Author: admin

ದಿನದಿಂದ ದಿನಕ್ಕೆ ನಮ್ಮ ಮಹಾ ನಗರವಾದ ಮಂಗಳೂರಿನ ಮಧ್ಯಭಾಗದಿಂದ ಹಿಡಿದು ಸುತ್ತಮುತ್ತಲಿನ ಸುರತ್ಕಲ್, ಮುಲ್ಕಿ, ಉಡುಪಿ, ಬಿ.ಸಿ ರೋಡ್, ಪುತ್ತೂರು ಈ ಕಡೆ ತೊಕ್ಕೊಟ್ಟು, ಕೊಣಾಜೆ, ತಲಪಾಡಿ ಎಲ್ಲವೂ ದಾಪುಗಾಲು ಇಡುತ್ತಾ ಅಭಿವೃದ್ಧಿ ಹೊಂದುತ್ತಿದೆ. ಅಭಿವೃದ್ಧಿ ಎಂದರೆ ಅದು ಶೈಕ್ಷಣಿಕ, ವೈದ್ಯಕೀಯ, ಧಾರ್ಮಿಕ, ವಸತಿ ಸಮುಚ್ಚಯ ಇವುಗಳ ಬೆಳವಣಿಗೆಯ ವೇಗ ಮಿತಿಮೀರಿ ಓಡುತ್ತಿದೆ. ಆದರೆ ಇದನ್ನು ಸಮರ್ಪಕವಾಗಿ ನಡೆಸಿಕೊಳ್ಳಲು ನಮ್ಮ ನಗರಗಳ ಧಾರಣಶಕ್ತಿ ಹೇಗಿದೆ ಈ ಬಗ್ಗೆ ಒಮ್ಮೆ ಅವಲೋಕಿಸೋಣ. ಎಲ್ಲದಕ್ಕಿಂತ ಪ್ರಮುಖವಾಗಿ ಇವೆಲ್ಲದರಿಂದ ಬರುವಂತಹ ಕಸ ಅಥವಾ ವೇಸ್ಟೇಜ್ ವಿಲೇವಾರಿಯಲ್ಲಿ ನಮ್ಮ ಪಾತ್ರವೇನು? ಈ ಬಗ್ಗೆ ಈ ನಗರಗಳಲ್ಲಿ ವಾಸಿಸುವ ಪ್ರತಿಯೊಬ್ಬನೂ ಆಲೋಚಿಸಲೇಬೇಕಾಗಿದೆ. ನಾವು ಕಸ ಸಂಗ್ರಹದ ತೆರಿಗೆ ಕಟ್ಟಿ ಬೆಳಿಗ್ಗೆ ಶಿಸ್ತಿನಿಂದ ತೊಟ್ಟೆಯೋ ತೊಟ್ಟಿಯೋ ಹೊರಗೆ ಇಟ್ಟುಬಿಟ್ಟರೆ ನಮ್ಮ ಜವಾಬ್ದಾರಿ ಮುಗಿಯಿತು ಎಂದು ತಿಳಿದಿದ್ದೇವೆ. ಕಾರಣ ಪ್ರತಿಯೊಬ್ಬರೂ ಅವರ ಮನೆಯ ಒಳಗಿಂದ ವಾಸನೆಯ ಕಸವೂ ಬೇಡದ ವಸ್ತುಗಳೋ ಹೊರಗೆ ಹಾಕುವವರೆಗೆ ಮಾತ್ರ ತಮ್ಮ ತರಾತುರಿಯ ಜವಾಬ್ದಾರಿ ಎಂದು ತಿಳಿದಂತಿದೆ.…

Read More

ಈ ಸಾಲಿನ ರಾಜ್ಯ ಮಟ್ಟದಲ್ಲಿ ನಡೆದಿರುವ ಪಿಜಿ ಸಿಇಟಿ ಎಂಬಿಎ ಪ್ರವೇಶ ಪರೀಕ್ಷೆಯಲ್ಲಿ ಅಜ್ಜಾವರ ಗ್ರಾಮದ ಮೇನಾಲ ಸುಭೋದ್ ಶೆಟ್ಟಿ ಹಾಗೂ ಶ್ರೀಮತಿ ಶಿಲ್ಪಾ ಶೆಟ್ಟಿ ದಂಪತಿಗಳ ಪುತ್ರ ಪ್ರಣಾಮ್ ಶೆಟ್ಟಿ ಮೇನಾಲ ರಾಜ್ಯದಲ್ಲಿ 8ನೇ ರ‌್ಯಾಂಕ್ ಪಡೆದು ಸಾಧನೆ ಮೆರೆದಿದ್ದಾರೆ. ರಾಜ್ಯದಲ್ಲಿ ಒಟ್ಟು 47436 ಮಂದಿ ಪರೀಕ್ಷೆ ಬರೆದಿದ್ದು, ಅವರಲ್ಲಿ ಪ್ರಣಾಮ್ ಶೆಟ್ಟಿಯವರು 8ನೇ ಸ್ಥಾನ ಪಡೆದಿದ್ದಾರೆ. ಇವರು ಪುತ್ತೂರು ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಬಿ.ಕಾಂ ವಿದ್ಯಾಭ್ಯಾಸ ಪಡೆದಿದ್ದಾರೆ.

Read More

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ಗೆ ಈ ವರ್ಷ 30ರ ಹರೆಯ. ಈ ಸಂದರ್ಭದಲ್ಲಿ ಅಪೂರ್ವ ಮತ್ತು ವೈಭವದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು ‘ಆಳ್ವಾಸ್ ವಿರಾಸತ್-2024’ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿದ್ಯಾಗಿರಿಯ ಆವರಣದಲ್ಲಿ ಆಳ್ವಾಸ್ ವಿರಾಸತ್-2024 ಡಿಸೆಂಬರ್ 10, 2024ನೇ ಮಂಗಳವಾರದಂದು ಪ್ರಾರಂಭವಾಗಿ ಡಿಸೆಂಬರ್ 15, 2024ನೇ ಭಾನುವಾರದಂದು ಮುಕ್ತಾಯಗೊಳ್ಳಲಿದೆ. ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ಒಟ್ಟು 6 ದಿನಗಳ ಕಾಲ ಈ ಸಾಂಸ್ಕøತಿಕ ಉತ್ಸವವು ವೈಭವೋಪೇತವಾಗಿ ಜರುಗಲಿದೆ. ಮೊದಲ 05 ದಿನಗಳು ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತುಗಳೇ ಮೊದಲಾದ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು ಕೊನೆಯ…

Read More

ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಷನ್ಸ್ ನ ಕಲ್ಲೂರು ನಾಗೇಶ್ ಅವರು ಪ್ರಕಟಿಸಿದ ಲಕ್ಷ್ಮಣ ಅವರ ಕೃತಿ ‘ತುಳು ಬೆಳ್ಳಿ ತೆರೆಯ ಸುವರ್ಣ ಯಾನ’ ಕ್ಕೆ ಕಲಾ ವಿಭಾಗದಲ್ಲಿ ಮತ್ತು ಡಾ| ಇಂದಿರಾ ಹೆಗ್ಗಡೆ ಅವರ ‘ಅತಿಕಾರೆ’ ಕೃತಿಗೆ ಭಾಷಾ ವಿಭಾಗದಲ್ಲಿ ಭಾರತೀಯ ಪ್ರಕಾಶಕರ ಒಕ್ಕೂಟದವರು ಕೊಡುವ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಕಲ್ಲೂರು ನಾಗೇಶರು ನವದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿದರು. ವೈಚಾರಿಕ ಸ್ಪಷ್ಟತೆಯಿಂದ ಪ್ರಕಾಶನವನ್ನು ಮಾಡುತ್ತಿರುವ ನಾಗೇಶ್ ಹಾಗೂ ಸಾಹಿತಿ ಡಾ| ಇಂದಿರಾ ಹೆಗ್ಗಡೆ ಅವರಿಗೆ ಅಭಿನಂದನೆಗಳು.

Read More

ಮೂಡುಬಿದಿರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ನಡೆದ ಮೈಸೂರು ವಿಭಾಗ ಮಟ್ಟ ದಸರಾ ಕ್ರೀಡಾಕೂಟದಲ್ಲಿ ಆಳ್ವಾಸ್ ತಂಡವು ಅಥ್ಲೆಟಿಕ್ಸ್  ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ 11 ಚಿನ್ನ, 11 ಬೆಳ್ಳಿ, 07 ಕಂಚಿನ ಪದಕಗಳೊಂದಿಗೆ ಒಟ್ಟು 29 ಪದಕ ಪಡೆಯಿತು. ಕುಸ್ತಿ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ 12 ಚಿನ್ನ, 07 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 21 ಪದಕ, ಯೋಗ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ 01 ಚಿನ್ನ, 02 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 05 ಪದಕ ಪಡೆಯಿತು. ಕಬಡ್ಡಿ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರಥಮ, ಬಾಲ್ ಬ್ಯಾಡ್ಮಿಂಟನ್ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರಥಮ, ಖೋ-ಖೋ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ದ್ವಿತೀಯ, ವೇಯ್ಟ್ ಲಿಫ್ಟಿಂಗ್ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ 11 ಚಿನ್ನ, 05 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 18…

Read More

ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ ಸಿರಿಮುಡಿ ದತ್ತಿನಿಧಿ ಟ್ರಸ್ಟ್ ಬಂಟರ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಸ್ತ ಬಂಟ ಸಮಾಜದ ಪರವಾಗಿ ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾದ ಬಂಟ ಸಮಾಜದ ನಾಯಕ ಉದ್ಯಮಿ ಡಾ| ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿಯನ್ನು ಪ್ರಧಾನಿಸಿ ಗೌರವಿಸಲಾಯಿತು. ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಬೆಂಗಳೂರಿನ ಉದ್ಯಮಿ, ಎಂಆರ್ ಜಿ ಗ್ರೂಪ್ ನ ಛೇರ್ಮನ್ ಡಾ| ಕೆ ಪ್ರಕಾಶ್ ಶೆಟ್ಟಿಯವರು, ಇಂದಿನ ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಸನ್ಮಾನವು ನನ್ನ ಪಾಲಿಗೆ ಅವಿಸ್ಮರಣೀಯವಾಗಿದೆ. ಬಂಟರ ಸಮುದಾಯದ ಅಭ್ಯುತ್ಥಾನಕ್ಕಾಗಿ ಜೀವನ ಪರ್ಯಂತ ಪರಿಶ್ರಮವನ್ನು ಮುಂದುವರಿಸುವುದಾಗಿ ಹೇಳಿದ್ದು, ಪಡುಬಿದ್ರಿಯ ಅಭಿಮಾನಿ ಬಳಗದ ಪ್ರೀತಿಯು ಅಮೋಘವಾಗಿದೆ. ನಾನು ಪಡುಬಿದ್ರಿಗಾಗಿ ಬಲು ದೊಡ್ಡ ಕೊಡುಗೆ ನೀಡಬೇಕಿದೆ. ಈ ಊರಿನ ದೇವಳದ ಜೀರ್ಣೋದ್ಧಾರದ ಸಂಕಲ್ಪಕ್ಕಾಗಿ ನಾವೆಲ್ಲಾ ಒಗ್ಗಟ್ಟಾಗಿ…

Read More

ಬಂಟರು ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದು, ಕ್ರೀಡೋತ್ಸವಗಳಿಂದ ಇನ್ನಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲಿ ಎಂದು ಉದ್ಯಮಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕಾರ್ಯದರ್ಶಿ ಎಂ. ಸುಂದರ ಶೆಟ್ಟಿ ಹೇಳಿದರು. ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ನಡೆದ ಬಂಟ ಕ್ರೀಡೋತ್ಸವ – 2024 ಉದ್ಘಾಟಿಸಿದರು. ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಡಾ. ಆಶಾಜ್ಯೋತಿ ರೈ ಅವರು ಮಾತನಾಡಿ, ಈ ಕ್ರೀಡಾ ಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾ ಪಟುಗಳಿಗೆ ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಅವಕಾಶ ಒದಗಿ ಬರಲಿ ಎಂದು ಹಾರೈಸಿದರು. ಉದ್ಯಮಿ ಪುರುಷೋತ್ತಮ ರೈ, ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಸಿಎ ಶಾಂತರಾಮ ಶೆಟ್ಟಿ, ಡಾ. ಸಂಜೀವ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ…

Read More

ಗಮ್ಮತ್ ಕಲಾವಿದೆರ್ ದುಬೈ ವತಿಯಿಂದ ಸುರಕ್ಷಾ ಸೇವಾಶ್ರಮಕ್ಕೆ ಸುಸಜ್ಜಿತವಾದ ಪಾಕಶಾಲೆಯನ್ನು ನಿರ್ಮಿಸಿ ಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಮಾರು ಈಶ ವಿಠಲದಾಸ ಸ್ವಾಮೀಜಿ ದೇವರಿಗೆ ಕೊಟ್ಟ ನೈವೇದ್ಯ ದೇವರಿಗೆ ತಲುಪುತ್ತೋ ಇಲ್ಲವೋ ಗೊತ್ತಿಲ್ಲ, ಆದರೆ ಬಡವರಿಗೆ ಕೊಟ್ಟ ಸಹಾಯ ದೇವರಿಗೆ ತಲುಪುತ್ತದೆ ಎಂದು ಹೇಳಿದರು. ದೇವರು ಇರುವಾಗ ಯಾರೂ ಅನಾಥರಲ್ಲ, ನಾವು ಬಂದದ್ದು ಒಬ್ಬರೇ ಹೋಗುವುದು ಒಬ್ಬರೇ. ಭೂಮಿಗೆ ಬಂದಿರುವಾಗ ಯಾರು ನಮ್ಮೊಂದಿಗೆ ಇದ್ದಾರೆ ಎನ್ನುವುದು ಮುಖ್ಯವಲ್ಲ. ದೇವರೊಂದಿಗೆ ನಾವಿದ್ದೇವೆ ಎಂಬುದು ಮುಖ್ಯ ಎಂದು ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕರಾದ ವಿಶ್ವನಾಥ್ ಶೆಟ್ಟಿ ದುಬೈ ಗಮ್ಮತ್ ಕಲಾವಿದೆರ್ UAE ಇದರ ಕುರಿತು ವಿವರಿಸಿದರು. ಅರುಣ್ ಶೆಟ್ಟಿ ಮಂಗಳೂರು, ಸತೀಶ್ ಹೆಗ್ಡೆ ದುಬೈ, ಆಯಿಷಾ ಬಾನು, ಅಮ್ಮನ ನೆರವು ಟ್ರಸ್ಟ್ ನ ಅವಿನಾಶ್ ಜಿ ಶೆಟ್ಟಿ ಉಪಸ್ಥಿತರಿದ್ದರು.

Read More

ಮುಂಬಯಿ ನಗರದಲ್ಲಿ ಶಿಕ್ಷಣ ಪಡೆದು ಕೆಲ ವರ್ಷಗಳ ಕಾಲ ಉದ್ಯೋಗ ಮಾಡಿ ಬಳಿಕ ಕೊಲ್ಲಿರಾಷ್ಟ್ರ ದುಬೈ ಸೇರಿದಂತೆ ವಿದೇಶಗಳಲ್ಲಿ ದುಡಿದ ಅನುಭವಗಳಿದ್ದರೂ ದೈವ ಕೊಡಮಣಿತ್ತಾಯನ ಆದೇಶವನ್ನು ಪಾಲಿಸಿ ಊರಿನಲ್ಲಿ ನೆಲೆ ನೆಂತು ಹಲವಾರು ವರ್ಷಗಳಿಂದ ಕೊಡಮಣಿತ್ತಾಯ ಸೇವೆಯನ್ನು ನಿಷ್ಠೆಯಿಂದ ಮಾಡುತ್ತಾ ದೈವದ ವಿಶೇಷ ಕೃಪೆಗೆ ಪಾತ್ರರಾದ ಪ್ರಸಾದ ಮುಕ್ಕಾಲ್ದಿ ಇಂದು ತುಳುನಾಡಿನಲ್ಲಿ ಜನಜನಿತ ಹೆಸರು. ಸನ್ಮಾನ್ಯ ಪ್ರಸಾದ ಮುಕ್ಕಾಲ್ದಿ ಅವರ ತೀರ್ಥ ರೂಪರಾದ ಸಂಜೀವ ಶೆಟ್ಟಿ ಅವರು ಕಾರ್ಕಳ ತಾಲ್ಲೂಕಿನ ಪೆರ್ವಾಜೆ ಗ್ರಾಮದಲ್ಲಿ ಸತತ ಮೂವತ್ತೈದು ವರ್ಷಗಳ ಸುದೀರ್ಘ ಕಾಲ ಕೊಡಮಣಿತ್ತಾಯ ದೈವದ ಪಾತ್ರಿಯಾಗಿ ಸೇವೆ ಸಲ್ಲಿಸಿ ದೈವದ ಕೃಪೆಗೆ ಪಾತ್ರರಾಗಿದ್ದಷ್ಟೇ ಅಲ್ಲದೇ ಊರಿನ ದೈವಾರಾಧಕರ ಪಾಲಿಗೆ ಗೌರವಾದರಗಳ ಹಿರಿಯ ವ್ಯಕ್ತಿಯಾಗಿ ಮನ್ನಣೆ ಗಳಿಸಿದ್ದರು. ಒಮ್ಮೆ ಊರ ನೇಮೋತ್ಸವಕ್ಕೆ ಬಂದಿದ್ದ ಪ್ರಸಾದ್ ಅವರ ಮೈಮೇಲೆ ಕೊಡಮಣಿತ್ತಾಯ ದೈವದ ಆವೇಶ ಬಂದು ಈತನನ್ನು ನನ್ನ ಸೇವೆಗೆ ಒಪ್ಪಿಸುತ್ತೇನೆಂಬ ಭಾಷೆ ಕೊಡಬೇಕೆಂದು ಅವರ ಹಿರಿಯರಿಗೆ ಅಪ್ಪಣೆ ಕೊಡಿಸಿದ ಹಿನ್ನೆಲೆಯಲ್ಲಿ ಮುಂದೆ ದೈವದ ಸೇವೆ ಮಾಡುತ್ತೇನೆಂಬ…

Read More

ಬ್ರಹ್ಮಾವರ ಸೆ. 28 ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ ಜಿ ಎಮ್ ಅಡಿಟೋರಿಯಮ್‍ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷರಾದ ನಾಗರಾಜ ಸೋಮಯಾಜಿ ಮಾತನಾಡಿ ಗುಣಮಟ್ಟದ ಶಿಕ್ಷಣದೊಂದಿಗೆ ಸಾಧನೆಯ ಉತ್ತುಂಗದಲ್ಲಿ ರಾರಾಜಿಸುತ್ತಿರುವ ಜಿ ಎಮ್ಸಂ ಸ್ಥೆಯನ್ನು ನೋಡುವಾಗ ಹೆಮ್ಮೆಯಾಗುತ್ತದೆ. ನಾವೆಲ್ಲರೂ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡಬೇಕು. ಅವರು ಶಾಲೆಯಿಂದ ಮನೆಗೆ ಬಂದಾಗ ಅವರ ಜೊತೆ ಪ್ರೀತಿಯಿಂದ ಮಾತನಾಡಿ ಸಮಯವನ್ನು ಕಳೆಯಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಮಕ್ಕಳ ಜೀವನೋಪಾಯಕ್ಕಾಗಿ ಮಾತ್ರ ಶಿಕ್ಷಣ ಸೀಮಿತವಾಗಿರದೆ ಅವರ ಉತ್ತಮ ಜೀವನಕ್ಕಾಗಿ ಮೌಲ್ಯದ ಜೊತೆಗೆ ಜ್ಞಾನವನ್ನು ನೀಡಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಪೋಷಕರ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡಿ ಶಾಲೆ ಆಯೋಜಿಸುವ ರಕ್ಷಕರ ಸಭೆಯಲ್ಲಿ ಭಾಗವಹಿಸುವುದು ಪೋಷಕರ ಆದ್ಯ ಕರ್ತವ್ಯವಾಗಿದ್ದು ಇದರಿಂದ ಮಕ್ಕಳ ಕಲಿಕೆ ಸುಗಮವಾಗಲಿದೆ ಎಂದರು. ಪೋಷಕರು ಶಾಲೆಯ ಕುರಿತು ಪ್ರಶಂಸನೀಯ ನುಡಿಗಳನ್ನಾಡಿ ಸಲಹೆ ಸೂಚನೆಗಳನ್ನು ನೀಡಿದರು. ರಕ್ಷಕ- ಶಿಕ್ಷಕ…

Read More