Author: admin

ಮಂಗಳೂರಿನಲ್ಲಿ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯು.ಆರ್. ಶೆಟ್ಟಿ ಅವರಿಗೆ ಕರ್ನಾಟಕ ಮುಕುಟಮಣಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಾಲಿಗ್ರಾಮ ಗಣೇಶ್ ಶೆಣೈ ಅವರ ನೇತೃತ್ವದ ಕಲಾ ಕುಂಚ ದಾವಣಗೆರೆ ಇವರು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದಾವಣಗೆರೆಯ ಚೆನ್ನಗಿರಿ ವಿರೂಪಾಕ್ಷಪ್ಪ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯು.ಆರ್. ಶೆಟ್ಟಿಯವರು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ವಿವಿಧ ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿರುವ ಇವರು ನಾಟಕ ಕಲಾವಿದರಾಗಿ ಜನಪ್ರಿಯರಾಗಿದ್ದಾರೆ. ಇವರ ನೇತೃತ್ವದ ನಾಟಕ ತಂಡ ಸರಕಾರಿ ನೌಕರರ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಇವರ ಸಮಾಜಮುಖಿ ಸೇವೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ ದಾವಣಗೆರೆಯ ಕಲಾ ಕುಂಚ ಸಂಸ್ಥೆ ಇವರಿಗೆ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Read More

ಆಂಧ್ರ ಪ್ರದೇಶದ ಆಚಾರ್ಯ ನಾಗಾರ್ಜುನ ಯೂನಿವರ್ಸಿಟಿಯಲ್ಲಿ ನಡೆದ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಉಜಿರೆಯ ವಿದ್ಯಾರ್ಥಿ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ 81 ಕೆಜಿ ವಿಭಾಗದಲ್ಲಿ ಒಟ್ಟು 301 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಪಡೆದಿದ್ದಾರೆ ಹಾಗೂ ಜನವರಿಯಲ್ಲಿ ಪಂಜಾಬ್ ನಲ್ಲಿ ನಡೆಯುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ಇರ್ದೆಯ ರತ್ನಾಕರ ರೈ ಮತ್ತು ಶಶಿಕಲಾ ದಂಪತಿಗಳ ಪುತ್ರ. ಇವರಿಗೆ ರಮೇಶ್ ಕ್ರೀಡಾ ನಿರ್ದೇಶಕರು ಮತ್ತು ಸಂತೋಷ್ ರವರು ತರಬೇತಿ ನೀಡುತ್ತಿದ್ದಾರೆ.

Read More

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದ್ಯಮಿ ಡಾ| ಹೆಚ್. ಎಸ್ ಶೆಟ್ಟಿಯವರು ಜನ್ನಾಡಿಯ ಕೊರಗ ಕುಟುಂಬಗಳಿಗೆ 14 ಮನೆ ನಿರ್ಮಿಸಿ ಇತ್ತೀಚೆಗೆ ಹಸ್ತಾಂತರಿಸಿದ ಮನೆಗಳ ಗೃಹ ಪ್ರವೇಶ ಸೋಮವಾರ ಪ್ರರೋಹಿತರಾದ ಉದಯ ಐತಾಳ ಸೌಡ, ಶ್ರೀಧರ ಉಡುಪ ಮೊಳಹಳ್ಳಿಯವರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪುರೋಹಿತರು ಗೃಹ ಪ್ರವೇಶದ ಪೂಜಾ ವಿಧಿ ವಿಧಾನ ನೆರವೇರಿಸಿದರು. ನಂತರ ಸಹಭೋಜನ ಕಾರ್ಯಕ್ರಮ ನೆಡೆಯಿತು. ಸ್ಥಳೀಯರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಲವಕರ ಶೆಟ್ಟಿ ಮಾಲಾಡಿ, ರಂಜಿತ್ ಸೌಡ, ದೀಕ್ಷಿತ ಮಡಿವಾಳ, ವೆಂಕಟೇಶ ಪ್ರಭು, ಗಣೇಶ್ ಮಡಿವಾಳ, ಶರತ್ ಕಾನ್ಮಕ್ಕಿ, ಮಂಜುನಾಥ ಜನ್ನಾಡಿ, ಶರತ್ ಮೊಗವೀರ, ಸುನಿಲ್ ಶೆಟ್ಟಿ ಉಪಸ್ಥಿತರಿದ್ದರು.

Read More

ಕಡಬ ತಾಲೂಕು ಬಂಟರ ಸಂಘ ರಚನೆ ಪ್ರಯುಕ್ತ ಸವಣೂರು ವಲಯ ಬಂಟ ಬಂಧುಗಳ ಸಮಾಲೋಚನಾ ಸಭೆ ಕಡಬ ತಾಲೂಕು ಬಂಟರ ಸಂಘದ ಸಂಚಾಲನಾ ಸಮಿತಿ ಅಧ್ಯಕ್ಷರಾದ ಎನ್ ಚಂದ್ರಹಾಸ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 1 ರಂದು ಆದಿತ್ಯವಾರ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಜರುಗಿತು. ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂಧರ್ಭದಲ್ಲಿ ಅತ್ಯಡ್ಕ ನಾರಾಯಣ ಶೆಟ್ಟಿ, ಎಬಿ ಮನೋಹರ ರೈ, ಶಶಿಕಿರಣ್ ರೈ ಕುಂಜತ್ತೋಡಿ, ಪಿಡಿ ಕೃಷ್ಣ ಕುಮಾರ್ ರೈ ದೇವಸ್ಯ, ಜಯಸೂರ್ಯ ರೈ ಮಾದೋಡಿ, ಉದಯ ರೈ ಮಾದೋಡಿ, ಹರೀಶ್ಚಂದ್ರ ರೈ ಕಾಸ್ಪಾಡಿಗುತ್ತು, ಜತ್ತಪ್ಪ ರೈ ಮಡಪ್ಪಾಡಿ, ಅಮರನಾಥ ರೈ, ನಾಗೇಶ್ ರೈ ಮಾಳ, ಧರ್ಮಪಾಲ ರೈ ಪಿಜಕ್ಕಳ, ವಸಂತ ರೈ ಕಾರ್ಕಳ, ಸುನಿಲ್ ರೈ ಬಲ್ಕಾಡಿ, ಸುರೇಶ್ ರೈ ಸೂಡಿಮುಳ್ಳು, ರಾಕೇಶ್ ರೈ ಕೆಡೆಂಜಿ, ಪ್ರಕಾಶ್ ರೈ ಸಾರಕರೆ, ಮತ್ತಿತರ ಸಮಾಜ ಬಂಧುಗಳು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಮಾಜ ಬಂಧುಗಳ ಮನೆ…

Read More

‘ಕನ್ನಡ ಮಾಧ್ಯಮದಲ್ಲಿ ಕಲಿತ ಅದೆಷ್ಟೋ ಮಂದಿ ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಎಲ್ಲಿಯೂ ಅವರಿಗೆ ಭಾಷೆಯ ತೊಡಕು ಕಾಡಲಿಲ್ಲ. ಈಗಲೂ ನಮ್ಮ ಮಾತೃಭಾಷೆ ಉಳಿದಿದ್ದರೆ ಅದು ಕನ್ನಡ ಶಾಲೆಗಳಿಂದಲೇ. ಕರ್ನಾಟಕ ಮರು ನಾಮಕರಣಗೊಂಡ ಸುವರ್ಣ ಸಂಭ್ರಮದಲ್ಲಾದರೂ ಸರಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಕನ್ನಡ ಶಾಲೆ, ವಿ.ವಿ.ಗಳನ್ನು ಸದೃಢಗೊಳಿಸಬೇಕು’ ಎಂದು ಸಾಹಿತಿ ಹಾಗೂ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಕುದುರೆಮುಖ ಕನ್ನಡ ಸಂಘ ಹಾಗೂ ಕುದುರೆಮುಖ ಕ್ರೀಡಾ ಮತ್ತು ಮನೋರಂಜನಾ ಸಮಿತಿ ಇವರ ಸಹಯೋಗದಲ್ಲಿ ನವೆಂಬರ್ 30ರಂದು ನಗರದ ಕಾವೂರು ನೆಹರೂ ಭವನದಲ್ಲಿ ಜರಗಿದ 69ನೇ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಪ್ರಧಾನ ಭಾಷಣ ಮಾಡಿದರು. ‘ಕನ್ನಡಕ್ಕೆ ಗಡಿ ರೇಖೆಗಳಿಲ್ಲ; ಪಂಚ ದ್ರಾವಿಡ ಭಾಷೆಗಳಲ್ಲಿ ಅದು ಅತ್ಯಂತ ಶ್ರೀಮಂತವಾದುದು. ಹುಲುಸಾದ ಸಾಹಿತ್ಯ ಕೃಷಿಯೊಂದಿಗೆ ವಿಸ್ತಾರವಾದ ಜಾನಪದ ಹಾಗೂ ಮೌಖಿಕ ಪರಂಪರೆ ಕನ್ನಡದಲ್ಲಿದೆ. ಎಳೆಯ ತಲೆಮಾರು ಅದರಲ್ಲಿ ಆಸಕ್ತಿ…

Read More

ಐದು ದಶಕಗಳ ದಾಂಪತ್ಯ ಪೂರೈಸಿದ ಹಿರಿಯ ಮಹಿಳೆಯೋರ್ವರು ಇತ್ತೀಚೆಗೆ ವಿವಾಹ ಸಮಾರಂಭ ಒಂದರಲ್ಲಿ ಸಿಕ್ಕರು. ಹೇಗಿದ್ದೀರಿ ಎಂದೆ? ಹಾ ನಮ್ಮದೇನಪ್ಪಾ ಅಡ್ಜಸ್ಟ್ಮೆಂಟ್ ಬದುಕು. ಈ ವಯಸ್ಸಲ್ಲಿ ಅವರು ನನ್ನನ್ನು, ನಾನು ಅವರನ್ನು ಬಿಟ್ಟು ಎಲ್ಲಿ ಹೋಗಲು ಸಾಧ್ಯ? ಹಾಗೋ ಹೀಗೋ ಅಡ್ಜಸ್ಟ್ಮೆಂಟ್ ಮಾಡಿಕೊಂಡು ಬದುಕುತ್ತಿದ್ದೇವೆ. ಎಂದರು ತಮಾಷೆಯಾಗಿ ಜೀವನ ಎಲ್ಲಾ ಕ್ಷೇತ್ರಗಳೂ ಅಡ್ಜಸ್ಟ್ಮೆಂಟಲ್ಲೇ ನಡೆಯುತ್ತಿದೆ ಎಂದೆ. ಹೌದು ದಾಂಪತ್ಯ ಎಂದರೆ ಖಂಡಿತ ಅಡ್ಜಸ್ಟ್ಮೆಂಟ್ ಬದುಕು, ಅದನ್ನ ಅಡ್ಜಸ್ಟ್ಮೆಂಟ್ ಎನ್ನಿ ಅಥವಾ ಬೇಕಾದರೆ ಕೆಮೆಸ್ಟ್ರಿ ಎನ್ನಿ ಗಂಡ ಹೆಂಡತಿಯ ನಡುವೆ ಅಡ್ಜಸ್ಟ್ಮೆಂಟ್ ಅಥವಾ ಕೆಮಿಸ್ಟ್ರಿ ಎಷ್ಟು ಚೆನ್ನಾಗಿರುತ್ತದೋ ಅಷ್ಟು ಪರಿಪಕ್ವ ಎನಿಸುತ್ತದೆ. ದಾಂಪತ್ಯ ಅವರ ಮಾತಿನಲ್ಲಿನ ಅಡ್ಜಸ್ಟ್ಮೆಂಟ್ ನ್ನ ಸವೇದನೆ ಎಂದು ಹೇಳಿ ಕೊಂಚ ನುಣುಪಾಗಿಸಬಹುದು. ಜೊತೆಗಾರನ /ಳ ಭಾವನೆ ಸಂವೇದನೆ ಭಾವನೆ-ಸಂವೇದನೆಗೆ ಬೆಲೆ ಕೊಟ್ಟು ಸಂಯಮದಿಂದ ನಡೆಯುವುದರಿಂದ ವೈವಾಹಿಕ ಬಾಂಧವ್ಯ ಎಲ್ಲ ಏರುಪೇರುಗಳನ್ನು ಸಹಿಸಿಕೊಂಡು ಗಟ್ಟುಮುಟ್ಟಾಗಿ ನಿಲ್ಲಬಲ್ಲದು. ಮದುವೆ ಸ್ವರ್ಗದಲ್ಲಿ ನಡೆದಿರುತ್ತವೆ ಎನ್ನಲಾಗುತ್ತದೆ ಸ್ವರ್ಗ ಎನ್ನುವ ಪರಮ ಸುಖದ ಅನುಭೂತಿಯ ತಾಣ…

Read More

ಸುಮಾರು ಐನೂರು ವರ್ಷಗಳ ಇತಿಹಾಸವುಳ್ಳ ಸೌಡ ಅಗ್ರಹಾರ ಮಟ್ಕಲ್ ಮಹಾಗಣಪತಿ ದೇವಸ್ಥಾನ ಲಕ್ಷಾಂತರ ಭಕ್ತರ ಶ್ರದ್ಧಾ ಕೇಂದ್ರವೆಂದು ಪ್ರಸಿದ್ಧಿಯಲ್ಲಿರುವ ಈ ಕ್ಷೇತ್ರ ಶಿಥಿಲಾವಸ್ಥೆ ತಲುಪಿದ್ದು ವೇದಜ್ಞ ವಿದ್ವಜ್ಜನರ ಸಲಹೆಯಂತೆ ಶೀಘ್ರಾತಿ ಶೀಘ್ರ ಜೀರ್ಣೋದ್ಧಾರ ಕಾರ್ಯ ಸಂಪನ್ನಗೊಳಿಸಬೇಕೆಂಬ ನಿರ್ಧಾರದೊಂದಿಗೆ ಕಾರ್ಯಪ್ರವರ್ತವಾಗಿತ್ತು. 2022 ರ ಸಮಯಕ್ಕೆ ಭಕ್ತರ ಸರ್ವ ವಿಧದ ಸಹಕಾರದೊಂದಿಗೆ ಪುನರಾಭಿವೃದ್ಧಿ ಕಾರ್ಯ ಸಂಪನ್ನಗೊಂಡಿದ್ದು, ಜೀರ್ಣೋದ್ಧಾರ ಸಮಿತಿ ಹಾಗೂ ಸಾರ್ವಜನಿಕರ ಸತತ ಶ್ರಮದ ಫಲಶ್ರುತಿಯಾಗಿ ಸುಸಜ್ಜಿತ ಶಿಲಾಮಯ ದೇಗುಲ ನಿರ್ಮಾಣ ಅಂತಿಮ ಹಂತ ಕಾಣುವುದರೊಂದಿಗೆ 2022 ಫೆಬ್ರವರಿಯಲ್ಲಿ ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮಗಳು ಪ್ರತಿಷ್ಠಾನ ಕಾರ್ಯ, ಬ್ರಹ್ಮಕಲಶಾದಿ ಧಾರ್ಮಿಕ ವಿಧಿಗಳು ಸುಸೂತ್ರವಾಗಿ ಸಂಪನ್ನಗೊಂಡಿತು. ಇದೀಗ ದೇವಸ್ಥಾನದ ಆಕರ್ಷಣೆ ಹಾಗೂ ದೈವಿಕ ಸೊಬಗನ್ನು ವೃದ್ಧಿಗೊಳಿಸುವ ಸಲುವಾಗಿ ದೇವಳದ ಹೊರ ಪೌಳಿಯ ಬಾವಿ ಮೆಟ್ಟಿಲುಗಳ ಜೀರ್ಣೋದ್ಧಾರ ಪ್ರಕ್ರಿಯೆಗೆ ತೊಡಗಿದ್ದು ಭಕ್ತ ಬಾಂಧವರಿಂದ ಉದಾರ ಹೃದಯದ ಸಹಕಾರ ದಾನ ದೇಣಿಗೆಗಳನ್ನು ನಿರೀಕ್ಷಿಸಲಾಗಿದ್ದು ದಾನಿಗಳನ್ನು ಸಾರ್ವಜನಿಕ ಧಾರ್ಮಿಕ ಸಮಾರಂಭದಲ್ಲಿ ಸಂಮಾನಿಸಿ ಭಕ್ತ ಜನರ ಸಕಲ ವಿಘ್ನಗಳನ್ನು ನಿವಾರಿಸುವ ಕಾರಣಿಕದ…

Read More

ಮೂಡುಬಿದಿರೆ: ಮಂಗಳೂರು ವಿವಿಯಅಂತರಕಾಲೇಜುಅಥ್ಲೇಟಿಕ್ಸ್‍ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜಿನ ಕ್ರೀಡಾಪಟುಗಳು ಸಾರ್ವಕಾಲಿಕ ಸಾಧನೆ ಮೆರೆದಿದ್ದಾರೆ. ಪುರುಷರ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ ಸತತ 22ನೇ ಬಾರಿ ಸಮಗ್ರತಂಡ ಪ್ರಶಸ್ತಿಯನ್ನು ದ್ವಿತೀಯ ಸ್ಥಾನ ಪಡೆದ ತಂಡದಿಂದ 460 ಅಂಕಗಳ ಅಂತರದಲ್ಲಿ ಪಡೆಯುವುದರ ಜೊತೆಗೆ 11 ನೂತನ ಕೂಟದಾಖಲೆಯನ್ನು ಆಳ್ವಾಸ್ ವಿದ್ಯಾರ್ಥಿಗಳು ನಿರ್ಮಿಸಿದ್ದಾರೆ. ಈ ಸಾಧನೆ ಮೆರೆದ ಭಾರತದ ಏಕೈಕ ಕಾಲೇಜು ಈ ಅಪ್ರತಿಮಾ ಸಾಧನೆಯ ಜೊತೆಯಲ್ಲಿ ಮಂಗಳೂರು ವಿವಿಯ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿರುವ 46 ವಿಭಾಗಗಳಲ್ಲಿ ಈಗಾಗಲೇ ಆಳ್ವಾಸ್ ವಿದ್ಯಾರ್ಥಿಗಳು ನೂತನ ಕೂಟದಾಖಲೆ ನಿರ್ಮಿಸಿದ್ದರೆ, ಬಾಕಿ ಉಳಿದಿದ್ದ ಹೆಪ್ಟಾತ್ಲಾನ್ವಿ ಭಾಗದಲ್ಲೂ ಈ ಬಾರಿ ನೂತನ ಕೂಟದಾಖಲೆ ನಿರ್ಮಿಸುವ ಮೂಲಕ ಅಥ್ಲೇಟಿಕ್ಸ್‍ನಲ್ಲಿರುವ ಒಟ್ಟು 47 ವಿಭಾಗಗಳಲ್ಲೂ ನೂತನ ಕೂಟದಾಖಲೆ ನಿರ್ಮಿಸಿದ ಭಾರತದ ಏಕೈಕ ಕಾಲೇಜು ಎಂಬ ಅಸಾಮಾನ್ಯ ಸಾಧನೆಯನ್ನು ಆಳ್ವಾಸ್ ಮೆರೆದಿದೆ. ಎರಡು ವಿಭಾಗಗಳಲ್ಲಿ 84 ಪದಕಗಳು ಉಡುಪಿ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್‍ಷಿಪ್‍ನ ಪುರುಷರ ವಿಭಾಗದಲ್ಲಿ 292 ಅಂಕಗಳು ಹಾಗೂ ಮಹಿಳೆಯರ ವಿಭಾಗದಲ್ಲಿ 277…

Read More

ವಿದ್ಯಾಗಿರಿ : 2 ಸಾವಿರ ವರ್ಷಗಳ ಇತಿಹಾಸವಿರುವ ಮೈತೇಯಿ ಸಂಸ್ಕೃತಿ ಇಂದಿಗೂ ಶ್ರೀಮಂತವಾಗಿ ಉಳಿದಿರುವುದಕ್ಕಾಗಿ ನಾವೆಲ್ಲರೂ ಹೆಮ್ಮೆ ಪಡಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸಂಸ್ಥೆಯ ಮಣಿಪುರಿ ವಿದ್ಯಾರ್ಥಿಗಳಿಗೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ಮೈತೇಯಿ ಸಂಸ್ಕೃತಿಯ ಪ್ರಮುಖ ಹಬ್ಬ `ನಿಂಗೋಲ್ ಚಕೊಬಾ’ ಆಚರಣೆಯಲ್ಲಿ ಅವರು ಮಾತನಾಡಿದರು. ಸಹೋದರ ಸಹೋದರಿಯರ ನಡುವೆ ಇರುವ ಭ್ರಾತೃತ್ವ ಮತ್ತು ರಕ್ಷಣಾತ್ಮಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಮೈತೇಯಿ ಸಂಸ್ಕೃತಿಯ ಪ್ರಮುಖ ಹಬ್ಬ ‘ನಿಂಗೋಲ್ ಚಕೋಬಾ’ ಎಂದರು. ಭಾರತ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಎಲ್ಲಾ ಸಂಪ್ರದಾಯ, ಆಚರಣೆ, ಆಹಾರ ಪದ್ಧತಿ, ನಂಬಿಕೆಗಳು ಮತ್ತು ಸಂಸ್ಕೃತಿಯನ್ನು ಗೌರವಿಸಿ, ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆಗೈದ ಸಂಸ್ಥೆಯ ಹೆಮ್ಮೆಯ ಮಣಿಪುರಿ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು. ಬಳಿಕ…

Read More

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗವು ಶನಿವಾರ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ 'ಸವ್ಯಸಾಚಿ' ಅಂತರ್ ಕಾಲೇಜು ಕಾಮಾರ್ಸ್ ಫೆಸ್ಟ್‍ನ್ನು ಶನಿವಾರ ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿದರು. ವಿಭಾಗದ ಹಿರಿಯ ವಿದ್ಯಾರ್ಥಿ, ಲೆಕ್ಕ ಪರಿಶೋಧಕ ಅನ್ವೇಶ್ ಶೆಟ್ಟಿ ಮುಖ್ಯ ಅಥಿತಿಯ ನೆಲೆಯಲ್ಲಿ ಮಾತನಾಡಿ, ಕಾಲೇಜು ಫೆಸ್ಟಗಳು ವಿದ್ಯಾರ್ಥಿಗಳಿಗೆ ತಮ್ಮ ದಿನನಿತ್ಯದ ದಿನಚರಿಯಿಂದ ಹೊರಬಂದು ಸಂತೋಷದ ಕ್ಷಣಗಳನ್ನು ಕಳೆಯಲು ಸಹಕಾರಿಯಾಗಿವೆ. ಆದರೆ ಈ ಹಂತದಲ್ಲಿ ಲಭಿಸುವ ಕಲಿಕೆ ಮಾತ್ರ ಬದುಕಿಗೆ ಸಹಕಾರಿ ಎಂದರು. ಅಧ್ಯಕ್ಷತೆವಹಿಸಿ ಮಾತನಾಡಿದ ಆಳ್ವಾಸ್ ಕಾಲೇಜಿನ ಪ್ರಾಚಾರ್ಯ ಡಾ ಕುರಿಯನ್, ತಮ್ಮ ಸಾಮಥ್ರ್ಯವನ್ನು ವೃದ್ಧಿಸಿಕೊಳ್ಳಲು ಈ ಅವಕಾಶಗಳನ್ನು (ಫೆಸ್ಟ್) ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಇಲ್ಲಿ ಕಲಿತ ಪಾಠ ಭವಿಷ್ಯಕ್ಕೆ ಸ್ಪಷ್ಟ ಮಾರ್ಗದರ್ಶನವನ್ನು ನೀಡಬಲ್ಲದು. ‘ನೀವು ಏನು ಮಾಡುತ್ತೀರಿ ಎಂಬುದು ಮುಖ್ಯ ಅಲ್ಲ, ಬದಲಿಗೆ ನೀವು ಮಾಡುವ ಕೆಲಸವನ್ನು ಹೇಗೆ ಮಾಡುತ್ತೀರಿ ಎಂಬುದರ ಮೇಲೆ ಯಶಸ್ಸು ನಿರ್ಧಾರವಾಗುತ್ತದೆ ಎಂದರು. ಸಮಾರೋಪ ಸಮಾರಂಭದಲ್ಲಿ…

Read More