Author: admin
ಮೂಡುಬಿದಿರೆ: ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿಯ ಜೊತೆಗೆ ನೆಲ, ಜಲವನ್ನು ಉಳಿಸಿಕೊಂಡು ಬರಬೇಕಾದ ಹೊಣೆಗಾರಿಕೆ ಕನ್ನಡಿಗರಾದ ನಮ್ಮೆಲ್ಲರ ಮೇಲಿದೆ. ಸರಕಾರದ ಆಶಯದಂತೆ ನಾವೆಲ್ಲರೂ ನಾಡುನುಡಿ ಪ್ರೀತಿಯ ಜೊತೆ ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸುವಲ್ಲಿ ಶ್ರಮಿಸಬೇಕಾಗಿದೆ ಎಂಬುದಾಗಿ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ನುಡಿದರು. ರಾಜ್ಯಕ್ಕೆ ಕರ್ನಾಟಕ ಹೆಸರು ನಾಮಕರಣಗೊಂಡು ೫೦ ವರ್ಷಗಳು ತುಂಬಿದ ಸುವರ್ಣ ಸಂಭ್ರಮದ ಸಂದರ್ಭದ ಸಲುವಾಗಿ ‘ಕನ್ನಡ ಜ್ಯೋತಿ ರಥಯಾತ್ರೆ’ಯನ್ನು ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಬಳಿ ಸ್ವಾಗತಿಸಿ ಮಾತಾನಾಡಿದರು. ರಥಕ್ಕೆ ಕ.ಸಾ.ಪ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರು, ಕ.ಸಾ.ಪ ಹೋಬಳಿ ಘಟಕದ ಅಧ್ಯಕ್ಷರು ಮತ್ತಿತರ ಆಡಳಿತ ವರ್ಗದವರು ಮಾಲಾರ್ಪಣೆ ನೆರವೇರಿಸಿದರು. ಕಂದಾಯ ನಿರೀಕ್ಷಕರಾದ ಮಂಜುನಾಥ ಹಾಗೂ ಆಡಳಿತ ಸೌಧದ ಅಧಿಕಾರಿಗಳು, ನೌಕರ ವೃಂದ, ಕ್ಷೇತ್ರ ಶಿಕ್ಷಣಾಧಿಕಾರಿ, ಕ.ಸಾ.ಪದ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಕೆ, ಕಾರ್ಯದರ್ಶಿ ಸದಾನಂದ ನಾರಾವಿ, ಸಂಘಟನಾ ಕಾರ್ಯದರ್ಶಿ ಯತಿರಾಜ ಶೆಟ್ಟಿ, ಹೋಬಳಿ ಅಧ್ಯಕ್ಷ ರಾಮಕೃಷ್ಣ ಶಿರೂರು, ಸರಕಾರಿ ನೌಕರರ ಸಂಘದ…
ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಅಕ್ಟೋಬರ್ 4 ರಂದು ಕರ್ನಾಟಕ ಸಂಘ ಕತಾರ್ ನ ಅಧ್ಯಕ್ಷ ರವಿ ಶೆಟ್ಟಿ ಮೂಡಂಬೈಲು ಹಾಗೂ ಅಬುಧಾಬಿಯ ಇಂಡಿಯಾ ಸೋಶಿಯಲ್ ಆಂಡ್ ಕಲ್ಚರ್ ಸೆಂಟರ್ ಅಧ್ಯಕ್ಷ ಜಯರಾಮ್ ರೈ ಮಿತ್ರಂಪಾಡಿಯವರು ಸಮಾಜಸೇವೆ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನದಲ್ಲಿ ಪ್ರತಿಷ್ಠಿತ ನವಕರ್ನಾಟಕ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಯುಎಇ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿಯವರು ಸಮ್ಮೇಳನದ ಅಧ್ಯಕ್ಷರಾಗಿ ಆಗಮಿಸಿದ್ದರು.
ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ನೂತನ ಅಧ್ಯಕ್ಷರಾಗಿ ಕೆ ಬಾಬು ಹೆಗ್ಡೆ ತಗ್ಗರ್ಸೆಯವರು ಆಯ್ಕೆಯಾಗಿದ್ದಾರೆ. ದೇವಸ್ಥಾನದ ಜಗದಾಂಬಿಕ ವಸತಿ ಗೃಹದ ಆಡಳಿತ ಮಂಡಳಿಯ ಸಂಕೀರ್ಣದಲ್ಲಿ ನಡೆದ ವ್ಯವಸ್ಥಾಪನ ಸಮಿತಿಯ ನೂತನ ಸದಸ್ಯರ ಪ್ರಥಮ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. ಕುಂದಾಪುರ ಸಹಾಯಕ ಕಮಿಷನರ್ ಮಹೇಶ್ಚಂದ್ರ, ದೇವಳದ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಶೆಟ್ಟಿಯವರನ್ನು ವ್ಯವಸ್ಥಾಪನ ಸಮಿತಿಯ ಪದನಿಮಿತ್ತ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಕೋಟೇಶ್ವರ ಸಹನಾ ಗ್ರೂಪ್ ಆಫ್ ಕಂಪನಿ ಸಿಎಂಡಿ ಸುರೇಂದ್ರ ಶೆಟ್ಟಿಯವರು ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ ಮೀರಾ ಭಯಂದರ್ ಮುಂಬಯಿ ಇದರ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಹಿರಿಯ ರಂಗಭೂಮಿ ನಿರ್ದೇಶಕ ಜಗದೀಶ್ ಶೆಟ್ಟಿ ಕೆಂಚನಕೆರೆ ಇವರನ್ನು ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರು ಗೌರವಿಸಿದರು. ಈ ಸಂದರ್ಭದಲ್ಲಿ ಉದ್ಯಮಿ, ಸಮಾಜ ಸೇವಕ ಡಾ| ಹರೀಶ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಸಭಾ ಕಾರ್ಯಕ್ರಮದ ನಂತರ ಉಲಾಯಿಡೊಂಜಿ ಪಿದಾಯಿಡೊಂಜಿ ತುಳು ನಾಟಕ ಪ್ರದರ್ಶನಗೊಂಡಿತು.
ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ನಡೆದ ಬಂಟ ಕ್ರೀಡೋತ್ಸವ – 2024 ರಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳೆಯರ ತಂಡ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಪಡದುಕೊಂಡಿದೆ. ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಮಹಿಳೆಯರ ಬಿ ತಂಡ ಎ ತಂಡವನ್ನು ಸೋಲಿಸಿ 25 ಸಾವಿರ ನಗದು ಮತ್ತು ಪ್ರಶಸ್ತಿಯನ್ನು ಪಡೆಯಿತು. ಎ ತಂಡ 15 ಸಾವಿರ ನಗದು ಮತ್ತು ಪ್ರಶಸ್ತಿಯೊಂದಿಗೆ ರನ್ನರ್ಸ್ ಅಪ್ ಪ್ರಶಸ್ತಿ ಪಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಪ್ರಶಸ್ತಿ ವಿತರಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಕೋಶಾಧಿಕಾರಿ…
ಆಳ್ವಾಸ್ ವಿದ್ಯಾರ್ಥಿಗಳಿಂದ ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಕನ್ನಡ ದಿನಪತ್ರಿಕೆ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪದವಿ ಮನೋವಿಜ್ಞಾನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಕನ್ನಡ ದಿನಪತ್ರಿಕೆ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ ನೀಡಿದರು. ಮೊದಲಿಗೆ ಮಣಿಪಾಲ ಮ್ಯೂಸಿಯಂಗೆ ಭೇಟಿ ನೀಡಿದ ವಿದ್ಯಾರ್ಥಿಗಳು, ಪ್ರಾಣಿಗಳು ಮತ್ತು ಮಾನವರ ವಿವಿಧ ಅಂಗರಚನಾ ರಚನೆಗಳನ್ನು ಮತ್ತು ವಿಶೇಷವಾಗಿ ಮಾನವರ ವಿವಿಧ ರೋಗಶಾಸ್ತ್ರಕ್ಕೆ ಸಂಬಂಧಿಸಿದ ಮಾದರಿಗಳನ್ನು ವೀಕ್ಷಿಸಿದರು. ಭೇಟಿಯು ಉತ್ಕೃಷ್ಟ ಪ್ರೇರಕ ಅನುಭವವಾಗಿ ಹೊರಹೊಮ್ಮಿತು. ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನದ ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಳ್ಳಲು ಅವಕಾಶವನ್ನು ಒದಗಿಸಿತು. ನಂತರ ಉದಯವಾಣಿ ದಿನಪತ್ರಿಕೆ ಕಚೇರಿಗೆ ಭೇಟಿ ನೀಡಿ ಸ್ಥಾನೀಯ ಸಂಪಾದಕ ಕೃಷ್ಣ ಭಟ್ರೊಂದಿಗೆ ಸಂವಾದ ನಡೆಸಿದರು. ಆ ಬಳಿಕ ಕಚೇರಿಯ ಸಿಬ್ಬಂದಿ ವರ್ಗದವರು ಪತ್ರಿಕೆಯ ವಿವಿಧ ಅಂಶಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಉದಯವಾಣಿ ಡಿಜಿಟಲ್ನ ಸಿಬ್ಬಂದಿ ಡಿಜಿಟಲ್ ವಿಭಾಗದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಮುದ್ರಣ ವಿಭಾಗದ ಸಿಬ್ಬಂದಿ ಮುದ್ರಣ ತಂತ್ರಜ್ಞಾನ ಹಾಗೂ ಪ್ರಕ್ರಿಯೆಯನ್ನು ವಿವರಿಸಿದರು. ಈ ಸಂದರ್ಭದಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ರಕ್ಷಿತಾ ತೋಡಾರು, ಮನೋವಿಜ್ಞಾನ…
ನವರಾತ್ರಿ ಹಬ್ಬವನ್ನು ಕರ್ನಾಟಕದಲ್ಲಿ ನಾಡಹಬ್ಬ ದಸರಾ ಎಂದೂ, ಪಶ್ಚಿಮ ಬಂಗಾಲದಲ್ಲಿ ದುರ್ಗಾಪೂಜಾ ಎಂದೂ ಕರೆಯಲಾಗುತ್ತದೆ. ಈ ಸಂದರ್ಭದಲ್ಲಿ ದೇವಿಯ ಒಂಬತ್ತು ವಿವಿಧ ರೂಪಗಳನ್ನು ಆರಾಧಿಸಲಾಗುತ್ತದೆ. ವಿಜಯದಶಮಿಯ ದಿನ ಶಮೀ ವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮೀಯನ್ನು ವಿನಿಯೋಗ ಮಾಡಲಾಗುತ್ತದೆ. “ಶಮೀ ಶಮಯತೇ ಪಾಪಂ” ಎಂಬುದಾಗಿ ಶಮೀಯು ಪಾಪನಾಶಕ ಎಂಬ ನಂಬಿಕೆಯೂ ಇದೆ. ದಸರಾವನ್ನು ದಶಹರಾ ಎಂಬುದಾಗಿ ಕರೆಯಲಾಗುತ್ತದೆ. ಮಹಿಷಾಸುರನ ಮಾಯೆಯನ್ನು ಗುರುತಿಸಿ ಆತನ ಆಸುರೀ ಪಾಶದಿಂದ ಮುಕ್ತರಾಗಲು ಶಕ್ತಿಯ ಉಪಾಸನೆ ಅಗತ್ಯ. ಅದಕ್ಕೋಸ್ಕರ ನವರಾತ್ರಿಯ ಒಂಬತ್ತು ದಿನವೂ ಶಕ್ತಿಯ ಉಪಾಸನೆ ಮಾಡಿ ದಶಮಿಯಂದು ವಿಜಯೋತ್ಸವ ಆಚರಿಸಲಾಗುತ್ತದೆ. ಇದನ್ನು ದಶಹರಾ ಅಥವಾ ದಸರಾ ಎನ್ನುತ್ತಾರೆ. ದಶ ಎಂದರೆ ಹತ್ತು ಮತ್ತು ಹರ ಎಂದರೆ ಸೋತಿವೆ ಎಂದರ್ಥ. ಇಲ್ಲಿ ದುಷ್ಟರ ನಾಶವಾಗಿ ಶಿಷ್ಟರ ಸಂರಕ್ಷಣೆಯಾಗುತ್ತದೆ. ದಸರಾದ ಮೊದಲ ಒಂಬತ್ತು ರಾತ್ರಿಗಳಲ್ಲಿ ಎಲ್ಲಾ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತದೆ. ಅಂದರೆ ದಶದಿಕ್ಪಾಲಕರು, ಗಣರು ಮುಂತಾದವರ ಮೇಲೆ ದೇವಿಯ ನಿಯಂತ್ರಣ ಇರುತ್ತದೆ. ಹತ್ತೂ ದಿಕ್ಕುಗಳ ಮೇಲೆ ವಿಜಯವು ದೊರಕಿರುತ್ತದೆ.…
ಹುಬ್ಬಳ್ಳಿ ಧಾರವಾಡದ ಕೆಸಿಡಿ ವಿಜ್ಞಾನ ಮಹಾವಿದ್ಯಾಲಯದ ಮೈದಾನದಲ್ಲಿ ಆರ್ ಎಸ್ ಸಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಬುಧವಾರ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿಜೀ ಜಯಂತಿ ಅಂಗವಾಗಿ ದಿ. ಅಕ್ಕಮ್ಮ ಶೆಟ್ಟಿ ಸ್ಮರಣಾರ್ಥ ಆಯೋಜಿಸಲಾಗಿದ್ದ 30 ಯಾರ್ಡ್ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಿಯಲ್ಲಿ ದುರ್ಗಾ ನಿವಾಸ ತಂಡ ಚಾಂಪಿಯನ್ ಆಗಿ ಹಾಗೂ ಓಜೋನ್ ತಂಡ ರನ್ನರ್ ಅಪ್ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದುರ್ಗಾನಿವಾಸ ತಂಡ 6 ಓವರ್ ನಲ್ಲಿ 4 ವಿಕೆಟ್ ಕಳೆದುಕೊಂಡು 66 ರನ್ ಗಳಿಸಿತು. ಈ ಗುರಿ ಬೆನ್ನು ಹತ್ತಿದ ಓಜೋನ್ ತಂಡ 3 ವಿಕೆಟ್ ಕಳೆದುಕೊಂಡು 48 ರನ್ ಗಳಿಸಿತು. ಇದರಿಂದ ದುರ್ಗಾನಿವಾಸ ತಂಡ 18 ರನ್ ಗಳಿಂದ ಜಯಗಳಿಸಿ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿತು. ಆರ್ ಎಸ್ ಸಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ನ ಅಧ್ಯಕ್ಷ, ಹೋಟೆಲ್ ಉದ್ಯಮಿ ರತ್ನಾಕರ ಶೆಟ್ಟಿ ಮಾತನಾಡಿ, ಇಂದಿನ ಯುವ ಜನಾಂಗ…
ಎಕ್ಸಲೆಂಟ್ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದದ್ದಲ್ಲದೆ, ಸಾಂಸ್ಕೃತಿಕ, ಪ್ರತಿಭಾ ಕಾರಂಜಿ ಹಾಗೂ ಕ್ರೀಡಾಕ್ಷೇತ್ರದಲ್ಲೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ತನ್ನ ಹಿರಿಮೆಯ ಛಾಪನ್ನು ಮೂಡಿಸಿ ಅದೆಷ್ಟೊ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡಿದೆ. ಅಂತಹ ಸಾಧನೆಗಳ ಹಾದಿಯ ದಾಖಲೆಗಳ ಸರಮಾಲೆಗಳ ಗರಿಯತ್ತ ಸಾಗುತ್ತಾ, ದಿನಾಂಕ 01-10-2024ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಡಾ. ಎನ್.ಎಸ್.ಎ.ಎಂ ಪದವಿ ಪೂರ್ವ ಕಾಲೇಜು, ನಿಟ್ಟೆ, ಕಾರ್ಕಳ ಇವರ ಸಹಭಾಗಿತ್ವದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಕುಂದಾಪುರ ವಲಯವು ಉಡುಪಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಮುಂದೆ ನಡೆಯುವ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಆಯ್ಕೆಗೊಂಡಿರುತ್ತಾರೆ. ನಮ್ಮ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಪುಟ್ಬಾಲ್ ಪ್ರತಿಭೆಗಳಾದ ಪ್ರಥಮ್ ಎಸ್ ಶೆಟ್ಟಿ ಮತ್ತು ಎಲಿಕ್ ಅಬ್ರಾನ್ ದಾಲ್ಮೇದಾ ರವರು ಜಿಲ್ಲಾತಂಡದ ಅತ್ಯುತ್ತಮ ಆಟಗಾರರಾಗಿ ಹೊರಹೊಮ್ಮಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆ ಹಾಗೂ ಸಂತಸದ ವಿಷಯವಾಗಿದೆ. ಈ…
ಯುಎಇ ಮಲ್ಟಿ ಸ್ಟಾರ್ ಸಂಘಟಿಸಿದ್ದ ಪ್ರತಿಷ್ಠಿತ ‘ಯುಎಇ ಐಡೋಲ್ 24’ ಜೂನಿಯರ್ ವಿಭಾಗದ ಸ್ಪರ್ಧೆಯು ದುಬೈನ ಸ್ವಿಸ್ ಇಂಟರ್ನ್ಯಾಷನಲ್ ಸ್ಕೂಲ್ ಸಭಾಂಗಣದಲ್ಲಿ ಸೆಪ್ಟೆಂಬರ್ 28 ರಂದು ನಡೆಯಿತು. ಯು.ಎ.ಇ ಜೂನಿಯರ್ ಐಡೊಲ್ ಸಂಗೀತ ಸ್ವರ್ಧೆಯು ಜೂನಿಯರ್ ವಿಭಾಗದಲ್ಲಿ ನಡೆಯಿತು. ಜೂನಿಯರ್ ವಿಭಾಗದಲ್ಲಿ ಸನ್ನಿಧಿ ಶೆಟ್ಟಿ ಚಾಂಪಿಯನ್ ಆಗಿ ಯು.ಎ.ಇ ಜೂನಿಯರ್ ಐಡೊಲ್ – 24 ಪ್ರಶಸ್ತಿ ಮುಡಿಗೇರಿಸಿಕೊಂಡರು. ಸಬ್ ಜೂನಿಯರ್ ವಿಭಾಗದಲ್ಲಿ ಮಹದ್ವಿನ್ ಕೌಶಿಕ್ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ನಟ, ಸಂಗೀತ ಸಾಧುಕೋಕಿಲ, ಪ್ರಸಿದ್ಧ ಹಿನ್ನೆಲೆ ಗಾಯಕಿ ಅನುರಾಧಾ ಭಟ್, ಸಿನಿಮಾ ನಟ ರಾಪರ್ ಚಂದನ್ ಶೆಟ್ಟಿ ಭಾಗವಹಿಸಿದ್ದರು. ಸಂಜೆ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಯುಎಇ ಕನ್ನಡ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ವಿಜೇತರಿಗೆ ಬಹುಮಾನ ವಿತರಿಸಿದರು. ಈ ವೇಳೆ ತೀರ್ಪುಗಾರರು ಮಲ್ಟಿ ಸ್ಟಾರ್ ಸಂಘಟನೆಯ ಪ್ರಮುಖರಾದ ಮಮತಾ ಮತ್ತು ಸಿಂಥಿಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಗೀತ ಕಾರ್ಯಕ್ರಮವನ್ನು ಖ್ಯಾತ ನಿರೂಪಕಿ ಅನುಪಮಾ ಭಟ್ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಿರೂಪಣೆಯನ್ನು…