Author: admin

ಇಂಡಿಯನ್ ಬಂಟ್ಸ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ( ಐಬಿಸಿಸಿಐ) ದುಬೈ ವ್ಯಾಪಾರ ಪ್ರವಾಸವನ್ನು ಕಳೆದ ಬುಧವಾರ (ನವಂಬರ್ 20 ರಿಂದ ನವಂಬರ್ 25) ಯಶಸ್ವಿಯಾಗಿ ಆಯೋಜಿಸಿದ್ದು, ಅಂತರಾಷ್ಟ್ರೀಯ ವ್ಯಾಪಾರ ಸಹಯೋಗಗಳನ್ನು ಬೆಳೆಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ನಿಯೋಗವು ರಾಸಾಯನಿಕ ಔಷಧ ಶಾಸ್ತ್ರ, ಎಲೆಕ್ಟ್ರಾನಿಕ್, ಎಲೆಕ್ಟ್ರಿಕಲ್ಸ್, ಮೆಕ್ಯಾನಿಕಲ್, ವಜ್ರೋದ್ಯಮ, ಪ್ರವಾಸೋದ್ಯಮ, ಹಣಕಾಸು ತಜ್ಞ ಮತ್ತು ಕಾನೂನು ವೃತ್ತಿಪರ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಭಾರತದ 50 ಉದ್ಯಮಿಗಳನ್ನು ಭಾಗವಹಿಸಿದರು. ವ್ಯಾಪಾರ ಕಂಪನಿಗಳ ಕಾರ್ಯಾಚರಣೆಗಳನ್ನು ಅಲ್ಲದೇ ಪ್ರತಿಷ್ಠಿತ ಉದ್ಯಮಿಗಳ ಭೇಟಿಯನ್ನು ಒಳಗೊಂಡಿತ್ತು. ಪ್ರತಿನಿಧಿಗಳು ಯುಎಇಯಲ್ಲಿನ ವಿವಿಧ ವ್ಯಾಪಾರ ಕಾರ್ಯಾಚರಣೆಗಳ ಸಮಗ್ರ ತಿಳುವಳಿಕೆ ಮತ್ತು ಮಾಹಿತಿಗಳನ್ನು ಪಡೆದುಕೊಂಡರು. ಡಾ. ಬಿಆರ್ ಶೆಟ್ಟಿ ಮತ್ತು ಸೀಮಾ ಶೆಟ್ಟಿ (ನಿಯೋ ಫಾರ್ಮ), ಪ್ರಸನ್ನ ಶೆಟ್ಟಿ ಮತ್ತು ಗುಣಶೀಲ್ ಶೆಟ್ಟಿ (ಏಸ್ ಕ್ರೇನ್ಸ್ ) ಸುಜಾತ್ ಶೆಟ್ಟಿ ಮತ್ತು ಅನ್ವಿತಾ ಶೆಟ್ಟಿ (ಜಿಬಿಎಂಟಿ), ಟಿ. ಡಿ ಪಟೇಲ್ (ಎಮಿರೇಟ್ಸ್ ಟ್ರನ್ಸ್ ಫಾರ್ಮರ್ಸ್ ಮತ್ತು ಸ್ವಿಚ್ ಗೇಯರ್ ಕಂಪನಿ) ಸಂದರ್ಶನ ನೀಡಿ…

Read More

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿಸೆಂಬರ್ 5ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ಪತ್ರಕರ್ತರ 5ನೇ ಜಿಲ್ಲಾ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಬಿಡುಗಡೆಗೊಳಿಸಿದರು. ಮಂಗಳೂರು ಉತ್ತರ ಶಾಸಕ ಡಾ. ವೈ.ಭರತ್ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಮೂಡಾ ಆಯುಕ್ತೆ ನೂರ್ ಜಹರಾ ಖಾನಂ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ .ಬಿ.ಎನ್ ಉಪಸ್ಥಿತರಿದ್ದರು.

Read More

ಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ರವರ ಪ್ರತೀಕ್ ಪೂಜಾರಿ ನಿರ್ಮಾಣದ, ಯುವ ನಿರ್ದೇಶಕ ಭರತ್ ಶೆಟ್ಟಿ ನಿರ್ದೇಶನದ “ಪಿಲಿಪಂಜ” ವಿಭಿನ್ನ ಕಥಾ ಹಂದರದ, ವಿಭಿನ್ನ ಶೈಲಿಯ ತುಳು ಚಲನಚಿತ್ರದ ಪ್ರಥಮ ಹಂತದ ಚಿತ್ರೀಕರಣ ಮುಕ್ತಾಯವಾಯತು. ಮುಡಿಪು, ಹೂಹಾಕುವ ಕಲ್ಲು, ವರ್ಕಾಡಿ, ನರಿಂಗಾನ, ಇರಾ ಮುಂತಾದ ಕಡೆ ಸತತ 25 ದಿನಗಳಿಂದ ಚಿತ್ರೀಕರಣಗೊಂಡಿತ್ತು. ಇದು ತುಳು ಚಿತ್ರರಂಗದಲ್ಲಿ ಹೊಸ ಪ್ರಯೋಗದೊಂದಿಗೆ ವಿಭಿನ್ನವಾಗಿ ಮೂಡಿ ಬರಲಿದೆ. ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ಸುಂದರ್ ರೈ ಮಂದಾರ, ರವಿ ರಾಮಕುಂಜ, ಪ್ರವೀಣ್ ಕೊಡಕ್ಕಲ್, ಶಿವಪ್ರಕಾಶ್ ಪೂಂಜ, ಪ್ರಕಾಶ್ ಶೆಟ್ಟಿ ಧರ್ಮನಗರ, ಪ್ರತೀಕ್ ಪೂಜಾರಿ, ರಕ್ಷಣ್ ಮಾಡೂರು, ರೂಪಶ್ರೀ ವರ್ಕಾಡಿ, ಜಯಶೀಲ ಮಂಗಳೂರು, ವಿಜಯಹರಿ ರೈ, ದಯಾನಂದ ರೈ ಬೆಟ್ಟಂಪಾಡಿ, ರಂಜನ್ ಬೋಳೂರು, ದಿಶಾರಾಣಿ, ಭಾಸ್ಕರ್ ಮಣಿಪಾಲ ಮುಂತಾದವರು ಬಣ್ಣ ಹಚ್ಚಿದ್ದಾರೆ. ಛಾಯಾಗ್ರಹಣ ಉದಯ ಬಳ್ಳಾಲ್, ಸಂಗೀತ ಲಾಯ್ ವೆಲಂಟೈನ್ ಸಲ್ದಾನ, ಸಂಕಲನ ಶ್ರೀನಾಥ್ ಪವಾರ್, ಸಾಹಸ ಸುರೇಶ್ ಶೆಟ್ಟಿ,…

Read More

ಕಾರ್ಕಳ : ಸಾಮಾಜಿಕ ಜಾಲತಾಣದಿಂದ ನಮ್ಮ ಕೌಟುಂಬಿಕ ಸಂಬಂಧಗಳು ಇಂದು ಬಿರುಕು ಬಿಟ್ಟಿವೆ. ಹದಿಹರೆಯ, ವ್ಯಕ್ತಿತ್ವ ರೂಪಿಸುವ ಸಂಕ್ರಮಣ ಕಾಲ. ಇಂತಹ ಸಂದರ್ಭದಲ್ಲೆ ಜೀವನ ಮೌಲ್ಯಗಳನ್ನು ಬಿತ್ತುವ ‘ಮೌಲ್ಯಸುಧಾ’ದ ಮೂಲಕ ಕೌಟುಂಬಿಕ, ಬದುಕಿನ ಪ್ರೀತಿಯನ್ನು ತುಂಬುತ್ತಿರುವ ವಿದ್ಯಾರ್ಥಿಗಳ ಬದುಕಿಗೆ ಬೆಳಕಾದ, ವಿಭಿನ್ನ ರೀತಿಯಲ್ಲಿ ಶಿಕ್ಷಣದ ಪರಂಪರೆಗೆ ಕೊಡುಗೆ ನೀಡುತ್ತಿರುವ ಕಾರ್ಕಳದ ಹೆಮ್ಮೆ ಜ್ಞಾನಸುಧಾವಾಗಿದೆ ಎಂದು ತರಂಗ ವಾರಪತ್ರಿಕೆಯ ಸಂಪಾದಕಿ ಡಾ.ಯು.ಬಿ. ರಾಜಲಕ್ಷ್ಮಿ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಜ್ಞಾನಸಂಭ್ರಮ- 2024ರ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕ ಶ್ರೀ ಬಿ. ಶೇಖರ್ ಶೆಟ್ಟಿಯವರು ಮಾತನಾಡಿ, ವ ಕಾರಗಳಾದ ವಟು, ವಸನ, ವಿದ್ಯೆ, ವಿನಯ ಮತ್ತು ವಾಕ್ ವಿ ಕಾರವಾಗದೆ ಸಾಕಾರಾವಾದರೆ ಶ್ರೇಷ್ಟ ವ್ಯಕ್ತಿಗಳಾಗಲು ಸಾಧ್ಯ. ಯೋಜನೆ ಮತ್ತು ಸ್ವಯಂ ಮೌಲ್ಯಮಾಪನ ನಮ್ಮಲ್ಲಿರ ಬೇಕು. ಯಾರು ರಾತ್ರಿ ಮಲಗುವಾಗ, ಬೆಳಗ್ಗೆ ಏಳುವಾಗ ನಗು ಮುಖದಲ್ಲಿ…

Read More

ಮೂಡುಬಿದಿರೆ: ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆಯು (ಎನ್‌ಎಬಿಎಲ್) ಜಾಗತಿಕವಾಗಿ ಪರಿಗಣಿಸಲ್ಪಡುವ ಮಾನದಂಡವಾಗಿದೆ.  ಈ ಪ್ರಯೋಗಾಲಯದ ಫಲಿತಾಂಶಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶ್ವಾಸಾರ್ಹವಾಗಿರುತ್ತದೆ ಎಂದು ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆ ಮಂಡಳಿ ನಿರ್ದೇಶಕ ಶ್ರೀಕಾಂತ್ ಆರ್ ಹೇಳಿದರು. ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಎಂಬಿಎ ಸೆಮಿನಾರ್ ಸಭಾಂಗಣದಲ್ಲಿ  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆ ಮತ್ತು ಅದರ ಪ್ರಯೋಜನಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು. ಎನ್‌ಎಬಿಎಲ್ ಮಾನ್ಯತೆಯ ಪ್ರಯೋಗಾಲಯಗಳು ದೃಢವಾದ ಗುಣಮಟ್ಟ ನಿರ್ವಹಣಾ ವ್ಯವಸ್ಥೆಯನ್ನು ಸ್ಥಾಪಿಸಲು ಮತ್ತು ನಿರ್ವಹಿಸಲು ಸಹಕಾರಿಯಾಗಿವೆ. ಇದು ಪ್ರಯೋಗಾಲಯದ ಕಾರ್ಯಾಚರಣೆಗಳು, ಪರೀಕ್ಷೆಯ ನಿಖರತೆ ಮತ್ತು ಒಟ್ಟಾರೆ ಸೇವೆಯ ಗುಣಮಟ್ಟದಲ್ಲಿ ನಿರಂತರ ಸುಧಾರಣೆಗೆ ಕಾರಣವಾಗುತ್ತದೆ ಎಂದರು. ಮಾಪನಶಾಸ್ತ್ರ ವಿಷಯವು ಇಂದಿನ ಶೈಕ್ಷಣಿಕ ಪಠ್ಯಕ್ರಮದಲ್ಲಿ ಒಂದು ವಿಷಯವಾಗಿ ಅಧ್ಯಯನ ಮಾಡಲು ಮಾತ್ರ ಸೀಮಿತವಾಗಿದೆ. ಆದರೆ ಇದು ದುರದೃಷ್ಟಕರ.  ಮಾಪನಶಾಸ್ತ್ರ  ಅಥವಾ ಮಾಪನ ವಿಜ್ಞಾನವು ಕೈಗಾರಿಕಾ ಉತ್ಪಾದನೆ…

Read More

ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿಪೋಷಕರಿಗೆ ಮಕ್ಕಳ ಪಾಲನೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಾಗಾರಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಕೆಲೊರೆಕ್ಸ್ ಗ್ರೂಪ್‍ನ ಎಮ್.ಡಿ, ಸಿ.ಇ.ಒ. ಡಾ. ಮಂಜುಳ ಪೂಜಾ ಶ್ರಾಫ್ ಆಗಮಿಸಿದ್ದರು. ಅವರು ಮಾತನಾಡಿ ಪೋಷಕರು ಮಕ್ಕಳ ಜೊತೆ ತಮ್ಮ ಅಮೂಲ್ಯ ಕ್ಷಣಗಳನ್ನು ಕಳೆಯಬೇಕು. ಮಕ್ಕಳು ಮೊಬೈಲ್, ಡ್ರಗ್ಸ್ ಮುಂತಾದ ದುಷ್ಟ ಚಟಗಳಿಂದ ದೂರವಿರುವ ಹಾಗೆ ನೋಡಿಕೊಳ್ಳಬೇಕು. ಹಾಗೆಯೇ ಅವರು ತಮ್ಮೆಲ್ಲ ಭಯಗಳಿಂದ ಹೊರಗಡೆ ಬರುವ ಹಾಗೆ ಮಾಡಬೇಕು. ಅದೇ ರೀತಿ ಶಿಕ್ಷಕರು ಸ್ವಗೌರವದ ಜೊತೆಗೆ ಕೃತಜ್ಞತಾ ಮನೋಭಾವ ಹೊಂದಿರಬೇಕೆಂದರು. ಕೆಲೋರೆಕ್ಸ್ ಗ್ರೂಪ್‍ನ ಅನಂತ ಕೃಷ್ಣನ್ ಬಿ ಮಾಹಿತಿಯನ್ನು ನೀಡಿಪೋಷಕರರ ಪ್ರಶ್ನೆಗಳಿಗೆ ಉತ್ತರಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಕಾರ್ಯಾಗಾರದಲ್ಲಿ ಪಾಲ್ಗೊಂಡ ಪೋಷಕರನ್ನು ಅಭಿನಂದಿಸಿದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಸಂಸ್ಥೆಯ ಪರವಾಗಿ ಎಲ್ಲರನ್ನು ಸ್ವಾಗತಿಸಿದರು. ಕಾರ್ಯಾಗಾರದಲ್ಲಿ ಸೈಬರ್ ಬೆದರಿಕೆ, ಇಂಟರ್‍ನೆಟ್ಎ ಡಿಕ್ಷನ್, ಆನ್‍ಲೈನ್ ಸುರಕ್ಷತೆ, ಮಾನಸಿಕ ಆರೋಗ್ಯ, ನೈಜ ಮತ್ತು ವಾಸ್ತವಿಕ ಸಂಪರ್ಕ…

Read More

ಕನ್ನಡ ಸಂಘದ ‘ಕನ್ನಡ ಭವನ’ದಲ್ಲಿ ನವಂಬರ್ 16 ರ ಶನಿವಾರದಂದು ಆಚರಿಸಿದ ಕರ್ನಾಟಕ ರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಗಳಾದ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿ ವೇದಿಕೆಗೆ ಕರೆತಂದು ಅಧ್ಯಕ್ಷೆ ನಿಶಾ ಶೆಟ್ಟಿ, ವಿಶ್ವಸ್ಥ ಮಲ್ಹಾರ ನಿಂಬರಗಿ, ಮಹಿಳಾ ಮುಖ್ಯಸ್ಥೆ ಚಂದ್ರಿಕಾ ಕೋಟ್ಯಾನ್, ಗೌರವ ಕಾರ್ಯದರ್ಶಿ ವಿದ್ಯಾಧರ ಭಟ್ ಮತ್ತು ಸಂಚಾಲಕ ನಾಗರಾಜ್ ಶೆಟ್ಟಿ ಅವರೊಂದಿಗೆ ದೀಪ ಪ್ರಜ್ವಲಿಸಿ ತನಿಷ್ಕಾ ಭಟ್ ಅವರ ಪ್ರಾರ್ಥನೆಯ ನಂತರ ಮುಖ್ಯ ಅತಿಥಿ ಚಂದ್ರಶೇಖರ ಶೆಟ್ಟಿ ಅವರು ಚೆಂಡೆ ಬಾರಿಸಿ ರಾಜ್ಯೋತ್ಸವ ಉದ್ಘೋಷಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಸಂತಿ ಭಟ್, ಪ್ರಪುಲಾ ಶೆಟ್ಟಿ, ಚಂದ್ರಿಕಾ ಕೋಟ್ಯಾನ್ ಮತ್ತು ರಶ್ಮಿ ಭಟ್ ನಾಡಗೀತೆ ಮತ್ತು ಸಂಘ ಗೀತೆ ಪ್ರಸ್ತುತಪಡಿಸಿದರು. ನಿಶಾ ಶೆಟ್ಟಿ ಅವರ ಸ್ವಾಗತ ಮತ್ತು ಸಾಂದರ್ಭಿಕ ನುಡಿಗಳ ನಂತರ ಮುಖ್ಯ ಅತಿಥಿ ಚಂದ್ರಶೇಖರ ಶೆಟ್ಟಿಯವರನ್ನು ಶಾಲು, ಪುಷ್ಪಗುಚ್ಛ, ಫಲ ತಾಂಬೂಲ, ಸ್ಮರಣಿಕೆ ಮತ್ತು ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಜೀವ…

Read More

ಕುಂದಾಪುರ ತಾಲೂಕು ಯುವ ಬಂಟರ ಸಂಘದ 2024- 26 ನೇ ಸಾಲಿನ ನೂತನ ಅಧ್ಯಕ್ಷರ ಆಡಳಿತಾವಧಿಯ ಕಾರ್ಯಕ್ರಮಗಳ ರೂಪುರೇಷೆಗಳ ಕೈಪಿಡಿಯನ್ನು ನವೆಂಬರ್ 28 ರಂದು ಸಂಜೆ ಬೆಳ್ಳಾಡಿಯಲ್ಲಿ ಮುಂಬಯಿಯ ಖ್ಯಾತ ಯುವ ಉದ್ಯಮಿ, ಯುವ ಬಂಟರ ಸಂಘದ ನಿರ್ದೇಶಕರಾದ ಬೆಳ್ಳಾಡಿ ಅಶೋಕ್ ಶೆಟ್ಟಿಯವರು ಅನಾವರಣಗೊಳಿಸಿದರು. ಈ ಸಂಧರ್ಭದಲ್ಲಿ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಸಂಘ ನಡೆದು ಬಂದ ಹಾದಿ ಅತ್ಯಂತ ಸ್ಮರಣೀಯವಾದದ್ದು. ಕಳೆದ ಎರಡು ವರ್ಷದಲ್ಲಿ ದಶಮ ಸಂಭ್ರಮದ ಕಾಲಘಟ್ಟದಲ್ಲಿ ತನ್ನ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಕರ್ನಾಟಕದ ಎಲ್ಲಾ ಸಂಘಗಳಿಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದಲ್ಲದೆ, ಜಾಗತಿಕ ಮಟ್ಟದಲ್ಲೂ ಸಹ ಮನ್ನಣೆಯನ್ನು ಪಡೆದುಕೊಂಡಿದೆ ಎಂದು ಹೇಳಿದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು ವಹಿಸಿದ್ದರು. ಸ್ಥಾಪಕಾಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಶುಭ ಹಾರೈಸಿ, ಈ ಹಿಂದೆ ಸಂಘಕ್ಕೆ ಉದಾರ ಮನಸ್ಸಿನಿಂದ ದೇಣಿಗೆಗಳನ್ನು ನೀಡಿದ ದಾನಿಗಳನ್ನು ಸ್ಮರಿಸಿಕೊಂಡರು. ನಿಕಟಪೂರ್ವ ಅಧ್ಯಕ್ಷರಾದ ಸುನಿಲ್ ಶೆಟ್ಟಿ ಹೇರಿಕುದ್ರು, ನಿಕಟಪೂರ್ವ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ…

Read More

ತನ್ನ ಭಿನ್ನ ವಿಭಿನ್ನ ಸೇವಾ ಚಟುವಟಿಕೆಗಳ ಮೂಲಕ ಮನೆ ಮಾತಾಗಿರುವ ಶಿವಾಯ ಫೌಂಡೇಶನ್ ಮುಂಬಯಿ ವತಿಯಿಂದ ಡೊಂಬಿವಲಿ ಉಪನಗರದ ಅಂಕುರ್ ಬಾಲ ಸೇವಾ ಗೃಹದಲ್ಲಿರುವ ಹೆತ್ತವರಿಂದ ತಿರಸ್ಕೃತರಾದ, ಪಾಲಕರ ಪ್ರೀತಿಯಿಂದ ವಂಚಿತರಾದ ಮುದ್ದು ಮಕ್ಕಳ ಜೊತೆ ದೀಪಾವಳಿ ಸಂಭ್ರಮವನ್ನು ಆಚರಿಸಲಾಯಿತು. ಸುಮಾರು 39 ಮಂದಿ ಮಕ್ಕಳಿಗೆ ಹೊಸ ಬಟ್ಟೆ, ಮಕ್ಕಳ ಕಲಿಕೆಗೆ ಬೇಕಾಗುವ ಮೈಕ್, ಸ್ಪೀಕರ್, ಮಕ್ಕಳ ಆರೈಕೆಗೆ ಬೇಕಾಗುವ ತಿಂಗಳ ರೇಷನ್ ನೀಡಲಾಯಿತು. ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನದ ಜೊತೆಗೆ ಎಲ್ಲಾ ಮಕ್ಕಳಿಗೂ ಸಮಾಧಾನಕರ ಬಹುಮಾನ ವಿತರಿಸಲಾಯಿತು. ಮಕ್ಕಳ ಪಾಲನೆ ಮಾಡುತ್ತಿರುವ ಮತ್ತು ಬಾಲಗೃಹದ ಸಂಸ್ಥಾಪಕಿ ಅಕ್ಷತಾ ಭೋಸ್ಲೆ ಮತ್ತು ಅವರ ಪುತ್ರಿಯನ್ನು ಸನ್ಮಾನಿಸಿ, ಉತ್ತಮ ಕಾರ್ಯದ ಜೊತೆ ಸಂಸ್ಥೆ ಸದಾ ಇರಲಿದೆ ಎಂದು ಧೈರ್ಯ ತುಂಬಲಾಯಿತು. ಕಾರ್ಯಕ್ರಮದಲ್ಲಿ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಿ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಸಂಸ್ಥೆಯ ಸದಸ್ಯರಾದ ಲೀಲಾಧರ ಶೆಟ್ಟಿಗಾರ್ ಶಕುಂತಳಾ ಲೀಲಾಧರ ದಂಪತಿ, ಸಿಎ ಸಂದೀಪ್ ಶೆಟ್ಟಿ, ಪ್ರಶಾಂತ್…

Read More

ಮಿಜಾರು: ‘ಇಂದಿನ ಡಿಜಿಟಲ್ ಕಾಲಘಟ್ಟದಲ್ಲಿ ಕನ್ನಡದ ಬೆಳವಣಿಗೆಗೆ ತಂತ್ರಜ್ಞಾನದ ಕೊಡುಗೆ ಅತ್ಯವಶ್ಯ ಹಾಗೂ ಅನಿವಾರ್ಯ’ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ. ಚಿನ್ನಪ್ಪ ಗೌಡ ಹೇಳಿದರು. ಆಳ್ವಾಸ್ ಎಂಜಿನಿಯರಿಂಗ್ಮತ್ತು ತಂತ್ರಜ್ಞಾನ ಕಾಲೇಜು ಕನ್ನಡ ಸಂಘವು ಕಾಲೇಜಿನ ಎಂಬಿಎ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಕನ್ನಡ ಹಬ್ಬ -2024’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡ ಭಾಷೆಯ ಅಳಿವು- ಉಳಿವಿಗೆ ತಂತ್ರಜ್ಞಾನದ ಬಳಕೆಯೂ ಮಹತ್ತರವಾಗಿದೆ. ತಂತ್ರಜ್ಞಾನದ ಮೂಲಕ ಕನ್ನಡದ ವ್ಯಾಪ್ತಿ ಮತ್ತು ಸತ್ವವನ್ನು ಹೆಚ್ಚಿಸುವುದು ಹಾಗೂ ಕಂಪನ್ನು ಪಸರಿಸುವುದು ಬಹುಮುಖ್ಯವಾಗಿದೆ. ಭವಿಷ್ಯದ ಪೀಳಿಗೆಗೆ ಕನ್ನಡದ ಪ್ರಸ್ತುತತೆಯನ್ನು ಖಚಿತಪಡಿಸಬಹುದು ಎಂದರು. ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಮಲ್ಲಿಪಟ್ಟಣ ಮಾತನಾಡಿ, ಕನ್ನಡ ಭಾಷೆಯು ಆಳವಾದ ಅರ್ಥಗಳನ್ನು ಹೊಂದಿರುವ ಪದಗಳಿಂದ ಕೂಡಿದ ಸಮೃದ್ಧ ಭಾಷೆಯಾಗಿದೆ.  ದೈನಂದಿನ ಸಂಬಂಧಗಳು ಮತ್ತು ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ಕನ್ನಡ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕನ್ನಡವು ನಮ್ಮ ಜೀವನದ ಹಾಗೂ ಸಂವಹನದ ಅವಿಭಾಜ್ಯ ಅಂಗ ಎಂದರು.  ಕಾಲೇಜಿನ ಪ್ರಾಂಶುಪಾಲ ಡಾ.…

Read More