್ರನಾಮ ಪಠಣ, ಕುಂಕುಮಾರ್ಚನೆ, ಆರತಿ ಮತ್ತು ದುರ್ಗಾ ನಮಸ್ಕಾರ, ನವ ದುರ್ಗಾ ಪ್ರಾರ್ಥನೆ ಮತ್ತು ರಾಜೋಪಚಾರ, ಸಂಗೀತ ಸೇವೆ, ನೃತ್ಯ ಸೇವೆ, ಮಹಾ ಮಂಗಳಾರತಿ, ಕನ್ನಿಕಾ ಪೂಜೆ, ಸುಮಂಗಲಿ ಪೂಜೆ, ಮತ್ತು ಸಾಮೂಹಿಕ ಪ್ರಾರ್ಥನೆ, ತೀರ್ಥ ಪ್ರಸಾದ ಮತ್ತು ಮಹಾ ಪ್ರಸಾದವನ್ನು ಭಕ್ತಾದಿಗಳು ಸ್ವೀಕರಿಸಿದರು. ದುರ್ಗಾ…
‘ಪುರಾತನ ದೇವಸ್ಥಾನದ ಹಿನ್ನೆಲೆಯನ್ನು ಯುವ ಜನರಿಗೆ ತಿಳಿಯಪಡಿಸುವ ಕಾರ್ಯಗಳ ಜತೆಗೆ ನಮ್ಮ ಸಂಸ್ಕೃತಿ, ಸಂಪ್ರದಾಯ ಉಳಿಸುವ ಕಾರ್ಯ ಮಾಡಬೇಕಾಗಿದೆ. ಆಲ್ಬಮ್ ಹಾಡುಗಳ ಜೊತೆ ಚಲನಚಿತ್ರ ಕೂಡ ನಿರ್ಮಾಣವಾಗಲಿ’ ಎಂದು ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನಚಂದ್ರ ಜೆ ಶೆಟ್ಟಿ ಹೇಳಿದರು. ಪಡುಬಿದ್ರಿ ಭಾರತ್ ಸಿನಿಮಾದಲ್ಲಿ ನಡೆದ ‘ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ’ ಕನ್ನಡ ವೀಡಿಯೋ ಆಲ್ಬಮ್ ಹಾಡುಗಳ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. ವಂದನಾ ರೈ, ಕಾಪು ರಕ್ಷಣಾಪುರ ಜವನೆರ್ ಅಧ್ಯಕ್ಷ ನವೀನ್ ಎನ್ ಶೆಟ್ಟಿ, ವಿಶ್ವಾಸ್ ವಿ. ಅಮೀನ್, ಪತ್ರಕರ್ತ ಸುರೇಶ್ ಎರ್ಮಾಳ್, ಗಣ್ಯರಾದ ಶೇಖರ್ ಹೆಜಮಾಡಿ, ಕರುಣಾಕರ್ ಪೂಜಾರಿ, ಗೀತಾ ಅರುಣ್, ಸುನಿಲ್ ಕುಮಾರ್, ಯಶೋಧ ಪಡುಬಿದ್ರಿ, ರಚನ್ ಸಾಲ್ಯಾನ್, ನಮೃತಾ ಮಹೇಶ್, ಶರತ್ ಎಸ್ ಪೂಜಾರಿ ಪಡುಬಿದ್ರಿ, ನಾಯಕಿ ನಟಿ ಸುಪ್ರೀತಾ ಪೂಜಾರಿ ಪಾಂಗಾಳ, ಗಾಯಕಿ ನಮಿತಾ ಕಾರ್ಕಳ, ಭಜನಾ ಗಾಯಕ ಸುರೇಶ್ ಪಲಿಮಾರ್ ಉಪಸ್ಥಿತರಿದ್ದರು. ಸಂತೋಷ್ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿದರು.
ಮಹಾಕವಿ ಕಾಳಿದಾಸನ ‘ಅಭಿಜ್ಞಾನ ಶಾಕುಂತಲ’ ಸಂಸ್ಕೃತ ನಾಟಕವನ್ನಾಧರಿಸಿದ ‘ಸತೀ ಶಕುಂತಲೆ’ ಯಕ್ಷಗಾನ ತಾಳಮದ್ದಳೆಯು ಈ ವಾರದಿಂದ ಮಂಗಳೂರು ಆಕಾಶವಾಣಿಯಲ್ಲಿ ಎರಡು ಭಾಗಗಳಾಗಿ ಮೂಡಿ ಬರಲಿದೆ. ಕರ್ನಾಟಕ ಯಕ್ಷ ಭಾರತಿ ಪುತ್ತೂರು ತಂಡದ ಕಲಾವಿದರು ಭಾಗವಹಿಸಿರುವ ಈ ಯಕ್ಷಗಾನ ತಾಳಮದ್ದಳೆಯ ಮೊದಲನೇ ಭಾಗ ‘ಮುದ್ರಿಕಾ ಪ್ರದಾನ’ 2024 ಅಕ್ಟೋಬರ್ 18 ಶುಕ್ರವಾರದಂದು ರಾತ್ರಿ ಗಂಟೆ 9.30ಕ್ಕೆ ಪ್ರಸಾರವಾಗಲಿದೆ. ಅರ್ಥಧಾರಿಗಳಾಗಿ ಭಾಸ್ಕರ ರೈ ಕುಕ್ಕುವಳ್ಳಿ, ಗಣರಾಜ ಕುಂಬ್ಳೆ, ಎಂ.ಕೆ ರಮೇಶಾಚಾರ್ಯ, ರಮೇಶ ಸಾಲ್ವಣ್ಕರ್ ಹಾಗೂ ಉಮೇಶಾಚಾರ್ಯ ಗೇರುಕಟ್ಟೆ ಪಾತ್ರ ವಹಿಸಲಿದ್ದಾರೆ. ಭಾಗವತರಾಗಿ ಪ್ರಶಾಂತ ರೈ ಪುತ್ತೂರು, ಹಿಮ್ಮೇಳದಲ್ಲಿ ಪಿ.ಟಿ. ಜಯರಾಮ ಭಟ್, ಕೋಳ್ಯೂರು ಭಾಸ್ಕರ ಮತ್ತು ಹರಿಶ್ಚಂದ್ರ ನಾಯಗ ಮಾಡೂರು ಸಹಕರಿಸಲಿದ್ದಾರೆ. ಪ್ರಸಂಗದ ಎರಡನೇ ಭಾಗ ‘ಸತೀ ಸಮಾಗಮ’ ಮುಂದಿನ ಶುಕ್ರವಾರ ಅಕ್ಟೋಬರ್ 25 ರಂದು ರಾತ್ರಿ 9:30ಕ್ಕೆ ಪ್ರಸಾರವಾಗುವುದು. ಕರ್ನಾಟಕ ಯಕ್ಷ ಭಾರತಿ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸಂಯೋಜಿಸಿದ ಈ ಯಕ್ಷಗಾನವನ್ನು ಮಂಗಳೂರು ಆಕಾಶವಾಣಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೂರ್ಯನಾರಾಯಣ ಭಟ್ ಪಿ.ಎಸ್…
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ನೀಡುವುದರ ಮೂಲಕ ಯುವ ಜನತೆಯ ಬಾಳಿನ ಬೆಳಕಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 7ನೇ ವರ್ಷದ ಶಾರದೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಮುಂಜಾನೆ ಸ್ವಸ್ತಿ ಪುಣ್ಯಾಹವಚನ ಮತ್ತು ಗಣಪತಿ ಹೋಮದ ಮೂಲಕ ಮೊದಲ್ಗೊಂಡು ನಂತರದಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ದತಾ ತರಬೇತಿಯಲ್ಲಿರುವ ಸಂಸ್ಥೆಯ ವಿದ್ಯಾರ್ಥಿಗಳು ಭಜನೆ ಹಾಗೂ ಶಾರದಾ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಿದರು. ಮಧ್ಯಾಹ್ನ ವಿದ್ಯಾಮಾತಾ ಅಕಾಡೆಮಿಯ ಆಡಳಿತ ಮಂಡಳಿ, ತರಬೇತುದಾರರು ಹಾಗೂ ವಿದ್ಯಾರ್ಥಿಗಳು ಹಾಗೂ ಆಗಮಿಸಿದ್ದ ಅತಿಥಿಗಳ ಸಮ್ಮುಖದಲ್ಲಿ ಸಹಭೋಜನ ನಡೆಯಿತು ಹಾಗೂ ರಾತ್ರಿ ದುರ್ಗಾ ನಮಸ್ಕಾರ ಪೂಜೆ ನೆರವೇರಿತು. ಪೂಜಾ ಕಾರ್ಯಗಳಿಗೆ ಆಗಮಿಸಿದ ಎಲ್ಲರನ್ನೂ ಸಂಸ್ಥೆಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಹಾಗೂ ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈರವರು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ, ಜೆಸಿಐ ಪುತ್ತೂರು ಇದರ ಅಧ್ಯಕ್ಷ ಮೋಹನ್ ಕೆ, ಜೆಸಿಐ ಪುತ್ತೂರು ಕಾರ್ಯದರ್ಶಿ ಆಶಾ ಮೋಹನ್, ಮುಖಂಡರಾದ ಹೇಮನಾಥ…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬಯಿಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳ ಒಗ್ಗಟ್ಟಿನಲ್ಲಿ “ವಿಶ್ವ ಬಂಟರ ಸಮಾಗಮ” ಬೃಹತ್ ಕಾರ್ಯಕ್ರಮದ ಬಗ್ಗೆ ವಿಶೇಷ ಸಭೆಯು ಅಕ್ಟೋಬರ್ 15 ರಂದು ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಸ್ ಸಂಕೀರ್ಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಐಕಳ ಹರೀಶ್ ಶೆಟ್ಟಿಯವರು ಮಾತನಾಡುತ್ತಾ, ಕಳೆದ ವರ್ಷ ಉಡುಪಿಯಲ್ಲಿ ಎರಡು ದಿನಗಳ ವಿಶ್ವ ಮಟ್ಟದ ಬಂಟ ಸಮ್ಮಿಲನವನ್ನು ಆಯೋಜಿಸಿಕೊಂಡಿದ್ದು ಸುಮಾರು 75 ಸಾವಿರಕ್ಕೂ ಮಿಕ್ಕಿ ಸಮಾಜ ಬಾಂಧವರು ಪಾಲ್ಗೊಂಡು ಯಶಸ್ವಿಯಾಗಿ ನಡೆದಿದೆ. ಮಂಬಯಿಯಲ್ಲಿ 3 ವರ್ಷಗಳ ಹಿಂದೆ ಬಂಟ ಸಮ್ಮಿಲನ ಯಶಸ್ವಿಯಾಗಿ ನಡೆದಿದೆ. ಈ ವರ್ಷ ಮುಂಬಯಿ ಮಹಾನಗರದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳನ್ನು ಒಟ್ಟು ಸೇರಿಸುವ ಮಹಾನ್ ಉದ್ದೇಶದೊಂದಿಗೆ ಡಿಸೆಂಬರ್ 7ರಂದು ಕುರ್ಲಾ ಬಂಟರ ಭವನದಲ್ಲಿ “ವಿಶ್ವ ಬಂಟರ ಸಮಾಗಮ” ಜಾಗತಿಕ ಮಟ್ಟದ ಕಾರ್ಯಕ್ರಮ ಬೆಳಿಗ್ಗೆಯಿಂದ ಸಂಜೆವರೆಗೆ…
ವಿದ್ಯಾಗಿರಿ: ಇಂದಿನ ಕಾಲದಲ್ಲಿ ಅರ್ಥಪೂರ್ಣವಾದ ಶ್ರೇಷ್ಠ ಬದುಕನ್ನು ಬದುಕುವುದು ಸವಾಲಿನ ಕೆಲಸ. ಅಂತಹ ಸವಾಲನ್ನು ನಾವೆಲ್ಲ ಸ್ವೀಕರಿಸಬೇಕು ಎಂದು ಮಂಗಳೂರಿನ ಎಂಆರ್ಪಿಎಲ್- ಒಎನ್ಜಿಸಿ ಪ್ರಧಾನ ವ್ಯವಸ್ಥಾಪಕ (ಕಾರ್ಪೊರೇಟ್ ಸಂವಹನ) ಡಾ. ರೊಡಲ್ ನೊರಾನ್ಹಾ ಅಭಿಪ್ರಾಯಪಟ್ಟರು. ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ಕುವೆಂಪು ಸಭಾಂಗಣ ಮಂಗಳವಾರ ನಡೆದ ‘ಸ್ಫಟಿಕ’ ವೇದಿಕೆಯ 2024-25ರ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮೊಳಗಿನ ಬ್ರಹ್ಮಾಂಡವನ್ನು ಅವಲೋಕಿಸುವ ರೀತಿಯಲ್ಲಿ ನಮ್ಮ ಮೌಲ್ಯಯುತ ಜೀವನ ನಿರ್ಧರಿತವಾಗಬೇಕು. ಸಾಮಾನ್ಯರಾಗಿ ಉಳಿಯುವವರು ಋಣಾತ್ಮಕ ವಿಚಾರಗಳಿಗೆ ಒತ್ತು ನೀಡಿದರೆ, ಅಸಾಮಾನ್ಯರು ಧನಾತ್ಮಕ ವಿಚಾರಗಳನ್ನು ಅನುಸರಿಸುತ್ತಾರೆ ಎಂದು ಅವರು ವಿವರಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಸಮಾಜ ಕಾರ್ಯವು ವಿದ್ಯಾರ್ಥಿಗಳಲ್ಲಿ ಅಂತರ್ಗತವಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ದೊರಕುವ ಹಲವಾರು ವಿಷಯಗಳನ್ನು ಸದುಪಯೋಗಗೊಳಿಸಬೇಕು ಎಂದು ಅವರು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಮನುಷ್ಯನ ಬಗ್ಗೆ ಯೋಚಿಸುವ ವೃತ್ತಿಯೇ ಸಮಾಜ ಕಾರ್ಯ. ನಾವು…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ಎನರ್ಜಿ ಆ್ಯಂಡ್ ವೆಟ್ಲ್ಯಾಂಡ್ಸ್ ರಿಸರ್ಚ್ ಗ್ರೂಪ್, ಇವುಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಾಲ್ಕು ದಿನಗಳ (ಅಕ್ಟೋಬರ್ 17 ರಿಂದ 20) ಕಾಲ ಕೆರೆ ಸಮ್ಮೇಳನ ನಡೆಯಲಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮೂರನೇ ಬಾರಿಗೆ ದೈವಾರ್ಷಿಕ ಕೆರೆ ಸಮ್ಮೇಳನವನ್ನು ಆಯೋಜಿಸುತ್ತಿದ್ದು, 2016 ಹಾಗೂ 2018ರಲ್ಲಿ ಹಮ್ಮಿಕೊಂಡು ಯಶಸ್ವಿಗೊಳಿಸಿತ್ತು. ಪರಿಸರ, ನೀರು, ಜೀವ ವೈವಿಧ್ಯತೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ವೈಜ್ಞಾನಿಕ ಅನ್ವೇಷಣೆಗಳ ಸಹಬಳಕೆಯ ಕುರಿತು ಚರ್ಚಿಸಲಾಗುತ್ತದೆ. ಉದ್ಘಾಟನಾ ಕರ್ಯಕ್ರಮದಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಪರಿಸರವಾದಿ ಅನಂತ ಹೆಗಡೆ ಅಶೀಸರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ವಿಜ್ಞಾನಿ ಡಾ ಟಿ ವಿ ರಾಮಚಂದ್ರ ಭಾಗವಹಿಸಲಿದ್ದಾರೆ. ದೇಶದ ವಿವಿಧ ಭಾಗಗಳಿಂದ ಸುಮಾರು 700 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, ವಿದ್ಯಾರ್ಥಿಗಳು, ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳು, ಪರಿಸರ ಹೋರಾಟಗಾರರು, ಹಾಗೂ ಸರಕಾರಿ ಅಧಿಕಾರಿಗಳು ಪ್ರತಿನಿಧಿಸಲಿದ್ದಾರೆ.…
ಬಂಟರ ಸಂಘ ಮೂಲ್ಕಿ ವತಿಯಿಂದ 2023-24 ನೇ ಸಾಲಿನ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ಮೂಲ್ಕಿ ಸುಂದರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಅಕ್ಟೋಬರ್ 13 ರಂದು ಬೆಳಿಗ್ಗೆ ಮೂಲ್ಕಿ ಬಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘದ ಉಪಾಧ್ಯಕ್ಷ ಕರ್ನೀರೆ ವಿಶ್ವನಾಥ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಪ್ರಧಾನವನ್ನು ವಿಕೆ ಗ್ರೂಪ್ ಆಫ್ ಕಂಪನಿ ಛೇರ್ಮನ್ ಕರುಣಾಕರ ಎಂ ಶೆಟ್ಟಿ ಮಧ್ಯ ಗುತ್ತುರವರಿಗೆ ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿರವರು ಪ್ರಧಾನ ಮಾಡಿ ಮಾತನಾಡಿ ನಶಿಸಿ ಹೋಗುತ್ತಿರುವ ಮಾನವೀಯ ಸಂಬಂಧಗಳನ್ನು ಬೆಸೆಯುವ ಕಾರ್ಯ ಸಂಘ ಸಂಸ್ಥೆಗಳಿಂದ ಆಗಬೇಕು. ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಹಸ್ತ ಅಭಿನಂದನೀಯ ಎಂದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಂದಿಕೂರು ಎಜುಕೇಶನ್ ಟ್ರಸ್ಟ್ ನ ಅನಿಲ್ ಶೆಟ್ಟಿ…
‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು ಕಾರ್ಯ ಬದ್ಧತೆಯಿಂದ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ನಿರ್ದಿಷ್ಟ ಗುರಿಯೆಡೆಗೆ ಸ್ಪಷ್ಟತೆ ಇರಲಿ. ಗೊಂದಲ ಬೇಡ’ ಎಂದು ಅರ್ಜುನ ಪ್ರಶಸ್ತಿ ಪುರಸ್ಕೃತ ಒಲಂಪಿಯನ್, ಕೋಲ್ಕತ್ತಾದಲ್ಲಿನ ಯೂನಿಯನ್ ಬ್ಯಾಂಕ್ ಇಂಡಿಯಾದ ಸಹಾಯಕ ಮಹಾಪ್ರಬಂಧಕ ಸತೀಶ್ ರೈ ಹೇಳಿದರು. ವಿದ್ಯಾಗಿರಿಯ ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣದಲ್ಲಿ ಸೋಮವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ದ ‘ಕೀರ್ತಿಶೇಷ ಲೋಕನಾಥ ಬೋಳಾರ್ ವೆಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭವಿಷ್ಯದ ಗುರಿಯನ್ನು ಈಡೇರಿಸಲು ಇಂದೇ ಶ್ರಮವಹಿಸಿ ಹೆಜ್ಜೆ ಇಡಬೇಕು. ಪ್ರತಿ ಕ್ರೀಡಾಪಟುವಿನಲ್ಲೂ ಶಿಸ್ತು, ಸಂಯಮ, ಸಮಯ ಪಾಲನೆ ಅತ್ಯವಶ್ಯಕ. ಕ್ರೀಡಾ ಮನೋಭಾವದಿಂದ ಕ್ರೀಡೆ, ಸಂಸ್ಥೆ ಹಾಗೂ ದೇಶಕ್ಕೂ ಹೆಮ್ಮೆಯ ವಿದ್ಯಾರ್ಥಿಗಳಾಬೇಕು ಎಂದು ಹಾರೈಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತನಾಡಿ, ಪ್ರತಿಯೊಬ್ಬರಲ್ಲೂ ಇಚ್ಛಾ ಶಕ್ತಿ ಇದ್ದೆ ಇರುತ್ತದೆ. ಅದನ್ನು ಸರಿಯಾದ ದಾರಿಯಲ್ಲಿ ವಿನಿಯೋಗಿಸಿಕೊಳ್ಳಬೇಕು. ಹಲವಾರು ನುರಿತ…