Author: admin

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್‌ವತಿಯಿಂದ ಸೋಮವಾರ ಕುವೆಂಪು ಸಭಾಂಗಣದಲ್ಲಿ ಅಘನಾಶಿನಿ ಸ್ಪೀಕ್ಸ್ – ರಿವರ್ ರಿದಮ್ಸ್ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಘನಾಶಿನಿ ಸಾಕ್ಷ್ಯಚಿತ್ರ ನಿರ್ದೇಶಕ ಅಶ್ವಿನಿ ಕುಮಾರ್ ಭಟ್ ಮಾತನಾಡಿ, ಸಾಕ್ಷ್ಯಚಿತ್ರ ರಚನೆಯ ಸೂಕ್ಷ್ಮಗಳನ್ನು ವಿವರಿಸಿದರು. ಕಥೆ ಹೇಳುವ ಮಹತ್ವವನ್ನು ತಿಳಿಸಿದರು. “ಸಾಕ್ಷ್ಯಚಿತ್ರ ನಿರ್ಮಾಣ ಕೇವಲ ಕ್ಷಣಗಳನ್ನು ಸೆರೆಹಿಡಿಯುವುದೇ ಮುಖ್ಯ ಅಲ್ಲ, ಚಿತ್ರಕಥೆ, ಸಂಕಲನ ಮತ್ತು ಛಾಯಾಗ್ರಹಣದ ಜೊತೆಗೆ ಸಾಮಾಜಿಕ, ಸಾಂಸ್ಕೃತಿಕ ಅಂಶಗಳು ಸಮ್ಮಿಳಿತಗೊಂಡು ನೈಜ್ಯತೆಯ ಸಾಕ್ಷೀಕರಣವಾದಾಗ ಮನಸೆಳೆಯುವ ಸಾಕ್ಸ್ಯಚಿತ್ರ ಹೊರಹೊಮ್ಮಲು ಸಾಧ್ಯ ಎಂದರು. ಅಘನಾಶಿನಿ ಸಾಕ್ಷ್ಯಚಿತ್ರ ನಿರ್ಮಾಣ ನಂತರದ ಪ್ರಭಾವದ ಕುರಿತು ಮಾತನಾಡಿದ ಅವರು ಈ ಸಾಕ್ಸ್ಯಚಿತ್ರವು ನದಿಗಳನ್ನ ಅವುಗಳ ನೈಸರ್ಗಿಕ ಸ್ಥಿತಿಯಲ್ಲಿ ಸಂರಕ್ಷಿಸುವ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಿತು.”ಅಘನಾಶಿನಿ ಅಳಿವೆ ಪ್ರದೇಶವನ್ನು ರಾಮ್ಸಾರ್ ಸೈಟ್ ಎಂದು ಪ್ರಸ್ತಾಪಿಸುವಲ್ಲಿ ಈ ಸಾಕ್ಸ್ಯಚಿತ್ರವು ಪ್ರಮುಖ ಪಾತ್ರ ವಹಿಸಿತು ಎಂದರು. ಸ್ಥಳೀಯ ನೇತ್ರಾವತಿ ನದಿಯನ್ನು ಸಂರಕ್ಷಿಸಲು ಹೇಗೆ ಕೊಡುಗೆ ನೀಡಬಹುದು ಎಂದು ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ “ಜನಸಾಮಾನ್ಯರು ನದಿ…

Read More

ಉಳ್ಳಾಲದ ಯುವಕನೋರ್ವ ಕ್ರೀಡಾ ಜಗತ್ತಿನಲ್ಲಿ ಸಾಧಿಸಿದ ಸಾಧನೆ ಅದ್ಭುತವಾದುದು. ಅದರಲ್ಲೂ ಕಬಡ್ಡಿ ಆಟದಲ್ಲಿ ವಿಶೇಷ ಆಸಕ್ತಿ ವಹಿಸಿ ಸತತ ಅಭ್ಯಾಸದಿಂದ ಓರ್ವ ಅಪ್ರತಿಮ ಕಬಡ್ಡಿ ಕ್ರೀಡಾ ಪಟು ಎಂದು ಗುರುತಿಸಿಕೊಳ್ಳುವುದರ ಜೊತೆಗೆ ಅದೆಷ್ಟೋ ಯುವ ಕ್ರೀಡಾಪಟುಗಳಿಗೆ ತರಬೇತುದಾರನಾಗಿ ಅವರನ್ನು ಶ್ರೇಷ್ಠ ಆಟಗಾರರನ್ನಾಗಿ ಸಿದ್ಧಗೊಳಿಸಿದ ಹೆಗ್ಗಳಿಕೆ ಇವರಿಗಿದೆ. 1992ರಲ್ಲಿ ಉಳ್ಳಾಲದಲ್ಲಿ ಜನಿಸಿದ ಆಕಾಶ್ ಬೆಳಗಾವಿಯ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ದೈಹಿಕ ಶಿಕ್ಷಣ ತರಬೇತಿ ಪಡೆದರು. ಮುಂದೆ 2015 ರಿಂದ 2020 ರವರೆಗೆ ವಿಕಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಕಬಡ್ಡಿ ಕೋಚ್ ಆಗಿ ವೃತ್ತಿ ಜೀವನ ಆರಂಭಿಸಿದ ಆಕಾಶ್ ಅಲ್ಲಿಯೇ ಮುಂಬಡ್ತಿ ಹೊಂದಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಬಡ್ಡಿ ಕೋಚ್ ಆಗಿ 2019 ರಿಂದ 2021ರ ವರೆಗೆ ಸೇವೆ ಸಲ್ಲಿಸಿದರು. ಬಳಿಕ ಪ್ರೇರಣಾ ಕಾಲೇಜು ಮಂಗಳೂರು ಅಲ್ಲಿ ತಾತ್ಕಾಲಿಕ ನಿಯಮದಡಿ ಕೆಲಸ ಮಾಡಿ 2021 ರಿಂದ 2023 ರವರೆಗೆ ಶಕ್ತಿ ರೆಸಿಡೆನ್ಸಿ ಶಿಕ್ಷಣ ಸಂಸ್ಥೆ ಹಾಗೂ ಕಾಲೇಜು ವಿಭಾಗದಲ್ಲಿ ತರಬೇತುದಾರರಾಗಿ ಸೇರಿಕೊಂಡರು. 2020 ರಿಂದ ಉಳ್ಳಾಲದ…

Read More

ಮೂಡುಬಿದಿರೆ: ಭಾರತೀಯ ವೈದ್ಯಕೀಯ ಪರಂಪರೆಯಲ್ಲಿ ಆಯುರ್ವೇದ ವೈದ್ಯ ಪದ್ದತಿಗೆ ಶ್ರೇಷ್ಠ ಸ್ಥಾನಮಾನವಿದೆ. ಆದರೆ ಅದನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಸಾಕ್ಷಾಧಾರದ ಕೊರತೆಯಿದ್ದು ಅದನ್ನು ನೀಗಿಸುವ ನಿಟ್ಟಿನಲ್ಲಿ ಆಯುರ್ವೇದ ವಿಜ್ಞಾನದಲ್ಲಿ ಇನ್ನಷ್ಟು ಸಂಶೋಧನೆಯನ್ನು ಕೈಗೊಳ್ಳಬೇಕಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದ್ದಾರೆ. ಆಳ್ವಾಸ್‌ನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಇಂದು ನಡೆದ ಆಯುರ್ವೇದ ಕಾಲೇಜಿನ ಆಳ್ವಾಸ್ ‘ಧನ್ವಂತರಿ ಪೂಜಾ ಮಹೊತ್ಸವ’, ಶಿಶ್ಯೋಪನಯನ ಸಂಸ್ಕಾರ ಹಾಗೂ ಆಳ್ವಾಸ್ ಧನ್ವಂತರಿ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡುತ್ತಾ ಆಯುವೇದದಲ್ಲಿ ಉಜ್ವಲ ಭವಿಷ್ಯವಿದ್ದು, ಅದನ್ನು ಅಂತರಾಷ್ಟಿçÃಯ ಮಟ್ಟದಲ್ಲಿ ಪರಿಚಯಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹೆಚ್ಚು ಹೆಚ್ಚು ಸಂಶೋಧನೆಗೆ ಒತ್ತು ಕೊಡಬೇಕು. ಕಾಲೇಜಿನಲ್ಲಿ ಕಲಿತ ವಿದ್ಯೆ ಕೇವಲ ಮೆದುಳಿಗೆ ಜ್ಞಾನವನ್ನು ಕೊಡುತ್ತದೆ.ತರಗತಿಯ ಹೊರಗೆ ಕಲಿತ ಬಯಲು ಶಿಕ್ಷಣ ಪ್ರಾಯೋಗಿಕತೆಯಿಂದ ಕೂಡಿದ್ದು, ಅದು ಶ್ರೇಷ್ಠ ಜ್ಞಾವನ್ನಾಗಿಸುತ್ತದೆ. ಆಯುರ್ವೇದದಲ್ಲಿರುವ ವಿಫುಲ ಅವಕಾಶಗಳನ್ನು ಅರ್ಥಮಾಡಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಆಳ್ವಾಸ್…

Read More

“ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ದೇಶದಲ್ಲಿನ ರಾಜರುಗಳ ದುರ್ಬಲ ಆಡಳಿತ ಮತ್ತು ಅರಾಜಕತೆ ಹಾಗೂ ಭಿನ್ನಾಭಿಪ್ರಾಯ ವಿದೇಶಗರಿಗೆ ಇಲ್ಲಿ ಗಟ್ಟಿ ನೆಲೆ ಕಂಡುಕೊಳ್ಳಲು ಸಾಧ್ಯವಾಯಿತು. ಹಾಗಾಗಿ ವ್ಯಾಪಾರಕ್ಕಾಗಿ ಬಂದ ಬ್ರಿಟಿಷರು ಸುಮಾರು 250 ವರ್ಷಗಳ ಕಾಲ ನಿರಾತಂಕವಾಗಿ ನಮ್ಮ ದೇಶದಲ್ಲಿ ಆಳ್ವಿಕೆ ನಡೆಸಿದರು. ಸ್ವಾತಂತ್ರ್ಯ ಬಂದ ನಂತರ ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿ ಅರ್ಥಪೂರ್ಣ ಬದುಕು ನಡೆಸಲು ಸಾಧ್ಯವಾಯಿತು. ಇಂದು ನಾವು ನಮ್ಮ ಸಂವಿಧಾನದ ಆಶಯದ ಅಡಿಯಲ್ಲಿ ಒಂದು ಸುಂದರವಾದ ಬದುಕನ್ನು ಸಾಗಿಸುತ್ತಿದ್ದೇವೆ. ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮ ದೇಶದ ಸಂವಿಧಾನವು ಜಗತ್ತಿಗೆ ಒಂದು ಮಾದರಿ ಸಂವಿಧಾನವಾಗಿದೆ” ಎಂದು ಸುಜ್ಞಾನ ಪದವಿಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಹೇಳಿದರು.ಅವರು ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ…

Read More

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 25 – 01 – 2025ರಂದು ದ್ವಿತೀಯ ಪಿಯುಸಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆಯನ್ನು ನಡೆಸಲಾಯಿತು. ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ ಎಸ್ ರವರು ಶೈಕ್ಷಣಿಕ ಮಾಹಿತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಕೂಲಂಕುಷವಾಗಿ ವಿವರಿಸಿದರು.ಸಂಸ್ಥಾಪಕರಲ್ಲಿ ಓರ್ವರಾದ ಡಾ. ಬಿ ಗಣನಾಥ ಶೆಟ್ಟಿ ರವರು ವಿದ್ಯಾರ್ಥಿ – ಪೋಷಕರ ಜವಾಬ್ದಾರಿಯ ಜೊತೆಗೆ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಬಗ್ಗೆ ಸಂಸ್ಥೆಯ ಕಾಳಜಿಗಳ ಕುರಿತು ಸಮಗ್ರ ವಿವರಗಳನ್ನು ನೀಡಿದರು. ಈ ಸಂದರ್ಭದಲ್ಲಿ ಆಪಲ್ ಸರ್ವಿಸ್ ಶಿವಮೊಗ್ಗದ ವಿಜಯಕುಮಾರ್ ರವರು ಮುಂದಿನ ಶಿಕ್ಷಣಕ್ಕೆ ದೊರಕುವ ವಿದ್ಯಾರ್ಥಿವೇತನಗಳ ಸಂಕ್ಷಿಪ್ತ ಮಾಹಿತಿಗಳನ್ನು ಒದಗಿಸಿದರು. ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Read More

ವಿದ್ಯಾಗಿರಿ: ವಿಶಾಲ ಬಯಲುರಂಗ ಮಂದಿರದಲ್ಲಿ ಕಂಗೊಳಿಸಿದ ದೇಶದ ಐಕ್ಯತೆಯ ಪ್ರತೀಕವಾದ ‘Alva’s, ಸೇರಿದ್ದ ೩೦ ಸಾವಿರಕ್ಕೂ ಅಧಿಕ ವಿದ್ಯಾರ್ಥಿ, ಸಿಬ್ಬಂದಿ, ಪೋಷಕರು, ಅತಿಥಿಗಳ ಕೈಯಲ್ಲಿ ಹಾರಾಡಿದ ರಾಷ್ಟ್ರ ಧ್ವಜ, ಆವರಣದ ಸುತ್ತಲೂ ತ್ರಿವರ್ಣ ಸ್ಥಂಭಗಳು, ದೇಶಪ್ರೇಮ ಮೂಡಿಸುವ ತ್ರಿವರ್ಣ ಚಿತ್ತಾರಗಳು, ತ್ರಿವರ್ಣದ ಪುರುಲಿಯೋ ಸಿಂಹಗಳು, ಜನ ಗಣ ಮನ, ವಂದೇ ಮಾತರಂ, ಕೋಟಿ ಕಂಠೋ ಸೇ… ರಾಷ್ಟ್ರ ಹಾಗೂ ದೇಶಭಕ್ತಿ ಗೀತೆಗಳು…. ಸಂವಿಧಾನ ಅನುಷ್ಠಾನದ ಭಕ್ತಿ, ಗೌರವ, ಪ್ರೀತಿಯ ದೇಶಭಕ್ತಿಯ ಕ್ಷಣಗಳು ಇಲ್ಲಿನ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ೭೬ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮೂಡಿಬಂತು.ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಕರ್ನಾಟಕ ವಿಧಾನ ಪರಿಷತ್ತಿನ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಮಾತನಾಡಿ, ‘ನಾವೆಲ್ಲರೂ ಸಂವಿಧಾನ ಬದ್ಧವಾಗಿ ಕರ್ತವ್ಯ ಹಾಗೂ ಹಕ್ಕುಗಳನ್ನು ಪಾಲಿಸುವ ಸಂಕಲ್ಪವನ್ನು ಮಾಡುವ ದಿನ ಇದಾಗಿದೆ’ ಎಂದರು. ‘ಆಳ್ವಾಸ್ ಅಂಗಣದಲ್ಲಿ ಗಣರಾಜ್ಯೋತ್ಸವವು ಐತಿಹಾಸಿಕ ವಿರಾಟ ರಾಷ್ಟ್ರೀಯ ಹಬ್ಬವಾಗಿದೆ’ ಎಂದು ಅವರು…

Read More

ಉಡುಪಿ ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪ್ರಾಂಶುಪಾಲ ರಾಮಕೃಷ್ಣ ಹೆಗಡೆಯವರು ದೇಶದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ರಕ್ಷಿಸಲು ಸಂವಿಧಾನದ ರಚನೆ ಮಾಡಲಾಯಿತು. ಪ್ರತಿಯೊಬ್ಬರಿಗೂ ನ್ಯಾಯ ಸಮ್ಮತ ಬದುಕಿಗಾಗಿ ಸಂವಿಧಾನ ಸ್ವೀಕೃತಗೊಂಡಿದೆ.ಪ್ರಜೆಗಳಾದ ನಾವು ನಮ್ಮ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಸ್ವಯಂಶಿಸ್ತು ಮತ್ತು ಪ್ರೇರಣೆಯಿಂದ ತೊಡಗಿಸಿಕೊಳ್ಳಬೇಕೆಂದು ನುಡಿದರು. ಆಡಳಿತಾಧಿಕಾರಿಗಳಾದ ಜಯಪ್ರಕಾಶ್ ಶೆಟ್ಟಿಯವರು ಗಣರಾಜ್ಯ ದಿನದ ಸಂದೇಶ ನೀಡಿ ಪ್ರತಿಯೊಬ್ಬ ವ್ಯಕ್ತಿಯೂ ಸ್ವಾತಂತ್ರದೊಂದಿಗೆ ಕರ್ತವ್ಯ ಪ್ರಜ್ಞೆ ಮೆರೆಯಬೇಕು. ಹಕ್ಕುಗಳೊಂದಿಗೆ ಕರ್ತವ್ಯದ ಪರಿಪಾಲನೆಯಾದಾಗ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳ್ಳುತ್ತದೆ ವಿದ್ಯಾರ್ಥಿಗಳಾದ ತಾವು ತಮ್ಮ ಮುಂದಿನ ಜೀವನದಲ್ಲಿ ಸಂವಿಧಾನದ ಆಶಯದೊಂದಿಗೆ ಬದುಕನ್ನು ನಡೆಸುವಂತೆ ಕರೆ ನೀಡಿದರು. ಗಣರಾಜ್ಯ ದಿನದ ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಮನೋಜ್‌ ಜೋಯಲ್ ಫೆರ್ನಾಂಡಿಸ್, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದ, ವಸತಿ ನಿಲಯ ಪಾಲಕರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಆದರ್ಶ್‌ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Read More

76 ನೇ ಗಣರಾಜ್ಯೋತ್ಸವವನ್ನು ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸಹ ಸಂಸ್ಥಾಪಕರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಸಂವಿಧಾನವು ಈ ದೇಶದ ಎಲ್ಲ ಜನರಿಗೆ ಸಾಮಾಜಿಕ,ಶೈಕ್ಷಣಿಕ,ಮತ್ತು ಸಮಾನತೆಯ ಹಕ್ಕನ್ನು ನೀಡಿ ಸುಭದ್ರ ಜೀವನ ನಡೆಸುವಲ್ಲಿ ಸಹಕಾರಿಯಾಗಿದೆ.ದೇಶ ಸ್ವಾತಂತ್ರ್ಯಗೊಳ್ಳುವಲ್ಲಿ ಅನೇಕ ಭಾರತೀಯರ ತ್ಯಾಗ ಬಲಿದಾನವಿದೆ ಇವರ ಹೋರಾಟದ ಫಲವೇ ನಾವೆಲ್ಲರೂ ಇಂದು ನೆಮ್ಮದಿಯಿಂದ ಜೀವಿಸುವಂತೆ ಮಾಡಿದೆ. ದೇಶ ನನಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾನು ಏನು ಕೊಟ್ಟಿದೆ ಎನ್ನುವುದು ನಾವೆಲ್ಲರೂ ಆತ್ಮಾವಲೋಕನವನ್ನು ಮಾಡಿಕೊಳ್ಳಬೇಕು. ಸಂವಿಧಾನವನ್ನು ರಚಿಸುವಲ್ಲಿ ಶ್ರಮಿಸಿದ ಮಹನೀಯರನ್ನು ನಾವೆಲ್ಲರೂ ಗೌರವಿಸಬೇಕು.” ಎಂದು ವಿದ್ಯಾರ್ಥಿಗಳನ್ನು ಕುರಿತು ಶುಭನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು , ವಿದ್ಯಾರ್ಥಿಗಳು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಮೂಡುಬಿದಿರೆ: ಶಿಕ್ಷಣದ ಸ್ವರ್ಗವಾಗಿರುವ ಮೂಡುಬಿದಿರೆ, ಉತ್ಕೃಷ್ಟ ಮಟ್ಟದ ಸ್ಕೌಟ್ಸ್ ಗೈಡ್ಸ್ ಚಟುವಟಿಕೆಗಳ ಕಾಶಿಯಾಗುತ್ತಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ನುಡಿದರು. ಅವರು ಶನಿವಾರ ವಿದ್ಯಾಗಿರಿಯ ಕೃಷಿ ಸಿರಿ ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಬಾಗಿತ್ವದಲ್ಲಿ ಜರುಗಿದ ಮೂರು ದಿನಗಳ ‘ಜಿಲ್ಲಾ ಮಟ್ಟದ ಕ್ಯಾಂಪೋರಿ’ ಕಾರ್ಯಕ್ರಮದ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್ ಮತ್ತು ಗೈಡ್ಸ್ ಮೇಳ, ರೋವರ್ಸ್ ಮತ್ತು ರೇಂಜರ್ಸ್ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸಾವಿರಾರು ಜನರಿಗೆ ಬದುಕಿನ ಶಿಕ್ಷಣ ನೀಡುತ್ತಿರುವ ಡಾ ಎಮ್ ಮೋಹನ್ ಆಳ್ವರನ್ನು ವಿದ್ಯಾರ್ಥಿಗಳು ರೋಲ್ ಮಾಡೆಲ್ ಆಗಿ ಪರಿಗಣಿಸಬೇಕು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮಾನವ ನಿರ್ಮಾಣದ ಸಂಸ್ಥೆ. ಇಂತಹ ಶಿಬಿರದಲ್ಲಿ ಕಲಿತ ಜೀವನ ಶಿಕ್ಷಣ ಮುಂದಿನ ಸುಂದರ ಬದುಕಿಗೆ ಅಡಿಪಾಯವಾಗಬಲ್ಲದು. ಶಿಸ್ತು, ಸಮಯಪಾಲನೆ ಇಲ್ಲಿ ಕಲಿಯುವಂತಾಗಬೇಕು ಎಂದರು. ಇನ್ನು ವಿದ್ಯಾರ್ಥಿಗಳು ಶಾಸ್ತ್ರೀಯ…

Read More

ಕಾರ್ಕಳ : ಧರ್ಮವನ್ನು ಮೀರಿದ ರಾಷ್ಟ್ರೀಯ ಹಬ್ಬಗಳಲ್ಲಿ ಗಣರಾಜ್ಯೋತ್ಸವವು ಒಂದು. ನಮ್ಮ ಜವಾಬ್ದಾರಿಯನ್ನು ನೆನಪಿಕೊಂಡು ಪ್ರಜಾಪ್ರಭುತ್ವದ ಘನತೆ-ಗೌರವವನ್ನು ಎತ್ತಿಹಿಡಿಯುವತ್ತ ವಿದ್ಯಾರ್ಥಿಗಳು ಚಿತ್ತಹರಿಸಬೇಕು. ಭವ್ಯ ಭಾರತವನ್ನು ಕಟ್ಟುವಲ್ಲಿ ಪ್ರಾಮಾಣಿಕವಾಗಿ ದುಡಿದು ದೇಶ ಸೇವೆಯ ಧನ್ಯತೆಯನ್ನು ಪಡೆಯಬೇಕು ಎಂದು ಸೌತ್‍ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‍ನ ಅಧ್ಯಕ್ಷರಾದ ಶ್ರೀ ಪದ್ಮಪ್ರಸಾದ್ ಜೈನ್ ನೆಲ್ಲಿಕಾರು ಹೇಳಿದರು.ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಇದೇ ಸಂದರ್ಭ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪ್ರಾಂಶುಪಾಲ ಶ್ರೀ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ, ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ಶ್ರೀಮತಿ ವಾಣಿ.ಕೆ., ಪಿ.ಆರ್.ಒ ಶ್ರೀಮತಿ ಜ್ಯೋತಿ ಪದ್ಮನಾಭ್ ಭಂಡಿ, ಪತ್ರಕರ್ತ ಶ್ರೀ ರಾಮಚಂದ್ರ ಬರೆಪ್ಪಾಡಿ, ಓಸಿಯನಿಕ್ ಇನ್ಫ್ರಾದ ಮಾಲಿಕ ಶ್ರೀ ಸಂತೋಷ್ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸ ಶ್ರೀ ಸಂತೋಷ್ ನೆಲ್ಲಿಕಾರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Read More