Author: admin

ತುಳು ಯಕ್ಷಗಾನ ಪ್ರಸಂಗಗಳಿಗೆ ಹೆಬ್ಬಾಗಿಲು ತೆರೆದು ಕೊಟ್ಟ ‘ಕೋಟಿ ಚೆನ್ನಯ’ ಪ್ರಸಂಗವು ತೆಂಕುತಿಟ್ಟಿನ ಹಲವು ಮೇಳಗಳ ಜನಪ್ರಿಯತೆಗೆ ಕಾರಣವಾಗಿದೆ. ನೂರು ವರ್ಷಗಳ ಹಿಂದೆ ಪಂದಬೆಟ್ಟು ವೆಂಕಟರಾಯರು ಬರೆದ ಈ ಪ್ರಸಂಗವು ಇದೀಗ ತಾಳಮದ್ದಳೆ ರೂಪದಲ್ಲಿ ಮಂಗಳೂರು ಆಕಾಶವಾಣಿಯಿಂದ ಈ ವಾರ ಪ್ರಸಾರವಾಗಲಿದೆ. ಕರ್ನಾಟಕ ಯಕ್ಷ ಭಾರತಿ ಪುತ್ತೂರು ತಂಡದ ಕಲಾವಿದರು ಇದನ್ನು ಎರಡು ಕಂತುಗಳಾಗಿ ಪ್ರಸ್ತುತಪಡಿಸುವರು. ನ್ಯಾಯ ಚಾವಡಿ : ತಾಳಮದ್ದಳೆಯ ಮೊದಲನೇ ಭಾಗ ‘ನ್ಯಾಯ ಚಾವಡಿ’ ಮೇ 30 ರಂದು ಶುಕ್ರವಾರ ರಾತ್ರಿ ಗಂಟೆ 9.30ಕ್ಕೆ ಪ್ರಸಾರವಾಗಲಿದೆ. ಅರ್ಥಧಾರಿಗಳಾಗಿ ಭಾಸ್ಕರ ರೈ ಕುಕ್ಕುವಳ್ಳಿ, ಗಣರಾಜ ಕುಂಬ್ಳೆ, ಎಂ.ಕೆ ರಮೇಶ ಆಚಾರ್ಯ, ರಮೇಶ ಸಾಲ್ವಣ್ಕರ್, ಉಮೇಶ ಆಚಾರ್ಯ ಗೇರುಕಟ್ಟೆ ಮತ್ತು ಹರಿಶ್ಚಂದ್ರ ನಾಯಗ ಮಾಡೂರು ವಿವಿಧ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಭಾಗವತರಾಗಿ ಪ್ರಶಾಂತ ರೈ ಪುತ್ತೂರು, ಹಿಮ್ಮೇಳದಲ್ಲಿ ಪಿ.ಟಿ. ಜಯರಾಮ ಭಟ್, ಕೋಳ್ಯೂರು ಭಾಸ್ಕರ ಭಾಗವಹಿಸಿದ್ದಾರೆ. ಅಂಕೊದ ಕಲ : ಪ್ರಸಂಗದ ಎರಡನೇ ಭಾಗ ‘ಅಂಕೊದ ಕಲ’ ಮುಂದಿನ ಶುಕ್ರವಾರ ಜೂನ್ 6…

Read More

ವಿದ್ಯಾಗಿರಿ: ಜರ್ಮನಿಯ ರಿಯಾನ್-ರೋಹೂರ್‌ನಲ್ಲಿ ಜುಲೈ 16ರಿಂದ 27ರ ವರೆಗೆ ನಡೆಯಲಿರುವ ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ 2025(ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ-2025)ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆಯ 11 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಇದರೊಂದಿಗೆ ಈ ವರೆಗೆ 32 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪ್ರತಿಕಾಗೋಷ್ಠಿಯಲ್ಲಿ ತಿಳಿಸಿದರು. ಪುರುಷರ ವಿಭಾಗದಲ್ಲಿ ಗಗನ್ (5000 ಮೀಟರ್ಸ್ ಓಟ), ಸಚಿನ್ (20 ಕಿ.ಮೀ ನಡಿಗೆ), ಬಾಲಕೃಷ್ಣ (400 ಮೀ ಓಟ), ತೌಫಿಕ್ ಎನ್ (ಡೆಕತ್ಲಾನ್) ಹಾಗೂ ಮಹಿಳಾ ವಿಭಾಗದಲ್ಲಿ ದೀಕ್ಷಿತಾ (400 ಮೀ ಹರ್ಡಲ್ಸ್), ಬಸಂತಿ ಕುಮಾರಿ (ಹಾಫ್ ಮ್ಯಾರಥಾನ್), ಮಂಜು ಯಾದವ್(ಸ್ಟೀಪಲ್ ಚೇಸ್), ಸಿಂಧುಶ್ರೀ(ಪೋಲ್‌ವರ್ಟ್), ಸಾಕ್ಷಿ(ಈಟಿ ಎಸೆತ), ಜ್ಯೋತಿ (ಹಾಫ್ ಮ್ಯಾರಥಾನ್), ಶಾಲಿನಿ (20 ಕಿಮೀ ನಡಿಗೆ), ಪಾಲ್ಗೊಳ್ಳಲಿದ್ದಾರೆ.ಸಿಲೆಕ್ಷನ್ ಟ್ರಯಲ್ಸ್ ಗೇಮ್ಸ್ ಮೂಲಕ ಆಯ್ಕೆ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದ ಈ ಕ್ರೀಡಾಪಟುಗಳು ಭುವನೇಶ್ವರದ ಕಳಿಂಗ ಇನ್‌ಸ್ಟಿಟ್ಯೂಟ್ ಆಪ್ ಇಂಡಸ್ಟ್ರಿಯಲ್ ಟೆಕ್ನಾಲಜಿ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ನಡೆದಿದ್ದ…

Read More

ಹೋಟೆಲ್ ಉದ್ಯಮದಲ್ಲಿ ತನ್ನದೇ ಆದ ಒಂದು ಹೊಸ ಛಾಪು ಮೂಡಿಸಿ, ಹಲವು ದಶಕಗಳಿಂದ ಹೋಟೆಲ್ ಉದ್ಯಮಿಯಾಗಿದ್ದು, ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ, ಸರಳ ಸಜ್ಜನ ವ್ಯಕ್ತಿಯಾಗಿ ದುಡಿದು ನ್ಯಾಯ ಎಂದೆಂದಿಗೂ ಜಯದ ಮೂಲ ಎಂದು ಪರಿಗಣಿಸಿ ನಡೆಯುವ ವ್ಯಕ್ತಿ ಶ್ರೀ ಪಂಜುರ್ಲಿ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ರಾಜೇಂದ್ರ ವಿ ಶೆಟ್ಟಿಯವರು ಕರ್ನಾಟಕ ರಾಜ್ಯ ಹೋಟೆಲುಗಳ ಸಂಘ (ರಿ.) ಇವರ ವತಿಯಿಂದ 5 ವರ್ಷಗಳಿಗೊಮ್ಮೆ ಕೊಡುವ ಹೋಟೆಲ್ ಉದ್ಯಮದ ಶ್ರೇಷ್ಠ ಪ್ರಶಸ್ತಿಯಾದ “ಆತಿಥ್ಯ ರತ್ನ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶ್ರೀ ಪಂಜುರ್ಲಿ ಸಮೂಹ ಸಂಸ್ಥೆಯು ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ದಾವಣಗೆರೆ, ಪುಣೆಯಲ್ಲಿ ಪ್ರಸಿದ್ಧಿಯನ್ನು ಪಡೆದಿದೆ. ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾ ಪೋಷಕರಾಗಿರುವ ರಾಜೇಂದ್ರ ಶೆಟ್ಟಿಯವರಿಗೆ 2024 ರ ಸಾಲಿನ ಬಂಟ ವಿಭೂಷಣ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿ ಪುರಸ್ಕಾರಗಳು ಸಂದಿವೆ. ಇವರು ಹೋಟೆಲ್ ಉದ್ಯಮದಲ್ಲಿ ಇನ್ನೂ ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ನಾವೆಲ್ಲರೂ ಹಾರೈಸೋಣ.

Read More

ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ ನಾಡು, ಹೊರನಾಡು ಮತ್ತು ವಿದೇಶಗಳಲ್ಲಿರುವ ವಿವಿಧ ಕ್ಷೇತ್ರಗಳ 74 ಮಂದಿ ಸಾಧಕರನ್ನು ಗುರುತಿಸಿ ಈ ಬಾರಿಯ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ನೀಡಿದೆ. ಮೇ 22ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಮೋದ್ ಕುಮಾರ್ ರೈ ಅವರಿಗೆ ಆರ್ಯಭಟ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಳೆದ ಮೂರು ದಶಕಗಳಿಂದ ನೃತ್ಯ ಕಲಾವಿದರಾಗಿ, ನಿರ್ದೇಶಕರಾಗಿ, ವಸ್ತ್ರವಿನ್ಯಾಸ ಸೇರಿದಂತೆ ವಿವಿಧ ಆಯಾಮಗಳಲ್ಲಿ ನಿರಂತರವಾಗಿ ರಂಗಸೇವೆ ಸಲ್ಲಿಸುತ್ತಾ ಬಂದಿರುವ ಪ್ರಮೋದ್ ಕುಮಾರ್ ರೈ ಅವರು ಹಲವಾರು ಜಿಲ್ಲಾ ಹಾಗೂ ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದು, ಬೆಳ್ಳಾರೆಯಲ್ಲಿ ‘ಕಲಾಮಂದಿರ್’ ಸಂಸ್ಥೆಯಲ್ಲಿ ನಿರ್ದೇಶಕರಾಗಿದ್ದಾರೆ.

Read More

ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾದ ಕೆ.ಸತ್ಯೇಂದ್ರ ಪೈ ನಿರ್ಮಾಣದ ಬಹು ನಿರೀಕ್ಷಿತ ಸ್ಕೂಲ್ ಲೀಡರ್ ಕನ್ನಡ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಮೇ 30ರಿಂದ ಕರಾವಳಿಯಾದ್ಯಂತ ಬೆಳ್ಳಿ ತರೆಯ ಮೇಲೆ ರಾರಾಜಿಸಲಿದೆ. ಚಿತ್ರದ ಟ್ರೇಲರ್ ಹಾಗೂ ಓಟು ಓಟು ಎಂಬ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯವಾಗಿದ್ದು ಸಿನಿಪ್ರಿಯರಲ್ಲಿ ಬಹಳಷ್ಟು ಕುತೂಹಲ ಮೂಡಿಸಿದೆ. ನಿರ್ಮಾಪಕರಾದ ಕೆ.ಸತ್ಯೇಂದ್ರ ಪೈ ಇವರು ಈ ಹಿಂದೆ “ಗಂಧದ ಕುಡಿ” ಎಂಬ ಚಿತ್ರವನ್ನು ನಿರ್ಮಿಸಿದ್ದು, ಆ ಚಿತ್ರವು ದೇಶ ವಿದೇಶಗಳಲ್ಲಿ 22 ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿತ್ತು. ಈ ಹಿಂದೆ ಬಿಡುಗಡೆಗೊಂಡು ಯಶಸ್ವಿಯಾದ ಪೆನ್ಸಿಲ್ ಬಾಕ್ಸ್ ಎಂಬ ಚಿತ್ರದ ನಿರ್ದೇಶಕರಾದ ರಝಾಕ್ ಪತ್ತೂರು ಇವರು ಸ್ಕೂಲ್ ಲೀಡರ್ ಚಿತ್ರವನ್ನು ಕಥೆ, ಚಿತ್ರ ಕಥೆ, ಸಂಭಾಷಣೆ ಜೊತೆಗೆ ಹಾಡುಗಳನ್ನು ಬರೆದು ನಿರ್ದೇಶನ ಮಾಡಿದ್ದಾರೆ. ಪೆನ್ಸಿಲ್ ಬಾಕ್ಸ್ ಚಿತ್ರದ ಗೀತೆ ರಚನೆಗಾಗಿ ರಝಾಕ್ ಪುತ್ತೂರು ಇವರು 2019 ನೇ ಸಾಲಿನ ಅತ್ಯುತ್ತಮ ಚಿತ್ರ ಸಾಹಿತಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವುದನ್ನು ಇಲ್ಲಿ ಸ್ಮರಿಸಬಹುದು. ಸ್ಕೂಲ್ ಲೀಡರ್…

Read More

ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಕಾಲೇಜು ಆಸ್ಪತ್ರೆ, ಮಂಗಳೂರಿನ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಮತ್ತು ವಿವಿಧ ಸಮುದಾಯಗಳ ಸಹಯೋಗದಲ್ಲಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ 2ನೇ ಹಂತದ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೋದ ವರ್ಷ 9 ಬಾರಿ ಉಚಿತ ನೇತ್ರ ತಪಾಸಣಾ ಶಿಬಿರಗಳು ಬೇರೆ ಬೇರೆ ಸಮುದಾಯದ ಜೊತೆಯಲ್ಲಿ ಸೇರಿಕೊಂಡು ಆಳ್ವಾಸ್ ನಡೆಸಿದೆ. ಈ ಉಚಿತ ನೇತ್ರ ತಪಾಸಣಾ ಶಿಬಿರ ನಿರಂತರ ನಡೆದು ಬಹಳಷ್ಟು ಜನರಿಗೆ ಪ್ರಯೋಜನಕಾರಿಯಾಗಲಿ ಎಂದು ಆಶಿಸಿದರು. ಕಾರ್ಯಕ್ರಮಕ್ಕೆ ಸಹಕರಿಸಿದ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ, ಸಂಶೋಧನಾ ಕೇಂದ್ರದ ವೈದ್ಯರಿಗೆ ಹಾಗೂ ಸಹಕಾರ ನೀಡಿದ ವಿವಿಧ ಸಮುದಾಯಗಳ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು. ಎರಡು ಹಂತದ ಶಿಬಿರದಲ್ಲಿ ಒಟ್ಟು 237 ಮಂದಿ ಪಾಲ್ಗೊಂಡು, 116 ಮಂದಿ ಉಚಿತ ಕನ್ನಡಕ ಪಡೆಯಲು, 26 ಮಂದಿ ಶಸ್ತ್ರಚಿಕಿತ್ಸೆಗೆ ಹೆಸರು ನೋಂದಾಯಿಸಿಕೊಂಡರು. ಕಾರ್ಯಕ್ರಮದಲ್ಲಿ…

Read More

ಪ್ರತಿಭಾ ಪುರಸ್ಕಾರ : ರೂ.1 ಕೋಟಿ 5 ಲಕ್ಷ ದಷ್ಟು ಮೊದಲನೇ ಹಂತದ ವಿದ್ಯಾರ್ಥಿ ವೇತನ ವಿತರಣೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ವಿ.ವಿ.ಕುಲಪತಿ ಪ್ರೊ.ಪಿ.ಎಲ್.ಧರ್ಮ ಭಾಗಿ ಶಾಸಕರಾದ ವಿ.ಸುನಿಲ್ ಕುಮಾರ್ ಅಧ್ಯಕ್ಷತೆ ಗಣಿತ ನಗರ : ಕಾರ್ಕಳ ಜ್ಞಾನಸುಧಾ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವವು 30.05.2025ರ ಶುಕ್ರವಾರದಂದು ಜರುಗಲಿದ್ದು, ಆ ದಿನ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಮೊದಲ ಹಂತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸಂಸ್ಥೆಯ 2025ರ ವಾರ್ಷಿಕ ಪರೀಕ್ಷೆಯ ಸಾಧಕ ವಿದ್ಯಾರ್ಥಿಳಿಗೆ ರೂ. 64 ಲಕ್ಷದ 22 ಸಾವಿರ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ರೂ.18 ಲಕ್ಷದ 78 ಸಾವಿರ, ಸಂಸ್ಥೆಯ ಉದ್ಯೋಗಿಗಳ ಮಕ್ಕಳ ಉಚಿತ ಶಿಕ್ಷಣಕ್ಕೆ ರೂ. 14 ಲಕ್ಷದ 87 ಸಾವಿರ, ಇಲಾಖಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿ ಗಳಿಸುವ ಪ್ರತೀ ನೂರು ಅಂಕಗಳಿಗೆ ವಿದ್ಯಾರ್ಥಿಗೆ ಹಾಗೂ ಅಧ್ಯಾಪಕರಿಗೆ…

Read More

ಬಂಟ್ವಾಳ ತಾಲೂಕು ಬಂಟರ ಸಂಘದ ವಿಂಶತಿ ಸಂಭ್ರಮವು ಮೇ 25 ರಂದು ಬಂಟವಾಳದ ಬಂಟರ ಭವನ ತುಂಬೆ ಇಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರನ್ನು ಅದ್ದೂರಿಯಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಆಳ್ವಾಸ್ ಸಂಸ್ಥೆಯ ಡಾ. ಮೋಹನ್ ಅಳ್ವ, ಶಶಿಧರ್ ಶೆಟ್ಟಿ ಬರೋಡ, ಪ್ರವೀಣ್ ಶೆಟ್ಟಿ ವಕ್ವಾಡಿ, ಕರ್ನಿರೆ ವಿಶ್ವನಾಥ್ ಶೆಟ್ಟಿ, ಕಿಶನ್ ಶೆಟ್ಟಿ, ಡಾ. ಪ್ರಶಾಂತ್ ಮಾರ್ಲ, ಜಗನ್ನಾಥ್ ಚೌಟ, ಲೋಕೇಶ್ ಶೆಟ್ಟಿ, ಅಶೋಕ್ ಪಕ್ಕಳ ಮತ್ತಿತರು ಉಪಸ್ಥಿತರಿದ್ದರು.

Read More

ಕತಾರ್ ಕರ್ನಾಟಕ ಸಂಘದ ಅಧ್ಯಕ್ಷ, ಕತಾರ್ ಬಂಟರ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ| ಮೂಡಂಬೈಲು ರವಿ ಶೆಟ್ಟಿಯವರು ತನ್ನ ಧರ್ಮಪತ್ನಿ ಜ್ಯೋತಿ ಆರ್ ಶೆಟ್ಟಿಯವರೊಂದಿಗೆ ಆಗಮಿಸಿ ಬೋಂಬೆ ಬಂಟ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಅಡ್ವೋಕೇಟ್ ಡಿ.ಕೆ ಶೆಟ್ಟಿಯವರನ್ನು ಶಾಲು ಹೊದಿಸಿ, ಹೂ ಗಿಡವನ್ನು ಕೊಟ್ಟು ಗೌರವಿಸಿ, ನಿಮ್ಮ ಕಾರ್ಯಾವಧಿಯಲ್ಲಿ ಸಂಸ್ಥೆಯು ಅಭೂತಪೂರ್ವ ಯಶಸ್ಸು ಹೊಂದಲಿ ಎಂದು ಶುಭ ಹಾರೈಸಿದರು. 25 ವರ್ಷ ಪೂರೈಸಿರುವ ಕತಾರ್ ಕರ್ನಾಟಕ ಸಂಘದ ಸ್ಥಾಪಕ ಅಧ್ಯಕ್ಷರಾಗಿರುವ ಉದ್ಯಮಿ, ಸಮಾಜಸೇವಕ ಡಾ| ರವಿ ಶೆಟ್ಟಿಯವರು ಹಲವಾರು ಸಂಘ ಸಂಸ್ಥೆಗಳ ಮಹಾಪೋಷಕರಾಗಿದ್ದಾರೆ. ಈ ಸಂಧರ್ಭ ಡಿ.ಕೆ ಶೆಟ್ಟಿಯವರ ಧರ್ಮಪತ್ನಿ ಹೇಮಲತಾ ಶೆಟ್ಟಿಯವರು ಉಪಸ್ಥಿತರಿದ್ದರು.

Read More

ಮಕ್ಕಳನ್ನು ಕೇವಲ ಪಠ್ಯ ಪುಸ್ತಕಗಳಿಗೆ ಮಾತ್ರ ಸೀಮಿತವಾಗಿರಿಸದೆ, ಮಕ್ಕಳು ಎಲ್ಲಾ ವಿಧದ ಜ್ಞಾನಗಳನ್ನು ಪಡೆಯುವ ಅವಕಾಶವನ್ನು ಕಲ್ಪಿಸಿಕೊಡಬೇಕು. ಶಿಕ್ಷಣದ ನಿಜವಾದ ಕಲ್ಪನೆಯು ಮಕ್ಕಳಲ್ಲಿ ಅಡಕವಾಗಿರುವ ಎಲ್ಲಾ ಪ್ರತಿಭೆಯನ್ನು ಹೊರ ಜಗತ್ತಿಗೆ ಪರಿಚಯಿಸುವುದಾಗಿದೆ. ಹೆಚ್ಚು ಹೆಚ್ಚು ಚಟುವಟಿಕೆಗಳನ್ನು ಪಠ್ಯದ ಜೊತೆಯಲ್ಲಿ ಅಳವಡಿಸಿಕೊಂಡಾಗ ಮಕ್ಕಳು ಆಸಕ್ತಿದಾಯಕ ಕಲಿಕೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಕರು ಹೆಚ್ಚು ತರಬೇತಿಗಳಲ್ಲಿ, ಕಾರ್ಯಗಾರಗಳಲ್ಲಿ ಪಾಲ್ಗೊಂಡು ಹೆಚ್ಚಿನ ಜ್ಞಾನವನ್ನು ಪಡೆದಾಗ ಮಕ್ಕಳು ಹೆಚ್ಚು ಕ್ರಿಯಾಶೀಲತೆಯಿಂದ ಕಲಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸಾಧ್ಯವಾಗುತ್ತದೆ. ಮಕ್ಕಳ ಜ್ಞಾನವನ್ನು, ಬುದ್ಧಿ ಮಟ್ಟವನ್ನು ಅಳೆಯಲು ಪಠ್ಯದ ಅಂಕ ಗಳಿಕೆಯೊಂದೇ ಮೂಲ ಆಧಾರವಾಗಲಾರದು. ಮಕ್ಕಳು ಎಲ್ಲಾ ಜ್ಞಾನವನ್ನು ಪಡೆದು ಸರ್ವಾಂಗೀಣ ಪ್ರಗತಿ ಹೊಂದಿದಾಗ ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ. ಇದಕ್ಕೆ ಶಿಕ್ಷಕರ ತರಬೇತಿ ಕಾರ್ಯಗಾರಗಳು ಹೆಚ್ಚು ಸಹಕಾರಿಯಾಗುತ್ತದೆ ಎಂದು ಹೆಸ್ಕುತೂರು ಶಾಲೆಯ ಮುಖ್ಯ ಶಿಕ್ಷಕ ಅಬ್ದುಲ್ ರವೂಫ್ ಹೇಳಿದರು. ಇವರು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೇ 26 ರಿಂದ 28 ರವರೆಗೆ ಆಯೋಜಿಸಿದ ಮೂರು ದಿನಗಳ ಶಿಕ್ಷಕರ ತರಬೇತಿ ಕಾರ್ಯಗಾರ ಓರಿಯಂಟೇಶನ್…

Read More