Author: admin
ಪಟ್ಲ ಫೌಂಡೇಶನ್ ದಶಮ ಸಂಭ್ರಮ : ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ
ಮೇ 27 ರಂದು ಬೆಳಿಗ್ಗೆ ಮುಂಬಯಿಯ ಕಮಲ ವಿಹಾರ್ ಸ್ಪೋರ್ಟ್ಸ್ ಕ್ಲಬ್ ಕಾಂದಿವಲಿ ಇಲ್ಲಿ ಬಂಟರ ಸಂಘ ಮುಂಬಯಿಯ ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ವಿಶೇಷ ಸಭೆಯಲ್ಲಿ ಎರ್ಮಾಳ್ ಹರೀಶ್ ಶೆಟ್ಟಿ, ಮುಂಡಪ್ಪ ಪಯ್ಯಡೆ, ರವೀಂದ್ರ ಸಾಧು ಶೆಟ್ಟಿ, ಪ್ರೇಮನಾಥ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಪಟ್ಲ ಫೌಂಡೇಶನ್ ನ ದಶಮನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಟ್ರಸ್ಟಿನ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ಹಾಗೂ ಪದಾಧಿಕಾರಿಗಳು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಈ ಸಂಧರ್ಭದಲ್ಲಿ ಮೋಹನ್ ರೈ, ಅಶೋಕ್ ಶೆಟ್ಟಿ ಪೆರ್ಮುದೆ, ಪ್ರಾದೇಶಿಕ ಸಮಿತಿಯ ಸದಸ್ಯರು ಹಾಗೂ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.
ಪವರ್ ಲಿಫ್ಟಿಂಗ್ನಲ್ಲಿ ಆಳ್ವಾಸ್ ಸತತ 24 ನೇ ಬಾರಿ ಪುರುಷ ಮತ್ತು ಮಹಿಳೆಯರ ಎರಡು ವಿಭಾಗದಲ್ಲಿ ಸಮಗ್ರ ಪ್ರಶಸ್ತಿ
ಮೂಡುಬಿದಿರೆ: ಮಂಗಳೂರು ಯೂನಿವರ್ಸಿಟಿ ಹಾಗೂ ಬ್ರಹ್ಮಾವರದ ಎಸ್.ಎಮ್.ಎಸ್ ಕಾಲೇಜಿನ ಆಶ್ರಯದಲ್ಲಿ ಮೇ 23 ರಿಂದ 24ರವರೆಗೆ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಆಳ್ವಾಸ್ ಕಾಲೇಜು ಸತತ 24ನೇ ಬಾರಿ ಪುರುಷ ಹಾಗೂ ಮಹಿಳಾ ಎರಡು ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆದು ಸಮಗ್ರ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಮಹಿಳಾ ವಿಭಾಗದಲ್ಲಿ 4 ಚಿನ್ನ, 3 ಬೆಳ್ಳಿ ಪುರುಷರ ವಿಭಾಗದಲ್ಲಿ 4 ಚಿನ್ನ, 3 ಬೆಳ್ಳಿ ಹಾಗೂ 1 ಕಂಚಿನ ಪದಕ ಪಡೆಯುವುದರೊಂದಿಗೆ ಅತ್ಯುತ್ತಮ ಸಾಧನೆ ಮಾಡಿದೆ. ಮಹಿಳಾ ವಿಭಾಗದ 47ಕೆಜಿ ದೇಹತೂಕ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಶ್ರಾವ್ಯ ಚಿನ್ನ, ಚಂದ್ರಿಕ ಬೆಳ್ಳಿ, ಅನುಷಾ ಚಿನ್ನ, ಸೀಮಾ ಚಿನ್ನ, ಮಲ್ಲಮ್ಮ ಬೆಳ್ಳಿ, ವಿತಶ್ರೀ ಬೆಳ್ಳಿ ಮತ್ತು ನಾಗಶ್ರೀ ಚಿನ್ನದ ಪದಕವನ್ನು ಗಳಿಸಿದ್ದಾರೆ. ಪುರುಷರ ವಿಭಾಗದಲ್ಲಿ ವಿದ್ಯಾರ್ಥಿ ಹಾಲೇಶ್ ಚಿನ್ನ, ರಮೇಶ್ ಬೆಳ್ಳಿ, ಸಂತೋಷ್ ಚಿನ್ನ, ಗಣೇಶ್ ಕಂಚು, ಪ್ರತ್ಯುಶ್ ಬೆಳ್ಳಿ, ಶಶಾಂಕ್ ಕಂಚು, ನಾಗೇಂದ್ರ ಅಣ್ಣಪ್ಪ ಚಿನ್ನ ಮತ್ತು ಜೋಶುವ…
ಅಡ್ವಕೇಟ್ ಡಿ.ಕೆ ಶೆಟ್ಟಿಯವರು ಓರ್ವ ಬ್ಯಾಂಕ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಕಾನೂನು ಪದವಿಧರ. ಹಲವಾರು ಸಂಘಟನೆಗಳಿಗೆ ಸಲಹೆಗಾರನಾಗಿ ಅಪಾರ ಜನಪ್ರಿಯತೆ ಗಳಿಸಿರುವ ಶೆಟ್ಟರು ಓರ್ವ ಚತುರ ಸಂಘಟಕರೂ ಹೌದು. ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ವಿವಿಧ ಸ್ತರಗಳಲ್ಲಿ ವಿವಿಧ ಉಪ ಸಮಿತಿಗಳ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ ತನ್ನ ಕಾರ್ಯ ಕೌಶಲದಿಂದ ಗಮನ ಸೆಳೆದಿದ್ದಾರೆ. ವಿಜಯಾ ಬ್ಯಾಂಕ್ ರಿಟೈರ್ಡ್ ಆಫೀಸರ್ಸ್ ಅಸೋಸಿಯೇಶನ್, ಬಂಟ್ಸ್ ನ್ಯಾಯ ಮಂಡಳಿ ಇವುಗಳ ಅಧ್ಯಕ್ಷ ಸ್ಥಾನದಲ್ಲಿ ತನ್ನ ಗಮನಾರ್ಹ ಸೇವೆಗಳ ಮೂಲಕ ಪರಿಚಯಿಸಿಕೊಂಡಿರುವ ಇವರು ಎಲ್ಲರ ಗೌರವಾದರಗಳಿಗೆ ಪಾತ್ರರಾಗಿದ್ದಾರೆ. ತನ್ನ ಅಧಿಕಾರಾವಧಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಘಟನೆಯನ್ನು ಇನ್ನಷ್ಟು ಸಕ್ರಿಯಗೊಳಿಸುವ ಆಶಯ ಹೊಂದಿರುವ ಶ್ರೀಯುತರು ಮಾಜಿ ಅಧ್ಯಕ್ಷರುಗಳ ಜೊತೆ ಸತತ ಸಂಪರ್ಕದಲ್ಲಿರುತ್ತಾ ಅಸೋಸಿಯೇಶನ್ ಪ್ರಗತಿ ಕುರಿತ ಸಮಾಲೋಚನೆ ಚರ್ಚೆಯಲ್ಲಿರುತ್ತಾ ಸಮಾಜ ಬಾಂಧವರಿಗೆ ಸಂಸ್ಥೆಯ ಮುಖಾಂತರ ದೊರೆಯಬಹುದಾದ ಸವಲತ್ತು ಪ್ರಯೋಜನ ಕುರಿತು ಚಿಂತನೆ ನಡೆಸುತ್ತಾ ಅದನ್ನು ಕಾರ್ಯ ರೂಪಕ್ಕೆ ತರುವಲ್ಲಿ ಪ್ರಾಮಾಣಿಕವಾಗಿ ದುಡಿಯುವ ಕನಸು ಕಂಡಿದ್ದು ತನ್ನ ಸಹವರ್ತಿಗಳ ಸಹಕಾರವನ್ನೂ…
ಬಂಟ್ವಾಳ ತಾಲೂಕು ಬಂಟರ ಸಂಘದ ವಿಂಶತಿ ಸಂಭ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಿ ಬಂಟ ಸಮಾಜದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ಬಂಟರ ಸಂಘ ಬಂಟ್ವಾಳ ತಾಲೂಕು ಸಂಘದ ಸ್ಥಾಪಕ ಅಧ್ಯಕ್ಷ ಕಿರಣ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಪದಾಧಿಕಾರಿಗಳಾದ ಡಾ.ಪ್ರಶಾಂತ ಮಾರ್ಲ, ಜಗನ್ನಾಥ ಚೌಟ ಬದಿಗುಡ್ಡೆ, ಲೋಕೇಶ್ ಶೆಟ್ಟಿ ಕುಳ, ರಂಜನ್ ಕುಮಾರ್ ಶೆಟ್ಟಿ ಅರಳ, ಪ್ರತಿಭಾ ರೈ ಪಾಣೆಮಂಗಳೂರು, ರಮಾ ಎಸ್.ಭಂಡಾರಿ, ನಿಶಾನ್ ಆಳ್ವ ಬಿ.ಸಿ ರೋಡ್ ಮತ್ತಿತರರು ಉಪಸ್ಥಿತಿದ್ದರು. ಮುಖ್ಯ ಅತಿಥಿಗಳಾಗಿ ರಾಜೇಶ್ ಚೌಟ ಸುಜೀರುಗುತ್ತು, ವಿಶ್ವನಾಥ ಶೆಟ್ಟಿ ಕರ್ನಿರೆ, ಕೆ.ಕೆ ಶೆಟ್ಟಿ ಕುತ್ತಿಕಾರ್, ಕೆ.ಪಿ ಶೆಟ್ಟಿ ಮೊಡಂಕಾಪುಗುತ್ತು, ರಘು ಎಲ್ ಶೆಟ್ಟಿ ಮುಂಬಯಿ, ಸುಧಾಕರ ಶೆಟ್ಟಿ ಮುಗರೋಡಿ, ರೋಹಿತ್ ಶೆಟ್ಟಿ ನಗ್ರಿಗುತ್ತು, ಮಲ್ಲಿಕಾ ಪಕ್ಕಳ ಮಲಾರು, ಅಜಿತ್ ಚೌಟ ದೇವಸ್ಯ, ಅರವಿಂದ ಶೆಟ್ಟಿ ನಡುಮೊಗರುಗುತ್ತು, ಡಾ. ಶಿವಪ್ರಸಾದ್ ಶೆಟ್ಟಿ ಬಿಸಿರೋಡು, ಚಂದ್ರಪ್ರಕಾಶ…
ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ ನಾಡು, ಹೊರನಾಡು ಮತ್ತು ವಿದೇಶಗಳಲ್ಲಿರುವ ವಿವಿಧ ಕ್ಷೇತ್ರಗಳ 74 ಮಂದಿ ಸಾಧಕರನ್ನು ಗುರುತಿಸಿ ಈ ಬಾರಿಯ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ನೀಡಿದೆ. ಮೇ 22ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಖ್ಯಾತ ಉದ್ಯಮಿ, ಸಾಮಾಜಿಕ ಮತ್ತು ಶಿಕ್ಷಣ ಕ್ಷೇತ್ರದ ಸಾಧಕ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು 2025 ಸಾಲಿನ ಆರ್ಯಭಟ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಬಂಟ್ವಾಳ ತಾಲೂಕಿನ ಶಂಭೂರು ಸರಕಾರಿ ಶಾಲೆಯನ್ನು ದತ್ತು ಪಡೆದು ತನ್ನ ಸಹೋದರನ ಸ್ಮರಣಾರ್ಥ ‘ದಿ. ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆ’ ಎಂಬ ಹೆಸರಿನಲ್ಲಿ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಿದ್ದಲ್ಲದೆ ತಮ್ಮ ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಡಿರುವ ಸಮಾಜ ಸೇವೆ ಮತ್ತು ಯಕ್ಷಗಾನ ಸೇವೆಗಾಗಿ ಸಚ್ಚಿದಾನಂದ ಶೆಟ್ಟರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಾ. ಅಶೋಕ್ ಬಿ. ಹಿಂಚಿಗೇರಿ ಕಾರ್ಯಕ್ರಮವನ್ನು…
‘ಭಾರತದಲ್ಲಿ ಹಿಂದೂವಾಗಿ ಹುಟ್ಟುವುದು ಪುಣ್ಯವಾಗಿದ್ದು, ಧರ್ಮ ಪ್ರಸಾರಕ್ಕೆ ಯಕ್ಷಗಾನ ಅತ್ಯಮೂಲ್ಯ ಕೊಡುಗೆ ನೀಡಿದೆ. ಯಕ್ಷಗಾನಕ್ಕೆ ಪುಳಿಂಚ ರಾಮಯ್ಯ ಶೆಟ್ಟರ ಸೇವೆ ಸ್ಮರಣೀಯವಾಗಿದ್ದು, ಆ ಪರಂಪರೆಯನ್ನು ಪುತ್ರ ಶ್ರೀಧರ ಶೆಟ್ಟಿ ಪುಳಿಂಚ ಮತ್ತವರ ಪತ್ನಿ ಮುಂದುವರಿಸುತ್ತಿರುವುದು ಶ್ಲಾಘನೀಯವಾಗಿದೆ’ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ಸಂಚಾಲಕ ಕಲ್ಲಡ್ಕ ಪ್ರಭಾಕರ ಭಟ್ ಅವರು ಹೇಳಿದರು. ಅವರು ಕಲ್ಲಡ್ಕ ಸಮೀಪ ಬಾಳ್ತಿಲ ಗ್ರಾಮದ ಚೆಂಡೆಯಲ್ಲಿ ಶ್ರೀ ಕಲ್ಲುರ್ಟಿ ದೈವಸ್ಥಾನ ಹಾಗೂ ಪುಳಿಂಚ ಸೇವಾ ಪ್ರತಿಷ್ಠಾನ ಜಂಟಿ ಆಶ್ರಯದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದ ಬೆಜ್ಜದಗುತ್ತು ದಿ. ಪುಳಿಂಚ ರಾಮಯ್ಯ ಶೆಟ್ಟಿ ಅವರ ಸ್ಮರಣಾರ್ಥ ಬೊಳ್ನಾಡುಗುತ್ತು ದಿ. ಸರೋಜಿನಿ ರಾಮಯ್ಯ ಶೆಟ್ಟಿ ಪುಳಿಂಚ ವೇದಿಕೆಯಲ್ಲಿ ಮೇ24, ಶನಿವಾರ ನಡೆದ ಪಂಚಮ ತ್ರೈವಾರ್ಷಿಕ ‘ಪುಳಿಂಚ ಪ್ರಶಸ್ತಿ ಪ್ರದಾನ’ ಹಾಗೂ ಮಂಗಳೂರು ಪುಳಿಂಚ ಚಿಟ್ಸ್ (ಒಪಿಸಿ) ಪ್ರೈ.ಲಿಮಿಟೆಡ್ ನ ದಶಮ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಿಂದೂ ಧರ್ಮದ ನಾಶಕ್ಕೆ ನಿರಂತರವಾಗಿ ಪ್ರಯತ್ನ ನಡೆಯುತ್ತಿದ್ದು, ಪಹಲ್ಗಾಮ್ ಘಟನೆಯು ಅದಕ್ಕೊಂದು ಜ್ವಲಂತ ಉದಾಹರಣೆಯಾಗಿದೆ.…
ಡೊಂಬಿವಲಿ:- 2024-25ನೆಯ ಶೈಕ್ಷಣಿಕ ಸಾಲಿನ ಹತ್ತನೆಯ ತರಗತಿಯ ಪರೀಕ್ಷಾ ಫಲಿತಾಂಶದಲ್ಲಿ ಡೊಂಬಿವಲಿ ಪೂರ್ವದ ಓಂಕಾರ್ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರ್ ವಿಸ್ಮಾ ವೀರೇಂದ್ರ ಶೆಟ್ಟಿ ಇವರು 93.20 ಶೇಕಡಾ ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೂಲತ: ಕಟಪಾಡಿ ಮೂಡುಬೆಟ್ಟು ಗುತ್ತು ಪಡುಮನೆ ವೀರೇಂದ್ರ ಶೆಟ್ಟಿ ಹಾಗೂ ಕಾರ್ಕಳ ತಾಲೂಕಿನ ಬೊರ್ಗಲ್ ಪದ್ದುನಿವಾಸ, ಕೌಡೂರು ಶ್ರೀಮತಿ ಅಮಿತಾ ವಿ ಶೆಟ್ಟಿ ಇವರ ಸುಪುತ್ರಿಯಾಗಿದ್ದಾರೆ.
ಗಣಿತ ನಗರ : ಶ್ರೀ ಮಹಾಗಣಪತಿ ದೇವಸ್ಥಾನ ಜ್ಞಾನಸುಧಾ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಸಹಯೋಗದಲ್ಲಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ದಿನಾಂಕ 28.05.2025ನೇಬುಧವಾರ, ಸಂಜೆ 6 ಗಂಟೆಗೆ, ಗಣಿತನಗರ ಜ್ಞಾನಸುಧಾ ಸಭಾಂಗಣದಲ್ಲಿ ನಡೆಯಲಿರುವ ಮೌಲ್ಯಸುಧಾ ಕಾರ್ಯಕ್ರಮದಲ್ಲಿ ಗದಗದ ಜಗದ್ಗುರು ಶ್ರೀ ಶಿವಾನಂದ ಬೃಹನ್ಮಠದ ಪ.ಪೂಜ್ಯ ಜಗದ್ಗುರು ಶ್ರೀ ಸದಾಶಿವಾನಂದ ಮಹಾಸ್ವಾಮಿಗಳು “ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ-ಜೀವನ ದರ್ಶನ” ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ. ದಿನಾಂಕ 29.05.2025ರ ಗುರುವಾರದಂದು ಪರಮಪೂಜ್ಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಸ್ಮರಣೆಯಲ್ಲಿ ಆಹ್ವಾನಿತ 12 ಭಜನಾ ತಂಡಗಳಿಂದ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿಶೇಷ ಭಜನಾಸುಧಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 15,16 ಮತ್ತು 17 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜು ರಾಜ್ಯ ಮಟ್ಟದ 100 ರ್ಯಾಂಕ್ನೊಳಗೆ 14 ಸ್ಥಾನ ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ಸುಮಂತ್ ಗೌಡ ಎಸ್ ದಾನಪ್ಪಗೌಡರ್ ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್, ಬಿ.ಎನ್.ವೈ.ಎಸ್. ವಿಭಾಗದಲ್ಲಿ 9ನೇ ರ್ಯಾಂಕ್, ಬಿ.ಎಸ್.ಸಿ. ನರ್ಸಿಂಗ್ ವಿಭಾಗದಲ್ಲಿ 18 ನೇ ರ್ಯಾಂಕ್, ಪಶು ವೈದ್ಯಕೀಯ ವಿಭಾಗದಲ್ಲಿ 18ನೇ ರ್ಯಾಂಕ್, B/ D-ಫಾರ್ಮ್ ವಿಭಾಗಗಳಲ್ಲಿ 25 ನೇ ರ್ಯಾಂಕ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ 34ನೇ ರ್ಯಾಂಕ್ ಗಳಿಸಿದ್ದಾರೆ. ಹಾಗು ವಿದ್ಯಾರ್ಥಿ ಹೆಚ್ ಎ ರಾಜೇಶ್ ಬಿ.ಎನ್.ವೈ.ಎಸ್. ವಿಭಾಗದಲ್ಲಿ 35ನೇ ರ್ಯಾಂಕ್, ಬಿ.ಎಸ್.ಸಿ. ನರ್ಸಿಂಗ್ ವಿಭಾಗ ಮತ್ತು ಪಶು ವೈದ್ಯಕೀಯ ವಿಭಾಗದಲ್ಲಿ 52ನೇ ರ್ಯಾಂಕ್, B/ D-ಫಾರ್ಮ್ ವಿಭಾಗಗಳಲ್ಲಿ 62 ನೇ ರ್ಯಾಂಕ್…
ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-2025ರಲ್ಲಿ ಮತ್ತೊಮ್ಮೆ ಶ್ರೇಷ್ಠ ಸಾಧನೆಯನ್ನು ಮೆರೆದಿದ್ದಾರೆ. ಅಕ್ಷಯ್ ಎಂ. ಹೆಗ್ಡೆ ಕೆಸಿಇಟಿ-ಕೃಷಿ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ. ಈ ಅಸಾಧಾರಣ ಸಾಧನೆಯ ಜೊತೆಗೆ ಆಳ್ವಾಸ್ನ ಇತರ ವಿದ್ಯಾರ್ಥಿಗಳು ಸಹ ಉನ್ನತ ರ್ಯಾಂಕ್ಗಳನ್ನು ಪಡೆದಿದ್ದು, ವರ್ಷದಿಂದ ವರ್ಷಕ್ಕೆ ಅತ್ಯುತ್ತಮ ಸಿಇಟಿ ಫಲಿತಾಂಶವನ್ನು ಮುಂದುವರಿಸಿದ್ದಾರೆ. ರಾಜ್ಯದ ಮೊದಲ 10 ರ್ಯಾಂಕ್ಗಳಲ್ಲಿ 02 ರ್ಯಾಂಕ್, ಮೊದಲ 50 ರ್ಯಾಂಕ್ಗಳಲ್ಲಿ 12 ರ್ಯಾಂಕ್, ಮೊದಲ 100 ರ್ಯಾಂಕ್ಗಳಲ್ಲಿ 24 ರ್ಯಾಂಕ್, ಮೊದಲ 200 ರ್ಯಾಂಕ್ಗಳಲ್ಲಿ 52 ರ್ಯಾಂಕ್, ಮೊದಲ 500 ರ್ಯಾಂಕ್ಗಳಲ್ಲಿ 172 ರ್ಯಾಂಕ್, ಮೊದಲ 1,000 ರ್ಯಾಂಕ್ಗಳಲ್ಲಿ 506 ರ್ಯಾಂಕ್ಗಳನ್ನು ಪಡೆದುಕೊಂಡಿರುತ್ತಾರೆ. ಪಿಸಿಬಿಯಲ್ಲಿ 3 ವಿದ್ಯಾರ್ಥಿಗಳು 180ರಲ್ಲಿ 170ಕ್ಕೂ ಅಧಿಕ ಅಂಕ, 49 ವಿದ್ಯಾರ್ಥಿಗಳು 160ಕ್ಕೂ ಅಧಿಕ, 146 ವಿದ್ಯಾರ್ಥಿಗಳು 150ಕ್ಕೂ ಅಧಿಕ, 851 ವಿದ್ಯಾರ್ಥಿಗಳು 121ಕ್ಕೂ ಅಧಿಕ, 1359 ವಿದ್ಯಾರ್ಥಿಗಳು 100ಕ್ಕೂ ಅಧಿಕ ಅಂಕಗಳನ್ನು ಪಡೆದುಕೊಂಡಿದ್ದಾರೆ.…















