Author: admin
ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ಮಾಸಿಕ ಸಭೆಯು ನವೆಂಬರ್ 21 ರಂದು ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಸಮಿತಿಯ ಸಂಚಾಲಕ ಕುಂಬ್ರ ದುರ್ಗಾ ಪ್ರಸಾದ್ ರೈಯವರು ಮಾತನಾಡಿ, ಸದಸ್ಯರ ಪ್ರಯೋಜನಕ್ಕಾಗಿ ವ್ಯಾಜ್ಯಗಳನ್ನು, ಬಂಟರ ವೈವಾಹಿಕ ಮನಸ್ತಾಪಗಳನ್ನು ಸೌಹಾರ್ದಯುತವಾಗಿ ಮುಗಿಸುವ ನಿಟ್ಟಿನಲ್ಲಿ ಸಾಮಾಜಿಕ ನ್ಯಾಯ ಸಮಿತಿಯನ್ನು ತಾಲೂಕು ಸಮಿತಿಯಡಿಯಲ್ಲಿ ರಚನೆ ಮಾಡುವ ಬಗ್ಗೆ ಪ್ರಸ್ತಾಪಿಸಿದರು. ಸಂಘಕ್ಕೆ ಬೇಕಾದ ಮೂಲ ಸೌಕರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ 1500 ಮಂದಿಗೆ ಬೇಕಾದ ಅಡುಗೆ ತಯಾರಿಕಾ ಪಾತ್ರೆಗಳು, ಹೆಚ್ಚುವರಿ ಸಿಸಿ ಕ್ಯಾಮರಾ, ಗುಣಮಟ್ಟದ ಧ್ವನಿವರ್ಧಕಗಳನ್ನು ಅಳವಡಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದೆಂದು ತೀರ್ಮಾನಿಸಲಾಯಿತು. ಸಂಘಕ್ಕೆ ಬರುವ ರಸ್ತೆಯನ್ನು ಸಾರ್ವಜನಿಕರ ಅನುಕೂಲವಾಗಿ ಅಗಲೀಕರಣಗೊಳಿಸುವುದು ಅಥವಾ ಏಕಮುಖ ರಸ್ತೆಯಾಗಿ ಪರಿವರ್ತಿಸುವರೇ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸುವುದು ಎಂದು ಚರ್ಚಿಸಲಾಯಿತು. ಸಂಘದ ದೀನದಲ್ಲಿರುವ ಸ್ಥಿರಾಸ್ತಿಯನ್ನು ಸರ್ವೆ ನಡೆಸಿ, ಒತ್ತುವರಿ ಕಂಡು ಬಂದಲ್ಲಿ ಕಾನೂನಿನಡಿಯಲ್ಲಿ ಸೂಕ್ತ ಕ್ರಮ ಜರಗಿಸುವುದು. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ…
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ತಂಡವು ಕುಂದಾಪುರದ ಭಂಡಾಕರ್ಸ್ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾಲಯ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಬಾಡಿ ಬಿಲ್ಡಿಂಗ್ ಚಾಂಪಿಯನ್ಶಿಪ್ನಲ್ಲಿ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆಯಿತು. ಆಳ್ವಾಸ್ ಕಾಲೇಜಿನ ಕಿಶಾನ್ ಶೆಟ್ಟಿ ಮಿ. ಯೂನಿವರ್ಸಿಟಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ದ್ವಿತೀಯ ತಂಡ ಪ್ರಶಸ್ತಿ ಎಸ್.ಡಿ.ಎಮ್ ಬಿ ಬಿ ಎಮ್ ಮಂಗಳೂರು, ತೃತೀಯ ತಂಡ ಪ್ರಶಸ್ತಿ ಸೆಕ್ರೇಡ್ ಹಾರ್ಟ್ ಕಾಲೇಜು ಮಡಂತ್ಯಾರು ಪಡೆಯಿತು. 15ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ಪಡೆಯುತ್ತಾ ಬಂದಿರುವ ಆಳ್ವಾಸ್ಕಾ ಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ : ರಾಜ್ಯ ಕ್ಷೇಮಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ನ.21ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಯೂರ್.ಎಂ.ಗೌಡ ಪ್ರಥಮ ಸ್ಥಾನವನ್ನು ಹಾಗೂ ಪ್ರಥಮ ವಿಜ್ಞಾನ ವಿಭಾಗದ ಜಾಹ್ನವಿ ಜೆ. ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದು ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಈ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭಹಾರೈಸಿದ್ದಾರೆ.
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮಂಗಳೂರಿನ ಲಕ್ಷ್ಮಿಮೆಮೋರಿಯಲ್ ಫಿಸಿಯೋಥೆರಪಿ ಕಾಲೇಜು ಸಹಯೋಗದಲ್ಲಿ ನವೆಂಬರ್ 21 ಮತ್ತು 22ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಅಂತರ ಕಾಲೇಜು ವೇಯ್ಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಆಳ್ವಾಸ್ ಹೋಮೀಯೋಪಥಿ ಕಾಲೇಜಿನ ವಿದ್ಯಾರ್ಥಿಗಳು ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದಾರೆ. ಶಶಾಂಕ್ ನಾಗರಾಜ್ ದೊಡ್ಡಮನಿ (55 ಕೆಜಿ ವಿಭಾಗ), ಈರಯ್ಯ ಬಸಯ್ಯ ಹಿರೇಮಠ್ (61 ಕೆಜಿ ವಿಭಾಗ), ಪವನ್ ಎಸ್ದೊ ಡ್ರಲ್ (102 ಕೆಜಿ ವಿಭಾಗ) ಪುರುಷರ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಸಪಕಲೆ ಸುನಿಲ್ ಅಶೋಕ್ (109ಕೆಜಿ ವಿಭಾಗ) ಬೆಳ್ಳಿ ಹಾಗೂ ಮಹಾನಭಾವ ಹರ್ಷಲ್ (61ಕೆಜಿ ವಿಭಾಗ) ಕಂಚಿನ ಪದಕ ಪಡೆದಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಡಿಸೆಂಬರ್ 7 ರಂದು ಮುಂಬಯಿಯಲ್ಲಿ ನಡೆಯುವ ವಿಶ್ವಬಂಟರ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ ಬಿಡುಗಡೆಗೊಳಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ದುರ್ಗಾಪರಮೇಶ್ವರಿ ದೇವರಲ್ಲಿ ಪ್ರಾರ್ಥಿಸಿದರು. ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಸಂತೋಷ್ ಕುಮಾರ್ ಹೆಗ್ಡೆ, ಭುವನಾಭಿರಾಮ ಉಡುಪ, ಶರತ್ ಶೆಟ್ಟಿ ಸಂಕಲಕರಿಯ, ಸಂತೋಷ್ ಶೆಟ್ಟಿ ಶೆಡ್ಡೆ, ರತ್ನಾಕರ ಶೆಟ್ಟಿ ಎಕ್ಕಾರ್, ಅಶೋಕ್ ಕುಮಾರ್ ಶೆಟ್ಟಿ ಮುಲ್ಕಿ, ಬಾಲಕೃಷ್ಣ ರೈ ಕೊಲ್ಲಾಡಿ, ಸಾಯಿನಾಥ ಶೆಟ್ಟಿ ಮುಂಡ್ಕೂರು, ತೋನ್ಸೆ ಮನೋಹರ್ ಶೆಟ್ಟಿ, ದೇವಪ್ಪ ಶೇಖ ಸಾಲೆತ್ತೂರು, ಅಮರೇಶ್ ಸಾಲೆತ್ತೂರು, ಅರವಿಂದ ರೈ, ಅಜಿತ್ ಶೆಟ್ಟಿ ಬಜಪೆ, ಹರೀಶ್ ಶೆಟ್ಟಿ ಬಜಪೆ, ಸಂದೀಪ್ ಶೆಟ್ಟಿ ಎಕ್ಕೂರು, ತೇಜಸ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
ಮಕ್ಕಳಿಗೆ ಯೋಗ್ಯ ಕಾಲದಲ್ಲಿ ಸೂಕ್ತ ಶಿಕ್ಷಣ ದೊರೆಯಬೇಕಾದರೆ ಅವರಿಗೆ ಅನುಕೂಲವಾಗುವ ಸಮೀಪ ಸೌಲಭ್ಯ ಇರುವ ಶಿಕ್ಷಣ ಸಂಸ್ಥೆಗಳ ಅಗತ್ಯವಿರುತ್ತದೆ. ಇಂಥಹ ಕೊರತೆಗಳನ್ನು ಮನಗಂಡ ಜಯಸೂರ್ಯ ರೈ ಅವರು ಇಂದಿನ ದಿನಮಾನಕ್ಕೆ ಅಗತ್ಯವಾದ ಆಂಗ್ಲ ಮಾಧ್ಯಮ ಶಾಲೆಯನ್ನು ಸ್ಥಾಪಿಸಿ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಕೊಡಿಸುವಲ್ಲಿ ಬಹು ಪ್ರಶಂಸನೀಯ ಕಾರ್ಯವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಾದೋಡಿ ಕರಿಯಪ್ಪ ರೈ ಮತ್ತು ಲಕ್ಷ್ಮಿ ಕೆ. ರೈ ದಂಪತಿಗೆ ಪುತ್ರರಾಗಿ ಜನಿಸಿದ ಜಯಸೂರ್ಯ ರೈ ಅವರು ಕಾಣಿಯೂರು ಬೆಳಂದೂರು ಹಾಗೂ ಬಾಳಿಲ ವಿದ್ಯಾಬೋಧಿನಿ ಶಿಕ್ಷಣ ಸಂಸ್ಥೆಯ ಮೂಲಕ ಪೂರೈಸಿ ಪ್ರೌಢ ಹಾಗೂ ಕಾಲೇಜು ಶಿಕ್ಷಣವನ್ನು ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಮುಗಿಸಿದರು. ಕೃಷಿ ಹಾಗೂ ಬೇಸಾಯ ಕಾರ್ಯದಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಪರಿಸರದ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ವಿದ್ಯುತ್ ಪೂರೈಕೆ ವ್ಯವಸ್ಥೆ, ರೈಲ್ವೆ ನಿಲ್ದಾಣ, ಬಸ್ಸು ತಂಗುದಾಣ, ರಸ್ತೆ ನಿರ್ಮಾಣ ಇತ್ಯಾದಿ ಸಾಮಾಜಿಕ ಕಾರ್ಯಗಳಲ್ಲಿ ಒಲವು ತೋರಿಸಿ ಓರ್ವ…
ಗ್ರಾಮೀಣ ಪ್ರದೇಶದಲ್ಲಿ ಆಧುನಿಕ ಸೌಲಭ್ಯ ಕಲ್ಪಿಸುವುದರಿಂದ ಆರ್ಥಿಕ, ಸಾಮಾಜಿಕ ಬದಲಾವಣೆ ಜೊತೆಗೆ ದೇಶದ ಅಭಿವೃದ್ಧಿಯಾಗುತ್ತದೆ ಎಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಡಾ| ಎಚ್.ಎಸ್. ಶೆಟ್ಟಿ ಹೇಳಿದರು. ಅವರು ಮಂದಾರ್ತಿ ಶೇಡಿಕೋಡ್ಲಿನಲ್ಲಿ ನೂತನವಾಗಿ ನಿರ್ಮಿಸಲಾದ ಅತ್ಯಾಧುನಿಕ ಸೌಕರ್ಯಗಳನ್ನು ಒಳಗೊಂಡ ತೆರೆದ ಸಭಾಂಗಣ ‘ದುರ್ಗಾ ಗಾರ್ಡನ್’ ಉದ್ಘಾಟಿಸಿ ಮಾತನಾಡಿದರು. ಯುವ ಜನತೆಗೆ ಹುಟ್ಟೂರಿನಲ್ಲೇ ಉದ್ಯೋಗ ಸಿಗಬೇಕಿದೆ. ಸ್ವ ಉದ್ಯೋಗದತ್ತ ಒಲವು ತೋರುವ ನಿಟ್ಟಿನಲ್ಲಿ ಶ್ರಮ, ಸಂಸ್ಕೃತಿಯನ್ನು ಕಲಿಸಬೇಕಾಗಿದೆ ಎಂದರು. ಅತಿಥಿಯಾಗಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮೂಲ ಸೌಕರ್ಯಗಳಿಂದ ಊರಿನ ಹೆಸರು ಮೆರುಗು ಹೆಚ್ಚುವುದರ ಜತೆಗೆ ಅಭಿವೃದ್ಧಿಯಾಗುತ್ತದೆ ಹಾಗೂ ಭಾವನಾತ್ಮಕ ಸಂಬಂಧ ಬೆಳೆಯುತ್ತದೆ ಎಂದರು. ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಎಚ್. ಧನಂಜಯ ಶೆಟ್ಟಿ, ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದ ಅಧ್ಯಕ್ಷ ಆನಂದ ಕುಂದರ್, ಮಂಗಳೂರಿನ ಪಟ್ಲ ಫೌಂಡೇಶನ್ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಬ್ರಹ್ಮಾವರ ಘಟಕ…
ಅಂಬಾಭವಾನಿ ಕ್ರ್ಯಾಕರ್ಸ್ ಇವರು ದೀಪಾವಳಿ ಹಬ್ಬದ ಸಂದರ್ಭ ಗಾಂಧಿ ಮೈದಾನದಲ್ಲಿ ಪಟಾಕಿ ಮಳಿಗೆ ತೆರೆದು ಪಟಾಕಿ ಮಾರಾಟ ಮಾಡಿ ಅದರಿಂದ ಬಂದ ಲಾಭಾಂಶದಲ್ಲಿ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ.) ಮೂಲಕ ಸರ್ಕಾರಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸುಮಾರು ರೂ. 2.50 ಲಕ್ಷ ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸಿದರು. ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕಮದಲ್ಲಿ ಭುವನೇಂದ್ರ ಕಾಲೇಜು ಪ್ರಾಂಶುಪಾಲರಾದ ಮಂಜುನಾಥ್ ಕೋಟ್ಯಾನ್, ಕ್ರೈಸ್ಟ್ ಕಿಂಗ್ನ ಪ್ರಾಂಶುಪಾಲರಾದ ಲಕ್ಷ್ಮಿ ನಾರಾಯಣ, ಕೆಎಂಇಎಸ್ ಪ್ರಾಂಶುಪಾಲರಾದ ರಾಮಚಂದ್ರ ನೆಲ್ಲಿಕಾರು, ಹಿರಿಯರಾದ ಗಿರಿಜಾ ವಾಸು ಶೆಟ್ಟಿ, ಅಹಲ್ಯಾ ಭಟ್ ಹಾಗೂ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್(ರಿ.) ಸಂಸ್ಥಾಪಕರಾದ ಅವಿನಾಶ್ ಜಿ. ಶೆಟ್ಟಿ ದಂಪತಿ ಸಹಿತ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಚೆಕ್ ವಿತರಿಸಿದರು. ಶಿಕ್ಷಕರಾದ ರಾಜೇಂದ್ರ ಭಟ್ ಕೆ. ಕಾರ್ಯಕ್ರಮ ನಿರೂಪಿಸಿದರು. ನಿವೃತ್ತ ಶಿಕ್ಷಕ ವಸಂತ್ ವಂದಿಸಿದರು.
ಒಲವೇ ಜೀವನ ಲೆಕ್ಕಾಚಾರ ಅಲ್ಲ ಬದುಕೇ ಜೀವನದ ಲೆಕ್ಕಾಚಾರ ಆಗ್ಬಿಟ್ಟಿದೆ ನಮಗೆಲ್ಲ. ನಮ್ಮೆಲ್ಲರ ಜೀವನ ಲೆಕ್ಕಾಚಾರದ ಮೇಲೆನೆ ನಿಂತಿದೆ. ನಾನು ನನ್ನದು ಅನ್ನೊ ಕ್ಯಾಲ್ಕ್ಯುಲೇಷನ್ ನಲ್ಲಿ ಬದುಕು ನಮ್ಮೊಳಗಿನ ಪ್ರತಿಭೆಯನ್ನು ಹುಡುಕುವ ಕಲೆ, ಹೊಸತನ್ನು ಅನ್ವೇಶಿಸಿ, ಅನುಕರಿಸುವ ವಿಜ್ಞಾನವಾಗಿದೆ. ಆದ್ರೆ ನಾವೆಲ್ಲರೂ ಬದುಕನ್ನ ವಾಣಿಜ್ಯ ಮಾಡ್ಕೊಂಡಿದಿವಿ. ಕೊಟ್ಟು ತಗೊಳೊ ವ್ಯವಹಾರವಾಗಿದೆ. 2+2 = 4 ಅಂತ ಅಷ್ಟೇ ಯೋಚನೆ ಮಾಡ್ತಿವೇ ಹೊರತು 3+1= 4 ಹಿಂಗೂ ಆಗುತ್ತೆ ಅನ್ನೊದನ್ನ ಒಪ್ಕೊಳೊಕೆ ರೆಡಿ ಇರಲ್ಲ. ನಮ್ಮೆಲ್ಲರ ಆಯ್ಕೆ, ನಿರ್ಧಾರಗಳು ನಮ್ಮ ಮೂಗಿನ ನೇರಕ್ಕೆ ಇರತ್ತೆ. ಎಲ್ಲರಿಗೂ ಅವರು ಮಾಡಿದ್ದೆ ಸರಿ, ಅವರ ನಿರ್ಧಾರವೇ ನ್ಯಾಯಯುತವಾಗಿರತ್ತೆ. ಇಟ್ಟಿಗೆಯಿಂದ ಗೋಡೆನೂ ಕಟ್ಟಬಹುದು, ಸೇತುವೆನೂ ಕಟ್ಟಬಹುದು, ಆದ್ರೆ ನಾವೆಲ್ಲಾ ಆಗಿರೊ ಸಣ್ಣ ಮನಸ್ಥಾಪಕ್ಕೆ ಆಡಿರೊ ಒಂದು ಮಾತನ್ನೆ ಇಟ್ಕೊಂಡು ಸಂಬಂಧಗಳ ನಡುವೆ ಗೋಡೆ ಕಟ್ತಿವಿ. ಅದೇ ಒಂದು ಸಾರೀ, ಕ್ಷಮಿಸಿ ಅನ್ನೊ ಒಂದು ಪದ ಹೇಳೊದಿಂದ್ರ ಆಗಿರೊ ಎಷ್ಟೊ ಮನಸ್ಥಾಪಗಳ ನಡುವೆ ಮನಸುಗಳ ಮದ್ಯೆ ಸೇತುವೆ ನಿರ್ಮಾಣವಾಗತ್ತೆ.…
ಮೂಡುಬಿದಿರೆ: ‘ಬರಹ ಅಥವಾ ಕಾವ್ಯವನ್ನು ರಂಗರೂಪಕ್ಕೆ ತರುವುದು ಒಂದು ಸಾಹಸ. ‘ಚಾರುವಸಂತ’ದ ಮೂಲಕ ಹಂಪನಾ ಅವರ ಕನಸು ಈಡೇರಿದೆ’ ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ. ವಿವೇಕ ರೈ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಗರದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡ ರಂಗ ಮಾಂತ್ರಿಕ ಜೀವನ್ರಾಂ ಸುಳ್ಯ ನಿರ್ದೇಶನದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ವಿದ್ಯಾರ್ಥಿಗಳು ಅಭಿನಯಿಸಿದ, ಹಂಪನಾ ವಿರಚಿತ ದೇಸೀ ಮಹಾ ಕಾವ್ಯದ ರಂಗರೂಪ ‘ಚಾರು ವಸಂತ’ ನಾಟಕದ ಪ್ರದರ್ಶನ, ರಂಗಪಯಣ ಉದ್ಘಾಟನೆ ಮತ್ತು ನಾಟಕ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಬರಹದಿಂದ ರಂಗರೂಪಕ್ಕೆ ಕತೆಯನ್ನು ತರುವ ಅನುಭವಗಳನ್ನು ಹಂಚಿಕೊಂಡ ವಿವೇಕ ರೈ, ‘ಕಾವ್ಯ ಭಾಷೆಯನ್ನು ಹೆಚ್ಚಾಗಿ ರಂಗರೂಪಕ್ಕೆ ಬಳಸಲಾಗಿದೆ’ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಮಾತನಾಡಿ, ‘ಚಾರುವಸಂತ’ ನಾಟಕಕ್ಕೆ ಜೈನ ಸಿದ್ಧಾಂತ ಮೂಲವಾಗಿದ್ದು, ಜೈನ ಕಾಶಿಯಲ್ಲಿ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು. ಮೂಡುಬಿದಿರೆಯಲ್ಲಿ ನಡೆದಿದ್ದ ೭೧ನೇ ಅಖಿಲ ಭಾರತ…